Connect with us

ದಿನದ ಸುದ್ದಿ

ಪಾದರಾಯನಪುರದ‌ ನಂತರವಾದರೂ..!

Published

on

  • ಹ.ರಾ.ಮಹಿಶ ಬೌದ್ಧ

ಹೇಗೂ ಸೀಲ್ ಡೌನ್ ಆಗಿರುವುದರಿಂದ ಹಗಲಾಗಲೀ‌ ರಾತ್ರಿಯಾಗಲಿ ಜನರೆಲ್ಲಾ ಮನೆಯಲ್ಲೇ ಇರುತ್ತಾರೆ ರಸ್ತೆರಸ್ತೆಯಲ್ಲಿಯೂ ಪೋಲಿಸ್ ಸರ್ಪಗಾವಲು ಇರುತ್ತದೆ. ಹಾಗಾಗಿ ಪಾದರಾಯನಪುರದ ನಂತರ ಮುಂದೇನಾದರೂ ಸೀಲ್ ಡೌನ್ ಆಗಿರುವ ಬೇರೆ ಏರಿಯಾಗಳಲ್ಲಿರುವ ಶಂಕಿತ ಸೋಂಕಿತರನ್ನು ಕ್ವಾರಂಟೇನ್ ಗೆ ಕರೆದುಕೊಂಡು ಹೋಗುವುದಿದ್ದರೆ ದಯಮಾಡಿ ಹಗಲಿನ ಸಮಯದಲ್ಲೇ ಹೋದರೆ ಒಳಿತು. ಹಾಗೂ ಹೋಗುವ ಮುನ್ನ ಅಲ್ಲಿನ ಜನರಿಗೆ ಅರ್ಥವಾಗುವಂತೆ ಜಾಗೃತಿ ಮೂಡುವಂತೆ ಇಡೀ ಬಡಾವಣೆಯ ಮನೆಯೊಳಗಿರುವ ಜನರಿಗೆ ಕೇಳಿಸುವಂತೆ ಅನೌನ್ಸ್ ಮೆಂಟ್ ಮಾಡಿಸಿ ನಂತರ ಹೋದರೆ ಒಳಿತು.

ಮೊದಲೇ ಈ ಕೊರೋನದಾಳಿಯಿಂದ ಕಂಗೆಟ್ಟು ಹೈರಾಣವಾಗಿರುವ ದೇಶದ ಜನಸಾಮಾನ್ಯರು ನಂತರ ಅನಿವಾರ್ಯವಾದ ಲಾಕ್ ಡೌನ್ ನಿಂದ ದಿಕ್ಕೆಟ್ಟು ಹೋಗಿ ನಂತರ ಧುತ್ತನೆರಗಿದ ಸೀಲ್ ಡೌನ್‌ನಿಂದ ಇನ್ನೂ ಮಾನಸಿಕವಾಗಿ ಜರ್ಜರಿತರಾಗಿದ್ದಾರೆ. ಅಲ್ಲದೆ ಕೊರೋನ ಬಗ್ಗೆ ಈ ಟಿವಿಯವರು 24/7 ಉತ್ಪಾದಿಸಿರುವ ಭಯವೂ ಸೇರಿಹೋಗಿ ಜೊತೆಗೆ ಕೂಲಿ‌ಕೆಲಸಗಳನ್ನು ಕಳೆದುಕೊಂಡು ತುತ್ತುಕೂಳಿಗೂ ತತ್ತರಿಸುತ್ತಾ ಜೀವನವೇ ರೋಸಿಹೋಗಿ ಜೊತೆಗೆ ಭಾರತದಂಥ ದೇಶದಲ್ಲಿ ಸಾಂಕ್ರಾಮಿಕ ರೋಗಕ್ಕೂ ಜಾತಿ ಧರ್ಮದ ಬಣ್ಣಬಳಿದು ಜನರನ್ನು ಮಾನಸಿಕವಾಗಿ ನೈತಿಕವಾಗಿ ಕುಗ್ಗಿಸುವ ಕಲೆಕಲಿತವರ ನಡುವೆ ಒಂಥರಾ ಪಾಪಪ್ರಜ್ಞೆಯಿಂದ ನರಳುತ್ತಿರುವ ಜನಸಾಮಾನ್ಯರು‌ ಪಾದರಾಯನಪುರದಲ್ಲಿರಲಿ ಬಸವನಗುಡಿಯಲ್ಲಿರಲಿ ಅಥವಾ ಇನ್ನೆಲ್ಲೋ ಇರಲಿ ಇಷ್ಟೆಲ್ಲಾ ಮಾನಸಿಕವಾಗಿ ತತ್ತರಿಸುತ್ತಾ ಭಯ ಮತ್ತು ಅಭದ್ರತೆಯಲ್ಲಿ ಕುಸಿದಿದ್ದಾರೆ.

ತಮ್ಮ ಕಣ್ಮುಂದೆ ತಮ್ಮಮನೆಯ ಸಣ್ಣಮಕ್ಕಳ ವಯಸ್ಸಾದ ತಂದೆತಾಯಿಗಳ‌‌ ದುಸ್ಥಿತಿಯನ್ನು ಕಂಡೂ ಅಸಹಾಯಕರಾಗಿ ತಮ್ಮಗಳ ಬದುಕಿನ ಬಗ್ಗೆಯೇ ಭರವಸೆ ಕಳೆದುಕೊಂಡು ಮೊದಲೇ ಭಯಾಂತಕದಲ್ಲಿರುವಾಗ ದಿಢೀರನೆ ರಾತ್ರಿಯ ವೇಳೆ ನಮ್ಮ ಪರವಾಗಿಯೇ ನಮಗಾಗಿಯೇ ನಮ್ಮ ಸಹಾಯಕ್ಕಾಗಿಯೇ ನಮ್ಮವರೇ ನಮ್ಮ ಪೋಲಿಸರೇ ವೈದ್ಯರೇ ಮನೆಗೆ ಹೋದರೂ ಜನಕ್ಕೆ ಅನುಮಾನದ ಜೊತೆಗೆ ಮತ್ತಷ್ಟು ಭಯ ಹೆಚ್ಚಾಗುತ್ತದೆ..! ದಿಕ್ಕುತೋಚದ ಜನಸಮೂಹ ಹುಚ್ಚಾಗುತ್ತದೆ..!

ವೈದ್ಯರಾಗಲಿ‌ ದಾದಿಯರಾಗಲಿ ಆಶಾಕಾರ್ಯಕರ್ತೆಯರಾಗಲಿ ಪೋಲಿಸರಾಗಲಿ ಸರ್ಕಾರವಾಗಲೀ ಇರುವುದು ನಮಗಾಗಿ ನಮ್ಮ ರಕ್ಷಣೆಗಾಗಿಯೇ ಹೊರತು‌ ಬೇರೆ ಉದ್ದೇಶಗಳಿಗಾಗಿ ಅಲ್ಲ ಎಂಬ ಸತ್ಯವನ್ನು ಜನರು ಅರ್ಥಮಾಡಿಕೊಳ್ಳಬೇಕು. ಆ ಸತ್ಯವನ್ನು ಜನಸಾಮಾನ್ಯರಿಗೆ ಅವರ ಮಟ್ಟಕ್ಕಿಳಿದು ಅರ್ಥ ಮಾಡಿಸಬೇಕಾದುದು ನಮ್ಮ ಕರ್ತವ್ಯವಾಗಬೇಕು. ಅವರಿಗೆ ನಂಬಿಕೆ ಬರುವಂತೆ ನಡೆದುಕೊಳ್ಳಬೇಕು. ಜನರೂ ಅದನ್ನು‌ ತಾಳ್ಮೆಯಿಂದ ಅರ್ಥ ಮಾಡಿಕೊಳ್ಳಬೇಕು..! ಮಾಧ್ಯಮದವರು ಮನುಷ್ಯರಂತೆ ವರ್ತಿಸಬೇಕು..!

ಪಾದರಾಯನಪುರದವರಾಗಲೀ ಪಾಂಡುರಂಗಪುರವಾಗಲಿ ನಾವೆಲ್ಲರೂ ಭಾರತೀಯರು ಮೊದಲಿಗೂ ಕೊನೆಗೂ… ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಕೋರೊನಾ ದೃಷ್ಟಿಯಲ್ಲಿ ನಾವೆಲ್ಲರೂ ಕೇವಲ ಮನುಷ್ಯರು ಎಂಬುದನ್ನು ನಾವೆಲ್ಲರೂ ಅರ್ಥ ಮಾಡಿಕೊಳ್ಳಬೇಕು..! ಇಂಥ ವಿಷಮಕಾಲದಲ್ಲಿ ಮನುಷ್ಯತ್ವ ಮತ್ತು ಸೌಹಾರ್ದತೆಯೊಂದೇ ನಮ್ಮೆಲ್ಲರನ್ನೂ ಉಳಿಸಬಲ್ಲದು‌‌ ಎಂಬುದನ್ನು ನಾವೆಲ್ಲರೂ ಮನಗಾಣಬೇಕು..!

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಚಿಕ್ಕಮಗಳೂರು | ನೂತನ ಭದ್ರಾ ಸೇತುವೆ ಲೋಕಾರ್ಪಣೆಗೊಳಿಸಿ

Published

on

ಸುದ್ದಿದಿನ,ಚಿಕ್ಕಮಗಳೂರು:ಜಿಲ್ಲೆಯ ಎನ್‌ಆರ್ ಪುರದಲ್ಲಿ ಇಂದುಆಯೋಜಿಸಿದ್ದ ಕಾರ್ಯಕ್ರಮದಲ್ಲಿ “ಹಂದೂರು ಗ್ರಾಮದಿಂದ ಎನ್.ಆರ್.ಪುರಕ್ಕೆ ಸಂಪರ್ಕಿಸುವ ನೂತನ ಭದ್ರಾ ಸೇತುವೆಯನ್ನು ಲೋಕಾರ್ಪಣೆಗೊಳಿಸಿ, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ, ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳನ್ನು ವಿತರಿಸಿದೆ.

ಸಚಿವರಾದ ಸತೀಶ್ ಜಾರಕಿಹೊಳಿ, ಕೆ.ಜೆ.ಜಾರ್ಜ್, ಶೃಂಗೇರಿ ಶಾಸಕರಾದ ಟಿ.ಡಿ.ರಾಜೇಗೌಡ, ಕಡೂರು ಶಾಸಕರಾದ ಆನಂದ್, ತರೀಕೆರೆ ಶಾಸಕರಾದ ಶ್ರೀನಿವಾಸ್, ಮಾಗಡಿ ಶಾಸಕ‌ ಬಾಲಕೃಷ್ಣ ಸೇರಿ ಜಿಲ್ಲೆಯ ಶಾಸಕರುಗಳು, ವಿಧಾನ ಪರಿಷತ್ ಸದಸ್ಯರು, ಮುಖಂಡರು ಹಾಗೂ ಸಂಪಾದಕರಾದ ವಿಶ್ವೇಶ್ವರ ಭಟ್, ಕೆ‌ಎಸ್‌ಟಿ‌ಡಿಸಿ ಅಧ್ಯಕ್ಷರಾದ ಸರೋವರ್ ಶ್ರೀನಿವಾಸ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ಪ್ರಶ್ನಿಸಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನಡೆಸ್ಕ್:ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಇಂದು ಅವರು ಮಾತನಾಡಿದರು.

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು. ಕ್ಷುಲ್ಲಕ ವಿಚಾರವನ್ನು ದಿನವಿಡೀ ತೋರಿಸುವವರು ಅದರ ಪರಿಣಾಮದ ಬಗ್ಗೆಯೂ ಯೋಚಿಸಬೇಕು. ಗಂಡ ಹೆಂಡತಿ ಜಗಳವನ್ನು ಇಡೀ ದಿನ‌ ತೋರಿಸಿದರೆ ಅದರಿಂದ ಸಮಾಜಕ್ಕೆ ಏನು ಪ್ರಯೋಜನ? ಎಂದು ಪ್ರಶ್ನಿಸಿದರು.

ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧಿ ಇಬ್ಬರೂ ಪತ್ರಕರ್ತರಾಗಿ ಧ್ವನಿ ಇಲ್ಲದವರ ಧ್ವನಿಯಾಗಿದ್ದರು. ಸಮಾಜದಲ್ಲಿರುವ ನ್ಯೂನ್ಯತೆಗಳನ್ನು ಹೋಗಲಾಡಿಸಿ ಸಮಾಜವನ್ನು ಕಟ್ಟುವ ಕಾಯಕವನ್ನು ಬಸವಾದಿ ಶರಣರು ಮಾಡಿದ್ದರು. ಶರಣರ ಆಶಯದ ಸಮಸಮಾಜ ಆಗದಿದ್ದರೆ ಅಸಮಾನತೆ ಮುಂದುವರೆಯುತ್ತದೆ.‌ ಅದು ಮುಂದುವರೆಯಲಿ ಎನ್ನುವುದು ಪಟ್ಟಭದ್ರರ ಹಿತಾಸಕ್ತಿಯಾಗಿದೆ ಎಂದರು.

ಯಾವ ದೇವರೂ ಯಾರನ್ನೂ ಕೂಡ ಅವಿದ್ಯಾವಂತನಾಗು ಅಂತಾಗಲೀ, ಕೆಳ ಜಾತಿಯಲ್ಲೇ ಹುಟ್ಟು ಎಂದು ಬಯಸುವುದಿಲ್ಲ. ಈ ಅರಿವನ್ನು ಜನರಲ್ಲಿ ಹೆಚ್ಚಿಸುವ ಕೆಲಸ ಪತ್ರಕರ್ತರಿಂದ ಆಗಬೇಕು. ಪತ್ರಕರ್ತರು ಕೇವಲ ಮಾಹಿತಿ ಕೊಡುವವರಾಗದೆ, ಸಮಾಜ ಸುಧಾರಣೆಗೂ ಒತ್ತು ನೀಡಬೇಕು.

ಅಂಬೇಡ್ಕರ್ ಅವರ ಆಶಯದಂತೆ ಎಲ್ಲರಿಗೂ ಆರ್ಥಿಕ, ಸಾಮಾಜಿಕ‌ ಶಕ್ತಿ ಕೊಡುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ 2013 ರಲ್ಲೂ ಮಾಡಿತ್ತು. ಈಗಲೂ ಮುಂದುವರೆಸಿದೆ. ನಾವು ಬಡವರ ಪರವಾದ ಯೂನಿವರ್ಸಲ್ ಬೇಸಿಕ್ ಇನ್ ಕಂ ಆರ್ಥಿಕತೆಯನ್ನು ಪಾಲುಸುತ್ತಿದ್ದೇವೆ. ಇದನ್ನು ಪತ್ರಕರ್ತರು ಅರ್ಥ ಮಾಡಿಕೊಳ್ಳಬೇಕು.

ಕೆಲವು ಒಳ್ಳೆ ಪತ್ರಕರ್ತರೂ ಇದ್ದಾರೆ. ಆದರೆ ಬಹಳಷ್ಟು ಮಾಧ್ಯಮ‌ ಸಂಸ್ಥೆಗಳು ಕಾರ್ಪೋರೇಟ್ ಹಿಡಿತಕ್ಕೆ ಒಳಪಟ್ಟಿವೆ. ಪತ್ರಕರ್ತರು ಸತ್ಯ ಬರೆದರೂ ಕೆಲವೊಮ್ಮೆ ಸಂಪಾದಕರುಗಳು ಮಾಲೀಕರ ಒತ್ತಡಕ್ಕೆ ಮಣಿದು ಬದಲಾಯಿಸಿ ಬಿಡುತ್ತಾರೆ. ನಾನು ಮಂತ್ರಿಯಾಗಿ 40 ವರ್ಷ ಆಯ್ತು. ನಮ್ಮ ಸರ್ಕಾರದ ಪರವಾಗಿ ಬರೆಯಿರಿ ಎಂದು ಇವತ್ತಿನವರೆಗೂ ನಾನು ಯಾರನ್ನೂ ಕೇಳಿಲ್ಲ‌.

ಜನಸಾಮಾನ್ಯರು ಇನ್ನೂ ಪತ್ರಿಕೆಗಳ ಮೇಲೆ ನಂಬಿಕೆ ಇಟ್ಟಿದ್ದಾರೆ. ನಾನೂ ನಂಬಿಕೆ ಇಟ್ಟಿದ್ದೇನೆ.
ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ಸವಲತ್ತನ್ನು ಜಾರಿ ಮಾಡಿದ್ದೇ ನಾನು. ಇದರಲ್ಲಿನ ನಿಯಮಗಳಲ್ಲಿ ತೊಂದರೆ ಇದ್ದರೆ, ಆ ಬಗ್ಗೆ ಚರ್ಚಿಸಿ ನಿವಾರಣೆಗೊಳಿಸಲಾಗುವುದು ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ. ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡ 90.91 ರಷ್ಟು ಫಲಿತಾಂಶ ಪಡೆದು ಮೇಲುಗೈ ಸಾಧಿಸಿದ್ದಾರೆ.

ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 20,810 ವಿದ್ಯಾರ್ಥಿಗಳ ಪೈಕಿ 16,046 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇಕಡ 77.11 ರಷ್ಟು ಹಾಗೂ ಹೊಸದಾಗಿ ಪರೀಕ್ಷೆ ಬರೆದ (Freshers) 18,949 ವಿದ್ಯಾರ್ಥಿಗಳಲ್ಲಿ 15,540 ಮಂದಿ ಉತ್ತೀರ್ಣರಾಗಿದ್ದಾರೆ ಶೇಕಡ 82.01 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ವಿಭಾಗವಾರು ಫಲಿತಾಂಶದ ವಿಶ್ಲೇಷಣೆ

ವಿಜ್ಞಾನ ವಿಭಾಗ (Science): ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಧನೆ ಈ ವಿಭಾಗದಲ್ಲಿ ದಾಖಲಾಗಿದೆ. ಒಟ್ಟು 12,536 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,936 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 87.24). ಹೊಸ ವಿದ್ಯಾರ್ಥಿಗಳ ಪೈಕಿ 11,770 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,736 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 90.91 ರಷ್ಟು ಅದ್ಭುತ ಫಲಿತಾಂಶ ಬಂದಿದೆ.

ವಾಣಿಜ್ಯ ವಿಭಾಗ (Commerce)

ಈ ವಿಭಾಗದಲ್ಲಿ ಹಾಜರಾದ 4,295 ವಿದ್ಯಾರ್ಥಿಗಳಲ್ಲಿ 3,075 ಮಂದಿ ಉತ್ತೀರ್ಣರಾಗಿದ್ದಾರೆ (ಶೇ. 71.59). ಹೊಸ ವಿದ್ಯಾರ್ಥಿಗಳ ಪೈಕಿ 3858 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2960 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 76.72 ರಷ್ಟು ಫಲಿತಾಂಶ ಬಂದಿದೆ.

ಕಲಾ ವಿಭಾಗ (Arts): ಕಲಾ ವಿಭಾಗದಲ್ಲಿ ಒಟ್ಟು 3,979 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 2,035 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 51.14). ಹೊಸ ವಿದ್ಯಾರ್ಥಿಗಳ ಪೈಕಿ 3321 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1880 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 56.61 ರಷ್ಟು ಫಲಿತಾಂಶ ಬಂದಿದೆ.

ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ವಿಜ್ಞಾನ ವಿಭಾಗವು ಪ್ರಥಮ ಸ್ಥಾನದಲ್ಲಿದ್ದರೆ, ವಾಣಿಜ್ಯ ಮತ್ತು ಕಲಾ ವಿಭಾಗಗಳು ನಂತರದ ಸ್ಥಾನ ಪಡೆದಿವೆ ಎಂದು ಉಪ ನಿರ್ದೇಶಕ ಪಳಿನಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending