ದಿನದ ಸುದ್ದಿ

ಪಿಂಚಣಿ ದಾರರು ಸಕಾಲದಲ್ಲಿ ಜೀವಂತ ಪ್ರಮಾಣ ಪತ್ರ ಸಲ್ಲಿಸಿ

Published

on

ಸುದ್ದಿದಿನ,ದಾವಣಗೆರೆ: ಪಿಂಚಣಿ ಪಡೆಯಲು ಜೀವಂತ ಸದಸ್ಯರ ಪ್ರಮಾಣ ಪತ್ರಗಳು ಕಡ್ಡಾಯವಾಗಿರುವುದರಿಂದ ಸಕಾಲಕ್ಕೆ ಸೂಕ್ತ ದಾಖಲಾತಿಗಳನ್ನು ನೀಡುವ ಮೂಲಕ ಸಹಕರಿಸಿ ಎಂದು ಉಪ ಮಹಾಲೇಖಪಾಲರಾದ ಸಚ್ಚಿನ್ ಕೃಷ್ಣ ಕೌಶಿಕ್ ತಿಳಿಸಿದರು.

ಶುಕ್ರವಾರ ಜೂನ್(19) ‌ಬೆಂಗಳೂರಿನ ಮಹಾಲೇಖಪಾಲರು ದಾವಣಗೆರೆ ಜಿಲ್ಲಾ ಖಜಾನೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಾಮಾನ್ಯ ಭವಿಷ್ಯ ನಿಧಿ ಹಾಗೂ ಲೆಕ್ಕಪತ್ರ ಸಮಸ್ಯೆಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಪಿಂಚಣಿದಾರರು ತಮ್ಮ ಎಲ್ಲಾ ಬ್ಯಾಂಕ್‌ಗೆ 2ನೇ ವಾರ ಭೇಟಿ ನೀಡಿದರೆ ನಿಮ್ಮ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸಲಾಗುವುದು. ಜೀವಂತ ಸದಸ್ಯರ ದೃಢೀಕರಣ ಪತ್ರವನ್ನು ಪಡೆಯಲು ಸೈಬರ್‌ಕೆಫೆ ಇನ್ನಿತರ ಕೇಂದ್ರಗಳಿಗೆ ಅಲೆಯುವ ಅವಶ್ಯಕತೆ ಇಲ್ಲ. ನೀವು ಮನೆಯಲ್ಲಿ ಮೊಬೈಲ್‌ನಲ್ಲಿ ಅಫ್ ಲೋಡ್ ಮಾಡಿ ಪಡೆಯಬಹುದು. ಮತ್ತು ನಿಮ್ಮ ಸಮಸ್ಯೆಗಳನ್ನು ತಿಳಿಸುವಾಗ ಅರ್ಜಿಯಲ್ಲಿ ಇ-ಮೇಲ್ ವಿಳಾಸ, ಮೊಬೈಲ್ ನಂಬರ್‌ನ್ನು ಕಡ್ಡಾಯವಾಗಿ ನಮೂದಿಸಿದರೆ, ಇದರಿಂದ ನಿಮಗೆ ಮಾಹಿತಿ ನೀಡಲು ಅನುಕೂಲವಾಗುತ್ತದೆ ಎಂದರು.

ಪಿಂಚಣಿ ಅದಾಲತ್ ಎನ್ನುವುದು ನಿವೃತ್ತ ನೌಕರರು ಮತ್ತು ಪಿಂಚಣಿದಾರರ ದೀರ್ಘಕಾಲದ ಬಾಕಿ ಉಳಿದಿರುವ ಸಮಸ್ಯೆಗಳನ್ನು ಅಥವಾ ಕುಂದುಕೊರತೆಗಳನ್ನು ಪರಿಹರಿಸಲು ವಿಶೇಷ ವೇದಿಕೆಯಾಗಿದೆ. ಸ್ಥಳದಲ್ಲೇ ಅರ್ಜಿಗಳನ್ನು ಪರಿಶೀಲಿಸಿ, ಬ್ಯಾಂಕ್‌ ಅಧಿಕಾರಿಗಳ ಸಮ್ಮುಖದಲ್ಲಿ ತ್ವರಿತವಾಗಿ ಸಮಸ್ಯೆಗಳನ್ನು ಬಗೆಹರಿಸುವುದು ಇದರ ಮುಖ್ಯ ಉದ್ದೇಶವಾಗಿದೆ.

ಮಹಾಲೇಖಪಾಲರ ಕಚೇರಿಯ ಹಿರಿಯ ಲೆಕ್ಕಪರಿಶೋಧನಾ ಅಧಿಕಾರಿ ನಾಗಸೇನಾ.ಟಿ.ವಿ, ಮತ್ತು ಪದ್ಮವತಿ, ಜಿಲ್ಲಾ ಖಜಾನೆಯ ಉಪನಿರ್ದೇಶಕರಾದ ರಮೇಶ್ ಅರೆಮಲ್ಲಾಪುರ, ಸಹಾಯಕ ಲೆಕ್ಕಪರಿಶೋಧನಾ ಆಧಿಕಾರಿ ಚಂದನ್ ಮತ್ತು ಜಾಬ್‌ಲೀನೋ, ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version