ದಿನದ ಸುದ್ದಿ
ಪೊರಕೆ ಹಿಡಿದರೆ ಸಾಲದು, ಭ್ರಷ್ಟಾಚಾರ ರಹಿತ ಚುನಾವಣೆ ನಡೆಯಲಿ : ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ
ಸುದ್ದಿದಿನ ಡೆಸ್ಕ್: ಪ್ರಧಾನಮಂತ್ರಿ ನರೇಂದ್ರ ಮೋದಿ ಕೇವಲ ಪೊರಕೆ ಹಿಡಿದು ಪರಿಸರ ಸ್ವಚ್ಛಗೊಳಿಸಿದರೆ ಸಾಲದು, ಚುನಾವಣಾ ಪ್ರಕ್ರಿಯೆಗಳು ಭ್ರಷ್ಟಾಚಾರ ರಹಿತವಾಗಿ ನಡೆಯಲಿ ಎಂದು ಸಿರಿಗೆರೆಯ ತರಳಬಾಳು ಬೃಹನ್ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸಲಹೆ ನೀಡಿದರು.
ಹೊನ್ನಾಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀಗಳು, ಪರಿಸರ ಸ್ವಚ್ಛತೆ ಜತೆಗೆ ಚುನಾವಣೆಗಳು ಭ್ರಷ್ಟಾಚಾರ, ಅವ್ಯವಹಾರ ರಹಿತವಾಗಿ ನಡೆಯಬೇಕು. ರಾಜಕಾರಣಿಗಳು ಚುನಾವಣೆ ಸಂದರ್ಭದಲ್ಲಿ ಹಣವೆಂಬ ಕಸವನ್ನು ಸಮಾಜದಲ್ಲಿ ಚೆಲ್ಲುತ್ತಾ ಸಮಾಜ ಕಲುಷಿತಗೊಳಿಸುತ್ತಿದ್ದಾರೆ. ಇದಕ್ಕೆ ಅವಕಾಶ ನೀಡದೇ ರಾಜಕಾರಣಿಗಳು ಭ್ರಷ್ಟಾಚಾರ ರಹಿತ ಚುನಾವಣೆ ನಡೆಸಬೇಕು.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ವಾತಾವರಣ ಸ್ವಚ್ಛಗೊಳಿಸಲು ಆದ್ಯತೆ ನೀಡಿದಂತೆ ಚುನಾವಣೆ ವ್ಯವಸ್ಥೆ ಸ್ವಚ್ಛಗೊಳಿಸಿ, ಭ್ರಷ್ಟಾಚಾರ ರಹಿತಕ್ಕೆ ಆದ್ಯತೆ ನೀಡಬೇಕು. ಈ ಬಗ್ಗೆ ಸಂಸದ ಜಿ.ಎಂ. ಸಿದ್ಧೇಶ್ವರ ಅವರು ಪ್ರಧಾನಮಂತ್ರಿ ಬಳಿ ವಿಷಯ ಪ್ರಸ್ತಾಪಿಸಬೇಕು ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401