Connect with us

ದಿನದ ಸುದ್ದಿ

ಮೂಡುಬಿದಿರೆಯಲ್ಲಿ ತಯಾರಾಗುವ “ಪೊಳಲಿ ಚೆಂಡು”ಧಾರ್ಮಿಕ ಚೆಂಡುಗಳಿಗೂ ಇಲ್ಲಿದೆ ಚೆಂಡಿಗೂ 18ರ ನಂಟು..!

Published

on

  • ಗಣೇಶ್ ಕಾಮತ್ ಮೂಡುಬಿದಿರೆ

ಸುದ್ದಿದಿನ,ಮೂಡುಬಿದಿರೆ : ತುಳುನಾಡಿನ ಇತಿಹಾಸ ಪ್ರಸಿದ್ದ ಮೃಣ್ಮಯ ಮೂರ್ತಿ ಮಾತೆ ರಾಜರಾಜೇಶ್ವರಿಯ ಸನ್ನಿಧಿ ಪೊಳಲಿಯ ಜಾತ್ರೆ ಎಂದರೆ ಅದು ವಿಶೇಷ ಮಾತ್ರವಲ್ಲ ವಿಶಿಷ್ಠವೂ ಹೌದು. ಒಂದು ತಿಂಗಳ ಈ ಪರಂಪರೆಯ ಜಾತ್ರೆಯಲ್ಲಿ ‘ ಪುರಲ್ದ ಚೆಂಡ್’ ಕೂಡಾ ಪ್ರಧಾನ ಆಕರ್ಷಣೆ.

ಎಲ್ಲೆಡೆಯಿಂದ ಭಜಕರು ಹರಿದು ಬರುವ ಈ ಜಾತ್ರೆಯ ಚೆಂಡಿನಾಟದ ,( ಈ ಬಾರಿ ಎ6ರಿಂದ 10) ಅದರ ಆಚರಣೆ ಎಲ್ಲವೂ ಗಮನಾರ್ಹವೇ. ಪೊಳಲಿ ಜಾತ್ರೆಗೆ ದಿನ ನಿಗದಿಪಡಿಸುವಲ್ಲಿ ಮೂಡುಬಿದಿರೆಯ ಪುತ್ತಿಗೆಯ ಕ್ಷೇತ್ರದ ಪಾತ್ರ ಮುಖ್ಯವಾಗಿದೆ. ಅದೇ ರೀತಿ ಪ್ರಸಿದ್ಧ ಪೊಳಲಿ ಚೆಂಡಿಗೂ ಮೂಡುಬಿದಿರೆಗೂ ಗಮನ ಸೆಳೆಯುವ ಸಂಬಂಧವೆಂದರೆ ಈ ಚೆಂಡು ತಯಾರಾಗುವೂದೂ ಮೂಡುಬಿದಿರೆಯಲ್ಲೇ!

ಕಳೆದ 15 ವರ್ಷಗಳಿಂದ ಪೊಳಲಿ ಚೆಂಡಿನ ಸಿದ್ಧತೆಯನ್ನು ಶ್ರದ್ಧಾ ಭಕ್ತಿಯಿಂದ ನಿರ್ಮಿಸುವಲ್ಲಿ ಸಂತಸವನ್ನು ಕಂಡವರು ಇಲ್ಲಿನ ಗಾಂಧಿನಗರದ ಎಂ.ಪದ್ಮನಾಭ ಸಮಗಾರ. ತಂದೆ ಕೃಷ್ಣ ಸಮಗಾರರರಿಂದ ಬಳುವಳಿಯಾಗಿ ಬಂದ ವೃತ್ತಿ ಕೌಶಲದ ಜತೆಗೆ ಚೆಂಡು ತಯಾರಿಕೆಯನ್ನೂ ಪದ್ಮನಾಭ ಮುಂದುವರಿಸಿಕೊಂಡು ಬಂದಿದ್ದಾರೆ.

ಬೆಂಗಳೂರಿನಿಂದ ಗಾಡಿ ಎತ್ತಿನ ದಪ್ಪ ಚರ್ಮವನ್ನು ಬೆಂಗಳೂರಿನಲ್ಲಿ ಶೋಧಿಸಿ, ಮನೆಗೆ ತಂದು ತಮಗೆ ಬೇಕಾದ ರೀತಿಯಲ್ಲಿ ಹದ ಮಾಡಿ ತೆಂಗಿನ ನಾರನ್ನು ಚೆಂಡಿನೊಳಗೆ ನಿವರ್ಾತವಿಲ್ಲದಂತೆ ತುಂಬಿ ಹೊಲಿಯುವ ಚಾಕಚಕ್ಯತೆಗೆ ಅಷ್ಟೇ ಶ್ರಮವಿದೆ.

ಮೊದಲು ವೃತ್ತಕಾರದ ಚರ್ಮವನ್ನು ಕತ್ತರಿಸಿ ಅರ್ಧ ಗೋಲಾಕಾರವಾಗಿ ರೂಪಿಸುವ ಹಂತದಲ್ಲಿ ಪುಟ್ಟ ಒನಕೆಯಿಂದ ಚರ್ಮವನ್ನು ಗುದ್ದಿ ಹದ ಮಾಡಬೇಕಾಗುತ್ತದೆ. ಹೀಗೆ ಎರಡು ಅರ್ಧ ಗೋಲಾಕಾರದ ಬಟ್ಟಲುಗಳು ತಯಾರಾದ ಬಳಿಕ ಎರಡನ್ನೂ ಚರ್ಮದ ದಾರದಿಂದಲೇ ಆರ್ದಾಂಶ ಹೋಲಿಯಲಾಗುತ್ತದೆ.

ನಂತರ ತೆಂಗಿನ ನಾರನ್ನು ನೀರು ಹನಿಸಿ ಒದ್ದೆ ಮಾಡಿ ಈ ಗೋಲದೊಳಗೆ ತುರುಕಿ ಮತ್ತೆ ಒತ್ತಡ ಹಾಕಿ ಗುದ್ದಬೇಕು. ಹೀಗೆ ಗುದ್ದಿ ಗಟ್ಟಿಗೊಳಿಸುವಾಗ ಎಲ್ಲಿಯೂ ಗೋಲದೊಳಗೆ ಖಾಲಿ (ನಿವರ್ಾತ) ಜಾಗ ಸೃಷ್ಠಿಯಾಗದಂತೆ ನೋಡಿಕೊಳ್ಳಬೇಕಾಗುತ್ತದೆ.

ಹೀಗೆ ಸ್ವಲ್ಪ ಚಪ್ಪಟ್ಟೆಯಾದ ಚೆಂಡು ತಯಾರಾಗುತ್ತದೆ. ಇದನ್ನು ಸಂಬಂಧಪಟ್ಟವರು ಒಯ್ದ ನಂತರ ಎಣ್ಣೆ ಕೊಡುತ್ತಾರೆ. ಆಗ ಪೂರ್ತಿಯಾಗಿ ಚೆಂಡಿನಾಕಾರಕ್ಕೆ ಬರುತ್ತದೆ. ಹೀಗೆ ಜಿಲ್ಲೆಯ ಹತ್ತು ಹಲವು ಧಾರ್ಮಿಕ ಕ್ಷೇತ್ರಗಳಿಗೆ ಚೆಂಡು ತಯಾರಿಸಿಕೊಡುವ ಅವಕಾಶ ಪಡೆದಿರುವ ಪದ್ಮನಾಭ ಅಪರೂಪದ ಸಾಧಕರೂ ಹೌದು.

ಮೂಡುಬಿದರೆಯ ಹಳೆ ಠಾಣೆ ಬಳಿ ಕಲ್ಸಂಕದಲ್ಲಿ ಚರ್ಮದ ಚಪ್ಪಲಿ, ಶೂ ಬ್ಯಾಗ್ ತಯಾರಿ ಹೀಗೆ ಕರಕುಶಲಿಗರಾಗಿರುವ ಪದ್ಮನಾಭ ಹದಿನೈದು ವರ್ಷಗಳಿಂದ ಇಲ್ಲಿನ ಸೊಸೈಟಿ ಬ್ಯಾಂಕಿನ ನಿರ್ದೇಶಕರಾಗಿ ಓರ್ವ ಜನಾನುರಾಗಿ ಸಹಕಾರಿಯೂ ಹೌದು. ಪರಂಪರೆಯ ಬೆಸುಗೆ ಇರುವ ಚೆಂಡುಗಳನ್ನು ತಯಾರಿಸುವ ಅವಕಾಶ ಪಡೆದಿರುವುದು ನನ್ನ ಭಾಗ್ಯ ಎನ್ನುವ ಪದ್ಮನಾಭರ( ಮೊ. 8970535339) ಈ ಕೆಲಸದ ಹಿಂದೆ ಪತ್ನಿ ಕಮಲ, ಪುತ್ರರಾದ ರಾಜೇಶ್, ರಾಕೇಶ್ ಪುತ್ರಿಯರಾದ ಜಯಶ್ರೀ, ಉಷಾ ಅವರ ಸಹಕಾರವೂ ಇದೆ.

ಮೂಡುಬಿದಿರೆ :ಚೆಂಡಿಗೂ ’18’ರ ನಂಟು..!

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಎಂದರೆ ಇಲ್ಲಿ 18ರ ನಂಟಿದೆ. 18 ಬಸದಿಗಳು, ಕೆರೆಗಳು, ದೇವಾಲಯಗಳು, ಆಳ್ವಾಸ್ನಂತಹ ಹೆಸರಾಂತ ಶಿಕ್ಷಣ ಪ್ರತಿಷ್ಠಾನದ ಖ್ಯಾತಿವೆತ್ತ ಒಂದೇ ದೊಡ್ಡ ಆವರಣದಲ್ಲಿ 18 ಶಿಕ್ಷಣ ಸಂಸ್ಥೆಗಳು, ಅಲ್ಲಿ 18 ಸಾವಿರ ವಿದ್ಯಾರ್ಥಿಗಳು ಹೀಗೆ .. 18ರ ನಂಟು ಬೆಳೆಯುತ್ತದೆ. ವಿಶೇಷವೆಂದರೆ ಪದ್ಮನಾಭರೂ ಪ್ರಸಿದ್ಧ ಪೊಳಲಿ ಸೇರಿದಂತೆ ಜಿಲ್ಲೆಯ ಸುಮಾರು 18 ಕ್ಷೇತ್ರಗಳಿಗೆ ಅಲ್ಲಿನ ವಾರ್ಷಿಕ ಜಾತ್ರೆಗಳಿಗೆ ಚರ್ಮದ ಚೆಂಡು ಒದಗಿಸುತ್ತಾ ಬಂದಿರುವುದು! ಅದರಲ್ಲಿ ಪೊಳಲಿ ಚೆಂಡು ದೊಡ್ಡ ಗಾತ್ರದ್ದು.

ವಾಮಂಜೂರಿನ ಅಮೃತೇಶ್ವರ ದೇವಸ್ಥಾನ, ಪುತ್ತಿಗೆ ಸೋಮನಾಥೇಶ್ವರ ದೇವಸ್ಥಾನ, ಬೆಳುವಾಯಿ ನಡ್ಯೋಡಿಗೆ ಮತ್ತು ಸಾಣೂರು. ಕೋಟೆಬಾಗಿಲು, ಮೂಡುಬಿದರೆಯ ಆದಿಶಕ್ತಿ ಮಹಾದೇವಿ ಮತ್ತು ಮಹಾಕಾಳಿ ದೇವಸ್ಥಾನಗಳು, ಮಲ್ಲೂರು, ಅಮ್ಟಾಡಿ, ಇರುವೈಲು, ಮುಚ್ಚೂರು, ಮಾರ್ನಾಡು, ಅಳಿಯೂರು, ಅಶ್ವತ್ಥಪುರ, ಪಾಲಡ್ಕ ಹೀಗೆ ವಿವಿಧೆಡೆ ಹಲವು ಗಾತ್ರದ ಚೆಂಡುಗಳನ್ನು ಒದಗಿಸುವ ಪದ್ಮನಾಭರಿಗೆ ಜನವರಿಯಿಂದ ಮೇವರೆಗೆ ಚೆಂಡಿನ ಸೀಸನ್. ಅದೊಂದು ವ್ಯಾಪಾರ ಎನ್ನುವುದಕ್ಕಿಂತ ಧಾರ್ಮಿಕ ಪರಂಪರೆಯ ಸೇವೆಯ ಅವಕಾಶ ಎನ್ನುತ್ತಾರೆ ಪದ್ಮನಾಭ.

ಕೃಪೆ : Mangalore information

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಮಹಿಳಾ ಮತದಾರರನ್ನು ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವ ಬಿಜೆಪಿ ಕುತಂತ್ರ ವಿಫಲವಾಯಿತು : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ

Published

on

ಸುದ್ದಿದಿನ,ದಾವಣಗೆರೆ:ಬಿಜೆಪಿ ಮಹಿಳಾ ಮತದಾರರನ್ನು ಒಂದು ಪ್ರಬಲ ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವಲ್ಲಿ ಪ್ರಯತ್ನಿಸಿತ್ತು. ‘ನಾರಿ ಶಕ್ತಿ’ ಎಂಬ ಬ್ರಾಂಡ್ ಅಡಿಯಲ್ಲಿ ಮಹಿಳೆಯರನ್ನು ನೇರವಾಗಿ ತಲುಪುವ ತಂತ್ರವನ್ನು ಬಿಜೆಪಿ ರೂಪಿಸಿತ್ತು. ಮಹಿಳಾ ಮೀಸಲಾತಿ ಮಸೂದೆಯನ್ನು ಈ ಬ್ರಾಂಡ್‌ನ ಸರ್ವೋಚ್ಚ ಸಾಧನೆಯಾಗಿ ಪ್ರಸ್ತುತಪಡಿಸಲಾಯಿತು. ಆದರೆ ಬಿಜೆಪಿ ಒಂದು ಅತ್ಯಂತ ವ್ಯವಸ್ಥಿತ ಮತ್ತು ಚಾಣಾಕ್ಷ ‘ಪಾಲಿಟಿಕಲ್ ಮಾರ್ಕೆಟಿಂಗ್’ ತಂತ್ರವಾಗಿ ಬಳಸಿಕೊಳ್ಳುವುದಕ್ಕೆಯತ್ನಿಸಿ ವಿಫಲವಾಗಿದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದರು.

ಗೃಹ ಕಚೇರಿಯಲ್ಲಿ ಇಂದು ಏರ್ಪಡಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಹಿಳಾ ಮೀಸಲಾತಿಯನ್ನು ಕ್ಷೇತ್ರ ಪುನರ್‌ವಿಂಗಡಣೆಗೆ “ಬಲಿಪಶು” ಮಾಡುವುದು ಸರಿಯಲ್ಲ. ೨೦೨೩ರ ಕಾಯಿದೆಯಲ್ಲಿ ಜನಗಣತಿ ನಂತರ ಅನುಷ್ಠಾನ ಎಂದು ತಿಳಿಸಲಾಗಿದೆ. ಆದರೆ ಈಗ ೨೦೧೧ರ ಜನಗಣತಿ ಆಧಾರದಲ್ಲಿ ವೇಗಗೊಳಿಸುವುದು ಏಕೆ? ಜಾತಿ ಜನಗಣತಿಯನ್ನು ಸೇರಿಸದಿದ್ದರೆ ಪುನರ್‌ವಿಂಗಡಣೆಯು ಸಾಮಾಜಿಕ ನ್ಯಾಯಕ್ಕೆ ಹೊಂದುವುದಿಲ್ಲ. ದಕ್ಷಿಣ ರಾಜ್ಯಗಳಲ್ಲಿ ಕುಟುಂಬ ನಿಯಂತ್ರಣದ ಯಶಸ್ಸಿಗೆ ಶಿಕ್ಷೆ ನೀಡುವಂತಾಗಬಾರದು. ಜನಸಂಖ್ಯೆ ನಿಯಂತ್ರಣ ಮಾಡಿದ್ದು ದಕ್ಷಣ ಭಾರತ. ಇದರ ಆಧಾರದ ಮೇರೆಗೆ ಮಸೂದೆ ಜಾರಿಗಿದ್ದರೆ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಆಗುತ್ತಿತ್ತು. ಬಿಜೆಪಿ ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯುವ ಹುನ್ನಾರ ಮಾಡಿತು. ಆದರೆ ಮೂರನೇ ಎರಡರಷ್ಟು ಬಹುಮತ ಸಿಗಲಿಲ್ಲ ಎಂದರು.

ಮಸೂದೆಯನ್ನು ವೋಟ್ ಬ್ಯಾಂಕ್ ಆಗಿ ಬಳಕೆ ಮಾಡಿಕೊಂಡು ಮಹಿಳೆಯರ ಭಾವನೆಗಳೊಂದಿಗೆ ಆಟವಾಡಲು ಹೋಯಿತು. ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯುವ ಹುನ್ನಾರ ಮಾಡಿತು. ಆದರೆ ಅದು ನಡೆಯಲಿಲ್ಲ. ನಮ್ಮ ವಿರೋಧವೇನಿದ್ದರು ಪುನರ್ ವಿಂಗಡಣೆ ಮಸೂದೆ ತಿರಸ್ಕರಿಸಿದೆ ಹೊರತು ಮಹಿಳಾ ಮೀಸಲು ಮಸೂದೆ ಅಲ್ಲ ಎಂದರು.

ಪಂಚ ರಾಜ್ಯಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಿದ್ದರೂ ನರೇಂದ್ರ ಮೋದಿ ಅವರು ದೇಶವನ್ನು ಉದ್ದೇಶಿಸಿ ಮಾತನಾಡಿದ್ದು ಚುನಾವಣಾ ಆಯೋಗ ನಿರ್ಧಾರ ತೆಗೆದುಕೊಳ್ಳಬೇಕು. ಅವರು ಚುನಾವಣೆಯ ಸಂದರ್ಭದಲ್ಲಿ ದೇಶ ಉದ್ದೇಶಿಸಿ ಮಾಡಿದ ಭಾಷಣದಲ್ಲಿ ವಿರೋಧ ಪಕ್ಷಗಳನ್ನು ತೆಗಳಿಕೆ ಮಾಡಿದ್ದು ಸರಿಯಲ್ಲ. ಇದನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಬೇಕು ಎಂದು ಮನವಿಮಾಡಿದರು.

ಮಸೂದೆ ಕುರಿತು ಸರ್ವ ಪಕ್ಷಗಳ ಸಭೆ ಕರೆಯುವಂತೆ ಮಾಡಿಕೊಂಡ ಮನವಿ ಉಪೇಕ್ಷೆ ಮಾಡಿತು ಕೇಂದ್ರ ಸರ್ಕಾರ. ಮಹಿಳಾ ಮೀಸಲಾತಿ ಮಸೂದೆ ಈಗಾಗಲೇ ಲೋಕಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ಕ್ಷೇತ್ರ ಪುನರ್ ವಿಂಗಡಣೆ ಬಗ್ಗೆ ಆತಂಕ ಇದೆ. ಎಲ್ಲರ ಒಪ್ಪಿಗೆ ಪಡೆದು ಮುಂದುವರೆದಿದ್ದರೆ ಅನುಕೂಲ ಆಗುತ್ತಿತ್ತು. ೨೦೨೪ರಲ್ಲಿ ಮಹಿಳಾ ಮೀಸಲು ಜಾರಿಗೆ ತರುವ ಅವಕಾಶ ಇತ್ರು. ಇದನ್ನು ಮಾಡಲು ಮುಂದಾಗಲಿಲ್ಲ. ಕ್ಷೇತ್ರ ಪುನರ್ ವಿಂಗಡಣೆ ಜಮ್ಮು ಮತ್ತು ಕಾಶ್ಮೀರ ಹಾಗೂ ಅಸ್ಸಾಂ ದಲ್ಲಿ ತಮ್ಮ ಅನುಕೂಲ, ರಾಜಕೀಯ ಲಾಭಕ್ಕೆ ಅನುಗುಣವಾಗಿ ಮಾಡಿ ತೋರಿಸಿದ್ದಾರೆ. ಈ ಬಗ್ಗೆ ಹೆಚ್ಚು ಆತಂಕ ಇದೆ. ಆಡಳಿತ ಪಕ್ಷಕ್ಕೆ ಈ ಮಸೂದೆ ಜಾರಿಗೆ ತರುವ ಬದ್ದತೆ ಇದ್ದಿದ್ದರೆ ಸರ್ವ ಪಕ್ಷಗಳನ್ನು ವಿಶ್ವಾಸಕ್ಕೆ ಪಡೆಯುವ ಪ್ರಯತ್ನ ಮಾಡುತ್ತಿದ್ದರು. ರಾಜೀವ್ ಗಾಂಧಿ ಅವರು ಸ್ಥಳೀಯ ಸಂಸ್ಥೆಯಲ್ಲಿ ಶೇ ೫೦ ಜಾರಿಗೆ ತಂದಿದ್ದೇವೆ ಎಂದರು.

ಜನಸಂಖ್ಯೆ ನಿಯಂತ್ರಣ ಮಾಡಿದ್ದು ದಕ್ಷಣ ಭಾರತ. ಇದರ ಆಧಾರದ ಮೇರೆಗೆ ಜಾರಿಗೆ ತಂದರೆ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಆಗಲಿದೆ. ಜನಗಣತಿಯಲ್ಲಿ ಜಾತಿ ಗಣತಿ ನಡೆಯುತ್ತಿದೆಯೇ ಎಂಹುದು ಇನ್ನೂ ಸ್ಪಷ್ಟವಾಗಿ ಹೇಳಿಲ್ಲ. ಉತ್ತರ ಪ್ರದೇಶ ಹಾಗೂ ಕರ್ನಾಟಕದ ಲೋಕಸಭಾ ಕ್ಷೇತ್ರಗಳ ನಡುವೆ ಇರುವ ವ್ಯತ್ಯಾಸ ದೊಡ್ಡದು. ಉತ್ತರ ಭಾರತೀಯ ರಾಜ್ಯಗಳು ಹೆಚ್ಚು ಪ್ರಾಬಲ್ಯ ಸಾಧಿಸಿದರೆ ದಕ್ಷಿಣ ಭಾರತಕ್ಕೆ ತೊಂದರೆ ಆಗುತ್ತದೆ. ಮಸೂದೆ ಮಂಡನೆಗೆ ಇನ್ನೂ ಎರಡು ವರ್ಷಗಳ ಕಾಲಾವಕಾಶ ಇದೆಯಾವುದು ಒಳಿತು ಎಂಬುದು ಮಹಿಳೆಯರು ಆಲೋಚನೆ ಮಾಡಲಿ ಎಂದರು.

ಸುದ್ದಿಗೋಷ್ಟಿಯಲ್ಲಿ ‘ಧೂಡಾ’ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ, ಕಾಂಗ್ರೆಸ್ ಮಹಿಳಾ ಜಿಲ್ಲಾ ಘಟಕದ ಅಧ್ಯಕ್ಷೆ ಅನಿತಾಬಾಯಿ, ಮುಖಂಡರಾದ ಶಿವಕುಮಾರ್, ಅಯೂಬ್ ಪೈಲ್ವಾನ್, ಎ.ನಾಗರಾಜ್ ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೆ. ಬೇವಿನಹಳ್ಳಿ, ಸಾಲಕಟ್ಟೆ ಗ್ರಾಮದಲ್ಲಿ ರಕ್ತದಾನ ಶಿಬಿರ

Published

on

ಸುದ್ದಿದಿನ,ದಾವಣಗೆರೆ:ಕೆ. ಬೇವಿನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಲಾದ ರಕ್ತದಾನ ಶಿಬಿರದಲ್ಲಿ 21 ಯೂನಿಟ್ ರಕ್ತ ಸಂಗ್ರಹಿಸಲಾಯಿತು. ಇದೇ ವೇಳೆ ಸಾಲಕಟ್ಟೆ ಗ್ರಾಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹರಿಹರ ಇವರ ಸಂಯುಕ್ತ ಆಶ್ರಯದಲ್ಲಿ 11 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.

ಶಿಬಿರದಲ್ಲಿ ಸತ್ಯನಾರಾಯಣ ಕ್ಯಾಂಪ್‌ನ ಡಾ. ರಾಮಾಂಜನೇಯ ಸ್ವಾಮಿ ಅವರು ಇದುವರೆಗೆ 110 ಬಾರಿ ರಕ್ತದಾನ ಮಾಡಿರುವುದು ವಿಶೇಷವಾಗಿದ್ದು, ಈ ಬಾರಿ ತಮ್ಮ ಮಗನೊಂದಿಗೆ ರಕ್ತದಾನ ಮಾಡಿ ಇತರರಿಗೆ ಮಾದರಿಯಾಗಿದ್ದಾರೆ. ಅಲ್ಲದೆ ವಿರೂಪಾಕ್ಷಪ್ಪ ಬಿ.ಕೆ. (ವಿ.ಆರ್.ಡಬ್ಲ್ಯೂ) ಎಂಬ ವಿಶೇಷ ಚೇತನರು 5ನೇ ಬಾರಿ ರಕ್ತದಾನ ಮಾಡಿ ಗಮನಾರ್ಹರಾಗಿದ್ದಾರೆ.

ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ (ಟಿ.ಎಚ್.ಒ) ಉಮಣ್ಣ ಅವರು ಮಾತನಾಡಿ, ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲವಾದುದರಿಂದ ರಕ್ತದಾನದ ಮಹತ್ವ ಅತ್ಯಂತ ಮಹತ್ತರವಾಗಿದೆ ಎಂದು ತಿಳಿಸಿದರು.

ವೈದ್ಯಾಧಿಕಾರಿಗಳಾದ ಡಾ. ರೇವತಿ ಎಚ್ ಬುಟ್ಟೆ ಅವರು ಮಾತನಾಡಿ, ಗ್ರಾಮದ ಜನರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿರುವುದು ಸಂತೋಷದ ಸಂಗತಿ. ಅತಿ ತುರ್ತು ಪರಿಸ್ಥಿತಿಗಳಲ್ಲಿ ರಕ್ತದಾನವು ಅನೇಕ ರೋಗಿಗಳ ಜೀವ ಉಳಿಸಲು ಸಹಾಯಕವಾಗುತ್ತದೆ ಎಂದು ಹೇಳಿದರು. ದಾವಣಗೆರೆ ಕೇಂದ್ರ ರಕ್ತ ನಿಧಿಯ ಡಾ. ಗೀತಾ ಡಿ.ಎಚ್. ಹಾಗೂ ಸಿಬ್ಬಂದಿಗಳು ರಕ್ತವನ್ನು ಸಂಗ್ರಹಿಸಿದರು.

ಈ ಕಾರ್ಯಕ್ರಮದಲ್ಲಿ ಆರೋಗ್ಯ ನಿರೀಕ್ಷಕರಾದ ಉಮೇಶ್ ಎಂ.ಆರ್.ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತರು ಹಾಗೂ ಗ್ರಾಮಸ್ಥರಾದ ವಿಶ್ವನಾಥ್ ಡಿ.ಆರ್. (ಉಪನ್ಯಾಸಕರು), ವಿಶ್ವನಾಥ್ ಎ.ಎಸ್., ಬನ್ನಿಕೋಡು ಸುರೇಶ್, ರೇವಣಸಿದ್ದಪ್ಪ, ಕೆ.ಜಿ. ಸಂತೋಷ್, ಜಿ.ಎಂ. ಮುರುಗೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ಕೆ. ಬೇವಿನಹಳ್ಳಿ ಮತ್ತು ಸಾಲಕಟ್ಟೆ ಗ್ರಾಮಸ್ಥರ ಸಹಕಾರದಿಂದ ರಕ್ತದಾನ ಶಿಬಿರ ಯಶಸ್ವಿಯಾಗಿ ನೆರವೇರಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕಾಂಗ್ರೆಸ್ ನ ಹಿರಿಯ ಮುಖಂಡ ಕೆರೆಕಟ್ಟೆ ಸೈಯದ್ ಸೈಫುಲ್ಲಾ ನಿಧನ

Published

on

ಸುದ್ದಿದಿನ,ದಾವಣಗೆರೆ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾಗೂ ಮುಸ್ಲಿಂ ಸಮಾಜದ ನಾಯಕರಾಗಿದ್ದ ಸೈಯದ್ ಕೆರೆಕಟ್ಟೆ ಸೈಫುಲ್ಲಾ ಸೈಫುಲ್ಲಾ ಸಾಬ್ (79ವರ್ಷ) ಅವರು ಇಂದು ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ದಾವಣಗೆರೆಯ ನಂಜಪ್ಪ ಆಸ್ಪತ್ರೆಯಲ್ಲಿ ದಾಖಲಾಗಿದ್ದರು . ಮೃತರ ನಿಧನಕ್ಕೆ ಮುಸ್ಲಿಂ ಸಮುದಾಯದ ಮುಖಂಡರು, ವಿವಿಧ ಪಕ್ಷಗಳ ನಾಯಕರು ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.

ಕರೆಕಟ್ಟೆಜನಾಬ್ ಸೈಯದ್ ಸೈಫುಲ್ಲ ಸಾಬ್ಮಿ ಲ್ಲತ್ ವಿದ್ಯಾ ಸಂಸ್ಥೆಗಳ ಸಂಸ್ಥಾಪಕರೂ ಆಗಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿ ಗುರುತಿಸಿಕೊಂಡಿದ್ದ ಸೈಯದ್ ಸೈಫುಲ್ಲಾ ಸಾಬ್ ಅವರು ಸಿಎಂ ಸಿದ್ದರಾಮಯ್ಯ, ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಸೇರಿದಂತೆ ಕಾಂಗ್ರೆಸ್ ಹಿರಿಯ ನಾಯಕರ ಆಪ್ತರಾಗಿದ್ದರು.

ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಅವರನ್ನು ಸೇರಿದಂತೆ ಕುಟುಂಬಸ್ಥರು, ಅಪಾರ ಬಂಧುಬಳಗದವರನ್ನು ಸೈಯದ್ ಕೆರೆಕಟ್ಟೆ ಸೈಫುಲ್ಲಾ ಸಾಬ್ ಅವರು ಅಗಲಿದ್ದಾರೆ.

2013ರಲ್ಲಿ ಕಾಂಗ್ರೆಸ್ ಟಿಕೆಟ್ ಸಿಗದ ಕಾರಣ ಜೆಡಿಎಸ್ ಸೇರಿ ಈ ಪಕ್ಷದಿಂದ ಸ್ಪರ್ಧಿಸಿ 26 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದಿದ್ದರು. ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಶಾಮನೂರು ಶಿವಶಂಕರಪ್ಪರ ವಿರುದ್ಧ ಸೋತರೂ ಎರಡನೇ ಸ್ಥಾನ ಪಡೆದಿದ್ದರು. ಆಗ ಬಿಜೆಪಿ ಮೂರನೇ ಸ್ಥಾನಕ್ಕೆ ಹೋಗಿತ್ತು. ಮತ್ತೆ ಕಾಂಗ್ರೆಸ್ ಪಕ್ಷ ಸೇರಿದ್ದ ಅವರು, ಸಿದ್ದರಾಮಯ್ಯರ ಜೊತೆ ಉತ್ತಮ ಒಡನಾಟ ಹೊಂದಿದ್ದರು. ಅವರು ಸ್ನಾತಕೋತ್ತರ ವೃತ್ತಿಪರ ಬಿಎಸ್ಸಿ ಅನ್ನು ಮೈಸೂರು ವಿಶ್ವವಿದ್ಯಾಲಯದಿಂದ ಪಡೆದಿದ್ದರು. ದಾವಣಗೆರೆಯ ಡಿಆರ್ ಎಂ ಕಾಲೇಜಿನಲ್ಲಿ ಬಿ. ಎಡ್ ವ್ಯಾಸಂಗ ಮಾಡಿದ್ದರು. ಎಂ. ಎಂ. ಬಸಪ್ಪ ಶಿಕ್ಷಣ ಸಂಘದ ಕಾಲೇಜಿನಲ್ಲಿ ಪದವಿ ಪೂರೈಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending