Connect with us

ದಿನದ ಸುದ್ದಿ

ಮೂಡುಬಿದಿರೆಯಲ್ಲಿ ತಯಾರಾಗುವ “ಪೊಳಲಿ ಚೆಂಡು”ಧಾರ್ಮಿಕ ಚೆಂಡುಗಳಿಗೂ ಇಲ್ಲಿದೆ ಚೆಂಡಿಗೂ 18ರ ನಂಟು..!

Published

on

  • ಗಣೇಶ್ ಕಾಮತ್ ಮೂಡುಬಿದಿರೆ

ಸುದ್ದಿದಿನ,ಮೂಡುಬಿದಿರೆ : ತುಳುನಾಡಿನ ಇತಿಹಾಸ ಪ್ರಸಿದ್ದ ಮೃಣ್ಮಯ ಮೂರ್ತಿ ಮಾತೆ ರಾಜರಾಜೇಶ್ವರಿಯ ಸನ್ನಿಧಿ ಪೊಳಲಿಯ ಜಾತ್ರೆ ಎಂದರೆ ಅದು ವಿಶೇಷ ಮಾತ್ರವಲ್ಲ ವಿಶಿಷ್ಠವೂ ಹೌದು. ಒಂದು ತಿಂಗಳ ಈ ಪರಂಪರೆಯ ಜಾತ್ರೆಯಲ್ಲಿ ‘ ಪುರಲ್ದ ಚೆಂಡ್’ ಕೂಡಾ ಪ್ರಧಾನ ಆಕರ್ಷಣೆ.

ಎಲ್ಲೆಡೆಯಿಂದ ಭಜಕರು ಹರಿದು ಬರುವ ಈ ಜಾತ್ರೆಯ ಚೆಂಡಿನಾಟದ ,( ಈ ಬಾರಿ ಎ6ರಿಂದ 10) ಅದರ ಆಚರಣೆ ಎಲ್ಲವೂ ಗಮನಾರ್ಹವೇ. ಪೊಳಲಿ ಜಾತ್ರೆಗೆ ದಿನ ನಿಗದಿಪಡಿಸುವಲ್ಲಿ ಮೂಡುಬಿದಿರೆಯ ಪುತ್ತಿಗೆಯ ಕ್ಷೇತ್ರದ ಪಾತ್ರ ಮುಖ್ಯವಾಗಿದೆ. ಅದೇ ರೀತಿ ಪ್ರಸಿದ್ಧ ಪೊಳಲಿ ಚೆಂಡಿಗೂ ಮೂಡುಬಿದಿರೆಗೂ ಗಮನ ಸೆಳೆಯುವ ಸಂಬಂಧವೆಂದರೆ ಈ ಚೆಂಡು ತಯಾರಾಗುವೂದೂ ಮೂಡುಬಿದಿರೆಯಲ್ಲೇ!

ಕಳೆದ 15 ವರ್ಷಗಳಿಂದ ಪೊಳಲಿ ಚೆಂಡಿನ ಸಿದ್ಧತೆಯನ್ನು ಶ್ರದ್ಧಾ ಭಕ್ತಿಯಿಂದ ನಿರ್ಮಿಸುವಲ್ಲಿ ಸಂತಸವನ್ನು ಕಂಡವರು ಇಲ್ಲಿನ ಗಾಂಧಿನಗರದ ಎಂ.ಪದ್ಮನಾಭ ಸಮಗಾರ. ತಂದೆ ಕೃಷ್ಣ ಸಮಗಾರರರಿಂದ ಬಳುವಳಿಯಾಗಿ ಬಂದ ವೃತ್ತಿ ಕೌಶಲದ ಜತೆಗೆ ಚೆಂಡು ತಯಾರಿಕೆಯನ್ನೂ ಪದ್ಮನಾಭ ಮುಂದುವರಿಸಿಕೊಂಡು ಬಂದಿದ್ದಾರೆ.

ಬೆಂಗಳೂರಿನಿಂದ ಗಾಡಿ ಎತ್ತಿನ ದಪ್ಪ ಚರ್ಮವನ್ನು ಬೆಂಗಳೂರಿನಲ್ಲಿ ಶೋಧಿಸಿ, ಮನೆಗೆ ತಂದು ತಮಗೆ ಬೇಕಾದ ರೀತಿಯಲ್ಲಿ ಹದ ಮಾಡಿ ತೆಂಗಿನ ನಾರನ್ನು ಚೆಂಡಿನೊಳಗೆ ನಿವರ್ಾತವಿಲ್ಲದಂತೆ ತುಂಬಿ ಹೊಲಿಯುವ ಚಾಕಚಕ್ಯತೆಗೆ ಅಷ್ಟೇ ಶ್ರಮವಿದೆ.

ಮೊದಲು ವೃತ್ತಕಾರದ ಚರ್ಮವನ್ನು ಕತ್ತರಿಸಿ ಅರ್ಧ ಗೋಲಾಕಾರವಾಗಿ ರೂಪಿಸುವ ಹಂತದಲ್ಲಿ ಪುಟ್ಟ ಒನಕೆಯಿಂದ ಚರ್ಮವನ್ನು ಗುದ್ದಿ ಹದ ಮಾಡಬೇಕಾಗುತ್ತದೆ. ಹೀಗೆ ಎರಡು ಅರ್ಧ ಗೋಲಾಕಾರದ ಬಟ್ಟಲುಗಳು ತಯಾರಾದ ಬಳಿಕ ಎರಡನ್ನೂ ಚರ್ಮದ ದಾರದಿಂದಲೇ ಆರ್ದಾಂಶ ಹೋಲಿಯಲಾಗುತ್ತದೆ.

ನಂತರ ತೆಂಗಿನ ನಾರನ್ನು ನೀರು ಹನಿಸಿ ಒದ್ದೆ ಮಾಡಿ ಈ ಗೋಲದೊಳಗೆ ತುರುಕಿ ಮತ್ತೆ ಒತ್ತಡ ಹಾಕಿ ಗುದ್ದಬೇಕು. ಹೀಗೆ ಗುದ್ದಿ ಗಟ್ಟಿಗೊಳಿಸುವಾಗ ಎಲ್ಲಿಯೂ ಗೋಲದೊಳಗೆ ಖಾಲಿ (ನಿವರ್ಾತ) ಜಾಗ ಸೃಷ್ಠಿಯಾಗದಂತೆ ನೋಡಿಕೊಳ್ಳಬೇಕಾಗುತ್ತದೆ.

ಹೀಗೆ ಸ್ವಲ್ಪ ಚಪ್ಪಟ್ಟೆಯಾದ ಚೆಂಡು ತಯಾರಾಗುತ್ತದೆ. ಇದನ್ನು ಸಂಬಂಧಪಟ್ಟವರು ಒಯ್ದ ನಂತರ ಎಣ್ಣೆ ಕೊಡುತ್ತಾರೆ. ಆಗ ಪೂರ್ತಿಯಾಗಿ ಚೆಂಡಿನಾಕಾರಕ್ಕೆ ಬರುತ್ತದೆ. ಹೀಗೆ ಜಿಲ್ಲೆಯ ಹತ್ತು ಹಲವು ಧಾರ್ಮಿಕ ಕ್ಷೇತ್ರಗಳಿಗೆ ಚೆಂಡು ತಯಾರಿಸಿಕೊಡುವ ಅವಕಾಶ ಪಡೆದಿರುವ ಪದ್ಮನಾಭ ಅಪರೂಪದ ಸಾಧಕರೂ ಹೌದು.

ಮೂಡುಬಿದರೆಯ ಹಳೆ ಠಾಣೆ ಬಳಿ ಕಲ್ಸಂಕದಲ್ಲಿ ಚರ್ಮದ ಚಪ್ಪಲಿ, ಶೂ ಬ್ಯಾಗ್ ತಯಾರಿ ಹೀಗೆ ಕರಕುಶಲಿಗರಾಗಿರುವ ಪದ್ಮನಾಭ ಹದಿನೈದು ವರ್ಷಗಳಿಂದ ಇಲ್ಲಿನ ಸೊಸೈಟಿ ಬ್ಯಾಂಕಿನ ನಿರ್ದೇಶಕರಾಗಿ ಓರ್ವ ಜನಾನುರಾಗಿ ಸಹಕಾರಿಯೂ ಹೌದು. ಪರಂಪರೆಯ ಬೆಸುಗೆ ಇರುವ ಚೆಂಡುಗಳನ್ನು ತಯಾರಿಸುವ ಅವಕಾಶ ಪಡೆದಿರುವುದು ನನ್ನ ಭಾಗ್ಯ ಎನ್ನುವ ಪದ್ಮನಾಭರ( ಮೊ. 8970535339) ಈ ಕೆಲಸದ ಹಿಂದೆ ಪತ್ನಿ ಕಮಲ, ಪುತ್ರರಾದ ರಾಜೇಶ್, ರಾಕೇಶ್ ಪುತ್ರಿಯರಾದ ಜಯಶ್ರೀ, ಉಷಾ ಅವರ ಸಹಕಾರವೂ ಇದೆ.

ಮೂಡುಬಿದಿರೆ :ಚೆಂಡಿಗೂ ’18’ರ ನಂಟು..!

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಎಂದರೆ ಇಲ್ಲಿ 18ರ ನಂಟಿದೆ. 18 ಬಸದಿಗಳು, ಕೆರೆಗಳು, ದೇವಾಲಯಗಳು, ಆಳ್ವಾಸ್ನಂತಹ ಹೆಸರಾಂತ ಶಿಕ್ಷಣ ಪ್ರತಿಷ್ಠಾನದ ಖ್ಯಾತಿವೆತ್ತ ಒಂದೇ ದೊಡ್ಡ ಆವರಣದಲ್ಲಿ 18 ಶಿಕ್ಷಣ ಸಂಸ್ಥೆಗಳು, ಅಲ್ಲಿ 18 ಸಾವಿರ ವಿದ್ಯಾರ್ಥಿಗಳು ಹೀಗೆ .. 18ರ ನಂಟು ಬೆಳೆಯುತ್ತದೆ. ವಿಶೇಷವೆಂದರೆ ಪದ್ಮನಾಭರೂ ಪ್ರಸಿದ್ಧ ಪೊಳಲಿ ಸೇರಿದಂತೆ ಜಿಲ್ಲೆಯ ಸುಮಾರು 18 ಕ್ಷೇತ್ರಗಳಿಗೆ ಅಲ್ಲಿನ ವಾರ್ಷಿಕ ಜಾತ್ರೆಗಳಿಗೆ ಚರ್ಮದ ಚೆಂಡು ಒದಗಿಸುತ್ತಾ ಬಂದಿರುವುದು! ಅದರಲ್ಲಿ ಪೊಳಲಿ ಚೆಂಡು ದೊಡ್ಡ ಗಾತ್ರದ್ದು.

ವಾಮಂಜೂರಿನ ಅಮೃತೇಶ್ವರ ದೇವಸ್ಥಾನ, ಪುತ್ತಿಗೆ ಸೋಮನಾಥೇಶ್ವರ ದೇವಸ್ಥಾನ, ಬೆಳುವಾಯಿ ನಡ್ಯೋಡಿಗೆ ಮತ್ತು ಸಾಣೂರು. ಕೋಟೆಬಾಗಿಲು, ಮೂಡುಬಿದರೆಯ ಆದಿಶಕ್ತಿ ಮಹಾದೇವಿ ಮತ್ತು ಮಹಾಕಾಳಿ ದೇವಸ್ಥಾನಗಳು, ಮಲ್ಲೂರು, ಅಮ್ಟಾಡಿ, ಇರುವೈಲು, ಮುಚ್ಚೂರು, ಮಾರ್ನಾಡು, ಅಳಿಯೂರು, ಅಶ್ವತ್ಥಪುರ, ಪಾಲಡ್ಕ ಹೀಗೆ ವಿವಿಧೆಡೆ ಹಲವು ಗಾತ್ರದ ಚೆಂಡುಗಳನ್ನು ಒದಗಿಸುವ ಪದ್ಮನಾಭರಿಗೆ ಜನವರಿಯಿಂದ ಮೇವರೆಗೆ ಚೆಂಡಿನ ಸೀಸನ್. ಅದೊಂದು ವ್ಯಾಪಾರ ಎನ್ನುವುದಕ್ಕಿಂತ ಧಾರ್ಮಿಕ ಪರಂಪರೆಯ ಸೇವೆಯ ಅವಕಾಶ ಎನ್ನುತ್ತಾರೆ ಪದ್ಮನಾಭ.

ಕೃಪೆ : Mangalore information

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದಲ್ಲಿ ನಿಷೇಧ ; ತೆರವುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಪತ್ರ

Published

on

ಸುದ್ದಿದಿನಡೆಸ್ಕ್:ಕರ್ನಾಟಕದ ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲಾಧಿಕಾರಿ ವಿಧಿಸಿರುವ ನಿಷೇಧ ಆದೇಶ ರದ್ದು ತೆರವುಗೊಳಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಮೂಲಕ ಮನವಿ ಮಾಡಿದ್ದಾರೆ.

ಇದು ಮುಂದಿನ ದಿನಗಳಲ್ಲಿ ತರಕಾರಿಗಳು ಮತ್ತು ಇತರ ಕೃಷಿ ಸರಕುಗಳ ಅಂತಾರಾಜ್ಯ ಸಾಗಾಣೆಗೆ ಅಡ್ಡಿ ಉಂಟುಮಾಡುವ ಸಾಧ್ಯತೆಯಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಈ ನಿರ್ಬಂಧವು ಸಾವಿರಾರು ರೈತರ ಜೀವನ ಉಪಾಯದ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಐಎಎಸ್ – ಐಪಿಎಸ್ ಅಧಿಕಾರಿಗಳ ವರ್ಗಾವಣೆ ; ಆದೇಶ

Published

on

ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ನೇಮಕಗೊಂಡಿರುವ ಐಪಿಎಸ್‌ ಅಧಿಕಾರಿ ರೂಪಾ ಡಿ. ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.

ಸುದ್ದಿದಿನಡೆಸ್ಕ್:ರಾಜ್ಯ ಸರ್ಕಾರ ಇಂದು ಕೆಲವು ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಐಪಿಎಸ್ ಅಧಿಕಾರಿ ಡಿ. ರೂಪಾ ಅವರನ್ನು ಬೆಂಗಳೂರು ಮೆಟ್ರೋ ಪಾಲಿಟನ್ ಟಾಸ್ಕ್‌ಪೋರ್ಸ್ ಎಡಿಜಿಪಿ ಯಾಗಿ ವರ್ಗಾವಣೆ ಮಾಡಿದೆ.

ಕೆಎಸ್‌ಆರ್‌ಟಿಸಿ ಮಹಾನಿರ್ದೆಶಕರನ್ನಾಗಿ ಅಕ್ರಂ ಪಾಶಾ ಅವರನ್ನು ನೇಮಕ ಮಾಡಲಾಗಿದೆ. ಇದೇ ವೇಳೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರನ್ನು ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ನೇಮಕಗೊಂಡಿರುವ ಐಪಿಎಸ್‌ ಅಧಿಕಾರಿ ರೂಪಾ ಡಿ. ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣ ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮನವಿ

Published

on

ಸುದ್ದಿದಿನಡೆಸ್ಕ್:ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣದ ಬಗ್ಗೆ ಮಧ್ಯಸ್ಥಿಕೆ ವಹಿಸುವಂತೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಸಂತ್ರಸ್ಥರು ಮತ್ತು ಅವರ ಕುಟುಂಬಗಳಿಗೆ ಪಾರದರ್ಶಕತೆ ನ್ಯಾಯ ದೊರಕುವಂತಾಗಲು ತನಿಖೆಯ ಮೇಲ್ವಿಚಾರಣೆ ನಡೆಸುವಂತೆ ಒತ್ತಾಯಿಸಿದ್ದಾರೆ.

ಸಂತ್ರಸ್ಥರಿಗೆ ನ್ಯಾಯ ಒದಗಿಸುವುದು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ತಡೆಯುವುದು ಎಲ್ಲರ ಕರ್ತವ್ಯವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ನಡುವೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ ಸಮಸ್ಯೆಗೆ ಒಳಗಾದ ಮಕ್ಕಳ ವಿವರವನ್ನು ಕೋರಿ ಸಿಐಡಿಗೆ ಮಕ್ಕಳ ಹಕ್ಕು ಆಯೋಗ ನೋಟಿಸ್ ಜಾರಿ ಮಾಡಿದೆ.

ಸಾರ್ವಜನಿಕ ದೂರು ಆಧರಿಸಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಆಯೋಗ ಈ ಬಗ್ಗೆ ಹೆಚ್ಚಿನ ನಿಖರ ಮಾಹಿತಿ ನೀಡುವಂತೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending