ರಾಜಕೀಯ
ಸಮಾಜಶಕ್ತಿಗೆ ಭ್ರಮನಿರಸನ
ತುರ್ತು ಪರಿಸ್ಥಿತಿಯ ನಂತರದ ಚುನಾವಣೆಯಷ್ಟೇ ಮಹತ್ವದ ಚುನಾವಣೆ ಇದು ಕೆಲವರು ವಿಶ್ಲೇಷಿಸಿದ್ದರು. 2014 ರಿಂದ ಇಂದಿನವರೆಗೂ ದೇಶದಲ್ಲಿ ನಡೆದ ವಿದ್ಯಮಾನಗಳು ಮತ್ತು ಅವು ಎತ್ತಿದ ಪ್ರಶ್ನೆಗಳನ್ನು ತಿರುವಿ ಹಾಕಿದಾಗ ಅದು ನಿಜ ಎಂದೇ ಅನಿಸಿತ್ತು. ಹಾಗಿದ್ದ ಮೇಲೆ ಎಲ್ಲ ಪಕ್ಷಗಳೂ ಆ ಮಟ್ಟದ ಒಗ್ಗಟ್ಟಿನ ಹೋರಾಟಕ್ಕೆ ತಯಾರಾಗಿರಬೇಕಿತ್ತು.
ದೇಶದ ಬಿಜೆಪಿಯೇತರ ಎಲ್ಲ ನಾಯಕರುಗಳ ಹುಮ್ಮಸ್ಸು ಮೇಳೈಸಿ ದೇಶದ ಸಂಘಟಿತ ಪರ್ಯಾಯ ಶಕ್ತಿಗೆ ನಾಂದಿ ಆಯಿತು ಎನ್ನುವಂತೆ ಕುಮಾರಸ್ವಾಮಿಯವರ ಅಧಿಕಾರ ಸ್ವೀಕಾರ ವೇದಿಕೆಯಲ್ಲಿ ಸಂಭ್ರಮಿಸಲಾಯಿತು. ಆದರೆ ಆನಂತರ ಆದದ್ದು ನಾಯಿ ಬಾಲದ ಕಥೆಯೇ. ಬಿಜೆಪಿಯ ಬೆಂಬಲಿಗರು ಈಗ ಮೂರು ವರ್ಷಗಳಿಂದ ಒಂದು ಪ್ರಶ್ನೆಯನ್ನು ಕೇಳುತ್ತಲೇ ಇದ್ದರು: ‘ಮೋದಿಗೆ ಪರ್ಯಾಯ ಯಾರು? ಯಾರೂ ಇಲ್ಲವಲ್ಲಾ!’ ಎಂದು.
ಅದನ್ನು ಇಂದು ಸ್ಪಷ್ಟ ಗುರಿಯೇ ಇಲ್ಲದ, ಇದ್ದರೂ ಅದಕ್ಕೊಂದು ಅಜೆಂಡಾನೇ ಇಲ್ಲದ ಜಢತ್ವಕ್ಕೆ ಶರಣಗಿದ್ದ ಈ ಪಕ್ಷಗಳು ಒಪ್ಪಿಕೊಂಡಾಯಿತು. ಅದರ ನೈತಿಕ ಹೊಣೆಯನ್ನು ಈ ಪಕ್ಷಗಳು ಹೊರುವುದಿರಲಿ, ಅವು ದೇಶವನ್ನು ಎತ್ತ ತಳ್ಳಿದವು ಎನ್ನುವುದು ಅಕ್ಷಮ್ಯ. ಹಾಗೊಮ್ಮೆ ಬಿಜೆಪಿಯೇತರ ಸರ್ಕಾರ ರಚನೆಗೆ ಅವಕಾಶವಾಗುವಂತೆ ಫಲಿತಾಂಶ ಬಂದಿದ್ದರೂ ಅಂತಹ ಸರ್ಕಾರವನ್ನು ಈ ಪಕ್ಷಗಳು ಎಷ್ಟರ ಮಟ್ಟಿಗೆ ಸಧೃಢವಾಗಿ ನಡೆಸುತ್ತಿದ್ದವು ಎನ್ನುವ ಪ್ರಶ್ನೆ ದೊಡ್ಡದಾಗಿಯೇ ಇರುತ್ತಿತ್ತು. ಅದು ಇನ್ನೂ ಭಯಾನಕ. ಸಂಘ ಪರಿವಾರದ ಗುರಿ ಮಾತ್ರ ಸ್ವಾತಂತ್ರಪೂರ್ವದಿಂದಲೂ ಸ್ಪಷ್ಠವಾಗಿಯೇ ಇದೆ. ಹಂತಹಂತವಾಗಿ ಆ ಕಡೆಗೆ ಅದು ಸಾಗುತ್ತಲೇ ಇದೆ. ಇದು ಈ ದೇಶ-ಕಾಲದ ನಿಜ ಸ್ಥಿತಿ.
ಕರ್ನಾಟಕದಲ್ಲಿ ಮೈತ್ರಿ ಸರ್ಕಾರದ ಕಪಾಳಕ್ಕೆ ಹೊಡೆದಂತಾ ಈ ಫಲಿತಾಂಶಕ್ಕೆ ಇಲ್ಲಿ ನಡೆದ ಅಪ್ರಬುದ್ಧ ಅಥವಾ ಸ್ವಾರ್ಥ ತುಂಬಿದ ನಡೆಗಳೇ ಕಾರಣ. ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರ ರಚನೆ ಮಾಡಿಕೊಂಡಿದ್ದೇ ಈ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು. ಯಾವುದೇ ಕಾರಣಕ್ಕೂ ಕೇಂದ್ರದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಬಾರದು, ಬಿಜೆಪಿಯ ಅತ್ಯಂತ ಕಡಿಮೆ ಲೋಕಸಭಾ ಸದಸ್ಯರನ್ನು ಕರ್ನಾಟಕದಿಂದ ದೆಹಲಿಗೆ ಕಳಿಸುವಂತಾಗಬೇಕು ಎನ್ನುವ ದೃಷ್ಟಿ.
ಅದಕ್ಕಾಗಿ ಕಾಂಗ್ರೆಸ್ ಮುಖ್ಯಮಂತ್ರಿ ಸ್ಥಾನವನ್ನೂ ಜೆಡಿಎಸ್ಸಿಗೆ ಕೊಟ್ಟುಬಿಟ್ಟಿತ್ತು. ರಾಷ್ಟ್ರಮಟ್ಟದಲ್ಲಿ ಬಿಜೆಪಿಯೇತರ ಪಕ್ಷಗಳು ಒಂದೇ ವೇದಿಕೆಯಲ್ಲಿ ಹೇಗೆ ಬರಲು ಸಾಧ್ಯವಾಗಲಿಲ್ಲವೋ ಹಾಗೆಯೇ ಕರ್ನಾಟಕದಲ್ಲೂ ಕೂಡ ಸೀಟು ಹಂಚಿಕೆ ವಿಚಾರದಲ್ಲಿ ಮಿತ್ರಪಕ್ಷಗಳು ಒಮ್ಮತಕ್ಕೆ ಬರಲು ಸಾಧ್ಯವೇ ಆಗಲಿಲ್ಲ. ಈ ರಾಜಕೀಯ ಆಟಗಳಿಂದ ಪ್ರಜಾಪ್ರಭುತ್ವಕ್ಕಾದ ಧಕ್ಕೆ ಅಷ್ಟಿಷ್ಟಲ್ಲ.
ದೇವೇಗೌಡರ ಎದೆಯಲ್ಲಿ ಬಿಜೆಪಿಯೇತರ ಸರ್ಕಾರದ ಉದ್ದೇಶ ಇದ್ದರೂ ಅವರು ತಮ್ಮ ಕುಟುಂಬಕ್ಕೆ ತಮ್ಮನ್ನು ಕಟ್ಟಿಹಾಕಿಕೊಳ್ಳುತ್ತಾರೆ. ಆ ಕುಟುಂಬದ ಮೂರನೇ ತಲೆಮಾರಿನ ನಿನ್ನೆಯ ಹುಡುಗರು ಇಂದು ಸ್ವಂತ ಕಾಲ ಮೇಲೆ ನಿಲ್ಲಬೇಕಾದ ಅನಿವಾರ್ಯಕ್ಕೆ ಸಿಕ್ಕಿರುವ ಯುವಕರಾಗಿಬಿಟ್ಟಿದ್ದಾರೆ. ಆ ಒಬ್ಬೊಬ್ಬರಿಗೂ ಒಂದೊಂದು ನೆಲೆ ದೊರಕಿಸುವುದು ಆ ಕುಟುಂಬದ ಜವಾಬ್ದಾರಿ. ಆ ಕುಟುಂಬಕ್ಕೆ ಗೊತ್ತಿರುವುದು, ಆಸರೆಯಾಗಿರುವುದು ರಾಜಕೀಯವೇ. ಹಾಗಾಗಿ ತನ್ನ ಹಾಸನ ಕ್ಷೇತ್ರವನ್ನೇ ಒಬ್ಬ ಮೊಮ್ಮಗನಿಗೆ ದಾನ ಮಾಡಿದ ದೇವೇಗೌಡರು ತುಮಕೂರಿಗೆ ನಡೆದರು. ಅಥವಾ ಮೊಮ್ಮಗನೇ ಕಿತ್ತುಕೊಂಡು ಕಳಿಸಿದ್ದ!
ಮತ್ತೊಬ್ಬ ಮೊಮ್ಮಗನಿಗೆ ತಾವು ಕೆಲವು ವರ್ಷಗಳಿಂದ ಅನುಕೂಲಕರ ವಾತಾವರಣ ನಿರ್ಮಿಸಿಕೊಂಡ ಹಾಗೂ ಸಧ್ಯಕ್ಕೆ ಪ್ರಬಲ ಸ್ಪರ್ಧೆಯೊಡ್ಡಬಹುದಾದ ಯಾವ ಆಕಾಂಕ್ಷಿ ಇಲ್ಲವೆಂದೇ ತಿಳಿದಿದ್ದ ಮಂಡ್ಯ ಕ್ಷೇತ್ರವನ್ನು ಆಯ್ದುಕೊಂಡರು. ಯಾವ ಮೂಲ ಉದ್ದೇಶಕ್ಕಾಗಿ ಮೈತ್ರಿ ರಾಜಕೀಯಕ್ಕೆ ಅವಕಾಶ ಮಾಡಿಕೊಂಡಿದ್ದರೋ ಆ ಉದ್ದೇಶವನ್ನು ಪಕ್ಕಕ್ಕೆ ಸರಿಸಲಾಯಿತು. ಅಥವಾ, ನಿಜಕ್ಕೂ ಮೂಲ ಉದ್ದೇಶ ಇದು ಅಲ್ಲವೇ ಅಲ್ಲ, ಅದು ಚುನಾವಣೆಯಿಂದ ಚುನಾವಣೆಗೆ ಜಹಗೀರು ವಿಸ್ತರಣೆಯೇ. ಮುಂದೊಂದು ದಿನ ಭಾರತದಲ್ಲಿ ಪ್ರಜಾಪ್ರಭುತ್ವ ಕಳಚಿಹೋಗಿ ಮತ್ತೆ ರಾಜಾಡಳಿತ ಬರುತ್ತದೇನೋ, ಹಾಗಾಗುವುದಾದರೆ ತಮ್ಮ ಕುಟುಂಬವೇ ಅರಸಾಗಲಿ ಎನ್ನುವ ಮುಂಗಾಣ್ಕೆಯೋ ಎನ್ನುವ ಹಾಗೆ! ಪರಿಣಾಮ ಎದುರಿಗೇ ಇದೆ.
ದೇವೇಗೌಡರ ಉದ್ದೇಶ ನಿಜಕ್ಕೂ ಜಾತ್ಯತೀತ ಮನಸ್ಸಿನ, ಸಂವಿಧಾನಬದ್ಧ ಪರ್ಯಾಯ ಶಕ್ತಿಯನ್ನು ಹುಟ್ಟಿಹಾಕುವುದೇ ಆಗಿದ್ದಿದ್ದರೆ, ಅವರು ಈಗ ನಡೆದುಕೊಂಡಂತೆ ನಡೆದುಕೊಳ್ಳುತ್ತಿರಲಿಲ್ಲ. ಅವರು ತಮ್ಮ ಮೊಮ್ಮಕ್ಕಳನ್ನು ಮುಂದೆ ತರುವ ಕೆಲಸವನ್ನು ಮುಂದಕ್ಕೆ ಹಾಕುತ್ತಿದ್ದರು. ಅದರಿಂದ ಅವರ ಕುಟುಂಬಕ್ಕೆ ತುಂಬಾ ದೊಡ್ಡ ನಷ್ಟವೇನೂ ಆಗುತ್ತಿರಲಿಲ್ಲ. ಬದಲಿಗೆ ದಕ್ಷ ಅಭ್ಯರ್ಥಿಗಳನ್ನು ಹುಡುಕಿ ಅವಕಾಶ ಕೊಟ್ಟಿದ್ದರೆ ತಮ್ಮ ಪಕ್ಷದ ವರ್ಚಸ್ಸು ಇನ್ನಷ್ಟು ಬೆಳೆಯುತ್ತಿತ್ತು.
ಮೂರೂ ಕ್ಷೇತ್ರಗಳಲ್ಲಿ ಮೈತ್ರಿಯ ಅಭ್ಯರ್ಥಿಗಳೇ ಗೆಲ್ಲುತ್ತಿದ್ದರೇನೋ! ಇದನ್ನು ಬರೆಯುತ್ತಿರುವಾಗ ನನ್ನ ಬಗ್ಗೆ ನನಗೇ ನಗು ಬರುತ್ತದೆ. ಯಾವ ಆದರ್ಶವನ್ನು ಯಾರಿಂದ ನಿರೀಕ್ಷಿಸುತ್ತಿದ್ದೇವೆ ಎಂದು! ಬಿಜೆಪಿಯ ಸುಳಿವೇ ಇರದ ಮಂಡ್ಯವನ್ನು ಆ ಪಕ್ಷಕ್ಕೆ ಧಾರೆಯೆರೆದು ಕೊಟ್ಟಾಯಿತು. ಈ ರೀತಿಯ ಅಪ್ರಬುದ್ಧ, ಸ್ವಾರ್ಥ ರಾಜಕಾರಣದ ಚಾರಿತ್ರಿಕ ಪ್ರಮಾದಗಳೇ ಕರ್ನಾಟಕದಲ್ಲಿ ಬಿಜೆಪಿ ತಳವೂರಲು ಕಾರಣವಾಯ್ತು.
ಇನ್ನು ಕಾಂಗ್ರೆಸ್ಸಿಗೆ ಮತ್ತೆ ಬಿಜೆಪಿಗೆ ಅಧಿಕಾರ ಕೊಡಬಾರದು ಎನ್ನುವ ಛಲ ಮಾತಿನಲ್ಲಿ ಮಾತ್ರ ಕಂಡಿತು. ಕೃತಿಯಲ್ಲಿ ನಿರ್ಧಿಷ್ಠ ಗುರಿಯೇ ಇರಲಿಲ್ಲ ಎಂಬಂತೆ ತೋರಿತು. ಇಡೀ ದೇಶದಲ್ಲಿದ್ದ ಕಾಂಗ್ರೆಸ್ಸಿನ ಬಲಹೀನ ಸ್ಥಿತಿ ಕರ್ನಾಟಕ ಕಾಂಗ್ರೆಸ್ಸಿನ ಮೇಲೆ ಅಡ್ಡ ಪರಿಣಾಮ ಬೀರಿಯೇ ಇದ್ದಿತು. ಹೇಗಾದರೂ ಮಾಡಿ ಹಿಂದಿನ ಬಾರಿ ಗೆದ್ದ ಕ್ಷೇತ್ರಗಳನ್ನು ಉಳಿಸಿಕೊಂಡು ಲೋಕಸಭಾ ಚುನಾವಣೆಯೆಂಬ ದೈಯ್ಯವನ್ನು ಸಾಗಹಾಕುವ ಒಳಮನಸ್ಸೇ ಇಲ್ಲಿನ ಕಾಂಗ್ರೆಸ್ ನಾಯಕರಲ್ಲಿ ಕಂಡಿತು.ಈ ಮೈತ್ರಿ ಪಕ್ಷಗಳು ಮಾಡಿಕೊಂಡ ಗೊಂದಲ, ಅರಾಜಕತೆ ಮತ್ತು ಸ್ವಾರ್ಥಚಿಂತನೆಗಳಿಂದ ದೊಡ್ಡ ಲಾಭವಾಗಿದ್ದು, ಆಗುತ್ತಿರುವುದು ಬಿಜೆಪಿಗೆ. ದೊಡ್ಡ ನೈತಿಕ ನಷ್ಟವಾಗಿದ್ದು, ಆಗುವುದು ಈ ಮೈತ್ರಿ ಪಕ್ಷಗಳಿಗೆ.
ಎಲ್ಲಕ್ಕಿಂತ ಹೆಚ್ಚಾಗಿ ಈ ಮೈತ್ರಿ ಪಕ್ಷಗಳಿಂದ ದೊಡ್ಡ ಭ್ರಮನಿರಸನವಾಗಿದ್ದು ಕರ್ನಾಟಕದ ಪ್ರಗತಿಪರ ಯುವಶಕ್ತಿಗೆ ಮತ್ತು ಸಮಾಜಶಕ್ತಿಗೆ. ಕೋಮುವಾದೀ, ವಿಭಜಕ ಶಕ್ತಿಗಳು ಕರ್ನಾಟಕದಲ್ಲಿ ಬೆಳೆಯುವುದನ್ನು, ನೆಲೆಕಾಣುವುದನ್ನು ತಡೆಯಲು ಎಲ್ಲ ಪ್ರಜಾಪ್ರಭುತ್ವವಾದೀ ದಾರಿಗಳನ್ನೂ ಬಳಸಿಕೊಂಡು ಸ್ವಯಂಪ್ರೇರಿತವಾಗಿ ಸತತ ಹೋರಾಡುತ್ತಿವೆ ಈ ಶಕ್ತಿಗಳು. ಬಹುಶಃ ಈ ಮಟ್ಟಕ್ಕೆ ಟೊಂಕ ಕಟ್ಟಿ ಜನಪರವಾಗಿ, ಸಂವಿಧಾನದ ಪರವಾಗಿ ನಿಂತು ಪ್ರತಿರೋಧ ಒಡ್ಡುತ್ತಿರುವ ಕೆಲವೇ ರಾಜ್ಯಗಳಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ.
ಆ ಕಾರಣದಿಂದಲೇ ಇಲ್ಲಿ ಇಂದಿನ ಮೈತ್ರಿ ಸರ್ಕಾರಕ್ಕೂ ಅವಕಾಶವಾಯಿತು. ಇದನ್ನು ಈ ಮೈತ್ರಿಪಕ್ಷಗಳು ಮರೆಯಬಾರದು. ಆದರೆ ಇಂದು ತಮ್ಮ ನಡೆಗಳಿಂದ ಅವು ಈ ಶಕ್ತಿಗಳ ವಿಶ್ವಾಸವನ್ನು ಸಾಕಷ್ಟು ಕಳಕೊಂಡಿವೆ. ಈಗ ಈ ಮೈತ್ರಿ ಸರ್ಕಾರ ನಿಜಕ್ಕೂ ಉಳಿದುಕೊಂಡರೆ ತಾನು ಕಳಕೊಂಡ ಈ ಶಕ್ತಿಗಳ ವಿಶ್ವಾಸವನ್ನು ಮತ್ತೆ ಗಳಿಸಿಕೊಳ್ಳುವ ಪ್ರಯತ್ನ ಪಡಬೇಕು. ಮತ್ತು ಆ ಪ್ರಯತ್ನ ಪ್ರಾಮಾಣಿಕವಾಗಿರಬೇಕು, ಅಷ್ಟೇ.
– ಕೇಸರಿ ಹರವೂ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.
ಹೌದು! 2023ರ ಆಗಸ್ಟ್ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.
http://Visit : www.suddidina.com
ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ:
ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.
ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.
ಕುಟುಂಬದ ಬಜೆಟ್ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:
ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.
ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

ದಿನದ ಸುದ್ದಿ
ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.
http://Visit : www.suddidina.com
ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.
ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:
1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.
2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.
3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.
4. ಖರಗ್ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.
ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.
ಕರ್ನಾಟಕಕ್ಕೆ ಏನು ಲಾಭ?
ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.
ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.
ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ದಿನದ ಸುದ್ದಿ
ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಶತಕದ ಸಂಭ್ರಮವನ್ನು ಆಚರಿಸಲು ರಾಜ್ಯ ಸರ್ಕಾರವು `ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ’ ಎಂಬ ವಿಶೇಷ ಮತ್ತು ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಈ ಕಾರ್ಯಕ್ರಮವು ನಾಳೆ ಅಂದರೆ 2026ನೇ ಸೆಪ್ಟೆಂಬರ್ 10ರ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಪ್ರತಿಷ್ಠಿತ ಬ್ಯಾಂಕ್ವೇಟ್ ಸಭಾಂಗಣದಲ್ಲಿ ನಡೆಯಲಿದೆ. ಸರ್ಕಾರದ ನೂರು ದಿನಗಳ ಸಾಧನೆ, ಜನಪರ ಯೋಜನೆಗಳ ಅನುಷ್ಠಾನ ಮತ್ತು ಮುಂದಿನ ಅಭಿವೃದ್ಧಿಯ ದೂರದೃಷ್ಟಿಯನ್ನು ಜನರ ಮುಂದಿಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.
ಗಣ್ಯರ ದಂಡು, ಸಿದ್ದರಾಮಯ್ಯರಿಂದ ಉದ್ಘಾಟನೆ:
ಈ ಶತದಿನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟು ಮತ್ತು ನಾಯಕತ್ವದ ನಿರಂತರತೆಯನ್ನು ಸಂಕೇತಿಸುತ್ತದೆ.
ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್, ರಾಜ್ಯ ಸಂಪುಟದ ಎಲ್ಲಾ ಸಚಿವರು, ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.
http://Visit : www.suddidina.com
ಫಲಾನುಭವಿಗಳೊಂದಿಗೆ ನೇರ ಸಂವಾದ – ಕಾರ್ಯಕ್ರಮದ ಪ್ರಮುಖ ಆಕರ್ಷಣೆ
ಈ ಕಾರ್ಯಕ್ರಮದ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಮುಖ್ಯಮಂತ್ರಿಗಳೊಂದಿಗೆ ಫಲಾನುಭವಿಗಳ ನೇರ ಸಂವಾದ. ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಈ ವೇದಿಕೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.
ದೃಢ ಕರ್ನಾಟಕದ ಸಂಕಲ್ಪ
ಶತಕದ ಪಥ – ಪ್ರಗತಿಯ ರಥ100 ದಿನಗಳು.. ಇದು ಕೇವಲ ಆರಂಭವಷ್ಟೇ. ಜನರ ಆಶಯಗಳಿಗೆ ಸ್ಪಂದಿಸಿ, ರಾಜ್ಯದ ಸಮಗ್ರ ಅಭಿವೃದ್ಧಿಗೆ ವೇಗ ನೀಡುವ ಸಂಕಲ್ಪದೊಂದಿಗೆ ಕಳೆದ 100 ದಿನಗಳಲ್ಲಿ ಹಲವು ಮಹತ್ವದ ಹೆಜ್ಜೆಗಳನ್ನು ಇಡಲಾಗಿದೆ. ಮುಂದಿನ ದಿನಗಳಲ್ಲಿ ಅಭಿವೃದ್ಧಿ, ಉದ್ಯೋಗ, ತಂತ್ರಜ್ಞಾನ, ಮೂಲಸೌಕರ್ಯ, ಶಿಕ್ಷಣ, ಕೃಷಿ ಹಾಗೂ… pic.twitter.com/NDViSWw6LV
— DK Shivakumar (@DKShivakumar) September 10, 2026
ಕೇವಲ ಗ್ಯಾರಂಟಿ ಯೋಜನೆಗಳಷ್ಟೇ ಅಲ್ಲದೆ, ಸಮಾಜದ ವಿವಿಧ ವರ್ಗಗಳ ಶ್ರಮಿಕರು ಮತ್ತು ಕಾರ್ಮಿಕರು ಕೂಡ ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ತಮ್ಮ ಬದುಕಿನಲ್ಲಿ ಸರ್ಕಾರದ ಯೋಜನೆಗಳಿಂದ ಆಗಿರುವ ಬದಲಾವಣೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮುಕ್ತವಾಗಿ ಮಾತನಾಡಲಿದ್ದಾರೆ.
100 ದಿನಗಳಲ್ಲಿ ಸರ್ಕಾರವು ಕೈಗೊಂಡಿರುವ ಜನಪರ ನಿರ್ಧಾರಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಆಡಳಿತದಲ್ಲಿ ತಂದಿರುವ ಪಾರದರ್ಶಕತೆಯ ಬಗ್ಗೆ ಈ ವೇದಿಕೆಯಲ್ಲಿ ಚರ್ಚೆ ನಡೆಯಲಿದೆ. ಸರ್ಕಾರದ ಸಾಧನೆಗಳನ್ನು ಕೇವಲ ಭಾಷಣದ ಮೂಲಕವಲ್ಲ, ಬದಲಾಗಿ ಫಲಾನುಭವಿಗಳ ಬಾಯಿಂದಲೇ ಜನರಿಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.
ಮುಂದಿನ ದಿನಗಳಲ್ಲಿ ದೃಢ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಸರ್ಕಾರದ ಮುಂದಿನ 5 ವರ್ಷಗಳ ಕಾರ್ಯಯೋಜನೆ ಮತ್ತು ರೂಪುರೇಷೆಗಳನ್ನು ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

-
ದಿನದ ಸುದ್ದಿ4 days agoಬರ ನಿರ್ವಹಣೆಗೆ ಸಚಿವ ಸಂಪುಟ ಉಪಸಮಿತಿ ಸಭೆ – ದಾವಣಗೆರೆಯಲ್ಲಿ ಕುಡಿಯುವ ನೀರು, ಮೇವು ಕೊರತೆ ಬಗ್ಗೆ ಸಚಿವ ಮಲ್ಲಿಕಾರ್ಜುನ್ ಪ್ರಸ್ತಾಪ
-
ದಿನದ ಸುದ್ದಿ3 days agoರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
-
ದಿನದ ಸುದ್ದಿ3 days agoಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
-
ದಿನದ ಸುದ್ದಿ3 days agoಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
-
ದಿನದ ಸುದ್ದಿ3 days agoಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!
-
ದಿನದ ಸುದ್ದಿ3 days ago5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!
-
ದಿನದ ಸುದ್ದಿ4 days agoವಿಶೇಷ ಚೇತನ ಮಕ್ಕಳು ದೇವರ ಮಕ್ಕಳು – ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್
-
ದಿನದ ಸುದ್ದಿ4 days agoಭದ್ರೆ ಆಗಮನದಿಂದ ರೈತರಲ್ಲಿ ಹೊಸ ಭರವಸೆ – ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ



