ರಾಜಕೀಯ
ಅವರ ಬಲೂನು ಹೆಚ್ಚು ಕಾಲ ಉಳಿಯಲಾರದು
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2018/09/Politics-suddidina34.jpg&description=ಅವರ ಬಲೂನು ಹೆಚ್ಚು ಕಾಲ ಉಳಿಯಲಾರದು', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2018/09/Politics-suddidina34.jpg&description=ಅವರ ಬಲೂನು ಹೆಚ್ಚು ಕಾಲ ಉಳಿಯಲಾರದು', 'pinterestShare', 'width=750,height=350'); return false;" title="Pin This Post">
ಪ್ರೀತಿಯ ಸ್ನೇಹಿತರೇ
ಈ ಫಲಿತಾಂಶ Writing on the wall ಆಗಿತ್ತು. ಅನಿರೀಕ್ಷಿತವಲ್ಲ. ‘ಹಾಗಿರಲಿಲ್ಲ, ವಿರೋಧ ಪಕ್ಷಗಳು ಸ್ವಲ್ಪ ಎಡವಿದವು, ಪುಲ್ವಾಮಾ ಅಟ್ಯಾಕ್ನಿಂದ ಎಲ್ಲವೂ ಬದಲಾಯಿತು. ಸ್ವಲ್ಪ ಬೇರೆ ರೀತಿ ಮಾಡಿದ್ದರೆ ಸನ್ನಿವೇಶವೇ ಬೇರೆ ರೀತಿ ಇರುತ್ತಿತ್ತು’ ಎಂದು ಯಾರಾದರೂ ಹೇಳಿದರೆ, ನಾವಿನ್ನೂ ಭ್ರಮೆಯಿಂದ ಹೊರಬಂದಿಲ್ಲ ಎಂದಷ್ಟೇ ಅರ್ಥ. ಏಕೆಂದರೆ, ಅವರದ್ದೊಂದು ಪರಿಣಾಮಕಾರಿ ಕಂಪ್ಲೀಟ್ ಪ್ಯಾಕೇಜ್.
ಕೇಂದ್ರೀಕೃತವಾದ ವ್ಯವಸ್ಥಿತ ಪ್ಲಾನಿಂಗ್ ಮತ್ತು ಅಷ್ಟೇ ವ್ಯವಸ್ಥಿತವಾಗಿ ವಿಕೇಂದ್ರೀಕೃತ ಇಂಪ್ಲಿಮೆಂಟೇಷನ್. ಆಗುತ್ತಿರುವುದು ಇಷ್ಟೇ. ನಾವೊಂದು ಹೊಸ ಕಾಲದಲ್ಲಿ ಬದುಕುತ್ತಿದ್ದೇವೆ. ಆ ಹೊಸ ಕಾಲಕ್ಕೆ ಅವರು ಚೆನ್ನಾಗಿ ಹೊಂದಿಕೊಂಡಿದ್ದಾರೆಂದರೆ ತಪ್ಪಾಗುತ್ತದೆ. ಹೊಸ ಕಾಲವನ್ನು ನಿರ್ಮಿಸುವುದರಲ್ಲೂ ಅವರು ಪಾತ್ರ ವಹಿಸುತ್ತಿದ್ದಾರೆ. ಅದನ್ನು ನಿರ್ಮಿಸಲು ಅವರಿಗೇ ಬಿಟ್ಟರೆ ದ್ವೇಷ, ತಾರತಮ್ಯ ಮತ್ತು ಪರಿಸರನಾಶದ ಆಧಾರದ ಮೇಲೆ ಅಸಹನೀಯವಾದುದನ್ನು ಕಟ್ಟಿಬಿಡುತ್ತಾರೆ. ಅಪ್ರಜಾತಾಂತ್ರಿಕತೆಯು ಇನ್ನಷ್ಟು ನಾರ್ಮಲ್ ಆಗುತ್ತದೆ.
ಆದರೆ, ಪ್ರಪಂಚ ಮುಳುಗಿ ಹೋಗಿಲ್ಲ. ಅವರ ಬಲೂನೂ ಹೆಚ್ಚು ಕಾಲ ಉಳಿಯಲಾರದು. ಸರಿಯಾದ ಪರ್ಯಾಯವನ್ನು ಕಟ್ಟಿ ನಿಲ್ಲಿಸಿದರೆ ಮಾತ್ರ ಆ ಬಲೂನು ಒಡೆದು ಹೋಗುತ್ತದೆ. ಪರ್ಯಾಯವೆಂಬುದು ಕೇವಲ ಪರ್ಯಾಯ ರಾಜಕೀಯ ಪಕ್ಷವಲ್ಲ, ‘ಸಾಂಪ್ರದಾಯಿಕ ರೀತಿಯ’ ಚಳವಳಿಯೂ ಅಲ್ಲ.
ಹೊಸ ಕಾಲದ ಸಂಸ್ಕೃತಿ, ಮೌಲ್ಯ, ಆರ್ಥಿಕತೆ ಮತ್ತು ರಾಜಕಾರಣವನ್ನು ನಿರ್ಮಿಸುವ ಇನಿಷಿಯೇಟಿವ್ ನಾವು ತೆಗೆದುಕೊಳ್ಳಬೇಕು. ಪ್ರತಿಯೊಂದು ಆಯಾಮದಲ್ಲೂ ಹೊಸತು ಮತ್ತು ಒಳಿತು ಇರುವಂತೆ ಮಾಡಬೇಕು. ಇದರ ಬಗ್ಗೆ ನನಗಿರುವ ವಿಶ್ವಾಸ ಇದು – ಆ ಕೆಲಸಕ್ಕೆ ಇಳಿದಾಗ, ಅದನ್ನು ನಾವೆಷ್ಟು ಸೊಗಸಾಗಿ ಮಾಡಬಲ್ಲವೆಂಬುದು ನಮಗೇ ಆಶ್ಚರ್ಯ ತರಿಸಲಿದೆ.
ಹಿಂದಿನೆಲ್ಲಾ ಅನುಭವಗಳು, ದರ್ಶನಗಳು, ಆಂದೋಲನದ ಒಳ್ಳೆಯ ಮತ್ತು ಸೋಲಿನ ಪಾಠಗಳು ನಮ್ಮ ಜೊತೆಗಿದ್ದೇ ಇವೆ. ಅವು ಅಡ್ಡಿಯಾಗದಂತಷ್ಟೇ ನೋಡಿಕೊಳ್ಳಬೇಕು ಅಷ್ಟೇ. ಇವೆಲ್ಲದರೊಂದಿಗೆ ನಾವು ಶುರು ಮಾಡಿಯೇ ಬಿಟ್ಟರೆ, ಬಹಳ ಬೇಗ – ಅಂದರೆ 8ರಿಂದ 10 ವರ್ಷಗಳಲ್ಲಿ – ನಾವು ಹೊಸ ಭಾರತವನ್ನು ಕಟ್ಟುವಲ್ಲಿ ಮಹತ್ವದ ತಿರುವಿಗೆ ಕಾರಣವಾಗುತ್ತೇವೆ. ಇದರಲ್ಲಿ ಸಂಶಯವೇ ಇಲ್ಲ. ಹೇಗೆಂಬುದರ ಚರ್ಚೆ ಶುರು ಮಾಡಿದರೆ, ನೀವೆಲ್ಲರೂ ಬಹಳಷ್ಟನ್ನು ಅದಕ್ಕೆ ಸೇರಿಸುತ್ತೀರೆಂಬ ವಿಶ್ವಾಸ ನನಗಿದೆ.
ಕಡೆಯ ಮಾತು ಓದುವುದು ನಿಮಗೆ ಕಷ್ಟವಾಗಬಹುದು. ಆದರೆ, ಅದರಿಂದ ಒಳ್ಳೆಯದಾಗುತ್ತದೆ. ನರೇಂದ್ರ ಮೋದಿ, ಅಮಿತ್ಷಾ ಮತ್ತು ಅವರ ಪರಿವಾರಕ್ಕೆ ಅಭಿನಂದನೆಗಳನ್ನು ಹೇಳುವುದರ ಮೂಲಕ ನಮ್ಮ ಕೆಲಸವನ್ನು ಆರಂಭಿಸೋಣ. ಹೊಸ ಭಾರತ ನಿರ್ಮಾಣದಲ್ಲಿ ಗೆಲ್ಲುವ ಸವಾಲು ಸ್ವೀಕರಿಸಿ ಕಣಕ್ಕಿಳಿಯೋಣ.
To all ‘Minority friends’, We are all together in this fight. Even now we are majority. Let’s join hands. We belong to this nation and this nation belongs to us. And we shall build a new India.
–ವಾಸು ಹೆಚ್.ವಿ
ಕರ್ನಾಟಕ ಜನಶಕ್ತಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ. ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡ 90.91 ರಷ್ಟು ಫಲಿತಾಂಶ ಪಡೆದು ಮೇಲುಗೈ ಸಾಧಿಸಿದ್ದಾರೆ.
ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 20,810 ವಿದ್ಯಾರ್ಥಿಗಳ ಪೈಕಿ 16,046 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇಕಡ 77.11 ರಷ್ಟು ಹಾಗೂ ಹೊಸದಾಗಿ ಪರೀಕ್ಷೆ ಬರೆದ (Freshers) 18,949 ವಿದ್ಯಾರ್ಥಿಗಳಲ್ಲಿ 15,540 ಮಂದಿ ಉತ್ತೀರ್ಣರಾಗಿದ್ದಾರೆ ಶೇಕಡ 82.01 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ವಿಭಾಗವಾರು ಫಲಿತಾಂಶದ ವಿಶ್ಲೇಷಣೆ
ವಿಜ್ಞಾನ ವಿಭಾಗ (Science): ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಧನೆ ಈ ವಿಭಾಗದಲ್ಲಿ ದಾಖಲಾಗಿದೆ. ಒಟ್ಟು 12,536 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,936 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 87.24). ಹೊಸ ವಿದ್ಯಾರ್ಥಿಗಳ ಪೈಕಿ 11,770 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,736 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 90.91 ರಷ್ಟು ಅದ್ಭುತ ಫಲಿತಾಂಶ ಬಂದಿದೆ.
ವಾಣಿಜ್ಯ ವಿಭಾಗ (Commerce)
ಈ ವಿಭಾಗದಲ್ಲಿ ಹಾಜರಾದ 4,295 ವಿದ್ಯಾರ್ಥಿಗಳಲ್ಲಿ 3,075 ಮಂದಿ ಉತ್ತೀರ್ಣರಾಗಿದ್ದಾರೆ (ಶೇ. 71.59). ಹೊಸ ವಿದ್ಯಾರ್ಥಿಗಳ ಪೈಕಿ 3858 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2960 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 76.72 ರಷ್ಟು ಫಲಿತಾಂಶ ಬಂದಿದೆ.
ಕಲಾ ವಿಭಾಗ (Arts): ಕಲಾ ವಿಭಾಗದಲ್ಲಿ ಒಟ್ಟು 3,979 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 2,035 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 51.14). ಹೊಸ ವಿದ್ಯಾರ್ಥಿಗಳ ಪೈಕಿ 3321 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1880 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 56.61 ರಷ್ಟು ಫಲಿತಾಂಶ ಬಂದಿದೆ.
ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ವಿಜ್ಞಾನ ವಿಭಾಗವು ಪ್ರಥಮ ಸ್ಥಾನದಲ್ಲಿದ್ದರೆ, ವಾಣಿಜ್ಯ ಮತ್ತು ಕಲಾ ವಿಭಾಗಗಳು ನಂತರದ ಸ್ಥಾನ ಪಡೆದಿವೆ ಎಂದು ಉಪ ನಿರ್ದೇಶಕ ಪಳಿನಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ
ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ.
ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು ಉತ್ಸಾಹದಿಂದ ಸರದಿಯಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕ್ರಮಗಳು ಹಾಗೂ ಪೊಲೀಸ್ ಬಂದೋಬಸ್ತ್ನಿಂದಾಗಿ ಯಾವುದೇ ಅಹಿತಕರ ಘಟನೆಗಳಿಲ್ಲದೆ ಮತದಾನ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು.
ಯುವಕರು ಹಾಗೂ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮತದಾನ ಮಾಡಿದ್ದು ಕಂಡುಬಂದಿತು. ಚುನಾವಣಾ ಸಿಬ್ಬಂದಿ ಹಾಗೂ ಭದ್ರತಾ ಪಡೆಯ ಸಹಕಾರದೊಂದಿಗೆ ಮತದಾನ ಪ್ರಕ್ರಿಯೆಯು ಸುಗಮವಾಗಿ ಜರುಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
ಸುದ್ದಿದಿನಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದ ಮತಗಟ್ಟೆಯಲ್ಲಿ ತೃತೀಯ ಲಿಂಗತ್ವ ಮತದಾರರು ಮತಗಟ್ಟೆಗೆ ಆಗಮಿಸಿ ಸಂತೋಷದಿಂದ ಮತ ಚಲಾಯಿಸಿದರು.
ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಎಂಬ ಸಂದೇಶವನ್ನು ಸಾರಿದ ಕ್ಷಣ! ತಮ್ಮ ಅಮೂಲ್ಯ ಮತದಾನದ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಿದ ತೃತೀಯ ಲಿಂಗತ್ವ ಮತದಾರರಿಗೆ ಅಭಿನಂದನೆಗಳು ಎಂದು ಜಿಲ್ಲಾ ಪಂಚಾಯತ್ ಸಿಇಓ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ7 days agoಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
-
ಅಂತರಂಗ4 days agoಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
-
ದಿನದ ಸುದ್ದಿ7 days agoಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ
-
ದಿನದ ಸುದ್ದಿ2 days agoಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
-
ದಿನದ ಸುದ್ದಿ3 days agoಸುಸೂತ್ರ ಮತದಾನಕ್ಕೆ ಜಿಲ್ಲಾಡಳಿತದ ಸಕಲ ಸಿದ್ಧತೆ
-
ದಿನದ ಸುದ್ದಿ3 days agoಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ3 days agoಪರಿಶಿಷ್ಟ ಪಂಗಡದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ
-
ದಿನದ ಸುದ್ದಿ20 hours agoದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ

