Connect with us

ರಾಜಕೀಯ

ಬಲಪಂಥದತ್ತ ಜಾಗತಿಕ ಪಲ್ಲಟದ ಈ ಸಮಯ

Published

on

  • ಜಾಗತಿಕ ಅರ್ಥವ್ಯವಸ್ಥೆಯು ಬಿಕ್ಕಟ್ಟಿಗೆ ಒಳಗಾಗಿರುವ ಪರಿಸ್ಥಿತಿಯಲ್ಲಿ ಮತ್ತು ಅದರ ಪರಿಣಾಮವಾಗಿ ನಿರುದ್ಯೋಗವು ಉಲ್ಬಣಗೊಂಡ ಪರಿಸ್ಥಿತಿಯಲ್ಲಿ ಜಗತ್ತಿನಾದ್ಯಂತ ಬಲ ಪಂಥದತ್ತ ಪಲ್ಲಟ ಕಾಣುತ್ತಿದೆ. ಬಲಪಂಥದ ಬೆಳವಣಿಗೆಗೆ ಅದು ಆರ್ಥಿಕ ಬಿಕ್ಕಟ್ಟು ಮತ್ತು ನಿರುದ್ಯೋಗವನ್ನು ಗಮನಕ್ಕೆ ತಗೊಂಡಿರುವುದು ಮತ್ತು ಅಧಿಕಾರಸ್ಥರ ಪರವಾದ ರಾಜಕೀಯ ಪಕ್ಷಗಳು ಗಮನಕ್ಕೆ ತಗೊಂಡಿರದಿರುವುದೇ ಕಾರಣ ಎನ್ನಬಹುದು. ಭಾರತದಲ್ಲಿಯೂ ಸಹ ಅಭಿವೃದ್ಧಿ ಅಜೆಂಡಾದ ಮೂಲಕವೇ 2014ರಲ್ಲಿ ಮೋದಿ ಅಧಿಕಾರ ಹಿಡಿದದ್ದು. ನವ ಉದಾರವಾದವನ್ನು ಪ್ರತಿನಿಧಿಸುವ ಕಾಂಗ್ರೆಸ್‌ನಂತಹ ಒಂದು ಪಕ್ಷದಿಂದ ಬಿಜೆಪಿಯಂತಹ ಒಂದು ಬಲ ಪಂಥೀಯ ಪಕ್ಷದತ್ತ ಪಲ್ಲಟವು ಸಾಧ್ಯವಾಗಿರುವುದು ನವ-ಉದಾರವಾದದ ಬಿಕ್ಕಟ್ಟಿನಿಂದಾಗಿಯೇ ಎಂಬ ಸಂಗತಿಯಂತೂ ಸ್ಪಷ್ಟ.

ಮೋದಿಯವರ ಪುನರಾಯ್ಕೆಯು, ಜಗತ್ತು ಬಲ ಪಂಥಾಭಿಮುಖವಾಗಿ ಸರಿಯುತ್ತಿರುವ ವಿದ್ಯಮಾನದ ಒಂದು ಭಾಗವಾಗಿದೆ ಎಂಬ ಆಯಾಮವನ್ನು ನಾವು ಗಮನಿಸುವುದೇ ಇಲ್ಲ. ಹಾಗಾಗಿ, ಮೋದಿಯವರ ಪುನರಾಯ್ಕೆಯ ಬಗ್ಗೆ ನಾವು ಚರ್ಚಿಸುವಾಗ, ಇಡೀ ಜಗತ್ತೇ ಬಲಕ್ಕೆ ವಾಲುತ್ತಿದೆ ಎಂಬ ಅಂಶದ ಪ್ರಸ್ತಾಪ ನಮ್ಮ ಚರ್ಚೆಯಲ್ಲಿ ಬಹುತೇಕ ಇರುವುದಿಲ್ಲ. ಇಸ್ರೇಲ್‌ನಲ್ಲಿ ನೆತನ್ಯಾಹು ಪುನರಾಯ್ಕೆಗೊಂಡಿದ್ದಾರೆ. ಟರ್ಕಿಯಲ್ಲಿ ಎರ್ಡೊಗಾನ್ ಪ್ರಚಂಡ ಬಹುಮತದಿಂದ ಪುನರಾಯ್ಕೆಯಾಗಿದ್ದಾರೆ. ಚುನಾವಣೆಗೆ ಮುನ್ನ ಈ ಪಕ್ಷವು ಪುನರಾಯ್ಕೆ ಆಗುವುದೇ ಇಲ್ಲ ಎನ್ನುವ ಭವಿಷ್ಯ ನುಡಿಯನ್ನು ಸುಳ್ಳಾಗಿಸಿ, ಆಸ್ಟ್ರೇಲಿಯಾದಲ್ಲಿ ಕನ್ಸರ್ವೇಟಿವ್ ಪಕ್ಷವು ಅಧಿಕಾರಕ್ಕೆ ಮರಳಿದೆ.

ಎಡ ಪಂಥವು ಹಲವು ಹತ್ತು ದೇಶಗಳಲ್ಲಿ ಮರು ಹುಟ್ಟು ಪಡೆಯುವಂತಹ ಸ್ಪೂರ್ತಿ ತುಂಬುವ ಭರವಸೆ ಇತರರಲ್ಲಿ ಮೂಡಲು ಕಾರಣವಾಗಿದ್ದ ಎಡ ಪಕ್ಷಗಳು ಇತ್ತೀಚಿನವರೆಗೆ ಅಧಿಕಾರದಲ್ಲಿದ್ದ ಲ್ಯಾಟಿನ್ ಅಮೇರಿಕಾದಲ್ಲಿ, ಒಂದರ ನಂತರ ಮತ್ತೊಂದು ದೇಶದಲ್ಲಿ ಬಲ ಪಂಥೀಯ ಸರ್ಕಾರಗಳು ಅಧಿಕಾರಕ್ಕೆ ಬಂದಿವೆ. ಇಂತಹ ಬದಲಾವಣೆಗಳ ಪೈಕಿ, ಅತ್ಯಂತ ಮಹತ್ವದ್ದು ಮತ್ತು ಅದೇ ಸಮಯದಲ್ಲಿ ಕುಖ್ಯಾತ ಎನ್ನಬಹುದಾದ ಬದಲಾವಣೆ ಬ್ರೆಜಿಲ್‌ನಲ್ಲಿ ಆಗಿದೆ.

ಅಲ್ಲಿ ಹೊಸ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಜೇರ್ ಬೊಲ್ಸೊಮಾರೊ ಕೆಲ ವರ್ಷಗಳ ಹಿಂದೆ ಬ್ರೆಜಿಲ್‌ನಲ್ಲಿ ಅಧಿಕಾರದಲ್ಲಿದ್ದ ಮಿಲಿಟರಿ ಆಡಳಿತವನ್ನು ಹಾಡಿ ಹೊಗಳಿರುವುದೇ ಅಲ್ಲದೆ, ಮಿಲಿಟರಿಯು ಇನ್ನೂ ಹೆಚ್ಚು ಮಂದಿಯನ್ನು ಕೊಂದು ಹಾಕಿದ್ದರೆ ಒಳ್ಳೆಯದಿತ್ತು ಎಂದು ಹೇಳಿರುವುದು ದಾಖಲಾಗಿದೆ. ಈ ಎಲ್ಲವಕ್ಕೂ ಕಳಶವಿಟ್ಟಂತೆ, ಕಳೆದ ಭಾನುವಾರ ಯೂರೋಪಿಯನ್ ಒಕ್ಕೂಟದ 28ಸದಸ್ಯ ದೇಶಗಳಲ್ಲಿ ಯೂರೊ ಪಾರ್ಲಿಮೆಂಟಿಗೆ ನಡೆದ ಚುನಾವಣೆಗಳ ಫಲಿತಾಂಶವು ಯೂರೋಪಿನಲ್ಲಿ ಗಮನಾರ್ಹ ಸಂಖ್ಯೆಯ ಜನತೆಯ ಒಲವು ಬಲ ಪಂಥದತ್ತ ಸರಿಯುತ್ತಿರುವ ಅಂಶವನ್ನು ಸಾರುತ್ತದೆ.

ಫ್ರಾನ್ಸ್‌ನಲ್ಲಿ ಮುಂಬರುವ ಮಹಾ ಚುನಾವಣೆಯಲ್ಲಿ ಮರೀನ್ ಲೇ ಪೆನ್ ಅವರ ಉಗ್ರ ಬಲಪಂಥೀಯ ಪಕ್ಷವು, ಹಾಲಿ ಅಧ್ಯಕ್ಷ ಎಮ್ಯಾನ್ಯುಅಲ್ ಮೆಕ್ರಾನ್ ಅವರ ನಡು ಪಂಥೀಯ ಪಕ್ಷಗಳ ಮೈತ್ರಿಕೂಟವನ್ನು ಹಿಂದಿಕ್ಕಿ, ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಬಹುದೆಂದು ಈಗ ತೋರುತ್ತದೆ. ಇಟಲಿಯ ಉಪ ಪ್ರಧಾನ ಮಂತ್ರಿ ಮಾತ್ತಿಯೊ ಸಲ್ವಿನಿ ಅವರ ಉಗ್ರ ಬಲಪಂಥೀಯ ಪಕ್ಷವು ಇಟಲಿಯಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮುವುದಷ್ಟೇ ಅಲ್ಲದೆ, ಯೂರೊ ಪಾರ್ಲಿಮೆಂಟಿನಲ್ಲಿ ಜರ್ಮನಿಯ ಛಾನ್ಸೆಲರ್ ಅಂಜೆಲಾ ಮರ್ಕೆಲ್ ಅವರ ಪಕ್ಷವನ್ನು ಹಿಂದಿಕ್ಕಿ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆ. ಮರ್ಕೆಲ್ ಅವರ ಪಕ್ಷವು ಐದು ವರ್ಷಗಳ ಹಿಂದಿನ ಚುನಾವಣೆಯಲ್ಲಿ ಗಳಿಸಿದ್ದಕ್ಕಿಂತ 9% ಕಡಿಮೆ ಮತಗಳಿಸಿದೆ. ಅಷ್ಟೇ ಅಲ್ಲ, ಜರ್ಮನಿಯ ಆಲ್ಟರ್‌ನೆಟೀವ್ ಫಾರ್ ಜರ್ಮನಿ ಎಂಬ ಉಗ್ರ ಬಲಪಂಥೀಯ ಪಕ್ಷವು 10.೫% ಮತ ಹೆಚ್ಚಿಸಿಕೊಂಡಿದೆ. ಹಂಗೆರಿಯಲ್ಲಿ, ಅಧ್ಯಕ್ಷ ವಿಕ್ಟರ್ ಒರ್ಬಾನ್ ಅವರ ಬಲಪಂಥೀಯ ಪಕ್ಷವು ಮತ್ತೊಮ್ಮೆ ಪುನರಾಯ್ಕೆಗೊಳ್ಳುವ ಹಾದಿಯಲ್ಲಿದೆ.

ಮೋದಿಯವರ ಗೆಲುವು ದೇಶದಲ್ಲಿ ಜರುಗಿದ ಅನೇಕ ಬೆಳವಣಿಗೆಗಳಿಗೆ ಸಲ್ಲುತ್ತದೆ ಎಂಬುದು ಸ್ಪಷ್ಟವಿದ್ದರೂ ಸಹ, ಇಡೀ ವಿಶ್ವವೇ ಬಲ ಪಂಥಾಭಿಮುಖವಾಗಿ ದಾಪುಗಾಲು ಹಾಕುತ್ತಿರುವ ಈ ಸನ್ನಿವೇಶವನ್ನು ಮರೆಯಬಾರದು. ಬಲ ಪಂಥದ ಕಡೆಗೆ ಕೊಂಡೊಯ್ಯುವ ಉದ್ದೇಶಪೂರ್ವಕ ಪ್ರಯತ್ನಗಳು ಚಾಲನೆಯಲ್ಲಿರುವ ಈ ಸಂದರ್ಭದಲ್ಲಿ, ಇದು ಹೀಗೆಯೇ ಆಗುತ್ತಿರುವುದು ಏಕೆ? ಎಂಬ ಪ್ರಶ್ನೆಯನ್ನು ನಾವು ಕೇಳಬೇಕಾಗುತ್ತದೆ. ಉದಾರ ಮನೋಭಾವದ ಬೂರ್ಜ್ವಾ ವಿಶ್ಲೇಷಕರು, ಈ ಎಲ್ಲ ದೇಶಗಳ ಪಕ್ಷಗಳು ಮತ್ತು ಚಳವಳಿಗಳ ನಡುವೆ ಗೋಚರಿಸುವ ಒಂದು ಸಮಾನ ಅಂಶವನ್ನು ಕಾಣುವುದರ ಬದಲಾಗಿ, ಈ ವಾಸ್ತವದ ಚಿತ್ರವನ್ನು ತುಂಡರಿಸಿ ವಿಶ್ಲೇಷಿಸುವ ಪ್ರವೃತ್ತಿ ಬೆಳಸಿಕೊಂಡಿದ್ದಾರೆ: ಅವರು ಯೂರೋಪ್ ದೇಶದ ರಾಜಕೀಯ ಪಕ್ಷಗಳನ್ನು ಯೂರೋಪಿಯನ್ ಒಕ್ಕೂಟ ಪರ ಮತ್ತು ಯೂರೋಪಿಯನ್ ಒಕ್ಕೂಟ ವಿರೋಧಿ, ಅಥವಾ, ವಲಸೆ-ಪರ ಅಥವಾ ವಲಸೆ-ವಿರೋಧಿ ಎಂದೇ ವಿಭಜಿಸುತ್ತಾರೆ.

ಅದೇ ರೀತಿಯಲ್ಲಿ, ಬೂರ್ಜ್ವಾ ವಿಶ್ಲೇಷಕರು ಮೋದಿಯವರ ಗೆಲುವನ್ನು ಹಿಂದುತ್ವದೊಂದಿಗೆ ತಳುಕು ಹಾಕಿಕೊಂಡಿರುವ ಒಂದು ವಿದ್ಯಮಾನವಾಗಿ ನೋಡುತ್ತಾರೆಯೇ ಹೊರತು, ಯೂರೋಪಿನಲ್ಲಿ ಆಗುತ್ತಿರುವ ವಿದ್ಯಮಾನಕ್ಕೂ ಮತ್ತು ಭಾರತದ ಈ ವಿದ್ಯಮಾನಕ್ಕೂ ಒಂದಕ್ಕೊಂದು ಸಂಬಂಧವೇ ಇಲ್ಲ ಎಂಬಂತೆಯೇ ನೋಡುತ್ತಾರೆ. ಡೊನಾಲ್ಡ್ ಟ್ರಂಪ್ ಅವರ ಬಲಗೊಳ್ಳುತ್ತಿರುವ ಪುನರಾಯ್ಕೆಯನ್ನೂ ಸಹ ಈ ಬೆಳವಣಿಗೆಗಳಿಂದ ಪ್ರತ್ಯೇಕಿಸಿಯೇ ಕಾಣುತ್ತಾರೆ. ಆದರೆ, ಈ ರೀತಿ ಪ್ರತ್ಯೇಕಿಸಿ ನೋಡುವುದು ಮಾರ್ಕ್ಸ್‌ವಾದಿ ವಿಶ್ಲೇಷಣೆಗೆ ಸಲ್ಲುವಂತದ್ದಲ್ಲ. ಮಾರ್ಕ್ಸ್‌ವಾದಿ ವಿಶ್ಲೇಷಣೆ ಘಟನೆಗಳನ್ನು ಸಮಗ್ರವಾಗಿ ನೋಡುತ್ತದೆ, ಅನಾವರಣಗೊಳ್ಳುತ್ತಿರುವ ಘಟನಾವಳಿಗಳ ನಡುವೆ ಇರುವ ಸಮಾನ ರೂಪ, ಕ್ರಮ ಅಥವಾ ಏರ್ಪಾಡು ಮತ್ತು ಅದರ ವರ್ಗ ವಿನ್ಯಾಸವನ್ನು ಗುರುತಿಸುತ್ತದೆ. ಅಂತಾದರೆ, ಜಗತ್ತಿನಾದ್ಯಂತ ಬಲ ಪಂಥದತ್ತ ಸರಿಯುತ್ತಿರುವುದರ ಬಗ್ಗೆ ಮಾರ್ಕ್ಸ್‌ವಾದಿಗಳು ಏನು ಹೇಳಬಹುದು?

ಇದು ಸ್ಪಷ್ಟವಾಗಿ 2008ರಲ್ಲಿ ಆರಂಭವಾಗಿ ಇನ್ನೂ ಜಾಗತಿಕ ಅರ್ಥವ್ಯವಸ್ಥೆಯನ್ನು ಬಿಗಿದುಕೊಂಡಿರುವ ಆರ್ಥಿಕ ಬಿಕ್ಕಟ್ಟನ್ನು ವ್ಯಕ್ತಪಡಿಸುತ್ತದೆ. ಈ ಬಿಕ್ಕಟ್ಟಿನಿಂದ ಸ್ವಲ್ಪ ಚೇತರಿಕೆಯ ಲಕ್ಷಣಗಳು ಆಗೊಮ್ಮೆ ಈಗೊಮ್ಮೆ ಪ್ರಕಟಗೊಂಡಿವೆ. ಆದರೆ, ಚೇತರಿಕೆಯ ಲಕ್ಷಣಗಳು ಕಾಣಿಸಿಕೊಂಡ ಸ್ವಲ್ಪವೇ ಸಮಯದಲ್ಲಿ ಜಾಗತಿಕ ಅರ್ಥವ್ಯವಸ್ಥೆಯು ಮತ್ತೊಮ್ಮೆ ಬಿಕ್ಕಟ್ಟಿನಲ್ಲಿ ಮುಳುಗುತ್ತಿತ್ತು. ಒಂದು ಪುಟಿಯುವ ರಬ್ಬರ್ ಚೆಂಡಿನ ಉಪಮಾನವು ಜಾಗತಿಕ ಅರ್ಥವ್ಯವಸ್ಥೆಯ ಈ ಪರಿಸ್ಥಿತಿಗೆ ಸೊಗಸಾಗಿ ಹೋಲುತ್ತದೆ: ಚೆಂಡು ನೆಲದಿಂದ ಪುಟಿದ ಕೂಡಲೇ ಚೇತರಿಕೆಯ ಉತ್ಸಾಹ ಏರುತ್ತಿತ್ತು; ಪುಟಿದ ಚೆಂಡು ಮತ್ತೆ ನೆಲಕ್ಕೆ ಬಿದ್ದ ಕೂಡಲೇ ಆ ಉತ್ಸಾಹ ಇಳಿಯುತ್ತಿತ್ತು.

ಇಂತಹ ವಾದದ ಬಗ್ಗೆ ತಕರಾರು ಎತ್ತಬಹುದು. ಈ ತಕರಾರಿನ ಸಮರ್ಥನೆಯಾಗಿ ಅಮೇರಿಕಾದಲ್ಲಿ ನಿರುದ್ಯೋಗದ ದರವು ಹಿಂದಿನ ದಶಕಗಳಿಗಿಂತಲೂ ಕೆಳ ಮಟ್ಟಕ್ಕೆ ಈಗ ಇಳಿದಿದೆ ಎಂದು ಹೇಳಬಹುದು. ಆದರೆ, ಉದ್ಯೋಗದಲ್ಲಿ ಭಾಗವಹಿಸುವಿಕೆಯ ದರವು 2008ರಲ್ಲಿ ಇದ್ದದ್ದಕ್ಕಿಂತಲೂ ಕೆಳಗಿದೆ. ಉದ್ಯೋಗ ಭಾಗವಹಿಸುವಿಕೆಯ ದರವು ಈಗಲೂ 2008ರಲ್ಲಿ ಇದ್ದಷ್ಟೇ ಇದೆ ಎಂದು ಊಹಿಸಿಕೊಂಡರೆ, ಅಮೇರಿಕಾದ ಇಂದಿನ ನಿರುದ್ಯೋಗದ ದರ 8% ಆಗುತ್ತದೆ, ಅಧಿಕೃತ ಅಂಕಿಗಳು ಹೇಳುವ ಹಾಗೆ 4% ಅಲ್ಲ.

ಜಾಗತಿಕ ಅರ್ಥವ್ಯವಸ್ಥೆಯು ಬಿಕ್ಕಟ್ಟಿಗೆ ಒಳಗಾಗಿರುವ ಪರಿಸ್ಥಿತಿಯಲ್ಲಿ ಮತ್ತು ಅದರ ಪರಿಣಾಮವಾಗಿ ನಿರುದ್ಯೋಗವು ಉಲ್ಬಣಗೊಂಡ ಪರಿಸ್ಥಿತಿಯಲ್ಲಿ ಜಗತ್ತಿನಾದ್ಯಂತ ಬಲ ಪಂಥದತ್ತ ಪಲ್ಲಟ ಕಾಣುತ್ತಿದೆ. ಅರ್ಥವ್ಯವಸ್ಥೆಯ ಬಿಕ್ಕಟ್ಟು ಮತ್ತು ನಿರುದ್ಯೋಗದ ಪ್ರಶ್ನೆ ಬಂದಾಗ, ಉದಾರವಾದೀ ಬೂರ್ಜ್ವಾ ಪಕ್ಷಗಳು ಸಾಮಾನ್ಯವಾಗಿ ನಿರಾಕರಣೆಯ ಧೋರಣೆ ತಳೆಯುತ್ತವೆ. ನಿರುದ್ಯೋಗ ಉಂಟಾಗುವುದಕ್ಕೆ ವ್ಯವಸ್ಥೆ ಕಾರಣವಲ್ಲ; ವಲಸಿಗರೇ ಕಾರಣ; ಆದುದರಿಂದ ವಲಸೆಯನ್ನು ತಡೆಯಬೇಕು ಎಂದು ಪ್ರತಿಪಾದಿಸುವ ಬಲ ಪಂಥವು, ಕೊನೆಯ ಪಕ್ಷ, ನಿರುದ್ಯೋಗವು ಉಂಟುಮಾಡುವ ಯಾತನೆಯನ್ನು ಗುರುತಿಸುತ್ತದೆ.

ಯೂರೋಪಿಯನ್ ಒಕ್ಕೂಟ ವ್ಯವಸ್ಥೆಯಲ್ಲಿ, ಅದರ ದುಡಿಮೆಗಾರರು ಒಕ್ಕೂಟದ 28 ಸದಸ್ಯ ದೇಶಗಳಲ್ಲಿ ಯಾವುದೇ ದೇಶಕ್ಕೆ ವಲಸೆ ಹೋಗುವ ಅವಕಾಶವು ಮುಕ್ತವಾಗಿರುವುದರಿಂದ, ಕೆಲವು ಬಲ ಪಂಥೀಯ ಪಕ್ಷಗಳು ಯೂರೋಪಿಯನ್ ಒಕ್ಕೂಟದ ವಿರೋಧಿಗಳೂ ಆಗಿದ್ದಾರೆ. ಆಡಳಿತದಲ್ಲಿರುವ ಮತ್ತು ಅವರಿಗೆ ವಿರೋಧವಿರುವ ಉದಾರವಾದೀ ಬೂರ್ಜ್ವಾ ಪಕ್ಷಗಳು ಬಿಕ್ಕಟ್ಟು ಇದೆಯೆನ್ನುವುದನ್ನೇ ಒಪ್ಪಿಕೊಳ್ಳದ ಪರಿಸ್ಥಿತಿಯಲ್ಲಿ ಮತ್ತು ಎಡ ಪಂಥವು ಈ ಬಿಕ್ಕಟ್ಟಿನಿಂದ ಹೊರಬರುವ ಒಂದು ಪರ್ಯಾಯ ಅಜೆಂಡಾವನ್ನು ಜನತೆಯ ಮುಂದಿಡುವಲ್ಲಿ ನಿಧಾನವಾಗಿರುವ ಪರಿಸ್ಥಿತಿಯಲ್ಲಿ, ಇಂತಹ ಪರಿಸ್ಥಿತಿ ನಿರ್ಮಾಣವಾಗುವುದನ್ನೇ ಕಾಯುತ್ತಿದ್ದ ಬಲ ಪಂಥವು ಕಿಂದರಿಜೋಗಿಯಂತೆ ರಂಗ ಪ್ರವೇಶಿಸಿ ನಿರುದ್ಯೋಗ ಪರಿಹರಿಸುವ ಕಿಂದರಿ ಬಾರಿಸಿತು. ಒಂದು ವಲಸೆ-ವಿರೋಧಿ ಅಜೆಂಡಾವನ್ನು ಜನತೆಯ ಮುಂದಿಡುವ ಮೂಲಕ ಬಲ ಪಂಥವು ತನ್ನ ಚಟುವಟಿಕೆಗಳಿಗೆ ಚಾಲನೆ ಕೊಟ್ಟಿದೆ. ಹೀಗೆ ಜಗತ್ತಿನ ಉದ್ದಗಲದಲ್ಲೂ ಅದರ ಬೆಳವಣಿಗೆಗೆ ಅದು ಬಿಕ್ಕಟ್ಟು ಮತ್ತು ನಿರುದ್ಯೋಗವನ್ನು ಗಮನಕ್ಕೆ ತಗೊಂಡಿರುವುದು ಮತ್ತು ಅಧಿಕಾರಸ್ಥರ ಪರವಾದ ರಾಜಕೀಯ ಪಕ್ಷಗಳು ಗಮನಕ್ಕೆ ತಗೊಂಡಿರದಿರುವುದೇ ಕಾರಣ ಎನ್ನಬಹುದು.

ಹಾಗಾದರೆ, ಭಾರತದಲ್ಲಿನ ಕತೆ ಈ ವಿವರಣೆಯ ಚೌಕಟ್ಟಿಗೆ ಹೊಂದಿಕೊಳ್ಳುತ್ತದೆಯೇ? ಭಾರತದಲ್ಲಿಯೂ ಸಹ ಅಭಿವೃದ್ಧಿ ಅಜೆಂಡಾದ ಮೂಲಕವೇ 2014ರಲ್ಲಿ ಮೋದಿ ಅಧಿಕಾರ ಹಿಡಿದದ್ದು. ಅದಕ್ಕೂ ಮುನ್ನವೇ ಯುಪಿಎ-2 (2009-14) ಅವಧಿಯಲ್ಲಿ ಆರ್ಥಿಕ ಬೆಳವಣಿಗೆ ದರ ಇಳಿಮುಖವಾಗಿತ್ತು. ಹಾಗಾಗಿ, ಪ್ರತಿಯೊಬ್ಬರ ಅದೃಷ್ಟ ಖುಲಾಯಿಸುವ ನವ ಉದಾರವಾದದ ಭರವಸೆ ಮಬ್ಬಾಗಲಾರಂಭಿಸಿತ್ತು. ಜನತೆಗೆ ಕೊಟ್ಟಿದ್ದ ಅಭಿವೃದ್ಧಿ ಅಥವಾ ವಿಕಾಸ ಭರವಸೆಯನ್ನು ಈಡೇರಿಸಲು ಮೋದಿ ಸರ್ಕಾರವು ಅಧಿಕಾರದ ಅವಧಿಯಲ್ಲಿ(2014-19) ಅಕ್ಷರಷಃ ಏನನ್ನೂ ಮಾಡಲಿಲ್ಲ.

ಆ ಕಾರಣದಿಂದಾಗಿಯೇ ಈಗ ತಾನೇ ಮುಗಿದ ಚುನಾವಣೆಯಲ್ಲಿ ಅಭಿವೃದ್ಧಿ ಅಥವಾ ವಿಕಾಸದ ಬಗ್ಗೆ ಮೋದಿಯವರು ಒಂದೇ ಒಂದು ಶಬ್ದವನ್ನೂ ಉಚ್ಛರಿಸಲಿಲ್ಲ. ಆದರೆ, ಭಯೋತ್ಪಾದನೆ ವಿರುದ್ಧ ಹೋರಾಡುವೆ, ರಾಷ್ಟ್ರವನ್ನು ರಕ್ಷಿಸುವೆ, ಪಾಕೀಸ್ತಾನಕ್ಕೆ ಪಾಠ ಕಲಿಸುವೆ ಮತ್ತು ಹಿಂದುತ್ವ ಪ್ರತಿಷ್ಠಾಪನೆಯಂತಹ ಮಾತುಗಳ ಮೂಲಕ ಇಡೀ ಚರ್ಚೆಯ ದಿಕ್ಕನ್ನೇ ಮೋದಿ ಬದಲಿಸಿದರು. ಈ ತಂತ್ರಗಾರಿಕೆಯ ಮಾತುಗಳ ಮೂಲಕ, ಅಧಿಕಾರದ ಅವಧಿಯಲ್ಲಿ ಅಭಿವೃದ್ಧಿ ಸಾಧಿಸಲು ತಮ್ಮ ಸರ್ಕಾರ ಮಾಡಿದ್ದೇನು ಎಂಬುದರ ಕುರಿತು ಎದುರಾಗುವ ಇರುಸು ಮುರುಸಿನ ಪ್ರಶ್ನೆಗಳನ್ನು ನಿರಾಯಾಸವಾಗಿ ತಪ್ಪಿಸಿಕೊಂಡರು. ಅದರಿಂದ ಅವರಿಗೆ ಭರ್ಜರಿ ಅನುಕೂಲವೇ ಆಯ್ತು.

ನವ ಉದಾರವಾದವನ್ನು ಪ್ರತಿನಿಧಿಸುವ ಕಾಂಗ್ರೆಸ್‌ನಂತಹ ಒಂದು ಪಕ್ಷದಿಂದ ಬಿಜೆಪಿಯಂತಹ ಒಂದು ಬಲ ಪಂಥೀಯ ಪಕ್ಷದತ್ತ ಪಲ್ಲಟವು ಸಾಧ್ಯವಾಗಿರುವುದು ನವ ಉದಾರವಾದದ ಬಿಕ್ಕಟ್ಟಿನಿಂದಾಗಿಯೇ ಎಂಬ ಸಂಗತಿಯಂತೂ ಉಳಿದೇ ಉಳಿಯುತ್ತದೆ. ನವ ಉದಾರವಾದವು ಅಭಿವೃದ್ಧಿ ತರುತ್ತದೆ ಎಂಬುದಾಗಿ ಸೋಗುಹಾಕುವುದು ಕಾಗ್ರೆಸ್ ಪಕ್ಷಕ್ಕೆ ಇನ್ನೆಷ್ಟೂ ಸಾಧ್ಯವಿರಲಿಲ್ಲ. ಬಿಜೆಪಿಯಂತೂ ಅಭಿವೃದ್ಧಿಯ ಬಗ್ಗೆ ಮಾತಾಡಲೇ ಇಲ್ಲ. ಆದರೆ, ಕಥನ-ಪ್ರವಚನದ ದಿಕ್ಕನ್ನೇ ಬದಲಿಸಿತು. ಅದು ಕಾರ್ಪೊರೇಟ್-ಹಣಕಾಸು ಕುಳಗಳಿಗೆ ಹಿಡಿಸಿತು ಕೂಡ (ಅದೆಷ್ಟು ಅಂದರೆ, ಬಿಜೆಪಿ ಗೆಲ್ಲುತ್ತದೆಂದು ಎಕ್ಸಿಟ್ ಪೋಲ್‌ಗಳು ಭವಿಷ್ಯ ನುಡಿದ ಕೂಡಲೇ ಷೇರು ಪೇಟೆ ಸೂಚ್ಯಂಕ ಸರ್ರನೆ ಏರಿತು).

ಬದಲಾದ ಇಂತಹ ಸಂವಾದ-ಕಥನಗಳ ಪ್ರಭಾವ ತಾತ್ಕಾಲಿಕ. ನವ ಉದಾರವಾದವು ಸಿಕ್ಕಿಹಾಕಿಕೊಂಡಿರುವ ಬಿಕ್ಕಟ್ಟಿನಿಂದ ಹೊರಬರುವುದು ಹೇಗೆ ಎಂಬುದರ ಬಗ್ಗೆ ಯಾವ ಸುಳಿವೂ ಕಾಂಗ್ರೆಸ್‌ಗೂ ಇಲ್ಲ, ಬಿಜೆಪಿಗೂ ಇಲ್ಲ. ಆದ್ದರಿಂದ, ಕೋಟ್ಯಂತರ ನಿರುದ್ಯೋಗಿಗಳಿಗೆ ಅವರು ಉದ್ಯೋಗ ಒದಗಿಸಲಾರರು. ಹಾಗೆ ಹೇಳುವುದಾದರೆ, ಕಾಂಗ್ರೆಸ್ ಪಕ್ಷದ ಕೆಲವರಿಗೆ ನವ ಉದಾರವಾದದ ಹಾದಿಯಲ್ಲಿ ಮುಂದೆ ಹೋಗುವುದು ಅದೆಷ್ಟು ಕಷ್ಟ ಎಂಬುದರ ಅರಿವಿತ್ತು. ಹಾಗಾಗಿಯೇ, ಕಾಂಗ್ರೆಸ್ ಪಕ್ಷವು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಐದು ಕೋಟಿ ಕಡು ಬಡ ಕುಟುಂಬಗಳಿಗೆ ವಾರ್ಷಿಕ 72,000 ರೂ ಹಣ ವರ್ಗಾಯಿಸುವ ನ್ಯಾಯ ಯೋಜನೆಯ ಘೋಷಣೆ ಕೊಟ್ಟಿತ್ತು. ಮಾಮೂಲು ಪರಿಸ್ಥಿತಿಯಲ್ಲಿ ಸಾಕಷ್ಟು ಉತ್ಸಾಹ ತುಂಬುವ ಸಾಧ್ಯತೆ ಹೊಂದಿದ್ದ ಮತ್ತು ಪಕ್ಷದ ಪಾಲಿಗೆ ಅಧಿಕಾರ ತಂದುಕೊಡುವಂತಹ ಒಂದು ಯೋಜನೆಯೇ ಠುಸ್ ಪಟಾಕಿಯಂತಾಯಿತು. ಏಕೆಂದರೆ, ಅದಕ್ಕೆ ಬೇಕಾಗುವ ಹಣ ಯಾವ ಮೂಲದಿಂದ ಬರುತ್ತದೆ ಎಂಬುದನ್ನು ಕಾಂಗ್ರೆಸ್ ಪಕ್ಷವು ಹೇಳದೇ ಇದ್ದುದರಿಂದ ಅದು ಜನರ ವಿಶ್ವಾಸ ಗಳಿಸಲಿಲ್ಲ. ಇದೊಂದು ಚುನಾವಣಾ ಭರವಸೆ, ಚುನಾವಣೆಯ ಮರು ದಿನವೇ ಅದನ್ನು ಮುರಿಯಲಾಗುತ್ತದೆ ಎಂದೇ ಜನ ಸಹಜವಾಗಿ ಭಾವಿಸಿದರು.

ಅರ್ಥವ್ಯವಸ್ಥೆಯನ್ನು ಮುನ್ನೆಡೆಸುವುದು ಹೇಗೆ ಎಂಬುದರ ಬಗ್ಗೆ ಮಧ್ಯಮಾರ್ಗಿ, ಉದಾರವಾದೀ ಬೂರ್ಜ್ವಾ ಪಕ್ಷವಾದ ಕಾಂಗ್ರೆಸ್‌ಗೆ ಒಂದು ಸ್ಪಷ್ಟ ಕಲ್ಪನೆಯೇ ಇಲ್ಲ. ಆ ಪಕ್ಷಕ್ಕೆ ಸರಿಸಮನಾಗಿ ಬಿಜೆಪಿಗೂ ಅದರ ಬಗ್ಗೆ ಯಾವುದೇ ಸುಳಿವೂ ಇಲ್ಲ. ಬಿಜೆಪಿಯ ಅತಿರೇಕದ ರಾಷ್ಟ್ರವಾದವು ಬಹಳ ಬೇಗನೇ ತೆಳುವಾಗುತ್ತದೆ. ಹಸಿವು ಮತ್ತು ನಿರುದ್ಯೋಗದಿಂದ ನರಳುತ್ತಿರುವ ಜನತೆಯನ್ನು ಗಾಳಕ್ಕೆ ಸಿಕ್ಕಿಸಿದ ಹುಳ ತಿನ್ನುವ ಮೀನುಗಳೆಂದು ಭಾವಿಸಿ, ಅವರಿಗೆ ದಿನನಿತ್ಯವೂ ಪಾಕೀಸ್ತಾನ-ವಿರೋಧೀ ಮತ್ತು ಮುಸ್ಲಿಂ-ವಿರೋಧೀ ಮಾತುಗಳನ್ನೇ ಉಣಬಡಿಸುವ ಆಟ ಬಹಳ ಕಾಲ ನಡೆಯುವುದಿಲ್ಲ. ಅಲ್ಲದೆ, ಆರ್ಥಿಕ ಪರಿಸ್ಥಿತಿ ನಿಂತಲ್ಲೇ ನಿಶ್ಚಲವಾಗಿ ಉಳಿಯುವುದಿಲ್ಲ.

ಮೋದಿ ಸರ್ಕಾರವು ಆರ್ಥಿಕ ವಲಯದತ್ತ ತಲೆ ಹಾಕಿ ಮಲಗದೇ ಇದ್ದರೂ ಸಹ, ಅರ್ಥವ್ಯವಸ್ಥೆಯು ಮೋದಿಯವರನ್ನು ಅವರಷ್ಟಕ್ಕೆ ಅವರು ಇರಲು ಬಿಡುವುದಿಲ್ಲ, ಬೆನ್ನು ಹತ್ತಿದ ಬೇತಾಳನಂತೆ ಕಾಡುತ್ತದೆ. ಕಾಲಕ್ರಮೇಣ, ಆರ್ಥಿಕ ಚಟುವಟಿಕೆಗಳ ಹಿಂಜರಿತ ಮತ್ತು ವಿದೇಶ ವ್ಯಾಪಾರದ ಬಾಕಿ ಚುಕ್ತಾ ಮಾಡುವುದೇ ಒಂದು ಸಮಸ್ಯೆಯಾದಾಗ, ಆರ್ಥಿಕ ಬಿಕ್ಕಟ್ಟು ಉಲ್ಬಣಗೊಳ್ಳುತ್ತದೆ. ಆಗ, ಉತ್ತರ ಕೊಡಲು ಮೋದಿ ಸರ್ಕಾರದ ಬಳಿ ಹೇಳಿಕೊಳ್ಳುವ ಸಮರ್ಥನೆಗಳಿರುವುದಿಲ್ಲ. ಮತ್ತು, ಬಿಕ್ಕಟ್ಟಿನಿಂದ ಅರ್ಥವ್ಯವಸ್ಥೆಯನ್ನು ಪಾರುಮಾಡುವುದು ಆ ವೇಳೆಗಾಗಲೇ ಇನ್ನೂ ಹೆಚ್ಚು ಕಷ್ಟಕರವಾಗುತ್ತದೆ.

ಜನತೆಯ ದಿನನಿತ್ಯದ ಬದುಕಿನ ಜ್ವಲಂತ ಸಮಸ್ಯೆಗಳನ್ನು ಪರಿಹರಿಸಲು ನವ ಉದಾರವಾದದ ಎರಡೂ ಪಡೆಗಳು (ಕಾಂಗ್ರೆಸ್ ಮತ್ತು ಬಿಜೆಪಿ) ಅಸಮರ್ಥವಾಗಿವೆ. ಈ ಪರಿಸ್ಥಿತಿಯಲ್ಲಿ, ಅರ್ಥವ್ಯವಸ್ಥೆಯನ್ನು ಬಿಕ್ಕಟ್ಟಿನಿಂದ ಹೊರ ಬರುವ ಮಾರ್ಗದರ್ಶನವನ್ನು ಎಡ ಪಂಥ ಮಾತ್ರ ಒದಗಿಸಬಲ್ಲದು. ಎಡ ಪಂಥದ ಈ ಮಾರ್ಗವು ನಮ್ಮನ್ನು ಬಂಡವಾಳಶಾಹಿಯಿಂದ ಆಚೆಗೆ ಕೊಂಡೊಯ್ಯಬಲ್ಲದು. ನವ ಉದಾರ ಬಂಡವಾಳಶಾಹಿ ದಿಗಂತದಿಂದ ಆಚೆಗಿನ ಕಣ್ಣೋಟ ಹೊಂದಿರುವುದು ಎಡ ಪಂಥ ಮಾತ್ರ. ಆದ್ದರಿಂದ, ಎಡ ಪರ್ಯಾಯ ಭಾರತಕ್ಕೆ ಮಾತ್ರವಲ್ಲ, ಇಡೀ ವಿಶ್ವಕ್ಕೇ ಸಲ್ಲುತ್ತದೆ.

ಸಂಕ್ಷಿಪ್ತವಾಗಿ, ನಾವೀಗ ಒಂದು ಚಾರಿತ್ರಿಕ ಪರ್ವಕಾಲವನ್ನು ನೋಡುತ್ತಿದ್ದೇವೆ. ಈ ಸನ್ನಿವೇಶದಲ್ಲಿ, ಬಲಪಂಥವು ಒಂದು ಹುಸಿ ಅಥವಾ ವಿಭಜನಕಾರೀ ಅಜೆಂಡಾದ ಸುತ್ತ ಜನರನ್ನು ಅಲ್ಪ ಕಾಲದಲ್ಲೇ ಅಣಿನೆರೆಸುವಲ್ಲಿ ಎಷ್ಡೇ ಯಶಸ್ವಿಯಾಗಿದ್ದರೂ ಸಹ, ನಿರುದ್ಯೋಗ ಮತ್ತು ಹತಾಶೆಯ ಪರಿಸ್ಥಿತಿಗೆ ಒಳಗಾಗಿರುವ ಆ ಜನರನ್ನು ಆ ಪರಿಸ್ಥಿತಿಯಿಂದ ಹೊರತರುವ ಮಾರ್ಗ ತೋರಲು ಬಲ ಪಂಥವು ಮೂಲಭೂತವಾಗಿ ಅಸಮರ್ಥವಾಗಿದೆ.

ಒಂದು ರಾಷ್ಟ್ರದ ಚರಿತ್ರೆಯಲ್ಲಿ, ಅಸ್ತಿತ್ವದಲ್ಲಿರುವ ವ್ಯವಸ್ಥೆಯು ಸ್ಥಿರವಾಗಿ ಮತ್ತು ದೀರ್ಘವಾಗಿ ಬಾಳುವ ಸಾಮರ್ಥ್ಯವುಳ್ಳದ್ದೆಂದು ತೋರುವ ಕ್ಷಣಗಳಿರುತ್ತವೆ. ಆದರೆ, ಇವೆಲ್ಲವೂ ಕ್ಷಿಪ್ರವಾಗಿ ಬದಲಾಗುತ್ತವೆ, ಹಿಂದಿನಂತೆಯೆ ಸಾಗುವುದು ಇನ್ನು ಸಾಧ್ಯವಿಲ್ಲವೆಂಬ ಪರಿಸ್ಥಿತಿಯಲ್ಲಿ ಹೊಸ ಕ್ಷಣಗಳು ಕಾಣಿಸಿಕೊಳ್ಳುತ್ತವೆ. ಅಂತಹ ಒಂದು ಕ್ಷಣ ಬಂಡವಾಳಶಾಹಿಗೆ ಈಗ ಬಂದಿದೆ, ಭಾರತದಲ್ಲಿ ಮಾತ್ರವಲ್ಲ ವಿಶ್ವದ ಎಲ್ಲೆಡೆಯಲ್ಲೂ. ಭಾರತದಲ್ಲಿ ಮತ್ತು ಬೇರೆ ಹಲವು ದೇಶಗಳಲ್ಲಿ ಬಲಪಂಥವು ಎಷ್ಡೇ ಚುನಾವಣಾ ಯಶಸ್ಸು ಗಳಿಸಿದರೂ, ಅದು ಈ ಮೂಲಭೂತ ಅಂಶವನ್ನು ಮಾರ್ಪಡಿಸಲಾರದು.

ಪ್ರೊ.ಪ್ರಭಾತ್ ಪಟ್ನಾಯಕ್
ಅನು: ಕೆ.ಎಂ.ನಾಗರಾಜ್

ಕೃಪೆ : ಜನಶಕ್ತಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ಸಿದ್ಧಾಂತ ಮತ್ತು ಪತ್ರಿಕೋದ್ಯಮ

Published

on

  • ಹರ್ಷಕುಮಾರ್‌ ಕುಗ್ವೆ, ಪತ್ರಕರ್ತ ಮತ್ತು ಆಕ್ಟಿವಿಸ್ಟ್

ಇದು ಸುಮಾರು 2002-03ರ ಸಂದರ್ಭ. ಶಿವಮೊಗ್ಗದಲ್ಲಿ ನಾವು ಹೋರಾಟಗಳಲ್ಲಿ ಸಕ್ರಿಯವಾಗಿದ್ದ ಕಾಲ. ಒಬ್ಬ ಪತ್ರಕರ್ತ ಮಿತ್ರರೊಂದಿಗೆ ಹೀಗೇ ಚರ್ಚೆ ನಡೆಯುತ್ತಿತ್ತು. ಅವರು ಪತ್ರಿಕೋದ್ಯಮದ ನ್ಯೂಟ್ರಾಲಿಟಿ ಕುರಿತು ಮಾತಾಡುತ್ತಾ, ʼನಾವು ಪತ್ರಕರ್ತರು ನಿಮ್ಮ ರೀತಿ ಯೋಚನೆ ಮಾಡೋದಕ್ಕೆ ಆಗಲ್ಲ. ನಾವು ಯಾವತ್ತೂ ಯಾವುದೇ ಸಿದ್ಧಾಂತಕ್ಕೆ ವಾಲಿಕೊಳ್ಳದೇ ತಟಸ್ಥತೆ ಕಾಪಾಡಬೇಕಾಗುತ್ತದೆʼ ಎಂದು ಹೇಳಿದರು. ʼಅವರ ಜೊತೆ ನಾನು ವಾದಿಸಿದೆ.

ಸರ್, ಸುಳ್ಳನ್ನೇ ಬಂಡವಾಳ ಮಾಡಿಕೊಂಡ ಸಿದ್ಧಾಂತಗಳು ರಾರಾಜಿಸುವಾಗ ಸತ್ಯವನ್ನು ಹುಡುಕಲು ಸಹ ಸಿದ್ಧಾಂತದ ಸಹಾಯ ಬೇಕಾಗುತ್ತದೆ. ಯಾವ ವ್ಯಕ್ತಿಯೂ ಸಿದ್ಧಾಂತದ ಹೊರಗಾಗಿ ಇರಲು ಸಾಧ್ಯವಿಲ್ಲ. ನನಗೆ ಸಿದ್ದಾಂತವೇ ಇಲ್ಲ ಎನ್ನುವ ವ್ಯಕ್ತಿಯನ್ನು ಕೂಡಾ ಅವನಿಗೆ ತಿಳಿದೋ ತಿಳಿಯದೆಯೋ ಒಂದಲ್ಲಾ ಒಂದು ಸಿದ್ದಾಂತ ಇಲ್ಲವೇ ಹಲವು ಸಿದ್ಧಾಂತಗಳು ನಿರ್ದೇಶಿಸುತ್ತಿರುತ್ತವಲ್ಲ.. ʼ ಎಂದ ನನ್ನ ಮಾತಿಗೆ ನಮಗೆ ಪತ್ರಕರ್ತರಿಗೆ ಹಾಗೆ ಯೋಚಿಸಲು ಬರುವುದಿಲ್ಲ. ನೀವು ಎಡ ಪಂಥ ಅಂತೀರಿ, ಅವರು ಬಲಪಂಥ ಅಂತಾರೆ, ನಾವು ಇವೆರಡರ ನಡುವೆ ಸತ್ಯ ಹುಡುಕ್ತೀವಿʼ ಎಂದೆಲ್ಲಾ ಹೇಳಿದರು. ಕೊನೆಗೆ ಯಾರೂ ರಾಜಿಯಾಗಲಿಲ್ಲ.

ಇದಾಗಿ ಹದಿನೈದು ವರ್ಷಗಳ ನಂತರ, 2019ರಲ್ಲಿ ಅದೇ ಪತ್ರಕರ್ತ ಸ್ನೇಹಿತರು ನಮ್ಮ ಜೊತೆ ಕೆಲಸ ಮಾಡುತ್ತಿದ್ದರು. ಅವರು ನರೇಂದ್ರ ಮೋದಿ ಸರ್ಕಾರದ ಆರ್ಥಿಕ ವಂಚನೆಗಳನ್ನು ಅದ್ಭುತ ರೀತಿಯಲ್ಲಿ ಅಂಕಿಅಂಶಗಳ ಸಮೇತ ಬಯಲು ಮಾಡುತ್ತಿದ್ದುದು ಕಂಡು ನನಗೆ ಅಚ್ಚರಿ ಮತ್ತು ಸಂತೋಷವಾಗಿತ್ತು. ಅಂದು ಅವರು ನಿಜಕ್ಕೂ ಸತ್ಯದ ಪರವಾಗಿದ್ದರು. ಆದರೆ ಅವರ ಬರೆಹಗಳನ್ನು ಯಾರಾದರೂ ಬಲಪಂಥೀಯರು ಓದಿದರೆ ಅವರಿಗೆ ಖಂಡಿತಾ ಇವರು ʼಎಡಪಂಥೀಯ ಸಿದ್ಧಾಂತಿʼ, ʼನಗರ ನಕ್ಸಲ್ʼ ಎಂದೆಲ್ಲಾ ಸುಲಭವಾಗಿ ಹಣೆಪಟ್ಟಿ ಕಟ್ಟಬಹುದಿತ್ತು. ಆದರೆ ಆ ಪತ್ರಕರ್ತ ಸ್ನೇಹಿತರು ನಿಜಕ್ಕೂ ಈ ದೇಶದ ಭವಿಷ್ಯದ ಬಗ್ಗೆ ತುಂಬಾ ಆತಂಕಗೊಂಡು, ಕಾಳಜಿಯಿಂದ ಕೆಲಸ ಮಾಡುತ್ತಿದ್ದರು. ಕೊನೆಗೆ ಅವರಿಗೂ ಸಹ ಅವರು ಹಿಂದೆ ಹೇಳಿದ್ದ ರೀತಿಯಲ್ಲಿ ತಟಸ್ಥವಾಗಿ ಪತ್ರಿಕೋದ್ಯಮ ನಡೆಸುವುದು ಸಾಧ್ಯವಿಲ್ಲ ಎಂಬ ಅರಿವಾಗಿರಬಹುದು ಎಂದುಕೊಂಡೆ. ಹೌದು ಪತ್ರಕತ್ರರಾದವರು ಮಾಡಲು ಇರುವ ಬಹಳ ಕೆಲಸಗಳ ನಡುವೆಯೂ ಅವರು ಅದ್ಯತೆಯನ್ನು ಗುರುತಿಸಿಕೊಂಡಿದ್ದರು.

ಪತ್ರಿಕೋದ್ಯಮದ ಬಗ್ಗೆ ಮಾತಾಡುವಾಗ ನಾವು ಒಂದು ಪ್ರಾಥಮಿಕ ಸಂಗತಿಯನ್ನು ತಿಳಿದುಕೊಳ್ಳಬೇಕು. ನಮ್ಮ ದೇಶದಲ್ಲಿ ಪತ್ರಿಕೋದ್ಯಮ ಆರಂಭವಾದ ಸಂದರ್ಭದಲ್ಲಿ ಯಾವೆಲ್ಲಾ ಭಾರತೀಯರು ಪತ್ರಿಕೆಗಳನ್ನು ಹೊರತರುತ್ತಿದ್ದರೋ ಅವರೆಲ್ಲರೂ ಕಟು ಸಿದ್ಧಾಂತಿಗಳಾಗಿದ್ದರು. ಸಾಮ್ರಾಜ್ಯವಾದದ ವಿರುದ್ಧದ ಸಿದ್ದಾಂತ ಅವರೆಲ್ಲರನ್ನು ಮುನ್ನಡೆಸುತ್ತಿತ್ತು. ಬಹುತೇಕ ಅವರೆಲ್ಲರೂ ಸ್ವಾತಂತ್ರ್ಯ ಹೋರಾಟಗಾರರು ಇಲ್ಲವೇ ಸ್ವಾಭಿಮಾನ ಚಳವಳಿಯ ಹೋರಾಟಗಾರರು, ನಾಯಕರು ಆಗಿದ್ದರು. ಅಂತಹ ಸ್ಪಷ್ಟ ಸೈದ್ಧಾಂತಿಕ ಬುನಾದಿಯಿಟ್ಟುಕೊಂಡು ಅವರೆಲ್ಲಾ ಬ್ರಿಟಿಷರ ವಿರುದ್ಧ ಪತ್ರಿಕೋದ್ಯಮ ನಡೆಸದಿದ್ದರೆ ಈ ದೇಶದ ಪತ್ರಿಕೋದ್ಯಮದ ಇತಿಹಾಸ ಅತ್ಯಂತ ಟೊಳ್ಳಾದ, ಬೂಸಾ ಇತಿಹಾಸವಾಗುತ್ತಿತ್ತು.

ಕೆಲ ಬ್ರಿಟಿಷ್ ಪತ್ರಕರ್ತರು ಹೇಗೆ ಬ್ರಿಟಿಷ್ ಅಧಿಕಾರಿಗಳ ಬೆಡ್ ರೂಮ್ ಸ್ಟೋರಿಗಳನ್ನು ಚಪ್ಪರಿಸಿಕೊಂಡು ಅದನ್ನೇ ಪತ್ರಿಕೋದ್ಯಮ ಎಂದು ಬೀಗುತ್ತಿದ್ದರೋ ಅಷ್ಟರಲ್ಲೇ ಭಾರತೀಯ ಪತ್ರಿಕೋದ್ಯಮ ಉಳಿದುಬಿಡುತ್ತಿತ್ತು. ಆದರೆ ಹೀಗೆ ಆಗಲು ಬಿಡದೇ ಉದಾತ್ತ ಧ್ಯೇಯಗಳ ಮೂಲಕ ದೇಶದ ಪತ್ರಿಕೋದ್ಯಮ ಬೆಳೆಸಿದ 19ನೆಯ ಶತಮಾನದ ಅಂತಹ ಧೀಮಂತ ಪತ್ರಕರ್ತರು ಹಲವರು. ಸುರೇಂದ್ರ ನಾಥ್ ಬ್ಯಾನರ್ಜಿ (ಬೆಂಗಾಲಿ ಪತ್ರಿಕೆ- 1879) ಪತ್ರಕರ್ತರಾಗಿ ಕೆಲಸ ಮಾಡುತ್ತಲೇ ಸತ್ಯ ಹೇಳಿದ ಕಾರಣಕ್ಕೆ ಬ್ರಿಟಿಷ್ ಸರ್ಕಾರ ಅವರನ್ನು ವರ್ನಾಕ್ಯುಲರ್ ಪ್ರೆಸ್ ಕಾಯ್ದೆಯ ಅಡಿ ಜೈಲಿಗಟ್ಟಿತ್ತು. ಸಂವಾದ ಕೌಮುದಿ ಎಂಬ ಪತ್ರಿಕೆ ನಡೆಸುತ್ತಿದ್ದ ರಾಜಾರಾಮ ಮೋಹನ್ ರಾಯ್ ಒಬ್ಬ ಸ್ಪಷ್ಟ ವಿಚಾರವಾದಿಯಾಗಿದ್ದರು.

ಅವರು ಈ ದೇಶದ ಅನಿಷ್ಟಗಳ ಕುರಿತೇ ತಮ್ಮ ಪತ್ರಿಕೆಯಲ್ಲಿ ಬರೆಯುತ್ತಾ ಹೋದರು. ಇದೇ ಕೆಲಸವನ್ನು ಮಹಾರಾಷ್ಟ್ರದಲ್ಲಿ ಮರಾಠಿ ಪತ್ರಿಕೆ ಆರಂಭಿಸಿದ ಜಂಬೇಕರ್ ಮಾಡಿದರು, ಅವರು ತಮ್ಮ ದರ್ಪಣ್ ಪತ್ರಿಕೆಯ ಮೂಲಕ ಸಾಮಾಜಿಕ ಅನಿಷ್ಟಗಳು ಕುರಿತು ಜಾಗೃತಿ ಮೂಡಿಸಿದರು- ಇವರನ್ನು ಮರಾಠಿ ಪತ್ರಿಕೋದ್ಯಮದ ಪಿತಾಮಹ ಎಂದು ಕರೆಯಲಾಗುತ್ತದೆ. ಬಂಗಾಳದಲ್ಲಿ ಹರೀಶ್ಚಂದ್ರ ರಾಯ್ ಎಂಬುವವರು ಬಂಗದರ್ಶನ್ ಎಂಬ ಪತ್ರಿಕೆ ತಂದರು; ಗುಜರಾತಿಯಲ್ಲಿ ʼಬಾಂಬೆ ಸಮಾಚಾರ್ʼ ಪತ್ರಿಕೆ ಆರಂಭಿಸಿದ ಫರ್ದುನ್ಜಿ ಮರ್ಜ್ ಬಾನ್ ಎಂಬುವವರು ಸಹ ಪತ್ರಿಕೆಯ ಮೂಲಕ ಸಮಾಜ ಸುಧಾರಣೆಗೆ ಒತ್ತು ಕೊಟ್ಟರು. ಇನ್ನು ಸ್ವಾತಂತ್ರ್ಯ ಹೋರಾಟಗಾರರಲ್ಲಿ ಬಾಲಗಂಗಾಧರ ತಿಲಕ್ ಕೇಸರಿ ಮತ್ತು ಮರಾಟಾ ಪತ್ರಿಕೆ ಹೊರಡಿಸುತ್ತಿದ್ದರು, ಗಾಂದೀಜಿಯವರು ಆಫ್ರಿಕಾದಲ್ಲಿದ್ದಾಗಲೇ ಇಂಡಿಯನ್ ಒಪಿನಿಯನ್ ಪತ್ರಿಕೆ ನಡೆಸುತ್ತಿದ್ದರೆ, ಭಾರತಕ್ಕೆ ಬಂದ ಮೇಲೆ ಯಂಗ್ ಇಂಡಿಯಾ ಮತ್ತು ಹರಿಜನ್ ಎಂಬ ಪತ್ರಿಕೆಗಳನ್ನು ಹೊರತಂದರು,

ಸುಭಾಷ್ ಚಂದ್ರ ಬೋಸ್ ಅವರು ಸ್ವರಾಜ್ ಪತ್ರಿಕೆಯ ಸಂಪಾದಕರಾಗಿದ್ದರು, ಲಾಲಾ ಲಜಪತ್ ರಾಯ್ ಅವರು ದ ಟ್ರಿಬ್ಯೂನ್ ಎಂಬ ಇಂಗ್ಲಿಷ್ ಪತ್ರಿಕೆ ತಂದರು, ಜೊತೆಗೆ ವಂದೆ ಮಾತರಂ ಎಂಬ ಉರ್ದು ಪತ್ರಿಕೆಯನ್ನೂ ಪ್ರಕಟಿಸುತ್ತಿದ್ದರು- ಇವುಗಳ ಮೂಲಕ ಸ್ವದೇಶಿ ಚಿಂತನೆಯನ್ನು ಅಥವಾ ಸಿದ್ಧಾಂತವನ್ನು ಪ್ರಚುರಪಡಿಸಿದರು, ಹೋಂರೂಲ್ ಚಳವಳಿಯ ಮುಂದಾಳು ಅನಿಬೆಸೆಂಟ್ ಅವರು ನ್ಯೂ ಇಂಡಿಯಾ ಪತ್ರಿಕೆ ತಂದರು, ಇನ್ನು ಮದನ್ ಮೋಹನ್ ಮಾಳವೀಯ ಅವರು ಮೋತಿಲಾಲ್ ನೆಹರೂ ಜೊತೆ ಸೇರಿಕೊಂಡು ದ ಲೀಡರ್ ಎಂಬ ಪತ್ರಿಕೆ ತಂದರೆ, ನಂತರ ಹಿಂದೂಸ್ತಾನ್ ಟೈಮ್ಸ್ ಪತ್ರಿಕೆಯನ್ನೂ ಪುನರುಜ್ಜೀವಗೊಳಿಸಿದರು. ಇನ್ನು ಡಾ. ಬಿ.ಆರ್. ಅಂಬೇಡ್ಕರ್ ಅವರು ʼಅಸ್ಪೃಶ್ಯರಿಗೆ ಈ ದೇಶದಲ್ಲಿ ಪತ್ರಿಕೆಯಿಲ್ಲʼ ಎಂದು ಘೋಷಿಸಿ ಮೊದಲಿಗೆ ಶಾಹು ಮಹಾರಾಜರ ಬೆಂಬಲದಿಂದ ಮೂಕನಾಯಕ ಪತ್ರಿಕೆ (1920) ತಂದರು; ನಂತರ ಬಹಿಷ್ಕೃತ ಭಾರತ (1927), ನಂತರ ಸಮತಾ (1928), ನಂತರ ಜನತಾ (1930) ಹಾಗೂ ಪ್ರಬುದ್ಧ ಭಾರತ (1956) ಪತ್ರಿಕೆಗಳನ್ನು ಹೊರಡಿಸಿ ನಿರಂತರವಾಗಿ ಅವುಗಳಲ್ಲಿ ಬರೆಯುತ್ತಾ ತಾವೊಬ್ಬ ಧೀಮಂತ ಪತ್ರಕರ್ತ ಎಂಬುದನ್ನೂ ನಿರೂಪಿಸಿದ್ದರು.

ಇವರನ್ನೆಲ್ಲಾ ಹೊರಗಿಟ್ಟು ಕೇವಲ ಬ್ರಿಟಿಷರು ತಂದ ಬೆಂಗಾಲ್ ಗೆಜೆಟ್ ನಂತವುಗಳನ್ನು ಮಾತ್ರವೇ ಭಾರತದ ಪತ್ರಿಕೋದ್ಯಮದ ಇತಿಹಾಸ ಎಂದು ಹೇಳಲು ಬರುತ್ತದೆಯೇ? ಈ ದೇಶದ ಪತ್ರಿಕೋದ್ಯಮದ ಇತಿಹಾಸದ ಸೈದ್ಧಾಂತಿಕ ಅಡಿಪಾಯ ಅತ್ಯಂತ ಭದ್ರವಾಗಿತ್ತು ಎಂಬುದಕ್ಕೆ ಇವೆಲ್ಲಾ ಸಾಕ್ಷಿಯಲ್ಲವೆ? ಅಲ್ಲಿ ಎಡಬಿಡಂಗಿತನಕ್ಕೆ, ಸೊ ಕಾಲ್ಡ್ ತಟಸ್ಥತೆಗೆ ಯಾವುದೇ ಅವಕಾಶವಿರಲಿಲ್ಲ. ಈ ದೇಶವನ್ನು ಕಾಡುತ್ತಿದ್ದ ಸಾಮ್ರಾಜ್ಯಶಾಹಿ ಮತ್ತು ಬ್ರಾಹ್ಮಣಶಾಹಿ ಶಕ್ತಿಗಳನ್ನು ನೇರವಾಗಿ ಎದುರಿಸಿಯೇ ಭಾರತದ ಪತ್ರಿಕೋದ್ಯಮ ನಡೆದುಕೊಂಡುಬಂದಿದೆ ಎಂಬುದಕ್ಕೆ ಮೇಲಿನ ಉದಾಹರಣೆಗಳೇ ಸಾಕ್ಷಿ.

ಸ್ವಾತಂತ್ರ್ಯಾನಂತರದಲ್ಲಿ, ನಮ್ಮ ಕರ್ನಾಟಕದಲ್ಲೇ ನಾವು ಯಾರನ್ನೆಲ್ಲಾ ಇಂದು ಧೀಮಂತ ಪತ್ರಕರ್ತರೆಂದು ಪರಿಗಣಿಸಿದ್ದೇವೆಯೋ, ಯಾರನ್ನೆಲ್ಲಾ ಆದರ್ಶ ಎಂದು ನೋಡುತ್ತೇವೆಯೋ ಅವರೆಲ್ಲರೂ ಅತ್ಯಂತ ಸ್ಪಷ್ಟ ಮತ್ತು ದೃಢವಾದ ಸಿದ್ಧಾಂತಿಗಳೇ ಆಗಿದ್ದರು ಎಂಬುದನ್ನು ಮರೆಯಬಾರದು. ಕರ್ನಾಟಕದ ಪತ್ರಿಕೋದ್ಯಮಕ್ಕೇ ಹೊಸ ಮೆರಗು ತಂದು ಸಂಚಲನ ಮೂಡಿಸಿದ ಪಿ. ಲಂಕೇಶ್ ಅವರು ಕಡಿಮೆ ಸಿದ್ಧಾಂತಿಯೇ? ಸ್ಪಷ್ಟ ಸೈದ್ಧಾಂತಿಕ ತಳಹದಿಯ ಪತ್ರಿಕೋದ್ಯಮವೇ ಅವರ ಆಕ್ಟಿವಿಸಂ ಆಗಿತ್ತು ಮಾತ್ರವಲ್ಲ ಪತ್ರಿಕೋದ್ಯಮದ ಮೂಲಕ ಸಾಮಾಜಿಕ ರಾಜಕೀಯ ಬದಲಾವಣೆಯನ್ನೂ ಮಾಡಲು ಸಾಧ್ಯ ಎಂದು ಪಿ ಲಂಕೇಶ್ ಒಂದು ಮಾದರಿಯನ್ನೇ ಸೃಷ್ಟಿಸಿದರು. ಅದು ಸಾಧ್ಯವಾಗಿದ್ದೇ ಅವರ ಕಟಿಬದ್ಧ ಸೈದ್ಧಾಂತಿಕ ನಿಲುವಿನಿಂದ.

ನಾಡು ಕಂಡ ಮತ್ತೊಬ್ಬ ಧೀಮಂತ ಪತ್ರಕರ್ತ ವಡ್ಡರ್ಸೆ ರಘುರಾಮ್ ಶೆಟ್ಟಿ ಕೂಡಾ ಗಟ್ಟಿ ತಾತ್ವಿಕ ನಿಲುವುಗಳ ಮೂಲಕ ನಾಡಿನ ಜನರನ್ನು ತಲುಪಿದರು. ಇನ್ನು 70-80ರ ದಶಕಗಳಲ್ಲಿ ಭಾರತೀಯ ಪತ್ರಿಕೋದ್ಯಮದ ಧೀಮಂತ ಪರಂಪರೆಯಲ್ಲಿ ಸಾಗಿದ ಹಲವಾರು ಕನ್ನಡ ಪತ್ರಿಕೆಗಳಿದ್ದವು- ಸುದ್ದಿ ಸಂಗಾತಿ, ಶೂದ್ರ, ಪಂಚಮ, ಸಮುದಾಯ, ಸಂಕ್ರಮಣ ಮುಂತಾದ ನಿಯತಕಾಲಿಕೆಗಳು ಕನ್ನಡಿಗರ ಅರಿವಿನ ವಿಸ್ತರಣೆಯಲ್ಲಿ ಕಡಿಮೆ ಕೆಲಸ ಮಾಡಿವೆಯೇ? ಹಾಗಾದರೆ ಇವೆಲ್ಲವೂ ಖಚಿತ ಸೈದ್ದಾಂತಿಕತೆಯಿಂದಲೇ ನಡೆಯಲಿಲ್ಲವೇ?

ಇನ್ನು ಕಳೆದ ಕೆಲವು ದಶಕಗಳಲ್ಲಿ, ಅಗ್ನಿ, ಹಾಯ್ ಬೆಂಗಳೂರು, ಗೌರಿ ಲಂಕೇಶ್ ವಾರಪತ್ರಿಗಳೂ ತಮ್ಮ ಛಾಪು ಮೂಡಿಸಿದವು. ಪಿ ಲಂಕೇಶರ ಸ್ಪೂರ್ತಿಯಲ್ಲೇ ದೊಡ್ಡ ದೊಡ್ಡ ಭ್ರಷ್ಟಾಚಾರ ಪ್ರಕರಣಗಳನ್ನು ಅನಾವರಣಗೊಳಿಸಿದವು. ಇದ್ದುದರಲ್ಲಿ ರವಿ ಬೆಳಗರೆ ಎಡಬಿಡಂಗಿಯಾಗಿ ಕ್ರೈಂ, ಸೆಕ್ಸ್ ಗಳನ್ನ ಅಸ್ತ್ರವಾಗಿಸಿಕೊಂಡು ಟ್ಯಾಬ್ಲಾಯ್ಡ್ ಪತ್ರಿಕೋದ್ಯಮವನ್ನು ಹಳ್ಳ ಹಿಡಿಸಿದರೂ ಹಾಯ್ ಬೆಂಗಳೂರು ಸಹ ಅನೇಕ ಬ್ರಷ್ಟಾಚಾರ ಹಗರಣಗಳನ್ನು ಬಯಲು ಮಾಡಿದ್ದು ಸತ್ಯ.

ಯಾವನ್ನು ನಾವು ದಿನಪತ್ರಿಕೆಗಳು ಅಥವಾ ವೃತ್ತ ಪತ್ರಿಕೆಗಳು ಎನ್ನುತ್ತೇವೆಯೋ ಇವುಗಳ ಆದ್ಯತೆ ದಿನನಿತ್ಯದ ಸುದ್ದಿಗಳನ್ನು ಜನರಿಗೆ ತಲುಪುವುದು ಮಾತ್ರವಾಗಿದ್ದ ಕಾರಣ ಬಹಳ ಪತ್ರಿಕೆಗಳಲ್ಲಿ ಸೈದ್ಧಾಂತಿಕತೆ ದೊಡ್ಡ ವಿಷಯವಾಗಲಿಲ್ಲ. ಆದರೆ ಅಂತಹ ಕಡೆಗಳಲ್ಲಿ ಸಹ ದೊಡ್ಡ ದೊಡ್ಡ ಸಿದ್ಧಾಂತಿಗಳು ಹತ್ತಾರು ವರ್ಷಗಳ ಕಾಲ ಕೆಲಸ ಮಾಡಿದ್ದರು ಮತ್ತು ತಮ್ಮ ಖಚಿತ ಅಭಿಪ್ರಾಯಗಳನ್ನು ಆ ವೇದಿಕೆಗಳ ಮೂಲಕ ಜನರಿಗೆ ತಲುಪಿಸುತ್ತಾ ಬಂದಿದ್ದರೆಂಬುದನ್ನು ನಾವು ಮರೆಯಕೂಡದು.

ಈಗ ಹೇಳಿ, ನಮ್ಮ ಪತ್ರಿಕೋದ್ಯಮಕ್ಕೆ ಸಿದ್ಧಾಂತ ಬೇಡವೆ, ಪತ್ರಕರ್ತರಾಗಿರುವವರು ಸೈದ್ಧಾಂತಿಕ ಸ್ಪಷ್ಟತೆ ಹೊಂದಿರಬಾರದೆ? ಆಕ್ಟಿವಿಸ್ಟುಗಳು ಪತ್ರಕರ್ತರಾಗುವುದು ಅಪರಾಧವೆ? ಪತ್ರಿಕೋದ್ಯಮ ಆಕ್ಟಿವಿಸಂಗೆ ಪೂರಕವಾಗಿರಬಾರದೆ? ಇಂದು ಬ್ರಾಹ್ಮಣ್ಯದ ದಿಗ್ವಿಜಯ ಮತ್ತೊಮ್ಮೆ ನಿಜವಾಗುವ ಕರಾಳ ಛಾಯೆ ಇಡೀ ದೇಶವನ್ನು ಆವರಿಸಿಕೊಂಡಿರುವಾಗ, ಬಾಬಾಸಾಹೇಬರು ಎಚ್ಚರಿಸಿದ್ದ ಆ ʼಪ್ರತಿಕ್ರಾಂತಿʼ ತನ್ನ ಕಬಂಧಬಾಹುಗಳನ್ನು ಚಾಚಿಕೊಂಡ ಎಲ್ಲವನ್ನೂ ನೊಣೆಯುತ್ತಿರುವಾಗ, ಅಪರಾಧವೇ ಅಧಿಕಾರವಾಗಿ ದೇಶದ ಪ್ರಮುಖ ಸಂಸ್ಥೆಗಳೆಲ್ಲವನ್ನೂ ನುಂಗಿ ನೀರುಕುಡಿದು ತಮ್ಮ ಅಂಕೆಯಲ್ಲಿ ತಂದುಕೊಂಡು ಇಡೀ ದೇಶದ ಜನರಿಗೆ ಕರಾಳತೆ ದರ್ಶನ ಮಾಡುತ್ತಾ ಭ್ರಷ್ಟಾಚಾರದ ವ್ಯಾಖ್ಯಾನವನ್ನೇ ತಿರುಗುಮರುಗು ಮಾಡುತ್ತಿರುವಾಗ ಸೊ ಕಾಲ್ಡ್ ತಟಸ್ಥತೆಯ ಬದನೇಕಾಯಿಯನ್ನು ನೆಚ್ಚಿಕೊಳ್ಳದೇ ನಿರ್ಧಾರಿತ ಜನಾಂದೋಲನಗಳಿಗೆ ಪೂರಕವಾಗಿ ಪತ್ರಿಕೋದ್ಯಮ ಮತ್ತು ಪತ್ರಕರ್ತರಾದವರು ಜೊತೆಗೂಡುವುದು ಬೇಡವೇ?

‘ಬೇಡ’ ಎಂಬ ಅಭಿಪ್ರಾಯ ನಿಮ್ಮದಾಗಿದ್ದರೆ ನಿಮ್ಮ ಬಳಿ ಹೇಳಲು ನನಗೆ ಏನೂ ಉಳಿದಿಲ್ಲ. ನೀವು ನಿಮ್ಮದೇ ಸುಖಾಸನದಲ್ಲಿ ನೆಮ್ಮದಿಯಾಗಿ ಪವಡಿಸಬಹುದು, ನನಗೇನೂ ಅಭ್ಯಂತರವಿಲ್ಲ. (ಬರಹ- ಹರ್ಷಕುಮಾರ್‌ ಕುಗ್ವೆ, ಪತ್ರಕರ್ತ ಮತ್ತು ಆಕ್ಟಿವಿಸ್ಟ್)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪ್ರತ್ಯೇಕ ದಾವಣಗೆರೆ-ಚಿತ್ರದುರ್ಗ ಮೆಗಾ ಡೈರಿ ಆರಂಭಿಸಿ : ಶಾಸಕ ಕೆ.ಎಸ್.ಬಸವಂತಪ್ಪ ಒತ್ತಾಯ

Published

on

ಸುದ್ದಿದಿನ,ದಾವಣಗೆರೆ: ಕ್ಷೇತ್ರದ ವ್ಯಾಪ್ತಿಯ ಕಲ್ಪನಹಳ್ಳಿ ಬಳಿ ಪ್ರತ್ಯೇಕ ದಾವಣಗೆರೆ-ಚಿತ್ರದುರ್ಗ ಮೆಗಾ ಡೈರಿ ಸ್ಥಾಪಿಸಲು ಭೂಮಿ ಖರೀದಿಸಿದ್ದು, ಈ ಬಗ್ಗೆ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ಕೂಡಲೇ ಅನುದಾನ ಬಿಡುಗಡೆ ಮಾಡಬೇಕೆಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಒತ್ತಾಯಿಸಿದರು.

ವಿಧಾನಸಭೆಯಲ್ಲಿ ಬುಧವಾರ ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಶಿವಮೊಗ್ಗ ಹಾಲು ಒಕ್ಕೂಟದಿಂದ ಬೇರ್ಪಡಿಸಿ ಪ್ರತ್ಯೇಕ ದಾವಣಗೆರೆ-ಚಿತ್ರದುರ್ಗ ಒಳಗೊಂಡ ಮೆಗಾ ಡೈರಿ ಆರಂಭಿಸಲು ನನ್ನ ಕ್ಷೇತ್ರದ ವ್ಯಾಪ್ತಿಯ ಕಲ್ಪನಹಳ್ಳಿಯಲ್ಲಿ ಭೂಮಿ ಖರೀದಿಸಿದ್ದೇವೆ. ಸರ್ಕಾರ ಕೂಡಲೇ ಅನುದಾನ ಬಿಡುಗಡೆ ಮಾಡಿ ಡೈರಿ ಆರಂಭಿಸಿದರೆ ಈ ಭಾಗದ ರೈತರು ಆರ್ಥಿಕವಾಗಿ ಸಬಲರಾಗಲಿದ್ದಾರೆ ಎಂದು ಸದನದ ಗಮನ ಸೆಳೆದರು.

ಹೈನುಗಾರಿಕೆಯಲ್ಲಿ ಮಹಿಳೆಯರಿಗೆ ಶೇ.50ರಷ್ಟು ಸಬ್ಸಿಡಿ ಕೊಡುವುದನ್ನು ಶೇ.75ರಷ್ಟು ಹೆಚ್ಚಳ ಮಾಡಿದರೆ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಿ ಉತ್ತಮ ಬದುಕು ಕಟ್ಟಿಕೊಳ್ಳುತ್ತಾರೆ. ಈ ಬಗ್ಗೆ ಸರ್ಕಾರ ಗಮನ ಹರಿಸಬೇಕೆಂದರು.

ಮಧ್ಯ ಕರ್ನಾಟಕದ ಕೇಂದ್ರ ಬಿಂದು, ಹಿಂದುಳಿದ ಜಿಲ್ಲೆ ದಾವಣಗೆರೆ. ಅದರಲ್ಲೂ ಅತೀ ಹಿಂದುಳಿದ ಮೀಸಲು ಕ್ಷೇತ್ರ ಮಾಯಕೊಂಡ. ಸಿರಿಗೆರೆ ತರಳಬಾಳು ಜಗದ್ಗುರುಗಳ ಹೋರಾಟದ ಫಲವಾಗಿ ನನ್ನ ಕ್ಷೇತ್ರದಲ್ಲಿ 22 ಕೆರೆಗಳ ಯೋಜನೆ ಜಾರಿಗೊಂಡು ಎಲ್ ಅಂಡ್ ಟಿ ಕಂಪನಿ ಕಾಮಗಾರಿ ನಡೆಸಿತ್ತು. ಕಳಪೆ ಕಾಮಗಾರಿಯಿಂದ 100 ಹಳ್ಳಿಗಳಿಗೆ ಕುಡಿಯುವ ನೀರು, ನೀರಾವರಿ ಕಲ್ಪಿಸಬೇಕೆಂಬ ಉದ್ದೇಶ ಈಡೇರಿಲ್ಲ. ಪುನಃ ಹೊಸ ಪೈಪ್‌ಲೈನ್ ಕಾಮಗಾರಿಗೆ ಹಣ ನೀಡಿ ಕಾಮಗಾರಿ ಆರಂಭಿಸುವAತೆ ಈಗಾಗಲೇ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಕೂಡಲೇ ಸರ್ಕಾರ ಅನುದಾನ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು.

ನನ್ನ ಕ್ಷೇತ್ರದಲ್ಲಿ ಹೆಚ್ಚು ಗುಡ್ಡಗಾಡು ಪ್ರದೇಶ ಹೊಂದಿದ್ದು, ಈ ಪ್ರದೇಶಗಳಲ್ಲಿ ಅತೀ ಹೆಚ್ಚು ಕೆರೆಗಳನ್ನು ನಿರ್ಮಾಣ ಮಾಡಿದರೆ ಜನಜಾನುವಾರುಗಳಿಗೆ ಕುಡಿಯುವ ನೀರು, ಅಂತರ್ಜಲ ಮಟ್ಟ ವೃದ್ಧಿಗೆ ಅನುಕೂಲವಾಗುತ್ತದೆ. ಅಲ್ಲದೇ ಬ್ರಿಟಿಷರು ನಿರ್ಮಿಸಿದ ಕೆರೆ ಇದೆ. ಅದನ್ನು ಜೀರ್ಣೋದ್ಧಾರ ಮಾಡಿದರೆ ಇಡೀ ಪಕ್ಷಿ ಸಂಕುಲ, ಹಳ್ಳಿಗಳಿಗೆ ಕುಡಿಯುವ ನೀರು ಒದಗಿಸಬಹುದು ಎಂದು ಸದನ ಗಮನ ಸೆಳೆದರು.

ಎಸ್ಸಿ-ಎಸ್ಟಿ ಅಭಿವೃದ್ಧಿ ನಿಗಮಗಳಿಗೆ ಅನೇಕ ಸೌಲಭ್ಯ ಒದಗಿಸಲು ಅನುದಾನದ ಕೊರತೆ ಇದೆ. ಹೆಚ್ಚಿನ ಅನುದಾನ ನೀಡಬೇಕು. ಎಸ್ಸಿ-ಎಸ್ಟಿ ಸಮುದಾಯ ಆರ್ಥಿಕವಾಗಿ ಸಬಲರಾಗಲು ಭೂಒಡೆತನ ಯೋಜನೆ ಜಾರಿಗೊಳಿಸಿದ್ದು, ಕ್ಷೇತ್ರಕ್ಕೆ ಕೇವಲ ಒಂದೇ ಕೊಟ್ಟರೆ ಸಾಧ್ಯವಾಗುವುದಿಲ್ಲ. ಇದಕ್ಕೆ ಹೆಚ್ಚು ಒತ್ತು ಕೊಡಬೇಕು. ಖಾಸಗಿ ಕಾಲೇಜುಗಳಲ್ಲಿ ಡಿಪ್ಲೊಮಾ, ನರ್ಸಿಂಗ್, ಪ್ಯಾರಾ ಮೆಡಿಕಲ್ ಸೇರಿದಂತೆ ವೃತ್ತಿಪರ ಕೋರ್ಸ್ನಲ್ಲಿ ಅಭ್ಯಾಸ ಮಾಡುವ ಎಸ್ಸಿ-ಎಸ್ಟಿ ಮಕ್ಕಳಿಗೆ 2013-18ರಲ್ಲಿ ಹಾಸ್ಟೆಲ್ ಸೌಲಭ್ಯ ಇತ್ತು, ಈಗ ಇಲ್ಲ. ಕೂಡಲೇ ಈ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಒದಗಿಸಬೇಕೆಂದು ಆಗ್ರಹಿಸಿದರು.

ಹೊರ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಪೌರ ಕಾರ್ಮಿಕರಿಗೆ ಹಗಲು ದರೋಡೆ ಮಾಡಲಾಗುತ್ತಿದೆ. ಹೊರ ಗುತ್ತಿಗೆ ತೆಗೆದು ನೇರವಾಗಿ ನೇಮಕಾತಿ ಮಾಡಿಕೊಂಡರೆ ಅವರ ಬದುಕು ಉಜ್ವಲವಾಗುತ್ತದೆ. ಶೋಷಿತ ಸಮುದಾಯಗಳಿಗೆ ತ್ವರಿತ ನ್ಯಾಯ ಒದಗಿಸಲು ಎಸ್ಸಿ-ಎಸ್ಟಿ ದೌರ್ಜನ್ಯ ಕಾಯ್ದೆಯಡಿ ರಾಜ್ಯದಲ್ಲಿ 33 ವಿಶೇಷ ಪೊಲೀಸ್ ಠಾಣೆ ತೆರೆಯಲು ಕ್ರಮ, ಅಲ್ಲದೇ ಎಸ್ಸಿ-ಎಸ್ಟಿ ಗುತ್ತಿಗೆದಾರರಿಗೆ 2 ಕೋಟಿ ಮೀಸಲು, ಅದರಂತೆ ಒಬಿಸಿ, ಅಲ್ಪಸಂಖ್ಯಾತರಿಗೂ 2 ಕೋಟಿ ಮೀಸಲಿಡುವ ಮೂಲಕ ರೈತರು, ಕಾಯಕ ಜೀವಿಗಳು, ವಿಶೇಷವಾಗಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಎಸ್‌ಸಿಪಿ-ಎಸ್‌ಟಿಪಿ ಯೋಜನೆಯಡಿ 48,018 ಕೋಟಿ ರೂ. ಬಜೆಟ್‌ನಲ್ಲಿ ಮೀಸಲಿಟ್ಟಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ಸಲ್ಲಿಸಿದರು.


  • ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಿ
    ಮಳೆಗಾಲದಲ್ಲಿ ತುಂಗಾ ಜಲಾಯಶದಿಂದ ಭದ್ರಾ ಜಲಾಶಯಕ್ಕೆ ನೀರು ತುಂಬಿಸಿ ಅಪರ್ ಭದ್ರಾ ಯೋಜನೆ ನೀರು ನೀಡುವ ಯೋಜನೆಯನ್ನು ತ್ವರಿತವಾಗಿ ಪೂರ್ಣಗೊಳಿಸಿದರೆ ಭದ್ರಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ರೈತರಿಗೆ ಅನುಕೂಲವಾಗಲಿದೆ. ಇಲ್ಲದಿದ್ದರೆ, ನಮ್ಮ ಭಾಗದ ರೈತರಿಗೆ ಅನಾನುಕೂಲವಾಗಲಿದೆ. ಕೂಡಲೇ ಸರ್ಕಾರ ಈ ಯೋಜನೆಯ ಕಾಮಗಾರಿ ಪೂರ್ಣಗೊಳಿಸಬೇಕು. ರಾಗಿ, ಭತ್ತ, ತೊಗರಿ ಬೆಂಬಲ ಬೆಲೆಯಡಿ ಖರೀದಿಸಿದಂತೆ ಮೆಕ್ಕೆಜೋಳವನ್ನು ಬೆಂಬಲ ಬೆಲೆಯಡಿ ಖರೀದಿಸಬೇಕೆಂದು ಶಾಸಕ ಕೆ.ಎಸ್.ಬಸವಂತಪ್ಪ ಒತ್ತಾಯಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೆರೆಬಿಳಚಿ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ; 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ಚನ್ನಗಿರಿ:ತಾಲೂಕಿನ ಕೆರೆಬಿಳಚಿಯಲ್ಲಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 6ನೇ ತರಗತಿಗೆ ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ ,ಕ್ರಿಶ್ಚಿಯನ್, ಜೈನ್ ,ಬೌದ್ಧ ಸಿಖ್ ಪಾರ್ಸಿ ಧರ್ಮದವರಿಗೆ 75% ಸ್ಥಾನ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ 25% ಸ್ಥಾನಗಳು ಮೀಸಲಾಗಿವೆ.ವಿದ್ಯಾರ್ಥಿಗಳನ್ನು ಪ್ರವೇಶ ಪರೀಕ್ಷೆಯ ಆಧಾರದ ಮೇಲೆ ಮತ್ತು ಮೀಸಲಾತಿ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://sevasindhuservices.karnataka.gov.in/

ಪ್ರವೇಶ ಪಡೆಯಲು ಅರ್ಹತೆಗಳು

  • 05 ನೇ ತರಗತಿಯಲ್ಲಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
  • ಪೋಷಕರ ಆದಾಯದ ಮಿತಿ ಎಸ್.ಸಿ/ಎಸ್.ಟಿ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ
  • 1 ಲಕ್ಷ ರೂ.ಗಳು ಮತ್ತು ಅಲ್ಪಸಂಖ್ಯಾತರಿಗೆ 2.5ಲಕ್ಷ ರೂ.ಗಳು ಮತ್ತು ಹಿಂದುಳಿದ ವರ್ಗದವರಿಗೆ 44500/- ರೂ.ಗಳಿಗೆ ಮೀರಿರಬಾರದು.

ವಸತಿ ಶಾಲೆಯಲ್ಲಿ ದೊರೆಯುವ ಸೌಲಭ್ಯಗಳು

  • ಆಯ್ಕೆಯಾದ ವಿದ್ಯಾರ್ಥಿಗಳಿಗೆ 6ನೇ ತರಗತಿಯಿಂದ 12 ತರಗತಿಯವರೆಗೆ ಉಚಿತ ಶಿಕ್ಷಣ.
  • ಉಚಿತ ಪಠ್ಯ ಪುಸ್ತಕ, ಲೇಖನ ಸಾಮಗ್ರಿಗಳು, ಸಮವಸ್ತ್ರ, ಶೂ ಮತ್ತು ಸಾಕ್ಸ್, ಹಾಸಿಗೆ ಹೊದಿಕೆ ಜೊತೆಗೆ ಉತ್ತಮ ಮೂಲ ಸೌಲಭ್ಯ ಒದಗಿಸಲಾಗುವುದು.
  • ಸುಸಜ್ಜಿತ ಕೊಠಡಿ ಹಾಗೂ ವಸತಿ ನಿಲಯಗಳು, ವಿದ್ಯುತ್ ವ್ಯವಸ್ಥೆ, 24×7 ಬಿಸಿ ನೀರಿನ ವ್ಯವಸ್ಥೆ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇದೆ.
  • ನುರಿತ ಶಿಕ್ಷಕರು ಮತ್ತು ಉಪನ್ಯಾಸಕರಿಂದ ಭೋದನೆ, ಪ್ರತಿ ವಿಷಯಕ್ಕೆ ಸುಸಜ್ಜಿತ ಪ್ರಯೋಗಾಲಯ ಸೌಲಭ್ಯ ಹಾಗೂ ಡಿಜಿಟಲ್ ಗ್ರಂಥಾಲಯ ವ್ಯವಸ್ಥೆ ಇದೆ.
  • ಉಚಿತ ವಸತಿ ಮತ್ತು ಭೋಜನ ವ್ಯವಸ್ಥೆ ಇದೆ. ಜೊತೆಗೆ 24×7 CCTV ನಿರೀಕ್ಷಣೆಯಲ್ಲಿ ಇರುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ1 day ago

ಪ್ರವಾಸೋದ್ಯಮ ಇಲಾಖೆ | ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನಲ್ಲಿ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಪರಿಶಿಷ್ಟ ಜಾತಿಗೆ ಸೇರಿದ 292 ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 162 ಅಭ್ಯರ್ಥಿಗಳಿಗೆ ರಾಜ್ಯ ಹಾಗೂ ಕೇಂದ್ರ...

ದಿನದ ಸುದ್ದಿ1 day ago

ಜಯಲಕ್ಷ್ಮಿ ಕಾರಂತ್‌ ಅವರಿಗೆ ‘ಯಕ್ಷ ಧ್ರುವ’ ರಾಜ್ಯ ಪ್ರಶಸ್ತಿ ಪ್ರದಾನ

ಸುದ್ದಿದಿನ,ದಾವಣಗೆರೆ:ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಅಂಗ ಸಂಸ್ಥೆ ಕೇರಳ ಗಡಿನಾಡ ಶಾಖೆಯ ಅಧ್ಯಕ್ಷರೂ, ಹಿರಿಯ ಸಾಹಿತಿ, ಯಕ್ಷಗಾನ ವಿದ್ವಾಂಸರು, ತಾಳಮದ್ದಳೆಯ ಅರ್ಥಧಾರಿಗಳಾದ ಜಯಲಕ್ಷ್ಮಿ ಕಾರಂತ್‌ರವರಿಗೆ ಇತ್ತೀಚಿಗೆ ದಕ್ಷಿಣ ಕನ್ನಡ...

ಅಂಕಣ3 days ago

ಕವಿತೆ | ಅಲರ್ಟ್..!

ಸುನೀತ ಕುಶಾಲನಗರ ನದಿಯ ನೇವರಿಸಿದ ಗಾಳಿ ಮುದಗೊಳಿಸಿ ಸರಿಯಿತು. ಜಡಿ ಮಳೆ ಧೋ ಎಂದು ಸಕಾಲಿಕವಾಗಿ ಸುರಿದು ಹೊಸ ಹುಟ್ಟು. ಆದರೇನು? ಹಿಂಗಾರು, ಮುಂಗಾರು ಆಗೊಮ್ಮೆ ಈಗೊಮ್ಮೆ...

ದಿನದ ಸುದ್ದಿ6 days ago

ಪಕ್ಷಿ ಸಂಕುಲ ಸಂರಕ್ಷಿಸುವ ಮನೋಭಾವ ಅಗತ್ಯ : ಪ್ರಾಚಾರ್ಯ ಎಂ.ನಾಸಿರುದ್ದೀನ್

ಸುದ್ದಿದಿನ,ಚಿತ್ರದುರ್ಗ: ಜಗತ್ತಿನಲ್ಲಿ ಭೂಮಿಯ ಮೇಲೆ ಸಕಲ ಜೀವರಾಶಿಗಳು ಬದುಕಲು ಅವಕಾಶವಿದ್ದು ಪರಿಸರ ಸಂರಕ್ಷಣೆ ಮಾಡುವುದರ ಮೂಲಕ ಪಕ್ಷಿ ಸಂಕುಲ ಸಂರಕ್ಷಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಡಯಟ್ ಪ್ರಾಚಾರ್ಯ...

ದಿನದ ಸುದ್ದಿ6 days ago

ದಾವಣಗೆರೆ | ನಾಳೆಯಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ ಆರಂಭ, 81 ಕೇಂದ್ರಗಳಲ್ಲಿ 22579 ವಿದ್ಯಾರ್ಥಿಗಳು

ಸುದ್ದಿದಿನ,ದಾವಣಗೆರೆ:2024-25 ಸಾಲಿನ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯು ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ಜರುಗಲಿವೆ. ಹೊಸದಾಗಿ ಒಟ್ಟು 21704 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು ಇದರಲ್ಲಿ 10587...

ಅಂಕಣ6 days ago

ಸಿದ್ಧಾಂತ ಮತ್ತು ಪತ್ರಿಕೋದ್ಯಮ

ಹರ್ಷಕುಮಾರ್‌ ಕುಗ್ವೆ, ಪತ್ರಕರ್ತ ಮತ್ತು ಆಕ್ಟಿವಿಸ್ಟ್ ಇದು ಸುಮಾರು 2002-03ರ ಸಂದರ್ಭ. ಶಿವಮೊಗ್ಗದಲ್ಲಿ ನಾವು ಹೋರಾಟಗಳಲ್ಲಿ ಸಕ್ರಿಯವಾಗಿದ್ದ ಕಾಲ. ಒಬ್ಬ ಪತ್ರಕರ್ತ ಮಿತ್ರರೊಂದಿಗೆ ಹೀಗೇ ಚರ್ಚೆ ನಡೆಯುತ್ತಿತ್ತು....

ದಿನದ ಸುದ್ದಿ6 days ago

ಅಮಾನವೀಯ ಕೃತ್ಯ | ಹೆಣ್ಣು ಮಗು ಮಾರಾಟ ಮಾಡಿದ ಪೋಷಕರು

ಸುದ್ದಿದಿನಡೆಸ್ಕ್:ರಾಜ್ಯದಲ್ಲಿ ಮಕ್ಕಳ ಮಾರಾಟ ಜಾಲ ಎಗ್ಗಿಲ್ಲದೆ ನಡೆಯುತ್ತಿದೆ. ಇಂತಹ ಸಂಧರ್ಭದಲ್ಲಿ ಮೈಸೂರಿನಲ್ಲೊಂದು ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಅಮಾನವೀಯ ಕೃತ್ಯ ನಡೆದಿದೆ. 14ಸಾವಿರ ರೂ ಗೆ ಹೆಣ್ಣು...

ದಿನದ ಸುದ್ದಿ6 days ago

ಕ್ಯೂ-ಸ್ಪೈಡರ್ಸ್ ವತಿಯಿಂದ ಉಚಿತ ಉದ್ಯೋಗದರಿತ ಕೌಶಲ್ಯ ತರಬೇತಿ ಆಯ್ಕೆ ಪ್ರಕ್ರಿಯೆ

(ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ಲೇಸ್ಮೆಂಟ್ ಸೆಲ್ ಅಡಿಯಲ್ಲಿ ಆಯೋಜನೆ) ಸುದ್ದಿದಿನ,ದಾವಣಗೆರೆ: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ಲೇಸ್ಮೆಂಟ್ ಸೆಲ್ ನೇತೃತ್ವದಲ್ಲಿ ಖ್ಯಾತ ಐಟಿ ತರಬೇತಿ...

ದಿನದ ಸುದ್ದಿ7 days ago

ಪ್ರತ್ಯೇಕ ದಾವಣಗೆರೆ-ಚಿತ್ರದುರ್ಗ ಮೆಗಾ ಡೈರಿ ಆರಂಭಿಸಿ : ಶಾಸಕ ಕೆ.ಎಸ್.ಬಸವಂತಪ್ಪ ಒತ್ತಾಯ

ಸುದ್ದಿದಿನ,ದಾವಣಗೆರೆ: ಕ್ಷೇತ್ರದ ವ್ಯಾಪ್ತಿಯ ಕಲ್ಪನಹಳ್ಳಿ ಬಳಿ ಪ್ರತ್ಯೇಕ ದಾವಣಗೆರೆ-ಚಿತ್ರದುರ್ಗ ಮೆಗಾ ಡೈರಿ ಸ್ಥಾಪಿಸಲು ಭೂಮಿ ಖರೀದಿಸಿದ್ದು, ಈ ಬಗ್ಗೆ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ಕೂಡಲೇ ಅನುದಾನ...

ದಿನದ ಸುದ್ದಿ1 week ago

ಕೆರೆಬಿಳಚಿ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ; 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಸುದ್ದಿದಿನ,ಚನ್ನಗಿರಿ:ತಾಲೂಕಿನ ಕೆರೆಬಿಳಚಿಯಲ್ಲಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 6ನೇ ತರಗತಿಗೆ ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ ,ಕ್ರಿಶ್ಚಿಯನ್, ಜೈನ್ ,ಬೌದ್ಧ ಸಿಖ್...

Trending