Connect with us

ರಾಜಕೀಯ

ಬಲಪಂಥದತ್ತ ಜಾಗತಿಕ ಪಲ್ಲಟದ ಈ ಸಮಯ

Published

on

  • ಜಾಗತಿಕ ಅರ್ಥವ್ಯವಸ್ಥೆಯು ಬಿಕ್ಕಟ್ಟಿಗೆ ಒಳಗಾಗಿರುವ ಪರಿಸ್ಥಿತಿಯಲ್ಲಿ ಮತ್ತು ಅದರ ಪರಿಣಾಮವಾಗಿ ನಿರುದ್ಯೋಗವು ಉಲ್ಬಣಗೊಂಡ ಪರಿಸ್ಥಿತಿಯಲ್ಲಿ ಜಗತ್ತಿನಾದ್ಯಂತ ಬಲ ಪಂಥದತ್ತ ಪಲ್ಲಟ ಕಾಣುತ್ತಿದೆ. ಬಲಪಂಥದ ಬೆಳವಣಿಗೆಗೆ ಅದು ಆರ್ಥಿಕ ಬಿಕ್ಕಟ್ಟು ಮತ್ತು ನಿರುದ್ಯೋಗವನ್ನು ಗಮನಕ್ಕೆ ತಗೊಂಡಿರುವುದು ಮತ್ತು ಅಧಿಕಾರಸ್ಥರ ಪರವಾದ ರಾಜಕೀಯ ಪಕ್ಷಗಳು ಗಮನಕ್ಕೆ ತಗೊಂಡಿರದಿರುವುದೇ ಕಾರಣ ಎನ್ನಬಹುದು. ಭಾರತದಲ್ಲಿಯೂ ಸಹ ಅಭಿವೃದ್ಧಿ ಅಜೆಂಡಾದ ಮೂಲಕವೇ 2014ರಲ್ಲಿ ಮೋದಿ ಅಧಿಕಾರ ಹಿಡಿದದ್ದು. ನವ ಉದಾರವಾದವನ್ನು ಪ್ರತಿನಿಧಿಸುವ ಕಾಂಗ್ರೆಸ್‌ನಂತಹ ಒಂದು ಪಕ್ಷದಿಂದ ಬಿಜೆಪಿಯಂತಹ ಒಂದು ಬಲ ಪಂಥೀಯ ಪಕ್ಷದತ್ತ ಪಲ್ಲಟವು ಸಾಧ್ಯವಾಗಿರುವುದು ನವ-ಉದಾರವಾದದ ಬಿಕ್ಕಟ್ಟಿನಿಂದಾಗಿಯೇ ಎಂಬ ಸಂಗತಿಯಂತೂ ಸ್ಪಷ್ಟ.

ಮೋದಿಯವರ ಪುನರಾಯ್ಕೆಯು, ಜಗತ್ತು ಬಲ ಪಂಥಾಭಿಮುಖವಾಗಿ ಸರಿಯುತ್ತಿರುವ ವಿದ್ಯಮಾನದ ಒಂದು ಭಾಗವಾಗಿದೆ ಎಂಬ ಆಯಾಮವನ್ನು ನಾವು ಗಮನಿಸುವುದೇ ಇಲ್ಲ. ಹಾಗಾಗಿ, ಮೋದಿಯವರ ಪುನರಾಯ್ಕೆಯ ಬಗ್ಗೆ ನಾವು ಚರ್ಚಿಸುವಾಗ, ಇಡೀ ಜಗತ್ತೇ ಬಲಕ್ಕೆ ವಾಲುತ್ತಿದೆ ಎಂಬ ಅಂಶದ ಪ್ರಸ್ತಾಪ ನಮ್ಮ ಚರ್ಚೆಯಲ್ಲಿ ಬಹುತೇಕ ಇರುವುದಿಲ್ಲ. ಇಸ್ರೇಲ್‌ನಲ್ಲಿ ನೆತನ್ಯಾಹು ಪುನರಾಯ್ಕೆಗೊಂಡಿದ್ದಾರೆ. ಟರ್ಕಿಯಲ್ಲಿ ಎರ್ಡೊಗಾನ್ ಪ್ರಚಂಡ ಬಹುಮತದಿಂದ ಪುನರಾಯ್ಕೆಯಾಗಿದ್ದಾರೆ. ಚುನಾವಣೆಗೆ ಮುನ್ನ ಈ ಪಕ್ಷವು ಪುನರಾಯ್ಕೆ ಆಗುವುದೇ ಇಲ್ಲ ಎನ್ನುವ ಭವಿಷ್ಯ ನುಡಿಯನ್ನು ಸುಳ್ಳಾಗಿಸಿ, ಆಸ್ಟ್ರೇಲಿಯಾದಲ್ಲಿ ಕನ್ಸರ್ವೇಟಿವ್ ಪಕ್ಷವು ಅಧಿಕಾರಕ್ಕೆ ಮರಳಿದೆ.

ಎಡ ಪಂಥವು ಹಲವು ಹತ್ತು ದೇಶಗಳಲ್ಲಿ ಮರು ಹುಟ್ಟು ಪಡೆಯುವಂತಹ ಸ್ಪೂರ್ತಿ ತುಂಬುವ ಭರವಸೆ ಇತರರಲ್ಲಿ ಮೂಡಲು ಕಾರಣವಾಗಿದ್ದ ಎಡ ಪಕ್ಷಗಳು ಇತ್ತೀಚಿನವರೆಗೆ ಅಧಿಕಾರದಲ್ಲಿದ್ದ ಲ್ಯಾಟಿನ್ ಅಮೇರಿಕಾದಲ್ಲಿ, ಒಂದರ ನಂತರ ಮತ್ತೊಂದು ದೇಶದಲ್ಲಿ ಬಲ ಪಂಥೀಯ ಸರ್ಕಾರಗಳು ಅಧಿಕಾರಕ್ಕೆ ಬಂದಿವೆ. ಇಂತಹ ಬದಲಾವಣೆಗಳ ಪೈಕಿ, ಅತ್ಯಂತ ಮಹತ್ವದ್ದು ಮತ್ತು ಅದೇ ಸಮಯದಲ್ಲಿ ಕುಖ್ಯಾತ ಎನ್ನಬಹುದಾದ ಬದಲಾವಣೆ ಬ್ರೆಜಿಲ್‌ನಲ್ಲಿ ಆಗಿದೆ.

ಅಲ್ಲಿ ಹೊಸ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಜೇರ್ ಬೊಲ್ಸೊಮಾರೊ ಕೆಲ ವರ್ಷಗಳ ಹಿಂದೆ ಬ್ರೆಜಿಲ್‌ನಲ್ಲಿ ಅಧಿಕಾರದಲ್ಲಿದ್ದ ಮಿಲಿಟರಿ ಆಡಳಿತವನ್ನು ಹಾಡಿ ಹೊಗಳಿರುವುದೇ ಅಲ್ಲದೆ, ಮಿಲಿಟರಿಯು ಇನ್ನೂ ಹೆಚ್ಚು ಮಂದಿಯನ್ನು ಕೊಂದು ಹಾಕಿದ್ದರೆ ಒಳ್ಳೆಯದಿತ್ತು ಎಂದು ಹೇಳಿರುವುದು ದಾಖಲಾಗಿದೆ. ಈ ಎಲ್ಲವಕ್ಕೂ ಕಳಶವಿಟ್ಟಂತೆ, ಕಳೆದ ಭಾನುವಾರ ಯೂರೋಪಿಯನ್ ಒಕ್ಕೂಟದ 28ಸದಸ್ಯ ದೇಶಗಳಲ್ಲಿ ಯೂರೊ ಪಾರ್ಲಿಮೆಂಟಿಗೆ ನಡೆದ ಚುನಾವಣೆಗಳ ಫಲಿತಾಂಶವು ಯೂರೋಪಿನಲ್ಲಿ ಗಮನಾರ್ಹ ಸಂಖ್ಯೆಯ ಜನತೆಯ ಒಲವು ಬಲ ಪಂಥದತ್ತ ಸರಿಯುತ್ತಿರುವ ಅಂಶವನ್ನು ಸಾರುತ್ತದೆ.

ಫ್ರಾನ್ಸ್‌ನಲ್ಲಿ ಮುಂಬರುವ ಮಹಾ ಚುನಾವಣೆಯಲ್ಲಿ ಮರೀನ್ ಲೇ ಪೆನ್ ಅವರ ಉಗ್ರ ಬಲಪಂಥೀಯ ಪಕ್ಷವು, ಹಾಲಿ ಅಧ್ಯಕ್ಷ ಎಮ್ಯಾನ್ಯುಅಲ್ ಮೆಕ್ರಾನ್ ಅವರ ನಡು ಪಂಥೀಯ ಪಕ್ಷಗಳ ಮೈತ್ರಿಕೂಟವನ್ನು ಹಿಂದಿಕ್ಕಿ, ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಬಹುದೆಂದು ಈಗ ತೋರುತ್ತದೆ. ಇಟಲಿಯ ಉಪ ಪ್ರಧಾನ ಮಂತ್ರಿ ಮಾತ್ತಿಯೊ ಸಲ್ವಿನಿ ಅವರ ಉಗ್ರ ಬಲಪಂಥೀಯ ಪಕ್ಷವು ಇಟಲಿಯಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮುವುದಷ್ಟೇ ಅಲ್ಲದೆ, ಯೂರೊ ಪಾರ್ಲಿಮೆಂಟಿನಲ್ಲಿ ಜರ್ಮನಿಯ ಛಾನ್ಸೆಲರ್ ಅಂಜೆಲಾ ಮರ್ಕೆಲ್ ಅವರ ಪಕ್ಷವನ್ನು ಹಿಂದಿಕ್ಕಿ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆ. ಮರ್ಕೆಲ್ ಅವರ ಪಕ್ಷವು ಐದು ವರ್ಷಗಳ ಹಿಂದಿನ ಚುನಾವಣೆಯಲ್ಲಿ ಗಳಿಸಿದ್ದಕ್ಕಿಂತ 9% ಕಡಿಮೆ ಮತಗಳಿಸಿದೆ. ಅಷ್ಟೇ ಅಲ್ಲ, ಜರ್ಮನಿಯ ಆಲ್ಟರ್‌ನೆಟೀವ್ ಫಾರ್ ಜರ್ಮನಿ ಎಂಬ ಉಗ್ರ ಬಲಪಂಥೀಯ ಪಕ್ಷವು 10.೫% ಮತ ಹೆಚ್ಚಿಸಿಕೊಂಡಿದೆ. ಹಂಗೆರಿಯಲ್ಲಿ, ಅಧ್ಯಕ್ಷ ವಿಕ್ಟರ್ ಒರ್ಬಾನ್ ಅವರ ಬಲಪಂಥೀಯ ಪಕ್ಷವು ಮತ್ತೊಮ್ಮೆ ಪುನರಾಯ್ಕೆಗೊಳ್ಳುವ ಹಾದಿಯಲ್ಲಿದೆ.

ಮೋದಿಯವರ ಗೆಲುವು ದೇಶದಲ್ಲಿ ಜರುಗಿದ ಅನೇಕ ಬೆಳವಣಿಗೆಗಳಿಗೆ ಸಲ್ಲುತ್ತದೆ ಎಂಬುದು ಸ್ಪಷ್ಟವಿದ್ದರೂ ಸಹ, ಇಡೀ ವಿಶ್ವವೇ ಬಲ ಪಂಥಾಭಿಮುಖವಾಗಿ ದಾಪುಗಾಲು ಹಾಕುತ್ತಿರುವ ಈ ಸನ್ನಿವೇಶವನ್ನು ಮರೆಯಬಾರದು. ಬಲ ಪಂಥದ ಕಡೆಗೆ ಕೊಂಡೊಯ್ಯುವ ಉದ್ದೇಶಪೂರ್ವಕ ಪ್ರಯತ್ನಗಳು ಚಾಲನೆಯಲ್ಲಿರುವ ಈ ಸಂದರ್ಭದಲ್ಲಿ, ಇದು ಹೀಗೆಯೇ ಆಗುತ್ತಿರುವುದು ಏಕೆ? ಎಂಬ ಪ್ರಶ್ನೆಯನ್ನು ನಾವು ಕೇಳಬೇಕಾಗುತ್ತದೆ. ಉದಾರ ಮನೋಭಾವದ ಬೂರ್ಜ್ವಾ ವಿಶ್ಲೇಷಕರು, ಈ ಎಲ್ಲ ದೇಶಗಳ ಪಕ್ಷಗಳು ಮತ್ತು ಚಳವಳಿಗಳ ನಡುವೆ ಗೋಚರಿಸುವ ಒಂದು ಸಮಾನ ಅಂಶವನ್ನು ಕಾಣುವುದರ ಬದಲಾಗಿ, ಈ ವಾಸ್ತವದ ಚಿತ್ರವನ್ನು ತುಂಡರಿಸಿ ವಿಶ್ಲೇಷಿಸುವ ಪ್ರವೃತ್ತಿ ಬೆಳಸಿಕೊಂಡಿದ್ದಾರೆ: ಅವರು ಯೂರೋಪ್ ದೇಶದ ರಾಜಕೀಯ ಪಕ್ಷಗಳನ್ನು ಯೂರೋಪಿಯನ್ ಒಕ್ಕೂಟ ಪರ ಮತ್ತು ಯೂರೋಪಿಯನ್ ಒಕ್ಕೂಟ ವಿರೋಧಿ, ಅಥವಾ, ವಲಸೆ-ಪರ ಅಥವಾ ವಲಸೆ-ವಿರೋಧಿ ಎಂದೇ ವಿಭಜಿಸುತ್ತಾರೆ.

ಅದೇ ರೀತಿಯಲ್ಲಿ, ಬೂರ್ಜ್ವಾ ವಿಶ್ಲೇಷಕರು ಮೋದಿಯವರ ಗೆಲುವನ್ನು ಹಿಂದುತ್ವದೊಂದಿಗೆ ತಳುಕು ಹಾಕಿಕೊಂಡಿರುವ ಒಂದು ವಿದ್ಯಮಾನವಾಗಿ ನೋಡುತ್ತಾರೆಯೇ ಹೊರತು, ಯೂರೋಪಿನಲ್ಲಿ ಆಗುತ್ತಿರುವ ವಿದ್ಯಮಾನಕ್ಕೂ ಮತ್ತು ಭಾರತದ ಈ ವಿದ್ಯಮಾನಕ್ಕೂ ಒಂದಕ್ಕೊಂದು ಸಂಬಂಧವೇ ಇಲ್ಲ ಎಂಬಂತೆಯೇ ನೋಡುತ್ತಾರೆ. ಡೊನಾಲ್ಡ್ ಟ್ರಂಪ್ ಅವರ ಬಲಗೊಳ್ಳುತ್ತಿರುವ ಪುನರಾಯ್ಕೆಯನ್ನೂ ಸಹ ಈ ಬೆಳವಣಿಗೆಗಳಿಂದ ಪ್ರತ್ಯೇಕಿಸಿಯೇ ಕಾಣುತ್ತಾರೆ. ಆದರೆ, ಈ ರೀತಿ ಪ್ರತ್ಯೇಕಿಸಿ ನೋಡುವುದು ಮಾರ್ಕ್ಸ್‌ವಾದಿ ವಿಶ್ಲೇಷಣೆಗೆ ಸಲ್ಲುವಂತದ್ದಲ್ಲ. ಮಾರ್ಕ್ಸ್‌ವಾದಿ ವಿಶ್ಲೇಷಣೆ ಘಟನೆಗಳನ್ನು ಸಮಗ್ರವಾಗಿ ನೋಡುತ್ತದೆ, ಅನಾವರಣಗೊಳ್ಳುತ್ತಿರುವ ಘಟನಾವಳಿಗಳ ನಡುವೆ ಇರುವ ಸಮಾನ ರೂಪ, ಕ್ರಮ ಅಥವಾ ಏರ್ಪಾಡು ಮತ್ತು ಅದರ ವರ್ಗ ವಿನ್ಯಾಸವನ್ನು ಗುರುತಿಸುತ್ತದೆ. ಅಂತಾದರೆ, ಜಗತ್ತಿನಾದ್ಯಂತ ಬಲ ಪಂಥದತ್ತ ಸರಿಯುತ್ತಿರುವುದರ ಬಗ್ಗೆ ಮಾರ್ಕ್ಸ್‌ವಾದಿಗಳು ಏನು ಹೇಳಬಹುದು?

ಇದು ಸ್ಪಷ್ಟವಾಗಿ 2008ರಲ್ಲಿ ಆರಂಭವಾಗಿ ಇನ್ನೂ ಜಾಗತಿಕ ಅರ್ಥವ್ಯವಸ್ಥೆಯನ್ನು ಬಿಗಿದುಕೊಂಡಿರುವ ಆರ್ಥಿಕ ಬಿಕ್ಕಟ್ಟನ್ನು ವ್ಯಕ್ತಪಡಿಸುತ್ತದೆ. ಈ ಬಿಕ್ಕಟ್ಟಿನಿಂದ ಸ್ವಲ್ಪ ಚೇತರಿಕೆಯ ಲಕ್ಷಣಗಳು ಆಗೊಮ್ಮೆ ಈಗೊಮ್ಮೆ ಪ್ರಕಟಗೊಂಡಿವೆ. ಆದರೆ, ಚೇತರಿಕೆಯ ಲಕ್ಷಣಗಳು ಕಾಣಿಸಿಕೊಂಡ ಸ್ವಲ್ಪವೇ ಸಮಯದಲ್ಲಿ ಜಾಗತಿಕ ಅರ್ಥವ್ಯವಸ್ಥೆಯು ಮತ್ತೊಮ್ಮೆ ಬಿಕ್ಕಟ್ಟಿನಲ್ಲಿ ಮುಳುಗುತ್ತಿತ್ತು. ಒಂದು ಪುಟಿಯುವ ರಬ್ಬರ್ ಚೆಂಡಿನ ಉಪಮಾನವು ಜಾಗತಿಕ ಅರ್ಥವ್ಯವಸ್ಥೆಯ ಈ ಪರಿಸ್ಥಿತಿಗೆ ಸೊಗಸಾಗಿ ಹೋಲುತ್ತದೆ: ಚೆಂಡು ನೆಲದಿಂದ ಪುಟಿದ ಕೂಡಲೇ ಚೇತರಿಕೆಯ ಉತ್ಸಾಹ ಏರುತ್ತಿತ್ತು; ಪುಟಿದ ಚೆಂಡು ಮತ್ತೆ ನೆಲಕ್ಕೆ ಬಿದ್ದ ಕೂಡಲೇ ಆ ಉತ್ಸಾಹ ಇಳಿಯುತ್ತಿತ್ತು.

ಇಂತಹ ವಾದದ ಬಗ್ಗೆ ತಕರಾರು ಎತ್ತಬಹುದು. ಈ ತಕರಾರಿನ ಸಮರ್ಥನೆಯಾಗಿ ಅಮೇರಿಕಾದಲ್ಲಿ ನಿರುದ್ಯೋಗದ ದರವು ಹಿಂದಿನ ದಶಕಗಳಿಗಿಂತಲೂ ಕೆಳ ಮಟ್ಟಕ್ಕೆ ಈಗ ಇಳಿದಿದೆ ಎಂದು ಹೇಳಬಹುದು. ಆದರೆ, ಉದ್ಯೋಗದಲ್ಲಿ ಭಾಗವಹಿಸುವಿಕೆಯ ದರವು 2008ರಲ್ಲಿ ಇದ್ದದ್ದಕ್ಕಿಂತಲೂ ಕೆಳಗಿದೆ. ಉದ್ಯೋಗ ಭಾಗವಹಿಸುವಿಕೆಯ ದರವು ಈಗಲೂ 2008ರಲ್ಲಿ ಇದ್ದಷ್ಟೇ ಇದೆ ಎಂದು ಊಹಿಸಿಕೊಂಡರೆ, ಅಮೇರಿಕಾದ ಇಂದಿನ ನಿರುದ್ಯೋಗದ ದರ 8% ಆಗುತ್ತದೆ, ಅಧಿಕೃತ ಅಂಕಿಗಳು ಹೇಳುವ ಹಾಗೆ 4% ಅಲ್ಲ.

ಜಾಗತಿಕ ಅರ್ಥವ್ಯವಸ್ಥೆಯು ಬಿಕ್ಕಟ್ಟಿಗೆ ಒಳಗಾಗಿರುವ ಪರಿಸ್ಥಿತಿಯಲ್ಲಿ ಮತ್ತು ಅದರ ಪರಿಣಾಮವಾಗಿ ನಿರುದ್ಯೋಗವು ಉಲ್ಬಣಗೊಂಡ ಪರಿಸ್ಥಿತಿಯಲ್ಲಿ ಜಗತ್ತಿನಾದ್ಯಂತ ಬಲ ಪಂಥದತ್ತ ಪಲ್ಲಟ ಕಾಣುತ್ತಿದೆ. ಅರ್ಥವ್ಯವಸ್ಥೆಯ ಬಿಕ್ಕಟ್ಟು ಮತ್ತು ನಿರುದ್ಯೋಗದ ಪ್ರಶ್ನೆ ಬಂದಾಗ, ಉದಾರವಾದೀ ಬೂರ್ಜ್ವಾ ಪಕ್ಷಗಳು ಸಾಮಾನ್ಯವಾಗಿ ನಿರಾಕರಣೆಯ ಧೋರಣೆ ತಳೆಯುತ್ತವೆ. ನಿರುದ್ಯೋಗ ಉಂಟಾಗುವುದಕ್ಕೆ ವ್ಯವಸ್ಥೆ ಕಾರಣವಲ್ಲ; ವಲಸಿಗರೇ ಕಾರಣ; ಆದುದರಿಂದ ವಲಸೆಯನ್ನು ತಡೆಯಬೇಕು ಎಂದು ಪ್ರತಿಪಾದಿಸುವ ಬಲ ಪಂಥವು, ಕೊನೆಯ ಪಕ್ಷ, ನಿರುದ್ಯೋಗವು ಉಂಟುಮಾಡುವ ಯಾತನೆಯನ್ನು ಗುರುತಿಸುತ್ತದೆ.

ಯೂರೋಪಿಯನ್ ಒಕ್ಕೂಟ ವ್ಯವಸ್ಥೆಯಲ್ಲಿ, ಅದರ ದುಡಿಮೆಗಾರರು ಒಕ್ಕೂಟದ 28 ಸದಸ್ಯ ದೇಶಗಳಲ್ಲಿ ಯಾವುದೇ ದೇಶಕ್ಕೆ ವಲಸೆ ಹೋಗುವ ಅವಕಾಶವು ಮುಕ್ತವಾಗಿರುವುದರಿಂದ, ಕೆಲವು ಬಲ ಪಂಥೀಯ ಪಕ್ಷಗಳು ಯೂರೋಪಿಯನ್ ಒಕ್ಕೂಟದ ವಿರೋಧಿಗಳೂ ಆಗಿದ್ದಾರೆ. ಆಡಳಿತದಲ್ಲಿರುವ ಮತ್ತು ಅವರಿಗೆ ವಿರೋಧವಿರುವ ಉದಾರವಾದೀ ಬೂರ್ಜ್ವಾ ಪಕ್ಷಗಳು ಬಿಕ್ಕಟ್ಟು ಇದೆಯೆನ್ನುವುದನ್ನೇ ಒಪ್ಪಿಕೊಳ್ಳದ ಪರಿಸ್ಥಿತಿಯಲ್ಲಿ ಮತ್ತು ಎಡ ಪಂಥವು ಈ ಬಿಕ್ಕಟ್ಟಿನಿಂದ ಹೊರಬರುವ ಒಂದು ಪರ್ಯಾಯ ಅಜೆಂಡಾವನ್ನು ಜನತೆಯ ಮುಂದಿಡುವಲ್ಲಿ ನಿಧಾನವಾಗಿರುವ ಪರಿಸ್ಥಿತಿಯಲ್ಲಿ, ಇಂತಹ ಪರಿಸ್ಥಿತಿ ನಿರ್ಮಾಣವಾಗುವುದನ್ನೇ ಕಾಯುತ್ತಿದ್ದ ಬಲ ಪಂಥವು ಕಿಂದರಿಜೋಗಿಯಂತೆ ರಂಗ ಪ್ರವೇಶಿಸಿ ನಿರುದ್ಯೋಗ ಪರಿಹರಿಸುವ ಕಿಂದರಿ ಬಾರಿಸಿತು. ಒಂದು ವಲಸೆ-ವಿರೋಧಿ ಅಜೆಂಡಾವನ್ನು ಜನತೆಯ ಮುಂದಿಡುವ ಮೂಲಕ ಬಲ ಪಂಥವು ತನ್ನ ಚಟುವಟಿಕೆಗಳಿಗೆ ಚಾಲನೆ ಕೊಟ್ಟಿದೆ. ಹೀಗೆ ಜಗತ್ತಿನ ಉದ್ದಗಲದಲ್ಲೂ ಅದರ ಬೆಳವಣಿಗೆಗೆ ಅದು ಬಿಕ್ಕಟ್ಟು ಮತ್ತು ನಿರುದ್ಯೋಗವನ್ನು ಗಮನಕ್ಕೆ ತಗೊಂಡಿರುವುದು ಮತ್ತು ಅಧಿಕಾರಸ್ಥರ ಪರವಾದ ರಾಜಕೀಯ ಪಕ್ಷಗಳು ಗಮನಕ್ಕೆ ತಗೊಂಡಿರದಿರುವುದೇ ಕಾರಣ ಎನ್ನಬಹುದು.

ಹಾಗಾದರೆ, ಭಾರತದಲ್ಲಿನ ಕತೆ ಈ ವಿವರಣೆಯ ಚೌಕಟ್ಟಿಗೆ ಹೊಂದಿಕೊಳ್ಳುತ್ತದೆಯೇ? ಭಾರತದಲ್ಲಿಯೂ ಸಹ ಅಭಿವೃದ್ಧಿ ಅಜೆಂಡಾದ ಮೂಲಕವೇ 2014ರಲ್ಲಿ ಮೋದಿ ಅಧಿಕಾರ ಹಿಡಿದದ್ದು. ಅದಕ್ಕೂ ಮುನ್ನವೇ ಯುಪಿಎ-2 (2009-14) ಅವಧಿಯಲ್ಲಿ ಆರ್ಥಿಕ ಬೆಳವಣಿಗೆ ದರ ಇಳಿಮುಖವಾಗಿತ್ತು. ಹಾಗಾಗಿ, ಪ್ರತಿಯೊಬ್ಬರ ಅದೃಷ್ಟ ಖುಲಾಯಿಸುವ ನವ ಉದಾರವಾದದ ಭರವಸೆ ಮಬ್ಬಾಗಲಾರಂಭಿಸಿತ್ತು. ಜನತೆಗೆ ಕೊಟ್ಟಿದ್ದ ಅಭಿವೃದ್ಧಿ ಅಥವಾ ವಿಕಾಸ ಭರವಸೆಯನ್ನು ಈಡೇರಿಸಲು ಮೋದಿ ಸರ್ಕಾರವು ಅಧಿಕಾರದ ಅವಧಿಯಲ್ಲಿ(2014-19) ಅಕ್ಷರಷಃ ಏನನ್ನೂ ಮಾಡಲಿಲ್ಲ.

ಆ ಕಾರಣದಿಂದಾಗಿಯೇ ಈಗ ತಾನೇ ಮುಗಿದ ಚುನಾವಣೆಯಲ್ಲಿ ಅಭಿವೃದ್ಧಿ ಅಥವಾ ವಿಕಾಸದ ಬಗ್ಗೆ ಮೋದಿಯವರು ಒಂದೇ ಒಂದು ಶಬ್ದವನ್ನೂ ಉಚ್ಛರಿಸಲಿಲ್ಲ. ಆದರೆ, ಭಯೋತ್ಪಾದನೆ ವಿರುದ್ಧ ಹೋರಾಡುವೆ, ರಾಷ್ಟ್ರವನ್ನು ರಕ್ಷಿಸುವೆ, ಪಾಕೀಸ್ತಾನಕ್ಕೆ ಪಾಠ ಕಲಿಸುವೆ ಮತ್ತು ಹಿಂದುತ್ವ ಪ್ರತಿಷ್ಠಾಪನೆಯಂತಹ ಮಾತುಗಳ ಮೂಲಕ ಇಡೀ ಚರ್ಚೆಯ ದಿಕ್ಕನ್ನೇ ಮೋದಿ ಬದಲಿಸಿದರು. ಈ ತಂತ್ರಗಾರಿಕೆಯ ಮಾತುಗಳ ಮೂಲಕ, ಅಧಿಕಾರದ ಅವಧಿಯಲ್ಲಿ ಅಭಿವೃದ್ಧಿ ಸಾಧಿಸಲು ತಮ್ಮ ಸರ್ಕಾರ ಮಾಡಿದ್ದೇನು ಎಂಬುದರ ಕುರಿತು ಎದುರಾಗುವ ಇರುಸು ಮುರುಸಿನ ಪ್ರಶ್ನೆಗಳನ್ನು ನಿರಾಯಾಸವಾಗಿ ತಪ್ಪಿಸಿಕೊಂಡರು. ಅದರಿಂದ ಅವರಿಗೆ ಭರ್ಜರಿ ಅನುಕೂಲವೇ ಆಯ್ತು.

ನವ ಉದಾರವಾದವನ್ನು ಪ್ರತಿನಿಧಿಸುವ ಕಾಂಗ್ರೆಸ್‌ನಂತಹ ಒಂದು ಪಕ್ಷದಿಂದ ಬಿಜೆಪಿಯಂತಹ ಒಂದು ಬಲ ಪಂಥೀಯ ಪಕ್ಷದತ್ತ ಪಲ್ಲಟವು ಸಾಧ್ಯವಾಗಿರುವುದು ನವ ಉದಾರವಾದದ ಬಿಕ್ಕಟ್ಟಿನಿಂದಾಗಿಯೇ ಎಂಬ ಸಂಗತಿಯಂತೂ ಉಳಿದೇ ಉಳಿಯುತ್ತದೆ. ನವ ಉದಾರವಾದವು ಅಭಿವೃದ್ಧಿ ತರುತ್ತದೆ ಎಂಬುದಾಗಿ ಸೋಗುಹಾಕುವುದು ಕಾಗ್ರೆಸ್ ಪಕ್ಷಕ್ಕೆ ಇನ್ನೆಷ್ಟೂ ಸಾಧ್ಯವಿರಲಿಲ್ಲ. ಬಿಜೆಪಿಯಂತೂ ಅಭಿವೃದ್ಧಿಯ ಬಗ್ಗೆ ಮಾತಾಡಲೇ ಇಲ್ಲ. ಆದರೆ, ಕಥನ-ಪ್ರವಚನದ ದಿಕ್ಕನ್ನೇ ಬದಲಿಸಿತು. ಅದು ಕಾರ್ಪೊರೇಟ್-ಹಣಕಾಸು ಕುಳಗಳಿಗೆ ಹಿಡಿಸಿತು ಕೂಡ (ಅದೆಷ್ಟು ಅಂದರೆ, ಬಿಜೆಪಿ ಗೆಲ್ಲುತ್ತದೆಂದು ಎಕ್ಸಿಟ್ ಪೋಲ್‌ಗಳು ಭವಿಷ್ಯ ನುಡಿದ ಕೂಡಲೇ ಷೇರು ಪೇಟೆ ಸೂಚ್ಯಂಕ ಸರ್ರನೆ ಏರಿತು).

ಬದಲಾದ ಇಂತಹ ಸಂವಾದ-ಕಥನಗಳ ಪ್ರಭಾವ ತಾತ್ಕಾಲಿಕ. ನವ ಉದಾರವಾದವು ಸಿಕ್ಕಿಹಾಕಿಕೊಂಡಿರುವ ಬಿಕ್ಕಟ್ಟಿನಿಂದ ಹೊರಬರುವುದು ಹೇಗೆ ಎಂಬುದರ ಬಗ್ಗೆ ಯಾವ ಸುಳಿವೂ ಕಾಂಗ್ರೆಸ್‌ಗೂ ಇಲ್ಲ, ಬಿಜೆಪಿಗೂ ಇಲ್ಲ. ಆದ್ದರಿಂದ, ಕೋಟ್ಯಂತರ ನಿರುದ್ಯೋಗಿಗಳಿಗೆ ಅವರು ಉದ್ಯೋಗ ಒದಗಿಸಲಾರರು. ಹಾಗೆ ಹೇಳುವುದಾದರೆ, ಕಾಂಗ್ರೆಸ್ ಪಕ್ಷದ ಕೆಲವರಿಗೆ ನವ ಉದಾರವಾದದ ಹಾದಿಯಲ್ಲಿ ಮುಂದೆ ಹೋಗುವುದು ಅದೆಷ್ಟು ಕಷ್ಟ ಎಂಬುದರ ಅರಿವಿತ್ತು. ಹಾಗಾಗಿಯೇ, ಕಾಂಗ್ರೆಸ್ ಪಕ್ಷವು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಐದು ಕೋಟಿ ಕಡು ಬಡ ಕುಟುಂಬಗಳಿಗೆ ವಾರ್ಷಿಕ 72,000 ರೂ ಹಣ ವರ್ಗಾಯಿಸುವ ನ್ಯಾಯ ಯೋಜನೆಯ ಘೋಷಣೆ ಕೊಟ್ಟಿತ್ತು. ಮಾಮೂಲು ಪರಿಸ್ಥಿತಿಯಲ್ಲಿ ಸಾಕಷ್ಟು ಉತ್ಸಾಹ ತುಂಬುವ ಸಾಧ್ಯತೆ ಹೊಂದಿದ್ದ ಮತ್ತು ಪಕ್ಷದ ಪಾಲಿಗೆ ಅಧಿಕಾರ ತಂದುಕೊಡುವಂತಹ ಒಂದು ಯೋಜನೆಯೇ ಠುಸ್ ಪಟಾಕಿಯಂತಾಯಿತು. ಏಕೆಂದರೆ, ಅದಕ್ಕೆ ಬೇಕಾಗುವ ಹಣ ಯಾವ ಮೂಲದಿಂದ ಬರುತ್ತದೆ ಎಂಬುದನ್ನು ಕಾಂಗ್ರೆಸ್ ಪಕ್ಷವು ಹೇಳದೇ ಇದ್ದುದರಿಂದ ಅದು ಜನರ ವಿಶ್ವಾಸ ಗಳಿಸಲಿಲ್ಲ. ಇದೊಂದು ಚುನಾವಣಾ ಭರವಸೆ, ಚುನಾವಣೆಯ ಮರು ದಿನವೇ ಅದನ್ನು ಮುರಿಯಲಾಗುತ್ತದೆ ಎಂದೇ ಜನ ಸಹಜವಾಗಿ ಭಾವಿಸಿದರು.

ಅರ್ಥವ್ಯವಸ್ಥೆಯನ್ನು ಮುನ್ನೆಡೆಸುವುದು ಹೇಗೆ ಎಂಬುದರ ಬಗ್ಗೆ ಮಧ್ಯಮಾರ್ಗಿ, ಉದಾರವಾದೀ ಬೂರ್ಜ್ವಾ ಪಕ್ಷವಾದ ಕಾಂಗ್ರೆಸ್‌ಗೆ ಒಂದು ಸ್ಪಷ್ಟ ಕಲ್ಪನೆಯೇ ಇಲ್ಲ. ಆ ಪಕ್ಷಕ್ಕೆ ಸರಿಸಮನಾಗಿ ಬಿಜೆಪಿಗೂ ಅದರ ಬಗ್ಗೆ ಯಾವುದೇ ಸುಳಿವೂ ಇಲ್ಲ. ಬಿಜೆಪಿಯ ಅತಿರೇಕದ ರಾಷ್ಟ್ರವಾದವು ಬಹಳ ಬೇಗನೇ ತೆಳುವಾಗುತ್ತದೆ. ಹಸಿವು ಮತ್ತು ನಿರುದ್ಯೋಗದಿಂದ ನರಳುತ್ತಿರುವ ಜನತೆಯನ್ನು ಗಾಳಕ್ಕೆ ಸಿಕ್ಕಿಸಿದ ಹುಳ ತಿನ್ನುವ ಮೀನುಗಳೆಂದು ಭಾವಿಸಿ, ಅವರಿಗೆ ದಿನನಿತ್ಯವೂ ಪಾಕೀಸ್ತಾನ-ವಿರೋಧೀ ಮತ್ತು ಮುಸ್ಲಿಂ-ವಿರೋಧೀ ಮಾತುಗಳನ್ನೇ ಉಣಬಡಿಸುವ ಆಟ ಬಹಳ ಕಾಲ ನಡೆಯುವುದಿಲ್ಲ. ಅಲ್ಲದೆ, ಆರ್ಥಿಕ ಪರಿಸ್ಥಿತಿ ನಿಂತಲ್ಲೇ ನಿಶ್ಚಲವಾಗಿ ಉಳಿಯುವುದಿಲ್ಲ.

ಮೋದಿ ಸರ್ಕಾರವು ಆರ್ಥಿಕ ವಲಯದತ್ತ ತಲೆ ಹಾಕಿ ಮಲಗದೇ ಇದ್ದರೂ ಸಹ, ಅರ್ಥವ್ಯವಸ್ಥೆಯು ಮೋದಿಯವರನ್ನು ಅವರಷ್ಟಕ್ಕೆ ಅವರು ಇರಲು ಬಿಡುವುದಿಲ್ಲ, ಬೆನ್ನು ಹತ್ತಿದ ಬೇತಾಳನಂತೆ ಕಾಡುತ್ತದೆ. ಕಾಲಕ್ರಮೇಣ, ಆರ್ಥಿಕ ಚಟುವಟಿಕೆಗಳ ಹಿಂಜರಿತ ಮತ್ತು ವಿದೇಶ ವ್ಯಾಪಾರದ ಬಾಕಿ ಚುಕ್ತಾ ಮಾಡುವುದೇ ಒಂದು ಸಮಸ್ಯೆಯಾದಾಗ, ಆರ್ಥಿಕ ಬಿಕ್ಕಟ್ಟು ಉಲ್ಬಣಗೊಳ್ಳುತ್ತದೆ. ಆಗ, ಉತ್ತರ ಕೊಡಲು ಮೋದಿ ಸರ್ಕಾರದ ಬಳಿ ಹೇಳಿಕೊಳ್ಳುವ ಸಮರ್ಥನೆಗಳಿರುವುದಿಲ್ಲ. ಮತ್ತು, ಬಿಕ್ಕಟ್ಟಿನಿಂದ ಅರ್ಥವ್ಯವಸ್ಥೆಯನ್ನು ಪಾರುಮಾಡುವುದು ಆ ವೇಳೆಗಾಗಲೇ ಇನ್ನೂ ಹೆಚ್ಚು ಕಷ್ಟಕರವಾಗುತ್ತದೆ.

ಜನತೆಯ ದಿನನಿತ್ಯದ ಬದುಕಿನ ಜ್ವಲಂತ ಸಮಸ್ಯೆಗಳನ್ನು ಪರಿಹರಿಸಲು ನವ ಉದಾರವಾದದ ಎರಡೂ ಪಡೆಗಳು (ಕಾಂಗ್ರೆಸ್ ಮತ್ತು ಬಿಜೆಪಿ) ಅಸಮರ್ಥವಾಗಿವೆ. ಈ ಪರಿಸ್ಥಿತಿಯಲ್ಲಿ, ಅರ್ಥವ್ಯವಸ್ಥೆಯನ್ನು ಬಿಕ್ಕಟ್ಟಿನಿಂದ ಹೊರ ಬರುವ ಮಾರ್ಗದರ್ಶನವನ್ನು ಎಡ ಪಂಥ ಮಾತ್ರ ಒದಗಿಸಬಲ್ಲದು. ಎಡ ಪಂಥದ ಈ ಮಾರ್ಗವು ನಮ್ಮನ್ನು ಬಂಡವಾಳಶಾಹಿಯಿಂದ ಆಚೆಗೆ ಕೊಂಡೊಯ್ಯಬಲ್ಲದು. ನವ ಉದಾರ ಬಂಡವಾಳಶಾಹಿ ದಿಗಂತದಿಂದ ಆಚೆಗಿನ ಕಣ್ಣೋಟ ಹೊಂದಿರುವುದು ಎಡ ಪಂಥ ಮಾತ್ರ. ಆದ್ದರಿಂದ, ಎಡ ಪರ್ಯಾಯ ಭಾರತಕ್ಕೆ ಮಾತ್ರವಲ್ಲ, ಇಡೀ ವಿಶ್ವಕ್ಕೇ ಸಲ್ಲುತ್ತದೆ.

ಸಂಕ್ಷಿಪ್ತವಾಗಿ, ನಾವೀಗ ಒಂದು ಚಾರಿತ್ರಿಕ ಪರ್ವಕಾಲವನ್ನು ನೋಡುತ್ತಿದ್ದೇವೆ. ಈ ಸನ್ನಿವೇಶದಲ್ಲಿ, ಬಲಪಂಥವು ಒಂದು ಹುಸಿ ಅಥವಾ ವಿಭಜನಕಾರೀ ಅಜೆಂಡಾದ ಸುತ್ತ ಜನರನ್ನು ಅಲ್ಪ ಕಾಲದಲ್ಲೇ ಅಣಿನೆರೆಸುವಲ್ಲಿ ಎಷ್ಡೇ ಯಶಸ್ವಿಯಾಗಿದ್ದರೂ ಸಹ, ನಿರುದ್ಯೋಗ ಮತ್ತು ಹತಾಶೆಯ ಪರಿಸ್ಥಿತಿಗೆ ಒಳಗಾಗಿರುವ ಆ ಜನರನ್ನು ಆ ಪರಿಸ್ಥಿತಿಯಿಂದ ಹೊರತರುವ ಮಾರ್ಗ ತೋರಲು ಬಲ ಪಂಥವು ಮೂಲಭೂತವಾಗಿ ಅಸಮರ್ಥವಾಗಿದೆ.

ಒಂದು ರಾಷ್ಟ್ರದ ಚರಿತ್ರೆಯಲ್ಲಿ, ಅಸ್ತಿತ್ವದಲ್ಲಿರುವ ವ್ಯವಸ್ಥೆಯು ಸ್ಥಿರವಾಗಿ ಮತ್ತು ದೀರ್ಘವಾಗಿ ಬಾಳುವ ಸಾಮರ್ಥ್ಯವುಳ್ಳದ್ದೆಂದು ತೋರುವ ಕ್ಷಣಗಳಿರುತ್ತವೆ. ಆದರೆ, ಇವೆಲ್ಲವೂ ಕ್ಷಿಪ್ರವಾಗಿ ಬದಲಾಗುತ್ತವೆ, ಹಿಂದಿನಂತೆಯೆ ಸಾಗುವುದು ಇನ್ನು ಸಾಧ್ಯವಿಲ್ಲವೆಂಬ ಪರಿಸ್ಥಿತಿಯಲ್ಲಿ ಹೊಸ ಕ್ಷಣಗಳು ಕಾಣಿಸಿಕೊಳ್ಳುತ್ತವೆ. ಅಂತಹ ಒಂದು ಕ್ಷಣ ಬಂಡವಾಳಶಾಹಿಗೆ ಈಗ ಬಂದಿದೆ, ಭಾರತದಲ್ಲಿ ಮಾತ್ರವಲ್ಲ ವಿಶ್ವದ ಎಲ್ಲೆಡೆಯಲ್ಲೂ. ಭಾರತದಲ್ಲಿ ಮತ್ತು ಬೇರೆ ಹಲವು ದೇಶಗಳಲ್ಲಿ ಬಲಪಂಥವು ಎಷ್ಡೇ ಚುನಾವಣಾ ಯಶಸ್ಸು ಗಳಿಸಿದರೂ, ಅದು ಈ ಮೂಲಭೂತ ಅಂಶವನ್ನು ಮಾರ್ಪಡಿಸಲಾರದು.

ಪ್ರೊ.ಪ್ರಭಾತ್ ಪಟ್ನಾಯಕ್
ಅನು: ಕೆ.ಎಂ.ನಾಗರಾಜ್

ಕೃಪೆ : ಜನಶಕ್ತಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಬೆಂಬಲ ಬೆಲೆ | ಮೆಕ್ಕೆಜೋಳ ಖರೀದಿ ಪ್ರಕ್ರಿಯೆ ಪ್ರಾರಂಭ: ಡಿಸಿ ಗಂಗಾಧರಸ್ವಾಮಿ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ರೈತರು ಬೆಳೆದ ಮೆಕ್ಕೆಜೋಳವನ್ನು ಬುಧುವಾರದಿಂದ ರೈತರಿಂದ ಖರೀದಿಸಲಾಗುವುದು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ರವರು ತಿಳಿಸಿದರು.

ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮೆಕ್ಕೆಜೋಳ ಖರೀದಿ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರತಿ ರೈತರಿಂದ ಎಕರೆಗೆ 12 ಕ್ವಿಂಟಾಲ್ ಹಾಗೂ ಗರಿಷ್ಠ 50 ಕ್ವಿಂಟಾಲ್‌ನಂತೆ ಮೆಕ್ಕೆಜೋಳ ಉತ್ಪನ್ನವನ್ನು ಬೆಂಬಲ ಬೆಲೆ ದರ ಪ್ರತಿ ಕ್ವಿಂಟಾಲ್‌ಗೆ ರೂ.2400.00 ರಂತೆ ಖರೀದಿಸಲಾಗುವುದು. ಮೆಕ್ಕೆಜೋಳ ಖರೀದಿದಾರರು ಡಿಸ್ಟಿಲರಿ ಮಾಲೀಕರಿಂದ ಮಾರಾಟದ ಮೊತ್ತ ಪಡೆದ ದಿನಾಂಕದಿಂದ ಮೂರು ದಿನಗಳಲ್ಲಿ ಸಂಬಂಧಪಟ್ಟ ರೈತರಿಗೆ ಡಿಬಿಟಿ ಮೂಲಕ ಪಾವತಿಸಲಾಗುವುದು. ಖರೀದಿ ಪ್ರಕ್ರಿಯೆಗೆ ಎನ್‌ಇಎಂಎಲ್ (NEML) ಸಂಸ್ಥೆಯ ತಂತ್ರಾಂಶ ಅಳವಡಿಸಿಕೊಂಡು ಸರ್ಕಾರದ ಪ್ರೂಟ್ಸ್ ಪೊರ್ಟಲ್(FRUITS Portal) ಮತ್ತು ಡಿಬಿಟಿ ಸಂಯೋಜನೆಯೊಂದಿಗೆ ರೈತರ ನೊಂದಣಿ ಕಾರ್ಯ ನಿರ್ವಹಿಸಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮವಹಿಸುವಂತೆ ತಿಳಿಸಿದರು.

ಜಿಲ್ಲೆಯಲ್ಲಿ 730 ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಸಲು ಗುರಿಯನ್ನು ಹೊಂದಲಾಗಿದೆ. ರೈತರು ಮೆಕ್ಕೆಜೋಳ ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಿ ಇದರ ಪ್ರಯೋಜನೆ ಪಡೆದುಕೊಳ್ಳುವಂತೆ ತಿಳಿಸಿದರು. ಸಹಕಾರ ಇಲಾಖೆ ಮತ್ತು ಎಪಿಎಂಸಿ ಅಧಿಕಾರಿಗಳು ಮೆಕ್ಕೆಜೋಳ ಖರೀದಿ ಕುರಿತು ಮಾಹಿತಿಯುಳ್ಳ ಕರಪತ್ರಗಳನ್ನು ಮುದ್ರಿಸಿ ರೈತರಿಗೆ ನೀಡಬೇಕು. ಮೆಕ್ಕೆಜೋಳ ಖರೀದಿಯಲ್ಲಿ ಯಾವುದೇ ಗೊಂದಲ ಆಗದಂತೆ ಅಧಿಕಾರಿಗಳು ಕ್ರಮವಹಿಸುವಂತೆ ತಿಳಿಸಿದರು.

ಸಭೆಯಲ್ಲಿ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಮಧುಸೂಧನ್, ಸಹಕಾರ ಇಲಾಖೆ ಉಪನಿಬಂಧಕ ಮಧು ಶ್ರೀನಿವಾಸ್, ಅಬಕಾರಿ ಇಲಾಖೆಯ ಉಪ ಆಯುಕ್ತ ಜುನೈದ್ , ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಜಿಯಾವುಲ್ಲಾ, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ರಾಘವೇಂದ್ರ ಪ್ರಸಾದ್ ಹಾಗೂ ಇತರರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ

Published

on

ಸುದ್ದಿದಿನ,ದಾವಣಗೆರೆ: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಪ್ರಸ್ತಾವನೆ ಎನ್ಎಚ್ ಎಂ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದ್ದು, ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಮಧ್ಯಸ್ತಿಕೆ ವಹಿಸಿ ಸರಿಪಡಿಸಲು ಶಿಪಾರಸ್ಸು ಮಾಡಬೇಕು. ಈ ಬಗ್ಗೆ ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ಪ್ರಸ್ತಾಪ ಮಾಡಬೇಕೆಂದು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಪದಾಧಿಕಾರಿಗಳು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.

ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಸುಮಾರು 30 ಸಾವಿರ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಈ ಸಿಬ್ಬಂದಿಗಳಿಗೆ ನೇಮಕಾತಿ ಮತ್ತು ವರ್ಗಾವಣೆ ಒಳಗೊಂಡು ಮಾನವ ಸಂಪನ್ಮೂಲ (HR Policy) ನೀತಿಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಕಳೆದ ಅ.28ರಂದು ಆದೇಶ ಹೊರಡಿಸಿ, ಅಭಿಯಾನ ನಿರ್ದೇಶಕರು, ಮುಖ್ಯ ಆಡಳಿತಾಧಿಕಾರಿಗಳು ಹಾಗೂ ಮುಖ್ಯ ಆರ್ಥಿಕ ಅಧಿಕಾರಿಗಳಿಗೆ ವರದಿ ನೀಡಲು ಸೂಚನೆ ನೀಡಿದ್ದಾರೆ.

ಈ ವಿಷಯದ ಬಗ್ಗೆ ಈಗಾಗಲೇ ಅಭಿಯಾನ ನಿರ್ದೇಶಕರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಗುತ್ತಿಗೆ ನೌಕರರ ವೃಂದವಾರು ಸಂಘಟನೆಗಳ ಅಭಿಪ್ರಾಯ ನೀಡಲಾಗಿದೆ. ಎಲ್ಲಾ ಸಂಘಟನೆಗಳು ಈ ಒಂದು ಹೊಸ ಸಿಬ್ಬಂದಿಗಳಿಗೆ ಮಾರಕ ಇರುವಂತಹ ಮಾನವ ಸಂಪನ್ಮೂಲ ನೀತಿಯನ್ನು ಜಾರಿಗೊಳಿಸಲು ವಿರೋಧ ವ್ಯಕ್ತಪಡಿಸಿವೆ.

ಸರ್ಕಾರ ಈಗ ನೀಡುತ್ತಿರುವ ಕಡಿಮೆ ವೇತನದಲ್ಲಿ ಈ ಸಿಬ್ಬಂದಿಗಳು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಈ ಸಿಬ್ಬಂದಿಗಳಿಗೆ ಖಾಯಂ ಸಿಬ್ಬಂದಿಗಳಂತೆ ಕಡ್ಡಾಯ ವರ್ಗಾವಣೆ ಮಾಡಿದರೆ ಈ ಕಡಿಮೆ ವೇತನದಲ್ಲಿ ಕುಟುಂಬ ನಿರ್ವಹಣೆ ಹೇಗೆ ಸಾಧ್ಯ? ಮೂರು ಮೂರು ತಿಂಗಳಿಗೊಮ್ಮೆ ವೇತನ ಆಗುತ್ತಿದ್ದು ಬೇರೆ ಜಿಲ್ಲೆಗೆ ಕಡ್ಡಾಯ ವರ್ಗಾವಣೆ ಮಾಡಿದ್ದರೆ ಮನೆ ಬಾಡಿಗೆ ಕಟ್ಟಲಾಗದೇ ಬೀದಿಗೆ ಬರಬೇಕಿದೆ ಎಂದು ಶಾಸಕರಿಗೆ ಮನವರಿಕೆ ಮಾಡಿದರು.

ಒಂದು ವೇಳೆ ಇಂತಹ ಕ್ರಮ ಕೈಗೊಂಡರೆ ಖಾಯಂ ಸಿಬ್ಬಂದಿಗಳಿಗೆ ನೀಡಿದಂತೆ ಎಲ್ಲಾ ಸೌಕರ್ಯ ಹಾಗೂ ಖಾಯಂ ಸೇರಿದಂತೆ ವೇತನ ಹೆಚ್ಚಳ ಮಾಡಿ, ಟಿಎ, ಡಿಎ, ಎಚ್ ಆರ್ ಎ ನೀಡಿ ಇಂತಹ ಆದೇಶ ಮಾಡಬೇಕು. ಸಿಬ್ಬಂದಿಗಳಿಗೆ ಬೆನ್ನು ತಟ್ಟಿ ಕೆಲಸ ಮಾಡಿಸಿಕೊಳ್ಳಬೇಕು.ಅದು ಬಿಟ್ಟು ಹೊಟ್ಟೆ ಮೇಲೆ ಹೊಡೆಯುವಂತಹ ಯಾವುದೇ ಆದೇಶ ಹೊರಡಿಸುವುದು ಎಷ್ಟು ಸರಿ ಎಂದು ಸಿಬ್ಬಂದಿಗಳು ಪ್ರಶ್ನೆ ಮಾಡಿದ್ದಾರೆ.

ಪ್ರಧಾನ ಕಾರ್ಯದರ್ಶಿಗಳ ಈ ಒಂದು ಪತ್ರ 30 ಸಾವಿರ ನೌಕರರಿಗೆ ಆತಂಕ ಸೃಷ್ಟಿ ಮಾಡಿದೆ. ಇದು ಈ ವರ್ಷದಲ್ಲಿ ಮೊದಲ ಸಾರಿ ಅಲ್ಲದೆ ಇದೇ ವರ್ಷ ಸಾಕಷ್ಟು ಮಾನಸಿಕ ಒತ್ತಡ ಹೆಚ್ಚಳವಾಗಿರುವ ಅನೇಕ ಆದೇಶ ಮಾಡಿದ್ದಾರೆ.

ಪ್ರತಿ ವರ್ಷ ಏಪ್ರಿಲ್ ಒಂದನೇ ತಾರೀಖು ಎಲ್ಲಾ ನೌಕರರಿಗೆ ಒಂದು ದಿವಸ ವಿರಾಮ ನೀಡಿ ಮುಂದುವರೆಸುತ್ತಿದ್ದು 2005 ರಿಂದ ಸುಮಾರು 20 ವರ್ಷಗಳವರೆಗೆ ಈ ಪದ್ಧತಿ ನಡೆದುಕೊಂಡು ಬಂದಿದೆ. ಆದರೆ ಈ ವರ್ಷ ಏಕಾಏಕಿ ಕೇವಲ 15 ದಿವಸ ವಿಸ್ತರಣೆ ನೀಡಿ, ತದನಂತರ ಒಂದು ತಿಂಗಳು ವಿಸ್ತರಣೆ ನೀಡಿ ಆಮೇಲೆ ಮೂರು ತಿಂಗಳ ವಿಸ್ತರಣೆ ನೀಡಿ ತದನಂತರ ಸಿಬ್ಬಂದಿಗಳಿಗೆ ಕರ್ತವ್ಯದಿಂದ ವಿಮುಕ್ತಿಗೊಳಿಸುವ ಆದೇಶ ನೀಡಿದ್ದು ನಮ್ಮ ಸಂಘಟನೆಯಿಂದ ಕೋರ್ಟ್ ನಲ್ಲಿ ದಾವೆ ಹೂಡಿದ್ದು ಇದೆ, ಕಳೆದ 8 ತಿಂಗಳಲ್ಲಿ ವೇತನ ಪಡೆಯಲು ಸರಿಯಾಗಿ ಅನುದಾನ ಬಿಡುಗಡೆ ಆಗದೇ ಸಿಬ್ಬಂದಿಗಳು ಪರದಾಡುವಂತಾಗಿದೆ. ಈ ಬಗ್ಗೆ ಸದನದಲ್ಲಿ ಗಮನ ಸೆಳೆದು ನಮಗೆ ನ್ಯಾಯ ಕೊಡಿಸಬೇಕೆಂದು ಶಾಸಕರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿ ಡಾ.ಮಂಜುನಾಥ್, ಸುನೀಲ್, ಸುರೇಶ್, ಮಹಾಲಿಂಗಪ್ಪ, ಬಸವರಾಜ್, ದೊಡ್ಡಮನಿ, ಡಾ.ರೇಣುಕಾ, ಇನ್ನಿತರರಿದ್ದರು‌.”

  • ಪ್ರಧಾನ ಕಾರ್ಯದರ್ಶಿಗಳ ಆದೇಶ ರದ್ದುಗೊಳಿಸಲು ಎನ್ ಎಚ್ ಎಂ ಸಿಬ್ಬಂದಿಗಳು ಆಗ್ರಹ
  • ಈ ಬಗ್ಗೆ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಚರ್ಚಿಸಲು ಶಾಸಕ ಕೆ.ಎಸ್.ಬಸವಂತಪ್ಪಗೆ ಸಿಬ್ಬಂದಿಗಳ ಮನವಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಜಿಲ್ಲಾ ಪಂಚಾಯಿತಿ ಸಿ.ಇ.ಒ ಗಿತ್ತೆ ಮಾಧವ್ ವಿಠ್ಠಲ್ ರಾವ್ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ:2023-24ನೇ ಸಾಲಿನಲ್ಲಿ ಚನ್ನಗಿರಿ ತಾಲ್ಲೂಕಿನಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ತನಿಖೆಗೆ ಒಳಪಡಿಸುವಂತೆ ಕೋರಿ ಅರ್ಜಿ ಸಲ್ಲಿಸಿ 5 ತಿಂಗಳು ಕಳೆದರೂ ಯಾವುದೇ ತನಿಖೆ ನಡೆಸದೆ ನಿರ್ಲಕ್ಷ್ಯ ತೋರಿದ ದಾವಣಗೆರೆ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಗಿತ್ತೆ ಮಾಧವ್ ವಿಠ್ಠಲ್ ರಾವ್, ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳೇಶ್ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿಗೆ 2023-24ನೇ ಸಾಲಿನಲ್ಲಿ ಉಂಟಾದ ಮಳೆಯ ಅಭಾವ ಮತ್ತು ಬರದ ಕಾರಣದಿಂದ ಕೋಟ್ಯಾಂತರ ರೂಪಾಯಿಗಳನ್ನು ಕುಡಿಯುವ ನೀರಿಗಾಗಿ ಸರ್ಕಾರ ಬಿಡುಗಡೆ ಮಾಡಿರುತ್ತದೆ. ಆದರೆ ಕೆಲವು ಅಧಿಕಾರಿಗಳು ತುರ್ತು ಕುಡಿಯುವ ನೀರಿನ ಅನುದಾನವನ್ನು ದುರುಪಯೋಗಪಡಿಸಿಕೊಂಡ ಮಾಹಿತಿ ತಿಳಿದು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ, ಉಪ ವಿಭಾಗ, ಚನ್ನಗಿರಿ ಇವರಿಂದ ಮಾಹಿತಿಹಕ್ಕು ಅಡಿಯಲ್ಲಿ ದಾಖಲೆ ಪಡೆಯಲಾಗಿದೆ.

ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಸಾಕಷ್ಟು ಅವ್ಯವಹಾರ ನಡೆದಿರುವುದು ಕಂಡುಬಂದ ಕಾರಣ ಸೂಕ್ತ ದಾಖಲೆಗಳೊಂದಿಗೆ ದಿನಾಂಕ: 05-07-2025 ರಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯಿತಿ, ದಾವಣಗೆರೆ ಇವರಿಗೆ ದೂರು ನೀಡಿ, ತನಿಖೆಗೆ ಒಳಪಡಿಸುವಂತೆ ಕೋರಿದ್ದರು. ದೂರು ನೀಡಿ 3 ತಿಂಗಳು ಕಳೆದರೂ ದೂರು ಅರ್ಜಿಗೆ ಸಂಬಂಧಿಸಿದಂತೆ ತನಿಖೆಯನ್ನು ಕೈಗೊಂಡ ಬಗ್ಗೆ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ದಿನಾಂಕ: 29-10-2025 ರಂದು ಜ್ಞಾಪನವನ್ನು ಸಹ ನೀಡಲಾಗಿತ್ತು.

ಆದರೆ ನಾವು ಜ್ಞಾಪನ ನೀಡಿ ಒಂದು ತಿಂಗಳು ಕಳೆದರೂ ಯಾವುದೇ ತನಿಖೆ ನಡೆಸದೆ ನಿರ್ಲಕ್ಷ್ಯ ತೋರಿದ ದಾವಣಗೆರೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಗಿತ್ತೆ ಮಾಧವ್ ವಿಠ್ಠಲ್ ರಾವ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ವಕೀಲ ಡಾ.ಕೆ.ಎ.ಓಬಳೇಶ್ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ4 hours ago

ಅಂಚೆ ಇಲಾಖೆಯಿಂದ ಸೆಲ್ಪ್ ಬುಕ್ಕಿಂಗ್ ಸೌಲಭ್ಯ

ಸುದ್ದಿದಿನ,ದಾವಣಗೆರೆ:ಭಾರತೀಯ ಅಂಚೆ ಇಲಾಖೆಯಿಂದ ಸೆಲ್ಪ್ ಬುಕ್ಕಿಂಗ್ ಹೊಸ ಸೌಲಭ್ಯವನ್ನು ಆಯೋಜಿಸಲಾಗಿದೆ. ಈ ಸೌಲಭ್ಯದಿಂದ ನಾಗರಿಕರು ತಮ್ಮ ಮೊಬೈಲ್ ಅಥವಾ ಕಂಪ್ಯೂಟರ್ ಬಳಸಿ ಸ್ಪೀಡ್ ಪೊಸ್ಟ್ , ಪಾರ್ಸಲ್...

ದಿನದ ಸುದ್ದಿ2 days ago

ಪತ್ರಿಕೋದ್ಯಮ ಪದವೀಧರರಿಗೆ ಸಿಹಿ ಸುದ್ದಿ | ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ತರಬೇತಿ ; ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ದಾವಣಗೆರೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಹಿರಿಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ಮಾಧ್ಯಮ ಕ್ಷೇತ್ರದಲ್ಲಿ ಮತ್ತು ಮಾಧ್ಯಮ ಚಟುವಟಿಕೆಗಳ...

ದಿನದ ಸುದ್ದಿ2 days ago

ಬೆಂಬಲ ಬೆಲೆ | ಮೆಕ್ಕೆಜೋಳ ಖರೀದಿ ಪ್ರಕ್ರಿಯೆ ಪ್ರಾರಂಭ: ಡಿಸಿ ಗಂಗಾಧರಸ್ವಾಮಿ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ರೈತರು ಬೆಳೆದ ಮೆಕ್ಕೆಜೋಳವನ್ನು ಬುಧುವಾರದಿಂದ ರೈತರಿಂದ ಖರೀದಿಸಲಾಗುವುದು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ರವರು ತಿಳಿಸಿದರು. ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ...

ದಿನದ ಸುದ್ದಿ3 days ago

ಯಮ ಸ್ವರೂಪಿ ಗ್ಯಾಸ್ ಗೀಸರ್ ಬಳಸೋ ಮುನ್ನ ಎಚ್ಚರ ; ಇವಿಷ್ಟನ್ನು ಪಾಲಿಸಿ ಅಪಾಯ ತಡೆಗಟ್ಟಿ

~ಅನಿರೀಕ್ಷಿತ್ ನಾರಾಯಣ ಕೆಲ ಮುನ್ನೆಚ್ಚರಿಕೆಯ ಅಂಶಗಳನ್ನು ಪಾಲಿಸುವುದರಿಂದ ಗ್ಯಾಸ್ ಗೀಸರ್ ನಿಂದ ಆಗುವ ಅಪಾಯವನ್ನು ತಡೆಗಟ್ಟಬಹುದು. 1. ಮೊದಲಿಗೆ ಇದು ಎಲ್ಲರಿಗೂ ಗೊತ್ತಿರುವ ವಿಷಯ. ಗ್ಯಾಸ್ ಗೀಸರ್...

ದಿನದ ಸುದ್ದಿ6 days ago

ಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ

ಸುದ್ದಿದಿನ,ದಾವಣಗೆರೆ: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಪ್ರಸ್ತಾವನೆ ಎನ್ಎಚ್ ಎಂ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದ್ದು, ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಮಧ್ಯಸ್ತಿಕೆ ವಹಿಸಿ ಸರಿಪಡಿಸಲು ಶಿಪಾರಸ್ಸು ಮಾಡಬೇಕು....

ದಿನದ ಸುದ್ದಿ6 days ago

ದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ

ಸುದ್ದಿದಿನ,ದಾವಣಗೆರೆ:ನಗರದ ಜಯದೇವ ವೃತ್ತದಲ್ಲಿರುವ ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿಯಿಂದ ಗುರುವಾರ (ಡಿಸೆಂಬರ್.4) ಕನ್ನಡ ಚಳವಳಿಯ ಕಚೇರಿಯ ಆವರಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಟಿ...

ದಿನದ ಸುದ್ದಿ1 week ago

ದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಕ್ರಮಿಸುತ್ತಿರುವ ಅರ್ಹ ಸಂಘ, ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ...

ದಿನದ ಸುದ್ದಿ1 week ago

ದಾವಣಗೆರೆ | ಜಿಲ್ಲಾ ಪಂಚಾಯಿತಿ ಸಿ.ಇ.ಒ ಗಿತ್ತೆ ಮಾಧವ್ ವಿಠ್ಠಲ್ ರಾವ್ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ:2023-24ನೇ ಸಾಲಿನಲ್ಲಿ ಚನ್ನಗಿರಿ ತಾಲ್ಲೂಕಿನಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ತನಿಖೆಗೆ ಒಳಪಡಿಸುವಂತೆ ಕೋರಿ ಅರ್ಜಿ ಸಲ್ಲಿಸಿ 5 ತಿಂಗಳು...

ದಿನದ ಸುದ್ದಿ1 week ago

ಜಿಎಂ ವಿಶ್ವವಿದ್ಯಾಲಯ ರಂಗೋತ್ಸವ -2025 | ವಿದ್ಯಾರ್ಥಿಗಳ ಪ್ರತಿಭೆ ಅನಾವರಣ : ಸ್ಪರ್ಧೆಯಲ್ಲಿ ರಂಗ ಪ್ರೇಮ, ನಟನಾ ಚತುರತೆ ಬೆರಗು

ಸುದ್ದಿದಿನ,ದಾವಣಗೆರೆ:ನಗರದ ಜಿಎಂ ವಿಶ್ವವಿದ್ಯಾನಿಲಯದ ಜಿಎಂ ಹಾಲಮ್ಮ ಸಭಾಂಗಣದಲ್ಲಿ 1.12 2025 ರಂದು ರಂಗೋತ್ಸವ -2025 ರ ಅಂತಿಮ ಸುತ್ತು ಗ್ರ್ಯಾಂಡ್ ಫಿನಾಲೆಯನ್ನು ಏರ್ಪಡಿಸಲಾಗಿತ್ತು. ಜಿಎಂ ವಿಶ್ವವಿದ್ಯಾಲಯದ ಎಲ್ಲಾ...

ದಿನದ ಸುದ್ದಿ1 week ago

ಉಳಿಕೆ ಸರ್ಕಾರಿ ನಿವೇಶನ ಇಲಾಖೆಗಳ ವಿವಿಧ ಉದ್ದೇಶಿತ ಕಟ್ಟಡಗಳಿಗೆ ಹಂಚಿಕೆ: ಡಿಸಿ ಜಿ.ಎಂ.ಗಂಗಾಧರಸ್ವಾಮಿ

ಸುದ್ದಿದಿನ,ದಾವಣಗೆರೆ: ದಾವಣಗೆರೆಯಲ್ಲಿ ಸರ್ಕಾರಿ ನಿವೇಶನಗಳು ಖಾಲಿ ಇದ್ದರೆ ಅವುಗಳನ್ನು ಕೂಡಲೇ ಸರ್ಕಾರಿ ಕಚೇರಿಗಳ ಉಪಯೋಗಕ್ಕೆ ನೀಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಸೂಚಿಸಿದರು. ಮಂಗಳವಾರ(ಡಿ.2) ರಂದು ಜಿಲ್ಲಾಧಿಕಾರಿಗಳ ಕಚೇರಿ...

Trending