Connect with us

ದಿನದ ಸುದ್ದಿ

ಅಭಿಯಾನದಲ್ಲಿ ಪೋಸ್ಟರ್ ಅಸ್ತ್ರ: ಸಲ್ಲದ ಎಡವಟ್ಟು..!

Published

on

ಸಾಂದರ್ಭಿಕ ಚಿತ್ರ
  • ಪ್ರಜ್ವಲ್ ತೇಜ ಡಿ.ಎಸ್, ಪ್ರಥಮ ವರ್ಷದ ಸ್ನಾತಕೋತ್ತರ ಪದವಿ ವಿದ್ಯಾರ್ಥಿ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಬೆಂಗಳೂರು ವಿಶ್ವವಿದ್ಯಾಲಯ

ತ್ತೀಚಿನ ದಿನಗಳಲ್ಲಿ ಪ್ರತಿ ಮಾಧ್ಯಮದಲ್ಲಿನ ಸಹ ಹೆಚ್ಚು ಸುದ್ದಿಯಲ್ಲಿರುವ ಪೋಸ್ಟರ್ ಅಭಿಯಾನ ಸಾಕಷ್ಟು ಗಮನ ಸೆಳೆಯುವುದರಲ್ಲಿ ಗೆದ್ದಿದ್ದರು. ಇದು ಸಹ ಸಾರ್ವಜನಿಕರಲ್ಲಿ ಪ್ರಜ್ಞೆಯನ್ನು ಮೂಡಿಸುವಲ್ಲಿ ಎಷ್ಟು ಮಾತ್ರ ಯಶಸ್ಸು ಕಂಡಿದೆ ಎಂಬುದು ಗಮನಿಸಬೇಕಾದ ವಿಷಯ.

ಸಾಮಾನ್ಯವಾಗಿ ಯಾವುದೇ ಚುನಾವಣಾ ಅಭಿಯಾನಗಳಲ್ಲಿ ತಮ್ಮ ಪಕ್ಷಗಳ ಈ ಹಿಂದಿನ ಯಶಸ್ಸು, ಕಾರ್ಯ ಮತ್ತು ಸಾಧನೆಗಳನ್ನು ತೋರ್ಪಡಿಸುವುದು ಅಥವಾ ಮುಂದೆ ತಮ್ಮ ಗುರಿಯೇನು ಎನ್ನುವುದು ಜನರಲ್ಲಿ ಪ್ರಜ್ಞಾವಂತಿಗೆ ಮೂಡಿಸುವ ಕೆಲಸ ಮಾಡುತ್ತಿತ್ತು. ಅದುವೇ ಪ್ರಚಾರದ ಭಾಗವಾಗಿತು. ಆದರೆ ಈಗ ಸುದ್ದಿಯಲ್ಲಿರುವ ಪೋಸ್ಟರ್ ಅಭಿಯಾನಗಳು ಜನರಲ್ಲಿ ಆಸಕ್ತಿ ಮೂಡಿಸುವ ಬದಲು ಪಕ್ಷಗಳ ಪರಸ್ಪರ ಸಂಘರ್ಷ, ಒಬ್ಬರ ಮೇಲೊಬ್ಬರು ಮಾಡುತ್ತಿರುವ ಆರೋಪಗಳು ಮಾತ್ರ ಕಾಣಸಿಗುತ್ತದೆ. ಇದು ಯಾವ ರೀತಿ ಉಪಯುಕ್ತವೆನ್ನುವುದು ರಾಜಕೀಯ ಪಕ್ಷಗಳು ಒಮ್ಮೆ ಯೋಚಿಸಬೇಕಾಗಿದೆ.

ಮುಖ್ಯವಾಗಿ ಜನರಿಗೆ ಪಕ್ಷವು ಯಾವ ರೀತಿಯ ಸಂದೇಶವನ್ನು ನೀಡುತ್ತಿದ್ದೇವೆ ಎಂದು ಯೋಚಿಸಬೇಕು. ಈ ಹಿಂದೆ ಪೋಸ್ಟರ್ ಗಳು ತಮ್ಮ ತಮ್ಮ ರಾಜಕೀಯ ಪಕ್ಷಗಳ ಯೋಜನೆ ಮತ್ತು ಜನರನ್ನು ತಲುಪುವ ಪ್ರಚಾರದ ಸಾಧನವಾಗಿ ಇರುತ್ತಿತು. ಆದರೆ, ಈಗ ಎದುರಾಳಿ ಪಕ್ಷದ ತೇಜೋವಧೆ ಮಾಡುವ ಸಾಧನವಾಗಿದೆ. ಈ ಪೋಸ್ಟರ್ ಅಭಿಯಾನವು ವಿರೋಧ ಪಕ್ಷ ಕಾಂಗ್ರೆಸ್ ನ ನಾಯಕರು ‘ಪೇ ಸಿಎಂ’ ಎಂದು ಶುರು ಮಾಡಿದ ಕಾರಣ ಅದು ಆಡಳಿತ ಪಕ್ಷದ ಕೆಂಗಣ್ಣಿಗೆ ಗುರಿಯಾಗಿ ಸಾಕಷ್ಟು ಕೋಲಹಲ ಮತ್ತು ಚರ್ಚೆಗೆ ಕಾರಣವಾಗಿತ್ತು. ಆ ಪೋಸ್ಟರ್ ಗಳಲ್ಲಿ ಕ್ಯೂಆರ್ ಕೋಡ್ ಇರಿಸಿ 40% ಕಮಿಷನ್ ಆರೋಪಿಗಳಿಗೆ ತುಪ್ಪ ಸುರಿಯಿತು. ಅದನ್ನು ಆಡಳಿತ ಪಕ್ಷವು ಅದನ್ನು ಸರಿಪಡಿಸಲು ಅಥವಾ ಸಮರ್ಥನೆ ನೀಡಲು ಹೋಗದೆ ಪ್ರತ್ಯುತ್ತರವಾಗಿ ಮತ್ತೊಂದು ಪೋಸ್ಟರ್ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ತಾವು ಹಿಂದೆ ಬಿದ್ದಿಲ್ಲ ಎಂದು ತೋರಿಸುವ ಪ್ರಯತ್ನವಾಯಿತು

ಅದರಿಂದಾಗಿ ಹೊರಗೆ ಬಂದ ಸವಾಲು ಕೆಪಿಸಿಸಿ (ಕರ್ನಾಟಕ ಪ್ರೋವಿಜಿನಲ್ ಕರಪ್ಶನ್ ಕಂಪನಿ) ಪೋಸ್ಟರ್ ಗಳು. ಇದರಿಂದ ಒಬ್ಬರ ಮೇಲೆ ಒಬ್ಬರು ಕೆಸರು ಎರಚುವ ಕೆಲಸ ಮಾಡಿದ್ದಾರೆ. ಹೊರತು ಅದರಿಂದ ಯಾವುದೇ ಸಕಾರಾತ್ಮಕ ಬೆಳವಣಿಗೆಗೆ ದಾರಿ ಮಾಡಲಿಲ್ಲ. ಈ ಗಲಭೆ ಅಲ್ಲಿಗೆ ನಿಲ್ಲದೆ ಹೊಸ ರೂಪ ಪಡೆಯುತ್ತಾ ಸೇ ಸಿಎಂ ಮತ್ತು ಸೇ ಮೇಯರ್ ಎಂದು ವಿವಿಧ ನಗರಗಳ ಆಡಳಿತ ಪಕ್ಷದ ಮೇಯರ್ ಗಳ ಮೇಲೆ ದಾಳಿ ನಡೆಸುವ ಕೆಲಸ ಪ್ರತಿಪಕ್ಷವು ಮುಂದುವರೆಸಿದೆ.

ಇದು ಪರಸ್ಪರ ವಾಗ್ದಾಳಿಗೆ ಮತ್ತು ಕೋಲಾಹಲ ಸೃಷ್ಟಿಸುತ್ತಿದೆ. ಈ ರೀತಿಯ ಬೆಳವಣಿಗೆ ಎಷ್ಟು ಮಾತ್ರ ಉಪಯುಕ್ತ ಎನ್ನುವುದು ಪರಸ್ಪರ ಎಲ್ಲಾ ರಾಜಕೀಯ ಪಕ್ಷಗಳು ಒಮ್ಮೆ ಯೋಚಿಸುವುದು ಸರಿ ಇಲ್ಲವಾದಲ್ಲಿ ಅದು ನಗೆ ಪಾಟಲು ಆಗುವ ಸಾಧ್ಯತೆಗಳನ್ನು ತಳ್ಳಿ ಹಾಕುವಂತಿಲ್ಲ.
ಒಂದೆಡೆ ಸಾಕಷ್ಟು ಸಾವು ನೋವುಗಳು ಮತ್ತು ವರುಣನ ಆರ್ಭಟ ಹೆಚ್ಚಾಗಿ ರಾಜ್ಯವೇ ಅಲ್ಲೋಲ ಕಲ್ಲೋಲ ಆಗಿರುವ ಸಮಯದಲ್ಲಿ ಈ ರೀತಿಯ ಪರಸ್ಪರ ವಾಗ್ದಾಳಿಗಳು ಯಾವ ರೀತಿ ಪ್ರಜ್ಞಾವಂತಿಕೆ ಯನ್ನು ಜನರಲ್ಲಿ ಮೂಡಿಸುತ್ತಿದ್ದಾರೆ ಎಂಬುದನ್ನು ತಿಳಿಯಬೇಕಾಗಿದೆ.

ಚರ್ಚಿಸಲು ಮತ್ತು ಗಮನಿಸಬೇಕಾದ ಸಾಕಷ್ಟು ಸಮಸ್ಯೆಗಳಿರುವಾಗ ಜನರಲ್ಲಿ ಮತ್ತು ರಾಜಕೀಯ ಪಕ್ಷಗಳ ವಲಯದಲ್ಲಿ ಈ ಪೋಸ್ಟರ್ ವಿವಾದವು ಯಾವುದೇ ಏಳಿಗೆ ಮಾಡುವಲ್ಲಿ ಉಪಯೋಗವಿಲ್ಲ. ಇದರ ಜತೆ ಜತೆಗೆ ನಡೆಯುತ್ತಿರುವ ಜನ ಸಂಕಲ್ಪ ಮತ್ತು ಭಾರತ್ ಜೋಡೋ ಯಾತ್ರೆಗಳು ಇದಕ್ಕೆ ಒಂದಷ್ಟು ಪುಷ್ಟಿ ನೀಡುವ ಕೆಲಸ ಮಾಡುತ್ತಿದೆ. ಚುನಾವಣೆಯ ಪ್ರಚಾರವೆಂದರೆ ಜನರು ತಮ್ಮನ್ನು ತಮ್ಮ ಪಕ್ಷವನ್ನು ಏಕೆ ಜನ ಆರಿಸಬೇಕು ಎಂಬುದು ತಿಳಿ ಹೇಳಬೇಕೆ ಹೊರತು ಅದು ತಮ್ಮ ಎದುರಾಳಿ ಪಕ್ಷಕ್ಕೆ ಧಕ್ಕೆ ಮತ್ತು ತೇಜೋವಧೆ ಮಾಡುವಂತಿರಬಾರದು, ಇದು ಕೇವಲ ನೈತಿಕತೆಯ ವಿಚಾರವಲ್ಲ ಅದು ಕಾನೂನಿನಲ್ಲಿರುವ ಒಂದು ಚೌಕಟ್ಟು.

ಪ್ರಜ್ವಲ್ ತೇಜ ಡಿ.ಎಸ್

ಪ್ರತಿಪಕ್ಷಗಳನ್ನು ಚುನಾವಣೆಯ ಸಮಯದಲ್ಲಿ ತೇಜೋವಧೆ ಮಾಡುವುದು ಅಥವಾ ಅವರ ಮನೋಭಾವನೆಗಳನ್ನು ನೋಯಿಸುವುದು ಕಾನೂನು ರೀತಿಯಲ್ಲಿ ಅಪರಾಧವಾಗುತ್ತದೆ. ಜನರಿಗೆ ಬಿಡಿಸಿ ಹೇಳಬೇಕಾಗಿರುವ ಸ್ಥಾನದಲ್ಲಿರುವ ನಾಯಕರೇ ಅಪರಾಧಿಗಳಾಗಿ ನಿಲ್ಲುವುದು ಎಷ್ಟು ಸರಿ. ಪೋಸ್ಟರ್ ಎನ್ನುವುದು ಸ್ವಯಂ ಪ್ರಚಾರಕ್ಕಾಗಿ ಮೂಡಿ ಬಂದಿರುವ ಒಂದು ಸಾಧನ ಅಷ್ಟೇ ಅದಕ್ಕೆ ಅದರದ್ದೇ ಆದ ಮಹತ್ವವನ್ನು ಹೊಂದಿದೆ. ಈ ಪೋಸ್ಟರ್ ಅಭಿಯಾನ ಚುನಾವಣೆ ಮುಗಿಯುವವರೆಗೂ ಚಲಾವಣಾಯಾಗುವ ಎಲ್ಲ ಸಾಧ್ಯತೆಗಳು ಇವೆ.

ಮೊದಲು ಕೇವಲ ಬೆಂಗಳೂರು ನಗರದಲ್ಲಿ ಶುರುವಾಗಿ ನಂತರ ಈಗ ರಾಜ್ಯದ ನಾನಾ ಭಾಗಗಳಿಗೂ ವಿಸ್ತರಿಸಿದೆ. ಹೊಸ ಹೊಸ ರೂಪದಲ್ಲಿ ಜನರಿಗೆ ದರ್ಶನ ನೀಡುತ್ತಿದೆ. ಶುರುವಾಗಿ ಸಾಕಷ್ಟು ದಿನಗಳು ಕಳೆದರು ಸಹ ಇದರ ಕಾವು ಇನ್ನು ಕಡಿಮೆಯಾಗಿಲ್ಲ, ಜತೆ ಜತೆಗೆ ಇದಕ್ಕೆ ಸಾಮಾನ್ಯರು ಕೂಡ ಸಮೂಹ ಮಾಧ್ಯಮಗಳಲ್ಲಿ ಪ್ರಚಾರ ಮಾಡುತ್ತಿರುವುದು ವಿಪರ್ಯಾಸ. ಇದು ಜನರಲ್ಲಿ ಒಂದು ರೀತಿಯ ಮನರಂಜನೆ ಮತ್ತು ವ್ಯಂಗ್ಯ ಚಿತ್ರಣ ಹಾಸ್ಯವಾಗಿ ಮೂಡಿ ಬರುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಸುದ್ದಿ ಮಾಡುತ್ತಿದೆ. ಸುದ್ದಿಯಾಗಿದೆ ಅಂದರೆ ಅದು ಇಷ್ಟವಾಗಿದೆ ಎಂದು ತಿಳಿಯುವುದು ಮೂರ್ಖತನವಾಗುತ್ತದೆ. ಈ ಪೋಸ್ಟರ್ ಅಭಿಯಾನ ಮಾಡುವ ಬದಲು ಜನರಲ್ಲಿ ವಿಶ್ವಾಸ ಮೂಡಿಸುವ ಸಾಕಷ್ಟು ಅವಕಾಶಗಳು ಇರುವುದನ್ನು ಬಳಸಿಕೊಳ್ಳುವುದೇ ಉತ್ತಮ.

ಈಗ ಆಗಿರುವ ಬದಲಾವಣೆಗಳು ಸಾಮಾನ್ಯರಿಗೆ ಉಪಯುಕ್ತ ಆಗುವ ಲಕ್ಷಣಗಳಿಲ್ಲ, ಇವುಗಳನ್ನು ಮಾಡುವ ಬದಲು ಜನರಿಗೆ ಬೇಕಾದ ಅಥವಾ ಉಪಯುಕ್ತವಾದ ವಿಚಾರಗಳನ್ನು ಚರ್ಚಿಸುವ ಅವಶ್ಯಕತೆ ಪ್ರಸ್ತುತ ಹೆಚ್ಚಿದೆ. ಈ ಹಿಂದೆ ಮತ್ತು ಪ್ರಸ್ತುತ ನಡೆಯುತ್ತಿರುವಂತಹ ಯಾತ್ರೆಗಳಿಗಿಂತ ಈ ಪೋಸ್ಟರ್ ಅಭಿಯಾನ ಹೆಚ್ಚು ಸುದ್ದಿಯಾಗಿರುವುದು ವಿಪರ್ಯಾಸವೇ ಸರಿ. ಈ ರೀತಿಯ ಅಭಿಯಾನಗಳು ಜನರಲ್ಲಿ ವಿಶ್ವಾಸ ಮತ್ತು ಸಕಾರಾತ್ಮಕತೆ ಮೂಡಿಸುವ ಬದಲು ನಕಾರಾತ್ಮಕವಾದ ವಾತಾವರಣ ಸೃಷ್ಟಿಯಾಗುತ್ತಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಕರ್ನಾಟಕ ಜಾಹೀರಾತು ನೀತಿಗೆ ಸಂಪಾದಕರ ವಿರೋಧ ; ಸಿಎಂಗೆ ಮನವಿ

Published

on

ನೀತಿಯನ್ನು ಪರಿಶೀಲಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಸುದ್ದಿದಿನ,ದಾವಣಗೆರೆ: ಕರ್ನಾಟಕ ಜಾಹೀರಾತು ನೀತಿ-2026 ರಲ್ಲಿ ಪತ್ರಿಕೆಗಳಿಗೆ ಮಾರಕವಾದ ನಿಯಮಗಳನ್ನು ಕೈಬಿಡುವಂತೆ ಕೋರಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೋಮವಾರ ಮಧ್ಯಾಹ್ನ ನಗರದ ಎಂ.ಬಿ.ಎ ಗ್ರೌಂಡ್ ಹೆಲಿಪ್ಯಾಡ್ ನಲ್ಲಿ ಮನವಿ ಸಲ್ಲಿಸಲಾಯಿತು.

ರಾಜ್ಯದಲ್ಲಿ ಜಾರಿಗೆ ತರಲು ಹೊರಟಿರುವ ಕರ್ನಾಟಕ ಜಾಹೀರಾತು ನೀತಿ-2026 ಜಿಲ್ಲಾ‌ ಮಟ್ಟದ ಮತ್ತು ಪ್ರಾದೇಶಿಕ ಮಟ್ಟದ ಪತ್ರಿಕೆಗಳಿಗೆ ಮಾರಕವಾಗಿದ್ದು,ಇದರಿಂದ ಶತಶತಮಾನಗಳಿಂದ ಸಮಾಜದ ಮತ್ತು ಸರ್ಕಾರದ ಕೊಂಡಿಯಾಗಿ ಸೇವೆ ಮಾಡುತ್ತಿರುವ ಪತ್ರಿಕೆಗಳು ಮುಚ್ಚುತ್ತವೆ‌. ಯಾವುದೇ ಕಾರಣಕ್ಕೂ ಪತ್ರಿಕೆಗಳಿಗೆ ಮಾರಕವಾಗುವ ನಿಯಮಗಳನ್ನು ಅಳವಡಿಸದೇ ಪತ್ರಿಕೆಗಳ ಏಳಿಗೆಗೆ ಪೂರಕವಾದ ಅಂಶಗಳನ್ನು ಸೇರಿಸಿ ಕರ್ನಾಟಕ ಜಾಹೀರಾತು ನೀತಿಯನ್ನು ಜಾರಿಗೆ ತರಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಮನವರಿಕೆ ಮಾಡಿಕೊಡಲಾಯಿತು.

ಸಂಘಗಳ ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಜಾಹೀರಾತು ನೀತಿ ಪರಿಶೀಲಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷರಾದ ಎ.ಸಿ.ತಿಪ್ಪೇಸ್ವಾಮಿ, ಜಿಲ್ಲಾ ಘಟಕದ ಅಧ್ಯಕ್ಷರಾದ ಸುರೇಶ್ ಆರ್ ಕುಣೆಬೆಳಕೆರೆ, ಖಜಾಂಜಿ ಶಿವಮೂರ್ತಿ ಟಿ.ಜಿ , ರಾಜ್ಯ ಸಂಘದ ನಾಮನಿರ್ದೇಶನ ಸದಸ್ಯ ಕೆ.ಜೈಮುನಿ ಮತ್ತು
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕರಾದ ಇ.ಎಂ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಬದ್ರಿನಾಥ್, ಖಜಾಂಚಿ ಜೆ.ಎಸ್.ವೀರೇಶ್ ಹಾಗೂ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷರಾದ ನಾಗರಾಜ ಬಡದಾಳ್ , ಹಿರಿಯ ಪತ್ರಕರ್ತರಾದ ಕೆ.ಏಕಾಂತಮ್ಮ, ಬಿ.ಎನ್.ಮಲ್ಲೇಶ್, ಮಲ್ಲಿಕಾರ್ಜುನ ಕಬ್ಬೂರು, ಆರ್.ಎಸ್.ತಿಪ್ಪೇಸ್ವಾಮಿ, ಕೊಟ್ರೇಶ್ ಅಣಬೂರುಮಠ, ನಿಂಗಪ್ಪ, ಗೋವಿಂದ ರಾಜು, ಫಕೃದ್ದೀನ್, ಆರ್.ರವಿ,ಬಿ.ವಾಸುದೇವ, ರಾಘವೇಂದ್ರ ರಾವ್, ವೇದಮೂರ್ತಿ,ನಿಂಗಪ್ಪ, ಪರಶುರಾಮ, ನಂದಕುಮಾರ್ ಮುಂತಾದವರು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 11 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು.

ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 10 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಹರಿಹರ ನಗರಸಭೆ ಕಚೇರಿಯಿಂದ ಮಾತ್ರ ಪಡೆದುಕೊಳ್ಳಬೇಕು. ಹುದ್ದೆಗಳ ವರ್ಗೀಕರಣ, ಷರತ್ತುಗಳು, ವಯೋಮಿತಿ ಮತ್ತು ಅಗತ್ಯ ಅರ್ಹತೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆಯ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕ ರಮೇಶ್ ದೇಸಾಯಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ:ಪ್ರಾಚಾರ್ಯರು ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರ ಸಹಿಯನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಹುಬ್ಬಳ್ಳಿಯ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕರಾದ ರಮೇಶ್ ದೇಸಾಯಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇಲ್ಲಿ ಅಧ್ಯಯನ ಮಾಡಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಸರ್ಕಾರದಿಂದ ವಿತರಣೆಯಾದ ಟೂಲ್‌ಕಿಟ್‌ಗಳನ್ನು ನಿಯಮಾನುಸಾರ ವಿತರಣೆ ಮಾಡದೆ ವಂಚಿಸಿರುವ ಅಧಿಕೃತ ಮಾಹಿತಿಯ ಆಧಾರದ ಮೇಲೆ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ, ಮಾಹಿತಿ ಕೋರಲಾಗಿತ್ತು.

ಪ್ರಾಚಾರ್ಯರು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿ ಫಾರ್ ಸಹಿಯೊಂದಿಗೆ ಹಿಂಬರಹ ನೀಡಲಾಗಿರುತ್ತದೆ. ಮಾಹಿತಿ ಅಧಿಕಾರಿ, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿರುವ ಫಾರ್ ಸಹಿಯೇ ಪ್ರಾಚಾರ್ಯರ ಹೆಸರಿನ ಪತ್ರದಲ್ಲಿ ನಮೂದಾಗಿರುತ್ತದೆ. ಸದರಿ ಸಂಸ್ಥೆಯ ಸಾರ್ವಜನಿಕ ಮಾಹಿತಿ ಅಧಿಕಾರಿ ಪ್ರಾಚಾರ್ಯರೇ ಆಗಿರುತ್ತಾರೆ.

ಹೀಗಿರುವಾಗ ಪಾಚಾರ್ಯರ ಮುದ್ರೆ ಇರುವಲ್ಲಿ ಫಾರ್ ಎಂಬುದಾಗಿ ನಮೂದಿಸಿ ಸಹಿ ಮಾಡಿ, ಮಾಹಿತಿ ಅಧಿಕಾರಿ ಎಂಬ ಮುದ್ರೆಗೆ ಫಾರ್ ಬಳಸದೆ ಸಹಿ ಮಾಡಿರುವುದು ಹಲವು ಅನುಮಾನಕ್ಕೆ ಕಾರಣವಾಗಿ ಈ ಬಗ್ಗೆ ತನಿಖೆ ನಡೆಸುವಂತೆ ಜಂಟಿ ನಿರ್ದೇಶಕರಿಗೆ ದೂರು ನೀಡಲಾಗಿತ್ತು.

ಆದರೆ ಜಂಟಿ ನಿರ್ದೇಶಕರು, ಕೌಶಲ್ಯ ಅಭಿವೃದ್ದಿ ಮತ್ತು ಉದ್ಯೋಗ ಇಲಾಖೆ, ಹುಬ್ಬಳ್ಳಿ ಇವರಿಗೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ದೂರು ಅರ್ಜಿಗೆ ಸಂಬಂಧಿಸಿದಂತೆ ಯಾವುದೇ ಕ್ರಮ ಕೈಗೊಂಡ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending