Connect with us

ದಿನದ ಸುದ್ದಿ

ಅಭಿಯಾನದಲ್ಲಿ ಪೋಸ್ಟರ್ ಅಸ್ತ್ರ: ಸಲ್ಲದ ಎಡವಟ್ಟು..!

Published

on

ಸಾಂದರ್ಭಿಕ ಚಿತ್ರ
  • ಪ್ರಜ್ವಲ್ ತೇಜ ಡಿ.ಎಸ್, ಪ್ರಥಮ ವರ್ಷದ ಸ್ನಾತಕೋತ್ತರ ಪದವಿ ವಿದ್ಯಾರ್ಥಿ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಬೆಂಗಳೂರು ವಿಶ್ವವಿದ್ಯಾಲಯ

ತ್ತೀಚಿನ ದಿನಗಳಲ್ಲಿ ಪ್ರತಿ ಮಾಧ್ಯಮದಲ್ಲಿನ ಸಹ ಹೆಚ್ಚು ಸುದ್ದಿಯಲ್ಲಿರುವ ಪೋಸ್ಟರ್ ಅಭಿಯಾನ ಸಾಕಷ್ಟು ಗಮನ ಸೆಳೆಯುವುದರಲ್ಲಿ ಗೆದ್ದಿದ್ದರು. ಇದು ಸಹ ಸಾರ್ವಜನಿಕರಲ್ಲಿ ಪ್ರಜ್ಞೆಯನ್ನು ಮೂಡಿಸುವಲ್ಲಿ ಎಷ್ಟು ಮಾತ್ರ ಯಶಸ್ಸು ಕಂಡಿದೆ ಎಂಬುದು ಗಮನಿಸಬೇಕಾದ ವಿಷಯ.

ಸಾಮಾನ್ಯವಾಗಿ ಯಾವುದೇ ಚುನಾವಣಾ ಅಭಿಯಾನಗಳಲ್ಲಿ ತಮ್ಮ ಪಕ್ಷಗಳ ಈ ಹಿಂದಿನ ಯಶಸ್ಸು, ಕಾರ್ಯ ಮತ್ತು ಸಾಧನೆಗಳನ್ನು ತೋರ್ಪಡಿಸುವುದು ಅಥವಾ ಮುಂದೆ ತಮ್ಮ ಗುರಿಯೇನು ಎನ್ನುವುದು ಜನರಲ್ಲಿ ಪ್ರಜ್ಞಾವಂತಿಗೆ ಮೂಡಿಸುವ ಕೆಲಸ ಮಾಡುತ್ತಿತ್ತು. ಅದುವೇ ಪ್ರಚಾರದ ಭಾಗವಾಗಿತು. ಆದರೆ ಈಗ ಸುದ್ದಿಯಲ್ಲಿರುವ ಪೋಸ್ಟರ್ ಅಭಿಯಾನಗಳು ಜನರಲ್ಲಿ ಆಸಕ್ತಿ ಮೂಡಿಸುವ ಬದಲು ಪಕ್ಷಗಳ ಪರಸ್ಪರ ಸಂಘರ್ಷ, ಒಬ್ಬರ ಮೇಲೊಬ್ಬರು ಮಾಡುತ್ತಿರುವ ಆರೋಪಗಳು ಮಾತ್ರ ಕಾಣಸಿಗುತ್ತದೆ. ಇದು ಯಾವ ರೀತಿ ಉಪಯುಕ್ತವೆನ್ನುವುದು ರಾಜಕೀಯ ಪಕ್ಷಗಳು ಒಮ್ಮೆ ಯೋಚಿಸಬೇಕಾಗಿದೆ.

ಮುಖ್ಯವಾಗಿ ಜನರಿಗೆ ಪಕ್ಷವು ಯಾವ ರೀತಿಯ ಸಂದೇಶವನ್ನು ನೀಡುತ್ತಿದ್ದೇವೆ ಎಂದು ಯೋಚಿಸಬೇಕು. ಈ ಹಿಂದೆ ಪೋಸ್ಟರ್ ಗಳು ತಮ್ಮ ತಮ್ಮ ರಾಜಕೀಯ ಪಕ್ಷಗಳ ಯೋಜನೆ ಮತ್ತು ಜನರನ್ನು ತಲುಪುವ ಪ್ರಚಾರದ ಸಾಧನವಾಗಿ ಇರುತ್ತಿತು. ಆದರೆ, ಈಗ ಎದುರಾಳಿ ಪಕ್ಷದ ತೇಜೋವಧೆ ಮಾಡುವ ಸಾಧನವಾಗಿದೆ. ಈ ಪೋಸ್ಟರ್ ಅಭಿಯಾನವು ವಿರೋಧ ಪಕ್ಷ ಕಾಂಗ್ರೆಸ್ ನ ನಾಯಕರು ‘ಪೇ ಸಿಎಂ’ ಎಂದು ಶುರು ಮಾಡಿದ ಕಾರಣ ಅದು ಆಡಳಿತ ಪಕ್ಷದ ಕೆಂಗಣ್ಣಿಗೆ ಗುರಿಯಾಗಿ ಸಾಕಷ್ಟು ಕೋಲಹಲ ಮತ್ತು ಚರ್ಚೆಗೆ ಕಾರಣವಾಗಿತ್ತು. ಆ ಪೋಸ್ಟರ್ ಗಳಲ್ಲಿ ಕ್ಯೂಆರ್ ಕೋಡ್ ಇರಿಸಿ 40% ಕಮಿಷನ್ ಆರೋಪಿಗಳಿಗೆ ತುಪ್ಪ ಸುರಿಯಿತು. ಅದನ್ನು ಆಡಳಿತ ಪಕ್ಷವು ಅದನ್ನು ಸರಿಪಡಿಸಲು ಅಥವಾ ಸಮರ್ಥನೆ ನೀಡಲು ಹೋಗದೆ ಪ್ರತ್ಯುತ್ತರವಾಗಿ ಮತ್ತೊಂದು ಪೋಸ್ಟರ್ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ತಾವು ಹಿಂದೆ ಬಿದ್ದಿಲ್ಲ ಎಂದು ತೋರಿಸುವ ಪ್ರಯತ್ನವಾಯಿತು

ಅದರಿಂದಾಗಿ ಹೊರಗೆ ಬಂದ ಸವಾಲು ಕೆಪಿಸಿಸಿ (ಕರ್ನಾಟಕ ಪ್ರೋವಿಜಿನಲ್ ಕರಪ್ಶನ್ ಕಂಪನಿ) ಪೋಸ್ಟರ್ ಗಳು. ಇದರಿಂದ ಒಬ್ಬರ ಮೇಲೆ ಒಬ್ಬರು ಕೆಸರು ಎರಚುವ ಕೆಲಸ ಮಾಡಿದ್ದಾರೆ. ಹೊರತು ಅದರಿಂದ ಯಾವುದೇ ಸಕಾರಾತ್ಮಕ ಬೆಳವಣಿಗೆಗೆ ದಾರಿ ಮಾಡಲಿಲ್ಲ. ಈ ಗಲಭೆ ಅಲ್ಲಿಗೆ ನಿಲ್ಲದೆ ಹೊಸ ರೂಪ ಪಡೆಯುತ್ತಾ ಸೇ ಸಿಎಂ ಮತ್ತು ಸೇ ಮೇಯರ್ ಎಂದು ವಿವಿಧ ನಗರಗಳ ಆಡಳಿತ ಪಕ್ಷದ ಮೇಯರ್ ಗಳ ಮೇಲೆ ದಾಳಿ ನಡೆಸುವ ಕೆಲಸ ಪ್ರತಿಪಕ್ಷವು ಮುಂದುವರೆಸಿದೆ.

ಇದು ಪರಸ್ಪರ ವಾಗ್ದಾಳಿಗೆ ಮತ್ತು ಕೋಲಾಹಲ ಸೃಷ್ಟಿಸುತ್ತಿದೆ. ಈ ರೀತಿಯ ಬೆಳವಣಿಗೆ ಎಷ್ಟು ಮಾತ್ರ ಉಪಯುಕ್ತ ಎನ್ನುವುದು ಪರಸ್ಪರ ಎಲ್ಲಾ ರಾಜಕೀಯ ಪಕ್ಷಗಳು ಒಮ್ಮೆ ಯೋಚಿಸುವುದು ಸರಿ ಇಲ್ಲವಾದಲ್ಲಿ ಅದು ನಗೆ ಪಾಟಲು ಆಗುವ ಸಾಧ್ಯತೆಗಳನ್ನು ತಳ್ಳಿ ಹಾಕುವಂತಿಲ್ಲ.
ಒಂದೆಡೆ ಸಾಕಷ್ಟು ಸಾವು ನೋವುಗಳು ಮತ್ತು ವರುಣನ ಆರ್ಭಟ ಹೆಚ್ಚಾಗಿ ರಾಜ್ಯವೇ ಅಲ್ಲೋಲ ಕಲ್ಲೋಲ ಆಗಿರುವ ಸಮಯದಲ್ಲಿ ಈ ರೀತಿಯ ಪರಸ್ಪರ ವಾಗ್ದಾಳಿಗಳು ಯಾವ ರೀತಿ ಪ್ರಜ್ಞಾವಂತಿಕೆ ಯನ್ನು ಜನರಲ್ಲಿ ಮೂಡಿಸುತ್ತಿದ್ದಾರೆ ಎಂಬುದನ್ನು ತಿಳಿಯಬೇಕಾಗಿದೆ.

ಚರ್ಚಿಸಲು ಮತ್ತು ಗಮನಿಸಬೇಕಾದ ಸಾಕಷ್ಟು ಸಮಸ್ಯೆಗಳಿರುವಾಗ ಜನರಲ್ಲಿ ಮತ್ತು ರಾಜಕೀಯ ಪಕ್ಷಗಳ ವಲಯದಲ್ಲಿ ಈ ಪೋಸ್ಟರ್ ವಿವಾದವು ಯಾವುದೇ ಏಳಿಗೆ ಮಾಡುವಲ್ಲಿ ಉಪಯೋಗವಿಲ್ಲ. ಇದರ ಜತೆ ಜತೆಗೆ ನಡೆಯುತ್ತಿರುವ ಜನ ಸಂಕಲ್ಪ ಮತ್ತು ಭಾರತ್ ಜೋಡೋ ಯಾತ್ರೆಗಳು ಇದಕ್ಕೆ ಒಂದಷ್ಟು ಪುಷ್ಟಿ ನೀಡುವ ಕೆಲಸ ಮಾಡುತ್ತಿದೆ. ಚುನಾವಣೆಯ ಪ್ರಚಾರವೆಂದರೆ ಜನರು ತಮ್ಮನ್ನು ತಮ್ಮ ಪಕ್ಷವನ್ನು ಏಕೆ ಜನ ಆರಿಸಬೇಕು ಎಂಬುದು ತಿಳಿ ಹೇಳಬೇಕೆ ಹೊರತು ಅದು ತಮ್ಮ ಎದುರಾಳಿ ಪಕ್ಷಕ್ಕೆ ಧಕ್ಕೆ ಮತ್ತು ತೇಜೋವಧೆ ಮಾಡುವಂತಿರಬಾರದು, ಇದು ಕೇವಲ ನೈತಿಕತೆಯ ವಿಚಾರವಲ್ಲ ಅದು ಕಾನೂನಿನಲ್ಲಿರುವ ಒಂದು ಚೌಕಟ್ಟು.

ಪ್ರಜ್ವಲ್ ತೇಜ ಡಿ.ಎಸ್

ಪ್ರತಿಪಕ್ಷಗಳನ್ನು ಚುನಾವಣೆಯ ಸಮಯದಲ್ಲಿ ತೇಜೋವಧೆ ಮಾಡುವುದು ಅಥವಾ ಅವರ ಮನೋಭಾವನೆಗಳನ್ನು ನೋಯಿಸುವುದು ಕಾನೂನು ರೀತಿಯಲ್ಲಿ ಅಪರಾಧವಾಗುತ್ತದೆ. ಜನರಿಗೆ ಬಿಡಿಸಿ ಹೇಳಬೇಕಾಗಿರುವ ಸ್ಥಾನದಲ್ಲಿರುವ ನಾಯಕರೇ ಅಪರಾಧಿಗಳಾಗಿ ನಿಲ್ಲುವುದು ಎಷ್ಟು ಸರಿ. ಪೋಸ್ಟರ್ ಎನ್ನುವುದು ಸ್ವಯಂ ಪ್ರಚಾರಕ್ಕಾಗಿ ಮೂಡಿ ಬಂದಿರುವ ಒಂದು ಸಾಧನ ಅಷ್ಟೇ ಅದಕ್ಕೆ ಅದರದ್ದೇ ಆದ ಮಹತ್ವವನ್ನು ಹೊಂದಿದೆ. ಈ ಪೋಸ್ಟರ್ ಅಭಿಯಾನ ಚುನಾವಣೆ ಮುಗಿಯುವವರೆಗೂ ಚಲಾವಣಾಯಾಗುವ ಎಲ್ಲ ಸಾಧ್ಯತೆಗಳು ಇವೆ.

ಮೊದಲು ಕೇವಲ ಬೆಂಗಳೂರು ನಗರದಲ್ಲಿ ಶುರುವಾಗಿ ನಂತರ ಈಗ ರಾಜ್ಯದ ನಾನಾ ಭಾಗಗಳಿಗೂ ವಿಸ್ತರಿಸಿದೆ. ಹೊಸ ಹೊಸ ರೂಪದಲ್ಲಿ ಜನರಿಗೆ ದರ್ಶನ ನೀಡುತ್ತಿದೆ. ಶುರುವಾಗಿ ಸಾಕಷ್ಟು ದಿನಗಳು ಕಳೆದರು ಸಹ ಇದರ ಕಾವು ಇನ್ನು ಕಡಿಮೆಯಾಗಿಲ್ಲ, ಜತೆ ಜತೆಗೆ ಇದಕ್ಕೆ ಸಾಮಾನ್ಯರು ಕೂಡ ಸಮೂಹ ಮಾಧ್ಯಮಗಳಲ್ಲಿ ಪ್ರಚಾರ ಮಾಡುತ್ತಿರುವುದು ವಿಪರ್ಯಾಸ. ಇದು ಜನರಲ್ಲಿ ಒಂದು ರೀತಿಯ ಮನರಂಜನೆ ಮತ್ತು ವ್ಯಂಗ್ಯ ಚಿತ್ರಣ ಹಾಸ್ಯವಾಗಿ ಮೂಡಿ ಬರುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಸುದ್ದಿ ಮಾಡುತ್ತಿದೆ. ಸುದ್ದಿಯಾಗಿದೆ ಅಂದರೆ ಅದು ಇಷ್ಟವಾಗಿದೆ ಎಂದು ತಿಳಿಯುವುದು ಮೂರ್ಖತನವಾಗುತ್ತದೆ. ಈ ಪೋಸ್ಟರ್ ಅಭಿಯಾನ ಮಾಡುವ ಬದಲು ಜನರಲ್ಲಿ ವಿಶ್ವಾಸ ಮೂಡಿಸುವ ಸಾಕಷ್ಟು ಅವಕಾಶಗಳು ಇರುವುದನ್ನು ಬಳಸಿಕೊಳ್ಳುವುದೇ ಉತ್ತಮ.

ಈಗ ಆಗಿರುವ ಬದಲಾವಣೆಗಳು ಸಾಮಾನ್ಯರಿಗೆ ಉಪಯುಕ್ತ ಆಗುವ ಲಕ್ಷಣಗಳಿಲ್ಲ, ಇವುಗಳನ್ನು ಮಾಡುವ ಬದಲು ಜನರಿಗೆ ಬೇಕಾದ ಅಥವಾ ಉಪಯುಕ್ತವಾದ ವಿಚಾರಗಳನ್ನು ಚರ್ಚಿಸುವ ಅವಶ್ಯಕತೆ ಪ್ರಸ್ತುತ ಹೆಚ್ಚಿದೆ. ಈ ಹಿಂದೆ ಮತ್ತು ಪ್ರಸ್ತುತ ನಡೆಯುತ್ತಿರುವಂತಹ ಯಾತ್ರೆಗಳಿಗಿಂತ ಈ ಪೋಸ್ಟರ್ ಅಭಿಯಾನ ಹೆಚ್ಚು ಸುದ್ದಿಯಾಗಿರುವುದು ವಿಪರ್ಯಾಸವೇ ಸರಿ. ಈ ರೀತಿಯ ಅಭಿಯಾನಗಳು ಜನರಲ್ಲಿ ವಿಶ್ವಾಸ ಮತ್ತು ಸಕಾರಾತ್ಮಕತೆ ಮೂಡಿಸುವ ಬದಲು ನಕಾರಾತ್ಮಕವಾದ ವಾತಾವರಣ ಸೃಷ್ಟಿಯಾಗುತ್ತಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

Published

on

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.

ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ

Published

on

ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ

ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.

ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ

Published

on

ಸುದ್ದಿದಿನ,ದಾವಣಗೆರೆ‌ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.

ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್‌ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್‌ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.

ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ತಾಲ್ಲೂಕು ತಹಶೀಲ್ದಾರ್‌ ರಾಜೇಶ್‌ ಕುಮಾರ್‌ ಸಿ ಅವರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending