Connect with us

ದಿನದ ಸುದ್ದಿ

ಅಭಿಯಾನದಲ್ಲಿ ಪೋಸ್ಟರ್ ಅಸ್ತ್ರ: ಸಲ್ಲದ ಎಡವಟ್ಟು..!

Published

on

ಸಾಂದರ್ಭಿಕ ಚಿತ್ರ
  • ಪ್ರಜ್ವಲ್ ತೇಜ ಡಿ.ಎಸ್, ಪ್ರಥಮ ವರ್ಷದ ಸ್ನಾತಕೋತ್ತರ ಪದವಿ ವಿದ್ಯಾರ್ಥಿ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಬೆಂಗಳೂರು ವಿಶ್ವವಿದ್ಯಾಲಯ

ತ್ತೀಚಿನ ದಿನಗಳಲ್ಲಿ ಪ್ರತಿ ಮಾಧ್ಯಮದಲ್ಲಿನ ಸಹ ಹೆಚ್ಚು ಸುದ್ದಿಯಲ್ಲಿರುವ ಪೋಸ್ಟರ್ ಅಭಿಯಾನ ಸಾಕಷ್ಟು ಗಮನ ಸೆಳೆಯುವುದರಲ್ಲಿ ಗೆದ್ದಿದ್ದರು. ಇದು ಸಹ ಸಾರ್ವಜನಿಕರಲ್ಲಿ ಪ್ರಜ್ಞೆಯನ್ನು ಮೂಡಿಸುವಲ್ಲಿ ಎಷ್ಟು ಮಾತ್ರ ಯಶಸ್ಸು ಕಂಡಿದೆ ಎಂಬುದು ಗಮನಿಸಬೇಕಾದ ವಿಷಯ.

ಸಾಮಾನ್ಯವಾಗಿ ಯಾವುದೇ ಚುನಾವಣಾ ಅಭಿಯಾನಗಳಲ್ಲಿ ತಮ್ಮ ಪಕ್ಷಗಳ ಈ ಹಿಂದಿನ ಯಶಸ್ಸು, ಕಾರ್ಯ ಮತ್ತು ಸಾಧನೆಗಳನ್ನು ತೋರ್ಪಡಿಸುವುದು ಅಥವಾ ಮುಂದೆ ತಮ್ಮ ಗುರಿಯೇನು ಎನ್ನುವುದು ಜನರಲ್ಲಿ ಪ್ರಜ್ಞಾವಂತಿಗೆ ಮೂಡಿಸುವ ಕೆಲಸ ಮಾಡುತ್ತಿತ್ತು. ಅದುವೇ ಪ್ರಚಾರದ ಭಾಗವಾಗಿತು. ಆದರೆ ಈಗ ಸುದ್ದಿಯಲ್ಲಿರುವ ಪೋಸ್ಟರ್ ಅಭಿಯಾನಗಳು ಜನರಲ್ಲಿ ಆಸಕ್ತಿ ಮೂಡಿಸುವ ಬದಲು ಪಕ್ಷಗಳ ಪರಸ್ಪರ ಸಂಘರ್ಷ, ಒಬ್ಬರ ಮೇಲೊಬ್ಬರು ಮಾಡುತ್ತಿರುವ ಆರೋಪಗಳು ಮಾತ್ರ ಕಾಣಸಿಗುತ್ತದೆ. ಇದು ಯಾವ ರೀತಿ ಉಪಯುಕ್ತವೆನ್ನುವುದು ರಾಜಕೀಯ ಪಕ್ಷಗಳು ಒಮ್ಮೆ ಯೋಚಿಸಬೇಕಾಗಿದೆ.

ಮುಖ್ಯವಾಗಿ ಜನರಿಗೆ ಪಕ್ಷವು ಯಾವ ರೀತಿಯ ಸಂದೇಶವನ್ನು ನೀಡುತ್ತಿದ್ದೇವೆ ಎಂದು ಯೋಚಿಸಬೇಕು. ಈ ಹಿಂದೆ ಪೋಸ್ಟರ್ ಗಳು ತಮ್ಮ ತಮ್ಮ ರಾಜಕೀಯ ಪಕ್ಷಗಳ ಯೋಜನೆ ಮತ್ತು ಜನರನ್ನು ತಲುಪುವ ಪ್ರಚಾರದ ಸಾಧನವಾಗಿ ಇರುತ್ತಿತು. ಆದರೆ, ಈಗ ಎದುರಾಳಿ ಪಕ್ಷದ ತೇಜೋವಧೆ ಮಾಡುವ ಸಾಧನವಾಗಿದೆ. ಈ ಪೋಸ್ಟರ್ ಅಭಿಯಾನವು ವಿರೋಧ ಪಕ್ಷ ಕಾಂಗ್ರೆಸ್ ನ ನಾಯಕರು ‘ಪೇ ಸಿಎಂ’ ಎಂದು ಶುರು ಮಾಡಿದ ಕಾರಣ ಅದು ಆಡಳಿತ ಪಕ್ಷದ ಕೆಂಗಣ್ಣಿಗೆ ಗುರಿಯಾಗಿ ಸಾಕಷ್ಟು ಕೋಲಹಲ ಮತ್ತು ಚರ್ಚೆಗೆ ಕಾರಣವಾಗಿತ್ತು. ಆ ಪೋಸ್ಟರ್ ಗಳಲ್ಲಿ ಕ್ಯೂಆರ್ ಕೋಡ್ ಇರಿಸಿ 40% ಕಮಿಷನ್ ಆರೋಪಿಗಳಿಗೆ ತುಪ್ಪ ಸುರಿಯಿತು. ಅದನ್ನು ಆಡಳಿತ ಪಕ್ಷವು ಅದನ್ನು ಸರಿಪಡಿಸಲು ಅಥವಾ ಸಮರ್ಥನೆ ನೀಡಲು ಹೋಗದೆ ಪ್ರತ್ಯುತ್ತರವಾಗಿ ಮತ್ತೊಂದು ಪೋಸ್ಟರ್ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ತಾವು ಹಿಂದೆ ಬಿದ್ದಿಲ್ಲ ಎಂದು ತೋರಿಸುವ ಪ್ರಯತ್ನವಾಯಿತು

ಅದರಿಂದಾಗಿ ಹೊರಗೆ ಬಂದ ಸವಾಲು ಕೆಪಿಸಿಸಿ (ಕರ್ನಾಟಕ ಪ್ರೋವಿಜಿನಲ್ ಕರಪ್ಶನ್ ಕಂಪನಿ) ಪೋಸ್ಟರ್ ಗಳು. ಇದರಿಂದ ಒಬ್ಬರ ಮೇಲೆ ಒಬ್ಬರು ಕೆಸರು ಎರಚುವ ಕೆಲಸ ಮಾಡಿದ್ದಾರೆ. ಹೊರತು ಅದರಿಂದ ಯಾವುದೇ ಸಕಾರಾತ್ಮಕ ಬೆಳವಣಿಗೆಗೆ ದಾರಿ ಮಾಡಲಿಲ್ಲ. ಈ ಗಲಭೆ ಅಲ್ಲಿಗೆ ನಿಲ್ಲದೆ ಹೊಸ ರೂಪ ಪಡೆಯುತ್ತಾ ಸೇ ಸಿಎಂ ಮತ್ತು ಸೇ ಮೇಯರ್ ಎಂದು ವಿವಿಧ ನಗರಗಳ ಆಡಳಿತ ಪಕ್ಷದ ಮೇಯರ್ ಗಳ ಮೇಲೆ ದಾಳಿ ನಡೆಸುವ ಕೆಲಸ ಪ್ರತಿಪಕ್ಷವು ಮುಂದುವರೆಸಿದೆ.

ಇದು ಪರಸ್ಪರ ವಾಗ್ದಾಳಿಗೆ ಮತ್ತು ಕೋಲಾಹಲ ಸೃಷ್ಟಿಸುತ್ತಿದೆ. ಈ ರೀತಿಯ ಬೆಳವಣಿಗೆ ಎಷ್ಟು ಮಾತ್ರ ಉಪಯುಕ್ತ ಎನ್ನುವುದು ಪರಸ್ಪರ ಎಲ್ಲಾ ರಾಜಕೀಯ ಪಕ್ಷಗಳು ಒಮ್ಮೆ ಯೋಚಿಸುವುದು ಸರಿ ಇಲ್ಲವಾದಲ್ಲಿ ಅದು ನಗೆ ಪಾಟಲು ಆಗುವ ಸಾಧ್ಯತೆಗಳನ್ನು ತಳ್ಳಿ ಹಾಕುವಂತಿಲ್ಲ.
ಒಂದೆಡೆ ಸಾಕಷ್ಟು ಸಾವು ನೋವುಗಳು ಮತ್ತು ವರುಣನ ಆರ್ಭಟ ಹೆಚ್ಚಾಗಿ ರಾಜ್ಯವೇ ಅಲ್ಲೋಲ ಕಲ್ಲೋಲ ಆಗಿರುವ ಸಮಯದಲ್ಲಿ ಈ ರೀತಿಯ ಪರಸ್ಪರ ವಾಗ್ದಾಳಿಗಳು ಯಾವ ರೀತಿ ಪ್ರಜ್ಞಾವಂತಿಕೆ ಯನ್ನು ಜನರಲ್ಲಿ ಮೂಡಿಸುತ್ತಿದ್ದಾರೆ ಎಂಬುದನ್ನು ತಿಳಿಯಬೇಕಾಗಿದೆ.

ಚರ್ಚಿಸಲು ಮತ್ತು ಗಮನಿಸಬೇಕಾದ ಸಾಕಷ್ಟು ಸಮಸ್ಯೆಗಳಿರುವಾಗ ಜನರಲ್ಲಿ ಮತ್ತು ರಾಜಕೀಯ ಪಕ್ಷಗಳ ವಲಯದಲ್ಲಿ ಈ ಪೋಸ್ಟರ್ ವಿವಾದವು ಯಾವುದೇ ಏಳಿಗೆ ಮಾಡುವಲ್ಲಿ ಉಪಯೋಗವಿಲ್ಲ. ಇದರ ಜತೆ ಜತೆಗೆ ನಡೆಯುತ್ತಿರುವ ಜನ ಸಂಕಲ್ಪ ಮತ್ತು ಭಾರತ್ ಜೋಡೋ ಯಾತ್ರೆಗಳು ಇದಕ್ಕೆ ಒಂದಷ್ಟು ಪುಷ್ಟಿ ನೀಡುವ ಕೆಲಸ ಮಾಡುತ್ತಿದೆ. ಚುನಾವಣೆಯ ಪ್ರಚಾರವೆಂದರೆ ಜನರು ತಮ್ಮನ್ನು ತಮ್ಮ ಪಕ್ಷವನ್ನು ಏಕೆ ಜನ ಆರಿಸಬೇಕು ಎಂಬುದು ತಿಳಿ ಹೇಳಬೇಕೆ ಹೊರತು ಅದು ತಮ್ಮ ಎದುರಾಳಿ ಪಕ್ಷಕ್ಕೆ ಧಕ್ಕೆ ಮತ್ತು ತೇಜೋವಧೆ ಮಾಡುವಂತಿರಬಾರದು, ಇದು ಕೇವಲ ನೈತಿಕತೆಯ ವಿಚಾರವಲ್ಲ ಅದು ಕಾನೂನಿನಲ್ಲಿರುವ ಒಂದು ಚೌಕಟ್ಟು.

ಪ್ರಜ್ವಲ್ ತೇಜ ಡಿ.ಎಸ್

ಪ್ರತಿಪಕ್ಷಗಳನ್ನು ಚುನಾವಣೆಯ ಸಮಯದಲ್ಲಿ ತೇಜೋವಧೆ ಮಾಡುವುದು ಅಥವಾ ಅವರ ಮನೋಭಾವನೆಗಳನ್ನು ನೋಯಿಸುವುದು ಕಾನೂನು ರೀತಿಯಲ್ಲಿ ಅಪರಾಧವಾಗುತ್ತದೆ. ಜನರಿಗೆ ಬಿಡಿಸಿ ಹೇಳಬೇಕಾಗಿರುವ ಸ್ಥಾನದಲ್ಲಿರುವ ನಾಯಕರೇ ಅಪರಾಧಿಗಳಾಗಿ ನಿಲ್ಲುವುದು ಎಷ್ಟು ಸರಿ. ಪೋಸ್ಟರ್ ಎನ್ನುವುದು ಸ್ವಯಂ ಪ್ರಚಾರಕ್ಕಾಗಿ ಮೂಡಿ ಬಂದಿರುವ ಒಂದು ಸಾಧನ ಅಷ್ಟೇ ಅದಕ್ಕೆ ಅದರದ್ದೇ ಆದ ಮಹತ್ವವನ್ನು ಹೊಂದಿದೆ. ಈ ಪೋಸ್ಟರ್ ಅಭಿಯಾನ ಚುನಾವಣೆ ಮುಗಿಯುವವರೆಗೂ ಚಲಾವಣಾಯಾಗುವ ಎಲ್ಲ ಸಾಧ್ಯತೆಗಳು ಇವೆ.

ಮೊದಲು ಕೇವಲ ಬೆಂಗಳೂರು ನಗರದಲ್ಲಿ ಶುರುವಾಗಿ ನಂತರ ಈಗ ರಾಜ್ಯದ ನಾನಾ ಭಾಗಗಳಿಗೂ ವಿಸ್ತರಿಸಿದೆ. ಹೊಸ ಹೊಸ ರೂಪದಲ್ಲಿ ಜನರಿಗೆ ದರ್ಶನ ನೀಡುತ್ತಿದೆ. ಶುರುವಾಗಿ ಸಾಕಷ್ಟು ದಿನಗಳು ಕಳೆದರು ಸಹ ಇದರ ಕಾವು ಇನ್ನು ಕಡಿಮೆಯಾಗಿಲ್ಲ, ಜತೆ ಜತೆಗೆ ಇದಕ್ಕೆ ಸಾಮಾನ್ಯರು ಕೂಡ ಸಮೂಹ ಮಾಧ್ಯಮಗಳಲ್ಲಿ ಪ್ರಚಾರ ಮಾಡುತ್ತಿರುವುದು ವಿಪರ್ಯಾಸ. ಇದು ಜನರಲ್ಲಿ ಒಂದು ರೀತಿಯ ಮನರಂಜನೆ ಮತ್ತು ವ್ಯಂಗ್ಯ ಚಿತ್ರಣ ಹಾಸ್ಯವಾಗಿ ಮೂಡಿ ಬರುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಸುದ್ದಿ ಮಾಡುತ್ತಿದೆ. ಸುದ್ದಿಯಾಗಿದೆ ಅಂದರೆ ಅದು ಇಷ್ಟವಾಗಿದೆ ಎಂದು ತಿಳಿಯುವುದು ಮೂರ್ಖತನವಾಗುತ್ತದೆ. ಈ ಪೋಸ್ಟರ್ ಅಭಿಯಾನ ಮಾಡುವ ಬದಲು ಜನರಲ್ಲಿ ವಿಶ್ವಾಸ ಮೂಡಿಸುವ ಸಾಕಷ್ಟು ಅವಕಾಶಗಳು ಇರುವುದನ್ನು ಬಳಸಿಕೊಳ್ಳುವುದೇ ಉತ್ತಮ.

ಈಗ ಆಗಿರುವ ಬದಲಾವಣೆಗಳು ಸಾಮಾನ್ಯರಿಗೆ ಉಪಯುಕ್ತ ಆಗುವ ಲಕ್ಷಣಗಳಿಲ್ಲ, ಇವುಗಳನ್ನು ಮಾಡುವ ಬದಲು ಜನರಿಗೆ ಬೇಕಾದ ಅಥವಾ ಉಪಯುಕ್ತವಾದ ವಿಚಾರಗಳನ್ನು ಚರ್ಚಿಸುವ ಅವಶ್ಯಕತೆ ಪ್ರಸ್ತುತ ಹೆಚ್ಚಿದೆ. ಈ ಹಿಂದೆ ಮತ್ತು ಪ್ರಸ್ತುತ ನಡೆಯುತ್ತಿರುವಂತಹ ಯಾತ್ರೆಗಳಿಗಿಂತ ಈ ಪೋಸ್ಟರ್ ಅಭಿಯಾನ ಹೆಚ್ಚು ಸುದ್ದಿಯಾಗಿರುವುದು ವಿಪರ್ಯಾಸವೇ ಸರಿ. ಈ ರೀತಿಯ ಅಭಿಯಾನಗಳು ಜನರಲ್ಲಿ ವಿಶ್ವಾಸ ಮತ್ತು ಸಕಾರಾತ್ಮಕತೆ ಮೂಡಿಸುವ ಬದಲು ನಕಾರಾತ್ಮಕವಾದ ವಾತಾವರಣ ಸೃಷ್ಟಿಯಾಗುತ್ತಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

Published

on

ಆಗಸ್ಟ್ 2023 ರಿಂದ ಜುಲೈ 2026 ರವರೆಗೆ ₹28,759 ಕೋಟಿ ಸಬ್ಸಿಡಿ ಬಿಡುಗಡೆ; ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್‌ನಿಂದ ಕೋಟ್ಯಂತರ ಕುಟುಂಬಗಳ ಆರ್ಥಿಕ ಸಬಲೀಕರಣ

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.

ಹೌದು! 2023ರ ಆಗಸ್ಟ್‌ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್‌ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.

http://Visit : www.suddidina.com

ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ: 

ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್‌ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.

ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್‌ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.

ಕುಟುಂಬದ ಬಜೆಟ್‌ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:

ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.

ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

Continue Reading

ದಿನದ ಸುದ್ದಿ

ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!

Published

on

ಕರ್ನಾಟಕದ ವೈಟ್‌ಫೀಲ್ಡ್-ಬಂಗಾರಪೇಟೆ, ಹೊಸೂರು-ಓಮಲೂರು ಮಾರ್ಗ ಸೇರಿ 9 ರಾಜ್ಯಗಳ 1200 ಕಿ.ಮೀ ರೈಲು ಜಾಲ ವಿಸ್ತರಣೆಗೆ ಪ್ರಧಾನಿ ಮೋದಿ ಅಧ್ಯಕ್ಷತೆಯ ಸಂಪುಟ ಸಭೆಯಲ್ಲಿ ಅನುಮೋದನೆ

ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.

http://Visit : www.suddidina.com

ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್‌ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.

ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:

1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್‌ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.

2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.

3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.

4. ಖರಗ್‌ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್‌ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್‌ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.

ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್‌ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.

ಕರ್ನಾಟಕಕ್ಕೆ ಏನು ಲಾಭ?

ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್‌ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.

ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್‌ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.

ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

Continue Reading

ದಿನದ ಸುದ್ದಿ

ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು

Published

on

ಸೆ.10 ರಂದು ವಿಧಾನಸೌಧದಲ್ಲಿ ಶತದಿನೋತ್ಸವ ಸಮಾರಂಭ; ಮಾಜಿ ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ, ಗ್ಯಾರಂಟಿ ಫಲಾನುಭವಿಗಳೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಸಂವಾದ

ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಶತಕದ ಸಂಭ್ರಮವನ್ನು ಆಚರಿಸಲು ರಾಜ್ಯ ಸರ್ಕಾರವು `ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ’ ಎಂಬ ವಿಶೇಷ ಮತ್ತು ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

 

ಈ ಕಾರ್ಯಕ್ರಮವು ನಾಳೆ ಅಂದರೆ 2026ನೇ ಸೆಪ್ಟೆಂಬರ್ 10ರ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಪ್ರತಿಷ್ಠಿತ ಬ್ಯಾಂಕ್ವೇಟ್ ಸಭಾಂಗಣದಲ್ಲಿ ನಡೆಯಲಿದೆ. ಸರ್ಕಾರದ ನೂರು ದಿನಗಳ ಸಾಧನೆ, ಜನಪರ ಯೋಜನೆಗಳ ಅನುಷ್ಠಾನ ಮತ್ತು ಮುಂದಿನ ಅಭಿವೃದ್ಧಿಯ ದೂರದೃಷ್ಟಿಯನ್ನು ಜನರ ಮುಂದಿಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.

ಗಣ್ಯರ ದಂಡು, ಸಿದ್ದರಾಮಯ್ಯರಿಂದ ಉದ್ಘಾಟನೆ:

ಈ ಶತದಿನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟು ಮತ್ತು ನಾಯಕತ್ವದ ನಿರಂತರತೆಯನ್ನು ಸಂಕೇತಿಸುತ್ತದೆ.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್, ರಾಜ್ಯ ಸಂಪುಟದ ಎಲ್ಲಾ ಸಚಿವರು, ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.

http://Visit : www.suddidina.com

ಫಲಾನುಭವಿಗಳೊಂದಿಗೆ ನೇರ ಸಂವಾದ – ಕಾರ್ಯಕ್ರಮದ ಪ್ರಮುಖ ಆಕರ್ಷಣೆ

ಈ ಕಾರ್ಯಕ್ರಮದ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಮುಖ್ಯಮಂತ್ರಿಗಳೊಂದಿಗೆ ಫಲಾನುಭವಿಗಳ ನೇರ ಸಂವಾದ. ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಈ ವೇದಿಕೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.

ಕೇವಲ ಗ್ಯಾರಂಟಿ ಯೋಜನೆಗಳಷ್ಟೇ ಅಲ್ಲದೆ, ಸಮಾಜದ ವಿವಿಧ ವರ್ಗಗಳ ಶ್ರಮಿಕರು ಮತ್ತು ಕಾರ್ಮಿಕರು ಕೂಡ ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ತಮ್ಮ ಬದುಕಿನಲ್ಲಿ ಸರ್ಕಾರದ ಯೋಜನೆಗಳಿಂದ ಆಗಿರುವ ಬದಲಾವಣೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮುಕ್ತವಾಗಿ ಮಾತನಾಡಲಿದ್ದಾರೆ.

100 ದಿನಗಳಲ್ಲಿ ಸರ್ಕಾರವು ಕೈಗೊಂಡಿರುವ ಜನಪರ ನಿರ್ಧಾರಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಆಡಳಿತದಲ್ಲಿ ತಂದಿರುವ ಪಾರದರ್ಶಕತೆಯ ಬಗ್ಗೆ ಈ ವೇದಿಕೆಯಲ್ಲಿ ಚರ್ಚೆ ನಡೆಯಲಿದೆ. ಸರ್ಕಾರದ ಸಾಧನೆಗಳನ್ನು ಕೇವಲ ಭಾಷಣದ ಮೂಲಕವಲ್ಲ, ಬದಲಾಗಿ ಫಲಾನುಭವಿಗಳ ಬಾಯಿಂದಲೇ ಜನರಿಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.

ಮುಂದಿನ ದಿನಗಳಲ್ಲಿ ದೃಢ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಸರ್ಕಾರದ ಮುಂದಿನ 5 ವರ್ಷಗಳ ಕಾರ್ಯಯೋಜನೆ ಮತ್ತು ರೂಪುರೇಷೆಗಳನ್ನು ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

Continue Reading

Trending