ರಾಜಕೀಯ
ಬಿಜೆಪಿ ಅಭ್ಯರ್ಥಿಯಾಗಿ ಭಯೋತ್ಪಾದನಾ ಆರೋಪಿ-ಒಂದು ಕೇಡಿನ ಪ್ರತೀಕ
- ಚುನಾವಣಾ ಅಭ್ಯರ್ಥಿಯಾಗಿ ಪ್ರಜ್ಞಾ ಠಾಕುರ್ ಆಯ್ಕೆ ಮತದಾರರಲ್ಲಿ ಧ್ರುವೀಕರಣ ತರುವ ಉದ್ದೆಶದಿಂದ ಕೋಮುವಾದವೇ ಮುಖ್ಯ ಒತ್ತು ಹಾಕಿರುವ ಬಿಜೆಪಿಯ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಬಂದಿದೆ. ಇಂತಹ ಒಂದು ವಿಭಜನಕಾರೀ ಪ್ರಚಾರದಲ್ಲಿ, ಒಬ್ಬ ಕಾವಿಧಾರಿ ಭಯೋತ್ಪಾದನಾ-ಆರೋಪಿ ಮತ್ತು ಮುಸ್ಲಿಂ-ದ್ವೇಷಿ ಬಿಜೆಪಿಯ ಚುನಾವಣಾ ಅಜೆಂಡಾದ ಒಂದು ಪ್ರತೀಕವಾಗಿದ್ದಾರೆ. ಇದು ಕೂಡ ಬಹಳ ಹೊಸದೇನಲ್ಲ. ಇನ್ನೊಬ್ಬ ಮುಸ್ಲಿಂರ ವಿರುದ್ಧ ದ್ವೇಷ ಕಾರುವ, ಕಾವಿಧಾರಿ, ಆದಿತ್ಯನಾಥರನ್ನು ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿ ಮಾಡಲಾಗಿದೆ ತಾನೇ?
ಭೋಪಾಲ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಪ್ರಜ್ಞಾ ಸಿಂಗ್ ಠಾಕುರ್ ನಾಮಕರಣ 17ನೇ ಲೋಕಸಭಾ ಚುನಾವಣೆಗಳಲ್ಲಿ ಒಂದು ಮಹತ್ವದ, ಅಶುಭಕಾರೀ ಕ್ಷಣ. ಬಿಜೆಪಿಯ ಈ ನಿರ್ಧಾರ ಈ ಚುನಾವಣೆಯಲ್ಲಿ ಅದರ ನಿಜವಾದ ವೇದಿಕೆ ಏನೆಂಬುದರ ಒಂದು ಘೋಷಣೆಯಾಗಿದೆ. ಯಾವುದೇ ಮುಲಾಜಿಲ್ಲದ ಉಗ್ರ ಹಿಂದುತ್ವ, ಮತ್ತು ಅದರೊಂದಿಗೆ ಅದರ ಎಲ್ಲ ನಕಾರಾತ್ಮಕ ತೊಡಕುಗಳು-ಇದೇ ಆ ವೇದಿಕೆ.
ಪ್ರಜ್ಞಾ ಠಾಕುರ್ 2008ರ ಮಾಲೆಗಾಂವ್ ಸ್ಫೋಟದ ಒಬ್ಬ ಆರೋಪಿ. ಈ ಸ್ಫೊಟವನ್ನು ಸಂಘಟಿಸಿದ ಗುಂಪಿನ ಸೂತ್ರಧಾರಳು ಎಂಬ ಆಪಾದನೆ ಆಕೆಯ ಮೇಲಿದೆ. ಈ ಮೊಕದ್ದಮೆಯ ಆರೋಪ ಪತ್ರ ಆರು ಜನಗಳನ್ನು ಸಾಯಿಸಿದ ಈ ಸ್ಫೋಟವನ್ನು ಉಂಟು ಮಾಡುವಲ್ಲಿ ಬಳಸಿದ ಸ್ಫೋಟಕಗಳಿಂದ ತುಂಬಿದ್ದ ಮೋಟಾರ್ ಸೈಕಲ್ ಆಕೆಯದ್ದು ಎಂದು ಹೊರಗೆಡಹಿದೆ.
ಮೋದಿ ಸರಕಾರ ಅಧಿಕಾರಕ್ಕೆ ಬಂದ ನಂತರ, ಆಕೆಯ ವಿರುದ್ಧ ಇದ್ದ ಮೊಕದ್ದಮೆಯನ್ನು ವಿಫಲಗೊಳಿಸಲು ಸಕಲ ಪ್ರಯತ್ನಗಳೂ ನಡೆದವು. ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಆಕೆಯ ವಿರುದ್ಧ ಸಾಕಷ್ಟು ಸಾಕ್ಷ್ಯಗಳಿಲ್ಲ ಎಂದು ನ್ಯಾಯಾಲಯಕ್ಕೆ ಹೇಳಿತು. ಆದರೆ ನ್ಯಾಯಾಲಯ ಅದನ್ನು ಒಪ್ಪದೆ ಆಕೆಯನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ(ಯುಎಪಿಎ) ಅಡಿಯಲ್ಲಿ ಆರೋಪಿಯಾಗಿಸಿದೆ. ಈಗ ಆಕೆ ವಿಚಾರಣೆಯ ನಡುವೆ ಜಾಮೀನಿನಲ್ಲಿ ಹೊರಗಿದ್ದಾರೆ.
ಇಂತಹ ಒಬ್ಬ ಭಯೋತ್ಪಾದನಾ ಆರೋಪಿಯನ್ನು ಭೋಪಾಲದಲ್ಲಿ ಬಿಜೆಪಿ ತನ್ನ ಅಭ್ಯರ್ಥಿಯಾಗಿ ಮಾಡಿದೆ. ಈ ಎಲ್ಲ ವರ್ಷಗಳಲ್ಲಿ ಆಕೆ ತನ್ನ ಉನ್ಮತ್ತ ಹಿಂದುತ್ವ ಮತ್ತು ಮುಸ್ಲಿಂ-ದ್ವೇಷಿ ಅಭಿಪ್ರಾಯಗಳನ್ನು ಎಂದೂ ಗುಟ್ಟಾಗಿ ಇಟ್ಟಿಲ್ಲ.
ನಾಮಪತ್ರ ಸಲ್ಲಿಸಿದ ಕೂಡಲೇ ಆಕೆ ಮಹಾರಾಷ್ಟ್ರ ಪೋಲೀಸ್ ಪಡೆಯ ಭಯೋತ್ಪಾದನಾ ನಿಗ್ರಹ ದಳ(ಎಟಿಎಸ್)ದ ಮುಖ್ಯಸ್ಥರಾಗಿದ್ದ ದಿವಂಗತ ಹೇಮಂತ ಕರ್ಕರೆ ಮೇಲೆ ಎರಗಿದರು. ಕರ್ಕರೆ ಮಾಲೆಗಾಂವ್ ಸ್ಫೋಟದ ತನಿಖೆ ಮಾಡಿದ್ದ, ಮತ್ತು ಪ್ರಜ್ಞಾ ಠಾಕುರ್ ಮತ್ತು ಆಕೆಯ ಸಹಯೋಗಿಗಳನ್ನು ಬಂಧಿಸಿದ್ದ ಪೋಲೀಸ್ ಅಧಿಕಾರಿ. ತಾನು ಕರ್ಕರೆಗೆ ಶಾಪ ಹಾಕಿದ್ದೆ, ಅದರಿಂದಾಗಿ ೪೫ ದಿನಗಳೊಳಗೆ ಆತ ಭಯೋತ್ಪಾದಕ ಗುಂಡಿಗೆ ಬಲಿಯಾಗಿ ಸತ್ತರು ಎಂದು ಆಕೆ ಹೇಳಿದಳು. ಹೇಮಂತ ಕರ್ಕರೆ ಒಬ್ಬ ಧೀರ ಪೋಲೀಸ್ ಅಧಿಕಾರಿಯಾಗಿದ್ದು, ನವಂಬರ್ 2008ರ ಮುಂಬೈ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದವರು. ಇಂತಹ ಒಂದು ಆಘಾತಕಾರಿ ಹೇಳಿಕೆಯ ನಂತರವೂ, ಬಿಜೆಪಿ ಅದನ್ನು ಖಂಡಿಸುವ ಆಶಯವನ್ನು ತೋರಲಿಲ್ಲ, ಅದು ಆಕೆಯ ವೈಯಕ್ತಿಕ ಅಭಿಪ್ರಾಯವಷ್ಟೇ, ಬಹುಶಃ ಪೋಲೀಸರಿಂದ ಆಕೆ ಅನುಭವಿಸಿದ ಚಿತ್ರಹಿಂಸೆಯಿಂದಾಗಿ ಇರಬಹುದು ಎಂದಷ್ಟೇ ಹೇಳಿತು.
ಈ ಬಗ್ಗೆ ಬಂದ ಟೀಕೆಯಿಂದ ವಿಚಲಿತಳಾಗದ ಪ್ರಜ್ಞಾ ಠಾಕುರ್ ಇನ್ನೂ ಮುಂದೆ ಹೋಗಿ ಬಾಬ್ರಿ ಮಸೀದಿಯ ಧ್ವಂಸ ನಡೆಯುತ್ತಿದ್ದಾಗ ತಾನು ಗುಮ್ಮಟದ ತುದಿಯಲ್ಲಿದ್ದೆ, ಆ ಸ್ಥಳದಲ್ಲಿ ರಾಮ ದೇವಸ್ಥಾನ ಕಟ್ಟುವಾಗಲೂ ಆ ಸ್ಥಳದಲ್ಲಿ ಇರುತ್ತೇನೆ ಎಂದರು.
ಪ್ರಜ್ಞಾ ಠಾಕುರ್ನ್ನು ಅಭ್ಯರ್ಥಿಯಾಗಿ ನಿಲ್ಲಿಸಿದ್ದು ಒಂದು ಬಹಳ ಯೋಚನೆ ಮಾಡಿ ನಿರ್ಧರಿಸಿದ್ದ ನಡೆ ಎಂಬುದು ನರೇಂದ್ರ ಮೋದಿ ಅದನ್ನು ಸಮರ್ಥಿಸಿಕೊಂಡ ರೀತಿಯಲ್ಲೇ ಕಾಣುತ್ತದೆ. ಆಕೆ ಅಭ್ಯರ್ಥಿಯಾಗಿರುವುದು ವಸುಧೈವ ಕುಟುಂಬಕಮ್ ನಲ್ಲಿ ನಂಬಿಕೆಯಿರುವ 5000 ವರ್ಷಗಳಷ್ಟು ಹಳೆಯ ನಾಗರಿಕತೆಯ ಹೆಸರುಗೆಡಿಸುವವರಿಗೆ, ಭಯೋತ್ಪಾದಕರು ಎಂದು ಕರೆದವರಿಗೆ ನೀಡಿರುವ ಒಂದು ಉತ್ತರ ಎಂದು ಅವರು ಹೇಳಿದ್ದಾರೆ. ಇದಕ್ಕೆ ಮೊದಲು ಎಪ್ರಿಲ್ 1 ರಂದು ವರ್ಧಾದಲ್ಲಿ ಮಾತಾಡುತ್ತ ಮೋದಿ, ಹಿಂದು ಭಯೋತ್ಪಾದನೆಯ ಮಾತಾಡುವವರು ಇಡೀ ಹಿಂದೂ ಸಮುದಾಯವನ್ನು ಅವಮಾನ ಮಾಡುತ್ತಾರೆ ಎಂದು ಹೇಳಿದ್ದರು.
ಸಾವಿರ ವರ್ಷಗಳ ಇತಿಹಾಸದಲ್ಲಿ ಹಿಂದೂ ಭಯೋತ್ಪಾದನೆಯ ಕೃತ್ಯವನ್ನು ತೋರಿಸುವ ಒಂದೇ ಒಂದು ಘಟನೆ ನಡೆದಿಲ್ಲ ಎಂದು ಅವರು ಸಾರಿದರು. ಇದು ಎಲ್ಲ ತರ್ಕಗಳನ್ನೂ ಹುಸಿಯಾಗಿಸಿರುವ ಅಸಂಬದ್ಧ ಹೇಳಿಕೆ. ನಾಥುರಾಂ ಗೋಡ್ಸೆಯಿಂದ ಹಿಡಿದು 2002ರ ಗುಜರಾತ್ ಹತ್ಯಾಕಾಂಡದ ವರೆಗೆ, ನಂತರ ದಭೋಲ್ಕರ್, ಪನ್ಸರೆ, ಕಲ್ಬುರ್ಗಿ, ಗೌರಿ ಹತ್ಯೆಗಳ ವರೆಗೆ ಹಿಂದುತ್ವ ಭಯೋತ್ಪಾದನೆಯ ಒಂದು ದೊಡ್ಡ ಸಾಲೇ ಇದೆ. ಈ ಎಲ್ಲ ಹೇಳಿಕೆಗಳ ಹಿಂದೆ ಇರುವ ತಿಳುವಳಿಕೆಯೆಂದರೆ, ಹಿಂದೂಗಳು ಭಯೋತ್ಪಾದಕರಾಗಲು ಸಾಧ್ಯವಿಲ್ಲ, ಕೇವಲ ಮುಸ್ಲಿಮರು ಮಾತ್ರವೇ ಹಾಗಾಗಲು ಸಾಧ್ಯ.
ಪ್ರಜ್ಞಾ ಠಾಕುರ್ ಒಬ್ಬ ಅಮಾಯಕ ಸಾಧ್ವಿ, ಆಕೆಯನ್ನು ಒಂದು ಸುಳ್ಳು ಕೇಸಿನಲ್ಲಿ ಸಿಗಿಸಲಾಗಿದೆ ಎಂಬುದು ಅಮಿತ್ ಷಾ ಮತ್ತು ಬಿಜೆಪಿಯ ನಿಲುವು. ಆದರೆ, ಅದೇ ವೇಳೆಗೆ, ಸಂಘ ಪಡೆಗಳು ಆಕೆ ಹಿಂದೂಗಳನ್ನು ಸಾಯಿಸಿದ್ದಕ್ಕೆ ಪ್ರತೀಕಾರ ತೀರಿಸಿರುವ ಧೀರೆ ಎಂದು ವೈಭವೀಕರಿಸುತ್ತಿವೆ.
ಚುನಾವಣಾ ಅಭ್ಯರ್ಥಿಯಾಗಿ ಪ್ರಜ್ಞಾ ಠಾಕುರ್ ಆಯ್ಕೆ ಮತದಾರರಲ್ಲಿ ಧ್ರುವೀಕರಣ ತರುವ ಉದ್ದೆಶದಿಂದ ಕೋಮುವಾದವೇ ಮುಖ್ಯ ಒತ್ತಾಗಿರುವ ಬಿಜೆಪಿಯ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಬಂದಿದೆ. ನರೇಂದ್ರ ಮೋದಿ ಮತ್ತು ಅಮಿತ್ ಷಾ ರಿಂದ ಹಿಡಿದು ಎಲ್ಲ ಬಿಜೆಪಿ ಮುಖಂಡರುಗಳ ಭಾಷಣಗಳು ದಿನಗಳೆದಂತೆ ಹೆಚ್ಚೆಚ್ಚು ಕರ್ಕಶಗೊಳ್ಳುತ್ತಿವೆ. ಹಿಂದೂಗಳಿಗೆ ಹೊರಗಿನ ಮತ್ತು ಒಳಗಿನ ಶತ್ರುಗಳಿಂದ ತಮ್ಮನ್ನು ರಕ್ಷಿಸಿಕೊಳ್ಳಬೇಕೆಂಬ ಕರೆ ನೀಡಲಾಗುತ್ತಿದೆ; ಅಲ್ಪಸಂಖ್ಯಾತರು ಬುಡಮೇಲು ಪಾತ್ರ ವಹಿಸುತ್ತಿದ್ದಾರೆ ಎಂದು ಸಾಕಷ್ಟು ಬಹಿರಂಗವಾಗಿಯೇ ಬೆದರಿಕೆ ಹಾಕಲಾಗುತ್ತಿದೆ; ತಮ್ಮ ರಾಷ್ಟ್ರೋನ್ಮಾದದ ಅಪಪ್ರಚಾರಕ್ಕೆ ಸಶಸ್ತ್ರ ಪಡೆಗಳ ಹೆಸರನ್ನು ಬಳಸಲಾಗುತ್ತಿದೆ; ಮತ್ತು ನಾಗರಿಕತ್ವ(ತಿದ್ದುಪಡಿ) ಮಸೂದೆ ಹಾಗೂ ರಾಷ್ಟ್ರೀಯ ನಾಗರಿಕರ ದಾಖಲೆ(ಎನ್ಆರ್ಸಿ) ಹೊರಗಿನವರನ್ನು ಹೊರಹಾಕುವ ಸಾಧನಗಳು ಎಂದು ಬಿಂಬಿಸಲಾಗುತ್ತಿದೆ.
ಇಂತಹ ಒಂದು ವಿಭಜನಕಾರೀ ಪ್ರಚಾರದಲ್ಲಿ, ಒಬ್ಬ ಕಾವಿಧಾರಿ ಭಯೋತ್ಪಾದನಾ-ಆರೋಪಿ ಮತ್ತು ಮುಸ್ಲಿಂ-ದ್ವೇಷಿ ಬಿಜೆಪಿಯ ಚುನಾವಣಾ ಅಜೆಂಡಾದ ಒಂದು ಪ್ರತೀಕವಾಗಿದ್ದಾರೆ. ಇದು ಕೂಡ ಬಹಳ ಹೊಸದೇನಲ್ಲ. ಇನ್ನೊಬ್ಬ ಮುಸ್ಲಿಂರ ವಿರುದ್ಧ ದ್ವೇಷ ಕಾರುವ, ಕಾವಿಧಾರಿ, ಆದಿತ್ಯನಾಥರನ್ನು ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿ ಮಾಡಲಾಗಿದೆ ತಾನೇ?
ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಘೋಷಣೆಯನ್ನು ನಿಜವಾಗಿಯೂ ಬಿಟ್ಟೇ ಬಿಡಲಾಗಿದೆ. ಅದರ ಜಾಗದಲ್ಲಿ ಒಂದು ಬಹಿರಂಗ ಹಿಂದುತ್ವ ಕೋಮುವಾದಿ-ಮಿಲಿಟರಿಶಾಹಿಮಾದರಿ-ಸಂಕುಚಿತವಾದೀ ಮನವಿ ಬಂದಿದೆ. ಇದು, ಮೋದಿ ವಿಕಾಸದ ಮಾತಾಡುವವರು ಎಂಬ ನಂಬಿಕೆಗೆ ಜೋತು ಬಿದ್ದಿರುವವರನ್ನೂ ಬೆಚ್ಚಿ ಬೀಳಿಸುವಂತದ್ದು. ಇಂತಹ ಭ್ರಮೆಗಳಿಗೆ ಈಗ ಯಾವ ಅವಕಾಶವೂ ಉಳಿದಿಲ್ಲ. ದೇಶವನ್ನು ಉಳಿಸುವ ಏಕೈಕ ದಾರಿಯೆಂದರೆ, ಬಿಜೆಪಿ ಮತ್ತು ಮೋದಿ ಸೋಲುವಂತೆ ಮಾಡುವುದು.
( ಈ ವಾರದ ಜನಶಕ್ತಿವಾರ ಪತ್ರಿಕೆಯಲ್ಲಿ ಪ್ರಕಟವಾದ ಲೇಖನ)
–ಪ್ರಕಾಶ ಕಾರಟ್
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಗೆ ದೂರು
ಸುದ್ದಿದಿನ, ಚಿತ್ರದುರ್ಗ: ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗಗಳಲ್ಲಿ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆಗೆ ಬಿಡುಗಡೆಯಾಗಿರುವ ಅಂದಾಜು 7 ಕೋಟಿ ಅನುದಾನದಲ್ಲಿನ ಅವ್ಯವಹಾರವನ್ನು ತನಿಖೆಗೆ ಒಳಪಡಿಸುವಂತೆ ಲೋಕಾಯುಕ್ತಾಗೆ ದೂರು ನೀಡಲಾಗಿದೆ ಎಂದು ವಕೀಲ ಕೆ.ಎ.ಓಬಳಪ್ಪ ಅವರು ತಿಳಿಸಿದರು.
ನಗರದ ಕಾರ್ಯನಿರತ ಪತ್ರಕರ್ತರ ಸಂಘದ ಕಛೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು.
ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇಲ್ಲಿಗೆ 2023-24ನೇ ಸಾಲಿನಲ್ಲಿ ಉಂಟಾದ ಮಳೆಯ ಅಭಾವ ಮತ್ತು ಬರದ ಕಾರಣದಿಂದ ಒಟ್ಟು 4 ಹಂತದಲ್ಲಿ 7 ಕೋಟಿ ರೂಪಾಯಿಗಳನ್ನು ಚಿತ್ರದುರ್ಗ ಜಿಲ್ಲೆಯ 06 ತಾಲ್ಲೂಕುಗಳಿಗೆ ಕುಡಿಯುವ ನೀರಿಗಾಗಿ ಸರ್ಕಾರ ಬಿಡುಗಡೆ ಮಾಡಿರುತ್ತದೆ. ಆದರೆ ಕೆಲವು ಅಧಿಕಾರಿಗಳು ತುರ್ತು ಕುಡಿಯುವ ನೀರಿನ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ಮಾಹಿತಿ ತಿಳಿದಿದೆ ಎಂದರು.
ಚಿತ್ರದುರ್ಗ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ 06 ತಾಲ್ಲೂಕುಗಳ ಉಪವಿಭಾಗಗಳಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ ಮಾಹಿತಿ ಕೋರಿದಾಗ, ಯಾವುದೇ ಉಪವಿಭಾಗಗಳ ಅಧಿಕಾರಿಗಳು ಸೂಕ್ತ ಮಾಹಿತಿ ನೀಡದ ಕಾರಣ ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರಿಗೆ ಅರ್ಜಿ ಸಲ್ಲಿಸಿ, ‘2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಳ್ಳಕೆರೆ, ಚಿತ್ರದುರ್ಗ, ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು, ಮೊಳಕಾಲ್ಮೂರು ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ’ ದೂರು ನೀಡಲಾಗಿತ್ತು ಎಂದರು.
ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರು ನಮ್ಮ ದೂರು ಅರ್ಜಿಯನ್ನು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ವರ್ಗಾಹಿಸಿ, ಸೂಕ್ತ ಕ್ರಮವಹಿಸಿ ಕಛೇರಿಗೆ ವರದಿ ಸಲ್ಲಿಸಲು ಸೂಚಿಸಿರುತ್ತಾರೆ. ಅದರಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರು ವಿಚಾರಣೆ ನಡೆಸಿ, ಅರ್ಜಿದಾರರಿಗೆ ಕಡತ ವೀಕ್ಷಣೆ ಮಾಡಲು ಅವಕಾಶ ನೀಡಿ, ದಾಖಲೆ ನೀಡುವಂತೆ ಆದೇಶ ಹೊರಡಿಸಿರುತ್ತಾರೆ ಎಂದು ತಿಳಿಸಿದರು.
ಕಾರ್ಯಪಾಲಕ ಅಭಿಯಂತರರ ಆದೇಶದಂತೆ ಸಹಾಯಕ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ, ಚಿತ್ರದುರ್ಗ, ಚಳ್ಳಕೆರೆ, ಹೊಳಲ್ಕೆರೆ, ಹೊಸದುರ್ಗ, ಹಿರಿಯೂರು ಇವರುಗಳು ವಿವಿಧ ದಿನಾಂಕಗಳAದು ಉಪವಿಭಾಗಗಳಿಗೆ ಆಹ್ವಾನಿಸಿ, ಕಡತ ಪರಿಶೀಲನೆ ಮಾಡಿಕೊಳ್ಳುವಂತೆ ತಿಳಿಸಿದ ಕಾರಣ ಉಪವಿಭಾಗಗಳ ಕಾರ್ಯಪಾಲಕ ಅಭಿಯಂತರರುಗಳು ನಿಗಧಿಪಡಿಸಿದ ದಿನಾಂಕದಂದು ಉಪವಿಭಾಗಗಳ ಕಛೇರಿಗೆ ಭೇಟಿ ನೀಡಿದಾಗ ಕಂಡುಬಂದ ಅಂಶಗಳೆಂದರೆ;
1. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಿತ್ರದುರ್ಗ ಇಲ್ಲಿ ಒಟ್ಟು 80 ಕಾಮಗಾರಿಗಳು ನಡೆದಿದ್ದು, ಇದರಲ್ಲಿ ಕೇವಲ 23 ಕಾಮಗಾರಿಗಳ (ಅಂದಾಜು ಮೊತ್ತ ರೂ. 37.88 ಲಕ್ಷ) ಕಡತಗಳನ್ನು ತೋರಿಸಿದ್ದು, ಉಳಿದ ಕಾಮಗಾರಿಯ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಕಡತ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.
2. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಳ್ಳಕೆರೆ ಇಲ್ಲಿ ಒಟ್ಟು 80 ಕಾಮಗಾರಿಗಳ ಕಡತಗಳಲ್ಲಿ 28 ಕಾಮಗಾರಿಗಳ ಕಡತಗಳನ್ನು ತೋರಿಸಿದ್ದು, ಉಳಿದ 52 ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.
3. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಹಿರಿಯೂರು, ಹೊಸದುರ್ಗ, ಹೊಳಲ್ಕೆರೆ, ಇಲ್ಲಿಗೆ ಭೇಟಿ ನೀಡಿದ ಸಮಯದಲ್ಲಿ ಈ ಕಛೇರಿಗಳಲ್ಲಿ ಯಾವುದೇ ಕಡತಗಳು ಲಭ್ಯವಿರುವುದಿಲ್ಲ. ಕಛೇರಿಯ ಸಿಬ್ಬಂದಿಗಳು ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಯಾವುದೇ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬುದಾಗಿ ದೃಢೀಕರಣ ನೀಡಿರುತ್ತಾರೆ ಎಂದು ತಿಳಿಸಿದರು.
ಕಡತ ಪರಿಶೀಲನೆಯ ತರುವಾಯ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ದೂರು ನೀಡಿ, ನಾವು ಕೋರಿದ ಅಗತ್ಯ ದಾಖಲೆಗಳನ್ನು ಒದಗಿಸಿಕೊಡುವಂತೆ ಕೋರಲಾಗಿತ್ತು. ಆದರೆ ಕಾರ್ಯಪಾಲಕ ಅಭಿಯಂತರರು ಇವರು ಮಾಹಿತಿ ಕೊಡಿಸುವಲ್ಲಿ ಮತ್ತು ತನಿಖಾ ವರದಿ ನೀಡುವಲ್ಲಿ ವಿಫಲರಾಗಿದ್ದಾರೆ. ಈ ಬಗ್ಗೆ ಹಾಲಿ ಕಾರ್ಯಪಾಲಕ ಅಭಿಯಂತರರಾದ ಅಮರ್ನಾಥ್ ಜೈನ್ ಅವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಾಗಿರುತ್ತದೆ ಎಂದರು.
ಈ ಎಲ್ಲಾ ಅಂಶಗಳನ್ನು ಆಧಾರವಾಗಿಟ್ಟುಕೊಂಡು ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ 6 ಉಪವಿಭಾಗಗಳಲ್ಲಿ ಕಾರ್ಯನಿರ್ವಹಿಸಿರುವ 23 ಸಹಾಯಕ ಕಾರ್ಯಪಾಲಕ ಅಭಿಯಂತರರು, 13 ಸಹಾಯಕ ಕಾರ್ಯಪಾಲಕ ಅಭಿಯಂತರರು, ಕಿರಿಯ ಅಭಿಯಂತರರು, ಅಂದಿನ ಕಾರ್ಯಪಾಲಕ ಅಭಿಯಂತರರಾದ ಬಸವನಗೌಡ ಪಾಟೀಲ್ ಹಾಗೂ ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ಸೋಮಶೇಖರ್ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಟಿಯಲ್ಲಿ ಹಿರಿಯ ವಕೀಲರಾದ ನಾಗರಾಜ ಪೂಜಾರ್, ಪತ್ರಕರ್ತ ಅಶೋಕ್, ಹನುಮಂತಪ್ಪ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಅನುದಾನ ದುರುಪಯೋಗ | ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಡಾ. ಅಶೋಕ್ ಡಿ.ಆರ್ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ, ಮೈಸೂರು ಇವರಿಗೆ ರಾಜ್ಯಾದ್ಯಂತ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಬಿಡುಗಡೆಯಾದ ರೂ. 695 ಲಕ್ಷಗಳ ಅನುದಾನದ ಖರ್ಚು ವೆಚ್ಚವನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಯಾವುದೇ ತನಿಖಾ ವರದಿನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ನಿರ್ಲಕ್ಷö್ಯ ತೋರಿದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಇಲ್ಲಿನ ನಿರ್ದೇಶಕರಾದ ಡಾ. ಅಶೋಕ್ ಡಿ.ಆರ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯದಲ್ಲಿನ ಬುಡಕಟ್ಟು ಸಮುದಾಯಗಳ ಪ್ರಗತಿಗೆ ಸಂಬAಧಿಸಿದAತೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಸಲುವಾಗಿ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ, ಮೈಸೂರು ಇವರಿಗೆ ರೂ. 695 ಲಕ್ಷ ರೂಪಾಯಿಗಳನ್ನು ಸರ್ಕಾರ ಬಿಡುಗಡೆ ಮಾಡಿರುತ್ತದೆ. ಸದರಿ ಅನುದಾನದ ಖರ್ಚು-ವೆಚ್ಚದಲ್ಲಿ ಸಾಕಷ್ಟು ಅವ್ಯವಹಾರ ಹಾಗೂ ಅಕ್ರಮಗಳು ನಡೆದಿರುವ ಅಧಿಕೃತ ದಾಖಲೆಗಳನ್ನು ಲಗತ್ತಿಸಿ ಇಲಾಖಾ ತನಿಖೆ ನಡೆಸುವಂತೆ ನಿರ್ದೇಶಕರು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಇವರಿಗೆ ದಿನಾಂಕ: 27-04-2026 ರಂದು ದೂರು ನೀಡಲಾಗಿತ್ತು.
ಆದರೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಸಾರ್ವಜನಿಕ ಹಿತಾಸಕ್ತಿ ಕೇಂದ್ರಿತ ದೂರು ಅರ್ಜಿಗೆ ಸಂಬಂಧಿಸಿದಂತೆ ನಿರ್ದೇಶಕರು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಇವರು ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡಿರುವುದಿಲ್ಲ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕರಾದ ಡಾ. ಅಶೋಕ್ ಡಿ.ಆರ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ
ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.
ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ3 days agoಅನುದಾನ ದುರುಪಯೋಗ | ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಡಾ. ಅಶೋಕ್ ಡಿ.ಆರ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ3 days agoತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಗೆ ದೂರು
-
ದಿನದ ಸುದ್ದಿ3 days agoಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ
-
ದಿನದ ಸುದ್ದಿ1 day agoಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್

