Connect with us

ಬಹಿರಂಗ

ಜಾತಿಯಲ್ಲಿ ಕರಗಿಹೋದ ಮತ್ತೊಬ್ಬಳು ‘ಪ್ರಿಯಾಂಕ’

Published

on

  • ಸಿ.ಎಸ್.ದ್ವಾರಕಾನಾಥ್

ಹೈದರಾಬಾದಿನ ಪ್ರಿಯಾಂಕರೆಡ್ಡಿ ರೇಪ್ ಪ್ರಕರಣ ಬೆಳಕಿಗೆ ಬಂದ ದಿನವೇ ಮತ್ತೊಬ್ಬ ಪ್ರಿಯಾಂಕ(ಪಕ್ಕದಲ್ಲಿ ‘ರೆಡ್ಡಿ’ ಇರಲಿಲ್ಲ) ಎಂಬ ಹೆಸರಿನ ಹೆಣ್ಣು ಮಗಳೊಬ್ಬಳ ರೇಪ್ ಮತ್ತು ಕೊಲೆ ಕೇಸಿನಲ್ಲಿ ವಿವರ ಕಲೆಹಾಕಿ ಪೋಲಿಸ್ ಮಹಾ ನಿರ್ದೇಶಕರೇ ಮುಂತಾದವರಿಗೆ ಮನವಿಯೊಂದನ್ನು ನೀಡಲು ನಮ್ಮ ಕಛೇರಿಯಲ್ಲಿ ಕುಳಿತು ಡ್ರಾಪ್ಟ್ ಮಾಡುತಿದ್ದೆವು!?

ಈ ಪ್ರಿಯಾಂಕ ಪ್ರಕರಣ ನಡೆದದ್ದು ಜಮಖಂಡಿಯಲ್ಲಿ, ಈಕೆಯ ಅಪ್ಪ ಒಬ್ಬ ದೇವದಾಸಿಯ ಮಗ! ಈಕೆಯ ತಾಯಿ ಮಾದರ ಕುಲದ ಹೆಣ್ಣುಮಗಳು. ಹೈದರಾಬಾದಿನ ಪ್ರಿಯಾಂಕ ರೆಡ್ಡಿ ಪ್ರಕರಣದಲ್ಲಿ ಆರೋಪಿಗಳು ಸಣ್ಣಪುಟ್ಟ ಪೊರಕಿಗಳಾದರೆ, ನಮ್ಮ ಜಮಖಂಡಿಯ ಪ್ರಿಯಾಂಕ ಕೇಸಿನಲ್ಲಿ ಆರೋಪಿಗಳು ಪ್ರತಿಷ್ಟಿತರು, ಬಿಜೆಪಿ ಶಾಸಕರ ಸಂಭಂದಿಗಳು ಮತ್ತು ಒಂದು ದೊಡ್ಡ ವಿದ್ಯಾಸಂಸ್ಥೆಯ ಮುಖ್ಯಸ್ಥರು!!

ಆ ದಿನ ಇದ್ದಕ್ಕಿದ್ದಂತೆ ನಮ್ಮ ಬಾಸ್ಕರ್ ಪ್ರಸಾದ್ ಏಳೆಂಟು ಮಂದಿ ಉತ್ತರ ಕರ್ನಾಟಕದ ಗ್ರಾಮಸ್ಥರನ್ನು ಕರೆದುಕೊಂಡು ನಮ್ಮ ಕಛೇರಿಗೆ ಬಂದರು. “ಸರ್ ಇವರ ಮಗಳ ರೇಪ್ ಮತ್ತು ಕೊಲೆಯಾಗಿ ನಾಲ್ಕು ತಿಂಗಳಾಗಿದೆ.. ಈವರೆಗೂ ಯಾರನ್ನೂ ಅರೆಸ್ಟ್ ಮಾಡಿಲ್ಲ.. ವಿಚಾರಣೆ ಕೂಡ ನಡೆಸಿಲ್ಲ.. ಮಗಳನ್ನು‌ ಕಳಕೊಂಡ ಈ ನತದೃಷ್ಟರು ನ್ಯಾಯಕ್ಕಾಗಿ ಕಂಬಕಂಬ ಅಲೆಯುತಿದ್ದಾರೆ.. ಇವರನ್ನು ಕೇಳುವವರಿಲ್ಲ.. ಅದಕ್ಕೇ ಇಲ್ಲಿಗೆ ಕರೆತಂದೆ..” ಎಂದರು.‌ ನನಗೆ ತಕ್ಷಣ ಅನಿಸಿದ್ದು “ಬಾಸ್ಕರ್ ಪ್ರಸಾದ್ ಜಮಖಂಡಿಗೆ ಹೋಗಿ ಪ್ರತಿಭಟಿಸದೆ ಇಲ್ಲಿಗೇಕೆ ಬಂದರು..?” ಎಂಬುದು! ಮತ್ತೇ ಮರುಕ್ಷಣದಲ್ಲೇ ಅರ್ಥವಾಯಿತು!?

ವಿಜಾಪುರದ ದಾನಮ್ಮ ಎಂಬ ದಲಿತ ಹೆಣ್ಣುಮಗಳ ರೇಪ್ ಮತ್ತು ಕೊಲೆ ಪ್ರಕರಣದಲ್ಲಿ ಬಾಸ್ಕರ್ ಪ್ರಸಾದ್ ವಿಜಾಪುರಕ್ಕೇ ಹೋಗಿ ಆಗಿನ‌ ಆರೋಪಿಗಳಾದ ಪ್ರತಿಷ್ಟಿತರ ವಿರುದ್ದ ಪ್ರತಿಭಟಿಸಿ ಜೈಲು ಸೇರಿದ್ದು! ಇಂದಿಗೂ ಆ ಕೇಸಿಗಾಗಿ ವಿಜಾಪುರಕ್ಕೆ ಅಲೆದಾಡುತ್ತಿರುವುದು ನೆನಪಾಯಿತು. ಕಡೆಗೆ ತಾನು ಒಬ್ಬಂಟಿಯಾಗಿಯೂ ಮತ್ತು ಲೇಖಕ ಕಾರ್ಪೆಂಟರ್ ಅವರೊಂದಿಗೆ‌ ಜತೆಗೂಡಿಯೂ ಅನುಭವಿಸುತ್ತಿರುವ ಕಷ್ಟಕೋಟಲೆಗಳ ನೆನಪಾಯಿತು!

ಈಗಲೂ ರೇಪಿಗೆ ಒಳಗಾಗಿ ಸತ್ತಿರುವುದು ದಲಿತ ಹೆಣ್ಣುಮಗಳೇ ಈಗಲೂ ಆರೋಪಿ ಸ್ಥಾನದಲ್ಲಿರುವವರು ವಿಜಾಪುರದ ಆರೋಪಿಗಳಿಗಿಂತಲೂ ಪ್ರಭಾವಿತರೇ! ಈ ಕಾರಣಕ್ಕೆ ಈ ಪ್ರಕರಣದಲ್ಲಿ ಹಿಂದೆ ದುಡುಕಿದಂತೆ ದುಡುಕದೆ ಒಂದಷ್ಟು ಬುದ್ದವಂತಿಕೆಯಿಂದ ನಿಭಾಯಿಸಲು ಮತ್ತು‌ ಕಾನೂನಾತ್ಮಕವಾಗಿ ಯೋಚಿಸಲು ನಮ್ಮ ಕಛೇರಿಗೆ ಬಂದಿದ್ದರು ಎನಿಸುತ್ತದೆ.

ಇಡೀ ಪ್ರಕರಣದ ವಿವರ ರೇಪ್ ಮತ್ತು ಕೊಲೆಯಾದ ಸಂತ್ರಸ್ಥೆಯ ಹೆತ್ತವರು ಹೇಳುವಂತೆ ಯತಾವತ್ತಾಗಿ, ಸಂಕ್ಷಿಪ್ತವಾಗಿ ಹೀಗಿದೆ…

ಪ್ರಿಯಾಂಕ, ಶಾಲಾ ದಿನಗಳಿಂದಲೂ ಚೂಟಿಯಿಂದಿದ್ದ ಹೆಣ್ಣುಮಗಳು, ಓದಿನಲ್ಲಿ ಸದಾ ಮೊದಲ ಸ್ಥಾನ. ಈಕೆ ಎಸ್.ಎಸ್.ಎಲ್.ಸಿ ಯಲ್ಲಿ ತೆಗೆದ ಉತ್ತಮ ಅಂಕ ನೋಡಿ ಇವಳ ತಾಯಿತಂದೆ ಇವಳ ಓದಿಗೆ ಇನ್ನಷ್ಟು ಪ್ರೋತ್ಸಾಹ ಕೊಡಲು ಚಿಮ್ಮಡ ಎಂಬ ಕುಗ್ರಾಮದಿಂದ ಜಮಖಂಡಿ ಎಂಬ ‘ಷಹರ’ಕ್ಕೆ ಕರೆತಂದು, ಕೂಲಿನಾಲಿ ಮಾಡಿ ಒಂದು ಲಕ್ಷ ರೂಗಳನ್ನು ಹೊಂದಿಸಿ “ರಾಯಲ್ ಪ್ಯಾಲೆಸ್ ಪಿ.ಯು.ಕಾಲೇಜು ಮತ್ತು ಹಾಸ್ಟೆಲ್, ಜಮಖಂಡಿ” ಗೆ ಸೇರಿಸಿದರು! ಈ ಪ್ರತಿಷ್ಟಿತ ವಿದ್ಯಾಸಂಸ್ಥೆ ಸ್ಥಳೀಯ ಬಿಜೆಪಿ ಶಾಸಕರಾದ ಆನಂದ ಸಿದ್ದು ನ್ಯಾಮಗೌಡರದು! ಇದರ ಛೇರ್ಮನ್ ಶಾಸಕರ ಸಹೋದರ ಬಸವರಾಜ ಸಿದ್ದು ನ್ಯಾಮಗೌಡರು.

ಪ್ರಿಯಾಂಕ ಹೊಸ ಕಲಿಕೆಯ ವಾತಾವರಣದಲ್ಲಿ ಕಲಿಯುತ್ತಾ ಅತ್ಯಂತ ಖುಷಿಯಿಂದಿದ್ದಳು, ಒಂದು ದಿನ ಅಪ್ಪನಿಗೆ ಪೋನ್ ಮಾಡಿ ತನಗೆ ಬಟ್ಟೆ ಕೊಂಡುಬರುವಂತೆ ಕೇಳಿದಳು. ಅಪ್ಪ ಅಮ್ಮ ಮಗಳಿಗೆ ಬಟ್ಟೆ ಕೊಡಲು ಹಾಸ್ಟೆಲ್ಲಿಗೆ ಬಂದರೆ ಹಾಸ್ಟೆಲ್ಲಿನ ದೊಡ್ಡ ಗೇಟ್ ತೆರೆಯಲು ವಾಚಮೆನ್ ಒಪ್ಪಲಿಲ್ಲ.

ಅಪ್ಪ ಅಮ್ಮ ಇಬ್ಬರೂ ವಾಚಮೆನ್ ಬಳಿ ಅಂಗಲಾಚುತಿದ್ದದ್ದನ್ನು ನೋಡಿ ಮಗಳು ಪ್ರಿಯಾಂಕ ಗೇಟಿನ ಬಳಿ‌ ಓಡಿ ಬಂದು ಹೆತ್ತವರಿಂದ ಬಟ್ಟೆ ತೆಗೆದುಕೊಳ್ಳುತಿದ್ದಾಗ ಅದ್ಯಾಪಕರೊಬ್ಬರು ಗೇಟಿನ ಬಳಿ ಬಂದು ಅನಾವಶ್ಯಕವಾಗಿ ಕ್ಯಾತೆ ತೆಗೆದು ಪ್ರಿಯಾಂಕಳ ಅಪ್ಪ ಅಮ್ಮನೊಂದಿಗೆ ಪ್ರಿಯಾಂಕಳನ್ನೂ ಜಾತಿ ನಿಂದನೆಯ ಅವಾಚ್ಯ ಶಬ್ದಗಳಿಂದ ನಿಂದಿಸತೊಡಗಿದರು!

ಈ ಮದ್ಯೆ ಸದರಿ ಅದ್ಯಾಪಕ ಮತ್ತು ಪ್ರಿಯಾಂಕಳ ಪೋಷಕರ ನಡುವೆ ಒಂದಷ್ಟು ಮಾತಿನ ಚಕಮಖಿ ಕೂಡ ಲಘುವಾಗಿ ನಡೆದು ಹೋಯಿತು. ಕಡೆಗೆ ಪ್ರಿಯಾಂಕ ಅದ್ಯಾಪಕರ ಕ್ಷಮೆ ಕೇಳಿ ಅದ್ಯಾಪಕರೊಂದಿಗೇ ಒಳ ನಡೆದಳು, ಅಪ್ಪ ಅಮ್ಮ ಊರಿಗೆ ಹಿಂದಿರುಗಿದರು.

ಅದೇ ದಿನ ಸಂಜೆ ಪ್ರಿಯಾಂಕಳ ಅಪ್ಪನಿಗೆ ಹಾಸ್ಟೆಲ್ಲಿನ ವಾಚಮೆನ್ ಪೋನ್ ಮಾಡಿ ” ನಿಮ್ಮ ಮಗಳು ಆಸ್ಪತ್ರೆಗೆ ದಾಖಲಾಗಿದ್ದಾಳೆ ಹೊರಟು ಬನ್ನಿ..” ಎಂದಿದ್ದ! ಪ್ರಿಯಾಂಕಳ ಹೆತ್ತವರು ಗಾಬರಿಗೊಂಡು ಓಡಿಬಂದು ಆಸ್ಪತ್ರೆ ತಲುಪವಷ್ಟರಲ್ಲಿ ಪ್ರಿಯಾಂಕಳನ್ನು ಡಿಸಾರ್ಜ್ ಮಾಡಿಸಿಕೊಂಡು ಆಸ್ಪತ್ರೆಯಿಂದ ಹಾಸ್ಟೆಲ್ಲಿಗೆ ಕರೆದುಕೊಂಡು ಹೊರಟುಹೋಗಿದ್ದರು!?

ಪ್ರಿಯಾಂಕಾಳ ಪೋಷಕರು ಹಾಸ್ಟೆಲ್ಲಿಗೆ ಹೋದಾಗ ತಿಳಿದ ವಿಷಯವೇನೆಂದರೆ ತಮ್ಮ ಜತೆ ಅಂದು ಬೆಳಿಗ್ಗೆ ಜಗಳವಾಡಿದ್ದ ಆದ್ಯಾಪಕ ಪ್ರಿಯಾಂಕಳ ಕಪಾಳಕ್ಕೆ ಬಲವಾಗಿ ಹೊಡೆದ ಪರಿಣಾಮ ಪ್ರಿಯಾಂಕ ಪ್ರಜ್ನೆ ತಪ್ಪಿ ಬಿದ್ದಿದ್ದಳು! ನಂತರ ಆಸ್ಪತ್ರೆ ಸೇರಿಸಿ ಚಿಕಿತ್ಸೆ ಕೊಡಿಸಿ ಹಾಸ್ಟೆಲ್ಲಿಗೆ ವಾಪಸ್ಸು ಕರೆದೊಯ್ದಿದ್ದರು.

ಈ ವಿಷಯ ತಿಳಿದಾಕ್ಷಣ ಪ್ರಿಯಾಂಕಳನ್ನು ಹಾಸ್ಟೆಲ್ಲಿನಿಂದ ಕರೆದೊಯ್ಯಲು ಅವಳ ಪೋಷಕರು ತೀರ್ಮಾನಿಸಿದರು. ಅಷ್ಟರಲ್ಲಿ ರೀತಾ ಜೈನರ್ ಎಂಬ ಪ್ರಿನ್ಸಿಪಾಲರು ಇವರನ್ನು ಸಮಾದಾನಪಡಿಸಿ ಮುಂದೆ ಈ ರೀತಿಯ ಅನಾಹುತ ಆಗದಂತೆ ಎಚ್ಚರವಹಿಸುವುದಾಗಿ ದೈರ್ಯ ಹೇಳಿ ಕಳಿಸಿದರು.

ಈ ಘಟನೆಯ ನಂತರ ದಿನಾಂಕ 9ನೇ ಜುಲೈ 2019 ರಂದು ರಾತ್ರಿ 11 ಗಂಟೆಗೆ ಹಾಸ್ಟೆಲ್ಲಿನಿಂದ ಪ್ರಿಯಾಂಕ ತಂದೆಗೆ ಪೋನ್ ಮಾಡಿ “ನಿಮ್ಮ ಮಗಳು ಪ್ರಿಯಾಂಕ ಕಾಲೇಜು ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಸತ್ತಿದ್ದಾಳೆ..” ಎಂದರು! ಪ್ರಿಯಾಂಕಳ ಹೆತ್ತವರು ಎದೆಎದೆ ಬಡಕೊಂಡು ಗೋಳಾಡುತ್ತಾ ಅಲ್ಲಿಗೆ ಹೋದರೆ, ಹದಿನೇಳು ವಯಸ್ಸಿನ ಮಗು ಪ್ರಿಯಾಂಕಳನ್ನು ಪಕ್ಕಕ್ಕೆ ತಿರುಗಿಸಿ ಮಲಗಿಸಿದಂತೆ ವ್ಯವಸ್ಥೆ ಮಾಡಿದ್ದರು!

ಆಕೆಯ ಚಪ್ಪಲಿಗಳನ್ನು ಟೆರೇಸಿನ ಮೇಲೆ ಜೋಡಿಸಿ ಇಡಲಾಗಿತ್ತು!! ಅಲ್ಲಿಂದ ಆಚೆ ಜಮಖಂಡಿಯ ಗ್ರಾಮಾಂತರ ಠಾಣೆಯ ಪಿ.ಎಸ್.ಐ, ಸಿ.ಐ.ಪಿ ಮತ್ತು ಡಿ.ವೈ.ಎಸ್.ಪಿ ಗಳು ಈ ಕೇಸನ್ನು ಮುಚ್ಚಲು ಪ್ರತ್ಯಕ್ಷವಾಗಿ, ಪರೋಕ್ಷವಾಗಿ ಎಲ್ಲಾ ರೀತಿಯ ಕೆಲಸಗಳನ್ನೂ ಮಾಡತೊಡಗಿದರು! ಅಂದು ಪ್ರಿಯಾಂಕಳನ್ನು ಹೊಡೆದ ಅದ್ಯಾಪಕನಾದಿಯಾಗಿ ಆ ವಿದ್ಯಾಸಂಸ್ಥೆಯಲ್ಲಿನ ಯಾರ ಹೆಸರುಗಳನ್ನೂ ಹೊರಬಾರದಂತೆ ಎಚ್ಚರ ವಹಿಸಿದರು! ದೇಹವನ್ನು ಬೇಗ ಸುಡುವಂತೆ ಹೆತ್ತವರನ್ನು ಒತ್ತಾಯಿಸಿದರು!

ತಮಗೆ ಬೇಕಾದಂತೆ ಪೋಸ್ಟ್ ಮಾರ್ಟಂ ಮಾಡಿಸಿಕೊಂಡರು! ಮೊದಲಿಗೆ ಹೆತ್ತವರು ಕೊಟ್ಟ ‘ರೇಪ್ ಅಂಡ್ ಮರ್ಡರ್’ ದೂರನ್ನು ಕೂಡ ದಾಖಲಿಸಲಿಲ್ಲ! ಆ ಸಂಧರ್ಭದಲ್ಲಿ ಒಂದಷ್ಟು ದಲಿತ ಸಂಘಟನೆಗಳು ಬಂದಿದ್ದರಿಂದ ನಂತರ ದಾಖಲಿಸಿಕೊಂಡರು! ಅದರ ನಂತರ ದಲಿತ ಸಂಘಟನೆಗಳು ‘ಕಾರಣಾಂತರ’ದಿಂದ ನಿಷ್ಕ್ರಿಯವಾದವು!? ಪ್ರಿಯಾಂಕಳ ಹೆತ್ತವರು ದಿಕ್ಕಿಲ್ಲದವರಾದರು!

ಆಶ್ಚರ್ಯವೆಂದರೆ ಪೋಲಿಸರೇನೋ F.I.R (0102/2019)ದಾಖಲಿಸಿಕೊಂಡಿದ್ದಾರೆ. I.P.C ಸೆಕ್ಷನ್ 376, 302, 34 (ರೇಪ್ ಮತ್ತು ಕೊಲೆ) ಮತ್ತು ‘ಪೋಕ್ಸೊ ಕಾಯಿದೆ’ಯಲ್ಲೂ ದೂರು ದಾಖಲಿಸಿದ್ದಾರೆ! ಆದರೆ ಅಪಾದಿತರು ಮಾತ್ರ ವ್ಯಕ್ತಿಗಳಲ್ಲ ಬದಲಿಗೆ ‘ಜಮಖಂಡಿ ರಾಯಲ್ ಪ್ಯಾಲೆಸ್ ಕಾಲೇಜ್ ಅಡ್ಮಿನಿಸ್ಟ್ರೇಶನ್’ ಎಂಬ ಸಂಸ್ಥೆ!! ಈ ದೇಶದಲ್ಲಿ ಒಂದು ಸಂಸ್ಥೆ ಕೂಡ ರೇಪ್ ಅಂಡ್ ಮರ್ಡರ್ ಮಾಡುತ್ತದೆ!!

ಈ ಘಟನೆ ಆಗಿ ನಾಲ್ಕು ತಿಂಗಳಾದರೂ ಯಾರನ್ನೂ ಈವರೆಗೆ ಅರೆಸ್ಟ್ ಮಾಡುವುದಿರಲಿ ವಿವಾರಣೆಯನ್ನೂ ಮಾಡಿಲ್ಲ! ಪ್ರಿಯಾಂಕರೆಡ್ಡಿಯ ಪ್ರಕರಣ ದೇಶಾದ್ಯಂತ ಪ್ರತಿಭಟನೆಗೆ ಕಾರಣವಾದಂತೆ ಪ್ರಿಯಾಂಕ ಪ್ರಕರಣ ಆಗಲಿಲ್ಲ. ಪ್ರಿಯಾಂಕರೆಡ್ಡಿ ಕೇಸಿನ ತಪ್ಪಿತಸ್ಥರನ್ನು ಬೀದಿಯಲ್ಲೇ ಸುಡಬೇಕು, ನಡುಬೀದಿಯಲ್ಲಿ ನೇಣುಹಾಕಬೇಕು ಎಂಬಂತೆ ಯಾವ ಮಾದ್ಯಮವೂ ಜಮಖಂಡಿ ಪ್ರಿಯಾಂಕ ಕೇಸಿನಲ್ಲಿ ಒತ್ತಡ ತರಲಿಲ್ಲ!

ಯಾರೂ ಮೇಣದ ಬತ್ತಿ ಹಚ್ಚಲಿಲ್ಲ, ಪಾರ್ಲಿಮೆಂಟಿನಲ್ಲೂ ಚರ್ಚೆಯಾಗಲಿಲ್ಲ!! ಯಾಕೆಂದರೆ ಇವೆಲ್ಲಾ ಆಗುವಷ್ಟು ಪ್ರಿಯಾಂಕ ಪ್ರತಿಷ್ಟಿತ ಜಾತಿಗೆ ಸೇರಿದವಳಲ್ಲ, ಇವೆಲ್ಲಾ ಬೇಡ ಬಿಡಿ.. ಪ್ರಿಯಾಂಕಳನ್ನು ಹೆತ್ತವರು ಅಂಗಲಾಚಿ ಬೇಡುತಿದ್ದಾರೆ.. ಅವರ ಮಗಳಿನ ಅನ್ಯಾಯದ ಸಾವಿಗೆ ಕನಿಷ್ಟ ನ್ಯಾಯಕೊಡಿಸಿ, ಅಷ್ಟು ಸಾಕು…?

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಭಾರತದ ಜನಸಂಖ್ಯೆ ವರವೋ..? ಶಾಪವೋ..?

Published

on

ಸಾಂದರ್ಭಿಕ ಚಿತ್ರ

 

  • ಅಂಬಿಕಾ. ಕೆ
    ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ
    ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ
    ಬೆಂಗಳೂರು ವಿಶ್ವವಿದ್ಯಾಲಯ

 

ವಿಶ್ವ ಸಂಸ್ಥೆಯು ಪಾಪುಲೇಷನ್ ಫಂಡ್ ಮಾಡಿರುವ ಅಂದಾಜಿನ ಪ್ರಕಾರ ಭಾರತವು ಜಗತ್ತಿನ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ ಎನಿಸಿಕೊಂಡಿದೆ.

ದೇಶದ ಒಟ್ಟು ಜನಸಂಖ್ಯೆಯು 142.86 ಕೋಟಿಗೆ ಏರಿಕೆಯಾಗಿದ್ದು, ಚೀನಾ ಎರಡನೇ ಸ್ಥಾನಕ್ಕೆ ಇಳಿದಿದೆ, ಇಂತಹದೊಂದು ಹಿರಿಮೆಗೆ ಭಾರತವು ಪಾತ್ರವಾಗಲಿದೆ ಎಂಬುದರ ಅರಿವು ಹಿಂದೆಯೇ ಇತ್ತು. ಹೊಸ ಭಾರತದ ಜನಸಂಖ್ಯೆಯ ಸ್ವರೂಪವೇನು ಮತ್ತು ಯಾವ ವಯೋ ಮಾನದವರು ಎಷ್ಟಿದ್ದಾರೆ. ಆದಾಯ ಮಟ್ಟ ಹೇಗಿದೆ, ಆದಾಯ ಹಂಚಿಕೆ ಹೇಗಿದೆ ಎಂಬುದರ ಕುರಿತು ಕೂಡ ಚರ್ಚೆಗಳು ನಡೆಯುತ್ತಿವೆ. ಒಟ್ಟು ಜನಸಂಖ್ಯೆಯ ಜತೆಗೆ ಈ ಎಲ್ಲಾ ಅಂಶಗಳು ಕೂಡ ಸರ್ಕಾರದ ನೀತಿಗಳು ಮತ್ತು ಕಾರ್ಯಕ್ರಮ ರೂಪಿಸುವಿಕೆ ಮೇಲೆ ಪ್ರಭಾವ ಬೀರುತ್ತವೆ. ರಾಜಕೀಯ ಪಕ್ಷಗಳು ಮತ್ತು ಗುಂಪುಗಳು ರಾಜಕೀಯ ಹಾಗೂ ಸಾಮಾಜಿಕ ಸ್ಥಾನಗಳನ್ನು ನಿರ್ಧರಿಸುವಲ್ಲಿಯೂ ಈ ಅಂಶಗಳು ಪಾತ್ರವಹಿಸುತ್ತವೆ ಭಾರತದಲ್ಲಿ ಗರಿಷ್ಠ ಸಂಖ್ಯೆಯು ಯುವ ಜನರಿದ್ದಾರೆ.

ಹಾಗೆಯೇ ಮುಂದುವರೆಯಲಿದೆ 15 ರಿಂದ 24 ವರ್ಷದೊಳಗಿನವರ ಸಂಖ್ಯೆಯು 25.4 ಕೋಟಿ ಎಂದು ಅಂದಾಜಿಸಲಾಗಿದೆ ಇನ್ನು ದೀರ್ಘಕಾಲ ಭಾರತವು ಈ ಸ್ಥಿತಿ ಕಾಯ್ದುಕೊಳ್ಳಲಿದೆ ಎಂಬುದರಲ್ಲಿಯೂ ಅನುಮಾನ ಇಲ್ಲ ಜನಸಂಖ್ಯೆಯಲ್ಲಿ ಜಗತ್ತಿನಲ್ಲಿ ಮೊದಲ ಸ್ಥಾನಕ್ಕೆ ಏರುವುದು, ಗೌರವ ಏನು ಅಲ್ಲ ಬದಲಿಗೆ ಇದು ದೇಶಕ್ಕೆ ಹಲವು ಸವಾಲುಗಳನ್ನು ಹುಟ್ಟುತ್ತದೆ ಜತೆಗೆ ಅವಕಾಶಗಳ ಬಾಗಿಗಳನ್ನು ತೆರೆಯುತ್ತದೆ ಆದರೆ, ಜನರನ್ನು ಸಕಾಲಿಕವಾಗಿ ಮತ್ತು ಪರಿಣಾಮಕಾರಿಯಾಗಿ ಬಲಿಸಿಕೊಳ್ಳದೆ ಇದ್ದರೆ ಜನಸಂಖ್ಯೆಯೇ ಶಾಪವಾಗಿ ದೊಡ್ಡ ಸವಾಲಾಗಿ ಪರಿಣಮಿಸಬಹುದು. ದೇಶ ಪ್ರತಿ ವರ್ಷವೂ ಹೆಚ್ಚು ಹೆಚ್ಚು ಜನರಿಗೆ ಆಹಾರ ಬಟ್ಟೆ ಶಿಕ್ಷಣ ಆರೋಗ್ಯ ಸೇವೆ ಉದ್ಯೋಗಾವಕಾಶಗಳನ್ನು ಒದಗಿಸಬೇಕಾಗುತ್ತದೆ.

ಅಂಬಿಕಾ. ಕೆ

ಹೀಗೆ ಮುಂದುವರೆದರೆ ಉದ್ಯೋಗಾವಕಾಶಗಳು ದೊರೆಯದೆ ಜನರ ಜೀವನ ಮಟ್ಟ ಸುಧಾರಿಸಿಕೊಳ್ಳುವುದು ಕಷ್ಟವೇ ಸರಿ ಕೆಲಸ ಮಾಡುವ ವಯೋಮಾನದ ಜನರನ್ನು ಸಮಂಜಸವಾಗಿ ಬಳಸಿಕೊಂಡರೇ ಮಾತ್ರ ಜನಸಂಖ್ಯೆಯು ದೇಶದ ಅಭಿವೃದ್ಧಿಗೆ ಪೂರಕವಾಗಿ ಪರಿಣಮಿಸುತ್ತದೆ. ದೇಶದಲ್ಲಿ ದೊಡ್ಡ ಸಂಖ್ಯೆಯ ಜನರಿಗೆ ಈಗಲೂ ಮೂಲ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಗಿಲ್ಲ ಆದ್ದರಿಂದ ಎಲ್ಲಾ ಕ್ಷೇತ್ರಗಳಲ್ಲಿಯೂ ಸಂಬಂಧಿಸಿದ ನೀತಿಗಳು ಮತ್ತು ಕಾರ್ಯತಂತ್ರ ಗಳಿಗೆ ಸಂಬಂಧಿಸಿದ ಪ್ರಯತ್ನಗಳನ್ನು ನಡೆಸದೇ ಇದ್ದರೆ ಜನಸಂಖ್ಯೆ ಹೆಚ್ಚಳದ ಲಾಭವು ದೊರೆಯದೆ ಹೋಗಬಹುದು ಇದರ ಪರಿಣಾಮವಾಗಿ ಲಾಭದ ಹೆಸರಿನಲ್ಲಿ ನಷ್ಟವೇ ಹೆಚ್ಚು ಅದುವೇ ಒಂದು ಹೊರೆಯುವಾಗಬಹುದು.

ಯುವ ಜನರಿಗೆ ಸೌಲಭ್ಯಗಳು ಮತ್ತು ಅವಕಾಶಗಳನ್ನು ಸೃಷ್ಟಿಸುವುದರ ಜೊತೆಗೆ ಹೆಚ್ಚುತ್ತಲೇ ಇರುವ ಹಿರಿಯ ನಾಗರಿಕರ ಹಾರೈಕೆಯು ವ್ಯವಸ್ಥೆ ಮಾಡಬೇಕಿದೆ ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳುವುದು ಮತ್ತು ಸವಾಲುಗಳನ್ನು ಎದುರಿಸುವುದು ಭಾರತೀಯರ ಹೊರೆಗಾರಿಕೆ ದೇಶದ ಜನರ ಅಗತ್ಯಗಳನ್ನು ಪೂರೈಸಲು ವಿಫಲವಾದರೆ, ಸಾಮಾಜಿಕ ಸಂಘರ್ಷ ಮತ್ತು ರಾಜಕೀಯ ದೃಷ್ಟಿ ಉಂಟಾಗಿ ಅದು ಗಂಭೀರ ಪರಿಣಾಮಗಳಿಗೆ ಕಾರಣವಾಗಬಹುದು. ಮುಂದೆ ಜನಸಂಖ್ಯಾ ಸ್ಫೋಟವಾದರೂ ಆಶ್ಚರ್ಯ ಪಡಬೇಕಾಗಿಲ್ಲ ಈಗಿನ ಸನ್ನಿವೇಶದಲ್ಲಿ ದೊರಕುತ್ತಿರುವ ಸಂಪನ್ಮೂಲಗಳ ಗರಿಷ್ಠ ಬಳಕೆ ಮತ್ತು ಪರಿಣಾಮಕಾರಿ ಬಳಕೆ ಬಹಳ ಮಹತ್ವವಾಗಿದೆ.

ಮೀಸಲಾತಿ, ವಲಸೆ , ರಾಜಕೀಯ ಪ್ರಾತಿನಿಧ್ಯ ಸಂಪನ್ಮೂಲಗಳ ಹಂಚಿಕೆ ಮತ್ತು ಇದರ ವಿಚಾರಗಳು ಚರ್ಚೆಗೆ ಒಳಗಾಗುವ ಸಾಧ್ಯತೆ ಇದೆ ಸಮಾಜದ ಎಲ್ಲಾ ವರ್ಗಗಳನ್ನು ಸಮಾನವಾಗಿ ಒಳಗೊಳ್ಳುವ ಆರ್ಥಿಕ ಪ್ರಗತಿಯು ಸಾಧ್ಯವಾದರೆ ಜನಸಂಖ್ಯೆ ಏರಿಕೆ ಸವಾಲಾಗಿ ಪರಿಣಮಿಸಬಹುದು ಮಾನವ ಅಭಿವೃದ್ಧಿಯೇ ಅತ್ಯುತ್ತಮ ಕುಟುಂಬ ಕಲ್ಯಾಣ ಯೋಜನೆ ಇದರಿಂದ ಜನಸಂಖ್ಯೆಯ ಏರಿಕೆಯನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳಬಹುದು ಜನಸಂಖ್ಯೆ ಹೆಚ್ಚಳ ಯಾವುದೋ ಒಂದು ಸಮುದಾಯ ಕಾರಣ ಎಂದು ದೂಷಿಸುವ ಪ್ರವೃತ್ತಿಗೆ ಜ್ಞಾನದಾದ ಆಧಾರ ಇಲ್ಲದ ಪೂರ್ವಗ್ರಹ ಕಾರಣದಿಂದ ಮತ್ತು ಇದು ತಪ್ಪು ನಡವಳಿಕೆಯ ಜನಸಂಖ್ಯೆಗೆ ಸಂಬಂಧಿಸಿದ ಸವಾಲುಗಳನ್ನು ಉತ್ತಮವಾಗಿ ಮತ್ತು ಜಾಣ್ಮೆಯಿಂದ ನಿರ್ವಹಿಸಿದರೆ ಈ ಶತಮಾನವನ್ನು ಭಾರತದ ಶತಮಾನವನ್ನಾಗಿ ಪರಿವರ್ತಿಸುವ ಅವಕಾಶ ನಮ್ಮ ಮುಂದೆ ಇದೆ ಜನರೇ ನಮ್ಮ ದೇಶದ ಸಂಪನ್ಮೂಲವನ್ನಾಗಿ ಮಾರ್ಪಾಡು ಮಾಡಿಕೊಳ್ಳುವ ಅವಕಾಶ ನಮ್ಮ ನಿಮ್ಮೆಲ್ಲರ ಮೇಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಾಬಾ ಸಾಹೇಬ ಅಂಬೇಡ್ಕರರ ‘ಧ್ಯಾನ’ ಗಾಯನ ; ವಿನೂತನ

Published

on

 

  • ವೆನ್ನೆಲಾ ಕೆ.
    ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ,
    ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,
    ಬೆಂಗಳೂರು ವಿಶ್ವವಿದ್ಯಾಲಯ,ಬೆಂಗಳೂರು

ತ್ತೀಚೆಗೆ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದ 132ನೇ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ ಜನುಮ ನಿಮಿತ್ತವಾಗಿ “ಧಾನ್ಯ” ‘ಗಾಯನವು’ ವಿನೂತನವಾದ ಈ ಕಾರ್ಯಕ್ರಮವು 5 ಘಂಟೆ, 1ನಿಮಿಷ, 14 ಸೆಕೆಂಡ್ ಗೆ ಆರಂಭವಾಗಿದ್ದು ಅವಿಸ್ಮರಣೀಯವಾದ ದಿನ, ಇದೊಂದು ಭಾರತ ಇತಿಹಾಸದ ಪುಟದ ಚರಿತ್ರೆಯಲ್ಲೇ ಹೊಸ ದಾಖಲೆಯೂ ಅಂತ ಹೇಳಬಹುದು.

ಈ ಕಾರ್ಯಕ್ರಮವನ್ನು ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ವು ಇಡೀ ಭಾರತದಲ್ಲೇ ಯಾರು ಮಾಡಿರದ ಈ ವಿನೂತವಾದ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಬೆಂಗಳೂರು ನಗರದಲ್ಲಿರುವ ಗಾಂಧಿ ಭವನದ ಆವರಣದಲ್ಲಿ ‘ಅನನ್ಯ ಸಂಸ್ಥೆ’ ವತಿಯಿಂದ 132 ನೇ ‘ವಿಶ್ವದ ವೀರ ವಿದ್ಯಾರ್ಥಿ ಹುಟ್ಟಿದ ದಿನ’ ಹಾಗೂ ‘ರಾಷ್ಟ್ರದ ಸ್ಫೂರ್ತಿಯ ದಿನ’ ‘ಸರ್ವ ಸಮುದಾಯದ ಶಕ್ತಿಯ ದಿನ’ ಇದೊಂದು ನಮ್ಮೆಲ್ಲರ ಹಬ್ಬದ ದಿನ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಇಂತಹ ಮೇರು ಶಿಖರ ಟ್ಯಾಗ್ ಲೈನ್ ಗಳಿಂದ ಅದ್ಭುತವಾಗಿ
ಆಯೋಜಿಸಿದ ಕಾರ್ಯಕ್ರಮಕ್ಕೆ ರಾಜ್ಯ ಕಂಡ ಪ್ರಸಿದ್ಧ ಐಪಿಎಸ್ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳು, ಸಿನಿಮಾ ಸೆಲೆಬ್ರಿಟಿಗಳು, ಸಮಸ್ತ ವಿದ್ಯಾರ್ಥಿ ಸಮೂಹ, ಸಾಮಾಜಿಕ ನ್ಯಾಯದ ವಿಚಾರಶೀಲರು, ಬರಹಗಾರರು, ಪತ್ರಕರ್ತರು ಇನ್ನೂ ಅನೇಕ ಮುಂತಾದವರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಇದಕ್ಕೆ ಮುಖ್ಯ ಕಾರಣಕರ್ತರಾದ ಅನನ್ಯ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶ್ರೀ ರಾಂಪುರ ರಾಜೇಶ್ ರವರ ನಿರ್ದೇಶನದಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿದ್ದು ಹೆಮ್ಮೆಯ ವಿಷಯ.

ಇದರ ಹಿನ್ನೆಲೆ: ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ದಲ್ಲಿ ಅತ್ಯುತ್ತಮ ಹಾಗೂ ಅತ್ಯಂತ ತುಂಬಾ ಮನಸ್ಸಿನಿಂದಲ್ಲೇ ವಿಶೇಷವಾದ ಆಸಕ್ತಿಯನ್ನು ಅಂಬೇಡ್ಕರ್ ರವರು ಸಂಗೀತ ಪ್ರಿಯರು ಹಾಗೂ ಅಂಬೇಡ್ಕರ್ ರವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು. ಹಾಗೇಯೆ ಇವರಿಗೆ ಚಿತ್ರಕಲೆಯೂ ಸಹ ಒಲಿದಿತ್ತು ಎಂಬುದು ಗಮನಾರ್ಹ ಸಂಗತಿ. ಇಂತಹ ವಿಷಯವನ್ನು ಯಾರು ಸಹ ಬೆಳಕು ಚೆಲ್ಲುವ ಸಾಹಸಕ್ಕೆ ಕೈ ಹಾಕಿ ಇರಲಿಲ್ಲ. ಇದೊಂದು ಅನನ್ಯ ಸಂಸ್ಥೆ ವತಿಯಿಂದ ಇಂತಹ ಕಾರ್ಯಕ್ರಮ ನಡೆಸಿಕೊಟ್ಟಿದ್ದು ಐತಿಹಾಸಿಕ ಚರಿತ್ರೆಗೆ ಮುನ್ನುಡಿವಾಗಿದೆ.

ಅಂಬೇಡ್ಕರ್ ರವರಿಗೆ ತಮ್ಮ ಬಿಡುವಿನ ವೇಳೆಯಲ್ಲಿ ಅದ್ಭುತವಾದ ಒಬ್ಬ ಸಂಗೀತ ಪ್ರಿಯರಾಗಿದ್ದರು. ಇವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು ಹಾಗೂ ವಿಶೇಷವಾಗಿ ಚಿತ್ರಕಲೆ ಸಹ ಸರಳವಾಗಿ ಮಾಡುವ ಮೂಲಕ ತಮ್ಮ ಮನದಲ್ಲಿ ಆಸಕ್ತಿ ಹೊಂದಿದ್ದರು. ಇನ್ನು ಹಲವಾರು ವಿಷಯದಲ್ಲಿ ಅಂದರೆ ಅಂಬೇಡ್ಕರ್ ರವರಿಗೆ ವಿಶೇಷವಾದ ಇವುಗಳಲ್ಲಿ ಆಸಕ್ತಿ ಮತ್ತು ಅಭಿರುಚಿಯನ್ನು ಹೊಂದಿದ್ದರು ಎಂಬುದನ್ನು ಮನಗಂಡ ಅನನ್ಯ ಸಂಸ್ಥೆಯ ವತಿಯಿಂದ ಆಯೋಜಿಸಿದ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಅತ್ಯುತ್ತಮವಾಗಿ ಮೂಡಿಬಂದಿದೆ.

ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ವಿಶೇಷವಾಗಿ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕರು ಹಾಗೂ ಚಿತ್ರ ಸಾಹಿತ್ಯಗಳು, ಅಂಬೇಡ್ಕರ್ ವಾದಿಗಳು ಮತ್ತು ಚಿತ್ರರಂಗದ ಬಹುಮುಖ ಪ್ರತಿಭೆ, ಮಹಾಗುರುಗಳಾದ ಡಾ. ಹಂಸಲೇಖ ರವರು ಹೊಸದಾಗಿ ಹಾಡನ್ನು ಬರೆದದ್ದು ತುಂಬಾ ಅವಿಸ್ಮರಣೀಯ ಅಂತ ಹೇಳಬಹುದು. ಇವರು ಇದೇ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರೊತ್ಸಾಹ ನೀಡಿದ್ದು, ಸರ್ವ ಸಮುದಾಯದಕ್ಕೆ ಹೊಸ ಶಕ್ತಿ ತುಂಬಿದ್ದು ಮೇರು ವ್ಯಕ್ತಿಯಾಗಿದ್ದಾರೆ.

ವೆನ್ನೆಲಾ ಕೆ.

ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ಮುಖ್ಯವಾದ ಅಂಶವೆಂದರೆ ಇದರಲ್ಲಿ ಒಟ್ಟು ನಾಲ್ಕು ಭಗವಾನ್ ಬುದ್ಧ, ಅಂಬೇಡ್ಕರ್, ಬಸವೇಶ್ವರ ಮುಂತಾದರವರನ್ನು ವಿಷಯಗಳನ್ನು ಪರಿಗಣಿಸಿ ಅಂಬೇಡ್ಕರ್ ಧ್ಯಾನ ಹಾಡುಗಳ ರಚಿಸಿವುದರಲ್ಲಿ ಪ್ರಮುಖವಾಗಿ ರಾಜ್ಯದ ಹೆಸರಾಂತ ಸಾಹಿತಿ, ಪ್ರಗತಿಪರ ಚಿಂತಕರು ಹಾಗೂ ಮಾಜಿ ಅಧ್ಯಕ್ಷರಾದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರಿನ ಪ್ರೊ.ಎಸ್.ಜಿ.ಸಿದ್ದರಾಮಯ್ಯನವರ
‘ಧೀ ಶಕ್ತಿಯೇ … ಜ್ಞಾನ ಪರ್ವತದ … ಧೀಮಂತ ಧೀಶಕ್ತಿಯೇ …
ಇಂತಹ ಸಾಲುಗಳನ್ನು, ಡಾ. ಕೈ.ವೈ.ನಾರಾಯಣಸ್ವಾಮಿರವರ ದೀಪಾ …. ಎಲ್ಲರೆದೆಯಲಿ … ಹಚ್ಚಿದ ದೀಪಾ .. ಭೂಪಾ … ಭೂಪಾ … ಭೀಮಾ ಭೂಪಾ .. ಬಾಬಾ .. ಸಾಹೇಬ್.. ಜೀವಸ್ವರವೇ … ಬಾಬಾ.. ಹಾಗೂ ರವಿ ಮರಿಯಪ್ಪರವರ ಹತ್ತು ಸಾವಿರ ವಯಲಿನನ್ನು … ವೀಣೆಗಳು ನೂರೆಂಟು … ಕೋಟಿ ಕೋಟಿ ಎದೆ ಸದ್ದಿನ ಡೊಳ್ಳು … ಸಂಯೋಜಿಸಿದರೇ .. ಸಂವಿಧಾನಾ … ಮತ್ತು ಚಿತ್ರ ಸಾಹಿತಿ, ಹೆಸರಾಂತ ಸಂಗೀತ ನಿರ್ದೇಶಕರು ಡಾ. ಹಂಸಲೇಖ ರವರು ನಿನ್ನ ಮೌನಾ … ದೀನ ಗಾನಾ… ನಿನ್ನ ಧ್ಯಾನಾ .. ಸಂವಿಧಾನಾ … ಈ ನಾಲ್ಕು ಅಂಬೇಡ್ಕರ್ ಧ್ಯಾನ ರಚನೆಗೆ ಇವರುಗಳ ಬರೆದಿರುವ ಅದ್ಭುತವಾದ ಅಂಬೇಡ್ಕರ್ ರವರ ಧ್ಯಾನ ಹಾಡುಗಳನ್ನು ನಮ್ಮ ಹಿಂದುಸ್ತಾನಿ ಸಂಗೀತ ಹಾಡುಗಳ ಮೂಲಕ ಕನ್ವರ್ಟ್ ಮಾಡುವ ಮೂಲಕ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿತು.

ಹಾಗೆಯೇ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಬಹಳಷ್ಟು ಯಶಸ್ವಿಯಾಗಬೇಕಾದರೆ ಈ ಮೊದಲು ಪುಟ್ಟರಾಜ ಗವಾಯಿಗಳ ಆಪ್ತ ಶಿಷ್ಯರಲ್ಲಿ ಒಬ್ಬರಾದ ವಿದ್ವಾನ್ ಶ್ರೀ ಡಿ. ಕುಮಾರ್ ದಾಸ್ ಅವರ ವಿದ್ವತ್ ಶರೀರದಲ್ಲಿ ‘ಧ್ಯಾನ ಗಾಯನ’ ಹಾಗೂ ಇವರ ತಂಡದ ವತಿಯಿಂದ ನಡೆಸಿಕೊಟ್ಟ ಅದ್ಭತವಾದ ಅಂಬೇಡ್ಕರ್ ರವರ ಧ್ಯಾನವು ಹಿಂದುಸ್ತಾನಿ ಸಂಗೀತದ ಕನ್ವರ್ಟ್ ಮಾಡುವ ಮುಖಾಂತರ ಈ ಹಾಡುಗಳನ್ನು ಬಹಳ ಸೊಗಸಾಗಿ ಮೂಡಿಬಂದಿದ್ದು ಹೊಸ ದಾಖಲೆಗೆ ಸೇರ್ಪಡೆಯಾಗಿದೆ.

ಇನ್ನು ಮುಂಬರುವ ದಿನಗಳಲ್ಲಿ ಅದಷ್ಟು ಹಲವಾರು ವಿನೂತನವಾದ ಭಗವಾನ್ ಬುದ್ಧರ, ಬಸವೇಶ್ವರರ ಹಾಗೂ ವಿಶ್ವದ ವೀರ ವಿದ್ಯಾರ್ಥಿಯಾದ ಮೇರು ರಾಷ್ಟ್ರದ
ನಾಯಕರಾದ ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ರವರ ಹಲವಾರು ಹಾಡುಗಳನ್ನು
ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದರೆ ಇನ್ನುಷ್ಟು ಭಾರತದ ಇತಿಹಾಸದ ಪುಟಗಳಲ್ಲಿ ಮರೆತು ಹೋಗಿರುವ ಹಲವು ಬಗ್ಗೆ ದಾಖಲೆ ಇಲ್ಲದ ನೈಜ ಸಂಗತಿಗಳನ್ನು ಪುನಃ ಹೊಸ ದಾಖಲೆಗೆ ಉಪಯುಕ್ತವಾದ ವಿಶಿಷ್ಟವಾದ ಮೇರು ನಾಯಕನ
ಅಂಬೇಡ್ಕರ್ ರವರ ವಿಚಾರ ಧಾರೆಗಳು ತಾವು ಅನುಭವಿಸಿದ ನೋವು, ನಲಿವು, ಭಾರತದ ರಾಜ್ಯಾಂಗದ ಶಿಲ್ಪಿಯನ್ನು ಮುಂಬರುವ ದಿನಗಳಲ್ಲಿ ಹೊಸ ಪೀಳಿಗೆಯ ಪರಿಚಯಿಸುವ ಕೀರ್ತಿದಾಯಿಕವಾಗಲಿ ಮತ್ತು ಅದಷ್ಟು ಮುಂಬರುವ ದಿನಗಳಲ್ಲಿ ಅಂಬೇಡ್ಕರ್ ರವರ ಆಸಕ್ತಿದಾಯಕ ವಿಚಾರಗಳು ಹಾಗೂ ಸಂಗೀತದ ಬಗ್ಗೆ ಹಲವಾರು ಮಾಹಿತಿಗಳು ಸಮಸಮಸಮಾಜಕ್ಕೆ ತಲುಪುವ ವ್ಯವಸ್ಥೆಗೆ ಸಾಕ್ಷಿಯಾಗಲಿ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಬಹಿರಂಗ

ರಷ್ಯಾದಲ್ಲಿ ಓಂ – ಭರತಾಸ್- ರಾಮ – ರಾವಣ ಲಂಕೇಶ – ಮಾರೀಚ – ಸೀತ ನದಿಗಳು..!

Published

on

  • ಲಕ್ಷ್ಮೀಪತಿ ಕೋಲಾರ, ಸಂಶೋಧಕರು, ಸಂಸ್ಕೃತಿ‌ ಚಿಂತಕರು, ಬೆಂಗಳೂರು

ಸ್ಲಾವ್ ಸಮುದಾಯದ ಲಿತುವೇನಿಯ, ಲಾತ್ವಿಯ, ಬೆಲಾರಸ್,ಉಕ್ರೇನ್ ಮತ್ತು ರಷಿಯಾದಂತಹ ದೇಶಗಳ ನದಿ,ನಗರಗಳು ಸಂಸ್ಕೃತ ಮೂಲದ ಹೆಸರುಗಳನ್ನೆ ಇಂದಿಗು ಉಳಿಸಿಕೊಂಡಿರುವುದು ಆ ಭಾಷೆ ಮತ್ತು ಸಂಬಂಧಿತ ಸಂಸ್ಕೃತಿಯೊಂದಿಗೆ ಅವು ಹಿಂದೊಮ್ಮೆ ಹೊಂದಿದ್ದ ಬಲವಾದ ನಂಟಿಗೆ ಸಾಕ್ಷಿಯಾಗಬಲ್ಲವು.

ಇದರೊಂದಿಗೆ ಉತ್ತರ ಭಾರತದ ಆರ್ಯ ವೈದಿಕರ ಭಾಷೆ ಸಂಸ್ಕೃತಿಯೊಂದಿಗೆ ಸ್ಲಾವ್ ಸಮುದಾಯಕ್ಕೆ ಎಷ್ಟು ನಿಕಟ ಸಂಬಂಧವಿತ್ತೆಂಬುದನ್ನು ಮತ್ತು ನಾಲ್ಕೈದು ಸಾವಿರ ವರ್ಷಗಳ ಹಿಂದೆ ಈ ಎಲ್ಲ ಆರ್ಯ ಸಮುದಾಯಗಳು ಒಟ್ಟಿಗೆ ಒಂದೆಡೆಯೇ ಕಳ್ಳುಬಳ್ಳಿಗಳಾಗಿ ಜೀವಿಸಿದ್ದರೆಂಬುದನ್ನ ಈ ಹಿನ್ನೆಲೆಯಲ್ಲಿ ನಾವು ಗ್ರಹಿಸಬಹುದಾಗಿದೆ.

ಅದರಲ್ಲು ವಿಶೇಷವಾಗಿ ಲಿತುವೇನಿಯ ಮತ್ತು ರಷಿಯಾದ ನದಿಗಳ ಹೆಸರುಗಳು ಎಷ್ಟು ಸಂಸ್ಕೃತಮಯವು (ಇಂಡೋ – ಯುರೋಪಿಯನ್ ಭಾಷಾಮೂಲದ) ಮತ್ತು ವೈದಿಕರ ಪುರಾಣ ಮೂಲದವು ಆಗಿವೆ ಎಂದರೆ, ನಂಬಲಿಕ್ಕು ಅಸಾಧ್ಯ ಎಂಬಂತಿವೆ. ಇದರರ್ಥ ಸ್ಲಾವ್ ಜನರು ವೈದಿಕರ ಪುರಾಣಗಳಿಂದ ಪ್ರೇರಿತಗೊಂಡಿದ್ದಾರೆ ಎಂಬುದಲ್ಲ.

ಬದಲಿಗೆ ವೈದಿಕರ ಇಂದಿನ ಪುರಾಣ – ಸಂಸ್ಕೃತಿ – ಭಾಷೆಗಳು ವೈದಿಕರಿಗೆ ಎಷ್ಟು ಸಂಬಂಧಿಸಿದ್ದೋ ಅದಕ್ಕು ಹೆಚ್ಚಿನದಾಗಿ ಸ್ಲಾವ್ ಸಮುದಾಯಕ್ಕೂ ಸಂಬಂಧಿಸಿದ್ದಾಗಿದ್ದವು. ಹಾಗೆ ನೋಡಿದರೆ ಬ್ರಹ್ಮ – ವೇದ ಮೂಲವು ಕೂಡ ಸ್ಲಾವ್ ಸಮುದಾಯದ ಉತ್ತರ ಧ್ರುವ ಪ್ರದೇಶಕ್ಕೆ ಹೋಗಿ ನಿಲ್ಲುತ್ತದೆ ಎಂಬುದು ಸೋಜಿಗವಾದರು ನಿರ್ವಿವಾದವಾಗಿ ಚಾರಿತ್ರಿಕ ಸತ್ಯವಾಗಿದೆ. 12 – 13 ನೇ ಶತಮಾನಗಳಲ್ಲಿ ಸ್ಲಾವ್ ಜನರು ಕ್ರೈಸ್ತರಾಗಿ ಪರಿವರ್ತಿತರಾಗುವವರೆಗು ಅವರು ಶತಾಂಶ ಮತ್ತು ಥೇಟ್ ಶ್ರೇಷ್ಟ ಆರ್ಯ ವೈದಿಕರೆ ಆಗಿದ್ದರು.

ರಷ್ಯ ಮತ್ತು ಲಿತುವೇನಿಯಾಗಳಲ್ಲಿ ಭರತಾಸ್, ಓಂ, ರಾಮ, ಸೀತ, ಲಂಕೇಶ, ರಾವಣ, ಮಾರೀಚ, ನೆಮುನ (ಯಮುನ), ಕಾಮ, ಯಂತ್ರ, ಶ್ವೇತೆ, ದ್ರವ, ಮೋಕ್ಷ, ಋಗ್ವೇದದ ದಾನವ ಮಾತೆ ದನು ನೆನಪಿನ ದನುಬೆ ಮುಂತಾದ ನದಿಗಳು ಮತ್ತು ನಾರದ (ಈಗ ನರೋದ್ನಯ ಎಂದಿದ್ದರು ಸ್ಥಳೀಯರು ನಾರದ ಬೆಟ್ಟ ಎಂದೇ ಕರೆಯುತ್ತಾರೆ) ಹೆಸರಿನ ಬೆಟ್ಟವು ಇವೆ ಎಂದರೆ ಯಾರೂ ಅಚ್ಚರಿಪಡುವಂತದ್ದೆ.

ಯಾರಿಗಾದರು ಈ ಸಂಗತಿಗಳಲ್ಲಿ ಅನುಮಾನ ಹುಟ್ಟುವುದು ಸಹಜವೆ. ಯಾಕೆಂದರೆ ಸ್ಲಾವ್ – ವೈದಿಕ ಆರ್ಯರ ಮೂಲ ಪ್ರದೇಶವೆ ಉತ್ತರ ದ್ರುವ ಪ್ರದೇಶವಾಗಿತ್ತು ಎಂಬ ಚರಿತ್ರೆಯನ್ನೇ ನಮ್ಮಿಂದ ಮರೆಮಾಚಲಾಗಿತ್ತು ಮತ್ತು ಅದು ಬಹುದೊಡ್ಡ ಸಾಂಸ್ಕೃತಿಕ ರಾಜಕಾರಣವೂ ಆಗಿತ್ತು. ಆದರೆ ತಿಲಕರು ತಮ್ಮ “Arctic Home In the Vedas” ಎಂಬ ಪುಸ್ತಕದಲ್ಲಿ ಉತ್ತರ ಭಾರತದ ವೈದಿಕ ಆರ್ಯರ ತವರು ನೆಲ ಉತ್ತರ ದ್ರುವ ಪ್ರದೇಶವೆ, ಅಂದರೆ ಇಂದಿನ ಲಿತುವೇನಿಯ, ಲಾತ್ವಿಯ, ಬೆಲಾರಸ್ ಪ್ರದೇಶಗಳೇ ಆಗಿದ್ದವು ಎಂದು ಸಮರ್ಥ ಸಾಕ್ಷಾಧಾರಗಳೊಂದಿಗೆ ನಿರೂಪಿಸಿದ್ದಾರೆ.

ರಷ್ಯಾದಲ್ಲಿ ಸಂಸ್ಕೃತ ಭಾಷಾಮೂಲದ ನೂರಾರು ನದಿಗಳಿವೆ. ಭಾರತದಲ್ಲಿ ಕೆಲವು ನದಿಗಳನ್ನ ಹೊರತುಪಡಿಸಿದರೆ ಆ ಪ್ರಮಾಣದ ವೈದಿಕ ಪುರಾಣ ಮೂಲದ ನದಿ ಹೆಸರುಗಳು ಈ ನೆಲದಲ್ಲಿ ಇಲ್ಲವೆಂಬುದು ಪ್ರಾಚೀನ ಕಾಲದಿಂದಲು ಆರ್ಯ ವೈದಿಕರು ಇಲ್ಲಿರಲಿಲ್ಲವೆಂಬುದನ್ನೇ ಸೂಚಿಸುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending