ದಿನದ ಸುದ್ದಿ
ನಡೆದು ಬರುತ್ತಿರುವ ಸಹೋದರಿಯರೊಂದಿಗೆ ಕೈಜೋಡಿಸುವ ಅಗತ್ಯವಿದೆ
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2019/01/Protest-suddidina679.jpg&description=ನಡೆದು ಬರುತ್ತಿರುವ ಸಹೋದರಿಯರೊಂದಿಗೆ ಕೈಜೋಡಿಸುವ ಅಗತ್ಯವಿದೆ', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2019/01/Protest-suddidina679.jpg&description=ನಡೆದು ಬರುತ್ತಿರುವ ಸಹೋದರಿಯರೊಂದಿಗೆ ಕೈಜೋಡಿಸುವ ಅಗತ್ಯವಿದೆ', 'pinterestShare', 'width=750,height=350'); return false;" title="Pin This Post">
ಆತ್ಮೀಯರೆ, ಕಳೆದ 10 ದಿನಗಳಿಂದ ನಿರಂತರವಾಗಿ ಮದ್ಯ ನಿಷೇಧ ಆಂದೋಲನದ ಪಾದಯಾತ್ರೆಯಲ್ಲಿ ನಡೆದು ಬರುತ್ತಿರುವ ಕೂಲಿ ತಾಯಂದಿರು ಮತ್ತು ಅವರ ಜೊತೆಗೆ ಹೆಜ್ಜೆ ಹಾಕುತ್ತಿರುವ ಸಾಮಾಜಿಕ ಕಾರ್ಯಕರ್ತರು ನಾಡಿದ್ದು ಅಂದರೆ ಜನವರಿ 30ರಂದು ಬೆಂಗಳೂರು ತಲುಪುತ್ತಾರೆ. ನಿನ್ನೆ ಆ ತಂಡದಲ್ಲಿ ಆರಂಭದಿಂದ ನಡೆದು ಬಂದಿದ್ದ ರಾಯಚೂರಿನ ರೇಣುಕಮ್ಮ ಎಂಬ ಮಹಿಳೆ ಸರ್ಕಾರದ ನಿಷ್ಕಾಳಜಿಯ ಪರಿಣಾಮವಾಗಿ ಸಾವಿಗೀಡಾದರು.
ಅಷ್ಟಾದರೂ ಆಕೆಯ ವಯೋವೃದ್ಧ ಅತ್ತೆ (ಗಂಡನ ತಾಯಿ-ಈಕೆಯೂ ಮೊದಲ ದಿನದಿಂದ ನಡೆದು ಬರುತ್ತಿದ್ದಾರೆ) ತನ್ನ ಸೊಸೆ ಯಾವ ಹೋರಾಟಕ್ಕಾಗಿ ಪ್ರಾಣಕೊಟ್ಟಿದ್ದಾಳೋ, ಅದನ್ನು ಗುರಿಮುಟ್ಟಿಸಿಯೇ ಸಿದ್ಧ ಎಂದು ನೋವಿನಲ್ಲೂ ಕೆಚ್ಚೆದೆಯ ಮಾತುಗಳನ್ನಾಡಿದ್ದು ನಿಜಕ್ಕೂ ನಮ್ಮ ಮನಸ್ಸನ್ನು ತಟ್ಟಿ ಆತ್ಮವನ್ನು ಅಲುಗಾಡಿಸಿತು. ಇಷ್ಟು ದಿನಗಳ ಸುದೀರ್ಘ ನಡಿಗೆ, ಆಯಾಸ ಅಷ್ಟು ಸಾಲದೆಂದು ಒಡನಾಡಿಯೊಬ್ಬರ ದುರ್ಮರಣ- ಇವ್ಯಾವುವೂ ಪಾದಯಾತ್ರೆಯ ದಿಟ್ಟ ಮಹಿಳೆಯರ ಮನೋಬಲವನ್ನು ಕುಗ್ಗಿಸಿಲ್ಲ!!! ಅವರ ಚೈತನ್ಯ ನಿಜವಾಗಿಯೂ ಈ ಸಮಾಜಕ್ಕೆ ಚಿಕಿತ್ಸೆ ನೀಡುವಷ್ಟು ಶಕ್ತಿಶಾಲಿಯಾಗಿದೆ ಎಂಬುದು ಅವರ ಹತ್ತಿರ ಸುಳಿದ ಯಾರಿಗಾದರೂ ಅನುಭವಕ್ಕೆ ಬಂದೀತು.
ಆದರೆ, ದುರಂತವೆಂದರೆ ಅವರ ನೋವಿನ ಮಾತುಗಳು ಇನ್ನೂ ಸರ್ಕಾರದ ಚುಕ್ಕಾಣಿ ಹಿಡಿದವರನ್ನು ಅಲುಗಿಸಿಲ್ಲ; ಸರ್ಕಾರದ ಮುಂದಾಳುಗಳಿಗೆ ಇವರ ಬದುಕು-ಬವಣೆಗಳು ಉಡಾಫೆಯ ಸಂಗತಿಗಳಾಗಿವೆ ಎಂಬುದನ್ನು ಇಂದು ಕಣ್ಣಾರೆ ನೋಡಿದೆ.
ಇದೀಗ, ತಮ್ಮ ಮತ್ತು ತಮ್ಮಂತಹ ಅಸಂಖ್ಯಾತ ಹೆಣ್ಮಕ್ಕಳ ಬದುಕು ಹಸನಾಗಬೇಕೆಂಬ ಆಶಯದೊಂದಿಗೆ ಪಾದಯಾತ್ರೆ ಹೊರಟ ಈ ಸಹೋದರಿಯರು ತಮ್ಮ ಹೋರಾಟವನ್ನು ತೀವ್ರಗೊಳಿಸಲು ನಿರ್ಧರಿಸಿದ್ದಾರೆ. ಅವರ ಒಡಲ ಸಂಕಟದ ದನಿಗೆ ನಮ್ಮೆಲ್ಲರ ದನಿಗಳು ಸೇರಿದರಾದರೂ ಆ ಕಲ್ಲುಕಟ್ಟಡದ ಭ್ರಷ್ಟ ಕೊಠಡಿಗಳೊಳಗೆ ಸೇರಿ ಮಲಗಿರುವ ಸರ್ಕಾರ ಕಣ್ತೆರೆಯಬಹುದೇ? ಅವರ ಅದಮ್ಯ ಮನೋಬಲಕ್ಕೆ ಬನ್ನಿ ಇನ್ನೊಂದಷ್ಟು ಆಶಾವಾದ ಸೇರಿಸೋಣ.
ಈಗಾಗಲೇ ಕರ್ನಾಟಕದ ಸಂವೇದನಾಶೀಲರು ಅನೇಕ ರೀತಿಗಳಲ್ಲಿ ಆಂದೋಲನಕ್ಕೆ ಸ್ಪಂದಿಸಿದ್ದಾರೆ. ಇದನ್ನು ಇನ್ನಷ್ಟು ಹೆಚ್ಚುಮಾಡಿ, ನಮ್ಮಿಂದಾಗುವ ಎಲ್ಲ ರೀತಿಗಳಲ್ಲಿ ಮದ್ಯನಿಷೇಧ ಆಂದೋಲನದಲ್ಲಿ ಬರುತ್ತಿರುವ ಹೋರಾಟದ ಕಿಡಿಗಳಿಗೆ ನೆರವಾಗೋಣ.
ನಾವು ಮಾಡಬಹುದಾದುದೇನು? ಕೆಲವು ಆಲೋಚನೆಗಳು
- ಸಾಧ್ಯವಿರುವ ಎಲ್ಲರೂ ಜ.30ರಂದು ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಖುದ್ದಾಗಿ ಬಂದು ಪಾಲ್ಗೊಳ್ಳುವುದು.
- ಮಾಧ್ಯಮಗಳಲ್ಲಿ ಕೆಲಸ ಮಾಡುವವರು/ ಸಂಪರ್ಕ ಹೊಂದಿರುವವರು ಈ ಆಂದೋಲನಕ್ಕೆ ಸಾಧ್ಯವಾದಷ್ಟು ಹೆಚ್ಚು ಪ್ರಚಾರ ಒದಗಿಸುವುದು- ದೃಶ್ಯ ಮಾಧ್ಯಮಗಳಲ್ಲಿ ಇರುವವರು ಈ ಮಹಿಳೆಯರೊಂದಿಗೆ ಸಣ್ಣ ಮಾತುಕತೆ ಕಾರ್ಯಕ್ರಮ ನಡೆಸಲು ಸಾಧ್ಯವೆ ಪ್ರಯತ್ನಿಸುವುದು
- ಸರ್ಕಾರದ ಮೇಲೆ ಒತ್ತಡ ಹೇರಲು ಸಾಧ್ಯವಿರುವ, ನಮ್ಮ ನಮ್ಮ ಸ್ನೇಹಿತರ ಬಳಗದಲ್ಲಿರುವ ಪ್ರಭಾವಿಗಳನ್ನು ಸಂಪರ್ಕಿಸಿ, ಅವರ ಮೂಲಕ ಸರ್ಕಾರದ ಮೇಲೆ ಒತ್ತಡ ಹೆಚ್ಚುವಂತೆ ಮಾಡುವುದು- ಒಂದು ತಪಸ್ಸಿನಂತೆ ನಡೆದು ಬಂದಿರುವ ಈ ತಾಯಂದಿರನ್ನು ಕನಿಷ್ಠ ಸಭೆ ಕರೆದು ಚರ್ಚೆ ನಡೆಸುವಂತೆ ಒಪ್ಪಿಸಲು ಆಗ್ರಹಿಸುವುದು.
- ಸ್ವತಃ ಬರೆಯುವವರು, ಪತ್ರಿಕೆಗಳು, magazineಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಬೆಂಬಲದ ಬರಹಗಳು ಪ್ರಕಟವಾಗುವಂತೆ ಪ್ರಯತ್ನಿಸುವುದು
- ಆಂದೋಲನ ಖರ್ಚಿಗೆ ಹಣಕಾಸಿನ ನೆರವು ನೀಡುವುದು.
- ನಮ್ಮ ಸ್ನೇಹಿತರ ಬಳಗದ ಎಲ್ಲರನ್ನು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಾಹಿತಿ ರವಾನಿಸುವುದು.
ಇವೇ ಮೊದಲಾದ ಹಲವು ಬಗೆಗಳಲ್ಲಿ ನಾವು ಅವರೊಂದಿಗಿದ್ದೇವೆಂಬುದನ್ನು ತೋರಿಸಲು ಸಾಧ್ಯವಿದೆ. ಬನ್ನಿ, ನಡೆದು ದಣಿದು ಬರುತ್ತಿರುವ ನಮ್ಮ ಸಹೋದರಿಯರಿಗೆ ‘ನಿಮ್ಮೊಂದಿಗೆ ನಾವಿದ್ದೇವೆ’ ಎಂದು ಹೇಳಲು ಸಜ್ಜಾಗೋಣ.
ಕಾಲ್ನಡಿಗೆ ನಿರತ ಮಹಿಳೆಯರ ಪರವಾಗಿ
-ಮಲ್ಲಿಗೆ ಸಿರಿಮನೆ
ಹೋರಾಟಗಾರ್ತಿ
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ. ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡ 90.91 ರಷ್ಟು ಫಲಿತಾಂಶ ಪಡೆದು ಮೇಲುಗೈ ಸಾಧಿಸಿದ್ದಾರೆ.
ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 20,810 ವಿದ್ಯಾರ್ಥಿಗಳ ಪೈಕಿ 16,046 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇಕಡ 77.11 ರಷ್ಟು ಹಾಗೂ ಹೊಸದಾಗಿ ಪರೀಕ್ಷೆ ಬರೆದ (Freshers) 18,949 ವಿದ್ಯಾರ್ಥಿಗಳಲ್ಲಿ 15,540 ಮಂದಿ ಉತ್ತೀರ್ಣರಾಗಿದ್ದಾರೆ ಶೇಕಡ 82.01 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ವಿಭಾಗವಾರು ಫಲಿತಾಂಶದ ವಿಶ್ಲೇಷಣೆ
ವಿಜ್ಞಾನ ವಿಭಾಗ (Science): ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಧನೆ ಈ ವಿಭಾಗದಲ್ಲಿ ದಾಖಲಾಗಿದೆ. ಒಟ್ಟು 12,536 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,936 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 87.24). ಹೊಸ ವಿದ್ಯಾರ್ಥಿಗಳ ಪೈಕಿ 11,770 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,736 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 90.91 ರಷ್ಟು ಅದ್ಭುತ ಫಲಿತಾಂಶ ಬಂದಿದೆ.
ವಾಣಿಜ್ಯ ವಿಭಾಗ (Commerce)
ಈ ವಿಭಾಗದಲ್ಲಿ ಹಾಜರಾದ 4,295 ವಿದ್ಯಾರ್ಥಿಗಳಲ್ಲಿ 3,075 ಮಂದಿ ಉತ್ತೀರ್ಣರಾಗಿದ್ದಾರೆ (ಶೇ. 71.59). ಹೊಸ ವಿದ್ಯಾರ್ಥಿಗಳ ಪೈಕಿ 3858 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2960 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 76.72 ರಷ್ಟು ಫಲಿತಾಂಶ ಬಂದಿದೆ.
ಕಲಾ ವಿಭಾಗ (Arts): ಕಲಾ ವಿಭಾಗದಲ್ಲಿ ಒಟ್ಟು 3,979 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 2,035 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 51.14). ಹೊಸ ವಿದ್ಯಾರ್ಥಿಗಳ ಪೈಕಿ 3321 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1880 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 56.61 ರಷ್ಟು ಫಲಿತಾಂಶ ಬಂದಿದೆ.
ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ವಿಜ್ಞಾನ ವಿಭಾಗವು ಪ್ರಥಮ ಸ್ಥಾನದಲ್ಲಿದ್ದರೆ, ವಾಣಿಜ್ಯ ಮತ್ತು ಕಲಾ ವಿಭಾಗಗಳು ನಂತರದ ಸ್ಥಾನ ಪಡೆದಿವೆ ಎಂದು ಉಪ ನಿರ್ದೇಶಕ ಪಳಿನಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ
ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ.
ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು ಉತ್ಸಾಹದಿಂದ ಸರದಿಯಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕ್ರಮಗಳು ಹಾಗೂ ಪೊಲೀಸ್ ಬಂದೋಬಸ್ತ್ನಿಂದಾಗಿ ಯಾವುದೇ ಅಹಿತಕರ ಘಟನೆಗಳಿಲ್ಲದೆ ಮತದಾನ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು.
ಯುವಕರು ಹಾಗೂ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮತದಾನ ಮಾಡಿದ್ದು ಕಂಡುಬಂದಿತು. ಚುನಾವಣಾ ಸಿಬ್ಬಂದಿ ಹಾಗೂ ಭದ್ರತಾ ಪಡೆಯ ಸಹಕಾರದೊಂದಿಗೆ ಮತದಾನ ಪ್ರಕ್ರಿಯೆಯು ಸುಗಮವಾಗಿ ಜರುಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
ಸುದ್ದಿದಿನಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದ ಮತಗಟ್ಟೆಯಲ್ಲಿ ತೃತೀಯ ಲಿಂಗತ್ವ ಮತದಾರರು ಮತಗಟ್ಟೆಗೆ ಆಗಮಿಸಿ ಸಂತೋಷದಿಂದ ಮತ ಚಲಾಯಿಸಿದರು.
ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಎಂಬ ಸಂದೇಶವನ್ನು ಸಾರಿದ ಕ್ಷಣ! ತಮ್ಮ ಅಮೂಲ್ಯ ಮತದಾನದ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಿದ ತೃತೀಯ ಲಿಂಗತ್ವ ಮತದಾರರಿಗೆ ಅಭಿನಂದನೆಗಳು ಎಂದು ಜಿಲ್ಲಾ ಪಂಚಾಯತ್ ಸಿಇಓ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ7 days agoಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
-
ಅಂತರಂಗ3 days agoಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
-
ದಿನದ ಸುದ್ದಿ6 days agoಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ
-
ದಿನದ ಸುದ್ದಿ1 day agoಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
-
ದಿನದ ಸುದ್ದಿ3 days agoಸುಸೂತ್ರ ಮತದಾನಕ್ಕೆ ಜಿಲ್ಲಾಡಳಿತದ ಸಕಲ ಸಿದ್ಧತೆ
-
ದಿನದ ಸುದ್ದಿ2 days agoಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoಪರಿಶಿಷ್ಟ ಪಂಗಡದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ
-
ದಿನದ ಸುದ್ದಿ10 hours agoದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ

