ದಿನದ ಸುದ್ದಿ
ನಡೆದು ಬರುತ್ತಿರುವ ಸಹೋದರಿಯರೊಂದಿಗೆ ಕೈಜೋಡಿಸುವ ಅಗತ್ಯವಿದೆ
ಆತ್ಮೀಯರೆ, ಕಳೆದ 10 ದಿನಗಳಿಂದ ನಿರಂತರವಾಗಿ ಮದ್ಯ ನಿಷೇಧ ಆಂದೋಲನದ ಪಾದಯಾತ್ರೆಯಲ್ಲಿ ನಡೆದು ಬರುತ್ತಿರುವ ಕೂಲಿ ತಾಯಂದಿರು ಮತ್ತು ಅವರ ಜೊತೆಗೆ ಹೆಜ್ಜೆ ಹಾಕುತ್ತಿರುವ ಸಾಮಾಜಿಕ ಕಾರ್ಯಕರ್ತರು ನಾಡಿದ್ದು ಅಂದರೆ ಜನವರಿ 30ರಂದು ಬೆಂಗಳೂರು ತಲುಪುತ್ತಾರೆ. ನಿನ್ನೆ ಆ ತಂಡದಲ್ಲಿ ಆರಂಭದಿಂದ ನಡೆದು ಬಂದಿದ್ದ ರಾಯಚೂರಿನ ರೇಣುಕಮ್ಮ ಎಂಬ ಮಹಿಳೆ ಸರ್ಕಾರದ ನಿಷ್ಕಾಳಜಿಯ ಪರಿಣಾಮವಾಗಿ ಸಾವಿಗೀಡಾದರು.
ಅಷ್ಟಾದರೂ ಆಕೆಯ ವಯೋವೃದ್ಧ ಅತ್ತೆ (ಗಂಡನ ತಾಯಿ-ಈಕೆಯೂ ಮೊದಲ ದಿನದಿಂದ ನಡೆದು ಬರುತ್ತಿದ್ದಾರೆ) ತನ್ನ ಸೊಸೆ ಯಾವ ಹೋರಾಟಕ್ಕಾಗಿ ಪ್ರಾಣಕೊಟ್ಟಿದ್ದಾಳೋ, ಅದನ್ನು ಗುರಿಮುಟ್ಟಿಸಿಯೇ ಸಿದ್ಧ ಎಂದು ನೋವಿನಲ್ಲೂ ಕೆಚ್ಚೆದೆಯ ಮಾತುಗಳನ್ನಾಡಿದ್ದು ನಿಜಕ್ಕೂ ನಮ್ಮ ಮನಸ್ಸನ್ನು ತಟ್ಟಿ ಆತ್ಮವನ್ನು ಅಲುಗಾಡಿಸಿತು. ಇಷ್ಟು ದಿನಗಳ ಸುದೀರ್ಘ ನಡಿಗೆ, ಆಯಾಸ ಅಷ್ಟು ಸಾಲದೆಂದು ಒಡನಾಡಿಯೊಬ್ಬರ ದುರ್ಮರಣ- ಇವ್ಯಾವುವೂ ಪಾದಯಾತ್ರೆಯ ದಿಟ್ಟ ಮಹಿಳೆಯರ ಮನೋಬಲವನ್ನು ಕುಗ್ಗಿಸಿಲ್ಲ!!! ಅವರ ಚೈತನ್ಯ ನಿಜವಾಗಿಯೂ ಈ ಸಮಾಜಕ್ಕೆ ಚಿಕಿತ್ಸೆ ನೀಡುವಷ್ಟು ಶಕ್ತಿಶಾಲಿಯಾಗಿದೆ ಎಂಬುದು ಅವರ ಹತ್ತಿರ ಸುಳಿದ ಯಾರಿಗಾದರೂ ಅನುಭವಕ್ಕೆ ಬಂದೀತು.
ಆದರೆ, ದುರಂತವೆಂದರೆ ಅವರ ನೋವಿನ ಮಾತುಗಳು ಇನ್ನೂ ಸರ್ಕಾರದ ಚುಕ್ಕಾಣಿ ಹಿಡಿದವರನ್ನು ಅಲುಗಿಸಿಲ್ಲ; ಸರ್ಕಾರದ ಮುಂದಾಳುಗಳಿಗೆ ಇವರ ಬದುಕು-ಬವಣೆಗಳು ಉಡಾಫೆಯ ಸಂಗತಿಗಳಾಗಿವೆ ಎಂಬುದನ್ನು ಇಂದು ಕಣ್ಣಾರೆ ನೋಡಿದೆ.
ಇದೀಗ, ತಮ್ಮ ಮತ್ತು ತಮ್ಮಂತಹ ಅಸಂಖ್ಯಾತ ಹೆಣ್ಮಕ್ಕಳ ಬದುಕು ಹಸನಾಗಬೇಕೆಂಬ ಆಶಯದೊಂದಿಗೆ ಪಾದಯಾತ್ರೆ ಹೊರಟ ಈ ಸಹೋದರಿಯರು ತಮ್ಮ ಹೋರಾಟವನ್ನು ತೀವ್ರಗೊಳಿಸಲು ನಿರ್ಧರಿಸಿದ್ದಾರೆ. ಅವರ ಒಡಲ ಸಂಕಟದ ದನಿಗೆ ನಮ್ಮೆಲ್ಲರ ದನಿಗಳು ಸೇರಿದರಾದರೂ ಆ ಕಲ್ಲುಕಟ್ಟಡದ ಭ್ರಷ್ಟ ಕೊಠಡಿಗಳೊಳಗೆ ಸೇರಿ ಮಲಗಿರುವ ಸರ್ಕಾರ ಕಣ್ತೆರೆಯಬಹುದೇ? ಅವರ ಅದಮ್ಯ ಮನೋಬಲಕ್ಕೆ ಬನ್ನಿ ಇನ್ನೊಂದಷ್ಟು ಆಶಾವಾದ ಸೇರಿಸೋಣ.
ಈಗಾಗಲೇ ಕರ್ನಾಟಕದ ಸಂವೇದನಾಶೀಲರು ಅನೇಕ ರೀತಿಗಳಲ್ಲಿ ಆಂದೋಲನಕ್ಕೆ ಸ್ಪಂದಿಸಿದ್ದಾರೆ. ಇದನ್ನು ಇನ್ನಷ್ಟು ಹೆಚ್ಚುಮಾಡಿ, ನಮ್ಮಿಂದಾಗುವ ಎಲ್ಲ ರೀತಿಗಳಲ್ಲಿ ಮದ್ಯನಿಷೇಧ ಆಂದೋಲನದಲ್ಲಿ ಬರುತ್ತಿರುವ ಹೋರಾಟದ ಕಿಡಿಗಳಿಗೆ ನೆರವಾಗೋಣ.
ನಾವು ಮಾಡಬಹುದಾದುದೇನು? ಕೆಲವು ಆಲೋಚನೆಗಳು
- ಸಾಧ್ಯವಿರುವ ಎಲ್ಲರೂ ಜ.30ರಂದು ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಖುದ್ದಾಗಿ ಬಂದು ಪಾಲ್ಗೊಳ್ಳುವುದು.
- ಮಾಧ್ಯಮಗಳಲ್ಲಿ ಕೆಲಸ ಮಾಡುವವರು/ ಸಂಪರ್ಕ ಹೊಂದಿರುವವರು ಈ ಆಂದೋಲನಕ್ಕೆ ಸಾಧ್ಯವಾದಷ್ಟು ಹೆಚ್ಚು ಪ್ರಚಾರ ಒದಗಿಸುವುದು- ದೃಶ್ಯ ಮಾಧ್ಯಮಗಳಲ್ಲಿ ಇರುವವರು ಈ ಮಹಿಳೆಯರೊಂದಿಗೆ ಸಣ್ಣ ಮಾತುಕತೆ ಕಾರ್ಯಕ್ರಮ ನಡೆಸಲು ಸಾಧ್ಯವೆ ಪ್ರಯತ್ನಿಸುವುದು
- ಸರ್ಕಾರದ ಮೇಲೆ ಒತ್ತಡ ಹೇರಲು ಸಾಧ್ಯವಿರುವ, ನಮ್ಮ ನಮ್ಮ ಸ್ನೇಹಿತರ ಬಳಗದಲ್ಲಿರುವ ಪ್ರಭಾವಿಗಳನ್ನು ಸಂಪರ್ಕಿಸಿ, ಅವರ ಮೂಲಕ ಸರ್ಕಾರದ ಮೇಲೆ ಒತ್ತಡ ಹೆಚ್ಚುವಂತೆ ಮಾಡುವುದು- ಒಂದು ತಪಸ್ಸಿನಂತೆ ನಡೆದು ಬಂದಿರುವ ಈ ತಾಯಂದಿರನ್ನು ಕನಿಷ್ಠ ಸಭೆ ಕರೆದು ಚರ್ಚೆ ನಡೆಸುವಂತೆ ಒಪ್ಪಿಸಲು ಆಗ್ರಹಿಸುವುದು.
- ಸ್ವತಃ ಬರೆಯುವವರು, ಪತ್ರಿಕೆಗಳು, magazineಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಬೆಂಬಲದ ಬರಹಗಳು ಪ್ರಕಟವಾಗುವಂತೆ ಪ್ರಯತ್ನಿಸುವುದು
- ಆಂದೋಲನ ಖರ್ಚಿಗೆ ಹಣಕಾಸಿನ ನೆರವು ನೀಡುವುದು.
- ನಮ್ಮ ಸ್ನೇಹಿತರ ಬಳಗದ ಎಲ್ಲರನ್ನು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಾಹಿತಿ ರವಾನಿಸುವುದು.
ಇವೇ ಮೊದಲಾದ ಹಲವು ಬಗೆಗಳಲ್ಲಿ ನಾವು ಅವರೊಂದಿಗಿದ್ದೇವೆಂಬುದನ್ನು ತೋರಿಸಲು ಸಾಧ್ಯವಿದೆ. ಬನ್ನಿ, ನಡೆದು ದಣಿದು ಬರುತ್ತಿರುವ ನಮ್ಮ ಸಹೋದರಿಯರಿಗೆ ‘ನಿಮ್ಮೊಂದಿಗೆ ನಾವಿದ್ದೇವೆ’ ಎಂದು ಹೇಳಲು ಸಜ್ಜಾಗೋಣ.
ಕಾಲ್ನಡಿಗೆ ನಿರತ ಮಹಿಳೆಯರ ಪರವಾಗಿ
-ಮಲ್ಲಿಗೆ ಸಿರಿಮನೆ
ಹೋರಾಟಗಾರ್ತಿ
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
2027ರ ಜನಗಣತಿ ನಡೆಸಲು ಬಜೆಟ್ ಅಂಗೀಕಾರ
ಸುದ್ದಿದಿನ,ದೆಹಲಿ:2027ರ ಜನಗಣತಿಯನ್ನು ನಡೆಸಲು ಸಂಪುಟವು 11 ಸಾವಿರದ 718 ಕೋಟಿ ರೂಪಾಯಿಗಳ ಬಜೆಟ್ಅನ್ನು ಅಂಗೀಕರಿಸಿದೆ. ಈ ಕುರಿತು ಮಾಹಿತಿ ನೀಡಿದ ಸಚಿವರು, 2027ರ ಜನಗಣತಿಯನ್ನು ಎರಡು ಹಂತಗಳಲ್ಲಿ ನಡೆಸಲಾಗುವುದು ಎಂದು ಹೇಳಿದರು.
ಇದು ಮೊದಲ ಡಿಜಿಟಲ್ ಜನಗಣತಿಯಾಗಲಿದೆ. 2027 ರ ಜನಗಣತಿಯು ಒಟ್ಟಾರೆ 16ನೇ ಮತ್ತು ಸ್ವಾತಂತ್ರ್ಯದ ನಂತರದ 8 ನೇ ಜನಗಣತಿಯಾಗಲಿದೆ. ಭಾರತದ ಜನಗಣತಿಯನ್ನು ವಿಶ್ವದ ಅತಿದೊಡ್ಡ ಆಡಳಿತಾತ್ಮಕ ಮತ್ತು ಸಂಖ್ಯಾಶಾಸ್ತ್ರೀಯ ಕ್ರಮವೆಂದು ಪರಿಗಣಿಸಲಾಗಿದೆ ಎಂದು ಅವರು ತಿಳಿಸಿದರು.
ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು 2026ರ ಹಂಗಾಮಿಗೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆಗೆ ಅನುಮೋದನೆ ನೀಡಿದೆ. ಬೆಳೆಗಾರರಿಗೆ ಲಾಭದಾಯಕ ಬೆಲೆಗಳನ್ನು ಒದಗಿಸುವ ಸಲುವಾಗಿ, ಸರ್ಕಾರವು 2018-19 ರ ಕೇಂದ್ರ ಬಜೆಟ್ನಲ್ಲಿ ಎಲ್ಲಾ ಕಡ್ಡಾಯ ಬೆಳೆಗಳ ಎಂಎಸ್ಪಿ ಅನ್ನು ಅಖಿಲ ಭಾರತ ಸರಾಸರಿ ಉತ್ಪಾದನಾ ವೆಚ್ಚದ ಕನಿಷ್ಠ 1.5 ಪಟ್ಟು ಮಟ್ಟದಲ್ಲಿ ನಿಗದಿಪಡಿಸಲಾಗುವುದು ಎಂದು ಘೋಷಿಸಿತ್ತು. ಮಿಲ್ಲಿಂಗ್ ಕೊಬ್ಬರಿಗೆ ಎಂಎಸ್ಪಿಯನ್ನು ಕ್ವಿಂಟಲ್ಗೆ 445 ರೂಪಾಯಿಗಳಿಂದ 12 ಸಾವಿರದ 27 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ ಮತ್ತು ಅದೇ ಅವಧಿಗೆ ಉಂಡೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ 2026ರ ಹಂಗಾಮಿಗೆ ಕ್ವಿಂಟಲ್ಗೆ 400 ರೂಪಾಯಿಗಳಿಂದ 12 ಸಾವಿರದ 500 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ.
ಹೆಚ್ಚಿನ ಕನಿಷ್ಠ ಬೆಂಬಲ ಬೆಲೆಯು ತೆಂಗಿನ ಬೆಳೆಗಾರರಿಗೆ ಉತ್ತಮ ಲಾಭದಾಯಕ ಆದಾಯವನ್ನು ಖಚಿತಪಡಿಸುವುದಲ್ಲದೆ, ದೇಶೀಯವಾಗಿ ಮತ್ತು ಅಂತಾರಾಷ್ಟ್ರೀಯವಾಗಿ ತೆಂಗಿನ ಉತ್ಪನ್ನಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಕೊಬ್ಬರಿ ಉತ್ಪಾದನೆಯನ್ನು ವಿಸ್ತರಿಸಲು ರೈತರನ್ನು ಪ್ರೋತ್ಸಾಹಿಸುತ್ತದೆ ಎಂದು ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೋಲ್ಸೇತು ನೀತಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ; ಸಂಪನ್ಮೂಲಗಳ ನ್ಯಾಯಯುತ ಬಳಕೆಗೆ ಒತ್ತು
ಸುದ್ದಿದಿನ,ದೆಹಲಿ:ಕೇಂದ್ರ ಸರ್ಕಾರವು ’ಕೋಲ್ಸೇತು’ ನೀತಿಯನ್ನು ಅನುಮೋದಿಸಿದೆ. ಇದು ವಿವಿಧ ಕೈಗಾರಿಕಾ ಬಳಕೆಗಳು ಮತ್ತು ರಫ್ತಿಗೆ ಕಲ್ಲಿದ್ದಲು ಸಂಪರ್ಕಗಳ ಹರಾಜಿಗೆ ಹೊಸ ವ್ಯವಸ್ಥೆ ಸೃಷ್ಟಿಸುತ್ತದೆ, ಹಾಗೂ ಸಂಪನ್ಮೂಲಗಳ ನ್ಯಾಯಯುತ ಪ್ರವೇಶ ಮತ್ತು ಅತ್ಯುತ್ತಮ ಬಳಕೆಯನ್ನು ಖಚಿತಪಡಿಸುತ್ತದೆ.
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು ನಿನ್ನೆ ತಡೆರಹಿತ, ದಕ್ಷ ಮತ್ತು ಪಾರದರ್ಶಕ ಬಳಕೆಗಾಗಿ ಕಲ್ಲಿದ್ದಲು ಸಂಪರ್ಕದ ಹರಾಜು ನೀತಿಗೆ ಅನುಮೋದನೆ ನೀಡಿತು.
ನವದೆಹಲಿಯಲ್ಲಿ ನಿನ್ನೆ ಸಂಜೆ ಸಂಪುಟದ ನಿರ್ಧಾರಗಳ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್, 2016ರ ಎನ್ಆರ್ಎಸ್ ನಿಯಂತ್ರಿತವಲ್ಲದ ವಲಯದ ಸಂಪರ್ಕ ಹರಾಜು ನೀತಿಯಲ್ಲಿ ’ಕೋಲ್ಸೇತು’ ಎಂಬ ಪ್ರತ್ಯೇಕ ವ್ಯವಸ್ಥೆಯನ್ನು ಸೇರಿಸುವ ಮೂಲಕ ಯಾವುದೇ ಕೈಗಾರಿಕಾ ಬಳಕೆ ಮತ್ತು ರಫ್ತಿಗೆ ದೀರ್ಘಾವಧಿಯವರೆಗೆ ಹರಾಜು ಆಧಾರದ ಮೇಲೆ ಕಲ್ಲಿದ್ದಲು ಸಂಪರ್ಕಗಳ ಹಂಚಿಕೆಗೆ ಈ ನೀತಿಯು ಅವಕಾಶ ನೀಡುತ್ತದೆ ಎಂದು ಹೇಳಿದರು.
ಕಲ್ಲಿದ್ದಲು ಅಗತ್ಯವಿರುವ ಯಾವುದೇ ದೇಶೀಯ ಖರೀದಿದಾರರು ಅಂತಿಮ ಬಳಕೆಯನ್ನು ಲೆಕ್ಕಿಸದೆ ಸಂಪರ್ಕ ಹರಾಜಿನಲ್ಲಿ ಭಾಗವಹಿಸಬಹುದು ಎಂದು ಅವರು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಹಿಳೆಯರ ಪುನರ್ ವಸತಿ ಯೋಜನೆ | ಅರ್ಜಿ ಆಹ್ವಾನ ; ಅವಧಿ ವಿಸ್ತರಣೆ
ಸುದ್ದಿದಿನ,ದಾವಣಗೆರೆ: ಪ್ರಸಕ್ತ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ, ಚೇತನಾ, ಧನಶ್ರೀ, ಲಿಂಗತ್ವ ಅಲ್ಪ ಸಂಖ್ಯಾತರ ಪುನರ್ವಸತಿ ಯೋಜನೆ ಹಾಗೂ ಮಾಜಿ ದೇವದಾಸಿ ಮಹಿಳೆಯರ ಪುನರ್ ವಸತಿ ಯೋಜನೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು 15 ಜನವರಿ 2026 ರವರೆಗೆ ವಿಸ್ತರಿಸಲಾಗಿದೆ ಎಂದು ಇಲಾಖೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoಯಮ ಸ್ವರೂಪಿ ಗ್ಯಾಸ್ ಗೀಸರ್ ಬಳಸೋ ಮುನ್ನ ಎಚ್ಚರ ; ಇವಿಷ್ಟನ್ನು ಪಾಲಿಸಿ ಅಪಾಯ ತಡೆಗಟ್ಟಿ
-
ದಿನದ ಸುದ್ದಿ5 days agoಬೆಂಬಲ ಬೆಲೆ | ಮೆಕ್ಕೆಜೋಳ ಖರೀದಿ ಪ್ರಕ್ರಿಯೆ ಪ್ರಾರಂಭ: ಡಿಸಿ ಗಂಗಾಧರಸ್ವಾಮಿ
-
ದಿನದ ಸುದ್ದಿ4 days agoಪತ್ರಿಕೋದ್ಯಮ ಪದವೀಧರರಿಗೆ ಸಿಹಿ ಸುದ್ದಿ | ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ತರಬೇತಿ ; ಅರ್ಜಿ ಆಹ್ವಾನ
-
ದಿನದ ಸುದ್ದಿ3 days agoಅಂಚೆ ಇಲಾಖೆಯಿಂದ ಸೆಲ್ಪ್ ಬುಕ್ಕಿಂಗ್ ಸೌಲಭ್ಯ
-
ದಿನದ ಸುದ್ದಿ2 days agoಮಹಿಳೆಯರ ಪುನರ್ ವಸತಿ ಯೋಜನೆ | ಅರ್ಜಿ ಆಹ್ವಾನ ; ಅವಧಿ ವಿಸ್ತರಣೆ
-
ದಿನದ ಸುದ್ದಿ2 days agoಕೋಲ್ಸೇತು ನೀತಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ; ಸಂಪನ್ಮೂಲಗಳ ನ್ಯಾಯಯುತ ಬಳಕೆಗೆ ಒತ್ತು
-
ದಿನದ ಸುದ್ದಿ2 days ago2027ರ ಜನಗಣತಿ ನಡೆಸಲು ಬಜೆಟ್ ಅಂಗೀಕಾರ

