ದಿನದ ಸುದ್ದಿ
ನಡೆದು ಬರುತ್ತಿರುವ ಸಹೋದರಿಯರೊಂದಿಗೆ ಕೈಜೋಡಿಸುವ ಅಗತ್ಯವಿದೆ
ಆತ್ಮೀಯರೆ, ಕಳೆದ 10 ದಿನಗಳಿಂದ ನಿರಂತರವಾಗಿ ಮದ್ಯ ನಿಷೇಧ ಆಂದೋಲನದ ಪಾದಯಾತ್ರೆಯಲ್ಲಿ ನಡೆದು ಬರುತ್ತಿರುವ ಕೂಲಿ ತಾಯಂದಿರು ಮತ್ತು ಅವರ ಜೊತೆಗೆ ಹೆಜ್ಜೆ ಹಾಕುತ್ತಿರುವ ಸಾಮಾಜಿಕ ಕಾರ್ಯಕರ್ತರು ನಾಡಿದ್ದು ಅಂದರೆ ಜನವರಿ 30ರಂದು ಬೆಂಗಳೂರು ತಲುಪುತ್ತಾರೆ. ನಿನ್ನೆ ಆ ತಂಡದಲ್ಲಿ ಆರಂಭದಿಂದ ನಡೆದು ಬಂದಿದ್ದ ರಾಯಚೂರಿನ ರೇಣುಕಮ್ಮ ಎಂಬ ಮಹಿಳೆ ಸರ್ಕಾರದ ನಿಷ್ಕಾಳಜಿಯ ಪರಿಣಾಮವಾಗಿ ಸಾವಿಗೀಡಾದರು.
ಅಷ್ಟಾದರೂ ಆಕೆಯ ವಯೋವೃದ್ಧ ಅತ್ತೆ (ಗಂಡನ ತಾಯಿ-ಈಕೆಯೂ ಮೊದಲ ದಿನದಿಂದ ನಡೆದು ಬರುತ್ತಿದ್ದಾರೆ) ತನ್ನ ಸೊಸೆ ಯಾವ ಹೋರಾಟಕ್ಕಾಗಿ ಪ್ರಾಣಕೊಟ್ಟಿದ್ದಾಳೋ, ಅದನ್ನು ಗುರಿಮುಟ್ಟಿಸಿಯೇ ಸಿದ್ಧ ಎಂದು ನೋವಿನಲ್ಲೂ ಕೆಚ್ಚೆದೆಯ ಮಾತುಗಳನ್ನಾಡಿದ್ದು ನಿಜಕ್ಕೂ ನಮ್ಮ ಮನಸ್ಸನ್ನು ತಟ್ಟಿ ಆತ್ಮವನ್ನು ಅಲುಗಾಡಿಸಿತು. ಇಷ್ಟು ದಿನಗಳ ಸುದೀರ್ಘ ನಡಿಗೆ, ಆಯಾಸ ಅಷ್ಟು ಸಾಲದೆಂದು ಒಡನಾಡಿಯೊಬ್ಬರ ದುರ್ಮರಣ- ಇವ್ಯಾವುವೂ ಪಾದಯಾತ್ರೆಯ ದಿಟ್ಟ ಮಹಿಳೆಯರ ಮನೋಬಲವನ್ನು ಕುಗ್ಗಿಸಿಲ್ಲ!!! ಅವರ ಚೈತನ್ಯ ನಿಜವಾಗಿಯೂ ಈ ಸಮಾಜಕ್ಕೆ ಚಿಕಿತ್ಸೆ ನೀಡುವಷ್ಟು ಶಕ್ತಿಶಾಲಿಯಾಗಿದೆ ಎಂಬುದು ಅವರ ಹತ್ತಿರ ಸುಳಿದ ಯಾರಿಗಾದರೂ ಅನುಭವಕ್ಕೆ ಬಂದೀತು.
ಆದರೆ, ದುರಂತವೆಂದರೆ ಅವರ ನೋವಿನ ಮಾತುಗಳು ಇನ್ನೂ ಸರ್ಕಾರದ ಚುಕ್ಕಾಣಿ ಹಿಡಿದವರನ್ನು ಅಲುಗಿಸಿಲ್ಲ; ಸರ್ಕಾರದ ಮುಂದಾಳುಗಳಿಗೆ ಇವರ ಬದುಕು-ಬವಣೆಗಳು ಉಡಾಫೆಯ ಸಂಗತಿಗಳಾಗಿವೆ ಎಂಬುದನ್ನು ಇಂದು ಕಣ್ಣಾರೆ ನೋಡಿದೆ.
ಇದೀಗ, ತಮ್ಮ ಮತ್ತು ತಮ್ಮಂತಹ ಅಸಂಖ್ಯಾತ ಹೆಣ್ಮಕ್ಕಳ ಬದುಕು ಹಸನಾಗಬೇಕೆಂಬ ಆಶಯದೊಂದಿಗೆ ಪಾದಯಾತ್ರೆ ಹೊರಟ ಈ ಸಹೋದರಿಯರು ತಮ್ಮ ಹೋರಾಟವನ್ನು ತೀವ್ರಗೊಳಿಸಲು ನಿರ್ಧರಿಸಿದ್ದಾರೆ. ಅವರ ಒಡಲ ಸಂಕಟದ ದನಿಗೆ ನಮ್ಮೆಲ್ಲರ ದನಿಗಳು ಸೇರಿದರಾದರೂ ಆ ಕಲ್ಲುಕಟ್ಟಡದ ಭ್ರಷ್ಟ ಕೊಠಡಿಗಳೊಳಗೆ ಸೇರಿ ಮಲಗಿರುವ ಸರ್ಕಾರ ಕಣ್ತೆರೆಯಬಹುದೇ? ಅವರ ಅದಮ್ಯ ಮನೋಬಲಕ್ಕೆ ಬನ್ನಿ ಇನ್ನೊಂದಷ್ಟು ಆಶಾವಾದ ಸೇರಿಸೋಣ.
ಈಗಾಗಲೇ ಕರ್ನಾಟಕದ ಸಂವೇದನಾಶೀಲರು ಅನೇಕ ರೀತಿಗಳಲ್ಲಿ ಆಂದೋಲನಕ್ಕೆ ಸ್ಪಂದಿಸಿದ್ದಾರೆ. ಇದನ್ನು ಇನ್ನಷ್ಟು ಹೆಚ್ಚುಮಾಡಿ, ನಮ್ಮಿಂದಾಗುವ ಎಲ್ಲ ರೀತಿಗಳಲ್ಲಿ ಮದ್ಯನಿಷೇಧ ಆಂದೋಲನದಲ್ಲಿ ಬರುತ್ತಿರುವ ಹೋರಾಟದ ಕಿಡಿಗಳಿಗೆ ನೆರವಾಗೋಣ.
ನಾವು ಮಾಡಬಹುದಾದುದೇನು? ಕೆಲವು ಆಲೋಚನೆಗಳು
- ಸಾಧ್ಯವಿರುವ ಎಲ್ಲರೂ ಜ.30ರಂದು ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಖುದ್ದಾಗಿ ಬಂದು ಪಾಲ್ಗೊಳ್ಳುವುದು.
- ಮಾಧ್ಯಮಗಳಲ್ಲಿ ಕೆಲಸ ಮಾಡುವವರು/ ಸಂಪರ್ಕ ಹೊಂದಿರುವವರು ಈ ಆಂದೋಲನಕ್ಕೆ ಸಾಧ್ಯವಾದಷ್ಟು ಹೆಚ್ಚು ಪ್ರಚಾರ ಒದಗಿಸುವುದು- ದೃಶ್ಯ ಮಾಧ್ಯಮಗಳಲ್ಲಿ ಇರುವವರು ಈ ಮಹಿಳೆಯರೊಂದಿಗೆ ಸಣ್ಣ ಮಾತುಕತೆ ಕಾರ್ಯಕ್ರಮ ನಡೆಸಲು ಸಾಧ್ಯವೆ ಪ್ರಯತ್ನಿಸುವುದು
- ಸರ್ಕಾರದ ಮೇಲೆ ಒತ್ತಡ ಹೇರಲು ಸಾಧ್ಯವಿರುವ, ನಮ್ಮ ನಮ್ಮ ಸ್ನೇಹಿತರ ಬಳಗದಲ್ಲಿರುವ ಪ್ರಭಾವಿಗಳನ್ನು ಸಂಪರ್ಕಿಸಿ, ಅವರ ಮೂಲಕ ಸರ್ಕಾರದ ಮೇಲೆ ಒತ್ತಡ ಹೆಚ್ಚುವಂತೆ ಮಾಡುವುದು- ಒಂದು ತಪಸ್ಸಿನಂತೆ ನಡೆದು ಬಂದಿರುವ ಈ ತಾಯಂದಿರನ್ನು ಕನಿಷ್ಠ ಸಭೆ ಕರೆದು ಚರ್ಚೆ ನಡೆಸುವಂತೆ ಒಪ್ಪಿಸಲು ಆಗ್ರಹಿಸುವುದು.
- ಸ್ವತಃ ಬರೆಯುವವರು, ಪತ್ರಿಕೆಗಳು, magazineಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಬೆಂಬಲದ ಬರಹಗಳು ಪ್ರಕಟವಾಗುವಂತೆ ಪ್ರಯತ್ನಿಸುವುದು
- ಆಂದೋಲನ ಖರ್ಚಿಗೆ ಹಣಕಾಸಿನ ನೆರವು ನೀಡುವುದು.
- ನಮ್ಮ ಸ್ನೇಹಿತರ ಬಳಗದ ಎಲ್ಲರನ್ನು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಾಹಿತಿ ರವಾನಿಸುವುದು.
ಇವೇ ಮೊದಲಾದ ಹಲವು ಬಗೆಗಳಲ್ಲಿ ನಾವು ಅವರೊಂದಿಗಿದ್ದೇವೆಂಬುದನ್ನು ತೋರಿಸಲು ಸಾಧ್ಯವಿದೆ. ಬನ್ನಿ, ನಡೆದು ದಣಿದು ಬರುತ್ತಿರುವ ನಮ್ಮ ಸಹೋದರಿಯರಿಗೆ ‘ನಿಮ್ಮೊಂದಿಗೆ ನಾವಿದ್ದೇವೆ’ ಎಂದು ಹೇಳಲು ಸಜ್ಜಾಗೋಣ.
ಕಾಲ್ನಡಿಗೆ ನಿರತ ಮಹಿಳೆಯರ ಪರವಾಗಿ
-ಮಲ್ಲಿಗೆ ಸಿರಿಮನೆ
ಹೋರಾಟಗಾರ್ತಿ
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ
ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.
ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.
ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ್ವಾಮಿ.ಜಿ.ಎಂ.ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.
‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)
AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.
ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.
ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.
ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.
ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.
ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ3 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ5 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ3 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
-
ದಿನದ ಸುದ್ದಿ11 hours agoಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ10 hours agoದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

