ದಿನದ ಸುದ್ದಿ
ನಡೆದು ಬರುತ್ತಿರುವ ಸಹೋದರಿಯರೊಂದಿಗೆ ಕೈಜೋಡಿಸುವ ಅಗತ್ಯವಿದೆ
ಆತ್ಮೀಯರೆ, ಕಳೆದ 10 ದಿನಗಳಿಂದ ನಿರಂತರವಾಗಿ ಮದ್ಯ ನಿಷೇಧ ಆಂದೋಲನದ ಪಾದಯಾತ್ರೆಯಲ್ಲಿ ನಡೆದು ಬರುತ್ತಿರುವ ಕೂಲಿ ತಾಯಂದಿರು ಮತ್ತು ಅವರ ಜೊತೆಗೆ ಹೆಜ್ಜೆ ಹಾಕುತ್ತಿರುವ ಸಾಮಾಜಿಕ ಕಾರ್ಯಕರ್ತರು ನಾಡಿದ್ದು ಅಂದರೆ ಜನವರಿ 30ರಂದು ಬೆಂಗಳೂರು ತಲುಪುತ್ತಾರೆ. ನಿನ್ನೆ ಆ ತಂಡದಲ್ಲಿ ಆರಂಭದಿಂದ ನಡೆದು ಬಂದಿದ್ದ ರಾಯಚೂರಿನ ರೇಣುಕಮ್ಮ ಎಂಬ ಮಹಿಳೆ ಸರ್ಕಾರದ ನಿಷ್ಕಾಳಜಿಯ ಪರಿಣಾಮವಾಗಿ ಸಾವಿಗೀಡಾದರು.
ಅಷ್ಟಾದರೂ ಆಕೆಯ ವಯೋವೃದ್ಧ ಅತ್ತೆ (ಗಂಡನ ತಾಯಿ-ಈಕೆಯೂ ಮೊದಲ ದಿನದಿಂದ ನಡೆದು ಬರುತ್ತಿದ್ದಾರೆ) ತನ್ನ ಸೊಸೆ ಯಾವ ಹೋರಾಟಕ್ಕಾಗಿ ಪ್ರಾಣಕೊಟ್ಟಿದ್ದಾಳೋ, ಅದನ್ನು ಗುರಿಮುಟ್ಟಿಸಿಯೇ ಸಿದ್ಧ ಎಂದು ನೋವಿನಲ್ಲೂ ಕೆಚ್ಚೆದೆಯ ಮಾತುಗಳನ್ನಾಡಿದ್ದು ನಿಜಕ್ಕೂ ನಮ್ಮ ಮನಸ್ಸನ್ನು ತಟ್ಟಿ ಆತ್ಮವನ್ನು ಅಲುಗಾಡಿಸಿತು. ಇಷ್ಟು ದಿನಗಳ ಸುದೀರ್ಘ ನಡಿಗೆ, ಆಯಾಸ ಅಷ್ಟು ಸಾಲದೆಂದು ಒಡನಾಡಿಯೊಬ್ಬರ ದುರ್ಮರಣ- ಇವ್ಯಾವುವೂ ಪಾದಯಾತ್ರೆಯ ದಿಟ್ಟ ಮಹಿಳೆಯರ ಮನೋಬಲವನ್ನು ಕುಗ್ಗಿಸಿಲ್ಲ!!! ಅವರ ಚೈತನ್ಯ ನಿಜವಾಗಿಯೂ ಈ ಸಮಾಜಕ್ಕೆ ಚಿಕಿತ್ಸೆ ನೀಡುವಷ್ಟು ಶಕ್ತಿಶಾಲಿಯಾಗಿದೆ ಎಂಬುದು ಅವರ ಹತ್ತಿರ ಸುಳಿದ ಯಾರಿಗಾದರೂ ಅನುಭವಕ್ಕೆ ಬಂದೀತು.
ಆದರೆ, ದುರಂತವೆಂದರೆ ಅವರ ನೋವಿನ ಮಾತುಗಳು ಇನ್ನೂ ಸರ್ಕಾರದ ಚುಕ್ಕಾಣಿ ಹಿಡಿದವರನ್ನು ಅಲುಗಿಸಿಲ್ಲ; ಸರ್ಕಾರದ ಮುಂದಾಳುಗಳಿಗೆ ಇವರ ಬದುಕು-ಬವಣೆಗಳು ಉಡಾಫೆಯ ಸಂಗತಿಗಳಾಗಿವೆ ಎಂಬುದನ್ನು ಇಂದು ಕಣ್ಣಾರೆ ನೋಡಿದೆ.
ಇದೀಗ, ತಮ್ಮ ಮತ್ತು ತಮ್ಮಂತಹ ಅಸಂಖ್ಯಾತ ಹೆಣ್ಮಕ್ಕಳ ಬದುಕು ಹಸನಾಗಬೇಕೆಂಬ ಆಶಯದೊಂದಿಗೆ ಪಾದಯಾತ್ರೆ ಹೊರಟ ಈ ಸಹೋದರಿಯರು ತಮ್ಮ ಹೋರಾಟವನ್ನು ತೀವ್ರಗೊಳಿಸಲು ನಿರ್ಧರಿಸಿದ್ದಾರೆ. ಅವರ ಒಡಲ ಸಂಕಟದ ದನಿಗೆ ನಮ್ಮೆಲ್ಲರ ದನಿಗಳು ಸೇರಿದರಾದರೂ ಆ ಕಲ್ಲುಕಟ್ಟಡದ ಭ್ರಷ್ಟ ಕೊಠಡಿಗಳೊಳಗೆ ಸೇರಿ ಮಲಗಿರುವ ಸರ್ಕಾರ ಕಣ್ತೆರೆಯಬಹುದೇ? ಅವರ ಅದಮ್ಯ ಮನೋಬಲಕ್ಕೆ ಬನ್ನಿ ಇನ್ನೊಂದಷ್ಟು ಆಶಾವಾದ ಸೇರಿಸೋಣ.
ಈಗಾಗಲೇ ಕರ್ನಾಟಕದ ಸಂವೇದನಾಶೀಲರು ಅನೇಕ ರೀತಿಗಳಲ್ಲಿ ಆಂದೋಲನಕ್ಕೆ ಸ್ಪಂದಿಸಿದ್ದಾರೆ. ಇದನ್ನು ಇನ್ನಷ್ಟು ಹೆಚ್ಚುಮಾಡಿ, ನಮ್ಮಿಂದಾಗುವ ಎಲ್ಲ ರೀತಿಗಳಲ್ಲಿ ಮದ್ಯನಿಷೇಧ ಆಂದೋಲನದಲ್ಲಿ ಬರುತ್ತಿರುವ ಹೋರಾಟದ ಕಿಡಿಗಳಿಗೆ ನೆರವಾಗೋಣ.
ನಾವು ಮಾಡಬಹುದಾದುದೇನು? ಕೆಲವು ಆಲೋಚನೆಗಳು
- ಸಾಧ್ಯವಿರುವ ಎಲ್ಲರೂ ಜ.30ರಂದು ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಖುದ್ದಾಗಿ ಬಂದು ಪಾಲ್ಗೊಳ್ಳುವುದು.
- ಮಾಧ್ಯಮಗಳಲ್ಲಿ ಕೆಲಸ ಮಾಡುವವರು/ ಸಂಪರ್ಕ ಹೊಂದಿರುವವರು ಈ ಆಂದೋಲನಕ್ಕೆ ಸಾಧ್ಯವಾದಷ್ಟು ಹೆಚ್ಚು ಪ್ರಚಾರ ಒದಗಿಸುವುದು- ದೃಶ್ಯ ಮಾಧ್ಯಮಗಳಲ್ಲಿ ಇರುವವರು ಈ ಮಹಿಳೆಯರೊಂದಿಗೆ ಸಣ್ಣ ಮಾತುಕತೆ ಕಾರ್ಯಕ್ರಮ ನಡೆಸಲು ಸಾಧ್ಯವೆ ಪ್ರಯತ್ನಿಸುವುದು
- ಸರ್ಕಾರದ ಮೇಲೆ ಒತ್ತಡ ಹೇರಲು ಸಾಧ್ಯವಿರುವ, ನಮ್ಮ ನಮ್ಮ ಸ್ನೇಹಿತರ ಬಳಗದಲ್ಲಿರುವ ಪ್ರಭಾವಿಗಳನ್ನು ಸಂಪರ್ಕಿಸಿ, ಅವರ ಮೂಲಕ ಸರ್ಕಾರದ ಮೇಲೆ ಒತ್ತಡ ಹೆಚ್ಚುವಂತೆ ಮಾಡುವುದು- ಒಂದು ತಪಸ್ಸಿನಂತೆ ನಡೆದು ಬಂದಿರುವ ಈ ತಾಯಂದಿರನ್ನು ಕನಿಷ್ಠ ಸಭೆ ಕರೆದು ಚರ್ಚೆ ನಡೆಸುವಂತೆ ಒಪ್ಪಿಸಲು ಆಗ್ರಹಿಸುವುದು.
- ಸ್ವತಃ ಬರೆಯುವವರು, ಪತ್ರಿಕೆಗಳು, magazineಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಬೆಂಬಲದ ಬರಹಗಳು ಪ್ರಕಟವಾಗುವಂತೆ ಪ್ರಯತ್ನಿಸುವುದು
- ಆಂದೋಲನ ಖರ್ಚಿಗೆ ಹಣಕಾಸಿನ ನೆರವು ನೀಡುವುದು.
- ನಮ್ಮ ಸ್ನೇಹಿತರ ಬಳಗದ ಎಲ್ಲರನ್ನು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಾಹಿತಿ ರವಾನಿಸುವುದು.
ಇವೇ ಮೊದಲಾದ ಹಲವು ಬಗೆಗಳಲ್ಲಿ ನಾವು ಅವರೊಂದಿಗಿದ್ದೇವೆಂಬುದನ್ನು ತೋರಿಸಲು ಸಾಧ್ಯವಿದೆ. ಬನ್ನಿ, ನಡೆದು ದಣಿದು ಬರುತ್ತಿರುವ ನಮ್ಮ ಸಹೋದರಿಯರಿಗೆ ‘ನಿಮ್ಮೊಂದಿಗೆ ನಾವಿದ್ದೇವೆ’ ಎಂದು ಹೇಳಲು ಸಜ್ಜಾಗೋಣ.
ಕಾಲ್ನಡಿಗೆ ನಿರತ ಮಹಿಳೆಯರ ಪರವಾಗಿ
-ಮಲ್ಲಿಗೆ ಸಿರಿಮನೆ
ಹೋರಾಟಗಾರ್ತಿ
ಸುದ್ದಿದಿನ.ಕಾಂ|ವಾಟ್ಸಾಪ್|9986715401
ದಿನದ ಸುದ್ದಿ
ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ
ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.
ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.
ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಜನಧ್ವನಿ-2 ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದೆ.
ಸಂವಿಧಾನಕ್ಕೆ ಅಪಾಯ ಎಂದರೆ ದೇಶದ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು, ಶ್ರಮಿಕರ ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ.
ಭಾರತದಲ್ಲಿ ಪ್ರಜಾತಂತ್ರ ಅಪಾಯದಲ್ಲಿದೆ. ಇದನ್ನು ಉಳಿಸುವ ಅನಿವಾರ್ಯತೆ ನಮ್ಮೆಲ್ಲರ ಮುಂದಿದೆ. ಈ ಲೋಕಸಭಾ ಚುನಾವಣೆ ನಮಗೊಂದು… pic.twitter.com/UapeRxBcZP
— Siddaramaiah (@siddaramaiah) April 14, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ
ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.
ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.
ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.
ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.
ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.
ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.
ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್ಗೆ ರೂ.10 ಪಡೆದ ಶಾಪಿಂಗ್ ಮಾಲ್ಗೆ ದಂಡ
ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್ಗೆ ಪಡೆಯಲಾಯಿತು.
ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.
ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243