ಲೈಫ್ ಸ್ಟೈಲ್
ಹೀಗೊಂದು ಹೆಬ್ಬಾವಿನ ಚಿಕಿತ್ಸೆ..!

- ಡಾ.ಎನ್.ಬಿ.ಶ್ರೀಧರ, ಪ್ರಾಧ್ಯಾಪಕರು, ವೆಟರ್ನರಿ ಕಾಲೇಜು, ಶಿವಮೊಗ್ಗ
ಅನೇಕ ಸಲ ನಮಗೆ ಹೊಸ ರೀತಿಯ “ಪೇಶಂಟು”ಗಳು ಬಂದು ಅಚ್ಚರಿಗೊಳಿಸುವುದುಂಟು. ಅದರಲ್ಲೂ ಕಾಡಿನಿಂದ ಬರುವ “ರೋಗಿ” ಗಳ ಚಿಕಿತ್ಸೆ ಒಂದು ಸವಾಲು. ಪಶುವೈದ್ಯಕೀಯ ಓದುವಾಗ ಈ ರೀತಿಯ ಯಕ:ಶ್ಚಿತ್ ಹುಳ ಹುಪ್ಪಟೆಗಳಂತ ಪ್ರಾಣಿಗಳನ್ನು ಚಿಕಿತ್ಸೆ ಮಾಡಬೇಕಾಬಹುದಾದ ಸಂದರ್ಭವೆಂದೂ ಬರದು ಎಂದು “ವೈಲ್ಡ್ ಲೈಫ಼್ ಚಿಕಿತ್ಸೆ”ಯ ಪಾಠ ಮಾಡುವಾಗ ದಿವ್ಯ ನಿರ್ಲಕ್ಷ್ಯದಿಂದಿರುವುದು ನಮ್ಮಲ್ಲಿ ಅನೇಕರಿಗೆ ಸಾಮಾನ್ಯವಾಗಿತ್ತು. ಒಂದಿಬ್ಬರು ಸಹೋದ್ಯೋಗಿ ವಿದ್ಯಾರ್ಥಿಗಳು ಈ ರೀತಿಯ ತರಹೇವಾರಿ ಪ್ರಾಣಿಗಳ ಕ್ರಿಮಿಕೀಟಗಳ ಚಿಕಿತ್ಸೆಯಲ್ಲಿ ಆಸಕ್ತಿ ವಹಿಸುವುದು ಬಿಟ್ಟರೆ ಉಳಿದವರ ಆಸಕ್ತಿ ಅಷ್ಟಕ್ಕಷ್ಟೇ. ನಮ್ಮದೇನಿದ್ದರೂ ದನ, ಎಮ್ಮೆ, ಬೆಕ್ಕು, ನಾಯಿ, ಕುದುರೆ, ಕೋಳಿ, ಹಂದಿ ಎಂಬಿತ್ಯಾದಿ ಹಲವು ಹತ್ತು ಸಾಕು ಪ್ರಾಣಿ ಕುಲಕೋಟಿಗಳ ಚಿಕಿತ್ಸೆ ಬಿಟ್ಟರೆ ಉಳಿದ ಪ್ರಾಣಿಗಳ ಗೊಡವೆ ನಮಗ್ಯಾಕೆ ಎಂಬ ದಿವ್ಯ ನಿರ್ಲಕ್ಷ್ಯವಿತ್ತು.
ಆದರೆ ಕೆಲವೊಮ್ಮೆ ಆಮೆ, ಮೊಸಳೆ, ಉಡ,ಕರಡಿ, ಚಿರತೆ, ಕಾಡುಕೋಣ ಇವುಗಳ ಚಿಕಿತ್ಸೆ ದುತ್ತನೇ ಬಂದು ತಲೆ ಕೆರೆದುಕೊಂಡ ಘಟನೆಗಳು ಅನೇಕ. ಆಮೆಯಂತ ಪ್ರಾಣಿಗಳನ್ನು ಸಾಕಿ “ಡಾಕ್ಟ್ರೇ. ನಮ್ಮನೆ ’ಕಣ್ವ’ (ಆಮೆಯ ಹೆಸರು) ಯಾಕೋ ಫುಡ್ಡೇ ತಿಂತಿಲ್ಲ. ಜ್ವರಾ ಬಂದಿದೆ ಅನ್ಸತ್ತೆ. ಸ್ವಲ್ಪ ನೋಡಿ” ಎಂದಾಗ “ಎಲಾ..ಈ ಆಮೆಗೆ ಹ್ಯಾಗೆ ಜ್ವರ ಪರೀಕ್ಷೆ ಮಾಡೋದು?” ಪಾಠ ಮಾಡುವಾಗ ಸ್ವಲ್ಪ ಆಸಕ್ತಿ ವಹಿಸಬೇಕಿತ್ತು” ಎಂದುಕೊಳ್ಳುತ್ತಾ ಇಂಜೆಕ್ಷನ್ ಕೊಡಬೇಕೆಂದು ಅದರ ಕಾಲನ್ನು ಎಳೆದು ಹಿಡಿದು ಸೂಜಿ ಚುಚ್ಚಬೇಕೆಂದುಕೊಂಡರೆ ಇದ್ದಕ್ಕಿದ್ದಂತೆ ಲಬಕ್ಕೆಂದು ತಲೆ ಕಾಲುಗಳನ್ನು ಒಳಗೆಳೆದುಕೊಂಡು ಕೂರ್ಮಾವತಾರ ತಳೆದು ಪಶುವೈದ್ಯ ಜ್ಞಾನ ಅಣಕಿಸಿದ್ದಿದೆ.
ಬಹುಶ: ತೊಂಬತ್ತರ ದಶಕದ ದಿನಗಳಿರಬಹುದು. ಎಂದಿನಂತೆ ಪಶುಚಿಕಿತ್ಸೆಯಲ್ಲಿ ತೊಡಗಿದ್ದೆ. ಸಾಗರದ ಉರಗತಜ್ಞ ಮನ್ಮಥ ಕುಮಾರ್ ಸ್ಥಿರ ದೂರವಾಣಿಗೆ ಕರೆ ಮಾಡಿ “ಡಾಕ್ಟ್ರೇ. ಹೆಬ್ಬಾವಿಗೊಂದು ಚಿಕಿತ್ಸೆ ಆಗಬೇಕಿತ್ತು. ಆಸ್ಪತ್ರೆಯಲ್ಲಿರ್ತಿಲ್ಲಾ. ಬರ್ತಾ ಇರುವೆ” ಎಂದು ಅರ್ಧ ಘಂಟೆಯಲ್ಲಿ ಪ್ರತ್ಯಕ್ಷರಾದರು. ಜೊತೆಯಲ್ಲಿ ಅರಣ್ಯ ಇಲಾಖೆಯ ಖಾಕಿ ಪಡೆಯ ಸಾತ್ ಬೇರೆ. ನನ್ನ ಪೇಶಂಟ್ ಅವರ ಜೀಪಿನಲ್ಲಿಟ್ಟಿದ್ದ ಗೋಣಿಚೀಲದಲ್ಲಿತ್ತು. ಬೆಳಿಗ್ಗೆ ಸೋಮಾರಿತನದಿಂದ ಏಳುವ ಹುಡುಗರಿಗೆ “ಏಯ್. ಹೆಬ್ಬಾವಿನಂತೆ ಬಿದ್ದುಕೊಂಡಿದ್ದೆಯಲ್ಲೋ.. ಎಂದು ಬಯ್ಯುವವರು ನಿಜವಾಗಲೂ ಹೆಬ್ಬಾವಿನ ಸೋಮಾರಿತನ ಗಮನಿಸಬೇಕು. ಈ ಹೆಬ್ಬಾವು ಯಾರದೋ ಮನೆಯಲ್ಲಿ ದೊಡ್ಡ ಹೆಗ್ಗಣ ನುಂಗಿ ಹೊಟ್ಟೆ ಭಾರ ಆಗಿ ಸ್ವಲ್ಪ ರಿಲ್ಯಾಕ್ಸ್ ಮಾಡೋಣ ಎಂದು ಯಾರದೋ ಮನೆಯ ಒಳಗೆ ಸೇರಿ ಮಂಚದ ಅಡಿಗೆ ಸೇರಿಕೊಂಡು ಬಿಟ್ಟಿತ್ತಂತೆ.
ಮೊದಲೇ ಸೋಮಾರಿ. ಹೆಗ್ಗಣ ಹೊಟ್ಟೆಯಲ್ಲಿರುವುದರಿಂದ ಇನ್ನೂ ಸೋಮಾರಿಯಾಗಿ ಮಂಚದಡಿ ನಿದ್ದೆ ಹೊಡೆದಿದೆ. ಮನೆಯೊಡತಿ ಸೌತೆಕಾಯಿಯ ಜಾತಿಯ ಮೊಗೆ ಕಾಯಿಯ ಜ್ಯೂಸ್ ಮಾಡೋಣ ಎಂದು ಮಂಚದಡಿ ಒಂದೆರಡು ಹಣ್ಣಾದ ಮೊಗೆಕಾಯಿ(?)ಗಳಿಗಾಗಿ ಹುಡುಕಲು ತಡಕಾಡಿದಾಗ ನಿಧಾನವಾಗಿ ಮಿಸುಕಾಡುವ “ತಣ್ಣನೆ”ಯ ಸರೀಸ್ರಪ ಕೈಗೆ ತಾಗಿ ನಂತರ ಅದು ಹೆಬ್ಬಾವು ಎಂದು ಗೊತ್ತಾಗಿ ಗಾಬರಿಗೊಂಡಿದ್ದಾರೆ. ಮನೆಯವರು ಮತ್ತು ಸುತ್ತಲೂ ಇರುವ ಜನ ಈ ವಿಶೇಷ ಅತಿಥಿಯ ಬೀಳ್ಕೊಡುಗೆಯ ಸಮಾರಂಭವೇರ್ಪಡಿಸಲು ಪ್ರಯತ್ನ ಪಟ್ಟಿದ್ದಾರೆ. ಹೆಬ್ಬಾವೂ ಸಹ ಗಾಬರಿಗೊಂಡು ಪೆಟ್ಟಿಗೆಯಾಕಾರದ ಮಂಚದ ಗೂಡಿನಲ್ಲಿ ಸೇರಿಕೊಂಡು ಬಿಟ್ಟಿದೆ.
ಕಿರಿದಾದ ಗ್ಯಾಪಿನಿಂದ ಅದನ್ನು ಹೊರತರಲು ಅದರ ಉದ್ದನೆಯ ಬಾಲ ಹಿಡಿದು ಜನರೆಲ್ಲಾ ಸೇರಿ ಎಳೆದಾಗ ಹೆಗ್ಗಣ ಹೊಟ್ಟೆಯೊಳಗಿರುವುದರಿಂದ “ಹೊಟ್ಟೆ ಡುಮ್ಮಣ್ಣ”ನಾಗಿದ್ದರಿಂದ ಮಂಚದ ಸಣ್ಣ ಗ್ಯಾಪಿನಲ್ಲಿ ಸಿಕ್ಕಿ ಹಾಕಿಕೊಂಡು ಅದರ ಚರ್ಮ ಸುಲಿದು ಬಿಡಿಸಿದ ಹಲಸಿನ ಹಣ್ಣಿನ ಪರಿಸ್ಥಿತಿಯಾಗಿದೆ. ಚೀನಾದಲ್ಲಾದರೆ ನಮಗೆ “ಹೋಳಿಗೆಯೇ ಜಾರಿ ತುಪ್ಪಕ್ಕೆ ಬಿದ್ದಹಾಗೇ” ಎಂಬ ಗಾದೆಯ ಹಾಗೇ “ಹಾವು ಅಡಿಗೆ ಮನೆಗೆ ಬಂದಹಾಗೆ” ಎಂಬ ಗಾಧೆ ಅನ್ವರ್ಥವಾಗಿ ಎಲ್ಲರಿಗೂ ಇದೊಂದು ವಿಶೇಷ “ಹೆಬ್ಬಾವಿನ ಹಬ್ಬ”ವಾಗಿ ಅದಕ್ಕೆ ತರತರದ ಮಸಾಲೆ ಹಾಕಿ ವಿವಿಧ ಖಾದ್ಯ ಮಾಡಿ ಹುರಿದು ಮುಕ್ಕುತ್ತಿದ್ದರೇನೋ?. ಅಷ್ಟೊತ್ತಿಗೆ ಜನ ಮನ್ಮಥಕುಮಾರನ್ನು ಕರೆಸಿದಾಗ ಹೆಬ್ಬಾವಿಗೆ ಆದ ಗಾಯ ನೋಡಿ ಅವರು ನಮ್ಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಕರೆ ಮಾಡಿದರು.
ಹೆಬ್ಬಾವು ತುಂಬಾ ಗಾಯಗೊಂಡಿತ್ತು. ಐದಾರು ಜನ ಹಿಡಿದು ಎಳೆದ ಹೊಡೆತಕ್ಕೆ ಹೊಟ್ಟೆಯ ಭಾಗದ ಚರ್ಮದ ಮೇಲ್ಪದರ ಹಿಸಿದು ಹೋಗಿ ಅಂಗಾಂಗಗಳೆಲ್ಲಾ ಹೊರಚೆಲ್ಲಿಕೊಂಡು ವಿಕಾರವಾಗಿ ಕಾಣುತ್ತಿದ್ದವು. ಅವೆಲ್ಲಾ ಕೆಸರುಮಯವಾಗಿ ಮೂಲ ಬಣ್ಣವೇನು ಎಂಬುದೇ ಗೊತ್ತಾಗುತ್ತಿರಲಿಲ್ಲ. ಇಷ್ಟಿದ್ದರೂ ಸಹ ಸಹ ಹೆಬ್ಬಾವು ಪಿಳಿ ಪಿಳಿ ಎಂದು ಉದ್ದನೆಯ ನಾಲಿಗೆಯನ್ನು ಹೊರಹಾಕಿ ಒಳಗೆಳೆದುಕೊಂಡು ತನ್ನ ಬದುಕಿರುವಿಕೆಯನ್ನು ನಿರ್ವಿಕಾರವಾಗಿ ತೋರಿಸುತ್ತಿತ್ತು.
ಇದರ ಚಿಕಿತ್ಸೆಗೆ ಸುಮಾರು ಎರಡು ತಾಸು ಸಮಯ ಬೇಕು. ನಮ್ಮ ಆಸ್ಪತ್ರೆಯಲ್ಲಿ ಆಗ ಅಪರೇಷನ್ ಟೇಬಲ್ಲು ಇರಲಿಲ್ಲ. ಎರಡು ಗಂಟೆಗಳ ಕಾಲ ಕುಳಿತು ಈ ಕೈಂಕರ್ಯ ಮಾಡಿದರೆ ಬೆನ್ನು ಸೊಂಟ ಬಿದ್ದು ಹೋಗುತ್ತಿತ್ತು. ಈ ಜೀವಿಯ ಚಿಕಿತ್ಸೆಗೆ ಯಾರನ್ನೇನು ಕೇಳುವುದು ಎಂದು ನನ್ನ ಮನೆಯಲ್ಲಿದ್ದ ಟೀಪಾಯಿಯನ್ನು ತರಿಸಿ ಅದನ್ನೇ ಅಪರೇಷನ್ ಟೇಬಲ್ ಮಾಡಿಕೊಂಡೆ. ಈಗಿನಂತೆ ಮೊಬೈಲು, ವಾಟ್ಸಾಪ್ಪುಗಳಿರದೇ ಇರುವುದರಿಂದ ಯಾರನ್ನು ಕೇಳುವುದು?.
ನನ್ನ ಬಳಿಯಿರುವ ಪಶುವೈದ್ಯಕೀಯ ಗ್ರಂಥಗಳನ್ನು ಕೆದಕಿ ಅಧ್ಯಯನ ಮಾಡಿ ಅವಶ್ಯವಿರುವ ಅರಿವಳಿಕೆಗಳು, ಜೀವನಿರೋಧಕಗಳು, ಹೊಲಿಗೆ ದಾರ, ಸೂಜಿ ಇವನ್ನೆಲ್ಲ್ಲಾ ಸಾಗರದ ಮೆಡಿಕಲ್ಲಿನಿಂದ ತರಿಸಿದೆ. ಮನ್ಮಥಕುಮಾರ್ ಹೆಬ್ಬಾವಿನ ನಿಯಂತ್ರಣ ಸಾಧಿಸಿಕೊಟ್ಟರು. ಯಾವುದೋ ಕಚೇರಿ ಕೆಲಸಕ್ಕೆಂದು ಕಾರ್ಗಲ್ಲಿನಿಂದ ಬಂದ ಹಿರಿಯ ಪಶುವೈದ್ಯಕೀಯ ಪರೀಕ್ಷಕ ಶ್ರೀ ಪ್ರಭಯ್ಯಮಠ (ಅವರು ಈಗಿಲ್ಲ) ಮತ್ತು ಕೆರೆಯಪ್ಪ ಇವರೂ ಕೈಜೋಡಿಸಿದರು. ಅರಿವಳಿಕೆ ನೀಡಿದ ನಂತರ ಹೆಬ್ಬಾವಿನ ಹೊಟ್ಟೆಯಲ್ಲಿನ ವಿವಿಧ ಜೀವಜಠರಸಾಮ್ಲಗಳ ಸ್ನಾನದಿಂದ ಮಿಂದು ಇನ್ನೇನು ಜೀರ್ಣವಾಗಿ ಹಾವಿನ ರಕ್ತ ಸೇರಬೇಕಾಗಿದ್ದ ಅರೆ ಜೀವವಾಗಿದ್ದ ಹೆಗ್ಗಣವನ್ನು ಹೊರತೆಗೆದು, ಕರುಳಿನಂತಿರುವ ಅನೇಕ ಅಂಗಗಳನ್ನು ಸ್ವಚ್ಚಗೊಳಿಸಿ ಒಳಗೆ ಹಾಕಿ ವಿವಿಧ ಪದರಗಳಿಗೆ ಹೊಲಿಗೆ ಹಾಕಿ ಒಂದೆರಡು ಗಂಟೆಗಳ ಕಾಲದ ಪ್ರಯತ್ನದ ನಂತರ ಶಸ್ತ್ರಚಿಕಿತ್ಸೆ ಮುಗಿಯಿತು.
ಇದಾದ ನಂತರವೇ ಬಂದಿದ್ದು ನಿಜವಾದ ಪಜೀತಿ. ಈ ಉರಗಕ್ಕೆ ದಿನಾ ಜೀವ ನಿರೋಧಕ, ನಂಜುನಿವಾರಕ ಚುಚ್ಚು ಮದ್ದು ಒಂದು ವಾರ ನೀಡಬೇಕಲ್ಲ? ಯಾರು ನೀಡುವವರು? ಎಂಬ ಪ್ರಶ್ನೆ ಬಂತು. ಇಲ್ಲದಿದ್ದರೆ ಹೆಬ್ಬಾವು ನಂಜಾಗಿ ಸತ್ತು ಹೋಗುವ ಸಾಧ್ಯತೆ ಇತ್ತು. ಈ ಜೀವ ಜಂತಿಗೆ ಇಂಜೆಕ್ಷನ್ ಕೊಡಿಸಲು ಅರಣ್ಯ ಇಲಾಖೆ ಸಿಬ್ಬಂದಿಗೆ ದಿನಾಲೂ ನಮ್ಮ ಆಸ್ಪತ್ರೆಯ ದರ್ಶನ ಮಾಡಿಸಲು ಹೇಳಿದೆ. ಅವರು ಅವರಿಗೆ ಇಂತಹ ಸಹಸ್ರ ಕೆಲಸ ಕಾರ್ಯಗಳಿವೆಯೆಂದೂ, ಕಾಡಿನ ಸಮಸ್ಥ ಜೀವಜಲಚರ ರಕ್ಷಣೆಯ ಭಾರ ಅವರ ಮೇಲಿದೆಯೆಂದೂ, ಸಾಗವಾನಿ, ಬೀಟೆ, ಶ್ರಿಗಂಧ ಇತ್ಯಾದಿ ದುಬಾರಿ ಮರಗಳನ್ನು ಮರಗಳ್ಳರಿಂದ ರಕ್ಷಣೆ ಮಾಡಬೇಕಾದ ಗುರುತರ ಜವಾಬ್ಧಾರಿಯಿರುವದರಿಂದ ನಮ್ಮ ಆಸ್ಪತ್ರೆಯಲ್ಲಿಯೇ ಇದನ್ನು “ಒಳರೋಗಿ”ಯಾಗಿ ಸೇರಿಸಿಕೊಂಡು ಚಿಕಿತ್ಸೆ ಮಾಡಬೇಕೆಂದು ಹಾಗೂ ಅವರು ದಿನಾ ಬಂದು ನಮಗೆ ಪೂರ್ಣ ಸಹಕಾರ ಕೊಡುವುದಾಗಿ ಕೋರಿಕೊಂಡರು. ಆಸ್ಪತ್ರೆಗೆ ಹೊಂದಿಕೊಂಡ ಮೊಲ ಸಾಕಣೆ ಕೇಂದ್ರವನ್ನು ಹೆಬ್ಬಾವಿಗೆ “ಒಳರೋಗಿ ಚಿಕಿತ್ಸಾ ಕೇಂದ್ರ” ಮಾಡಿ ಅಲ್ಲೊಂದು ಗೋಣಿಚೀಲ ಹಾಕಿ ಅದರ ಮೇಲಿಟ್ಟೆವು.
ಮೊದ ಮೊದಲು ತಣ್ಣಗೇ ಇರುವ ಈ ಶೀತರಕ್ತದ ಪ್ರಾಣಿಯನ್ನು ಮುಟ್ಟಲೂ ಅಸಹ್ಯಮಾಡಿಕೊಂಡು ಬೇಸರ ಪಟ್ಟುಕೊಂಡ ಕೆರಿಯಪ್ಪ ನಿಧಾನವಾಗಿ ಅದರ ಮೇಲೆ ಮಮತೆ ಬೆಳೆಸಿಕೊಂಡ. ಅದರ ಹಸಿವು ನೀಗಲು ಒಂದೆರಡು ಕಪ್ಪೆಗಳನ್ನು ಹಿಡಿದು ಆ ರೂಮಿನಲ್ಲಿ ಬಿಟ್ಟ. ಈ ಸೋಮಾರಿ ಹೆಬ್ಬಾವು ಚುರುಕಾಗಿರುವ ಕಪ್ಪೆಗಳನ್ನು ಬೆನ್ನು ಹತ್ತಿ ಬೇಟೆ ಮಾಡುವ ಬಗ್ಗೆ ಸಂಪೂರ್ಣ ಸಂಶಯವಿತ್ತು. ಈ ಕಪ್ಪೆಗಳೋ ಅವುಗಳ ಎಂದಿನ ಹುಟ್ಟುಗುಣದಂತೆ ಅಲ್ಲಿಂದಿಲ್ಲಿಗೆ, ಇಲ್ಲಿಂದಲ್ಲಿಗೆ ಎಗರಾಡಿ ಇಡೀ ರೂಮಿನಲ್ಲಿ ಕುಣಿದು ಕುಪ್ಪಳಿಸಿ ಹೆಬ್ಬಾವಿನ ಮೈಮೇಲೆಯೂ ಸವಾರಿ ಮಾಡಿ ಅವು ಅದರ ಆಹಾರವಾಗುವ ನಮ್ಮ ಬಯಕೆಯನ್ನೇ ನಿವಾಳಿಸಿ ಒಗೆದವು.
ಹೆಬ್ಬಾವಿನ ಜಾತಿಯ ಹಾವುಗಳು ಆಹಾರವಿಲ್ಲದೆಯೂ ಅನೇಕ ದಿನ ಬದುಕಬಲ್ಲವು ಮತ್ತು ಇದಕ್ಕೆ ಆಹಾರ ಹಾಕುವ ವ್ಯರ್ಥ ಪ್ರಯತ್ನ ಬೇಡವೆಂದರೂ ಸಹ ಅದರ ನೈಸರ್ಗಿಕ ಅಹಾರವಾದ ಇಲಿಗಳು, ಮೊಟ್ಟೆ ಇತ್ಯಾದಿಗಳನ್ನು ಅದಕ್ಕೆ ತಿನ್ನಿಸುವ ನಿರಂತರ ಪ್ರಯತ್ನ ಕೆರಿಯಪ್ಪನಿಂದ ನಡೆದೇ ಇತ್ತು. ಆಗಾಗ ತನ್ನ ನಾಲಿಗೆಯನ್ನು ಹೊರಚಾಚಿ ಒಳಗೆಳೆದುಕೊಂಡು ತಾನು ಬದುಕಿರುವಿಕೆಯನ್ನು ಹೆಬ್ಬಾವು ಖಚಿತಪಡಿಸುತ್ತಿತ್ತು. ಈಗಾಗಲೇ ಅದು ವಿಷರಹಿತ ಮತ್ತು ಅಪಾಯರಹಿತ ಎಂದು ಗೊತ್ತಾಗಿರುವುದರಿಂದ ಆರಾಮವಾಗಿ ಅದಕ್ಕೆ ಒಂದೈದಾರು ದಿನ ಅವಶ್ಯಕ ಚುಚ್ಚುಮದ್ದು ನೀಡಿದೆವು.
ಚುಚ್ಚು ಮದ್ದಿನ ಮೂಲಕ ಔಷಧಿ ನೀಡದೆಯೇ ಇದಕ್ಕೆ ಗುಳಿಗೆ ತಿನ್ನಿಸಲಾದೀತೇ?. ಹತ್ತು ದಿನಗಳ ನಂತರ ಗಾಯ ವಾಸಿಯಾಗಿದ್ದರಿಂದ ಹಾಕಿದ ಹೊಲಿಗೆಯನ್ನೂ ಬಿಡಿಸಿಯಾಯ್ತು. ಇಷ್ಟಾದರೂ ಕಾಡುಕಾಯುವ ಗುರುತರ ಜವಾಬ್ದಾರಿ ಹೊಂದಿದ ಅರಣ್ಯ ಮತ್ತು ಹೆಬ್ಬಾವು ಹಿಡಿದು ಅದಕ್ಕೆ ಚುಚ್ಚುಮದ್ದು ನೀಡಲು ನಮಗೆ ಸಹಕಾರದ ಮಹಾನ್ ಆಶ್ವಾಸನೆ ನೀಡಿದ ಇಲಾಖೆಯ ಸಿಬ್ಬಂದಿಯ ಪತ್ತೆಯೇ ಇರಲಿಲ್ಲ.
ಹೆಬ್ಬಾವಿಗೆ ಅಪರೇಷನ್ ಮಾಡಿದ ಈ ಸುದ್ಧಿ ಮಾಧ್ಯಮದವರಿಗೆ ಹೇಗೋ ತಿಳಿದು ಅದು ಅನೇಕ ಪೇಪರ್ರುಗಳಲ್ಲಿ ಬಂದು ಸುತ್ತ ಮುತ್ತಲಿನ ಜನ ನಮ್ಮ ವಿಶೇಷ ಒಳರೋಗಿಯನ್ನು ನೋಡಲು ತಂಡೋಪ ತಂಡವಾಗಿ ಬರತೊಡಗಿದರು. ನಮ್ಮ ದಿನ ನಿತ್ಯದ ಕಾಯಕ ಬದಿಗೊತ್ತಿ ಹೆಬ್ಬಾವಿನ ಅಪರೇಶನ್ನಿನ ಕಥೆಯನ್ನೇ ಪ್ರಾರಂಭದಿಂದ ಹೇಳಿ ಹೇಳಿ ಸಾಕಾಗಿ ಹೋಯಿತು. ಶಾಲಾ ಮಕ್ಕಳು ಅಧ್ಯಯನ ಶಿಬಿರದಂತೆ ಬೇಟಿಕೊಡಲಾರಂಭಿಸಿದ್ದರಿಂದ ಹೆಬ್ಬಾವಿಗೂ ಕಿರಿ ಪ್ರಾರಂಭವಾಯಿತೇನೋ?
ಇದು ಪ್ರಾಣ ಬಿಟ್ಟರೆ ಹೆಬ್ಬಾವನ್ನು ಸ್ವರ್ಗಕ್ಕಟ್ಟಿದ ಪಶುವೈದ್ಯ ಸಿಬ್ಬಂದಿ ಇತ್ಯಾದಿ ಚಿತ್ರ ವಿಚಿತ್ರ ತಲೆಬರಹದಲ್ಲಿ ಸುದ್ಧಿ ಬರಬಹುದಾದ ಸಾಧ್ಯತೆ ನೆನೆದು ಅರಣ್ಯ ಇಲಾಖೆಯವರಿಗೆ ಈ ಹೆಬ್ಬಾವನ್ನು ಕೂಡಲೇ ಕಾಡಿಗೆ ಸೇರಿಸಬೇಕೆಂದು ಮೊರೆಯಿಟ್ಟೆ. ನನ್ನ ನಿರಂತರ ಮೊರೆ ಕೇಳಿ ಅವರು ಒಂದು ಶುಭ ದಿನದಂದು ಬಂದು ಅದನ್ನು ಗೋಣಿಚೀಲದಲ್ಲಿ ತುಂಬಿಕೊಂಡು ಸಮೀಪದ ಅಭಯಾರಣ್ಯದಲ್ಲಿ ಬಿಟ್ಟ ಕೂಡಲೇ ಒಮ್ಮೆಯೂ ತಿರುಗಿ ನೋಡದೇ ಸರಸರನೇ ಹರಿದು ದಟ್ಟ ಕಾಡಿನಲ್ಲಿ ಕಣ್ಮರೆಯಾಯ್ತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಆರೋಗ್ಯಕರ ಡಯಟ್ ಮಾಡಲು ಈ ಟಿಪ್ಸ್ ಗಳನ್ನು ಅನುಸರಿಸಿ

ಆರೋಗ್ಯಕರ ಡಯಟ್ ಮಾಡಲು ಈ ಟಿಪ್ಸ್ ಗಳನ್ನು ಅನುಸರಿಸಿ
1.ಪೌಷ್ಟಿಕತೆಯ ಸಮತೋಲನ
ಆರೋಗ್ಯಕರ ಡಯಟ್ನಲ್ಲಿ ಮ್ಯಾಕ್ರೋನ್ಯೂಟ್ರಿಯೆಂಟ್ಗಳು (ಕಾರ್ಬೋಹೈಡ್ರೇಟ್ಗಳು, ಪ್ರೋಟೀನ್ಗಳು, ಕೊಬ್ಬು) ಮತ್ತು ಮೈಕ್ರೋನ್ಯೂಟ್ರಿಯೆಂಟ್ಗಳು (ವಿಟಮಿನ್ಗಳು, ಖನಿಜಗಳು) ಸಮತೋಲನವಿರಬೇಕು. ಉದಾಹರಣೆಗೆ, ಭಾರತೀಯ ಆಹಾರದಲ್ಲಿ ರಾಗಿ, ಜೋಳ, ಕ್ವಿನೋವಾ, ದ್ವಿದಳ ಧಾನ್ಯಗಳು, ಮತ್ತು ಸೊಪ್ಪುಗಳು ಸಮತೋಲಿತ ಆಹಾರವನ್ನು ಒದಗಿಸುತ್ತವೆ.
ಗ್ಲೈಸೆಮಿಕ್ ಇಂಡೆಕ್ಸ್ (GI) : ಕಡಿಮೆ GI ಆಹಾರಗಳಾದ ಓಟ್ಸ್, ಕಂದು ಅಕ್ಕಿ, ಮತ್ತು ಕಾಳುಗಳು ರಕ್ತದ ಸಕ್ಕರೆ ಮಟ್ಟವನ್ನು ಸ್ಥಿರವಾಗಿಡುತ್ತವೆ, ಇದು ಡಯಾಬಿಟೀಸ್ ನಿರ್ವಹಣೆಗೆ ಸಹಾಯಕವಾಗಿದೆ.
2. ಸ್ಥಳೀಯ ಮತ್ತು ಋತುಮಾನದ ಆಹಾರಗಳ ಆಯ್ಕೆ
ಕರ್ನಾಟಕದಂತಹ ಪ್ರದೇಶಗಳಲ್ಲಿ, ರಾಗಿ ರೊಟ್ಟಿ, ತರಕಾರಿ ಸಾಂಬಾರ್, ಕೋಸಂಬರಿ, ಮತ್ತು ಒಣಗಿದ ಹಣ್ಣುಗಳು (ಬಾದಾಮಿ, ಗೋಡಂಬಿ) ಸ್ಥಳೀಯವಾಗಿ ಲಭ್ಯವಿರುವ ಆರೋಗ್ಯಕರ ಆಯ್ಕೆಗಳಾಗಿವೆ. ಇವು ಪರಿಸರ ಸ್ನೇಹಿಯಾಗಿರುತ್ತವೆ ಮತ್ತು ತಾಜಾತನವನ್ನು ಖಾತ್ರಿಪಡಿಸುತ್ತವೆ.
ಋತುಮಾನದ ಹಣ್ಣುಗಳು : ಮಾವಿನಹಣ್ಣು, ಜಾಮೂನ್, ದಾಳಿಂಬೆ ಇತ್ಯಾದಿಗಳು ವಿಟಮಿನ್ಗಳು ಮತ್ತು ಉತ್ಕರ್ಷಣ ನಿರೋಧಕಗಳನ್ನು ಒದಗಿಸುತ್ತವೆ.
3. ಗಟ್ ಹೆಲ್ತ್ (ಕರುಳಿನ ಆರೋಗ್ಯ)
ಆರೋಗ್ಯಕರ ಕರುಳು ಒಟ್ಟಾರೆ ಆರೋಗ್ಯಕ್ಕೆ ಮುಖ್ಯವಾಗಿದೆ. ಮೊಸರು, ಮಜ್ಜಿಗೆ, ಒಣಗಿದ ಹಣ್ಣುಗಳು, ಮತ್ತು ಫೈಬರ್ ಶ್ರೀಮಂತ ಆಹಾರಗಳಾದ ತರಕಾರಿಗಳು ಮತ್ತು ಧಾನ್ಯಗಳು ಪ್ರೋಬಯಾಟಿಕ್ಗಳು ಮತ್ತು ಪ್ರಿಬಯಾಟಿಕ್ಗಳನ್ನು ಒದಗಿಸುತ್ತವೆ. ಉದಾಹರಣೆ: ರಾಗಿ ಮತ್ತು ತರಕಾರಿಗಳಿಂದ ತಯಾರಿಸಿದ ಖಿಚಡಿ ಕರುಳಿನ ಆರೋಗ್ಯಕ್ಕೆ ಒಳ್ಳೆಯದು.
4. ಸಂಸ್ಕರಿತ ಆಹಾರದಿಂದ ದೂರ
ಸಂಸ್ಕರಿತ ಆಹಾರಗಳು (ಚಿಪ್ಸ್, ಸಕ್ಕರೆಯಿಂದ ಕೂಡಿದ ಪಾನೀಯಗಳು, ಫಾಸ್ಟ್ ಫುಡ್) ದೀರ್ಘಕಾಲೀನವಾಗಿ ಒಬೇಸಿಟಿ, ಡಯಾಬಿಟೀಸ್, ಮತ್ತು ಹೃದಯ ಸಂಬಂಧಿ ಕಾಯಿಲೆಗಳಿಗೆ ಕಾರಣವಾಗಬಹುದು. ಇವುಗಳ ಬದಲಿಗೆ ತಾಜಾ, ಗೃಹ ತಯಾರಿಕೆಯ ಆಹಾರವನ್ನು ಆದ್ಯತೆ ನೀಡಿ.
5. ವೈಯಕ್ತಿಕಗೊಳಿಸಿದ ಡಯಟ್
ವಯಸ್ಸು, ಲಿಂಗ, ದೈಹಿಕ ಚಟುವಟಿಕೆ, ಮತ್ತು ಆರೋಗ್ಯ ಸ್ಥಿತಿಗೆ ತಕ್ಕಂತೆ ಡಯಟ್ ರೂಪಿಸಿ. ಉದಾಹರಣೆಗೆ, ಕ್ರೀಡಾಪಟುಗಳಿಗೆ ಹೆಚ್ಚಿನ ಪ್ರೋಟೀನ್ ಮತ್ತು ಕಾರ್ಬೋಹೈಡ್ರೇಟ್ಗಳು ಬೇಕಾಗುತ್ತವೆ, ಆದರೆ ವಯಸ್ಸಾದವರಿಗೆ ಕಡಿಮೆ ಕ್ಯಾಲೋರಿ ಆದರೆ ವಿಟಮಿನ್ಗಳ ಶ್ರೀಮಂತ ಆಹಾರ ಸೂಕ್ತವಾಗಿರುತ್ತದೆ.
6. ಹೈಡ್ರೇಷನ್ ಮತ್ತು ಜೀವನಶೈಲಿ
ದಿನಕ್ಕೆ 2-3 ಲೀಟರ್ ನೀರು ಕುಡಿಯಿರಿ. ತೆಂಗಿನೀರು, ಮಜ್ಜಿಗೆ, ಅಥವಾ ಗಿಡಮೂಲಿಕೆ ಚಹಾವನ್ನು ಸೇವಿಸಿ. ಆರೋಗ್ಯಕರ ಡಯಟ್ನ ಜೊತೆಗೆ, 30 ನಿಮಿಷಗಳ ದೈಹಿಕ ಚಟುವಟಿಕೆ (ಯೋಗ, ವಾಕಿಂಗ್, ಅಥವಾ ಜಿಮ್) ಮತ್ತು 7-8 ಗಂಟೆಗಳ ನಿದ್ರೆಯನ್ನು ಸಂಯೋಜಿಸಿ.
ನಿರ್ದಿಷ್ಟ ಆರೋಗ್ಯಕರ ಡಯಟ್ ಯೋಜನೆ
ಬೆಳಗಿನ ಉಪಾಹಾರ:ರಾಗಿ ದೋಸೆ + ಚಟ್ನಿ, ಅಥವಾ ಓಟ್ಸ್ ಉಪ್ಮಾ + ತರಕಾರಿಗಳು. ಮಧ್ಯಾಹ್ನದ ತಿಂಡಿ: ತೆಂಗಿನೀರು ಅಥವಾ ಮೊಸರು + ಒಂದು ಹಣ್ಣು (ಸೀಬೆ, ಬಾಳೆಹಣ್ಣು).
ಮಧ್ಯಾಹ್ನದ ಊಟ: ಕಂದು ಅಕ್ಕಿ, ಸಾಂಬಾರ್, ಪಾಲಕ್ ಸೊಪ್ಪಿನ ಪಲ್ಯ, ಮತ್ತು ಕೋಸಂಬರಿ. ಸಂಜೆಯ ತಿಂಡಿ: ಬೇಯಿಸಿದ ಕಾಳುಗಳು (ಕಡಲೆಕಾಯಿ, ಕಡಲೆ) ಅಥವಾ ಒಣಗಿದ ಹಣ್ಣುಗಳು.ರಾತ್ರಿಯ ಊಟ: ರಾಗಿ ರೊಟ್ಟಿ + ತರಕಾರಿ ಕೂಟು, ಅಥವಾ ಜೋಳದ ರೊಟ್ಟಿ + ಮೊಸರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
FOR STUDENTS | ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಹೀಗಿರಲಿ ನಿಮ್ಮ ತಯಾರಿ..!

ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಬಹುದು:
1. ಪರೀಕ್ಷೆಯನ್ನು ಅರ್ಥಮಾಡಿಕೊಳ್ಳಿ: ಪರೀಕ್ಷೆಯ ಪಠ್ಯಕ್ರಮ, ಪ್ರಶ್ನೆ ಪತ್ರಿಕೆಯ ಮಾದರಿ, ಅಂಕಗಳ ವಿಂಗಡಣೆ ಮತ್ತು ಸಮಯದ ಮಿತಿಯನ್ನು ಅಧ್ಯಯನ ಮಾಡಿ. ಹಿಂದಿನ ವರ್ಷಗಳ ಪ್ರಶ್ನೆ ಪತ್ರಿಕೆಗಳನ್ನು ಪರಿಶೀಲಿಸಿ, ಯಾವ ವಿಷಯಗಳು ಪ್ರಮುಖವಾಗಿವೆ ಎಂದು ತಿಳಿಯಿರಿ.
2. ಅಧ್ಯಯನ ಯೋಜನೆ ರೂಪಿಸಿ:ಪಠ್ಯಕ್ರಮವನ್ನು ಚಿಕ್ಕ ಚಿಕ್ಕ ಭಾಗಗಳಾಗಿ ವಿಂಗಡಿಸಿ, ದಿನನಿತ್ಯದ ಗುರಿಗಳನ್ನು ನಿಗದಿಪಡಿಸಿ.ಕಠಿಣ ವಿಷಯಗಳಿಗೆ ಹೆಚ್ಚು ಸಮಯ ಮೀಸಲಿಡಿ ಮತ್ತು ದೈನಂದಿನ/ಸಾಪ್ತಾಹಿಕ ಗುರಿಗಳನ್ನು ರಚಿಸಿ.
3. ಗುಣಮಟ್ಟದ ಅಧ್ಯಯನ ಸಾಮಗ್ರಿ:ಪ್ರಮಾಣಿತ ಪುಸ್ತಕಗಳು, ಆನ್ಲೈನ್ ಸಂಪನ್ಮೂಲಗಳು, ಮತ್ತು ಕೋಚಿಂಗ್ ಸಾಮಗ್ರಿಗಳನ್ನು ಬಳಸಿ.NCERT ಪುಸ್ತಕಗಳು (UPSC, SSC ಗೆ) ಅಥವಾ ಇತರ ಪ್ರಮಾಣಿತ ಉಲ್ಲೇಖ ಪುಸ್ತಕಗಳನ್ನು ಆಯ್ಕೆ ಮಾಡಿ.
4.ಸಮಯ ವ್ಯವಸ್ಥಾಪನೆ:ದಿನಕ್ಕೆ 5-6 ಗಂಟೆ ಗುಣಮಟ್ಟದ ಅಧ್ಯಯನಕ್ಕೆ ಮೀಸಲಿಡಿ, ಆದರೆ ವಿರಾಮಗಳನ್ನು ಒಳಗೊಂಡಿರಿ.ಪರೀಕ್ಷೆಯ ಸಮಯದಂತೆ ಅಭ್ಯಾಸ ಮಾಡಿ, ಉದಾಹರಣೆಗೆ, ಮಾಕ್ ಟೆಸ್ಟ್ಗಳನ್ನು ನಿಗದಿತ ಸಮಯದಲ್ಲಿ ಬರೆಯಿರಿ.
5.ಮಾಕ್ ಟೆಸ್ಟ್ ಮತ್ತು ಹಿಂದಿನ ಪ್ರಶ್ನೆಗಳು: ನಿಯಮಿತವಾಗಿ ಮಾಕ್ ಟೆಸ್ಟ್ಗಳನ್ನು ತೆಗೆದುಕೊಳ್ಳಿ, ತಪ್ಪುಗಳನ್ನು ವಿಶ್ಲೇಷಿಸಿ.ಹಿಂದಿನ ವರ್ಷಗಳ ಪ್ರಶ್ನೆಗಳನ್ನು ಅಭ್ಯಾಸ ಮಾಡಿ, ಪರೀಕ್ಷೆಯ ಮಾದರಿಯನ್ನು ಅರ್ಥಮಾಡಿಕೊಳ್ಳಿ.
6.ಪುನರಾವರ್ತನೆ ಮತ್ತು ಟಿಪ್ಪಣಿಗಳು: ಪ್ರಮುಖ ವಿಷಯಗಳ ಸಂಕ್ಷಿಪ್ತ ಟಿಪ್ಪಣಿಗಳನ್ನು ತಯಾರಿಸಿ, ಇದು ಕೊನೆಯ ಕ್ಷಣದ ಪುನರಾವರ್ತನೆಗೆ ಸಹಾಯಕವಾಗುತ್ತದೆ. ಸೂತ್ರಗಳು, ದಿನಾಂಕಗಳು, ಮತ್ತು ಪ್ರಮುಖ ಸಂಗತಿಗಳನ್ನು ನಿಯಮಿತವಾಗಿ ಓದಿರಿ.
7.ವಿಷಯಾಧಾರಿತ ಕೌಶಲ: ಗಣಿತ/ತಾರ್ಕಿಕತೆ: ದಿನನಿತ್ಯ ಗಣಿತದ ಸಮಸ್ಯೆಗಳನ್ನು ಬಿಡಿಸಿ, ಕಾಲಗಣನೆಯನ್ನು ಅಭ್ಯಾಸ ಮಾಡಿ. ಭಾಷೆ/ಇಂಗ್ಲಿಷ್: ಓದುವಿಕೆ, ವ್ಯಾಕರಣ, ಮತ್ತು ಶಬ್ದಕೋಶವನ್ನು ಸುಧಾರಿಸಿ.ಸಾಮಾನ್ಯ ಜ್ಞಾನ: ದಿನಪತ್ರಿಕೆಗಳು, ಆನ್ಲೈನ್ ಸಂಪನ್ಮೂಲಗಳಿಂದ ಕರೆಂಟ್ ಅಫೇರ್ಸ್ ಓದಿರಿ.
8.ಆರೋಗ್ಯ ಮತ್ತು ಮಾನಸಿಕ ಶಕ್ತಿ:ಆರೋಗ್ಯಕರ ಆಹಾರ, ವ್ಯಾಯಾಮ, ಮತ್ತು 6-8 ಗಂಟೆ ನಿದ್ದೆಯನ್ನು ಕಾಪಾಡಿಕೊಳ್ಳಿ. ಧ್ಯಾನ ಅಥವಾ ಯೋಗದಿಂದ ಒತ್ತಡವನ್ನು ನಿಯಂತ್ರಿಸಿ.
9.ಸಕಾರಾತ್ಮಕ ಮನೋಭಾವ:ಸ್ಥಿರವಾದ ಕೆಲಸದ ಶೈಲಿಯನ್ನು ಇರಿಸಿಕೊಳ್ಳಿ, ಸಣ್ಣ ಯಶಸ್ಸುಗಳನ್ನು ಆಚರಿಸಿ. ವಿಫಲತೆಯಿಂದ ಕಲಿಯಿರಿ ಮತ್ತು ಧೈರ್ಯವಾಗಿರಿ.
10.ತಂತ್ರಜ್ಞಾನದ ಬಳಕೆ: ಆನ್ಲೈನ್ ಕೋರ್ಸ್ಗಳು, ಯೂಟ್ಯೂಬ್ ಚಾನೆಲ್ಗಳು, ಮತ್ತು ಆಪ್ಗಳನ್ನು (Unacademy, BYJU’s, ಇತ್ಯಾದಿ) ಬಳಸಿ. ಆನ್ಲೈನ್ ಗುಂಪುಗಳಲ್ಲಿ ಚರ್ಚೆಗಳಿಗೆ ಸೇರಿ, ಜ್ಞಾನವನ್ನು ಹಂಚಿಕೊಳ್ಳಿ.
ಹೆಚ್ಚುವರಿ ಸಲಹೆ:ಒಂದೇ ಸಮಯದಲ್ಲಿ ಒಂದು ವಿಷಯಕ್ಕೆ ಗಮನ ಕೊಡಿ, ಗೊಂದಲವನ್ನು ತಪ್ಪಿಸಿ.ಗುಂಪು ಅಧ್ಯಯನ ಅಥವಾ ಕೋಚಿಂಗ್ಗೆ ಸೇರಿಕೊಂಡರೆ, ಚರ್ಚೆಗಳಿಂದ ಕಲಿಯಿರಿ. ನಿಮ್ಮ ದೌರ್ಬಲ್ಯಗಳನ್ನು ಗುರುತಿಸಿ, ಅವುಗಳನ್ನು ಸುಧಾರಿಸಲು ಕೆಲಸ ಮಾಡಿ.
ನಿರಂತರ ಅಭ್ಯಾಸ, ಶಿಸ್ತು, ಮತ್ತು ಸಕಾರಾತ್ಮಕ ಮನೋಭಾವದಿಂದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು ಸಾಧಿಸಬಹುದು. ಶುಭವಾಗಲಿ..!
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬೂಕರ್ ಪ್ರಶಸ್ತಿ ಬಗ್ಗೆ ನಿಮಗಿಷ್ಟು ತಿಳಿದಿರಲಿ..!

ಬೂಕರ್ ಪ್ರಶಸ್ತಿಯು ವಿಶ್ವದ ಅತ್ಯಂತ ಪ್ರತಿಷ್ಠಿತ ಸಾಹಿತ್ಯ ಪ್ರಶಸ್ತಿಗಳಲ್ಲಿ ಒಂದಾಗಿದೆ. ಇದರ ಇತಿಹಾಸ ಹೀಗಿದೆ..
ಸ್ಥಾಪನೆ ಮತ್ತು ಆರಂಭಿಕ ವರ್ಷಗಳು (1969 – 2001)
ಬೂಕರ್ ಪ್ರಶಸ್ತಿಯನ್ನು 1968 ರಲ್ಲಿ “ಬೂಕರ್ ಪ್ರೈಜ್ ಫಾರ್ ಫಿಕ್ಷನ್” (Booker Prize for Fiction) ಎಂದು ಸ್ಥಾಪಿಸಲಾಯಿತು. ಬೂಕರ್ ಮೆಕ್ಕಾನೆಲ್ (Booker McConnell) ಎಂಬ ಬಹುರಾಷ್ಟ್ರೀಯ ಕಂಪನಿಯು ಈ ಪ್ರಶಸ್ತಿಯನ್ನು ಪ್ರಾಯೋಜಿಸಿತು. ಫ್ರಾನ್ಸ್ನ ಪ್ರಿಕ್ಸ್ ಗಾಂಕೂರ್ (Prix Goncourt) ಪ್ರಶಸ್ತಿಗೆ ಸಮಾನವಾಗಿ ಇಂಗ್ಲಿಷ್ ಭಾಷೆಯಲ್ಲಿ ಉತ್ತಮ ಕಾದಂಬರಿಗಳನ್ನು ಗುರುತಿಸುವುದು ಇದರ ಮುಖ್ಯ ಉದ್ದೇಶವಾಗಿತ್ತು.
ಆರಂಭದಲ್ಲಿ, ಈ ಪ್ರಶಸ್ತಿಯು ಕಾಮನ್ವೆಲ್ತ್ ರಾಷ್ಟ್ರಗಳು, ಐರ್ಲೆಂಡ್ ಮತ್ತು ಝಿಂಬಾಬ್ವೆ ದೇಶದ ನಾಗರಿಕರು ಇಂಗ್ಲಿಷ್ ಭಾಷೆಯಲ್ಲಿ ಬರೆದ ಪೂರ್ಣ ಪ್ರಮಾಣದ ಕಾದಂಬರಿಗಳಿಗೆ ಮಾತ್ರ ಸೀಮಿತವಾಗಿತ್ತು.
1969 ರಲ್ಲಿ ಪಿ. ಹೆಚ್. ನ್ಯೂಬಿ (P.H. Newby) ಅವರ “ಸಮ್ಥಿಂಗ್ ಟು ಆನ್ಸರ್ ಫಾರ್” (Something to Answer For) ಕೃತಿಗೆ ಮೊದಲ ಬೂಕರ್ ಪ್ರಶಸ್ತಿ ಲಭಿಸಿತು.
1970 ರಲ್ಲಿ ಬೆರ್ನಿಸ್ ರೂಬೆನ್ಸ್ (Bernice Rubens) ಅವರು “ದಿ ಎಲೆಕ್ಟೆಡ್ ಮೆಂಬರ್” (The Elected Member) ಕೃತಿಗೆ ಪ್ರಶಸ್ತಿ ಪಡೆದ ಮೊದಲ ಮಹಿಳಾ ಲೇಖಕಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
ವಿ.ಎಸ್. ನೈಪಾಲ್ (V.S. Naipaul) 1971 ರಲ್ಲಿ “ಇನ್ ಎ ಫ್ರೀ ಸ್ಟೇಟ್” (In a Free State) ಕೃತಿಗೆ ಬೂಕರ್ ಪ್ರಶಸ್ತಿ ಪಡೆದ ಮೊದಲ ಭಾರತೀಯ ಮೂಲದ ಲೇಖಕರಾದರು (ಅವರು ಟ್ರಿನಿಡಾಡ್ನಲ್ಲಿ ಜನಿಸಿದರು).
ಮ್ಯಾನ್ ಬೂಕರ್ ಪ್ರಶಸ್ತಿ ಯುಗ (2002 – 2019):
2002 ರಲ್ಲಿ, ಬೂಕರ್ ಪ್ರಶಸ್ತಿಯ ಆಡಳಿತವನ್ನು ಬುಕ್ ಟ್ರಸ್ಟ್ನಿಂದ (Book Trust) ಮ್ಯಾನ್ ಗ್ರೂಪ್ ಪಿಎಲ್ಸಿ (Man Group PLC) ಎಂಬ ಹೂಡಿಕೆ ನಿರ್ವಹಣಾ ಸಂಸ್ಥೆಗೆ ವರ್ಗಾಯಿಸಲಾಯಿತು. ಈ ಸಮಯದಲ್ಲಿ ಪ್ರಶಸ್ತಿಯ ಹೆಸರನ್ನು “ಮ್ಯಾನ್ ಬೂಕರ್ ಪ್ರಶಸ್ತಿ” (Man Booker Prize) ಎಂದು ಬದಲಾಯಿಸಲಾಯಿತು.
2013 ರಲ್ಲಿ, ಪ್ರಶಸ್ತಿಯ ಅರ್ಹತೆಯನ್ನು ವಿಸ್ತರಿಸಲಾಯಿತು. ಇಂಗ್ಲಿಷ್ ಭಾಷೆಯಲ್ಲಿ ಬ್ರಿಟನ್ ಅಥವಾ ಐರ್ಲೆಂಡ್ನಲ್ಲಿ ಪ್ರಕಟವಾದ ಯಾವುದೇ ಕಾದಂಬರಿಗೆ ಈ ಪ್ರಶಸ್ತಿಯನ್ನು ನೀಡಲು ಪ್ರಾರಂಭಿಸಲಾಯಿತು, ಅಮೆರಿಕಾದ ಲೇಖಕರನ್ನು ಸಹ ಒಳಗೊಂಡಂತೆ. ಈ ಬದಲಾವಣೆಯು ಸಾಕಷ್ಟು ಚರ್ಚೆಗೆ ಒಳಗಾಯಿತು.
ಪ್ರಸ್ತುತ ಬೂಕರ್ ಪ್ರಶಸ್ತಿ (2019 ರಿಂದ)
2019 ರಲ್ಲಿ, ಚಾರಿಟಬಲ್ ಫೌಂಡೇಶನ್ ಕ್ರ್ಯಾಂಕ್ಸ್ಟಾರ್ಟ್ (Crankstart) ಪ್ರಾಯೋಜಕತ್ವವನ್ನು ವಹಿಸಿಕೊಂಡ ನಂತರ ಪ್ರಶಸ್ತಿಯು ತನ್ನ ಮೂಲ ಹೆಸರಾದ “ಬೂಕರ್ ಪ್ರಶಸ್ತಿ” ಗೆ ಮರಳಿತು.
ಇತ್ತೀಚೆಗೆ, (ಮೇ 20-2025) ಕನ್ನಡದ ಖ್ಯಾತ ಸಾಹಿತಿ ಬಾನು ಮುಷ್ತಾಕ್ ಅವರು ತಮ್ಮ ಅನುವಾದಿತ “ಹಾರ್ಟ್ ಲ್ಯಾಂಪ್” (Heart Lamp) ಕೃತಿಗೆ 2025 ರ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ (International Booker Prize) ಪಡೆದಿದ್ದಾರೆ. ಇದು ಕನ್ನಡದ ಕೃತಿಗೆ ಲಭಿಸಿದ ಮೊದಲ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿಯಾಗಿದೆ.
ಬೂಕರ್ ಪ್ರಶಸ್ತಿಯಲ್ಲಿ ಎರಡು ವಿಧಗಳಿವೆ ಅವುಗಳೆಂದರೆ, ‘ಬೂಕರ್ ಪ್ರಶಸ್ತಿ ಮತ್ತು ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ.’
ಬೂಕರ್ ಪ್ರಶಸ್ತಿ (Booker Prize): ಇದು ಯುನೈಟೆಡ್ ಕಿಂಗ್ಡಮ್ ಅಥವಾ ಐರ್ಲೆಂಡ್ನಲ್ಲಿ ಪ್ರಕಟವಾದ, ಇಂಗ್ಲಿಷ್ ಭಾಷೆಯಲ್ಲಿ ಬರೆದ ಅತ್ಯುತ್ತಮ ಮೂಲ ಕಾದಂಬರಿಗೆ ನೀಡಲಾಗುತ್ತದೆ.
ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ (International Booker Prize): ಇದು ಇಂಗ್ಲಿಷ್ಗೆ ಅನುವಾದಗೊಂಡ, ವಿಶ್ವದ ಯಾವುದೇ ಭಾಷೆಯ ಅತ್ಯುತ್ತಮ ಕಾದಂಬರಿಗೆ ನೀಡಲಾಗುತ್ತದೆ. ಪ್ರಶಸ್ತಿಯ ಮೊತ್ತವನ್ನು ಮೂಲ ಲೇಖಕರು ಮತ್ತು ಅನುವಾದಕರು ಸಮಾನವಾಗಿ ಹಂಚಿಕೊಳ್ಳುತ್ತಾರೆ.
ಬೂಕರ್ ಪ್ರಶಸ್ತಿಯು ಸಾಹಿತ್ಯ ಕ್ಷೇತ್ರದಲ್ಲಿ ಅತ್ಯಂತ ಪ್ರತಿಷ್ಠಿತ ಗೌರವಗಳಲ್ಲಿ ಒಂದಾಗಿದೆ ಮತ್ತು ವಿಶ್ವದಾದ್ಯಂತ ಓದುಗರ ಮತ್ತು ಬರಹಗಾರರ ಗಮನ ಸೆಳೆಯುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ5 days ago
ಹನಿಗವಿತೆಗಳು | ಬೆಳಕಿನ ಬೆನ್ನ ಹಿಂದೆ
-
ದಿನದ ಸುದ್ದಿ4 days ago
ದಾವಣಗೆರೆ | ಕಾಂಗ್ರೆಸ್ ಸಾಧನೆಯ ಸಮರ್ಪಣೆ ಕಾರ್ಯಕ್ರಮ : ಮೇ.20 ರಂದು ಸಾರಿಗೆ ಬಸ್ಸುಗಳ ಸಂಚಾರದಲ್ಲಿ ವ್ಯತ್ಯಯ
-
ದಿನದ ಸುದ್ದಿ4 days ago
ಹೊಸಪೇಟೆ ನಗರದ ತುಂಬೆಲ್ಲಾ ಜಾಹೀರಾತುಗಳ ಹಾವಳಿ ; ಕಣ್ಣ್ಮುಚ್ಚಿ ಕುಳಿತ ಅಧಿಕಾರಿಗಳು
-
ದಿನದ ಸುದ್ದಿ4 days ago
ದಾವಣಗೆರೆ | ಬ್ಯಾಂಕ್ ಆಫ್ ಬರೋಡದಲ್ಲಿ ಮಾಜಿ ಸೈನಿಕರಿಗೆ ಆಫೀಸ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ4 days ago
ಮಲೇಬೆನ್ನೂರು ಪುರಸಭೆ | ಗೌರವಧನ ಆಧಾರದ ಮೇಲೆ ತಾತ್ಕಾಲಿಕ ಸೇವೆ ಪಡೆಯಲು ಅರ್ಜಿ ಆಹ್ವಾನ
-
ದಿನದ ಸುದ್ದಿ4 days ago
ಹೃದಯಾಘಾತದಿಂದ ತಪ್ಪಿಸಿಕೊಳ್ಳುವುದು ಹೇಗೇ..?
-
ದಿನದ ಸುದ್ದಿ4 days ago
ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ3 days ago
ಇಂದಿನ ಅಡಿಕೆ ದರ ಪಟ್ಟಿ