Connect with us

ದಿನದ ಸುದ್ದಿ

ಅರ್ಹತೆಗೆ ಅವಕಾಶ ಕೊಡಿ

Published

on

  • ಸಂಗಮೇಶ ಎನ್ ಜವಾದಿ

ವ್ಯಕ್ತಿಯೊಬ್ಬ ಒಂದು ಹುದ್ದೆ ಪಡೆಯಲು ಅರ್ಹತೆ ಸಾಕಾ ಅಥವಾ ಜಾತಿ,ಧರ್ಮ,ಹಣ ಹಾಗೂ ಶಿಫಾರಸ್ಸು ಬೇಕಾ ? ಎನ್ನುವ ಮಾತುಗಳು ಎಲ್ಲಡೇ ಈಗ ಕೇಳಿ ಬರುತ್ತಿವೆ ಅಲ್ಲವೇ ? ಹಾಗಾದರೆ ಅರ್ಹತೆ ಒಂದು ಇದ್ದರೆ ಸಾಕೇ ? ಎನ್ನುವ ಕೆಲ ಮಾತುಗಳು ತಮ್ಮ ಮುಂದೆ ಹಂಚಿಕೊಳ್ಳಲು ಪ್ರಮಾಣಿಕವಾಗಿ ಪ್ರಯತ್ನ ಮಾಡಿರುವೆ.

ಯಾವುದೇ ಒಂದು ಪಕ್ಷದ ಅಥವಾ ಸಮಾಜಿಕ ಸಂಘಟನೆಗಳ ಜವಾಬ್ದಾರಿ ಪಡೆಯುವ ಕುರಿತು ಮತ್ತು ವಿವಿಧ ಸಮಾಜ ಮುಖಿ ಸೇವೆಗಳ ಜವಾಬ್ದಾರಿಗಳ ಸ್ಥಾನಕ್ಕೆ ಸಧ್ಯ ನಡೆಯುತ್ತಿರುವ ಸ್ಪರ್ಧೆಯನ್ನು ಗಮನಿಸಿದರೆ ಈ ಪ್ರಶ್ನೆಗಳು ಮತ್ತೆ ಮತ್ತೆ ನಮ್ಮ ಕಣ್ಮುಂದೆ ಬರುತ್ತಿವೆ.ಹಾಗಾದರೆ ಅರ್ಹತೆ ಇದ್ದರು ಕೂಡಾ ಪ್ರಮುಖ ಸ್ಥಾನಕ್ಕೆ ಅದೊಂದೇ ಸಾಲದೇನೋ ಎಂದು ಜಾತಿಯ ಜೊತೆಗೆ ದೊಡ್ಡವರ ಶಿಫಾರಸ್ಸು ಸಹ ಸೇರಿಸಿಕೊಳ್ಳಲು ಪ್ರಯತ್ನಿಸಬೇಕಾದ ಸಂದರ್ಭವೊಂದು ಈಗ ಉಂಟಾಗಿದೆ ಎನ್ನಬಹುದು.

ಇಂತಹ ಸಮಸ್ಯೆಗಳು ಎದುರಿಸುತ್ತಿರುವವರು ಕೆಲವರು(ಬೆರಳಣಿಕೆಯಷ್ಟು) ಮಾತ್ರ ಎಂದೇ ಹೇಳಬೇಕು, ಆದಕಾರಣ ಇಂದಿನ ದಿನಗಳಲ್ಲಿ ನಿಸ್ವಾರ್ಥ ಸೇವೆಗೆ ಸಂದಿಗ್ಧತೆಯ ಸಮಯದ ಕಾಲವಿದು ಎಂದೇ ಹೇಳಬೇಕಾಗುತ್ತದೆ.

ಹೀಗಾಗಿ ಶಿಫಾರಸ್ಸು ಇಲ್ಲದೇ ಹೋರಾಟದ ನೆಲೆಯಿಂದ ಮುಂಚೂಣಿಗೆ ಬಂದವರಿಗೆ ಸಧ್ಯದ ದಿನಮಾನಗಳಲ್ಲಿ ಗೌರವ, ಬೆಲೆ ಇಲ್ಲ ಎನ್ನುವ ಸತ್ಯ ಸಂಗತಿಯ ಮಾತುಗಳು ಈಗ ಎಲ್ಲಾ ಕಡೆ ಕೇಳಿ ಬರುತ್ತಿವೆಯಾದರೂ ರಾಜಕೀಯದಲ್ಲಿ ಇದೊಂದೇ ಸಾಲದು, ಜಾತಿಯ ಬಲದ ಜೊತೆಗೆ ಹಣವೂ ಬೇಕೇ ಬೇಕೆಂಬುವುದು ಸುಳ್ಳಲ್ಲ , ಹಾಗಾಗಿ ಈ ಎಲ್ಲಾ ಸಂಗತಿಗಳನ್ನು ಸೊಕ್ಷ್ಮವಾಗಿ ಗಮನಿಸಿದರೆ ಬಡವರಿಗೆ, ನಿಷ್ಠಾವಂತ ಕಾರ್ಯಕರ್ತರಿಗೆ ಇಂದಿನ ದಿನಗಳಲ್ಲಿ ನ್ಯಾಯ ಮತ್ತು ಅಧಿಕಾರ ಸೀಗುವುದು ಕಷ್ಟ ಅನಿಸುತ್ತದೆ.

ವ್ಯಕ್ತಿಯ ಅರ್ಹತೆಯನ್ನಷ್ಟೇ ಪರಿಗಣಿಸಿ ಹುದ್ದೆಗಳನ್ನು ನೀಡುವಂತಿದ್ದರೆ, ಇತರ ಯಾವ ಅರ್ಹತೆಗಳೂ ಮುಖ್ಯವಾಗುವುದಿಲ್ಲ. ಆದರೆ, ರಾಜಕೀಯದಲ್ಲಿ ಅರ್ಹತೆಗೆ ಇರೋದು ಕೊನೆಯ ಸ್ಥಾನ. ವ್ಯಕ್ತಿಯ ಜಾತಿ, ವರಿಷ್ಠರೊಂದಿಗಿನ ಸಂಬಂಧ, ಹಣ ಮುಂತಾದವು ಮೊದಲ ಸ್ಥಾನದಲ್ಲಿ ಬರುತ್ತವೆ. ಹೀಗಾಗಿ ಬಹುತೇಕ ಅರ್ಹರು ಉನ್ನತ ಹುದ್ದೆಗಳಿಗೆ ಅರ್ಹರಾಗುವುದೇ ಇಲ್ಲ. ಆ ಅಪಾಯ ಈಗ ಅರ್ಹತೆ ಇದ್ದವರಿಗೆ ಎದುರಾಗಿದೆ ಅಲ್ಲವೇ ? ಏನೋ ಮಾಡುವುದು ಹೇಳಿ ಬಂಧುಗಳೆ !.

ಹಾಗೆ ನೋಡಿದರೆ, ಸಮಾಜ ಮುಖಿ ಸೇವೆಗಳ ಜವಾಬ್ದಾರಿ ಹೊರಲು ಎಲ್ಲರಿಗಿಂತ ಹೆಚ್ಚು ಅರ್ಹ ನಿಸ್ವಾರ್ಥ ಸೇವೆಯ, ಮನೋಭಾವ – ಮನೋಧರ್ಮದ ವ್ಯಕ್ತಿ ಎನ್ನುವುದು ಸತ್ಯ ಹೌದು ಅಲ್ಲವೇ. ಯಾವುದೇ ಗಾಡ್ ಫಾದರ್ ನೆರವಿಲ್ಲದೇ, ಕೇವಲ ಹೋರಾಟದ ನೆಲೆಗಟ್ಟಿನಿಂದಲೇ ರಾಜಕೀಯ ಹಾಗೂ ಸಮಾಜಿಕ ಕ್ಷೇತ್ರದ ಮೊಗಸಾಲೆಯನ್ನು ಪ್ರವೇಶಿಸಿ ನಾಡಿನ ಸೇವೆಯನ್ನು ನಿರಂತರವಾಗಿ ಮಾಡಿಕೊಂಡು ಬರುತ್ತಿರುವ ಪ್ರತಿಭೆಗಳನ್ನು ಗುರುತಿಸದೇ ಹೋದರೆ ಹೇಗೆ ?.

ಇವೆಲ್ಲಾ ಕಾರಣಗಳನ್ನು ಕಂಡರೆ
ಇಂದಿನ ಸ್ವಾರ್ಥ ಹೀನ ಪರಿಸ್ಥಿತಿ ನೋಡಿ ನಮಗೆ ಕನಿಕರ ಉಂಟಾಗುತ್ತಿದೆ ಮತ್ತು ಅರ್ಹತೆ ಇದ್ದರು ಹೋರಾಟ ನಡೆಸುವ ಅನಿವಾರ್ಯ ಪರಿಸ್ಥಿತಿ ಸಧ್ಯ
ಜೋರಾಗಿ ಕಂಡು ಬರುತ್ತಿರುವುದೇ ಅತ್ಯಂತ ಖೇದಕರ ವಿಷಯವಾಗಿದೆ. ಹಾಗಾಗಿ ಮೌಲ್ಯಾಧಾರಿತ ಸೈದ್ಧಾಂತಿಕ ನಿಲುವಿಗೆ ಬದ್ಧರಾಗುವ ಮೂಲಕ ಸೇವೆಯಲ್ಲಿ ಗುರುತಿಸಿಕೊಂಡವರು.

ದೇಶ/ಕನ್ನಡ ಪರ ನಿಲುವನ್ನು ನಿರ್ಭಿಡೆಯಿಂದ ಪ್ರಕಟಿಸುತ್ತ ಬಂದಂಥವರು. ಇನ್ನೂ ಚಿಕ್ಕ ವಯಸ್ಸು, ದೊಡ್ಡ ಉತ್ಸಾಹ ಇರುವ ಸೇವಕರು, ವಿವಿಧ ಸಂಘಟನೆಗಳ ಸಕ್ರಿಯ ಕಾರ್ಯಕರ್ತರ ಪಡೆಯನ್ನು ಹೊಂದುವ ಮೂಲಕ ನಿಸ್ವಾರ್ಥ ಸೇವೆಯಲ್ಲಿ ಮೂಂಚುಣಿಯಲ್ಲಿ ಇದ್ದವರು. ಸರ್ವ ಜನಾಂಗದ ಜನರ ಮೆಚ್ಚುಗೆಗೆ ಪಾತ್ರವಾಗಿರುವ ಹಾಗೂ ಸಂಘಟನೆಯನ್ನು ಬಲಪಡಿಸುವ ಉತ್ಸಾಹ, ಸಾಮರ್ಥ್ಯ ಹೊಂದಿರುವ ಕೆಚ್ಚೆದೆಯ ಪ್ರತಿಭೆಗಳು. ಅವರ ಸೇವೆಯ ನಿಷ್ಠೆಗೆ ಕೊರತೆಯಿಲ್ಲ ಜೊತೆಗೆ ಯಾವುದೇ ವಿವಾದಗಳಲ್ಲಿಯೂ ಸಿಲುಕದೇ ಇರುವ ಹೋರಾಟಗಾರರು‌ ಇವರಾಗಿದ್ದಾರೆ ಎನ್ನುವುದು ಮರೆಯಬೇಡಿ.

ಆದ್ದರಿಂದ ಪ್ರಮುಖ ಜವಾಬ್ದಾರಿ ಪಡೆಯಲು ಇದಕ್ಕಿಂತ ಹೆಚ್ಚಿನ ಅರ್ಹತೆಗಳು ಬೇಕಾ? ನಾಯಕನಾಗಬಲ್ಲವರಲ್ಲಿ ಇರುವಂತಹ ಸೂಕ್ಷ್ಮಪ್ರಜ್ಞೆ ಇವರಲ್ಲಿ ಪ್ರಮುಖವಾಗಿ ಎದ್ದು ಕಾಣುತ್ತಿದೆಯಲ್ಲಾ. ಸದಾ ಚುರುಕಾಗಿ ಓಡಾಡುತ್ತ, ಜನಪರ ಹೋರಾಟಗಳಲ್ಲಿ ಪಾಲ್ಗೊಳ್ಳುತ್ತಾ, ಸದಾ ಸಮಾಜ ಸೇವೆಯಲ್ಲಿ ತೋಡಗಿಸಿಕೊಂಡು, ನೂರಾರು ಹೋರಾಟಗಳು ಮಾಡುವ ಮೂಲಕ ನಾಡಿನಲ್ಲಿ ಮನೆಮಾತಾಗಿರುವವರನ್ನು ಗುರುತಿಸಿ ಜವಾಬ್ದಾರಿ ನೀಡುವುದು ಶ್ರೇಷ್ಠವಲ್ಲವೇ ಹಾಗೂ ಜೊತೆ ಜೊತೆಗೆ
ನಾಡು ಮತ್ತು ನುಡಿಗೆ ಸಂಬಂಧಿಸಿದ, ಇನ್ನಿತರ ಹಲವಾರು ಪ್ರಮುಖ ವಿಷಯಗಳ ಕುರಿತು ವ್ಯಾಪಕ ಹೋರಾಟಗಳನ್ನೂ ಮಾಡಿದವರಿಗೆ ಒಂದೊಳ್ಳೆಯ ಅವಕಾಶ ನೀಡುವುದು ಅತ್ಯುತ್ತಮ ವಲ್ಲವೇ!.

ಇಂತಹವರಿಗೆ ಜವಾಬ್ದಾರಿ ಕೊಡದೇ ಹೋದರೆ ಮತ್ಯಾರಿಗೆ ಜವಾಬ್ದಾರಿ ನೀಡುತ್ತಾರೆ.ಅರ್ಹತೆಯೊಂದೇ ಹುದ್ದೆಗೆ ಮಾನದಂಡವಾಗಬೇಕೆಂಬ ಛಲ ನಮ್ಮದು.ಅಂದಗಾಲೇ ಈ ಸಮಾಜ ಅಭಿವೃದ್ಧಿ ಪಥದಲ್ಲಿ ಸಾಗಲು ಶಕ್ತವಾಗುತ್ತದೆ. ಆದಕಾರಣ ಅಧಿಕಾರಸ್ಥ ಪಕ್ಷದಲ್ಲಿ ಸಾಕಷ್ಟು ಪ್ರಮುಖ ಹುದ್ದೆಗಳಿರುತ್ತವೆ. ಆ ಪೈಕಿ ಕೆಲವನ್ನಾದರೂ ಅರ್ಹತೆ ಆಧರಿಸಿ ನೀಡುವಂತಾಗಬೇಕು. ಮುಖ್ಯವಾಗಿ ಜನಪರ ಹೋರಾಟಗಳಲ್ಲಿ ಗುರುತಿಸಿಕೊಂಡವರು ಹಾಗೂ ಉತ್ಸಾಹಿಗಳಿಗೆ ಅಂತಹ ಹುದ್ದೆಗಳನ್ನು ನೀಡುವ ಮೂಲಕ ಅವರನ್ನು ಪ್ರೋತ್ಸಾಹಿಸಬೇಕು.

ಅದರಿಂದ ಪಕ್ಷಕ್ಕೂ/ಸಮಾಜಕ್ಕೂ/ಸಂಘಟನೆಗೂ ಅನುಕೂಲ ವಾಗುವುದರಲ್ಲಿ ಯಾವುದೇ ಅನುಮಾನವಿಲ್ಲ.ಸೊಕ್ತ ಅರ್ಹ ಅಭ್ಯರ್ಥಿಗಳನ್ನು ,ಹಿರಿಯರು ಗುರುತಿಸಿ ಗೌರವಿಸುವ ಕೆಲಸ ಶೀಘ್ರವಾಗಿ ಮಾಡುವ ಮೂಲಕ ಇಂತಹ ವ್ಯಕ್ತಿಯನ್ನು ಪ್ರೋತ್ಸಾಹಿಸಿ ಬೆಳೆಸಿದರೆ, ಅದರಿಂದ ಸಮಾಜ ಮತ್ತು ನಾಡಿಗೆ ಹೆಚ್ಚು ಅನುಕೂಲವಾಗುತ್ತದೆ. ಆ ವಿವೇಚನೆಯನ್ನು ಸಂಬಂಧ ಪಟ್ಟ ಹಿರಿಯರು ತೋರುವ ಮೂಲಕ ಯುವ ಪ್ರತಿಭೆಗಳಿಗೆ ಅವಕಾಶ ನೀಡಬೇಕು.

ಪ್ರಮುಖ ಜವಾಬ್ದಾರಿಗಳನ್ನು ಉತ್ತಮರಿಗೆ ನೀಡಿದರೆ, ಸ್ಥಗಿತಗೊಂಡಂತಿರುವ ಇತರ ಚಟುವಟಿಕೆಗಳು ಮತ್ತೆ ಚುರುಕಾಗಲು ಅವಕಾಶವಾಗುತ್ತದೆ.ಹೀಗಾಗಿ ಅರ್ಹತೆ ಪರಿಗಣಿಸಿ ಪ್ರಮುಖ ಸ್ಥಾನ ನೀಡುವುದು ಹಿರಿಯರಿಗೆ ಬಿಟ್ಟಿರುವ ವಿಚಾರ.

ಏಕೆಂದರೆ, ಅರ್ಹ ವ್ಯಕ್ತಿ ಯಾವ ಪಕ್ಷದಲ್ಲಿದ್ದರೂ ಉತ್ತಮ ಕೆಲಸವನ್ನೇ ಮಾಡುತ್ತಾರೆ. ಅಭಿವೃದ್ಧಿ ಮೂಲಕ ಹೊಸ ಸಂಚಲನೆಯೊಂದು ರಾಜ್ಯದಲ್ಲಿ ಸೃಷ್ಟಿಸುತ್ತಾರೆ ಎಂಬ ಬಲವಾದ ಭಾವನೆ ನಮ್ಮದು. ಆ ದಿಸೆಯಲ್ಲಿ ಸಂಬಂಧ ಪಟ್ಟ ಮಹನೀಯರು ಅನ್ಯತಾ ಭಾವಿಸದೇ, ಮುಕ್ತ ಮನಸ್ಸಿನಿಂದ ಯೋಚನೆ ಮಾಡಲಿ,ಮಾಡುವ ಮೂಲಕ ಪ್ರತಿಭೆಗಳಿಗೆ ಅವಕಾಶ ಕೊಡಲಿ ಎನ್ನುವ ಆಶಾವಾದ ನಮ್ಮದಾಗಿದೆ.

ಅರ್ಹತೆ ಎಂದರೆ (ನನ್ನ ದೃಷ್ಟಿಯಲ್ಲಿ)

ನಿಸ್ವಾರ್ಥ ಸೇವೆಯ ಅರ್ಹತೆಗಳ ಜೊತೆಗೆ ಅಭ್ಯರ್ಥಿಗಳು ಕೆಲವು ವಿಶೇಷ ಅರ್ಹತೆಗಳನ್ನು ಪಡೆದಿರಬೇಕು. ಮೊದಲನೆಯದು ವಿದ್ಯಾ ಅರ್ಹತೆ. ಈ ಅರ್ಹತೆ ಅಭ್ಯರ್ಥಿಯ ಶಿಕ್ಷಣಕ್ಕೆ ಸಂಬಂಧಿಸಿದುದು. ಪ್ರತಿಯೊಬ್ಬ ಅಭ್ಯರ್ಥಿಯೂ ನಿಯಮಿತ ವಿದ್ಯಾ ವ್ಯಾಸಂಗ ಮಾಡಿರಬೇಕು.

ಎರಡನೆಯದು ವೈಯಕ್ತಿಕ ಗುಣಗಳು, ಪ್ರಾಮಾಣಿಕತೆ, ನಿಷ್ಕಾಪಟ್ಯ, ನೈಪುಣ್ಯ, ಧೈರ್ಯ ಮತ್ತು ಸಂಘಟನಾ ಸಾಮರ್ಥ್ಯ ಹೊಂದುವುದು ಅತಿ ಅವಶ್ಯ. ಇವುಗಳನ್ನು ಕಂಡು ಹಿಡಿಯುವುದಕ್ಕೋಸ್ಕರ ಸಾಮೂಹಿಕ ಪರೀಕ್ಷೆ, ಮನಶಾಸ್ತ್ರೀಯ ಸಂಬಂಧ ಪರೀಕ್ಷೆ ಮುಂತಾದುವುಗಳನ್ನು ನಡೆಸುವುದು ಅವಶ್ಯಕತೆ ವಿದೆ.

ಮೂರನೆಯದು ಅನುಭವ ಮತ್ತು ಪ್ರಾಮಾಣಿಕತೆ ಇದರ ಪ್ರಕಾರ ಅಭ್ಯರ್ಥಿಗಳು ಕೆಲವು ಸಂದರ್ಭಗಳಲ್ಲಿ ಆ ಕೆಲಸದಲ್ಲಿ ಸಾಕಷ್ಟು ಪುರ್ವಾನುಭವ ಹೊಂದಿರಬೇಕು. ಇವುಗಳ ಜೊತೆಗೆ ವಿಶೇಷ ಸಮಾಜಿಕ ಜ್ಞಾನವೂ ಒಂದು ಹೆಚ್ಚಿನ ಅರ್ಹತೆಯಾಗಿ ಪರಿಗಣಿಸಲ್ಪಟ್ಟಿದೆ ಎನ್ನುವುದು ಅಲ್ಲಗಳೆಯುವಂತಿಲ್ಲ.

ಜೊತೆಗೆ ಇಂದು ಆಡಳಿತಾಂಗದಲ್ಲಿ ಹೆಚ್ಚು ಹೆಚ್ಚಾಗಿ ವೈಶಿಷ್ಟ್ಯ ನಿಸ್ವಾರ್ಥ ಸೇವಾ ಅನುಭವ ಹೊಂದುವುದು ಸೇರಿ ಆಡಳಿತ ಹಾಗೂ ಸಂಘಟನೆಯನ್ನು ಯಶಸ್ವಿ ದಿಕ್ಕಿನಲ್ಲಿ ಮುನ್ನಡೆಸಲು ವಿಶೇಷ ಜ್ಞಾನವನ್ನು ಪಡೆದಿರಲೇಬೇಕಾಗುತ್ತದೆ. ಆಡಳಿತದ ಯಾವುದೇ ಒಂದು ಹುದ್ದೆಗೆ ಹಲವಾರು ಅಭ್ಯರ್ಥಿಗಳು ಇರುತ್ತಾರೆ. ಅವರಲ್ಲಿ ಹೆಚ್ಚಿನ ಅರ್ಹತೆಗಳು ಆ ಹುದ್ದೆಯ ಆವಶ್ಯಕತೆಗಳಿಗೆ ಅನುಗುಣವಾಗಿ ಯಾರಿಗೆ ಇವೆಯೋ ಅವರು ನೇಮಕಗೊಳ್ಳಬೇಕಾದುದು ಸರಿಯಾದ ಕ್ರಮ.

ಇದರಿಂದ ಆಡಳಿತ ವ್ಯವಸ್ಥೆ ಸುಸೂತ್ರವಾಗಿ ನಡೆಯುತ್ತದೆ. ಸರ್ಕಾರದಲ್ಲಿ ಅಥವಾ ಸಂಘ – ಸಂಸ್ಥೆಯಲ್ಲಿ ಯಾವುದೇ ಒಂದು ಸ್ಥಾನ ಖಾಲಿಯಾದಾಗ ಅದಕ್ಕೆ ಕೆಲವು ಅರ್ಹತೆಗಳನ್ನು ಗೊತ್ತು ಮಾಡಿ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಪಡೆಯುವ ಮೂಲಕ ಯೋಗ್ಯ ವ್ಯಕ್ತಿಯನ್ನು ಆಯ್ಕೆ ಮಾಡಿಕೊಂಡು ಬರುವ ವ್ಯವಸ್ಥೆ ಆಗಬೇಕಾಗಿದೆ ಎನ್ನುವುದು ಸುಳ್ಳಲ್ಲ ಹಾಗಾದಾಗ ಮಾತ್ರ ಆ ಹುದ್ದೆಗೆ ಗೌರವ ಸೀಗುತ್ತದೆ.

ಕೊನೆಯ ಮಾತು

ಪ್ರಮಾಣಿಕವಾಗಿ – ನಿಷ್ಠಾವಂತರಾಗಿ ದುಡಿಯುವ ಯೋಗ್ಯ ವ್ಯಕ್ತಿಗಳನ್ನು ಗುರುತಿಸಿ ಜವಾಬ್ದಾರಿ ನೀಡುವುದು ಇಂದಿನ ದಿನಗಳಲ್ಲಿ ಅವಶ್ಯಕತೆ ಇದೆ. ಇದರಿಂದ ಸಮಾಜ ಮತ್ತು ದೇಶ ಅಭಿವೃದ್ಧಿ ಪಥದಲ್ಲಿ ಸಾಗಲು ಸಹಕಾರಿ ಆಗುತ್ತದೆ. ಇದಲ್ಲದೆ ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಸಹಬಾಳ್ವೆ ಸರ್ವರಲ್ಲಿಯೊ ಮೂಡುವ ಮೂಲಕ ಭವ್ಯ ಭಾರತದ ಉನ್ನತಿಗೆ ಸಾಕ್ಷಿಯಾಗಲಿದೆ.

(-ಸಂಗಮೇಶ ಎನ್ ಜವಾದಿ
ಕೊಡಂಬಲ.ಬೀದರ ಜಿಲ್ಲೆ.
9663809340)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ

Published

on

ಸುದ್ದಿದಿನ,ಚನ್ನಗಿರಿ: ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯು ಸೋಮೌಅರ ನವಿಲೇಹಾಳು ಗ್ರಾಮ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಭೇಟಿಯಾಗಿ ಗ್ರಾಮಸಭೆಯನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ನಡೆಸುವಂತೆ ಮನವಿ ಪತ್ರ ಸಲ್ಲಿಸಲಾಯಿತು.

ಗ್ರಾಮಸಭೆ ಎಂಬುದು ಗ್ರಾಮಸ್ಥರ ಸಮಸ್ಯೆಗಳನ್ನು ನೇರವಾಗಿ ಚರ್ಚಿಸಿ, ಗ್ರಾಮದ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸುವ ಪ್ರಮುಖ ವೇದಿಕೆಯಾಗಿರುವುದರಿಂದ, ಗ್ರಾಮಸಭೆಯ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು PDO ಅವರಿಗೆ ಮನವಿ ಮಾಡಲಾಯಿತು.

ಅದರಂತೆ ಗ್ರಾಮಸಭೆಯ ದಿನಾಂಕ, ಸಮಯ ಹಾಗೂ ಸ್ಥಳದ ಮಾಹಿತಿಯನ್ನು ಟಾಂಟಾಂ/ಧ್ವನಿವರ್ಧಕದ ಮೂಲಕ ಗ್ರಾಮದಲ್ಲಿ ವ್ಯಾಪಕವಾಗಿ ಪ್ರಚಾರ ಮಾಡುವುದರ ಜೊತೆಗೆ, ಸಾರ್ವಜನಿಕರಿಗೆ ಮುಂಚಿತವಾಗಿ ಮಾಹಿತಿ ನೀಡಿ, ಅರ್ಹ ಫಲಾನುಭವಿಗಳು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸಭೆಯಲ್ಲಿ ಭಾಗವಹಿಸುವಂತೆ ಜಾಗೃತಿ ಮೂಡಿಸುವಂತೆ ತಿಳಿಸಲಾಯಿತು.

ಗ್ರಾಮದಲ್ಲಿಯೇ ಉದ್ಯೋಗ ಸೃಷ್ಟಿಗೆ ಒತ್ತು

ಇದೇ ಸಂದರ್ಭದಲ್ಲಿ ಮನರೇಗಾ (MGNREGA) ಯೋಜನೆಯಡಿ ಗ್ರಾಮದ ಅರ್ಹ ಕಾರ್ಮಿಕರಿಗೆ ಸ್ಥಳೀಯವಾಗಿಯೇ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸುವಂತೆ ಮನವಿ ಮಾಡಲಾಯಿತು.

ಗ್ರಾಮಸ್ಥರು ಉದ್ಯೋಗಕ್ಕಾಗಿ ಅನಿವಾರ್ಯವಾಗಿ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗದಂತೆ, ಸರ್ಕಾರದ ಉದ್ಯೋಗ ಖಾತರಿ ಯೋಜನೆಯಡಿ ಲಭ್ಯವಿರುವ ಕೆಲಸಗಳನ್ನು ಸಮರ್ಪಕವಾಗಿ ಗುರುತಿಸಿ, ಅರ್ಹರಿಗೆ ನಿಯಮಾನುಸಾರ ಉದ್ಯೋಗ ಒದಗಿಸಬೇಕು ಎಂದು ತಿಳಿಸಲಾಯಿತು.

ಪ್ರಸ್ತುತ ಬತ್ತದ ನಾಟಿ ಕಾರ್ಯಕ್ಕೆ ಅಗತ್ಯವಿರುವ ನೀರಿನ ಸಮಸ್ಯೆಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ, ಕೃಷಿ ಕೆಲಸಗಳು ಲಭ್ಯವಿಲ್ಲದ ಅವಧಿಯಲ್ಲಿ ಗ್ರಾಮಸ್ಥರಿಗೆ ಮನರೇಗಾ ಸೇರಿದಂತೆ ಇತರೆ ಸರ್ಕಾರಿ ಯೋಜನೆಗಳ ಮೂಲಕ ಉದ್ಯೋಗ ಒದಗಿಸಿ, ಗ್ರಾಮದಲ್ಲಿಯೇ ಆದಾಯದ ಅವಕಾಶಗಳನ್ನು ಸೃಷ್ಟಿಸುವುದು ಅಗತ್ಯವಾಗಿದೆ ಎಂದು ಮನವಿ ಮಾಡಲಾಯಿತು.

ಗ್ರಾಮದಲ್ಲಿಯೇ ಉದ್ಯೋಗ ದೊರೆತರೆ ಗ್ರಾಮಸ್ಥರ ಆರ್ಥಿಕ ಸ್ಥಿತಿ ಸುಧಾರಿಸುವುದರ ಜೊತೆಗೆ, ಗುಳೆ ಹೋಗುವುದನ್ನು ತಡೆಯಲು ಹಾಗೂ ಗ್ರಾಮದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು PDO ಅವರ ಗಮನಕ್ಕೆ ತರಲಾಯಿತು.

ಇತರೆ ಗ್ರಾಮಾಭಿವೃದ್ಧಿ ವಿಚಾರಗಳ ಚರ್ಚೆ

ಇದರ ಜೊತೆಗೆ ನವಿಲೇಹಾಳ ಗ್ರಾಮದ ವಿವಿಧ ಅಭಿವೃದ್ಧಿ ಸಮಸ್ಯೆಗಳು, ಸಾರ್ವಜನಿಕರಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳು, ಉದ್ಯೋಗಾವಕಾಶಗಳು, ಕೃಷಿಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ ಸರ್ಕಾರದ ವಿವಿಧ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು PDO ಅವರೊಂದಿಗೆ ಚರ್ಚಿಸಲಾಯಿತು.

ಗ್ರಾಮಸ್ಥರಿಗೆ ಸರ್ಕಾರದ ಯೋಜನೆಗಳ ಪ್ರಯೋಜನಗಳು ಸಮರ್ಪಕವಾಗಿ ತಲುಪುವಂತೆ ಪಾರದರ್ಶಕವಾಗಿ ಹಾಗೂ ನಿಯಮಾನುಸಾರ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು ಎಂದು ಮನವಿ ಮಾಡಲಾಯಿತು.

ಗ್ರಾಮಸಭೆಯಲ್ಲಿ ಸಾರ್ವಜನಿಕರ ಹೆಚ್ಚಿನ ಭಾಗವಹಿಸುವಿಕೆ, ಸ್ಥಳೀಯ ಉದ್ಯೋಗ ಸೃಷ್ಟಿ ಹಾಗೂ ಗ್ರಾಮಾಭಿವೃದ್ಧಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಮೂಲಕ ನವಿಲೇಹಾಳ ಗ್ರಾಮವನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಮತ್ತಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಲಾಯಿತು.

“ಗ್ರಾಮದ ಅಭಿವೃದ್ಧಿ ಕೇವಲ ಸರ್ಕಾರದ ಜವಾಬ್ದಾರಿಯಲ್ಲ; ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ಒಗ್ಗೂಡಿ ಕಾರ್ಯನಿರ್ವಹಿಸಿದಾಗ ಮಾತ್ರ ಸಮಗ್ರ ಗ್ರಾಮಾಭಿವೃದ್ಧಿ ಸಾಧ್ಯ.”

ಗ್ರಾಮದ ಜನರ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು, ನವಿಲೇಹಾಳ ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ (ರಿ.) ನಿರಂತರವಾಗಿ ಜನಪರವಾಗಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ ದಾವಣಗೆರೆ ಜಿಲ್ಲಾಧ್ಯಕ್ಷರಾದ ಜಾಫರ್ ರವರು ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ಅಂತರಂಗ

ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು

Published

on

~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ

ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.

ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.

 

ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.

ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

Continue Reading

ದಿನದ ಸುದ್ದಿ

ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್

Published

on

ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು.

ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು, ನಾನು ಡಿ.ಕೆ ಶಿವಕುಮಾರ್‌ ಅವರ ಮನೆಮಗ, ಶಿವನ ಮುಂದೆ ಇರುವ ಬಸವ ನಾನು. ನಾನೇ ಮುಖ್ಯಮಂತ್ರಿ ಇದ್ದಂತೆ, ಮನೆ ಮಗನಿಗೆ ಯಾವಾಗಲೂ ಅವರ ಆಶೀರ್ವಾದ ಇದ್ದೇ ಇರುತ್ತದೆ ಎಂದಿದ್ದಾರೆ.

ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ತಕ್ಕಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.

“ನಾನು ಮುಖ್ಯಮಂತ್ರಿ ಅಲ್ಲ. ಆದರೆ ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರ ಬಂದಾಗ ಮುಖ್ಯಮಂತ್ರಿಯಂತೆ ಜವಾಬ್ದಾರಿ ಹೊತ್ತು ಕೆಲಸ ಮಾಡುತ್ತಿದ್ದೇನೆ. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ನನ್ನ ಮೊದಲ ಕರ್ತವ್ಯವಾಗಿದೆ. ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ,” ಎಂದು ಅವರು ಹೇಳಿದರು.

ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿದ್ದು, ಇನ್ನೂ ಅನೇಕ ಯೋಜನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದ ಅವರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತಿದೆ ಎಂದರು.

“ಜನಪ್ರತಿನಿಧಿಯಾಗಿ ಚುನಾಯಿತರಾದ ಬಳಿಕ ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿದ್ದೇನೆ. ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅಗತ್ಯ ಅನುದಾನ ತರುವ ಪ್ರಯತ್ನ ಮಾಡಲಾಗಿದೆ. ಕುಡಿಯುವ ನೀರಿನ ಯೋಜನೆಗಳು, ರಸ್ತೆ ಅಭಿವೃದ್ಧಿ, ಶಾಲೆಗಳ ಮೂಲಸೌಕರ್ಯ ಸುಧಾರಣೆ ಸೇರಿದಂತೆ ಹಲವು ಕಾಮಗಾರಿಗಳಿಗೆ ವೇಗ ನೀಡಲಾಗಿದೆ,” ಎಂದು ಹೇಳಿದರು.

ಕ್ಷೇತ್ರದ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕೆಗಳನ್ನು ಆಕರ್ಷಿಸುವ ಪ್ರಯತ್ನ ನಡೆಯುತ್ತಿದೆ. ಕೃಷಿ ಕ್ಷೇತ್ರಕ್ಕೆ ಅಗತ್ಯವಾದ ನೀರಾವರಿ ಹಾಗೂ ರೈತರಿಗೆ ಅನುಕೂಲಕರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ಸರ್ಕಾರದ ಅಭಿವೃದ್ಧಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ಅರ್ಹ ವ್ಯಕ್ತಿ ಯೋಜನೆಯಿಂದ ವಂಚಿತರಾಗಬಾರದು ಎಂಬುದು ತಮ್ಮ ಉದ್ದೇಶವಾಗಿದೆ ಎಂದು ಶಾಸಕರು ತಿಳಿಸಿದರು.

ವಿರೋಧ ಪಕ್ಷಗಳ ಟೀಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಟೀಕೆಗಳು ಪ್ರಜಾಪ್ರಭುತ್ವದ ಭಾಗ. ಆದರೆ ಅಭಿವೃದ್ಧಿಯೇ ನಮ್ಮ ಉತ್ತರ. ಜನರ ಸಮಸ್ಯೆಗಳಿಗೆ ಪರಿಹಾರ ನೀಡುವುದು ಹಾಗೂ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದೇ ನಮ್ಮ ಗುರಿಯಾಗಿದೆ,” ಎಂದರು.

ಕ್ಷೇತ್ರದ ಜನರು ಅಭಿವೃದ್ಧಿಗೆ ಸಹಕಾರ ನೀಡುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಸಾರ್ವಜನಿಕರು ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ಸಂಪರ್ಕಿಸಬಹುದು. ಜನಸೇವೆಗಾಗಿ ತಮ್ಮ ಕಚೇರಿ ಸದಾ ತೆರೆದಿರುತ್ತದೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ, ಗ್ರಾಮೀಣ ಅಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending