Connect with us

ದಿನದ ಸುದ್ದಿ

ಅರ್ಹತೆಗೆ ಅವಕಾಶ ಕೊಡಿ

Published

on

  • ಸಂಗಮೇಶ ಎನ್ ಜವಾದಿ

ವ್ಯಕ್ತಿಯೊಬ್ಬ ಒಂದು ಹುದ್ದೆ ಪಡೆಯಲು ಅರ್ಹತೆ ಸಾಕಾ ಅಥವಾ ಜಾತಿ,ಧರ್ಮ,ಹಣ ಹಾಗೂ ಶಿಫಾರಸ್ಸು ಬೇಕಾ ? ಎನ್ನುವ ಮಾತುಗಳು ಎಲ್ಲಡೇ ಈಗ ಕೇಳಿ ಬರುತ್ತಿವೆ ಅಲ್ಲವೇ ? ಹಾಗಾದರೆ ಅರ್ಹತೆ ಒಂದು ಇದ್ದರೆ ಸಾಕೇ ? ಎನ್ನುವ ಕೆಲ ಮಾತುಗಳು ತಮ್ಮ ಮುಂದೆ ಹಂಚಿಕೊಳ್ಳಲು ಪ್ರಮಾಣಿಕವಾಗಿ ಪ್ರಯತ್ನ ಮಾಡಿರುವೆ.

ಯಾವುದೇ ಒಂದು ಪಕ್ಷದ ಅಥವಾ ಸಮಾಜಿಕ ಸಂಘಟನೆಗಳ ಜವಾಬ್ದಾರಿ ಪಡೆಯುವ ಕುರಿತು ಮತ್ತು ವಿವಿಧ ಸಮಾಜ ಮುಖಿ ಸೇವೆಗಳ ಜವಾಬ್ದಾರಿಗಳ ಸ್ಥಾನಕ್ಕೆ ಸಧ್ಯ ನಡೆಯುತ್ತಿರುವ ಸ್ಪರ್ಧೆಯನ್ನು ಗಮನಿಸಿದರೆ ಈ ಪ್ರಶ್ನೆಗಳು ಮತ್ತೆ ಮತ್ತೆ ನಮ್ಮ ಕಣ್ಮುಂದೆ ಬರುತ್ತಿವೆ.ಹಾಗಾದರೆ ಅರ್ಹತೆ ಇದ್ದರು ಕೂಡಾ ಪ್ರಮುಖ ಸ್ಥಾನಕ್ಕೆ ಅದೊಂದೇ ಸಾಲದೇನೋ ಎಂದು ಜಾತಿಯ ಜೊತೆಗೆ ದೊಡ್ಡವರ ಶಿಫಾರಸ್ಸು ಸಹ ಸೇರಿಸಿಕೊಳ್ಳಲು ಪ್ರಯತ್ನಿಸಬೇಕಾದ ಸಂದರ್ಭವೊಂದು ಈಗ ಉಂಟಾಗಿದೆ ಎನ್ನಬಹುದು.

ಇಂತಹ ಸಮಸ್ಯೆಗಳು ಎದುರಿಸುತ್ತಿರುವವರು ಕೆಲವರು(ಬೆರಳಣಿಕೆಯಷ್ಟು) ಮಾತ್ರ ಎಂದೇ ಹೇಳಬೇಕು, ಆದಕಾರಣ ಇಂದಿನ ದಿನಗಳಲ್ಲಿ ನಿಸ್ವಾರ್ಥ ಸೇವೆಗೆ ಸಂದಿಗ್ಧತೆಯ ಸಮಯದ ಕಾಲವಿದು ಎಂದೇ ಹೇಳಬೇಕಾಗುತ್ತದೆ.

ಹೀಗಾಗಿ ಶಿಫಾರಸ್ಸು ಇಲ್ಲದೇ ಹೋರಾಟದ ನೆಲೆಯಿಂದ ಮುಂಚೂಣಿಗೆ ಬಂದವರಿಗೆ ಸಧ್ಯದ ದಿನಮಾನಗಳಲ್ಲಿ ಗೌರವ, ಬೆಲೆ ಇಲ್ಲ ಎನ್ನುವ ಸತ್ಯ ಸಂಗತಿಯ ಮಾತುಗಳು ಈಗ ಎಲ್ಲಾ ಕಡೆ ಕೇಳಿ ಬರುತ್ತಿವೆಯಾದರೂ ರಾಜಕೀಯದಲ್ಲಿ ಇದೊಂದೇ ಸಾಲದು, ಜಾತಿಯ ಬಲದ ಜೊತೆಗೆ ಹಣವೂ ಬೇಕೇ ಬೇಕೆಂಬುವುದು ಸುಳ್ಳಲ್ಲ , ಹಾಗಾಗಿ ಈ ಎಲ್ಲಾ ಸಂಗತಿಗಳನ್ನು ಸೊಕ್ಷ್ಮವಾಗಿ ಗಮನಿಸಿದರೆ ಬಡವರಿಗೆ, ನಿಷ್ಠಾವಂತ ಕಾರ್ಯಕರ್ತರಿಗೆ ಇಂದಿನ ದಿನಗಳಲ್ಲಿ ನ್ಯಾಯ ಮತ್ತು ಅಧಿಕಾರ ಸೀಗುವುದು ಕಷ್ಟ ಅನಿಸುತ್ತದೆ.

ವ್ಯಕ್ತಿಯ ಅರ್ಹತೆಯನ್ನಷ್ಟೇ ಪರಿಗಣಿಸಿ ಹುದ್ದೆಗಳನ್ನು ನೀಡುವಂತಿದ್ದರೆ, ಇತರ ಯಾವ ಅರ್ಹತೆಗಳೂ ಮುಖ್ಯವಾಗುವುದಿಲ್ಲ. ಆದರೆ, ರಾಜಕೀಯದಲ್ಲಿ ಅರ್ಹತೆಗೆ ಇರೋದು ಕೊನೆಯ ಸ್ಥಾನ. ವ್ಯಕ್ತಿಯ ಜಾತಿ, ವರಿಷ್ಠರೊಂದಿಗಿನ ಸಂಬಂಧ, ಹಣ ಮುಂತಾದವು ಮೊದಲ ಸ್ಥಾನದಲ್ಲಿ ಬರುತ್ತವೆ. ಹೀಗಾಗಿ ಬಹುತೇಕ ಅರ್ಹರು ಉನ್ನತ ಹುದ್ದೆಗಳಿಗೆ ಅರ್ಹರಾಗುವುದೇ ಇಲ್ಲ. ಆ ಅಪಾಯ ಈಗ ಅರ್ಹತೆ ಇದ್ದವರಿಗೆ ಎದುರಾಗಿದೆ ಅಲ್ಲವೇ ? ಏನೋ ಮಾಡುವುದು ಹೇಳಿ ಬಂಧುಗಳೆ !.

ಹಾಗೆ ನೋಡಿದರೆ, ಸಮಾಜ ಮುಖಿ ಸೇವೆಗಳ ಜವಾಬ್ದಾರಿ ಹೊರಲು ಎಲ್ಲರಿಗಿಂತ ಹೆಚ್ಚು ಅರ್ಹ ನಿಸ್ವಾರ್ಥ ಸೇವೆಯ, ಮನೋಭಾವ – ಮನೋಧರ್ಮದ ವ್ಯಕ್ತಿ ಎನ್ನುವುದು ಸತ್ಯ ಹೌದು ಅಲ್ಲವೇ. ಯಾವುದೇ ಗಾಡ್ ಫಾದರ್ ನೆರವಿಲ್ಲದೇ, ಕೇವಲ ಹೋರಾಟದ ನೆಲೆಗಟ್ಟಿನಿಂದಲೇ ರಾಜಕೀಯ ಹಾಗೂ ಸಮಾಜಿಕ ಕ್ಷೇತ್ರದ ಮೊಗಸಾಲೆಯನ್ನು ಪ್ರವೇಶಿಸಿ ನಾಡಿನ ಸೇವೆಯನ್ನು ನಿರಂತರವಾಗಿ ಮಾಡಿಕೊಂಡು ಬರುತ್ತಿರುವ ಪ್ರತಿಭೆಗಳನ್ನು ಗುರುತಿಸದೇ ಹೋದರೆ ಹೇಗೆ ?.

ಇವೆಲ್ಲಾ ಕಾರಣಗಳನ್ನು ಕಂಡರೆ
ಇಂದಿನ ಸ್ವಾರ್ಥ ಹೀನ ಪರಿಸ್ಥಿತಿ ನೋಡಿ ನಮಗೆ ಕನಿಕರ ಉಂಟಾಗುತ್ತಿದೆ ಮತ್ತು ಅರ್ಹತೆ ಇದ್ದರು ಹೋರಾಟ ನಡೆಸುವ ಅನಿವಾರ್ಯ ಪರಿಸ್ಥಿತಿ ಸಧ್ಯ
ಜೋರಾಗಿ ಕಂಡು ಬರುತ್ತಿರುವುದೇ ಅತ್ಯಂತ ಖೇದಕರ ವಿಷಯವಾಗಿದೆ. ಹಾಗಾಗಿ ಮೌಲ್ಯಾಧಾರಿತ ಸೈದ್ಧಾಂತಿಕ ನಿಲುವಿಗೆ ಬದ್ಧರಾಗುವ ಮೂಲಕ ಸೇವೆಯಲ್ಲಿ ಗುರುತಿಸಿಕೊಂಡವರು.

ದೇಶ/ಕನ್ನಡ ಪರ ನಿಲುವನ್ನು ನಿರ್ಭಿಡೆಯಿಂದ ಪ್ರಕಟಿಸುತ್ತ ಬಂದಂಥವರು. ಇನ್ನೂ ಚಿಕ್ಕ ವಯಸ್ಸು, ದೊಡ್ಡ ಉತ್ಸಾಹ ಇರುವ ಸೇವಕರು, ವಿವಿಧ ಸಂಘಟನೆಗಳ ಸಕ್ರಿಯ ಕಾರ್ಯಕರ್ತರ ಪಡೆಯನ್ನು ಹೊಂದುವ ಮೂಲಕ ನಿಸ್ವಾರ್ಥ ಸೇವೆಯಲ್ಲಿ ಮೂಂಚುಣಿಯಲ್ಲಿ ಇದ್ದವರು. ಸರ್ವ ಜನಾಂಗದ ಜನರ ಮೆಚ್ಚುಗೆಗೆ ಪಾತ್ರವಾಗಿರುವ ಹಾಗೂ ಸಂಘಟನೆಯನ್ನು ಬಲಪಡಿಸುವ ಉತ್ಸಾಹ, ಸಾಮರ್ಥ್ಯ ಹೊಂದಿರುವ ಕೆಚ್ಚೆದೆಯ ಪ್ರತಿಭೆಗಳು. ಅವರ ಸೇವೆಯ ನಿಷ್ಠೆಗೆ ಕೊರತೆಯಿಲ್ಲ ಜೊತೆಗೆ ಯಾವುದೇ ವಿವಾದಗಳಲ್ಲಿಯೂ ಸಿಲುಕದೇ ಇರುವ ಹೋರಾಟಗಾರರು‌ ಇವರಾಗಿದ್ದಾರೆ ಎನ್ನುವುದು ಮರೆಯಬೇಡಿ.

ಆದ್ದರಿಂದ ಪ್ರಮುಖ ಜವಾಬ್ದಾರಿ ಪಡೆಯಲು ಇದಕ್ಕಿಂತ ಹೆಚ್ಚಿನ ಅರ್ಹತೆಗಳು ಬೇಕಾ? ನಾಯಕನಾಗಬಲ್ಲವರಲ್ಲಿ ಇರುವಂತಹ ಸೂಕ್ಷ್ಮಪ್ರಜ್ಞೆ ಇವರಲ್ಲಿ ಪ್ರಮುಖವಾಗಿ ಎದ್ದು ಕಾಣುತ್ತಿದೆಯಲ್ಲಾ. ಸದಾ ಚುರುಕಾಗಿ ಓಡಾಡುತ್ತ, ಜನಪರ ಹೋರಾಟಗಳಲ್ಲಿ ಪಾಲ್ಗೊಳ್ಳುತ್ತಾ, ಸದಾ ಸಮಾಜ ಸೇವೆಯಲ್ಲಿ ತೋಡಗಿಸಿಕೊಂಡು, ನೂರಾರು ಹೋರಾಟಗಳು ಮಾಡುವ ಮೂಲಕ ನಾಡಿನಲ್ಲಿ ಮನೆಮಾತಾಗಿರುವವರನ್ನು ಗುರುತಿಸಿ ಜವಾಬ್ದಾರಿ ನೀಡುವುದು ಶ್ರೇಷ್ಠವಲ್ಲವೇ ಹಾಗೂ ಜೊತೆ ಜೊತೆಗೆ
ನಾಡು ಮತ್ತು ನುಡಿಗೆ ಸಂಬಂಧಿಸಿದ, ಇನ್ನಿತರ ಹಲವಾರು ಪ್ರಮುಖ ವಿಷಯಗಳ ಕುರಿತು ವ್ಯಾಪಕ ಹೋರಾಟಗಳನ್ನೂ ಮಾಡಿದವರಿಗೆ ಒಂದೊಳ್ಳೆಯ ಅವಕಾಶ ನೀಡುವುದು ಅತ್ಯುತ್ತಮ ವಲ್ಲವೇ!.

ಇಂತಹವರಿಗೆ ಜವಾಬ್ದಾರಿ ಕೊಡದೇ ಹೋದರೆ ಮತ್ಯಾರಿಗೆ ಜವಾಬ್ದಾರಿ ನೀಡುತ್ತಾರೆ.ಅರ್ಹತೆಯೊಂದೇ ಹುದ್ದೆಗೆ ಮಾನದಂಡವಾಗಬೇಕೆಂಬ ಛಲ ನಮ್ಮದು.ಅಂದಗಾಲೇ ಈ ಸಮಾಜ ಅಭಿವೃದ್ಧಿ ಪಥದಲ್ಲಿ ಸಾಗಲು ಶಕ್ತವಾಗುತ್ತದೆ. ಆದಕಾರಣ ಅಧಿಕಾರಸ್ಥ ಪಕ್ಷದಲ್ಲಿ ಸಾಕಷ್ಟು ಪ್ರಮುಖ ಹುದ್ದೆಗಳಿರುತ್ತವೆ. ಆ ಪೈಕಿ ಕೆಲವನ್ನಾದರೂ ಅರ್ಹತೆ ಆಧರಿಸಿ ನೀಡುವಂತಾಗಬೇಕು. ಮುಖ್ಯವಾಗಿ ಜನಪರ ಹೋರಾಟಗಳಲ್ಲಿ ಗುರುತಿಸಿಕೊಂಡವರು ಹಾಗೂ ಉತ್ಸಾಹಿಗಳಿಗೆ ಅಂತಹ ಹುದ್ದೆಗಳನ್ನು ನೀಡುವ ಮೂಲಕ ಅವರನ್ನು ಪ್ರೋತ್ಸಾಹಿಸಬೇಕು.

ಅದರಿಂದ ಪಕ್ಷಕ್ಕೂ/ಸಮಾಜಕ್ಕೂ/ಸಂಘಟನೆಗೂ ಅನುಕೂಲ ವಾಗುವುದರಲ್ಲಿ ಯಾವುದೇ ಅನುಮಾನವಿಲ್ಲ.ಸೊಕ್ತ ಅರ್ಹ ಅಭ್ಯರ್ಥಿಗಳನ್ನು ,ಹಿರಿಯರು ಗುರುತಿಸಿ ಗೌರವಿಸುವ ಕೆಲಸ ಶೀಘ್ರವಾಗಿ ಮಾಡುವ ಮೂಲಕ ಇಂತಹ ವ್ಯಕ್ತಿಯನ್ನು ಪ್ರೋತ್ಸಾಹಿಸಿ ಬೆಳೆಸಿದರೆ, ಅದರಿಂದ ಸಮಾಜ ಮತ್ತು ನಾಡಿಗೆ ಹೆಚ್ಚು ಅನುಕೂಲವಾಗುತ್ತದೆ. ಆ ವಿವೇಚನೆಯನ್ನು ಸಂಬಂಧ ಪಟ್ಟ ಹಿರಿಯರು ತೋರುವ ಮೂಲಕ ಯುವ ಪ್ರತಿಭೆಗಳಿಗೆ ಅವಕಾಶ ನೀಡಬೇಕು.

ಪ್ರಮುಖ ಜವಾಬ್ದಾರಿಗಳನ್ನು ಉತ್ತಮರಿಗೆ ನೀಡಿದರೆ, ಸ್ಥಗಿತಗೊಂಡಂತಿರುವ ಇತರ ಚಟುವಟಿಕೆಗಳು ಮತ್ತೆ ಚುರುಕಾಗಲು ಅವಕಾಶವಾಗುತ್ತದೆ.ಹೀಗಾಗಿ ಅರ್ಹತೆ ಪರಿಗಣಿಸಿ ಪ್ರಮುಖ ಸ್ಥಾನ ನೀಡುವುದು ಹಿರಿಯರಿಗೆ ಬಿಟ್ಟಿರುವ ವಿಚಾರ.

ಏಕೆಂದರೆ, ಅರ್ಹ ವ್ಯಕ್ತಿ ಯಾವ ಪಕ್ಷದಲ್ಲಿದ್ದರೂ ಉತ್ತಮ ಕೆಲಸವನ್ನೇ ಮಾಡುತ್ತಾರೆ. ಅಭಿವೃದ್ಧಿ ಮೂಲಕ ಹೊಸ ಸಂಚಲನೆಯೊಂದು ರಾಜ್ಯದಲ್ಲಿ ಸೃಷ್ಟಿಸುತ್ತಾರೆ ಎಂಬ ಬಲವಾದ ಭಾವನೆ ನಮ್ಮದು. ಆ ದಿಸೆಯಲ್ಲಿ ಸಂಬಂಧ ಪಟ್ಟ ಮಹನೀಯರು ಅನ್ಯತಾ ಭಾವಿಸದೇ, ಮುಕ್ತ ಮನಸ್ಸಿನಿಂದ ಯೋಚನೆ ಮಾಡಲಿ,ಮಾಡುವ ಮೂಲಕ ಪ್ರತಿಭೆಗಳಿಗೆ ಅವಕಾಶ ಕೊಡಲಿ ಎನ್ನುವ ಆಶಾವಾದ ನಮ್ಮದಾಗಿದೆ.

ಅರ್ಹತೆ ಎಂದರೆ (ನನ್ನ ದೃಷ್ಟಿಯಲ್ಲಿ)

ನಿಸ್ವಾರ್ಥ ಸೇವೆಯ ಅರ್ಹತೆಗಳ ಜೊತೆಗೆ ಅಭ್ಯರ್ಥಿಗಳು ಕೆಲವು ವಿಶೇಷ ಅರ್ಹತೆಗಳನ್ನು ಪಡೆದಿರಬೇಕು. ಮೊದಲನೆಯದು ವಿದ್ಯಾ ಅರ್ಹತೆ. ಈ ಅರ್ಹತೆ ಅಭ್ಯರ್ಥಿಯ ಶಿಕ್ಷಣಕ್ಕೆ ಸಂಬಂಧಿಸಿದುದು. ಪ್ರತಿಯೊಬ್ಬ ಅಭ್ಯರ್ಥಿಯೂ ನಿಯಮಿತ ವಿದ್ಯಾ ವ್ಯಾಸಂಗ ಮಾಡಿರಬೇಕು.

ಎರಡನೆಯದು ವೈಯಕ್ತಿಕ ಗುಣಗಳು, ಪ್ರಾಮಾಣಿಕತೆ, ನಿಷ್ಕಾಪಟ್ಯ, ನೈಪುಣ್ಯ, ಧೈರ್ಯ ಮತ್ತು ಸಂಘಟನಾ ಸಾಮರ್ಥ್ಯ ಹೊಂದುವುದು ಅತಿ ಅವಶ್ಯ. ಇವುಗಳನ್ನು ಕಂಡು ಹಿಡಿಯುವುದಕ್ಕೋಸ್ಕರ ಸಾಮೂಹಿಕ ಪರೀಕ್ಷೆ, ಮನಶಾಸ್ತ್ರೀಯ ಸಂಬಂಧ ಪರೀಕ್ಷೆ ಮುಂತಾದುವುಗಳನ್ನು ನಡೆಸುವುದು ಅವಶ್ಯಕತೆ ವಿದೆ.

ಮೂರನೆಯದು ಅನುಭವ ಮತ್ತು ಪ್ರಾಮಾಣಿಕತೆ ಇದರ ಪ್ರಕಾರ ಅಭ್ಯರ್ಥಿಗಳು ಕೆಲವು ಸಂದರ್ಭಗಳಲ್ಲಿ ಆ ಕೆಲಸದಲ್ಲಿ ಸಾಕಷ್ಟು ಪುರ್ವಾನುಭವ ಹೊಂದಿರಬೇಕು. ಇವುಗಳ ಜೊತೆಗೆ ವಿಶೇಷ ಸಮಾಜಿಕ ಜ್ಞಾನವೂ ಒಂದು ಹೆಚ್ಚಿನ ಅರ್ಹತೆಯಾಗಿ ಪರಿಗಣಿಸಲ್ಪಟ್ಟಿದೆ ಎನ್ನುವುದು ಅಲ್ಲಗಳೆಯುವಂತಿಲ್ಲ.

ಜೊತೆಗೆ ಇಂದು ಆಡಳಿತಾಂಗದಲ್ಲಿ ಹೆಚ್ಚು ಹೆಚ್ಚಾಗಿ ವೈಶಿಷ್ಟ್ಯ ನಿಸ್ವಾರ್ಥ ಸೇವಾ ಅನುಭವ ಹೊಂದುವುದು ಸೇರಿ ಆಡಳಿತ ಹಾಗೂ ಸಂಘಟನೆಯನ್ನು ಯಶಸ್ವಿ ದಿಕ್ಕಿನಲ್ಲಿ ಮುನ್ನಡೆಸಲು ವಿಶೇಷ ಜ್ಞಾನವನ್ನು ಪಡೆದಿರಲೇಬೇಕಾಗುತ್ತದೆ. ಆಡಳಿತದ ಯಾವುದೇ ಒಂದು ಹುದ್ದೆಗೆ ಹಲವಾರು ಅಭ್ಯರ್ಥಿಗಳು ಇರುತ್ತಾರೆ. ಅವರಲ್ಲಿ ಹೆಚ್ಚಿನ ಅರ್ಹತೆಗಳು ಆ ಹುದ್ದೆಯ ಆವಶ್ಯಕತೆಗಳಿಗೆ ಅನುಗುಣವಾಗಿ ಯಾರಿಗೆ ಇವೆಯೋ ಅವರು ನೇಮಕಗೊಳ್ಳಬೇಕಾದುದು ಸರಿಯಾದ ಕ್ರಮ.

ಇದರಿಂದ ಆಡಳಿತ ವ್ಯವಸ್ಥೆ ಸುಸೂತ್ರವಾಗಿ ನಡೆಯುತ್ತದೆ. ಸರ್ಕಾರದಲ್ಲಿ ಅಥವಾ ಸಂಘ – ಸಂಸ್ಥೆಯಲ್ಲಿ ಯಾವುದೇ ಒಂದು ಸ್ಥಾನ ಖಾಲಿಯಾದಾಗ ಅದಕ್ಕೆ ಕೆಲವು ಅರ್ಹತೆಗಳನ್ನು ಗೊತ್ತು ಮಾಡಿ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಪಡೆಯುವ ಮೂಲಕ ಯೋಗ್ಯ ವ್ಯಕ್ತಿಯನ್ನು ಆಯ್ಕೆ ಮಾಡಿಕೊಂಡು ಬರುವ ವ್ಯವಸ್ಥೆ ಆಗಬೇಕಾಗಿದೆ ಎನ್ನುವುದು ಸುಳ್ಳಲ್ಲ ಹಾಗಾದಾಗ ಮಾತ್ರ ಆ ಹುದ್ದೆಗೆ ಗೌರವ ಸೀಗುತ್ತದೆ.

ಕೊನೆಯ ಮಾತು

ಪ್ರಮಾಣಿಕವಾಗಿ – ನಿಷ್ಠಾವಂತರಾಗಿ ದುಡಿಯುವ ಯೋಗ್ಯ ವ್ಯಕ್ತಿಗಳನ್ನು ಗುರುತಿಸಿ ಜವಾಬ್ದಾರಿ ನೀಡುವುದು ಇಂದಿನ ದಿನಗಳಲ್ಲಿ ಅವಶ್ಯಕತೆ ಇದೆ. ಇದರಿಂದ ಸಮಾಜ ಮತ್ತು ದೇಶ ಅಭಿವೃದ್ಧಿ ಪಥದಲ್ಲಿ ಸಾಗಲು ಸಹಕಾರಿ ಆಗುತ್ತದೆ. ಇದಲ್ಲದೆ ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಸಹಬಾಳ್ವೆ ಸರ್ವರಲ್ಲಿಯೊ ಮೂಡುವ ಮೂಲಕ ಭವ್ಯ ಭಾರತದ ಉನ್ನತಿಗೆ ಸಾಕ್ಷಿಯಾಗಲಿದೆ.

(-ಸಂಗಮೇಶ ಎನ್ ಜವಾದಿ
ಕೊಡಂಬಲ.ಬೀದರ ಜಿಲ್ಲೆ.
9663809340)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ

Published

on

ಸುದ್ದಿದಿನ,ದಾವಣಗೆರೆ : 66/11 ಕೆ.ವಿ. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜೂನ್ 23 ರಂದು ಬೆಳಿಗ್ಗೆ 10 ರಿಂದ ಸಂಜೆ 5.30 ರವರೆಗೆÉ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಮಾಮಾಸ್ ಜಾಯಿಂಟ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಎಮ್.ಸಿ.ಸಿ.ಬಿ : ಶಾಬನೂರು ರಸ್ತೆ, ಎಸ್.ಎಸ್. ಲೇಔಟ್, ಎ ಬ್ಲಾಕ್, ಕುವೆಂಪು ನಗರ, ಬಾಟ್ಲಿ ಬಿಲ್ಡಿಂಗ್ ಸುತ್ತ ಮುತ್ತ, ಸಿದ್ದವೀರಪ್ಪ ಬಡಾವಣೆ, 1ನೇ ಅಡ್ಡ ರಸ್ತೆ ಯಿಂದ 7ನೇ ಅಡ್ಡರಸ್ತೆವರೆಗೆ, ಗ್ಲಾಸ್ ಹೌಸ್, ಬಾಪೂಜಿ ಬ್ಯಾಂಕ್ ಸಮುದಾಯ ಭವನದ ಹಿಂಭಾಗದ ಪ್ರದೇಶ , ಬಿ.ಐ.ಇ.ಟಿ. ಕಾಲೇಜು ಹಾಗೂ ಸುತ್ತ ಮುತ್ತ ಪ್ರದೇಶಗಳು.

ಮಂಡಿಪೇಟೆ, ಬೆನ್ನೆ ಕಂಪನಿ ರಸ್ತೆ, ಎಮ್ ಜಿ ರಸ್ತೆ, ಎನ್ ಆರ್ ರಸ್ತೆ, ಬೆಲ್ಲೌಡಿಹಲ್ಲಿ, ಮಹಾವೀರ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಬಿ.ಟಿ.: ಮಂಡಕ್ಕಿ ಬಟ್ಟಿ, 1 ರಿಂದ 10 ನೇ ಕ್ರಾಸ್, ಇಂದಿರಾ ನಗರ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲ್ ಮಾರ್ಸ್ ನಗರ, ಕೋಳಿ ಚನ್ನಪ್ಪ ಬಡಾವಣೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು, ಮೌನೇಶ್ವರ : ಹೆಚ್.ಕೆ. ಆರ್. ಸರ್ಕಲ್, ಕೆ.ಇ.ಬಿ ಕಾಲೋನಿ, ನಿಟುವಳ್ಳಿ ಹಾಗು ನಿಟುವಳ್ಳಿ ಹೊಸಬಡಾವಣೆ, ಮೌನೇಶ್ವರ ಬಡಾವಣೆ, ಸೈಯದ್ ಪೀರ್ ಬಡಾವಣೆ, ಐ.ಟಿ.ಐ. ರಿಂಗ್ ರಸ್ತೆ, ಜಯನಗರ, ದುರ್ಗಾಂಬಿಕ ದೇವಸ್ಥಾನ ಸುತ್ತಮುತ್ತ.

ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಭಗೀರಥ ಸರ್ಕಲ್, ಕಾಳಿಕಾಂಬ ದೇವಸ್ಥಾನ, ಶಕ್ತಿನಗರ, ಹಾಗು ಇ.ಎಸ್.ಐ ಆಸ್ಪತ್ರೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳ, ಪಿ.ಬಿ. ರಸ್ತೆ., ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಕೆಟಿಜೆ: ಶ್ರೀ ಮುರಘ ರಾಜೇಂದ್ರ ಸ್ವಾಮಿಗಳ ಮಠ, ಜಾಧವ್ ಕ್ಲಿನಿಕ್ ಸುತ್ತ ಮುತ್ತ , ಶಿವಪ್ಪ ವೃತ್ತದಿಂದ ಜಯದೇವ ವೃತ್ತದವರೆಗೆ ಹಾಗು ಸುತ್ತಮುತ್ತ ಪ್ರದೇಶಗಳು, ಪಿಜೆ: ಪೋಲೀಸ್ ಕ್ವಾಟ್ರಸ್, ತುಂಗ, ಭದ್ರ, ಸರಸ್ವತಿ, ಕೃಷ್ಣ ಬ್ಲಾಕ್, ಅರುಣಾ ಸರ್ಕಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಸಿಜಿಹೆಚ್: ಎಮ್.ಸಿ.ಸಿ. ಎ ಬ್ಲಾಕ್, ನ್ಯಾಯಾಧೀಶರ ವಸತಿ ಗೃಹಗಳು, ತೊಗಟವೀರ ಕಲ್ಯಾಣ ಮಂದಿರ, ವಿನೋಬ ನಗರ 1ನೇ ಮುಖ್ಯ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಎಸ್.ಎಸ್. ಬಡಾವಣೆ, ಎ ಬ್ಲಾಕ್, ಶಾಂತಿ ನಗರ, ಕುಂದುವಾಡ ರಸ್ತೆ, ಮಹಾನಗರ ಪಾಲಿಕೆ ಕುಡಿಯುವ ನೀರಿನ ಸ್ಥಾವರ, ಬಸವೇಶ್ವರ ಬಡಾವಣೆ, ಮಹಾಲಕ್ಷ್ಮೀ ಬಡಾವಣೆ, ಬಾಲಾಜಿ ನಗರ, ಕುಂದುವಾಡ ಕೆರೆ ಹಾಗು ಸುತ್ತಮುತ್ತ ಪ್ರದೇಶಗಳು.

ಕರೂರು ಇಂಡಸ್ಟ್ರಿಯಲ್ ಏರಿಯಾ, ಡಿ.ಸಿ. ಕಛೇರಿ, ಜಿ.ಎಂ.ಐ.ಟಿ. ಬಸವೇಶ್ವರ ನಗರ, ರಶ್ಮೀ, ಹರಿಹರ ರಸ್ತೆ, ವಿಜಯ ನಗರ, ಅಶೋಕ ನಗರ, ಆರ್.ಟಿ.ಓ. ಕಛೇರಿ, ಎಸ್.ಪಿ. ಕಛೇರಿ, ರಿಂಗ್ ರಸ್ತೆ, ಶಿಬಾರ, ಎಸ್.ಎಂ.ಕೆ. ನಗರ, ಹಾಗೂ ಚಿತ್ತನಹಳ್ಳಿ, ಕಕ್ಕರಗೊಳ್ಳ, ಆವರಗೊಳ್ಳ, ನೀಲನಹಳ್ಳಿ, ದೇವರಹಟ್ಟಿ, ದೊಡ್ಡಬಾತಿ, ಹಳೆಬಾತಿ, ನಾರಾಯಣ ಕ್ಯಾಂಪ್, ಯರಗುಂಟಾ, ಕೋಡಿಹಳ್ಳಿ, ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮಾಗಾನಹಳ್ಳಿ, ಮಾಗಾನಹಳ್ಳಿ ಕ್ಯಾಂಪ್, ಓಬಜ್ಜಿಹಳ್ಳಿ, ಓಬಜ್ಜಿಹಳ್ಳಿ ಕ್ಯಾಂಪ್, ಕಡ್ಲೇಬಾಳು, ಹಳೆಕಡ್ಲೆಬಾಳು, ಮಾಳಗೊಂಡನಹಳ್ಳಿ, ಅರಸಾಪುರ, ಬದುನಾಯಕನತಾಂಡ, ಚಿಕ್ಕಓಬಜ್ಜೀಹಳ್ಳಿ, ದೊಡ್ಡಓಬಜ್ಜೀಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮ್ಯಾಸರಹಳ್ಳಿ, ಗುಮ್ಮನೂರು, ಹುಣಸೆಕಟ್ಟೆ, ಮುಡೇನಹಳ್ಳಿ, ಕೆಂಚಮ್ಮನಹಳ್ಳಿ, ಹೊಸಹಳ್ಳಿ, ಕಾಟಿಹಳ್ಳಿ.

ಮಂಡಲೂರು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಹನುಮನಹಳ್ಳಿ, ಕೊಗ್ಗÀನೂರು, ಹನುಮನಹಳ್ಳಿ, ಆನಗೋಡು, ಹೆಬ್ಬಾಳು, ನೀರ್ಥಡಿ, ಶಿವಪುರ, ಹಾಲುವರ್ತಿ, ಗಂಗನಕಟ್ಟೆ, ನೇರ್ಲಿಗಿ, ಚಿನ್ನಸಮುದ್ರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಮತ್ತು ಆರಾಧ್ಯಾ ಕೈಗಾರಿಕೆ, ಅತ್ತಿಗೆರೆ, ಕುರ್ಕಿ, ಬಾಡ, ಕಬ್ಬೂರು, ಹೀರೆತೊಗಲೇರಿ, ಗೊಪಾನಾಳು, ಕಂದ್ಗಲ್, ರಾಮಗೊಂಡನಹಳ್ಳಿ, ಕಾಶೀಪುರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಆರ್.ಎಂ.ಸಿ. ಲಿಂಕ್ ರಸ್ತೆ, ಬಿ.ಟಿ. ಲೇಔಟ್, ಗುಜರಿ ಲೈನ್, ಬಂಬೂ ಬಜಾರ್, ಮಟ್ಟಿಕಲ್, ಬಿಡಿಓ ಕಛೇರಿ, ಇಮಾಮ್ ನಗರ, ಅಮರಪ್ಪನ ತೋಟ.

ಆನೆಕೊಂಡ, ಎಲ್.ಬಿ.ಎಸ್. ನಗರ.ಟಿ.ಸಿ. ಲೇಔಟ್, ಬಿಟಿ ಲೇಔಟ್, ಕೆ.ಆರ್. ರಸ್ತೆ, ಇಮಾಮ್ ನಗರ, ಆನೆಕೊಂಡ, ಐನಳ್ಳಿ ಕಾಂಪೌಂಡ್, ಎಪಿಎಂಸಿ, ಭಾರತ್ ಕಾಲೋನಿ, ಶೇಖ್ರಪ್ಪ ನಗರ ಹೆಚ್.ಕೆ.ಆರ್. ನಗರ, ಕಬ್ಬೂರು ಬಸಾಪುರ ನಗರ, ಆಣ್ಣಾ ನಗರ, ಬಸಾಪುರ ರಸ್ತೆ, ಗೋಶಾಲೆ, ಪಿ.ಬಿ. ರಸ್ತೆ, ರವಿ ಮಿಲ್ ಹಾಗೂ ಆವರಗೆರೆ, ಹೊನ್ನೂರು, ಐಗೂರು, ಮಲ್ಲಶೆಟ್ಟಿಹಳ್ಳಿ, ತೊಳಹುಣಸೆ, ದಾವಣಗೆರೆ ವಿಶ್ವವಿದ್ಯಾಲಯ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿದ್ಯಾರ್ಥಿಗಳು ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು: ಹೆಚ್ ಎನ್ ಶಿವಕುಮಾರ್

Published

on

ಸುದ್ದಿದಿನ,ರಾಣೇಬೆನ್ನೂರ: ಸಾಮಾಜಿಕ ಹಾಗೂ ಶೈಕ್ಷಣಿಕ ಜವಾಬ್ದಾರಿಗಳ ಅಗತ್ಯವು ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.ಸದಾಕಾಲ ಜ್ಞಾನವನ್ನು ಪಡೆಯುವ ತನಕ ಹೊಂದಿ ಜ್ಞಾನಿಗಳಾಗುವ ಗುರಿ ಹೊಂದಲು ಬಾಪೂಜಿ ಮಹಾವಿದ್ಯಾಲಯ ಉಪ ಪ್ರಾಚಾರ್ಯರಾದ ಎಚ್ ಎನ್ ಶಿವಕುಮಾರ್ ನುಡಿದರು.

ಅವರು ಸ್ಥಳೀಯ ಬಿಎಜೆಎಸ್ಎಸ್ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ಪುರಸ್ಕಾರ, ಬಿಳ್ಕೋಡಿಗೆ ಕಾರ್ಯಕ್ರಮ ಮತ್ತು ವಿದ್ಯಾರ್ಥಿ ಒಕ್ಕೂಟದ, ಎನ್ ಎಸ್ ಎಸ್ ಚಟುವಟಿಕೆ, ಯುವ ರೆಡ್ ಕ್ರಾಸ್ ಘಟಕದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ವಿಶೇಷ ಅತಿಥಿಗಳಾಗಿ ಉಪಸ್ಥಿತರಿದ್ದ ಬಿಎ ಜೆಎಸ್ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಅಧಿಕಾರಿಗಳು ಡಾ.ಆರ್ ಎಂ ಕುಬೇರಪ್ಪ ಮಾತನಾಡಿ ವಿದ್ಯೆಯನ್ನು ವಿನಯದಿಂದ ವಿದ್ಯೆಕಲಿಯಬೇಕು ಸಂಸ್ಕಾರವಂತರಾಗ ಬೇಕು, ಸಂಸ್ಕಾರ ಹೊಂದಿರುವ ವ್ಯಕ್ತಿಗಳು ಪುರಸ್ಕಾರ ಪಡೆದರೆ ಸಂಸ್ಕಾರ ಇಲ್ಲದವರು ಸಮಾಜದಲ್ಲಿ ತಿರಸ್ಕಾರಕ್ಕೆ ಒಳಗಾಗುವರು.ನಿಮ್ಮ ಬದುಕನ್ನು ನೀವೆ ಕಟ್ಟಿಕೊಳ್ಳುವ ನೆಲೆಯಲ್ಲಿ ಪ್ರಯತ್ನಿಸಬೇಕು ಎಂದು ನುಡಿದರು.

ಪ್ರಾಚಾರ್ಯರಾದ ಪ್ರಕಾಶ್ ಬಸಪ್ಪನವರ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಎಚ್ ಎನ್ ಭೀಕ್ಷಾವರ್ತಿಮಠ ಹಾಗೂ ಕೆ ಕೆ ಹಾವಿನಾಳ ರವರು ವಿದ್ಯಾರ್ಥಿಗಳಿಗೆ ಹಿತವಚನ ನುಡಿದರು.ಆರಂಭದಲ್ಲಿಪ್ರೋ.ಎಂ ಡಿ ಹೊನ್ನಮ್ಮನವರ ಸ್ವಾಗತಿಸಿದರು.ಪ್ರೋ.ಶ್ರೀಕಾಂತ ಕುಂಚೂರ, ಪ್ರಾಸ್ತಾವಿಕ ಮಾತನಾಡಿ ವಾರ್ಷಿಕ ವರದಿ ವಾಚಿಸಿದರು.

ಕೊನೆಯಲ್ಲಿ ಪ್ರೋ.ಪುಷ್ಟಾ ಕಬ್ಬಿನಾಲೆ ವಂದಿಸಿದರು.ಇದೆ ಸಮಾರಂಭದಲ್ಲಿ ಕ್ರೀಡೆ, ಸಾಂಸ್ಕೃತಿಕ, ಸಾಮಾಜಿಕ ಸೇವೆಗಳಲ್ಲಿವಿದ್ಯಾರ್ಥಿಗಳ ಸಾಧನೆ ಗುರುತಿಸಿ ಪುರಸ್ಕಾರ ಮಾಡಲಾಯಿತು.ವರ್ಷದ ಮಹಾವಿದ್ಯಾಲಯ ಉತ್ತಮ ವಿದ್ಯಾರ್ಥಿಗಳನ್ನು ಗುರುತಿಸಿ ಪುರಸ್ಕಾರ ಪ್ರದಾನ ಮಾಡಲಾಯಿತು.ವಿವಿಧ ವಿಷಯದ ಉಪನ್ಯಾಸಕರು, ವಿದ್ಯಾರ್ಥಿಗಳು, ಸಿಬ್ಬಂದಿ ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪಿಂಚಣಿ ದಾರರು ಸಕಾಲದಲ್ಲಿ ಜೀವಂತ ಪ್ರಮಾಣ ಪತ್ರ ಸಲ್ಲಿಸಿ

Published

on

ಸುದ್ದಿದಿನ,ದಾವಣಗೆರೆ: ಪಿಂಚಣಿ ಪಡೆಯಲು ಜೀವಂತ ಸದಸ್ಯರ ಪ್ರಮಾಣ ಪತ್ರಗಳು ಕಡ್ಡಾಯವಾಗಿರುವುದರಿಂದ ಸಕಾಲಕ್ಕೆ ಸೂಕ್ತ ದಾಖಲಾತಿಗಳನ್ನು ನೀಡುವ ಮೂಲಕ ಸಹಕರಿಸಿ ಎಂದು ಉಪ ಮಹಾಲೇಖಪಾಲರಾದ ಸಚ್ಚಿನ್ ಕೃಷ್ಣ ಕೌಶಿಕ್ ತಿಳಿಸಿದರು.

ಶುಕ್ರವಾರ ಜೂನ್(19) ‌ಬೆಂಗಳೂರಿನ ಮಹಾಲೇಖಪಾಲರು ದಾವಣಗೆರೆ ಜಿಲ್ಲಾ ಖಜಾನೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಾಮಾನ್ಯ ಭವಿಷ್ಯ ನಿಧಿ ಹಾಗೂ ಲೆಕ್ಕಪತ್ರ ಸಮಸ್ಯೆಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಪಿಂಚಣಿದಾರರು ತಮ್ಮ ಎಲ್ಲಾ ಬ್ಯಾಂಕ್‌ಗೆ 2ನೇ ವಾರ ಭೇಟಿ ನೀಡಿದರೆ ನಿಮ್ಮ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸಲಾಗುವುದು. ಜೀವಂತ ಸದಸ್ಯರ ದೃಢೀಕರಣ ಪತ್ರವನ್ನು ಪಡೆಯಲು ಸೈಬರ್‌ಕೆಫೆ ಇನ್ನಿತರ ಕೇಂದ್ರಗಳಿಗೆ ಅಲೆಯುವ ಅವಶ್ಯಕತೆ ಇಲ್ಲ. ನೀವು ಮನೆಯಲ್ಲಿ ಮೊಬೈಲ್‌ನಲ್ಲಿ ಅಫ್ ಲೋಡ್ ಮಾಡಿ ಪಡೆಯಬಹುದು. ಮತ್ತು ನಿಮ್ಮ ಸಮಸ್ಯೆಗಳನ್ನು ತಿಳಿಸುವಾಗ ಅರ್ಜಿಯಲ್ಲಿ ಇ-ಮೇಲ್ ವಿಳಾಸ, ಮೊಬೈಲ್ ನಂಬರ್‌ನ್ನು ಕಡ್ಡಾಯವಾಗಿ ನಮೂದಿಸಿದರೆ, ಇದರಿಂದ ನಿಮಗೆ ಮಾಹಿತಿ ನೀಡಲು ಅನುಕೂಲವಾಗುತ್ತದೆ ಎಂದರು.

ಪಿಂಚಣಿ ಅದಾಲತ್ ಎನ್ನುವುದು ನಿವೃತ್ತ ನೌಕರರು ಮತ್ತು ಪಿಂಚಣಿದಾರರ ದೀರ್ಘಕಾಲದ ಬಾಕಿ ಉಳಿದಿರುವ ಸಮಸ್ಯೆಗಳನ್ನು ಅಥವಾ ಕುಂದುಕೊರತೆಗಳನ್ನು ಪರಿಹರಿಸಲು ವಿಶೇಷ ವೇದಿಕೆಯಾಗಿದೆ. ಸ್ಥಳದಲ್ಲೇ ಅರ್ಜಿಗಳನ್ನು ಪರಿಶೀಲಿಸಿ, ಬ್ಯಾಂಕ್‌ ಅಧಿಕಾರಿಗಳ ಸಮ್ಮುಖದಲ್ಲಿ ತ್ವರಿತವಾಗಿ ಸಮಸ್ಯೆಗಳನ್ನು ಬಗೆಹರಿಸುವುದು ಇದರ ಮುಖ್ಯ ಉದ್ದೇಶವಾಗಿದೆ.

ಮಹಾಲೇಖಪಾಲರ ಕಚೇರಿಯ ಹಿರಿಯ ಲೆಕ್ಕಪರಿಶೋಧನಾ ಅಧಿಕಾರಿ ನಾಗಸೇನಾ.ಟಿ.ವಿ, ಮತ್ತು ಪದ್ಮವತಿ, ಜಿಲ್ಲಾ ಖಜಾನೆಯ ಉಪನಿರ್ದೇಶಕರಾದ ರಮೇಶ್ ಅರೆಮಲ್ಲಾಪುರ, ಸಹಾಯಕ ಲೆಕ್ಕಪರಿಶೋಧನಾ ಆಧಿಕಾರಿ ಚಂದನ್ ಮತ್ತು ಜಾಬ್‌ಲೀನೋ, ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending