Connect with us

ದಿನದ ಸುದ್ದಿ

ಅರ್ಹತೆಗೆ ಅವಕಾಶ ಕೊಡಿ

Published

on

  • ಸಂಗಮೇಶ ಎನ್ ಜವಾದಿ

ವ್ಯಕ್ತಿಯೊಬ್ಬ ಒಂದು ಹುದ್ದೆ ಪಡೆಯಲು ಅರ್ಹತೆ ಸಾಕಾ ಅಥವಾ ಜಾತಿ,ಧರ್ಮ,ಹಣ ಹಾಗೂ ಶಿಫಾರಸ್ಸು ಬೇಕಾ ? ಎನ್ನುವ ಮಾತುಗಳು ಎಲ್ಲಡೇ ಈಗ ಕೇಳಿ ಬರುತ್ತಿವೆ ಅಲ್ಲವೇ ? ಹಾಗಾದರೆ ಅರ್ಹತೆ ಒಂದು ಇದ್ದರೆ ಸಾಕೇ ? ಎನ್ನುವ ಕೆಲ ಮಾತುಗಳು ತಮ್ಮ ಮುಂದೆ ಹಂಚಿಕೊಳ್ಳಲು ಪ್ರಮಾಣಿಕವಾಗಿ ಪ್ರಯತ್ನ ಮಾಡಿರುವೆ.

ಯಾವುದೇ ಒಂದು ಪಕ್ಷದ ಅಥವಾ ಸಮಾಜಿಕ ಸಂಘಟನೆಗಳ ಜವಾಬ್ದಾರಿ ಪಡೆಯುವ ಕುರಿತು ಮತ್ತು ವಿವಿಧ ಸಮಾಜ ಮುಖಿ ಸೇವೆಗಳ ಜವಾಬ್ದಾರಿಗಳ ಸ್ಥಾನಕ್ಕೆ ಸಧ್ಯ ನಡೆಯುತ್ತಿರುವ ಸ್ಪರ್ಧೆಯನ್ನು ಗಮನಿಸಿದರೆ ಈ ಪ್ರಶ್ನೆಗಳು ಮತ್ತೆ ಮತ್ತೆ ನಮ್ಮ ಕಣ್ಮುಂದೆ ಬರುತ್ತಿವೆ.ಹಾಗಾದರೆ ಅರ್ಹತೆ ಇದ್ದರು ಕೂಡಾ ಪ್ರಮುಖ ಸ್ಥಾನಕ್ಕೆ ಅದೊಂದೇ ಸಾಲದೇನೋ ಎಂದು ಜಾತಿಯ ಜೊತೆಗೆ ದೊಡ್ಡವರ ಶಿಫಾರಸ್ಸು ಸಹ ಸೇರಿಸಿಕೊಳ್ಳಲು ಪ್ರಯತ್ನಿಸಬೇಕಾದ ಸಂದರ್ಭವೊಂದು ಈಗ ಉಂಟಾಗಿದೆ ಎನ್ನಬಹುದು.

ಇಂತಹ ಸಮಸ್ಯೆಗಳು ಎದುರಿಸುತ್ತಿರುವವರು ಕೆಲವರು(ಬೆರಳಣಿಕೆಯಷ್ಟು) ಮಾತ್ರ ಎಂದೇ ಹೇಳಬೇಕು, ಆದಕಾರಣ ಇಂದಿನ ದಿನಗಳಲ್ಲಿ ನಿಸ್ವಾರ್ಥ ಸೇವೆಗೆ ಸಂದಿಗ್ಧತೆಯ ಸಮಯದ ಕಾಲವಿದು ಎಂದೇ ಹೇಳಬೇಕಾಗುತ್ತದೆ.

ಹೀಗಾಗಿ ಶಿಫಾರಸ್ಸು ಇಲ್ಲದೇ ಹೋರಾಟದ ನೆಲೆಯಿಂದ ಮುಂಚೂಣಿಗೆ ಬಂದವರಿಗೆ ಸಧ್ಯದ ದಿನಮಾನಗಳಲ್ಲಿ ಗೌರವ, ಬೆಲೆ ಇಲ್ಲ ಎನ್ನುವ ಸತ್ಯ ಸಂಗತಿಯ ಮಾತುಗಳು ಈಗ ಎಲ್ಲಾ ಕಡೆ ಕೇಳಿ ಬರುತ್ತಿವೆಯಾದರೂ ರಾಜಕೀಯದಲ್ಲಿ ಇದೊಂದೇ ಸಾಲದು, ಜಾತಿಯ ಬಲದ ಜೊತೆಗೆ ಹಣವೂ ಬೇಕೇ ಬೇಕೆಂಬುವುದು ಸುಳ್ಳಲ್ಲ , ಹಾಗಾಗಿ ಈ ಎಲ್ಲಾ ಸಂಗತಿಗಳನ್ನು ಸೊಕ್ಷ್ಮವಾಗಿ ಗಮನಿಸಿದರೆ ಬಡವರಿಗೆ, ನಿಷ್ಠಾವಂತ ಕಾರ್ಯಕರ್ತರಿಗೆ ಇಂದಿನ ದಿನಗಳಲ್ಲಿ ನ್ಯಾಯ ಮತ್ತು ಅಧಿಕಾರ ಸೀಗುವುದು ಕಷ್ಟ ಅನಿಸುತ್ತದೆ.

ವ್ಯಕ್ತಿಯ ಅರ್ಹತೆಯನ್ನಷ್ಟೇ ಪರಿಗಣಿಸಿ ಹುದ್ದೆಗಳನ್ನು ನೀಡುವಂತಿದ್ದರೆ, ಇತರ ಯಾವ ಅರ್ಹತೆಗಳೂ ಮುಖ್ಯವಾಗುವುದಿಲ್ಲ. ಆದರೆ, ರಾಜಕೀಯದಲ್ಲಿ ಅರ್ಹತೆಗೆ ಇರೋದು ಕೊನೆಯ ಸ್ಥಾನ. ವ್ಯಕ್ತಿಯ ಜಾತಿ, ವರಿಷ್ಠರೊಂದಿಗಿನ ಸಂಬಂಧ, ಹಣ ಮುಂತಾದವು ಮೊದಲ ಸ್ಥಾನದಲ್ಲಿ ಬರುತ್ತವೆ. ಹೀಗಾಗಿ ಬಹುತೇಕ ಅರ್ಹರು ಉನ್ನತ ಹುದ್ದೆಗಳಿಗೆ ಅರ್ಹರಾಗುವುದೇ ಇಲ್ಲ. ಆ ಅಪಾಯ ಈಗ ಅರ್ಹತೆ ಇದ್ದವರಿಗೆ ಎದುರಾಗಿದೆ ಅಲ್ಲವೇ ? ಏನೋ ಮಾಡುವುದು ಹೇಳಿ ಬಂಧುಗಳೆ !.

ಹಾಗೆ ನೋಡಿದರೆ, ಸಮಾಜ ಮುಖಿ ಸೇವೆಗಳ ಜವಾಬ್ದಾರಿ ಹೊರಲು ಎಲ್ಲರಿಗಿಂತ ಹೆಚ್ಚು ಅರ್ಹ ನಿಸ್ವಾರ್ಥ ಸೇವೆಯ, ಮನೋಭಾವ – ಮನೋಧರ್ಮದ ವ್ಯಕ್ತಿ ಎನ್ನುವುದು ಸತ್ಯ ಹೌದು ಅಲ್ಲವೇ. ಯಾವುದೇ ಗಾಡ್ ಫಾದರ್ ನೆರವಿಲ್ಲದೇ, ಕೇವಲ ಹೋರಾಟದ ನೆಲೆಗಟ್ಟಿನಿಂದಲೇ ರಾಜಕೀಯ ಹಾಗೂ ಸಮಾಜಿಕ ಕ್ಷೇತ್ರದ ಮೊಗಸಾಲೆಯನ್ನು ಪ್ರವೇಶಿಸಿ ನಾಡಿನ ಸೇವೆಯನ್ನು ನಿರಂತರವಾಗಿ ಮಾಡಿಕೊಂಡು ಬರುತ್ತಿರುವ ಪ್ರತಿಭೆಗಳನ್ನು ಗುರುತಿಸದೇ ಹೋದರೆ ಹೇಗೆ ?.

ಇವೆಲ್ಲಾ ಕಾರಣಗಳನ್ನು ಕಂಡರೆ
ಇಂದಿನ ಸ್ವಾರ್ಥ ಹೀನ ಪರಿಸ್ಥಿತಿ ನೋಡಿ ನಮಗೆ ಕನಿಕರ ಉಂಟಾಗುತ್ತಿದೆ ಮತ್ತು ಅರ್ಹತೆ ಇದ್ದರು ಹೋರಾಟ ನಡೆಸುವ ಅನಿವಾರ್ಯ ಪರಿಸ್ಥಿತಿ ಸಧ್ಯ
ಜೋರಾಗಿ ಕಂಡು ಬರುತ್ತಿರುವುದೇ ಅತ್ಯಂತ ಖೇದಕರ ವಿಷಯವಾಗಿದೆ. ಹಾಗಾಗಿ ಮೌಲ್ಯಾಧಾರಿತ ಸೈದ್ಧಾಂತಿಕ ನಿಲುವಿಗೆ ಬದ್ಧರಾಗುವ ಮೂಲಕ ಸೇವೆಯಲ್ಲಿ ಗುರುತಿಸಿಕೊಂಡವರು.

ದೇಶ/ಕನ್ನಡ ಪರ ನಿಲುವನ್ನು ನಿರ್ಭಿಡೆಯಿಂದ ಪ್ರಕಟಿಸುತ್ತ ಬಂದಂಥವರು. ಇನ್ನೂ ಚಿಕ್ಕ ವಯಸ್ಸು, ದೊಡ್ಡ ಉತ್ಸಾಹ ಇರುವ ಸೇವಕರು, ವಿವಿಧ ಸಂಘಟನೆಗಳ ಸಕ್ರಿಯ ಕಾರ್ಯಕರ್ತರ ಪಡೆಯನ್ನು ಹೊಂದುವ ಮೂಲಕ ನಿಸ್ವಾರ್ಥ ಸೇವೆಯಲ್ಲಿ ಮೂಂಚುಣಿಯಲ್ಲಿ ಇದ್ದವರು. ಸರ್ವ ಜನಾಂಗದ ಜನರ ಮೆಚ್ಚುಗೆಗೆ ಪಾತ್ರವಾಗಿರುವ ಹಾಗೂ ಸಂಘಟನೆಯನ್ನು ಬಲಪಡಿಸುವ ಉತ್ಸಾಹ, ಸಾಮರ್ಥ್ಯ ಹೊಂದಿರುವ ಕೆಚ್ಚೆದೆಯ ಪ್ರತಿಭೆಗಳು. ಅವರ ಸೇವೆಯ ನಿಷ್ಠೆಗೆ ಕೊರತೆಯಿಲ್ಲ ಜೊತೆಗೆ ಯಾವುದೇ ವಿವಾದಗಳಲ್ಲಿಯೂ ಸಿಲುಕದೇ ಇರುವ ಹೋರಾಟಗಾರರು‌ ಇವರಾಗಿದ್ದಾರೆ ಎನ್ನುವುದು ಮರೆಯಬೇಡಿ.

ಆದ್ದರಿಂದ ಪ್ರಮುಖ ಜವಾಬ್ದಾರಿ ಪಡೆಯಲು ಇದಕ್ಕಿಂತ ಹೆಚ್ಚಿನ ಅರ್ಹತೆಗಳು ಬೇಕಾ? ನಾಯಕನಾಗಬಲ್ಲವರಲ್ಲಿ ಇರುವಂತಹ ಸೂಕ್ಷ್ಮಪ್ರಜ್ಞೆ ಇವರಲ್ಲಿ ಪ್ರಮುಖವಾಗಿ ಎದ್ದು ಕಾಣುತ್ತಿದೆಯಲ್ಲಾ. ಸದಾ ಚುರುಕಾಗಿ ಓಡಾಡುತ್ತ, ಜನಪರ ಹೋರಾಟಗಳಲ್ಲಿ ಪಾಲ್ಗೊಳ್ಳುತ್ತಾ, ಸದಾ ಸಮಾಜ ಸೇವೆಯಲ್ಲಿ ತೋಡಗಿಸಿಕೊಂಡು, ನೂರಾರು ಹೋರಾಟಗಳು ಮಾಡುವ ಮೂಲಕ ನಾಡಿನಲ್ಲಿ ಮನೆಮಾತಾಗಿರುವವರನ್ನು ಗುರುತಿಸಿ ಜವಾಬ್ದಾರಿ ನೀಡುವುದು ಶ್ರೇಷ್ಠವಲ್ಲವೇ ಹಾಗೂ ಜೊತೆ ಜೊತೆಗೆ
ನಾಡು ಮತ್ತು ನುಡಿಗೆ ಸಂಬಂಧಿಸಿದ, ಇನ್ನಿತರ ಹಲವಾರು ಪ್ರಮುಖ ವಿಷಯಗಳ ಕುರಿತು ವ್ಯಾಪಕ ಹೋರಾಟಗಳನ್ನೂ ಮಾಡಿದವರಿಗೆ ಒಂದೊಳ್ಳೆಯ ಅವಕಾಶ ನೀಡುವುದು ಅತ್ಯುತ್ತಮ ವಲ್ಲವೇ!.

ಇಂತಹವರಿಗೆ ಜವಾಬ್ದಾರಿ ಕೊಡದೇ ಹೋದರೆ ಮತ್ಯಾರಿಗೆ ಜವಾಬ್ದಾರಿ ನೀಡುತ್ತಾರೆ.ಅರ್ಹತೆಯೊಂದೇ ಹುದ್ದೆಗೆ ಮಾನದಂಡವಾಗಬೇಕೆಂಬ ಛಲ ನಮ್ಮದು.ಅಂದಗಾಲೇ ಈ ಸಮಾಜ ಅಭಿವೃದ್ಧಿ ಪಥದಲ್ಲಿ ಸಾಗಲು ಶಕ್ತವಾಗುತ್ತದೆ. ಆದಕಾರಣ ಅಧಿಕಾರಸ್ಥ ಪಕ್ಷದಲ್ಲಿ ಸಾಕಷ್ಟು ಪ್ರಮುಖ ಹುದ್ದೆಗಳಿರುತ್ತವೆ. ಆ ಪೈಕಿ ಕೆಲವನ್ನಾದರೂ ಅರ್ಹತೆ ಆಧರಿಸಿ ನೀಡುವಂತಾಗಬೇಕು. ಮುಖ್ಯವಾಗಿ ಜನಪರ ಹೋರಾಟಗಳಲ್ಲಿ ಗುರುತಿಸಿಕೊಂಡವರು ಹಾಗೂ ಉತ್ಸಾಹಿಗಳಿಗೆ ಅಂತಹ ಹುದ್ದೆಗಳನ್ನು ನೀಡುವ ಮೂಲಕ ಅವರನ್ನು ಪ್ರೋತ್ಸಾಹಿಸಬೇಕು.

ಅದರಿಂದ ಪಕ್ಷಕ್ಕೂ/ಸಮಾಜಕ್ಕೂ/ಸಂಘಟನೆಗೂ ಅನುಕೂಲ ವಾಗುವುದರಲ್ಲಿ ಯಾವುದೇ ಅನುಮಾನವಿಲ್ಲ.ಸೊಕ್ತ ಅರ್ಹ ಅಭ್ಯರ್ಥಿಗಳನ್ನು ,ಹಿರಿಯರು ಗುರುತಿಸಿ ಗೌರವಿಸುವ ಕೆಲಸ ಶೀಘ್ರವಾಗಿ ಮಾಡುವ ಮೂಲಕ ಇಂತಹ ವ್ಯಕ್ತಿಯನ್ನು ಪ್ರೋತ್ಸಾಹಿಸಿ ಬೆಳೆಸಿದರೆ, ಅದರಿಂದ ಸಮಾಜ ಮತ್ತು ನಾಡಿಗೆ ಹೆಚ್ಚು ಅನುಕೂಲವಾಗುತ್ತದೆ. ಆ ವಿವೇಚನೆಯನ್ನು ಸಂಬಂಧ ಪಟ್ಟ ಹಿರಿಯರು ತೋರುವ ಮೂಲಕ ಯುವ ಪ್ರತಿಭೆಗಳಿಗೆ ಅವಕಾಶ ನೀಡಬೇಕು.

ಪ್ರಮುಖ ಜವಾಬ್ದಾರಿಗಳನ್ನು ಉತ್ತಮರಿಗೆ ನೀಡಿದರೆ, ಸ್ಥಗಿತಗೊಂಡಂತಿರುವ ಇತರ ಚಟುವಟಿಕೆಗಳು ಮತ್ತೆ ಚುರುಕಾಗಲು ಅವಕಾಶವಾಗುತ್ತದೆ.ಹೀಗಾಗಿ ಅರ್ಹತೆ ಪರಿಗಣಿಸಿ ಪ್ರಮುಖ ಸ್ಥಾನ ನೀಡುವುದು ಹಿರಿಯರಿಗೆ ಬಿಟ್ಟಿರುವ ವಿಚಾರ.

ಏಕೆಂದರೆ, ಅರ್ಹ ವ್ಯಕ್ತಿ ಯಾವ ಪಕ್ಷದಲ್ಲಿದ್ದರೂ ಉತ್ತಮ ಕೆಲಸವನ್ನೇ ಮಾಡುತ್ತಾರೆ. ಅಭಿವೃದ್ಧಿ ಮೂಲಕ ಹೊಸ ಸಂಚಲನೆಯೊಂದು ರಾಜ್ಯದಲ್ಲಿ ಸೃಷ್ಟಿಸುತ್ತಾರೆ ಎಂಬ ಬಲವಾದ ಭಾವನೆ ನಮ್ಮದು. ಆ ದಿಸೆಯಲ್ಲಿ ಸಂಬಂಧ ಪಟ್ಟ ಮಹನೀಯರು ಅನ್ಯತಾ ಭಾವಿಸದೇ, ಮುಕ್ತ ಮನಸ್ಸಿನಿಂದ ಯೋಚನೆ ಮಾಡಲಿ,ಮಾಡುವ ಮೂಲಕ ಪ್ರತಿಭೆಗಳಿಗೆ ಅವಕಾಶ ಕೊಡಲಿ ಎನ್ನುವ ಆಶಾವಾದ ನಮ್ಮದಾಗಿದೆ.

ಅರ್ಹತೆ ಎಂದರೆ (ನನ್ನ ದೃಷ್ಟಿಯಲ್ಲಿ)

ನಿಸ್ವಾರ್ಥ ಸೇವೆಯ ಅರ್ಹತೆಗಳ ಜೊತೆಗೆ ಅಭ್ಯರ್ಥಿಗಳು ಕೆಲವು ವಿಶೇಷ ಅರ್ಹತೆಗಳನ್ನು ಪಡೆದಿರಬೇಕು. ಮೊದಲನೆಯದು ವಿದ್ಯಾ ಅರ್ಹತೆ. ಈ ಅರ್ಹತೆ ಅಭ್ಯರ್ಥಿಯ ಶಿಕ್ಷಣಕ್ಕೆ ಸಂಬಂಧಿಸಿದುದು. ಪ್ರತಿಯೊಬ್ಬ ಅಭ್ಯರ್ಥಿಯೂ ನಿಯಮಿತ ವಿದ್ಯಾ ವ್ಯಾಸಂಗ ಮಾಡಿರಬೇಕು.

ಎರಡನೆಯದು ವೈಯಕ್ತಿಕ ಗುಣಗಳು, ಪ್ರಾಮಾಣಿಕತೆ, ನಿಷ್ಕಾಪಟ್ಯ, ನೈಪುಣ್ಯ, ಧೈರ್ಯ ಮತ್ತು ಸಂಘಟನಾ ಸಾಮರ್ಥ್ಯ ಹೊಂದುವುದು ಅತಿ ಅವಶ್ಯ. ಇವುಗಳನ್ನು ಕಂಡು ಹಿಡಿಯುವುದಕ್ಕೋಸ್ಕರ ಸಾಮೂಹಿಕ ಪರೀಕ್ಷೆ, ಮನಶಾಸ್ತ್ರೀಯ ಸಂಬಂಧ ಪರೀಕ್ಷೆ ಮುಂತಾದುವುಗಳನ್ನು ನಡೆಸುವುದು ಅವಶ್ಯಕತೆ ವಿದೆ.

ಮೂರನೆಯದು ಅನುಭವ ಮತ್ತು ಪ್ರಾಮಾಣಿಕತೆ ಇದರ ಪ್ರಕಾರ ಅಭ್ಯರ್ಥಿಗಳು ಕೆಲವು ಸಂದರ್ಭಗಳಲ್ಲಿ ಆ ಕೆಲಸದಲ್ಲಿ ಸಾಕಷ್ಟು ಪುರ್ವಾನುಭವ ಹೊಂದಿರಬೇಕು. ಇವುಗಳ ಜೊತೆಗೆ ವಿಶೇಷ ಸಮಾಜಿಕ ಜ್ಞಾನವೂ ಒಂದು ಹೆಚ್ಚಿನ ಅರ್ಹತೆಯಾಗಿ ಪರಿಗಣಿಸಲ್ಪಟ್ಟಿದೆ ಎನ್ನುವುದು ಅಲ್ಲಗಳೆಯುವಂತಿಲ್ಲ.

ಜೊತೆಗೆ ಇಂದು ಆಡಳಿತಾಂಗದಲ್ಲಿ ಹೆಚ್ಚು ಹೆಚ್ಚಾಗಿ ವೈಶಿಷ್ಟ್ಯ ನಿಸ್ವಾರ್ಥ ಸೇವಾ ಅನುಭವ ಹೊಂದುವುದು ಸೇರಿ ಆಡಳಿತ ಹಾಗೂ ಸಂಘಟನೆಯನ್ನು ಯಶಸ್ವಿ ದಿಕ್ಕಿನಲ್ಲಿ ಮುನ್ನಡೆಸಲು ವಿಶೇಷ ಜ್ಞಾನವನ್ನು ಪಡೆದಿರಲೇಬೇಕಾಗುತ್ತದೆ. ಆಡಳಿತದ ಯಾವುದೇ ಒಂದು ಹುದ್ದೆಗೆ ಹಲವಾರು ಅಭ್ಯರ್ಥಿಗಳು ಇರುತ್ತಾರೆ. ಅವರಲ್ಲಿ ಹೆಚ್ಚಿನ ಅರ್ಹತೆಗಳು ಆ ಹುದ್ದೆಯ ಆವಶ್ಯಕತೆಗಳಿಗೆ ಅನುಗುಣವಾಗಿ ಯಾರಿಗೆ ಇವೆಯೋ ಅವರು ನೇಮಕಗೊಳ್ಳಬೇಕಾದುದು ಸರಿಯಾದ ಕ್ರಮ.

ಇದರಿಂದ ಆಡಳಿತ ವ್ಯವಸ್ಥೆ ಸುಸೂತ್ರವಾಗಿ ನಡೆಯುತ್ತದೆ. ಸರ್ಕಾರದಲ್ಲಿ ಅಥವಾ ಸಂಘ – ಸಂಸ್ಥೆಯಲ್ಲಿ ಯಾವುದೇ ಒಂದು ಸ್ಥಾನ ಖಾಲಿಯಾದಾಗ ಅದಕ್ಕೆ ಕೆಲವು ಅರ್ಹತೆಗಳನ್ನು ಗೊತ್ತು ಮಾಡಿ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಪಡೆಯುವ ಮೂಲಕ ಯೋಗ್ಯ ವ್ಯಕ್ತಿಯನ್ನು ಆಯ್ಕೆ ಮಾಡಿಕೊಂಡು ಬರುವ ವ್ಯವಸ್ಥೆ ಆಗಬೇಕಾಗಿದೆ ಎನ್ನುವುದು ಸುಳ್ಳಲ್ಲ ಹಾಗಾದಾಗ ಮಾತ್ರ ಆ ಹುದ್ದೆಗೆ ಗೌರವ ಸೀಗುತ್ತದೆ.

ಕೊನೆಯ ಮಾತು

ಪ್ರಮಾಣಿಕವಾಗಿ – ನಿಷ್ಠಾವಂತರಾಗಿ ದುಡಿಯುವ ಯೋಗ್ಯ ವ್ಯಕ್ತಿಗಳನ್ನು ಗುರುತಿಸಿ ಜವಾಬ್ದಾರಿ ನೀಡುವುದು ಇಂದಿನ ದಿನಗಳಲ್ಲಿ ಅವಶ್ಯಕತೆ ಇದೆ. ಇದರಿಂದ ಸಮಾಜ ಮತ್ತು ದೇಶ ಅಭಿವೃದ್ಧಿ ಪಥದಲ್ಲಿ ಸಾಗಲು ಸಹಕಾರಿ ಆಗುತ್ತದೆ. ಇದಲ್ಲದೆ ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಸಹಬಾಳ್ವೆ ಸರ್ವರಲ್ಲಿಯೊ ಮೂಡುವ ಮೂಲಕ ಭವ್ಯ ಭಾರತದ ಉನ್ನತಿಗೆ ಸಾಕ್ಷಿಯಾಗಲಿದೆ.

(-ಸಂಗಮೇಶ ಎನ್ ಜವಾದಿ
ಕೊಡಂಬಲ.ಬೀದರ ಜಿಲ್ಲೆ.
9663809340)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಎಸ್‌ಎಸ್‌ಎಲ್‌ಸಿ ಫಲಿತಾಂಶ| ಗುರುಕುಲ ಶಾಲೆಯ ವಿದ್ಯಾರ್ಥಿಗಳ ಭರ್ಜರಿ ಸಾಧನೆ; ಶೇ. 98 ಅಂಕಗಳೊಂದಿಗೆ ಮದಿಹಾ ಅಗ್ರಸ್ಥಾನ

Published

on

ಸುದ್ದಿದಿನ,ದಾವಣಗೆರೆ: 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ನಗರದ ಪ್ರತಿಷ್ಠಿತ ಶಾಲೆಗಲ್ಲಿ ಒಂದಾದ ಗುರುಕುಲ ಶಾಲೆ (Gurukul School) ಶೈಕ್ಷಣಿಕ ಕ್ಷೇತ್ರದಲ್ಲಿ ಮತ್ತೊಮ್ಮೆ ತನ್ನ ವರ್ಚಸ್ಸನ್ನು ಸಾಬೀತುಪಡಿಸಿದೆ. ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಗಳಿಸುವ ಮೂಲಕ ಸಂಸ್ಥೆಗೆ ಕೀರ್ತಿ ತಂದಿದ್ದಾರೆ.

ವಿದ್ಯಾರ್ಥಿನಿ ಮದಿಹಾ ಸಾಧನೆಯ ಶಿಖರದಲ್ಲಿ

ಶಾಲೆಯ ಪ್ರತಿಭಾವಂತ ವಿದ್ಯಾರ್ಥಿನಿ ಮದಿಹಾ ಅವರು ಒಟ್ಟು ಶೇ. 98 ಅಂಕಗಳನ್ನು ಗಳಿಸುವ ಮೂಲಕ ಶಾಲೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ಸಾಧನೆಗೈದಿದ್ದಾರೆ. ಈಕೆಯ ಸಾಧನೆಯು ಸಹಪಾಠಿಗಳಿಗೆ ಮತ್ತು ಕಿರಿಯ ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕವಾಗಿದೆ. ಅಲ್ಲದೇ ಕುಶಾಲ್‌ ಶೇ. 97 ದ್ವಿತೀಯ ಹಾಗೂ ಸಮರ್ಥ್‌ 95.5 ಅಂಕ ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ.

ಗಮನ ಸೆಳೆದ ಫಲಿತಾಂಶ: ಈ ಬಾರಿಯ ಫಲಿತಾಂಶದಲ್ಲಿ ವಿದ್ಯಾರ್ಥಿಗಳ ಸಾಧನೆ ಮೆಚ್ಚುವಂತಿದೆ.

ಡಿಸ್ಟಿಂಕ್ಷನ್ ಸಾಧಕರು: 15 ವಿದ್ಯಾರ್ಥಿಗಳು ಶೇ. 90ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿ ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣರಾಗಿದ್ದಾರೆ.
ಪ್ರಥಮ ಶ್ರೇಣಿ: ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ಉತ್ತಮ ಫಲಿತಾಂಶ: ಉಳಿದ ಎಲ್ಲಾ ವಿದ್ಯಾರ್ಥಿಗಳು ಸಹ ಅತ್ಯುತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗುವ ಮೂಲಕ ಶಾಲೆಯು ನೂರಕ್ಕೆ ನೂರರಷ್ಟು ಫಲಿತಾಂಶದತ್ತ ದಾಪುಗಾಲು ಹಾಕಿದೆ.

ಯಶಸ್ಸಿನ ಹಿಂದಿನ ಶಕ್ತಿ:

ವಿದ್ಯಾರ್ಥಿಗಳ ಈ ಭವ್ಯ ಸಾಧನೆಗೆ ಶಾಲೆಯ ವ್ಯವಸ್ಥಿತ ಮಾರ್ಗದರ್ಶನವೇ ಕಾರಣ ಎಂದು ಆಡಳಿತ ಮಂಡಳಿ ತಿಳಿಸಿದೆ. ಶಾಲಾ ಕಾರ್ಯದರ್ಶಿ ಅಬ್ದುಲ್ ಸರ್ ಅವರ ನಿರಂತರ ಮಾರ್ಗದರ್ಶನ, ಆಡಳಿತ ಮಂಡಳಿಯ ಬೆಂಬಲ, ಮುಖ್ಯೋಪಾಧ್ಯಾಯರ ಸಮರ್ಥ ನಾಯಕತ್ವ ಹಾಗೂ ಶಿಕ್ಷಕ ವೃಂದದವರ ಅವಿರತ ಪರಿಶ್ರಮ ಈ ಯಶಸ್ಸಿಗೆ ಬುನಾದಿಯಾಗಿದೆ.

ಈ ಕುರಿತು ಸಂತಸ ವ್ಯಕ್ತಪಡಿಸಿರುವ ಶಾಲಾ ಕಾರ್ಯದರ್ಶಿ ಅಬ್ದುಲ್‌, “ವಿದ್ಯಾರ್ಥಿಗಳ ಏಕಾಗ್ರತೆ, ಪೋಷಕರ ಸಹಕಾರ ಮತ್ತು ಶಿಕ್ಷಕರ ಬೋಧನಾ ಶೈಲಿಯಿಂದ ಈ ಮೈಲಿಗಲ್ಲು ಸಾಧ್ಯವಾಗಿದೆ. ಈ ಯಶಸ್ಸು ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಇನ್ನಷ್ಟು ಉನ್ನತ ಗುರಿಗಳನ್ನು ತಲುಪಲು ಪ್ರೇರಣೆಯಾಗಲಿ,” ಎಂದು ಹಾರೈಸಿದ್ದಾರೆ.
ಶಾಲೆಯ ಈ ಸಾಧನೆಗೆ ಪೋಷಕರು ಮತ್ತು ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದು, ವಿದ್ಯಾರ್ಥಿಗಳ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಶುಭಕೋರಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕ್ಷೇತ್ರ ಪುನರ್ವಿಂಗಡಣೆ ಮಸೂದೆ ; ಬಿಜೆಪಿ ಷಡ್ಯಂತ್ರ ಬಯಲು : ಕವಿತಾ ಚಂದ್ರಶೇಖರ್ ಕಿಡಿ

Published

on

ಸುದ್ದಿದಿನ,ದಾವಣಗೆರೆ: ಬಿಜೆಪಿಯು ಪಂಚರಾಜ್ಯಗಳ ಚುನಾವಣೆಗಮನದಲ್ಲಿಟ್ಟುಕೊಂಡು ತರಾತುರಿಯಲ್ಲಿ ಮಹಿಳಾ ಮೀಸಲಾತಿಯ ಹೆಸರಿನಲ್ಲಿ ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಮಂಡನೆ ಮಾಡಲು ಹೋಗಿ ಮುಖಭಂಗಕ್ಕೀಡಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಕವಿತಾ ಚಂದ್ರಶೇಖರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರದ ಹುನ್ನಾರ ದೇಶದ ಜನರ ಮುಂದೆ ಬಯಲಾಗಿದೆ. ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮಹಿಳಾ ಮೀಸಲಾತಿ ಮಸೂದೆಯನ್ನು ಕಾಂಗ್ರೆಸ್ ವಿರೋಧಿಸುತ್ತಿದೆ. ಮಹಿಳೆಯರ ವಿರೋಧಿ ಕಾಂಗ್ರೆಸ್ ಪಕ್ಷ ಎಂದು ಹೇಳುತ್ತಿರುವ ಬಿಜೆಪಿಯು ಮಹಿಳೆಯರ ಭಾವನೆ ಜೊತೆ ಚೆಲ್ಲಾಟ ಆಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಅವರು ಸುದ್ದಿಗೋಷ್ಟಿಯಲ್ಲಿ ಪ್ರಶ್ನಿಸಿದ್ದಾರೆ.

ಪ್ರತಿಪಕ್ಷಗಳು ಡಿಲಿಮಿಟೇಶನ್ ಮಸೂದೆಗೆ ವಿರೋಧ ವ್ಯಕ್ತಪಡಿಸಿವೆಯೇ ವಿನಾಃ ಮಹಿಳಾ ಮೀಸಲಾತಿ ಮಸೂದೆಗಲ್ಲ. ಕೇಂದ್ರ ಸರ್ಕಾರವು ಪ್ರಾಮಾಣಿಕವಾಗಿದ್ದರೆ 2023 ರ ಕಾನೂನನ್ನು ಜಾರಿಗೆ ತರಬೇಕು.

ನಾರಿ ಶಕ್ತಿ ವಂದನ ಚೌಕಟ್ಟು ಎಂದು ವ್ಯಾಪಕವಾಗಿ ಕರೆಯಲ್ಪಡುವ 2023ರ ಕಾನೂನು, ಶಾಸಕಾಂಗಗಳಲ್ಲಿ ಮಹಿಳೆಯರಿಗೆ ಶೇಕಡಾ 33ರಷ್ಟು ಮೀಸಲಾತಿಯ ಅನುಷ್ಠಾನವನ್ನು ಹೊಸ ಜನಗಣತಿಯನ್ನು ಪೂರ್ಣಗೊಳಿಸಿ ನಂತರ ಡಿಲಿಮಿಟೇಶನ್ ಬಗ್ಗೆ ಚರ್ಚಿಸಿ
ಅನುಷ್ಠಾನಗೊಳಿಸಲಿ. ಅದನ್ನು ಬಿಟ್ಟು ವಿನಾಕಾರಣ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕೇಂದ್ರ ಸರ್ಕಾರಕ್ಕೆ ಸೋಲಾಗಿರುವುದು “ಪ್ರಜಾಪ್ರಭುತ್ವದ ಗೆಲುವು. ಭಾರತದ ಒಕ್ಕೂಟ ರಚನೆ ಬದಲಾಯಿಸಲು ಮುಂದಾಗಿದ್ದಕ್ಕೆ ತಕ್ಕ ಶಾಸ್ತಿಯಾಗಿದೆ. ಪ್ರಜಾಪ್ರಭುತ್ವ ದುರ್ಬಲಗೊಳಿಸುವ ಕೇಂದ್ರ ಸರ್ಕಾರದ ಪಿತೂರಿಗೆ ತಕ್ಕ ಉತ್ತರ ನೀಡಲಾಗಿದೆ. ಇದು ಸಂವಿಧಾನಕ್ಕೆ ಸಿಕ್ಕ ಗೆಲುವು, ದೇಶಕ್ಕೆ, ವಿರೋಧ ಪಕ್ಷದ ಒಗ್ಗಟ್ಟಿಗೆ ಸಿಕ್ಕ ಗೆಲುವು.

ಉತ್ತರ ಭಾರತದಲ್ಲಿ ಹೆಚ್ಚು ಸ್ಥಾನಗಳನ್ನು ಸೃಷ್ಟಿಸಿ ಹೇಗಾದರೂ ಅಧಿಕಾರದಲ್ಲಿ ಉಳಿಯಬೇಕೆಂಬ ಬಿಜೆಪಿಯ ಪಿತೂರಿ ಜನರಿಗೆ ಅರ್ಥವಾಗಿದೆ. ದಕ್ಷಿಣ ಭಾರತದ ರಾಜ್ಯಗಳಲ್ಲಿ ಕಡಿಮೆ ಸ್ಥಾನ ಆಗುವ ಆತಂಕ ಇದೆ. ಯಾವುದೇ ರೀತಿಯಲ್ಲಿಯೂ ಚರ್ಚಿಸದೇ ಏಕಾಏಕಿ ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಜಾರಿಗೆ ಮುಂದಾಗಿದ್ದೇಕೆ ಎಂದು ಕವಿತಾ ಚಂದ್ರಶೇಖರ್
ಪ್ರಶ್ನಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್ ಎಸ್ ಎಲ್ ಸಿ ಫಲಿತಾಂಶ | ಭರತ್ ಜಿ ರಾಜ್ಯಕ್ಕೆ ಪ್ರಥಮ ; ನನ್ನ ಕ್ಷೇತ್ರದ ವಿದ್ಯಾರ್ಥಿ ಸಾಧನೆಗೆ ಸಲ್ಯೂಟ್ ಶಾಸಕ ಕೆ.ಎಸ್.ಬಸವಂತಪ್ಪ ಹರ್ಷ

Published

on

ಸುದ್ದಿದಿನ,ದಾವಣಗೆರೆ:ಇವತ್ತು ನನಗೆ ಬಹಳ ಸಂತೋಷದ ದಿನ. ನನ್ನ ಕ್ಷೇತ್ರದ ಕಬ್ಬಳ ಗ್ರಾಮದ ಒಬ್ಬ ರೈತ ಕುಟುಂಬದಿಂದ ಬಂದ ಜಿ.ಭರತ್ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ 625ಕ್ಕೆ 625 ಅಂಕ ಪಡೆದಿರುವುದು ನನಗೆ ಬಹಳ ಹೆಮ್ಮೆ ತಂದಿದೆ ಎಂದು ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದರು.

ಕಬ್ಬಳ ಗ್ರಾಮದ ವಿದ್ಯಾಲಕ್ಷ್ಮಿ ಶಾಲೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ಜಿ.ಭರತ್ ಮತ್ತು ಪೋಷಕರನ್ನು ಅಭಿನಂದಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಕ್ಷೇತ್ರದ ವಿದ್ಯಾರ್ಥಿ ಇಷ್ಟು ದೊಡ್ಡ ಸಾಧನೆ ಮಾಡಿರುವುದು ಸಂತಸದ ವಿಷಯ. ವಿದ್ಯಾ ಲಕ್ಷ್ಮಿ ಶಾಲೆಯವರು ಬಹಳ ಪ್ರಾಮಾಣಿಕವಾಗಿ ಮಕ್ಕಳ ಶಿಕ್ಷಣದ ಬಗ್ಗೆ ಆಸಕ್ತಿ ತೋರಿಸಿ ಅವರನ್ನು ಉನ್ನತ ಮಟ್ಟಕ್ಕೆ ತರಲು ಶ್ರಮಿಸಿದ್ದಾರೆ ಎಂದು ಅಭಿನಂದನೆ ಸಲ್ಲಿಸಿದರು.

ನಮಗೆ ಮೊದಲ ಆದ್ಯತೆ ದೇಗುಲಗಳಿಗಿಂತ ಶಾಲೆಗಳಿಗೆ ಇರಬೇಕು. ಇಂತಹ ಶಾಲೆಯೆಂಬ ದೇಗುಲದಿಂದ ಹೊರ ಬರುವ ಭರತ್‌ನಂತಹ ಮಕ್ಕಳು ಮುಂದಿನ ದಿನಗಳಲ್ಲಿ ಈ ದೇಶದ ಉನ್ನತ ಅಧಿಕಾರಿಗಳಾಗಿ ಅಥವಾ ವಿಜ್ಞಾನಿಗಳಾಗಿ ಸೇವೆ ಸಲ್ಲಿಸುವಂತಾಗಲಿ ಎಂದು ಶುಭ ಹಾರೈಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending