Connect with us

ದಿನದ ಸುದ್ದಿ

ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗ ಇದೇ ಆರ್ಥಿಕ ವರ್ಷದಲ್ಲಿ ಕಾಮಗಾರಿ ಪ್ರಾರಂಭ ; 2027 ಕ್ಕೆ ಜನವರಿಯೊಳಗೆ ರೈಲು ಸಂಚಾರಕ್ಕೆ ಕ್ರಮ : ಸಚಿವರಾದ ವಿ.ಸೋಮಣ್ಣ

Published

on

ಸುದ್ದಿದಿನ,ದಾವಣಗೆರೆ: ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗದ ಭೂ ಸ್ವಾಧೀನ ಪ್ರಕ್ರಿಯೆ ಮುಗಿಯುವ ಹಂತದಲ್ಲಿದ್ದು ಮುಂದಿನ ನಾಲ್ಕೈದು ತಿಂಗಳು ಇದೇ ಆರ್ಥಿಕ ವರ್ಷಾಂತ್ಯದಲ್ಲಿ ಹಲವು ಕಡೆ ಕಾಮಗಾರಿ ಪ್ರಾರಂಭಿಸಲಾಗುತ್ತದೆ ಎಂದು ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವರಾದ ವಿ.ಸೋಮಣ್ಣ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ರೈಲ್ವೆ ಇಲಾಖೆ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ನೇರ ರೈಲು ಮಾರ್ಗವು ನಿಧಾನಗತಿಯಲ್ಲಿ ಸಾಗುತ್ತಿದ್ದು ಕಳೆದ ಎರಡೂವರೆಗೆ ತಿಂಗಳಿಂದ ಇದರ ಪ್ರಗತಿ ವೇಗ ಹೆಚ್ಚಿಸಲಾಗಿದೆ. ಒಟ್ಟು ಈ ಯೋಜನೆಗೆ 2406.73 ಎಕರೆ ಭೂಮಿ ಬೇಕಾಗಿದ್ದು ಈಗಾಗಲೇ 2119.16 ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಲಾಗಿದೆ. 287.54 ಎಕರೆ ಸ್ವಾಧೀನ ಮಾಡಿಕೊಳ್ಳಬೇಕಾಗಿದ್ದು ದಾವಣಗೆರೆ ಜಿಲ್ಲೆಯಲ್ಲಿ ಹಾದುಹೋಗುವ 263.78 ಎಕರೆ ಜಮೀನಿನಲ್ಲಿ 246.20 ಎಕರೆ ಸ್ವಾಧೀನ ಪಡಿಸಿಕೊಂಡಿದ್ದು 17.58 ಎಕರೆಯ ಸ್ವಾಧೀನ ಪ್ರಕ್ರಿಯೆ ವಿವಿಧ ಹಂತದಲ್ಲಿದ್ದು ಕೆಲವೇ ದಿನಗಳಲ್ಲಿ ಪೂರ್ಣವಾಗಲಿದೆ ಎಂದರು.

ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಯೋಜನೆಯನ್ನು ಕಾಲಮಿತಿಯಲ್ಲಿ ಮುಕ್ತಾಯಗೊಳಿಸುವ ಗುರಿ ಹೊಂದಲಾಗಿದ್ದು 2027 ರ ಜನವರಿಯೊಳಗಾಗಿ ಪೂರ್ಣಗೊಳಿಸಿ ಉದ್ಘಾಟನೆ ಮಾಡಲು ಉದ್ದೇಶಿಸಲಾಗಿದೆ. ರೈಲ್ವೆ ಕಾಮಗಾರಿಯನ್ನು ಸಂಪೂರ್ಣವಾಗಿ ಕೇಂದ್ರ ಸರ್ಕಾರದಿಂದ ಅಭಿವೃದ್ದಿ ಮಾಡಲಾಗುತ್ತದೆ. ಇದೇ ಆರ್ಥಿಕ ವರ್ಷದ ಕೊನೆಯಾಗುವ ವೇಳೆಗೆ ಕನಿಷ್ಠ 4 ರಿಂದ 5 ಕಡೆ ಕಾಮಗಾರಿ ಪ್ರಾರಂಭಿಸಲಾಗುತ್ತದೆ ಎಂದರು.

ರಾಜ್ಯದಲ್ಲಿ ಒಟ್ಟು 21 ರೈಲ್ವೆ ಯೋಜನೆಗಳು ನಡೆಯುತ್ತಿದ್ದು ಇದಕ್ಕಾಗಿ 43 ಸಾವಿರ ಕೋಟಿ ವೆಚ್ಚ ಮಾಡಲಾಗುತ್ತದೆ. ಈ ಎಲ್ಲಾ ಯೋಜನೆಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಿ ರಾಜ್ಯವನ್ನು ರೈಲ್ವೆ ಸೌಕರ್ಯ ಹೊಂದಿದ ರಾಜ್ಯವನ್ನಾಗಿ ಮಾಡುವ ಗುರಿ ಹೊಂದಲಾಗಿದೆ.

ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ಹೊಸ ರೈಲ್ವೆ ಯೋಜನೆಗೆ ಈಗಾಗಲೇ ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ 115.11.08 ಎಕರೆ ಜಮೀನು ಸ್ವಾಧೀನ ಮಾಡಲಾಗಿದೆ ಎಂದರು.

ರೈಲ್ವೆ ಮೇಲ್ಸೇತುವೆ, ಕೆಳಸೇತುವೆ ನಿರ್ಮಾಣ; ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವ ಕಡೆ ರೈಲ್ವೆ ಇಲಾಖೆಯಿಂದಲೇ ಮೇಲ್ಸೇತುವೆ ಹಾಗೂ ಕೆಳಸೇತುವೆಗಳನ್ನು ನಿರ್ಮಾಣ ಮಾಡಲಾಗುತ್ತದೆ. ದಾವಣಗೆರೆ ನಗರದ ಅಶೋಕ ಟಾಕೀಸ್ ಹತ್ತಿರ ರೈಲ್ವೆ ಲೈನ್ ಕೆಳಸೇತುವೆಗೆ ಸಂಪರ್ಕ ರಸ್ತೆ ನಿರ್ಮಾಣದ ಭೂ ನೇರ ಖರೀದಿಗೆ ರೂ.23.09 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದ್ದು ಆದಷ್ಟು ಬೇಗ ಈ ಕಾಮಗಾರಿ ಮಾಡಲು ಅನುವು ಮಾಡಿಕೊಡಲಾಗುತ್ತದೆ ಎಂದರು.

ರೈಲ್ವೆ ವೇಗ ಹೆಚ್ಚಿಸಲು ಕ್ರಮ; ರೈಲ್ವೆ ಇಂಜಿನ್‍ಗಳು ಬಹುತೇಕ ಶೇ 98 ರಷ್ಟು ವಿದ್ಯುತ್ ಚಾಲಿತವಾಗಿದ್ದು ಶೇ 2 ರಷ್ಟು ಮಾತ್ರ ಡೀಸೆಲ್ ಇಂಜಿನ್‍ಗಳಿವೆ. ರೈಲ್ವೆ ಪ್ರಯಾಣದ ವೇಗ ಪ್ರಸ್ತುತ 110 ಕಿ.ಮೀ ಇದ್ದು ಇದನ್ನು 135 ಕಿ.ಮೀ ವರೆಗೆ ವೇಗ ಹೆಚ್ಚಿಸುವ ಗುರಿಯೊಂದಿಗೆ ಮೂಲಭೂತ ಸೌಕರ್ಯಗಳ ಅಭಿವೃದ್ದಿ ಮಾಡಲಾಗುತ್ತಿದೆ. ವಂದೇ ಭಾರತ್ ರೈಲು ಬಡುವರು, ಮಧ್ಯಮ ವರ್ಗದವರಿಗೆ ತುರ್ತು ಪ್ರಯಾಣಕ್ಕಾಗಿ ಕೈಗೆಟಕುವ ದರದಲ್ಲಿ ಟಿಕೆಟ್ ಇದ್ದು ಇದರಲ್ಲಿ ನೀಡಲಾಗಿರುವ ಸೌಲಭ್ಯಗಳ ಬಗ್ಗೆ ಅರಿಯಲು ಪ್ರಯಾಣಿಸಬೇಕೆಂದರು.

ಕನ್ನಡದಲ್ಲೆ ರೈಲ್ವೆ ಪರೀಕ್ಷೆ; ರೈಲ್ವೆ ಇಲಾಖೆಯಲ್ಲಿ ಒಟ್ಟು 12 ಲಕ್ಷ ಹುದ್ದೆಗಳಿದ್ದು 15 ಲಕ್ಷ ಜನರು ಪಿಂಚಣಿ ಪಡೆಯುತ್ತಿದ್ದಾರೆ. ಖಾಲಿ ಇರುವ 16 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಈ ಪರೀಕ್ಷೆಯನ್ನು ಕನ್ನಡದಲ್ಲಿಯೇ ಬರೆಯಲು ಆದೇಶ ನೀಡಲಾಗಿದ್ದು ನಮ್ಮ ರಾಜ್ಯದ ಯುವಕರು ಇದರ ಉಪಯೋಗ ಪಡೆದುಕೊಳ್ಳಬೇಕು, ಮುಂದಿನ ದಿನಗಳಲ್ಲಿ ಖಾಲಿ ಇರುವ 46 ಸಾವಿರ ಹುದ್ದೆಗಳ ಭರ್ತಿ ಮಾಡಲಾಗುತ್ತದೆ ಎಂದರು.

ದಾವಣಗೆರೆ ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ ಸಭೆಯಲ್ಲಿ ಮಾತನಾಡಿ ದಾವಣಗೆರೆ ನಗರದಲ್ಲಿನ ಮೀನು ಮಾರುಕಟ್ಟೆ ಬಳಿ ರೈಲ್ವೆ ಮೇಲ್ಸೇತುವೆ ಅಥವಾ ಕೆಳಸೇತುವೆ ಅಗತ್ಯವಾಗಿದೆ. ಅಶೋಕ ಟಾಕೀಸ್ ಹತ್ತಿರ ರಸ್ತೆ ಕಿರಿದಾಗಿದ್ದು ಸಂಪರ್ಕ ರಸ್ತೆ ನಿರ್ಮಾಣ ಮಾಡಬೇಕು, ಲಿಂಗೇಶ್ವರ ದೇವಸ್ಥಾನದ ಹತ್ತಿರ ಪಾದಚಾರಿ ಮಾರ್ಗ ನಿರ್ಮಿಸಲು, ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ಹೊಸ ಮಾರ್ಗದಲ್ಲಿ ಸೂರಗೊಂಡನಕೊಪ್ಪ ಅಥವಾ ನ್ಯಾಮತಿಯಲ್ಲಿ ರೈಲ್ವೆ ನಿಲ್ದಾಣಕ್ಕೆ ಅವಕಾಶ ಮಾಡಲು, ಹರಿಹರದಲ್ಲಿನ ರೈಲ್ವೆ ಆಸ್ಪತ್ರೆ, ಸ್ಕೂಲ್ ಮೇಲ್ದರ್ಜೆಗೇರಿಸಲು ರೈಲ್ವೆ ಸಚಿವರಲ್ಲಿ ಮನವಿ ಮಾಡಿದರು.

ಹರಿಹರ ಶಾಸಕರಾದ ಬಿ.ಪಿ.ಹರೀಶ್ ಹೊಸಪೇಟೆ ಹೋಗುವ ಹೆದ್ದಾರಿಯಲ್ಲಿ ಒಂದೇ ರೈಲ್ವೆ ಸೇತುವೆ ಇದ್ದು ಮತ್ತೊಂದು ಬ್ರಿಡ್ಜ್ ನಿರ್ಮಾಣ ಮಾಡಬೇಕು, ಮಳೆ ಬಂದಾಗ ಈ ಮಾರ್ಗದ ವಾಹನಗಳಿಗೆ ತೊಂದರೆಯಾಗುವುದರಿಂದ ರೈಲ್ವೆ ಸೇತುವೆಯ ಅವಶ್ಯಕತೆ ಇದೆ ಎಂದರು.

ಸಭೆಯಲ್ಲಿ ಮೇಯರ್ ಚಮನ್ ಸಾಬ್, ದೂಡಾ ಅಧ್ಯಕ್ಷರಾದ ದಿನೇಶ್ ಕೆ.ಶೆಟ್ಟಿ, ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ್, ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ರೈಲ್ವೆ ಹಿರಿಯ ಅಧಿಕಾರಿ ಶರ್ಮಾ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಗುರುಕುಲ ಶಾಲೆಯ ಮಕ್ಕಳೊಂದಿಗೆ ಬೆರೆತ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ

Published

on

ಸುದ್ದಿದಿನ,ದಾವಣಗೆರೆ:ಸಂಸದರಾದ ಪ್ರಭಾ ಮಲ್ಲಿಕಾರ್ಜುನ್ ಅವರು ನಗರದ ಗುರುಕುಲ ವಸತಿಯುತ ಶಾಲೆಯ ಮಕ್ಕಳೊಂದಿಗೆ ಬೆರೆತು ತಮ್ಮ ಲೋಕಸಭಾ ಸದಸ್ಯತ್ವದ ಅನುಭವದ ಜೊತೆಗೆ ಶಿಕ್ಷಣದ ಮಹತ್ವ ತಿಳಿಸಿದರಲ್ಲದೇ ಸಮಾಜದ ಸೇವೆಯ ಅನುಭವವನ್ನು ನೀಡಿ ಸ್ಫೂರ್ತಿ ತುಂಬಿದರು.

ಇತ್ತೀಚಿಗೆ ನಗರದ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರ ನಿವಾಸಕ್ಕೆ ಗುರುಕುಲ ಶಾಲೆಯ ವಿದ್ಯಾರ್ಥಿಗಳು ಶಿಕ್ಷಕ ವೃಂದದವರೊಂದಿಗೆ ಭೇಟಿ ನೀಡಿ, ಸಂಸದರಾಗಿ ಆಯ್ಕೆಯಾಗಿದ್ದಕ್ಕೆ ಶುಭ ಕೋರಿದರಲ್ಲದೇ, ಕೆಲ ಸಮಯ ಅವರೊಂದಿಗೆ ಲೋಕಸಭಾ ಕ್ಷೇತ್ರದ ಸೇವೆಯ ಬಗ್ಗೆ ಮಾತುಕತೆ ನಡೆಸಿದರು.

ಪ್ರಭಾ ಮಲ್ಲಿಕಾರ್ಜುನ ಅವರು, ವಿದ್ಯಾರ್ಥಿಗಳು ತಮ್ಮ ಆಸಕ್ತಿಗಳನ್ನು ಅನುಸರಿಸಿ, ಸಮಾಜಕ್ಕೆ ಹಿತಕರವಾಗಿ ಕೊಡುಗೆ ನೀಡುವ ಮಹತ್ವವನ್ನು ವಿವರಿಸಿದರು. ಅವರು ಮಕ್ಕಳ ಹಲವು ಪ್ರಶ್ನೆಗಳಿಗೆ ಸಮಾಧಾನಕರ ಉತ್ತರಗಳನ್ನು ನೀಡಿದರು.
ಇದರಿಂದ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸ ಮತ್ತು ಸಾಮಾಜಿಕ ಹೊಣೆಗಾರಿಕೆಗಳಲ್ಲಿ ತೊಡಗಿಸಿಕೊಳ್ಳಲು ಪ್ರೇರಣೆಯನ್ನು ಹೊಂದಿದರು. ಇವರ ಮಾತುಗಳು ಪ್ರೋತ್ಸಾಹ ಮತ್ತು ಮಹತ್ವದ ಸಂದೇಶಗಳಿಂದ ತುಂಬಿದ್ದವು. ಅಲ್ಲದೇ ಮಕ್ಕಳಿಗೆ ಭವಿಷ್ಯದಲ್ಲಿ ಸ್ಫೂರ್ತಿಯಿಂದ ಉಜ್ವಲತೆಗೆ ಸಾಕ್ಷಿಯಾದವು.

ಓದುತ್ತಿರುವ ತರಗತಿಯ ಬಗ್ಗೆ ಎಲ್ಲ ಮಕ್ಕಳ ವಿಚಾರಿಸುತ್ತಾ, ಭವ್ಯ ಭವಿಷ್ಯದಲ್ಲಿ ಯಾವ ಸ್ಥಾನ ಇಚ್ಚಿಸುವಿರಾ ಎಂದು ಕೇಳುತ್ತಾ, ಶಿಕ್ಷಕ ವೃತ್ತಿಯೂ ಸಹ ಅಮೂಲ್ಯವಾಗಿದೆ. ಅಕ್ಷರ ಜ್ಞಾನ ನೀಡುವ ಕೆಲಸಕ್ಕೂ ಒತ್ತು ಕೊಡಬೇಕು. ಜನರ ಬಳಿಯೇ ಹೋಗಿ ಕಷ್ಟ, ನಷ್ಟಗಳ ವಿಚಾರಿಸಿ ಪರಿಹರಿಸುವುದೇ ನಿಜವಾದ ಸಮಾಜ ಸೇವೆ. ಅದುವೇ ಸಾಮಾಜಿಕ ನಾಯಕನ ಹೊಣೆಗಾರಿಕೆ. ಈ ರೀತಿ ನಿಮ್ಮ ಭವಿಷ್ಯದಲ್ಲೂ ಆಗಿ ಎಂದರು.

ಮಕ್ಕಳು ಸಂಸದರಾದ ಪ್ರಭಾ ಮಲ್ಲಿಕಾರ್ಜುನ ಅವರಿಗೆ ಸೆಲ್ಯೂಟ್ ಮೂಲಕ ಅವರ ಲೋಕಸಭಾ ಸ್ಥಾನ ಅಲಂಕರಿಸಿದ್ದಕ್ಕೆ ಹಾಗೂ ಅವರ ಸೇವೆಗೆ ಗೌರವ ಸೂಚಿಸಿದರು. ಇದಕ್ಕೆ ಪ್ರಭಾ ಮಲ್ಲಿಕಾರ್ಜುನ ತಾವೂ ಸೆಲ್ಯೂಟ್ ಮಾಡಿ ವಿದ್ಯಾರ್ಥಿಗಳಿಗೆ ಧನ್ಯವಾದ ತಿಳಿಸಿದರು. ಅಲ್ಲದೇ ವಿದ್ಯಾರ್ಥಿಗಳು ನೆನಪಿನ ಕಾಣಿಕೆಯಾಗಿ ಪ್ರಭಾ ಮಲ್ಲಿಕಾರ್ಜುನ ಭಾವಚಿತ್ರವುಳ್ಳ ಫೋಟೋ ನೀಡಿದರು.

ಈ ಸಂದರ್ಭದಲ್ಲಿ ಗುರುಕುಲ ವಸತಿಯುತ ಶಾಲೆ ಅಧ್ಯಕ್ಷ ಅಬ್ದುಲ್ ಆರ್., ಸಾನಿಯಾ ಜೆಹರ, ಶಿಕ್ಷಣ ಸಂಯೋಜಕರಾದ ಶ್ವೇತ.ಎಂ. ಹೆಚ್, ರೇಖಾ ಎಲ್. ಪಾಟೀಲ್, ಎಜಾಜ್ ಅಹ್ಮದ್, ಸಂದೀಪ್ ಪಿ., ಶಾಂತ ಡಿ.ಎಸ್., ರೇಖಾ ಎನ್.ಆರ್., ಸವಿತಾ ಕಾಟ್ವೆ, ಸಹ ಶಿಕ್ಷಕರಾದ ಬಸವರಾಜ್, ಸುಭಾಷ್ ಓ., ಸೈಯದ ಹಮೀಬಾ, ಸಾಯಿರಾ ಖಾನಮ್, ನೂರ್ ಜಹಾನ್, ಹಮೀದ ಬಾನು, ಹಾಗೂ ಗುರುಕುಲ ವಸತಿಯುತ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಮಕ್ಕಳ ದಿನಾಚರಣೆ ಅಂಗವಾಗಿ ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸಿಗಾಗಿ ಹಾಗೂ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷ ಸೇವೆ ಸಲ್ಲಿದ ವ್ಯಕ್ತಿ ಹಾಗೂ ಸಂಸ್ಥೆಗೆ ಪ್ರಶಸ್ತಿ ಪತ್ರ ನೀಡಲು ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸ್ವೀಕೃತವಾಗದ ಕಾರಣ ಅರ್ಜಿ ಸಲ್ಲಿಸುವ ಅವಧಿಯನ್ನು ಅಕ್ಟೋಬರ್ 14 ರವರೆಗೆ ವಿಸ್ತರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ರಾಜನಾಯ್ಕ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಂಥಾಲಯ ಇಲಾಖೆಯಿಂದ 2021 ರ ಮೊದಲ ಆವೃತಿಯಲ್ಲಿ ಆಯ್ಕೆಯಾದ ಪುಸ್ತಕಗಳ ಪ್ರಕಟ

Published

on

ಸುದ್ದಿದಿನ,ದಾವಣಗೆರೆ:ಗ್ರಂಥಾಲಯ ಇಲಾಖೆಯಿಂದ 2021 ರಲ್ಲಿ ಪ್ರಥಮ ಆವೃತ್ತಿಯಾಗಿ ಪ್ರಕಟವಾದ ಪುಸ್ತಕಗಳ ಆಯ್ಕೆಗೆ ಲೇಖಕರು, ಪ್ರಕಾಶಕರು, ಮಾರಾಟಗಾರರಿಂದ ಪುಸ್ತಕಗಳನ್ನು ಆಹ್ವಾನಿಸಿದ್ದು ರಾಜ್ಯ ಮಟ್ಟದ ಆಯ್ಕೆ ಸಮಿತಿಯಿಂದ ಆಯ್ಕೆಯಾದ ತಾತ್ಕಾಲಿಕ ಪಟ್ಟಿಯನ್ನು ಇಲಾಖಾ ವೆಬ್‍ಸೈಟ್ dpl.karnataka.gov.in ನಲ್ಲಿ ಪ್ರಕಟಿಸಲಾಗಿದೆ ಮತ್ತು ದಾವಣಗೆರೆ ಕೇಂದ್ರ ಗ್ರಂಥಾಲಯದ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ಆಕ್ಷೇಪಣೆಗಳಿದ್ದಲ್ಲಿ ಅಕ್ಟೋಬರ್ 9 ರೊಳಗಾಗಿ ಲಿಖಿತವಾಗಿ ಸಲ್ಲಿಸಲು ಮುಖ್ಯ ಗ್ರಂಥಾಲಯಾಧಿಕಾರಿ ಪಿ.ಆರ್.ತಿಪ್ಪೇಸ್ವಾಮಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending