Connect with us

ಲೈಫ್ ಸ್ಟೈಲ್

ಪವಿತ್ರ ರಂಜಾನ್ ತಿಂಗಳಲ್ಲಿ..!

Published

on

ಹಿಂದು ಮುಸ್ಲಿಂ ಇಬ್ಬರೂ ಭಾಯಿ-ಭಾಯಿ ಎನ್ನುವ ಸಂಪ್ರದಾಯ ನಮ್ಮ ಭಾರತ ದೇಶದಲ್ಲಿ ಇದೆ. ಭಾರತದಲ್ಲಿ ಹಿಂದು ಮುಸ್ಲಿಂ ಎನ್ನುವ ಭೇಧವಿಲ್ಲ. ಹಿಂದುಗಳು ಸಹ ಈ ಹಬ್ಬವನ್ನು ಆಚರಿಸುತ್ತಾರೆ. ಹಿಂದುಗಳಿಗೆ ಹಿಂದು ಪಂಚಾಂಗದ ಪ್ರಕಾರ ಬರುವ ವರ್ಷದ ನಾಲ್ಕನೇ ತಿಂಗಳಾದ ಶ್ರಾವಣ ಮಾಸದ ಅತ್ಯಂತ ಪ್ರಮುಖವಾಗಿದೆ.

ಈ ಮಾಸದಲ್ಲಿ ಎಲ್ಲರೂ ದೇವರಿಗೆ ಉಪವಾಸ, ದೇವಸ್ಥಾನಗಳಲ್ಲಿ ವಿಶೇಷವಾದ ಪೂಜೆ ಹೋಮ ಹವನಗಳನ್ನು ಮಾಡುವುದು, ವ್ರತಗಳ ಆಚರಣೆ ಮಾಡುತ್ತಾರೆ. ಹೀಗೆ ಶ್ರಾವಣ ಮಾಸ ಮಹತ್ವ ಪಡೆದುಕೊಂಡರೆ, ಇನ್ನು ಮುಸ್ಲಿಂ ಧರ್ಮದಲ್ಲಿ ರಂಜಾನ್ ತಿಂಗಳಗೆ ವಿಶೇಷವಾದ ಮಹತ್ವವನ್ನು ನೀಡುತ್ತಾರೆ. ಈ ತಿಂಗಳಲ್ಲಿ ಮುಸ್ಲಿಂ ಬಾಂಧವರ ಮನೆ ಮನದಲ್ಲಿ ಕುರಾನ್ ಪಠಣ ಮಾಡುತ್ತಾರೆ.

ರಂಜಾನ್ ಮಾಸ ಆರಂಭವಾಗಿ ಈಗಾಗಲೇ 25 ದಿನ ಕಳೆದಿದೆ. ಉಪವಾಸ, ಪ್ರಾರ್ಥನೆ, ದುಡಿಮೆಯಲ್ಲಿ ಅಲ್ಲಾಹುನನ್ನು ಕಾಣುತ್ತಿರುವ ಮುಸ್ಲಿಮರು ಕೆಲವೇ ದಿನಗಳಲ್ಲಿ ಮತ್ತೆ ಮೂಡುವ ಚಂದ್ರನಿಗಾಗಿ ಕಾಯುತ್ತಿದ್ದಾರೆ.

ರಂಜಾನ್ ಹಬ್ಬದ ಮಹತ್ವ

ಮಸೀದಿಗಳ ಮಿನಾರುಗಳಿಂದ ಹೊರಡುವ ಪ್ರಾರ್ಥನೆಯ ಕರೆಗೆ ಈಗ ದಿವ್ಯಶಕ್ತಿ ಇದೆ. ಕರೆ ಕೇಳಿದ ಕೂಡಲೇ ವ್ರತನಿಷ್ಠ ಮುಸ್ಲಿಮರು ಕೆಲಸ ನಿಲ್ಲಿಸಿ, ಮಸೀದಿಗಳತ್ತ ಹೆಜ್ಜೆ ಹಾಕುತ್ತಾರೆ. ಇವರೊಂದಿಗೆ ಪುಟ್ಟ ಮಕ್ಕಳೂ ಅವರೊಡನೆ ಸಜ್ಜಾಗುತ್ತಾರೆ.

ದೊಡ್ಡವರಿಗೆ ಪ್ರಾರ್ಥನೆಯು ನಿಷ್ಠೆಯ ವಿಷಯ. ಪುರುಷರು ಮಸೀದಿಗಳ ಕಡೆಗೆ ಹೆಜ್ಜೆ ಹಾಕುವ ವೇಳೆಯಲ್ಲೇ ಮಹಿಳೆಯರು, ಬಾಲಕಿಯರು ಮನೆಯನ್ನೇ ಮಸೀದಿ ಎಂದು ಭಾವಿಸಿ ಪ್ರಾರ್ಥನೆಗೆ ಸಜ್ಜಾಗುತ್ತಾರೆ. ಹೀಗೆ ಮುಸ್ಲಿಮರ ಮನೆ ಮತ್ತು ಮಸೀದಿಗಳು ಪ್ರಾರ್ಥನೆಯ ಮೌನದಲ್ಲಿ ಅಲ್ಲಾನನ್ನು ನೆನೆಯುತ್ತಾರೆ.

ರಂಜಾನ್ ಮಾಸವೆಂದರೆ ಬಹುಪಾಲು ಮುಸ್ಲಿಂ ಮಹಿಳೆಯರಿಗೆ ಉಪವಾಸ, ಪ್ರಾರ್ಥನೆ ಅಷ್ಟೇ ಅಲ್ಲ. ನಿತ್ಯ ಕುರಾನ್ ಪಠಣ, ವಿಶ್ರಾಂತಿ ಇಲ್ಲದ ದುಡಿಮೆ. ಅವರ ದಿನಚರಿ ಆರಂಭವಾಗುವುದು ಬೆಳಗಿನ ಜಾವ. ಪತಿ, ಮನೆಯ ಹಿರಿಯರು, ಮಕ್ಕಳಿಗಾಗಿ ಇಡೀ ದಿನ ಮೀಸಲು.

ಉಪವಾಸದ ಜತೆಗೆ ಸತತ ಕೆಲಸ. ಆದರೂ ಭಕ್ತಿ ಕುಂದಿಲ್ಲ. ಕುರಾನ್ ಕೈ ಬಿಡುವುದಿಲ್ಲ, ನಮಾಜು ತಪ್ಪುವುದಿಲ್ಲ ಎಂದು ಕುರಾನ ಸಂದೇಶ ಸಾರುತ್ತದೆ. ರಂಜಾನ್ ಮಾಸದಲ್ಲಿ ದಿನಕ್ಕೆ 5 ಬಾರಿ ಪ್ರಾರ್ಥನೆ (ನಮಾಜ್) ಮಾಡುವುದು ಕಡ್ಡಾಯ. ಮಕ್ಕಳು- ಗಂಡಸರು ಐದು ಬಾರಿ ಪ್ರಾರ್ಥಿಸಿ ಸುಮ್ಮನಾದರೆ, ಮಹಿಳೆಯರು ಪ್ರಾರ್ಥನೆ ಜತೆ ಕುರಾನ್ ಓದುತ್ತಾರೆ. ಕೆಲವರು ಇಡೀ ಮಾಸದಲ್ಲಿ ಒಂದು ಬಾರಿ ಕುರಾನ್ ಓದಿದರೆ, ಮತ್ತೆ ಕೆಲವರು ಮೂರ್ನಾಲ್ಕು ಬಾರಿ ಕುರಾನ್ ಓದುತ್ತಾರೆ. ಮನೆಯಲ್ಲಿ ಕುರಾನ್ ಸಂದೇಶ ಪ್ರತಿಧ್ವನಿಸುತ್ತದೆ.

ರಂಜಾನ್‍ದ ತತ್ವಗಳು

ಕಲ್ಮಾ (ಮನಸ್ಸಿನಲ್ಲಿ ದೇವರ ಸ್ಮರಣೆ), ನಮಾಜ್ (ಪ್ರಾರ್ಥನೆ), ರೋಜಾ (ಉಪವಾಸ), ಜಕಾತ್ (ದಾನ) ಹಾಗೂ ಹಜ್ (ಮೆಕ್ಕಾ ಯಾತ್ರೆ) ಇವು ಇಸ್ಲಾಂ ಧರ್ಮದ ಪಂಚ ತತ್ವಗಳು. ಪ್ರತಿಯೊಬ್ಬರು ನಿತ್ಯ ಕಲ್ಮಾ ಆಚರಿಸಬೇಕು. ನಿತ್ಯವೂ ಐದು ಬಾರಿ ಮಸೀದಿಗೆ ತೆರಳಿ ಪಾರ್ಥನೆ ಸಲ್ಲಿಸಬೇಕು. ರಂಜಾನ್ ಮಾಸದಲ್ಲಿ ಉಪವಾಸ ಆಚರಿಸಬೇಕು, ತಮ್ಮ ಆದಾಯದಲ್ಲಿ ಶೇಕಡಾ 2.5ರಷ್ಟು?ಭಾಗವನ್ನು ಬಡವರಿಗೆ ದಾನ ಮಾಡಬೇಕು, ಪವಿತ್ರ ಮೆಕ್ಕಾಗೆ ಯಾತ್ರೆ ಹೋಗಬೇಕು ಎಂಬುದೇ ಈ ತತ್ವಗಳ ಸಾರಾಂಶ.

ವಿಜಯಪುರ ಜಿಲ್ಲೆ ಅಂದರೆ ತಟ್ಟನೆ ನೆನಪಾಗುವುದೆ ಇಲ್ಲಿನ ಐತಿಹಾಸಿಕ ಗುಮ್ಮಟ, ಇಬ್ರಾಹಿಂ ರೋಜಾ, ಹೀಗೆ ಹಲವು ಕಟ್ಟಡಗಳು. ಇವುಗಳ ಜೊತೆಗೆ ಇಲ್ಲಿನ ಸಂಸ್ಕøತಿಯು ಸಹ ಒಂದಾಗಿದೆ. ಜಿಲ್ಲೆಯಲ್ಲಿ ರಂಜಾನ್ ಹಬ್ಬ ಕಳೆಕಟ್ಟಿದೆ. ಇಲ್ಲಿನ ಗುಂಬಜಗಳು, ಮಿನಾರುಗಳು ಆಕರ್ಷಕವಾಗಿ ಮಸೀದಿಗಳು ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿವೆ. ನಗರದ ಮಾರುಕಟ್ಟೆಗಳಲ್ಲಿ ರಂಗು ರಂಗಿನ ಹೊಸ ಬಟ್ಟೆ, ಸರ, ಒಲೆಗಳು, ವಿವಿದ ಬಗೆಯ ಚಿತ್ತಾರದಲ್ಲಿ ಮೆಹಂದಿ ಡಿಸೈನ್‍ಗಳು, ವಿಭಿನ್ನ ವಿನ್ಯಾಸದ ಚಪ್ಪಲಿಗಳು ಲಗ್ಗೆ ಇಟ್ಟಿವೆ. ಇವುಗಳ ಜೊತೆಗೆ ರಂಜಾನ್ ಹಬ್ಬದಲ್ಲಿ ಮಾಡುವ ವಿಶೇಷವಾಗಿ ಮಾಡುವ ಸುರಕುಂಬದ ಬೇಕಾದ ಪದಾರ್ಥಗಳ ಬೆಲೆ ಗಗನಕ್ಕೇರಿದೆ. ಪ್ರತಿವರ್ಷಕ್ಕಿಂತ ಈ ವರ್ಷವು ದುಪ್ಪಟಾಗಿದೆ.

ಹಬ್ಬಕ್ಕೆ ವಿಶೇಷವಾಗಿ ಸುರಕುಂಬ ಎನ್ನುವ ಸಿಹಿ ಮಾಡುತ್ತಾರೆ, ಇದರ ಜೊತೆಗೆ ಮಾಸದ ಬಾಡೂಟವನ್ನು ಮಾಡುತ್ತಾರೆ. ಸುರಕುಂಬ ಮಾಡಿ ಎಲ್ಲರಿಗೂ ಹಂಚಿ ಆನಂದ ಪಡುತ್ತಾರೆ. ಆದರೆ ಈ ಸುರಕುಂಬ ಹಾಗೂ ಬಾಡೂಟ ತಯಾರಿಕೆಗೆ ಬೇಕಾದ ಡ್ರೈ ಪ್ರೂಟ್ಸ್, ಮಸಾಲೆ ಪದಾರ್ಥಗಳ ಬೆಲೆಗಳು ಗಗನಕ್ಕೆ ಏರೀವೆ. ಪ್ರತಿ ವರ್ಷಕ್ಕಿಂತಲೂ ಈ ವರ್ಷವೂ ಎಲ್ಲಾ ಪದಾರ್ಥಗಳು 200 ರಿಂದ 300 ರೂ.ಗಳ ವರೆಗೆ ಏರೀಕೆಯಾಗಿವೆ. ಈ ಖಾದ್ಯಗಳ ತಯಾರಿಕೆಗೆ ಬೇಕಾದ ಕಾಜು, ಬದಾಮಿ, ಚಾರುಳ್ಳಿ, ಅಕ್ರೋಟ್, ಫಿಸ್ತಾ, ಕೇರಬೀಜ, ಒಣದ್ರಾಕ್ಷಿ, ಕಾರೀಕ, ಗಸಗಸೆ, ಜಾಜಿಕಾಯಿ, ಯಾಲಕ್ಕಿ, ಕಲ್ಲಗಡಿ ಬೀಜಹೀಗೆ ಅನೇಕ ವಸ್ತುಗಳು ದರದಲ್ಲಿ ವ್ಯತ್ಯಾಸವಾಗಿವೆ. ಆದರೆ ಚಕ್ಕೆ, ಲವಂಗ, ಮಸಾಲೆ ಎಲೆ, ಇವುಗಳ ದರದಲ್ಲಿ ವ್ಯತ್ಯಾಸವಿಲ್ಲ.

ಸಾಮಗ್ರಿಗಳ ಬೆಲೆ ಕೆ.ಜಿಗಳಲ್ಲಿ

ಕಾಜು-700ರೂ, ಬದಾಮಿ-700, ಚಾರುಳ್ಳಿ-870 ರಿಂದ 900ರೂ, ಅಕ್ರೋಟ್-800ರೂ, ಫಿಸ್ತಾ-1700ರೂ, ಕೇರಬೀಜ-500ರೂ, ಒಣದ್ರಾಕ್ಷಿ-200ರೂ, ಕಾರೀಕ-200ರೂ, ಗಸಗಸೆ-800ರೂ, ಜಾಜಿಕಾಯಿ-700ರೂ, ಯಾಲಕ್ಕಿ-2500 ರಿಂದ 3000ರೂ, ಕಲ್ಲಂಗಡಿ ಬೀಜ-200ರೂ. ಇದೆಲ್ಲವು ಪ್ರಸ್ತುತ ದಿನದ ಪದಾರ್ಥಗಳ ಬೆಲೆಯಾಗಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ 200ರಿಂದ 300ರೂ ವರೆಗೆ ದರ ಹೆಚ್ಚಳವಾಗಿದೆ. ಎಲಕ್ಕಿ ಮಾತ್ರ ಕಳೆದ ವರ್ಷದಲ್ಲಿ 800 ರಿಂದ 1000ರೂ.ಗಳ ವರೆಗೆ ಇದ್ದ ಬೆಲೆ ಒಮ್ಮೆಲೆ 2500ರಿಂದ 3000ರೂ.ಗೆ ಏರಿಕೆಯಾಗಿದೆ. ಈ ವರ್ಷ ಎಲಕ್ಕಿ ಬೆಳೆಗಾರರು ಬಂಪರ್ ಜಾಕ್‍ಪಾಟ್ ಹೊಡೆಯಲ್ಲಿದ್ದಾರೆ.

ಗಾಂಧಿ ಬಜಾರದಲ್ಲಿ ಹಲವು ವರ್ಷಗಳಿಂದ ಕೇವಲ 10ದಿನ ಅಥವಾ ವಾರದ ಮಟ್ಟಿಗೆ ಅಂಗಡಿಗಳನ್ನು ಹಾಕಿ ವ್ಯಾಪಾರ ಮಾಡುವ ವ್ಯಾಪಾರಿಗಳನ್ನು ಮಾತನಾಡಿಸಿದಾಗ ಅವರ ಪ್ರಕಾರ ಈ ವರ್ಷವು ಪ್ರತಿ ವರ್ಷಗಿಂತಲೂ ಹಬ್ಬಕ್ಕೆ ಬೇಕಾದ ವಸ್ತುಗಳ ಬೆಲೆ ದ್ವೀಗುಣಗೊಂಡಿದೆ. ಆದರೂ ಸಹ ವ್ಯಾಪಾರದಲ್ಲಿ ಯಾವುದೇ ರೀತಿಯಲ್ಲಿ ತೊಂದರೆಗಳು ಇಲ್ಲ. ಗ್ರಾಹಕರು ಉತ್ಸಾಹದಿಂದಲೆ ಖರೀದಿಸುತ್ತಿದ್ದಾರೆ.

ಪ್ರತಿವರ್ಷವು ಅಂಗಡಿಗಳನ್ನು ಹಾಕಲು 15ದಿನಗಳ ಮುಂಚಿತವಾಗಿಯೇ ಅನುಮತಿ ನೀಡುತ್ತಿದ್ದರು, ಆದರೆ ಈ ವರ್ಷ 10ರಿಂದ 8ದಿನಗಳವರೆಗೆ ಮಾತ್ರ ಅನುಮತಿ ನೀಡಿದ್ದಾರೆ. ಸುಮಾರು 2.50 ಲಕ್ಷದವರೆಗೆ ಬಂಡವಾಳ ಹಾಕಿ ಎಲ್ಲಾ ಪದಾರ್ಥಗಳನ್ನು ಬಾಂಬೆ ಹಾಗೂ ವಿಜಯಪುರದಿಂದ ಖರೀದಿಸಿದ್ದಾರೆ. ಇದರಿಂದ ಸುಮಾರು 50 ರಿಂದ 60ಸಾವಿರ ರೂ.ಗಳ ಲಾಭ ಪಡೆಯುವ ನೀರಿಯಲ್ಲಿ ವ್ಯಾಪಾರಿಗಳು ಇದ್ದಾರೆ.

ಅಭಿಪ್ರಾಯ

  • ನಾನು ಸಿಂದಗಿ ತಾಲ್ಲೂಕಿನ ಜಾಳವಾದ ಗ್ರಾಮದವರು. ನಾನು ಸುಮಾರು 30ವರ್ಷಗಳಿಂದ ನಗರದ ಗಾಂಧಿ ಬಜಾರದಲ್ಲಿ ರಂಜಾನ್ ಹಬ್ಬದ ಸಂದರ್ಭದಲ್ಲಿ ವ್ಯಾಪಾರ ಮಾಡುತ್ತಿದ್ದೇನೆ. ನಮಗೆ ಗ್ರಾಹಕರು ಉತ್ತಮ ರೀತಿಯಲ್ಲಿ ಸಹಕರಿಸುತ್ತಿದ್ದಾರೆ. ನನಗೆ ಸುಮಾರು ಜನರು ತುಂಬಾ ಆತ್ಮೀಯರು ಹಾಗೂ ಕಾಯಂ ಗ್ರಾಹಕರು ಆಗಿದ್ದಾರೆ. ಈ ವರ್ಷ 2ಲಕ್ಷ ಬಂಡವಾಳ ಹಾಕಿದ್ದೇನೆ. ಈವರ್ಷ ತಡವಾಗಿ ವ್ಯಾಪಾರ ಪ್ರಾರಂಭವಾಗಿದೆ. ಹಾಗಾಗಿ ಲಾಭದ ನಿರೀಕ್ಷೆವು ಕಡಿಮೆ ಪ್ರಮಾಣದಲ್ಲಿದೆ ಹಾಗಾಗಿ ವ್ಯಾಪಾರ ಯಾವ ರೀತಿಯಲ್ಲಿ ಆಗುವುದು ಅಂತ ಕಾದು ನೋಡಬೇಕಾಗಿದೆ. | ಸುರೇಶ. ಮಲ್ಲಪ್ಪ. ದೊಡ್ಡಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Suddidina.com Kannada online news portal. Its providing Kannada news, film news Kannada, sports news Kannada, political NeWS in Kannada and more.

ಅಂತರಂಗ

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

Published

on

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು

ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.

ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.

ಖರ್ಗೋನ್‌ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.

ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.

ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

Continue Reading

ಅಂಕಣ

Indian birthwort: ಪರಮಾತ್ಮನ ಹೆಸರಲ್ಲೇ ಇರುವ ದಿವ್ಯೌಷದ ಈಶ್ವರ ಬಳ್ಳಿ ಬಗ್ಗೆ ಗೊತ್ತೇ?

Published

on

indian birthwort, Aristolochia tagala

‘ಈಶ್ವರ’ ಎಂದ ಕೂಡಲೇ ಪರಮಾತ್ಮನನ್ನೆ ನೆನಪಿಸಿಕೊಳ್ಳೋ ನಮಗೆ ಅದೇ ಹೆಸರಿನಲ್ಲಿ ದಿವ್ಯೌಷಧಿ ಇದೆ ಎಂಬುದು ಎಷ್ಟು ಜನರಿಗೆ ತಿಳಿದೀತು? ಹೌದು! ಪರಮಾತ್ಮನ ಹೆಸರಿನಲ್ಲೇ ಒಂದು ಗಿಡಮೂಲಿಕೆ ಇದೆ (Indian birthwort). ಇದರ ವಿಶೇಷತೆ ಏನು? ಅದರಿಂದಾಗುವ ಪ್ರಯೋಜನಗಳೇನು? ಆರೋಗ್ಯದ ಮೇಲೆ ಬೀರುವ ಪ್ರಬಾವಗಳೇನು? ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ.

ಈ ಬಳ್ಳಿಯನ್ನು ಹೆಚ್ಚಾಗಿ ಭಾರತ, ನೇಪಾಳ, ಶ್ರೀಲಂಕಾ ಮತ್ತು ಬಾಂಗ್ಲಾದೇಶಗಳಲ್ಲಿ ಕಾಣಬಹುದಾಗಿದೆ. ಇದರ ವೈಜ್ಞಾನಿಕ ಹೆಸರು ಅರಿಸ್ಟೋಲೋಚಿಯ ಇಂಡಿಕಾ. ಸಾಮಾನ್ಯವಾಗಿ ಮೂಲಿಕೆ ಮರಕ್ಕೆ ಸುತ್ತಿಕೊಂಡು ಬೆಳೆಯುವ ಕಪ್ಪು ಬಳ್ಳಿಯಾಗಿದ್ದು, ಇದರ ಎಲೆಗಳು ಉದ್ದವಾಗಿ, ತಳದಲ್ಲಿ ಅಗಲವಾಗಿ, ತುದಿಯಲ್ಲಿ ಮೊನಚಾಗಿ, ಮೃದುವಾಗಿರುತ್ತದೆ. ಇನ್ನೂ ಇದರ ಬೀಜಗಳು ಚಪ್ಪಟೆಯಾಗಿ, ಅಂಡಕಾರವಾಗಿದ್ದು ಪುಕ್ಕಗಳನ್ನು ಹೊಂದಿದೆ ಹಾಗು ಇದರ ಬೇರುಗಳಲ್ಲಿ ಸುಗಂಧ ತೈಲವಿರುತ್ತದೆ.

ಈಶ್ವರ ಬಳ್ಳಿ (Indian birthwort)ಯ ಪೌರಾಣಿಕ ಹಿನ್ನೆಲೆ:

ನಮ್ಮೆಲ್ಲರಿಗೂ ತಿಳಿದಂತೆ ಶಿವ ಸಮುದ್ರ ಮಂಥನ ಮಾಡುವಾಗ ಹಾಲಾಹಲ (ವಿಷ) ಉತ್ಪತ್ತಿಯಾಯಿತು. ಆ ವಿಷ ಯಾರಿಗೂ ತೊಂದರೆಯಾಗಬಾರದೆಂದು ತಾನೇ ಅದನ್ನು ಕುಡಿದ. ಇದನ್ನು ನೋಡಿದ ಪಾರ್ವತಿ ದೇವಿ ಆ ವಿಷ ತನ್ನ ಪತಿಯ ಹೊಟ್ಟೆ ಸೇರಬಾರದೆಂದು ಆತನ ಕುತ್ತಿಗೆಯನ್ನು ಒತ್ತಿ ಹಿಡಿದಳು. ವಿಷ ಒಳ ಹೋಗಲಿಲ್ಲ. ವಿಷದ ಪ್ರಭಾವದಿಂದ ಕುತ್ತಿಗೆ ನೀಲ ವರ್ಣವಾಯಿತು. ಶಿವ ನೀಲಕಂಠನಾದ. ಶಿವ ವಿಷ ಕುಡಿದರೂ ಶಿವನಿಗೆ ಏನೂ ಆಗಲಿಲ್ಲ. ವಿಷವನ್ನು ನಿರ್ವಿಷ ಮಾಡುವ ಗುಣ ಶಿವನಿಗಿದ್ದಂತೆ ಈ ಗಿಡಕ್ಕೂ ಇರುವ ಕಾರಣ ‘ಈಶ್ವರ’ ಎಂಬ ಹೆಸರು ಈ ವನಸ್ಪತಿಗೆ ಇಟ್ಟಿದ್ದಾರೆ.

ಇದನ್ನೂ ಓದಿ: ಓಂಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ

‘ಈಶ್ವರ’ ಬಳ್ಳಿ ಮತ್ತು ಅದರ ಫಲ ನೋಡಲು ಹೇಗಿರುತ್ತದೆ?

ಕೆಲ ‘ಈಶ್ವರ’ ಬಳ್ಳಿಯು ಮರದಂತೆ ಉದ್ದಕ್ಕೆ ಏರುತ್ತದೆ. ಮತ್ತಷ್ಟು ಬಳ್ಳಿಯು ಪೊದೆಯಾಗಿ ಆವರಿಸಿಕೊಳ್ಳುತ್ತದೆ. ಸ್ವಲ್ಪ ಉದ್ದ ಆಯತಾಕಾರದ ಎಲೆಗಳು. ಎಲೆಗಳು ಅಲ್ಲಾಡಿದರೆ ಪರಿಮಳ ಸೂಸುತ್ತದೆ. ಎಲೆಯನ್ನು ಕಿವಿಚಿದರೂ ಪರಿಮಳ ಬರುತ್ತದೆ. ಹೂಗಳು ಬಾಯಿ ತೆರೆದ ಹಕ್ಕಿಗಳಂತೆ ಕಂಡುಬರುತ್ತದೆ. ಫಲಗಳು ಉದ್ದ ಹಾಗೂ ಸ್ವಲ್ಪ ದುಂಡಾಗಿ ಇರುತ್ತದೆ. ಫಲ ಬೆಳೆದು ಒಡೆದಾಗ ತಲೆ ಕೆಳಗಾಗಿ ಬಿಡಿಸಿದ ಪ್ಯಾರಾಚೂಟ್‌ನಂತೆ ಕಾಣುತ್ತದೆ. ಅದರೊಳಗೆ ತೆಳುವಾದ ತ್ರಿಕೋಣಾಕಾರದ ಬೀಜಗಳು ಇರುತ್ತದೆ.

‘ಈಶ್ವರ’ ಬಳ್ಳಿ (Indian birthwort)ಯಿಂದ ಆಗುವ ಪ್ರಯೋಜನಗಳೇನು?

ಭಾರತದ ಎಲ್ಲಾ ಕಡೆ ಕಂಡು ಬರುವ ಈಶ್ವರ ಬಳ್ಳಿಯ ಬೇರು, ಎಲೆಗಳು ಔಷಧಿಗಾಗಿ ಉಪಯೋಗಿಸಲ್ಪಡುತ್ತದೆ. ಕ್ರಿಮಿ ಬಾಧೆ, ಕಫ ಬಾಧೆ, ಸ್ತ್ರೀಯರ ಕೆಲವು ತೊಂದರೆಗಳಲ್ಲಿ, ವಿಷ ಚಿಕಿತ್ಸೆಯಲ್ಲಿ ವಿಶೇಷವಾಗಿ ಇದನ್ನು ಉಪಯೋಗಿಸಲ್ಪಡುತ್ತದೆ.

ಜೇಡ, ಚೇಳು, ಇಲಿ ಕಚ್ಚಿದರೆ: ಇದರ 3ಗ್ರಾಂ ಬೇರನ್ನು ಅಕ್ಕಿ ತೊಳೆದ ನೀರಲ್ಲಿ ಕಲಸಿ ಕುಡಿಸಬೇಕು ಹಾಗೂ ಅದರ ಎಲೆಯನ್ನು ನೀರಲ್ಲಿ ಅರೆದು ಕಚ್ಚಿದಲ್ಲಿಗೆ ಲೇಪಿಸಬೇಕು.
ತಲೆ ನೋವಿಗೆ ರಾಮಬಾಣ: ಈಶ್ವರ ಬಳ್ಳಿಯ ಎಲೆಯಲ್ಲಿ 10 ಗ್ರಾಂ ರಸ ತೆಗೆದು, 3ಗ್ರಾಂ ಅರಿಶಿನ ಪುಡಿ ಸೇರಿಸಿ ಕುಡಿಯುವುದರಿಂದ ತಲೆನೋವು ಶೀಘ್ರವಾಗಿ ಕಡಿಮೆಯಾಗುತ್ತದೆ.
ಗಂಟುನೋವು, ಬಿಳಿ ಮಚ್ಚೆಗಳು: ಈ ಎಲೆಯನ್ನು ನೀರಲ್ಲಿ ಅರೆದು ಗಂಟುನೋವು ಅಥವಾ ಬಿಳಿ ಮಚ್ಚೆಗಳ ಮೇಲೆ ಹಚ್ಚುತ್ತ ಬಂದರೆ ಕ್ರಮೇಣ ವಾಸಿಯಾಗುತ್ತದೆ.
ಕೆಮ್ಮು ಕಫಕ್ಕೆ ಔಷಧಿ: ಇದರ ಎಲೆಯ ಜ್ಯೂಸ್ ತೆಗೆದು 15 ಎಂಎಲ್ ನಷ್ಟು ಕುಡಿಸುವುದರಿಂದ ಕಡಿಮೆಯಾಗುವುದು. ಕೆಲವೊಮ್ಮೆ ಈ ಎಲೆಯ ಜ್ಯೂಸ್ ಕುಡಿದ ಸ್ವಲ್ಪ ಹೊತ್ತಿನಲ್ಲಿ ಕಫ ವಾಂತಿಯಾಗಿ ಕರಗಿ ಹೋಗುತ್ತದೆ. ಕಫ ಜಾಸ್ತಿ ಇರುವಾಗ ಸಾಮಾನ್ಯವಾಗಿ ಅಮೃತಾಂಜನ, ವಿಕ್ಸ್ ಎದೆಗೆ ಹಚ್ಚುತ್ತಾರೆ. ಅದೇ ರೀತಿ ಎಲೆಯನ್ನು ಅರೆದು ಎದೆಗೆ ಹಚ್ಚಬಹುದು.
ಮುಟ್ಟಿನ ದೋಷ ನಿವಾರಣೆ: ಹೆಣ್ಣುಮಕ್ಕಳ ಋತುಚಕ್ರದ ವೇಳೆ ಕಾಣಿಸಿಕೊಳ್ಳುವ ಹೊಟ್ಟೆನೋವಿಗೆ 10ಗ್ರಾಂ ಈಶ್ವರ ಬೇರಿನ ಕಷಾಯ ಮಾಡಿ (30 ರಿಂದ 40 ಎಂ.ಎಲ್) ಕುಡಿಸಬೇಕು.
ಹೊಟ್ಟೆ ಕ್ರಿಮಿ ಬಾಧೆ: 5-10 ಮಿಲಿ ಎಲೆರಸವನ್ನು 3 ದಿನ ಕುಡಿಯುವುದರಿಂದ ಕಡಿಮೆಯಾಗುವುದು.
ಜ್ವರಕ್ಕೆ ದಿವ್ಯೌಷಧಿ: 5 ಗ್ರಾಂ ಈಶ್ವರ ಬೇರನ್ನು ಕಷಾಯ ಮಾಡಿ ಅದಕ್ಕೆ 1/2 ಚಮಚ ಕಾಳು ಮೆಣಸು ಪುಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು. ಶರೀರ ಬಿಸಿ ಆಗಿ ಚಳಿಯಿಂದ ಕೂಡಿದ ಜ್ವರವಿದ್ದರೆ ಈಶ್ವರ ಬೇರಿನ ಕಷಾಯದೊಂದಿಗೆ ಈಶ್ವರ ಬೇರಿನ ಎಲೆ ರಸಕ್ಕೆ ಹಿಪ್ಪಿಯನ್ನು ಪುಡಿಮಾಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು.
ಸರ್ಪ ಸುತ್ತಿಗೆ ರಾಮಬಾಣ: ಇತ್ತೀಚೆಗೆ ಸರ್ಪ ಸುತ್ತಿಗೆ ಅನೇಕ ಔಷಧಿಗಳಿದ್ದರು ಈಶ್ವರ ಬೇರು ಮತ್ತು ನೀಲಿ ಸೊಪ್ಪನ್ನು ಸೇರಿಸಿ ಅರೆದು ಹಚ್ಚುವುದರಿಂದ ಉರಿ ನೋವು ಕಡಿಮೆಯಾಗುವುದು.
ದೃಷ್ಟಿ ದೋಷ ನಿವಾರಣೆ: ಇದರ ಬೇರನ್ನು ನಯವಾಗಿ ಚೂರ್ಣಮಾಡಿ ಅದಕ್ಕೆ ಅಪ್ಪಟ ಗೋರೋಜನ ಮತ್ತು ಚಂದನ ಸೇರಿಸಿ ತಿಲಕವಿಟ್ಟರೆ ದೃಷ್ಟಿ ದೋಷ ಪರಿಹಾರವಾಗುತ್ತದೆ.
ಮಲಬದ್ಧತೆ ಮತ್ತು ಮೂಲವ್ಯಾಧಿ ನಿವಾರಣೆ: ಈಶ್ವರಿಬೇರು, ಹಾವು ಮೆಕ್ಕೆ ಬೇರು ದಂತಿ, ತಿಗಡೆ ಕೊಮ್ಮೆ ಬೇರು, ಅಳಲೆಕಾಯಿ ಸಿಪ್ಪೆ, ಹಿಪ್ಪಲಿ ಇವುಗಳೆಲ್ಲವನ್ನು ಸಮತೂಕದಲ್ಲಿ ನಯವಾಗಿ ಚೂರ್ಣಿಸಬೇಕು. ನಂತರ 2 ರಿಂದ 2.5 ಗ್ರಾಂ ಚೂರ್ಣವನ್ನು ಸೇವಿಸಿ ಬಿಸಿನೀರು ಕುಡಿದರೆ ಮಲಬದ್ಧತೆ ಮತ್ತು ಮೂಲವ್ಯಾದಿ ನಿವಾರಣೆಯಾಗುತ್ತದೆ.

ಹೀಗೆ ಈಶ್ವರ ಬೇರು (Indian birthwort) ಮತ್ತು ಅದರ ಎಲೆಯಲ್ಲಿ ಅಡಗಿರುವ ದಿವ್ಯೌಷಧಿ ಅಪಾರ. ಅದರಲ್ಲಿ ತೀಕ್ಷ ಗುಣಗಳುಳ್ಳ ಮದ್ದಾಗಿದ್ದು, ಅನೇಕ ಕಾಯಿಲೆಗಳಿಗೆ ರಾಮಬಾಣವಾಗಿದೆ. ಯಾವುದೇ ಔಷಧಿಯಾದರು ಉಪಯೋಗಿಸು ಮುನ್ನ ಒಮ್ಮೆ ತಜ್ಞ ವೈದ್ಯರ ಸಲಹೆ ಪಡೆಯುವುದು ಸೂಕ್ತ.

Continue Reading

ದಿನದ ಸುದ್ದಿ

ಗೃಹಬಳಕೆ ಎಲ್‌ಪಿಜಿ ಸಿಲೆಂಡರ್ ಬೆಲೆಯಲ್ಲಿ ಬದಲಾವಣೆ ಇಲ್ಲ

Published

on

ಸುದ್ದಿದಿನಡೆಸ್ಕ್:ಗೃಹಬಳಕೆಯ ಎಲ್‌ಪಿಜಿ ಸಿಲೆಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಸ್ಪಷ್ಟಪಡಿಸಿದೆ.

ಗೃಹ ಬಳಕೆ ಎಲ್‌ಪಿಜಿ ಸಿಲೆಂಡರ್ ಬೆಲೆಯನ್ನು 111 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ ಎಂಬ ಮಾಧ್ಯಮ ವರದಿಗಳನ್ನು ತಳ್ಳಿ ಹಾಕಿರುವ ಸಚಿವಾಲಯ, ವಾಣಿಜ್ಯ ಸಿಲೆಂಡರ್ ಬೆಲೆಯು ಅಂತಾರಾಷ್ಟ್ರೀಯ ಕಚ್ಚಾ ಅನಿಲ ಮತ್ತು ಸಂಬAಧಿತ ದರಗಳ ಮೇಲೆ ಅವಲಂಬಿತವಾಗಿದ್ದು, ಆಗಾಗ್ಗೆ ಮಾರುಕಟ್ಟೆಯ ದರಗಳು ಬದಲಾಗುತ್ತವೆ. ಆದರೆ, ಗೃಹ ಬಳಕೆಯ ಸಿಲೆಂಡರ್ ದರದಲ್ಲಿ ಯಾವುದೇ ವ್ಯತ್ಯಾಸವಿಲ್ಲ ಎಂದು ತಿಳಿಸಿದೆ.

ದೆಹಲಿಯಲ್ಲಿ 14.2 ಕೆಜಿ ಗೃಹ ಬಳಕೆ ಅಡುಗೆ ಅನಿಲ ಸಿಲೆಂಡರ್ ಬೆಲೆ 950 ರೂಪಾಯಿಯಾಗಿದ್ದು, ಪ್ರಧಾನಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಇದು 553 ರೂಪಾಯಿ ಬೆಲೆಯಲ್ಲಿ ಲಭ್ಯವಿದೆ. ಇದು ಆಗಸ್ಟ್ 2023 ರಿಂದ ನವೆಂಬರ್ 2025ರವರೆಗೆ ಹೋಲಿಸಿದರೆ, ಶೇಕಡಾ 39 ರಷ್ಟು ದರ ಕಡಿತವನ್ನು ಸೂಚಿಸುತ್ತದೆ. ಜನರಿಗೆ ಸುಸ್ಥಿರ ಇಂಧನ ಪೂರೈಕೆಗೆ ಒತ್ತು ನೀಡಲಾಗಿದ್ದು, ದರ ಬದಲಾವಣೆ ಇಲ್ಲ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ4 hours ago

ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ. ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ,...

ದಿನದ ಸುದ್ದಿ5 hours ago

ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ. ತಿರಸ್ಕೃತಗೊಂಡ...

ದಿನದ ಸುದ್ದಿ3 days ago

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ....

ದಿನದ ಸುದ್ದಿ3 days ago

ಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ

ಸುದ್ದಿದಿನ,ದಾವಣಗೆರೆ:ಮಾರ್ಚ್ 18 ರಿಂದ ಪ್ರಾರಂಭವಾಗುವ ಎಸ್.ಎಸ್.ಎಲ್.ಸಿ ಫಲಿತಾಂಶವನ್ನು ಹೆಚ್ಚಿಸಲು ಶಿಕ್ಷಕರು ಮತ್ತು ಮುಖ್ಯೋಪಾಧ್ಯಾಯರು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ತುಂಗಭದ್ರಾ...

ದಿನದ ಸುದ್ದಿ4 days ago

ಫೆ.14 ರಂದು ಸಂತ ಸೇವಾಲಾಲ್‌ರವರ 287ನೇ ಜಯಂತಿ ಕಾರ್ಯಕ್ರಮ

ಸುದ್ದಿದಿನ,ದಾವಣಗೆರೆ:ಸಂತ ಸೇವಾಲಾಲ್‌ರವರ 287ನೇ ಜಯಂತ್ಸೋವ ಕಾರ್ಯಕ್ರಮವು ಫೆ. 14 ರಂದು ಮಧ್ಯಾಹ್ನ 2 ಗಂಟೆಗೆ ನ್ಯಾಮತಿ ತಾಲ್ಲೂಕಿನ ಭಾಯಾಗಡ್-ಸೂರಗೊಂಡನಕೊಪ್ಪದಲ್ಲಿ ನಡೆಯಲಿದೆ. ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ...

ದಿನದ ಸುದ್ದಿ5 days ago

ಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ

ಸುದ್ದಿದಿನ,ದಾವಣಗೆರೆ:ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಉದ್ದಿಮೆ ಮಳಿಗೆಗಳು ಕಡ್ಡಾಯವಾಗಿ ಶೇ.60 ರಷ್ಟು ಕನ್ನಡ ಭಾಷೆಯಲ್ಲಿ ನಾಮಫಲಕವನ್ನು ಅಳವಡಿಸಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದ್ದಾರೆ. ಒಂದು...

ದಿನದ ಸುದ್ದಿ5 days ago

ದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ:ದಾವಣಗೆರೆ ತಾಲ್ಲೂಕಿನ ಕಂದಗಲ್ಲು ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಲಿಂಗೇಶ್ವರ ಹಿರಿಯ ಪ್ರಾಥಮಿಕ ಅನುದಾನಿತ ಶಾಲೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಆಡಳಿತಕ್ಕೆ ಒಳಪಟ್ಟಿದೆ. ನಿಯಮಬಾಹಿರವಾಗಿ ಸಾಮಾನ್ಯ...

ದಿನದ ಸುದ್ದಿ1 week ago

ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಹೆಚ್. ಕೇಶವ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ಶಿವಮೊಗ್ಗ:ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ ಬ್ಯಾಕ್‌ಲಾಗ್ ಅಡಿಯಲ್ಲಿ ನೇಮಕ ಮಾಡಿಕೊಳ್ಳಲಾದ ಹುದ್ದೆಗಳನ್ನು ಇಲಾಖಾ ತನಿಖೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಿ 2 ತಿಂಗಳು ಕಳೆದರೂ ಯಾವುದೇ...

ದಿನದ ಸುದ್ದಿ2 weeks ago

ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ,...

ದಿನದ ಸುದ್ದಿ2 weeks ago

ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ

ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ  ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ...

Trending