ದಿನದ ಸುದ್ದಿ
ಪವಿತ್ರ ರಂಜಾನ್ ನ ವಿಶೇಷತೆ
ರಂಜಾನ್ ಪರಸ್ಪರ ಪ್ರೀತಿ, ವಿಶ್ವಾಸ, ನಂಬಿಕ್ಕೆ ,ಐಕತ್ಯೆಯನ್ನು ಸಾರುವ ಹಬ್ಬ. ತನು ಮನ ಧನ ಧಾನ್ಯ ದೇವರಿಗೆ ಅರ್ಪಿಸುವ ಮೂಲಕ ಪಾಪವನ್ಮು ದೂರಮಾಡುವ ಮುಸ್ಲಿಂ ಧರ್ಮದ ಶ್ರೇಷ್ಠ ಹಬ್ಬ ಪವಿತ್ರ ಶ್ರದ್ಧಾ ಭಕ್ತಿಯ ಅಲ್ಲಾನ ನಾಮ ಸ್ಮರಣೆಯ ಹಬ್ಬ ಈ ರಂಜಾನ್. ಉಪವಾಸ ವೃತ್ತ ಜಪವನ್ನು ಮಾಡುತ್ತಾ. ರಂಜಾನ ತಿಂಗಳಲ್ಲಿ ಮುಸ್ಲಿಂ ಭಾಂದವರು ಉಪವಾಸ ಇದು ಪ್ರಾರ್ಥನೆ ಮಾಡ್ತಾರೆ. ಸದ್ಕಾ ಫಿತ್ರಾ ಜಕಾತ್ ಎಂಬ ಅನೇಕ ನಿಯಮಗಳನ್ನು ಪಾಲಿಸುವ ಮೂಲಕ ಒಳ್ಳೆಯ ಮಾರ್ಗದಲ್ಲಿ ಸಾಗಲು ದೇಹವನ್ನು ಶುದ್ಧವಾಗಿ ಇಟ್ಟುಕೊಳ್ಳಲು ಸಂಪ್ರಾದಯಿಕವಾಗಿ ಆಚರಿಸುವ ಹಬ್ಬವೇ ಈ ರಂಜಾನ್.
ಪ್ರತಿಯೊಬ್ಬ ಮುಸ್ಲಿಂ ಸ್ನೇಹಿತರು ತನ್ನ ಇಂದ್ರಿಯಗಳನ್ನು ಬಲಪಡಿಸಿಕೊಳಲು ಅಂಗಾಗಳನ್ನು ನಿಯಂತ್ರಣದಲ್ಲಿಟುಕೊಳ್ಳಲು ಮುಸ್ಲಿಂ ಬಾಂಧವರು ದಿನನಿತ್ಯ ರೋಜಾ ಎಂಬ ಹೆಸರಿನಲ್ಲಿ ಕಡ್ಡಯವಾಗಿ ಉಪವಾಸ ಇರುತ್ತಾರೆ. ಕೇವಲ ದೇಹವನ್ನು ಮಾತ್ರ ಉಪವಾಸ ಮಾಡುದಲ್ಲದೆ ಶಾರೀಕವಾಗಿ ಮಾನಸಿಕವಾಗಿಯು ಸಹ ಮನಸ್ಸಲಿ ಯಾವುದೇ ಕಲ್ಮಶಗಳಿಲ್ಲದೆ. ಕೆಟ್ಟದನ್ನು ನೋಡದೆ ಕೆಟ್ಟದನ್ನು ಮಾತನಾಡದೇ ಕೆಟ್ಟದನ್ನು ಆಲೋಚಿಸದೆ .ತಪ್ಪು ಮಾರ್ಗವನ್ನು ಮೂಲೆಗೆ ಕಟ್ಟಿ.ತಮ್ಮ ಎಲ್ಲಾ ಅಂಗಾಗಗಳನ್ನು ಸಹ ಪರಿಪೂರ್ಣವಾಗಿ ಶುದ್ಧವಾಗಿಟುಕೊಂಡು ರೋಜಾ ಎಂಬ ಪದಕ್ಕೆ ಭಾವಪೊರ್ಣವಾಗಿ ಜೀವ ತುಂಬುತ್ತಾರೆ.
ರಂಜಾನ್ ತಿಂಗಳಿನಲ್ಲಿ ರೋಜಾ ಮಾಡುವಾಗ ದಿನನಿತ್ಯ ಸೊರ್ಯ ಹುಟ್ಟವ ಮುಚಿಂತವಾಗಿ 4 ಘಂಟೆ ಗೆ ಎದ್ದು ಉಪವಾಸ ಪ್ರಾರಂಭಿಸುವ ಮೂಲಕ ಸಂಜೆ 7 ಘಂಟೆ ವರೆಗು ಒಂದು ತೊಟ್ಟು ನೀರು ಕುಡಿಯದೇ ಭಕ್ತಿಯಿಂದ ಅಲ್ಲಾಹುವಿನ ಜಪ ಮಾಡುತ್ತಾರೆ. ನೀರಷ್ಟೆ ಅಲ ಬಾಯಲಿರುವ ಉಗಳನ್ನು ಸಹ ನುಂಗದೆ ಧಾರ್ಮಿಕ ವಿಧಿ ವಿಧಾನ ಗಳಿಂದ ಪ್ರಾರ್ಥನೆ ಮಾಡುವ ಮೂಲಕ ನಿರಂತರವಾಗಿ ದೇವರ ಕೃಪೆಗೆ ಪಾತ್ರರಾಗುತ್ತಾರೆ. ದೊಡ್ಡವರುವಚಿಕ್ಕವರು ಮಹಿಳೆಯರು ಸೇರಿದಂತೆ ಎಂತಹ ಕಷ್ಟ ಬಂದರು ಅಂದಿನ ಉಪವಾಸ ಪರಿಪೂರ್ಣಗೊಳಿಸುತ್ತಾರೆ. ಎಷ್ಟೋ ಬಾರಿ ರೋಜಾ ಹೊತ್ತಿನಲ್ಲಿರುವಾಗ ಉಪವಾಸ ಮುರಿಯದ್ದೆ ಪ್ರಾಣ ಬಿಟ್ಟಿದ್ದಾರೆ ಮತ್ತು ಪ್ರಾಣ ಉಳಿಸ್ಸಿದ್ದಾರೆ.ಇವರು ದಿನ ನಿತ್ಯ 5 ಹೊತ್ತು ನಮಾಜ್ (ಪ್ರಾರ್ಥನೆ)
ಮಾಡುತ್ತಾರೆ. ವಿಶೇಷ ಅಂದರೆ ಹಬ್ಬದ ಕೊನೆಯದಿನಗಳ ಮುಂಚಿತವಾಗಿ ಪ್ರತಿಯೊಬ್ವರು ಗೋಧಿ ಅಕ್ಕಿ ಅಥವಾ ಧನ ಸಹಾಯ ನೀಡುವುದು ಕಡ್ಡಾಯ ವಾಗಿರುತ್ತದೆ.
ಜಕಾತ್ ಹೆಸರಿನಲ್ಲಿ ಆರ್ಥಿಕವಾಗಿ ಮುಂದಿರುವ ವ್ಯಕ್ತಿ ನ್ಯಾಯಮಾರ್ಗದಲ್ಲಿ ಸಂಪಾದನೆ ಮಾಡಿದ ಹಣದಲ್ಲಿ ಕಡುಬಡವರಿಗೆ ಸಹಾಯ ಮಾಡುವುದು. ಇಸ್ಲಾಂ ಧರ್ಮದಲ್ಲಿ ಕಡ್ಡಾಯ. ಅಲ್ಲಾನ ಅದೇಶದಂತೆ “ಜೆವರಿಲ” ಎಂಬ ದೇವದೊತನ ಮುಖಾಂತರ ಮಹ್ಮದ್ ಪೈಗಂಬರರ ಮೇಲೆ ರಂಜಾನ್ ತಿಂಗಳು ಪ್ರತಿಷ್ಟಿತ ರಾತ್ರಿಯಂದು ಮುಸ್ಲಿಂ ಪವಿತ್ರ ಗ್ರಂಥ ಖುರಾನ್ ಅವತೀರ್ಣವಾಗುತ್ತದೆ.ಈ ರಾತ್ರಿಗೆ ಮುಸ್ಲಿಂ ಮೇಧಾವಿಗಳು ಇದನ್ನು ” ಶಬ್ – ಏ- ಕದರ್” ಪ್ರತಿಷ್ಟಿತ ರಾತ್ರಿ ಎಂದು ಕರೆಯುತ್ತಾರೆ. ಲೋಕ ಕಲ್ಯಾಣಕ್ಕಾಗಿ ರಾತ್ರಿ ಇಡೀ ವಿಶೇಷ ಪ್ರಾರ್ಥನೆ ಮಾಡುತ್ತಾರೆ. ಹೀಗೆ ತಮ್ಮಪವಿತ್ರ ರಂಜಾನ್ ರೋಜವನ್ಮು ಮಾಡಿ ಹಬ್ಬದ ದಿನಸಲದಲಿ ಎಲ್ಲರ ಮನೆಯಲ್ಲಿಯು ಸಹ ಹೊಸ ಬಟ್ಟೆ ಹೊಸ ವಸ್ತು ಹೊಸ ಅಡುಗೆ ಅಲಂಕಾರ ಮಾಡಿ .ಅಂದಿನ ಕೊನೆಯ ದಿನ ಭಕ್ತಿಪೂರ್ವಕವಾಗಿ ರೋಜ್ ವನ್ಮು ಮುರಿದು ಅಲ್ಲನ ಪಾದಕ್ಕೆ ನಮೀಸುತ್ತಾರೆ.ಹಿಂದೊ ಮುಸ್ಲಿಂ ಎಂಬ ಬೇಧ ಭಾವ ಇಲ್ಲದೆ ಹೃದಯ ಪೂರ್ವಕವಾಗಿ ಅಪೂಗೆ ಕೊಡುತ್ತಾ ಮನೆಗೆ ಸ್ವಾಗತಿಸುತ್ತಾರೆ.ಇದು ಪವಿತ್ರ ರಂಜಾನ್ ನ ವಿಶೇಷ ತೆ .

ದಿನದ ಸುದ್ದಿ
ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ
ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.
ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.
ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ್ವಾಮಿ.ಜಿ.ಎಂ.ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.
‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)
AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.
ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.
ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.
ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.
ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.
ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ3 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ5 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ3 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
-
ದಿನದ ಸುದ್ದಿ12 hours agoಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ12 hours agoದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ


