ಸಿನಿ ಸುದ್ದಿ
‘ಸ್ವಾತಿ ಮುತ್ತಿನ ಮಳೆ ಹನಿ’ಗಾಗಿ ಜೊತೆಯಾದ ರಮ್ಯಾ ಮತ್ತು ರಾಜ್ ಬಿ ಶೆಟ್ಟಿ
ಸುದ್ದಿದಿನ ಡೆಸ್ಕ್ : ಆಪಲ್ ಬಾಕ್ಸ್ ಸ್ಟುಡಿಯೋಸ್ ( Apple Box Studios ) ಎಂಬ ನಿರ್ಮಾಣ ಸಂಸ್ಥೆಯ ಮೂಲಕ ಇನ್ನು ಮುಂದೆ ಚಿತ್ರಗಳನ್ನು ನಿರ್ಮಿಸುವುದಾಗಿ ರಮ್ಯಾ (Ramya ) ಯಾವಾಗ ಘೋಷಿಸಿದರೋ, ಆಗಿನಿಂದಲೂ ಆ ಚಿತ್ರ ಯಾವುದಿರಬಹುದು? ಯಾರು ನಟಿಸಬಹುದು? ರಮ್ಯಾ ಬರೀ ನಿರ್ಮಾಪಕಿಯಾಗಿರುತ್ತಾರಾ ಅಥವಾ ಈ ಚಿತ್ರದ ಮೂಲಕ ನಟನೆಗೆ ವಾಪಸ್ಸಾಗುತ್ತಾರಾ? ಎಂಬಂತಹ ಹಲವು ಪ್ರಶ್ನೆಗಳು ಇದ್ದವು. ಈಗ ಈ ಎಲ್ಲ ಪ್ರಶ್ನೆಗಳಿಗೂ ಉತ್ತರ ಸಿಕ್ಕಿದೆ.
ವಿಜಯದಶಮಿಯ ದಿನದಂದು ರಮ್ಯಾ ತಮ್ಮ ನಿರ್ಮಾಣದ ಮೊದಲ ಚಿತ್ರವನ್ನು ಅಧಿಕೃತವಾಗಿ ಘೋಷಿಸಿದ್ದಾರೆ. ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಹೆಸರಿನ ಈ ಚಿತ್ರವನ್ನು ರಾಜ್ ಬಿ ಶೆಟ್ಟಿ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ರಮ್ಯಾ ಮತ್ತು ರಾಜ್ ಬಿ ಶೆಟ್ಟಿ ಇಬ್ಬರೂ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ರಾಜ್ ಹೇಳಿದ ಕಥೆಯಿಂದ ಖುಷಿಯಾಗಿ ಈ ಚಿತ್ರವನ್ನು ನಿರ್ಮಿಸುತ್ತಿರುವುದಾಗಿ ರಮ್ಯಾ ಹೇಳಿಕೊಂಡಿದ್ದಾರೆ. ಪ್ರೀ-ಪ್ರೊಡಕ್ಷನ್ ಹಂತದಲ್ಲಿರುವ ಈ ಚಿತ್ರವು ಸದ್ಯದಲ್ಲೇ ಪ್ರಾರಂಭವಾಗಲಿದೆ. ರಾಜ್ ಶೆಟ್ಟಿ ನಿರ್ದೇಶನದ ‘ಗರುಡ ಗಮನ ಋಷಭ ವಾಹನ’ ಚಿತ್ರಕ್ಕೆ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದ ಪ್ರವೀಣ್ ಶ್ರೀಯಾನ್ ಮತ್ತು ಸಂಗೀತ ನಿರ್ದೇಶಕ ಮಿಥುನ್ ಮುಕುಂದನ್ ಇಲ್ಲೂ ಮುಂದುವರೆಯಲಿದ್ದಾರೆ.
— Ramya/Divya Spandana (@divyaspandana) October 5, 2022
‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರವನ್ನು ರಮ್ಯಾ ಅವರ ಆಪಲ್ಬಾಕ್ಸ್ ಸ್ಟುಡಿಯೋಸ್ ಮತ್ತು ಲೈಟರ್ ಬುದ್ಧ ಫಿಲಂಸ್ ಜಂಟಿಯಾಗಿ ನಿರ್ಮಿಸುತ್ತಿವೆ. ಈ ಚಿತ್ರದ ಬಗ್ಗೆ ಇನ್ನಷ್ಟು ಮಾಹಿತಿ ಸದ್ಯದಲ್ಲೇ ಹೊರಬೀಳಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಸಾಗರ | ಇಂದು ‘ಆರು ಲಘು ನಾಟಕಗಳು’ ಮತ್ತು ‘ಗುಚ್ಛ’ ಪುಸ್ತಕಗಳ ಬಿಡುಗಡೆ
ಸುದ್ದಿದಿನ,ಸಾಗರ : ಅ.ರಾ.ಶ್ರೀನಿವಾಸರು ಬರೆದ ‘ಆರು ಲಘು ನಾಟಕಗಳು’ ಮತ್ತು ‘ಗುಚ್ಛ’ ಈ ಎರಡು ಪುಸ್ತಕಗಳ ಬಿಡುಗಡೆ ಕಾರ್ಯಕ್ರಮವನ್ನು ಇಂದು ಸಂಜೆ ಪಟ್ಟಣದ ಸಿಜಿಕೆ ಸಭಾಭವನದಲ್ಲಿ ಅಂತರಂಗ ಪ್ರಕಾಶನ ಹಮ್ಮಿಕೊಂಡಿದೆ.
ಪುಸ್ತಕಗಳ ಬಿಡುಗಡೆಯನ್ನು ರಂಗಕರ್ಮಿ, ಸಾಮಾಜಿಕ ಕಾರ್ಯಕರ್ತೆ ಪ್ರತಿಭಾ ಎಂ.ವಿ ಮಾಡಲಿದ್ದು, ಅಧ್ಯಕ್ಷತೆಯನ್ನುನಿವೃತ್ತ ಪ್ರಾಂಶುಪಾಲರಾದ ಅ.ರಾ.ಲಂಬೋದರ ಅವರು ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ‘ಆರು ಲಘು ನಾಟಕಗಳು’ ಕುರಿತು ನಿವೃತ್ತ ಪ್ರಾಂಶುಪಾಲರು ಡಾ. ಜಯಪ್ರಕಾಶ್ ಮಾವಿನಕುಳಿ ಹಾಗೂ ‘ಗುಚ್ಛ’ ಕುರಿತು ಸಹಕಾರ ಸಂಘಗಳ ನಿವೃತ್ತ ಉಪ ನಿಬಂಧಕರು ಜಯಪ್ರಕಾಶ್ ತಲವಾಟ ಅವರು ಮಾತನಾಡಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ ತಾರಾನಾಥ್ ಇನ್ನಿಲ್ಲ
ಸುದ್ದಿದಿನಡೆಸ್ಕ್: ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ ತಾರಾನಾಥ್(93) ಅವರು ಅನಾರೋಗ್ಯದಿಂದ ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕಳೆದ ತಿಂಗಳಲ್ಲಿ ಕುಸಿದು ಬಿದ್ದಿರುವುದರಿಂದ ಅವರ ತೊಡೆ ಮೂಳೆ ಮುರಿದಿತ್ತು. ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಬೆಳಿಗ್ಗೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಶ್ರೇಷ್ಠ ಭಾರತೀಯ ಶಾಸ್ತ್ರೀಯ ಸಂಗೀತಗಾರ ಆಗಿರುವ ಅವರು ಸರೋದ್ ವಾದಕರೂ ಆಗಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಕೊಲೆ ಕೇಸ್ ; ನಾಳೆ ಚಿತ್ರದುರ್ಗದಲ್ಲಿ ನಟ ದರ್ಶನ್ ವಿರುದ್ಧ ಪ್ರತಿಭಟನೆ
ಸುದ್ದಿದಿನಡೆಸ್ಕ್: ಚಿತ್ರದುರ್ಗದ ಯುವಕ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕನ್ನಡದ ಚಲನಚಿತ್ರ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ.
ಈ ಸಂಬಂಧ ನಾಳೆ ಚಿತ್ರದುರ್ಗದಲ್ಲಿನ ವಿವಿಧ ಸಂಘಟನೆಗಳು ದರ್ಶನ್ ವಿರುದ್ಧ ಪ್ರತಿಭಟಿಸಿ ತನಿಖೆ ಪಾರದರ್ಶಕವಾಗಿರ ಬೇಕು ಹಾಗೂ ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಬೇಕೆಂದು ಡಿಸಿಗೆ ಮನವಿಯನ್ನು ಸಲ್ಲಿಸಲಿದ್ದಾರೆ.
ಮೈಸೂರಿನ ದರ್ಶನ್ ಒಡೆತನದ ಫಾರ್ಮ್ ಹೌಸ್ನಲ್ಲಿ ೧೦ ಮಂದಿಯನ್ನು ಬಂಧಿಸಲಾಗಿದೆ ಎಂದು ಸುದ್ದಿಸಂಸ್ಥೆ ತಿಳಿಸಿವೆ. ಹೆಚ್ಚಿನ ವಿಚಾರಣೆಗಾಗಿ ದರ್ಶನ್ ಅವರನ್ನು ಬೆಂಗಳೂರಿಗೆ ಕರೆತರಲಾಗಿದ್ದು, ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸಲಾಗುತ್ತಿದೆ.
ಬೆಂಗಳೂರಿನ ಸುಮನಹಳ್ಳಿ ಬಳಿಯ ವೃಷಭಾವತಿ ನಾಲೆಯಲ್ಲಿ ಅಪಾರ್ಟ್ಮೆಂಟ್ ಕಟ್ಟಡದ ಮುಂಭಾಗದಲ್ಲಿ ರೇಣುಕಾಸ್ವಾಮಿಯ ಶವ ಪತ್ತೆಯಾಗಿತ್ತು. ದರ್ಶನ್ ಚಿತ್ರದುರ್ಗ ಅಭಿಮಾನಿಗಳ ಸಂಘದ ಅಧ್ಯಕ್ಷರಿಗೆ ಕರೆ ಮಾಡಿ ರೇಣುಕಾಸ್ವಾಮಿ ಎಲ್ಲಿದ್ದಾರೆ ಎಂಬುದನ್ನು ಪತ್ತೆಮಾಡಿ ಬೆಂಗಳೂರಿಗೆ ಕರೆತರುವಂತೆ ಹೇಳಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ6 days ago
ಕೊಲೆ ಕೇಸ್ ; ನಾಳೆ ಚಿತ್ರದುರ್ಗದಲ್ಲಿ ನಟ ದರ್ಶನ್ ವಿರುದ್ಧ ಪ್ರತಿಭಟನೆ
-
ದಿನದ ಸುದ್ದಿ7 days ago
ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ7 days ago
ಮಸ್ಕಿ | ಬಿಜೆಪಿ ಕಚೇರಿಯಲ್ಲಿ ಆತ್ಮಾವಲೋಕನ ಸಭೆ
-
ದಿನದ ಸುದ್ದಿ6 days ago
ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ ತಾರಾನಾಥ್ ಇನ್ನಿಲ್ಲ
-
ದಿನದ ಸುದ್ದಿ6 days ago
ಭಾರೀ ಮಳೆ ; ಡ್ಯಾಂಗಳಿಗೆ ಹರಿದು ಬಂದ ನೀರೆಷ್ಟು..? ಇಲ್ಲಿದೆ ಸಂಪೂರ್ಣ ಮಾಹಿತಿ
-
ಅಂತರಂಗ5 days ago
ದಾವಣಗೆರೆ | ಪ್ರೊ. ಎಸ್.ಬಿ. ರಂಗನಾಥ್ ಅವರಿಗೆ ಕೇಂದ್ರ ಕ ಸಾ ಪ ದತ್ತಿ ಪ್ರಶಸ್ತಿ ಪ್ರದಾನ
-
ದಿನದ ಸುದ್ದಿ5 days ago
ನಕಲಿ ವೈದ್ಯರ ಹಾವಳಿಗೆ ಬ್ರೇಕ್ ಹಾಕಲು ಸರ್ಕಾರ ಕಟ್ಟುನಿಟ್ಟಿನ ಕ್ರಮ
-
ದಿನದ ಸುದ್ದಿ7 days ago
SC – ST | ಕುರಿ,ಮೇಕೆ ಹಾಗೂ ಕೋಳಿ ಸಾಕಾಣಿಕೆ ತರಬೇತಿ