Connect with us

ಲೈಫ್ ಸ್ಟೈಲ್

ದೇಹ ಮತ್ತು ಆತ್ಮವನ್ನು ಪವಿತ್ರ ಗೊಳಿಸುವ ಒಂದು ತಿಂಗಳ ವ್ರತಾಚರಣೆಯೇ ರಂಜಾನ್

Published

on

  • ಕೆ.ಶ್ರೀಧರ್ (ಕೆ.ಸಿರಿ)

ರಂಜಾನ್ ಮುಸ್ಲಿಂ ಸಮುದಾಯದ ಒಂದು ಪವಿತ್ರವಾದ ಧಾರ್ಮಿಕ ಹಬ್ಬವಾಗಿದೆ. ರಮದಾನ್ ಅಂತಲೂ ಈದ್-ಉಲ್-ಫಿತರ್(ಧಾನ್ಯ ದಾನದ ಹಬ್ಬ) ಎಂತಲೂ ಕರೆಯುತ್ತಾರೆ. ಮಾನವ ಕಲ್ಯಾಣಕ್ಕಾಗಿ ಪ್ರವಾದಿ ಮುಹಮ್ಮದ್ ರವರ ಮೇಲೆ ಇದೇ ತಿಂಗಳಲ್ಲಿ ಪವಿತ್ರ ಕುರಾನ್ ಉದ್ಭವಗೊಂಡಿತು ಇದರ ಪೂಜ್ಯಭಾವಾರ್ಥವಾಗಿ ಪ್ರತೀ ವರ್ಷವೂ ಈ ಒಂದು ತಿಂಗಳ ವ್ರತಾಚರಣೆಯನ್ನು ಕಡ್ಡಾಯಗೊಳಿಸಲಾಗಿದೆ.

ಈ ಒಂದು ತಿಂಗಳು ಪ್ರಭಾತ ಕಾಲದಿಂದ ಸೂರ್ಯಾಸ್ತಮದವರೆಗೂ ಧರ್ಮಸಮ್ಮತವಾದ ಯಾವುದೇ ರೀತಿಯ ಊಟ ಉಪಚಾರಗಳನ್ನು ಒಂದು ತೊಟ್ಟು ನೀರನ್ನೂ ಕುಡಿಯದೆ ಕಾಮಾಸಕ್ತಿಯ ಚಟುವಟಿಕೆಗಳನ್ನು ತ್ಯಜಿಸುವುದನ್ನೇ ಇಸ್ಲಾಂನಲ್ಲಿ ‘ರೋಜ಼ಾ”ಉಪವಾಸ’ ಅಥವಾ ‘ವ್ರತಾಚರಣೆ’ ಸ್ವೇಚ್ಛೆ, ಸ್ವಾರ್ಥ ಮತ್ತು ಅತ್ಯಾಗ್ರಹಗಳಂಥ ಎಲ್ಲ ವಿಧ ಮಾನವೀಯ ದೌರ್ಬಲ್ಯಗಳಿಂದ ಮನುಷ್ಯನನ್ನು ಮುಕ್ತಗೊಳಿಸಿ ದೇಹ ಮತ್ತು ಆತ್ಮವನ್ನು ಪವಿತ್ರ ಗೊಳಿ ಸುವುದೇ ಒಂದು ತಿಂಗಳ ಪೂರ್ಣ ವ್ರತಾಚರಣೆಯ ಉದ್ದೇಶವಾಗಿದೆ.

ರಂಜಾನ್ ತಿಂಗಳ ಹಗಲಿನಲ್ಲಿ ತೊಟ್ಟು ನೀರೂ ಕುಡಿಯದೆ, ಕಠಿಣ ವ್ರತದ ಮೂಲಕ ಹಸಿವಿನ ಕಠಿಣತೆಯನ್ನು ಅರಿತು, ವಿಶ್ವ ಮಾನವರೆಲ್ಲರೂ ಸಮಾನರು. ಅಲ್ಲಿ ಬಡವ – ಶ್ರೀಮಂತರೆನ್ನುವ ಭೇಧವಿಲ್ಲದೆ ಎಲ್ಲರೂ ವ್ರತಾಚರಣೆಯಲ್ಲಿ ತೊಡಗಿ ದೇವಲೀನರಾಗಿ ಅಲ್ಲಾಹನನ್ನು ಪ್ರಾರ್ತಿಸುತ್ತಾ ಎಲ್ಲ ರೀತಿಯ ತಪ್ಪುಗಳಿಂದ ದೂರವಿದ್ದ ಒಂದು ತಿಂಗಳು ಕಳೆದು ಈದ್-ಉಲ್-ಫಿತರ್ ಬರುತ್ತದೆ ಇದು ದಾನದ ಹಬ್ಬ.

ಒಂದು ತಿಂಗಳ ಹಸಿವೆಯ ಪಾಠದಿಂದ ಬಡತನ ಹಸಿವು ಏನೆಂಬುದು ಅರಿತು ಬಡವನಿಗೆ -ಹಸಿದವನಿಗೆ ದಾನದ ಮೂಲಕ ಸಹಾಯಿಯಾಗುವುದು ಕರ್ತವ್ಯ. ಝಕಾತ್-ಝಕಾತ್(ದಾನ) ಮೂಲಕ ಒಬ್ಬ ಮುಸ್ಲಿಮ ಆತನ ಈದ್ ದಿನದ ಹಗಲಿನ ಮತ್ತು ಆ ರಾತ್ರಿಯ ಖರ್ಚಿಗೆ ಬೇಕಾದ ಸ್ವತ್ತು ಕಳೆದು ಬೇರೇನಾದರೂ ಉಳಿದಲ್ಲಿ, ಕಡ್ಡಾಯವಾಗಿ ದಾನ ನೀಡ ತಕ್ಕದ್ದು.

ಆ ದಿನ ಏನೂ ಇಲ್ಲವಾದರೂ ಮನೆಯಲ್ಲಿರುವ ಪಾತ್ರೆಯನ್ನಾದರೂ ಮಾರಿ ದಾನ ನೀಡಬೇಕೆಂಬುದು ಈ ಹಬ್ಬದ ಉದ್ದೇಶ. ರಂಜಾನ್ ಈ ಹಬ್ಬದ ಬಗ್ಗೆ ನನಗೆ ಪ್ರಮುಖ ಆಕರ್ಷಣೆಯಾಗಿದ್ದು ನನ್ನ ಕರ್ತವ್ಯದ ಅವಧಿಯಲ್ಲಿ ದಿನದಿಂದ ದಿನಕ್ಕೆ ಈ ಕೊರೋನಾ ಮಹಾಮಾರಿ ವ್ಯಾಪಕವಾಗಿ ಹರಡುತ್ತಿದ್ದು ಇದನ್ನು ತಡೆಗಟ್ಟುವ ಸಲುವಾಗಿ ಕೋವಿಡ್ ಕೇರ್ ಸೆಂಟರ್ ತೆರೆಯಲಾಗಿದ್ದು ಇಲ್ಲಿಗೆ ಹಾಸಿಗೆಯನ್ನು ಮುನ್ನ ಎಂಬ ಒಬ್ಬ ವ್ಯಕ್ತಿ ಹಾಸಿಗೆಗಳನ್ನು ತಮ್ಮ ಅಂಗಡಿಯಿಂದ ನೀಡುತ್ತಿದ್ದರು ಆ ಒಂದು ದಿನ ಮಧ್ಯಾಹ್ನ 30 ಹಾಸಿಗೆಯುಳ್ಳ ಆಟೋ ರಿಕ್ಷಾವನ್ನು ತೆಗೆದುಕೊಂಡು ಬಂದು ಹಾಸಿಗೆಯನ್ನು ಹಾಕುತ್ತಿದ್ದಾಗ ನಾನು ಸಾಮಾನ್ಯವಾಗಿ ಈ ರೀತಿಯಾಗಿ ಕೇಳಿದೆ.

“ಇನ್ನೂ ಎಷ್ಟು ಬೆಡ್ ಬರಬೇಕು ಸ್ವಲ್ಪ ಬೇಗ ಬೇಗ ವ್ಯವಸ್ಥೆ ಮಾಡಿ” “ಆಯ್ತು ಸರ್ ಈಗ 40 ಬೆಡ್ ಗೆ ಬಂದಿವೆ ಇನ್ನೂ 40 ಬೆಡ್ ಆನ್ದೀ ವೇ ಜಭೀ ಆಟೋದಲ್ಲಿ ಹಾಕೊಂಡು ಬರ್ತಿದ್ದಾನೆ.” “ಹೂಂ ಆಯ್ತು ಇವತ್ತೆ ಎಲ್ಲಾ ವ್ಯವಸ್ಥೆ ಮಾಡಿ.”ಆ ವ್ಯಕ್ತಿ ಮುಗುಳ್ನಗುತ್ತಾ ಒಂದು ಸಾಧಾರಣ ಲುಂಗಿ ಟೀಂ ಶರ್ಟ್ ಧರಿಸಿದ್ದ ಆ ವ್ಯಕ್ತಿ ಮುಗುಳ್ನಗುತ್ತಾ ಈ ರೀತಿ ಹೇಳಿದರು.

“ಆಯ್ತು ಬಿಡಿ ಸರ್ ನಮ್ಗೆ ಎಷ್ಟು ಸಾಧ್ಯ ಆಗ್ತದೋ ಅಷ್ಟು ಜಲ್ದೀ ನಿಮ್ಮ ಕೆಲಸ ಮುಗಿಸಿಕೊಡ್ತೀವಿ” ಎಂದು ತಲೆಯ ಮೇಲೆ ಮಣಭಾರದ ಬೆಡ್ ಹೊತ್ತು ಮುಗುಳ್ನಗೆ ಬೀರುತ್ತಾ ಮೆಟ್ಟಿಲೇರಿ ಒಂದನೆಯ ಮಹಡಿಗೆ ಹೊರಟರು ಅಷ್ಟರಲ್ಲಿಯೇ ಜಭೀರವರು ಆಟೋ ಇಂದ ಇಳಿದರು ಮುನ್ನ ಮತ್ತು ಜಬೀರವರು ಹಿಂದಿಯಲ್ಲಿ ಏನೋ ಕೆಲಸದ ಬಗ್ಗೆ ಮಾತನಾಡುತ್ತಿದ್ದರು ನನಗೆ ಅರ್ಥವಾಗಲಿಲ್ಲ ಅಷ್ಟೊತ್ತಿಗಾಗಲೇ ಊಟದ ಸಮಯವಾಗಿತ್ತು ಊಟಕ್ಕೆ ಹೋಗೋಣವೆಂದು ನಿರ್ಧರಿಸಿ ಹೊರಟೆ.

” ಮುನ್ನ ಅವರೇ ನಿಮ್ದು ಊಟ ಆಯ್ತಾ ಆಗಿಲ್ಲ ಅಂದ್ರೆ ಇಲ್ಲೇ ಊಟ ಮಾಡಿ”. ಸ್ವಲ್ಪ ಹೊತ್ತು ಸುಮ್ಮನಿದ್ದು ಆಟೋದ ಮೇಲಿದ್ದ ಜಭೀರವರು ಪ್ರತ್ಯುತ್ತರಿಸಿದರು.

” ಪರವಾಗಿಲ್ಲ ಸರ್ ನಮ್ದುಕೇ ರೋಜ್ ಗೆ ಇದೀವಿ ನೀವು ಮಾಡಿ” “ಅಯ್ಯೋ ಸಾರಿ ಕೇಳಬಾರದಿತ್ತೇನು” “ಹೇ ಹಾಗೆನಿಲ್ಲ ಸರ್ ಪರವಾಗಿಲ್ಲ ತಪ್ಪೇನಿಲ್ಲ ಬಿಡಿ” ಆ ಕ್ಷಣಕ್ಕೆ ನನಗೆ ಬೇಜಾರಾದಂತೆನಿಸಿತು ಹಾಗೆಯೇ ರಂಜಾನ್ ಹಬ್ಬದ ಬಗ್ಗೆ ತಿಳಿದುಕೊಳ್ಳೋಣವೆಂದಿನಿಸಿ ಮಾತಿಗಿಳಿದೆ.

“ಬಯ್ಯ ಈ ರಂಜಾನ್ ಹಬ್ಬದ ವಿಶೇಷತೆ ಏನು”?
“ಸರ್ ಒಂದು ವರ್ಷದಲ್ಲಿ 11 ತಿಂಗಳು ನಮಗೆ ಇನ್ನೂ 1 ತಿಂಗಳು ನಮ್ಮ ದೇವರಾದ ಅಲ್ಲಾಹು ಗೆ.” “ಅಂದ್ರೆ ಯಾವ ರೀತಿ.?”

“ನಮ್ಗೆ ಈ ಒಂದು ತಿಂಗಳು ಸೂರ್ಯೋದಯ ಆದ್ಮೇಲೆ ಸೂರ್ಯ ಮುಳುಗುವರೆಗೂ ಒಂದನಿ ನೀರು ಕುಡಿದೆ,ಕೆಟ್ಟ ಮಾತನಾಡದೆ, ಕೆಟ್ಟದು ಯೋಚನೆ ಮಾಡದೆ, ಯಾವುದೇ ರೀತಿ ಊಟ ಮಾಡದೇ ಉಪವಾಸ ಇರಬೇಕು ಮಸೀದಿಲೀ ಹೇಳಿದ ಮೇಲೆ ಉಪವಾಸ ಬಿಟ್ಟಿ ನಮಾಝ್ ಮಾಡಬೇಕು.”

“ಇಷ್ಟೇನಾ ಇನ್ನೂ ಏನಾದರೂ ಇದೆಯಾ”?
“ಇನ್ನೂ ಇದೆ ಸರ್ ಈ ಹಬ್ಬ ಅಂದ್ರೆ ಯಾವುದೇ ಜಾತಿ ಧರ್ಮ ನೋಡದೆ ನಮ್ಮ ಕೈಲಾದ ಧಾನ ಧರ್ಮ ಮಾಡಬೇಕು”
“ಯಾಕೆ ಈ ಒಂದು ತಿಂಗಳು ಉಪವಾಸ ಮಾಡಬೇಕು”?

ಇದನ್ನೂ ಓದಿ | ಶಿವಮೊಗ್ಗ ಜಿಲ್ಲೆ – ನಮ್ಮ ಹೆಮ್ಮೆ : ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ( ವಿ.ಐ.ಎಸ್.ಎಲ್)

“ಸರ್ ಮನುಷ್ಯ ಒಂದ್ವರ್ಷದಲ್ಲಿ 1 ತಿಂಗಳು ಉಪವಾಸ ಇದ್ದು ಹಸಿವಿನ ಬಗ್ಗೆ ಬಡತನದ ಬಗ್ಗೆ ನಮಗೆ ಅರಿವಾಗಬೇಕು ಅಂತ ನಿಮ್ಮಲ್ಲಿ ಮಾಲೆ ಹಾಕಿದವರು ಹೇಗೆ ಸ್ವಾಮಿ ಅಂತ ಮಾತಾಡಿಸ್ತಾರೋ ನಾವು ಕೂಡ ಕಟ್ಟು ನಿಟ್ಟಾಗಿ ಇರಬೇಕು”
“ಧಾನ ಅಂದ್ರೆ ಏನ್ ಮಾಡ್ತೀರಾ?” “ನಮ್ಮ ಮನೆಯಲ್ಲಿ ಇವಾಗ 50 ಸಾವಿರ ಚಿನ್ನ ಇದೆ ಅಂತಿಟ್ಕೋಳಿ ಅದರಲ್ಲಿ 2.5% ಯಾರಿಗಾದ್ರೂ ಸಹಾಯ ಮಾಡಬೇಕು ನಮ್ಗೆ ಯಾವುದೇ ಜಾತಿ ಧರ್ಮ ಅಂತಿಲ್ಲ ಸರ್ ಇತ್ತೀಚೆಗೆ ಧರ್ಮಕ್ಕೆ ರಾಜಕಾರಣ ಸೇರಿ ಹಾಳಾಗಿದೆ ಸರ್ ಅವರವರ ಧರ್ಮ ಅವರವರ ಇಷ್ಟ ಸುಮ್ಮನೆ ಜಗಳ ಮಾಡೋದ್ರಲ್ಲೇನಿದೆ ಹೇಳಿ”

“ಸರಿ ದಿನ ಪೂರ್ತಿ ಉಪವಾಸ ಇದ್ದು ಒಂದನಿ ನೀರು ಕುಡಿದೆ ಇಷ್ಟು ಕಠಿಣ ಕೆಲಸ ಮಾಡ್ತೀರಲ್ಲ ನಿಮಗೆ ಆಯಾಸ ಆಗೋದಿಲ್ವ?” “ಸರ್ ಈ ಹಬ್ಬದಲ್ಲಿ ನಾವು ಕೆಲಸ ಮಾಡೋ ಹಾಗಿಲ್ಲ ಆದರೆ ಈ ಕೋರೋನ ಇಂದಾಗಿ ಎಷ್ಟೆಲ್ಲ ಕಷ್ಟ ಇದೆ ಅಲ್ವಾ ಇಂತ ಟೈಂ ಲಿ ಕೆಲಸ ಮಾಡ್ಬೇಕು ನಮಗೆ ಯಾವುದೇ ರೀತಿಯ ಸುಸ್ತಾಗೋಲ್ಲ ಹಂಗ ನೋಡಿದ್ರೆ ಈ ರಂಜಾನ್ ದಿನಗಳಿಗಿಂತ ಬೇರೆ ಟೈಂ ಲೇ ನಮಗೆ ಆಯಾಸ ಆಗುತ್ತದೆ ಈ ರಂಜಾನ್ ಟೈಂ ಲಿ ನಮಗೆ ಎಂತದ್ದೇ ಊಟ ಇದ್ರು ಊಟ ಮಾಡಬೇಕು ಅನಿಸೊಲ್ಲ ನೀರು ಕುಡಿಯಬೇಕು ಅನಿಸೋಲ್ಲ ನಿಮ್ಮಲ್ಲೂ ಕೂಡ ಒಂದತ್ತು(ಉಪವಾಸ) ಮಾಡ್ತೀರಲ್ಲಾ ನಮ್ದು ಕೂಡ ಹಾಗೆ”

ಎಂದು ಮಾತನಾಡುತ್ತಾ ಮಾತನಾಡುತ್ತಾ ಎಲ್ಲಾ ಹಾಸಿಗೆಗಳನ್ನು ಕಾಟದ ಮೇಲಿರಿಸಿ ಒಂದು ಘಳಿಗೆ ಸುಮ್ಮನೆ ಕೂತು ರಂಜಾನ್ ಹಬ್ಬದ ಬಗ್ಗೆ ತಿಳಿಸಿದರು. ಈ ಭೂಮಿ ಮೇಲಿರುವ ಎಲ್ಲಾ ಧರ್ಮಗಳು ಕೂಡ ಹೇಳುವುದು ಧಾನ ಧರ್ಮ ಮಾಡಿ ಅಂತಲೇ ಎಲ್ಲಾ ಧರ್ಮಗಳಿಗಿಂತಲೂ ಈ ಮಾನವ ಧರ್ಮ ಮುಖ್ಯ “ಒಬ್ಬರ ನೋವಿಗೆ ಇನ್ನೊಬ್ಬರ ಹೃದಯ ಮಿಡಿಯುವುದೇ ನಿಜವಾದ ಮನುಷ್ಯ ಧರ್ಮ” ವ್ಯಕ್ತಿ ಯಾವುದೇ ಧರ್ಮವಾಗಿರಲಿ ನೋವಿಗೆ ಮಿಡಿಯುವ, ಭಾವನೆಗಳಿಗೆ ಸ್ಪಂದಿಸುವ ಧರ್ಮವೇ ನಿಜವಾದ ಮನುಕುಲದ ಧರ್ಮ ಎಂಬುದು ನನ್ನ ಒಲವ ಅಭಿಮತ.

(ಕೆ.ಶ್ರೀಧರ್ (ಕೆ.ಸಿರಿ)
ಯುವ ಸಾಹಿತಿ
9741270125)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!

Published

on

ರೋಗ್ಯಕರ ಆಹಾರ ಮತ್ತು ನೈಸರ್ಗಿಕ ಚಿಕಿತ್ಸೆಯಲ್ಲಿ ತೆಂಗಿನ ಎಣ್ಣೆಯು ಬಹಳಷ್ಟು ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ. ಆರೋಗ್ಯದ ದೃಷ್ಟಿಯಿಂದ ತೆಂಗಿನ ಎಣ್ಣೆಗಳಲ್ಲಿ ಕೋಲ್ಡ್ ಪ್ರೆಸ್ಡ್ ಕೊಬ್ಬರಿ ಎಣ್ಣೆ ಅತಿ ಉತ್ತಮ. ಇದನ್ನು ಕೊಬ್ಬರಿ (ಒಣಗಿದ ತೆಂಗಿನಕಾಯಿ) ಯಿಂದ ಮಾಡಲಾಗುತ್ತದೆ. ಇದು ಹೃದಯದ ಆರೋಗ್ಯಕ್ಕೆ ಒಳ್ಳೆಯದು ಮತ್ತು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ.

ದೈನಂದಿನ ಜೀವನದಲ್ಲಿ ತೆಂಗಿನ ಎಣ್ಣೆ ಉಪಯೋಗಿಸಿ ಅದರ ಪ್ರಯೋಜನಗಳನ್ನು ಪಡೆಯಿರಿ :

ತೆಂಗಿನೆಣ್ಣೆಯಲ್ಲಿ ಲಾರಿಕ್ ಆಮ್ಲದಂಶವನ್ನು ಹೊಂದಿರುತ್ತದೆ. ತೆಂಗಿನೆಣ್ಣೆಯ ಬಳಕೆಯಿಂದ ಶಕ್ತಿ ದೊರಕುತ್ತದೆ ಮತ್ತು ತೂಕ ನಿರ್ವಹಣೆಯಲೂ ಸಹಾಯಮಾಡುತ್ತದೆ.

ಹೃದಯದ ಆರೋಗ್ಯ: ತೆಂಗಿನ ಎಣ್ಣೆಯನ್ನು ಸೇವಿಸುವುದರಿಂದ HDL (ಉತ್ತಮ) ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುವ ಮೂಲಕ ಲಿಪಿಡ್ ಆರೋಗ್ಯವನ್ನು ಸುಧಾರಿಸಬಹುದು ಎಂದು ಕೆಲವು ಅಧ್ಯಯನಗಳು ಸಾಬೀತುಪಡಿಸಿದೆ. ಇದು ಹೃದ್ರೋಗದ ಅಪಾಯವನ್ನು ಕಡಿಮೆ ಮಾಡುತ್ತದೆ.

ಜೀರ್ಣಕಾರಿ ಆರೋಗ್ಯ: ತೆಂಗಿನ ಎಣ್ಣೆಯು ಕೊಬ್ಬು-ಕರಗಬಲ್ಲ ಜೀವಸತ್ವಗಳು ಮತ್ತು ಖನಿಜಗಳ ಹೀರಿಕೊಳ್ಳುವಿಕೆಯನ್ನು ಉತ್ತೇಜಿಸುವ ಮೂಲಕ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಇದು ಇರಿಟಬಲ್ ಬೋವೆಲ್ ಸಿಂಡ್ರೋಮ್ (IBS) ಸಮಸ್ಯೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಉರಿಯೂತದ ಗುಣಲಕ್ಷಣಗಳು: ತೆಂಗಿನ ಎಣ್ಣೆಯು ಉತ್ಕರ್ಷಣ ನಿರೋಧಕಗಳು ಮತ್ತು ಉರಿಯೂತದ ಸಂಯುಕ್ತಗಳನ್ನು ಹೊಂದಿರುತ್ತದೆ. ಇದು ದೇಹದಲ್ಲಿ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಚರ್ಮ ಮತ್ತು ಕೂದಲ ರಕ್ಷಣೆ: ತೆಂಗಿನೆಣ್ಣೆ ತಿನ್ನುವುದರಿಂದ ಆರೋಗ್ಯಕರ ಚರ್ಮ ಮತ್ತು ಕೂದಲನ್ನು ಪಡೆಯಲು ಸಹಾಯ ಮಾಡುತ್ತದೆ. ಇದು ಅಗತ್ಯವಾದ ಪೋಷಕಾಂಶಗಳು ಮತ್ತು ತೇವಾಂಶವನ್ನು ಒದಗಿಸುತ್ತದೆ. ತೆಂಗಿನ ಎಣ್ಣೆಯು ನಿಮ್ಮ ಕೂದಲಿಗೆ ಆಳವಾಗಿ ತೂರಿಕೊಂಡು, ಒಳಗಿನಿಂದ ಅವುಗಳನ್ನು ಪೋಷಿಸುತ್ತದೆ ಮತ್ತು ಆರೋಗ್ಯವನ್ನು ಹೊರಸೂಸುವ ನೈಸರ್ಗಿಕ ಹೊಳಪನ್ನು ನೀಡುತ್ತದೆ. ಕೋಲ್ಡ್ ಪ್ರೆಸ್ಡ್ ಕೊಬ್ಬರಿ ಎಣ್ಣೆಯ ಪೋಷಕಾಂಶಗಳು ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸುತ್ತದೆ, ಅದೇ ಸಮಯದಲ್ಲಿ ಕೂದಲು ಒಡೆಯುವಿಕೆ ಮತ್ತು ವಿಭಜಿತ ತುದಿಗಳನ್ನು ತಡೆಯುತ್ತದೆ.

ರೋಗನಿರೋಧಕ ಬೆಂಬಲ: ತೆಂಗಿನೆಣ್ಣೆಯು ಲಾರಿಕ್ ಆಮ್ಲ ಮತ್ತು ಕ್ಯಾಪ್ರಿಲಿಕ್ ಆಮ್ಲವನ್ನು ಹೊಂದಿರುತ್ತದೆ, ಇದು ರೋಗನಿರೋಧಕ-ಉತ್ತೇಜಿಸುವ ಗುಣಲಕ್ಷಣಗಳನ್ನು ಹೊಂದಿದೆ ಮತ್ತು ದೇಹವು ಸೋಂಕುಗಳಿಂದ ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ.

ತೂಕ ನಿರ್ವಹಣೆ: ತೆಂಗಿನ ಎಣ್ಣೆಯು ಕ್ಯಾಲೋರಿ ಸೇವನೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಇದು ಸಮತೋಲಿತ ಆಹಾರದಲ್ಲಿ ಬಳಸಿದಾಗ ತೂಕ ನಿರ್ವಹಣೆಗೆ ಸಹಾಯ ಮಾಡುತ್ತದೆ.

ಆಂಟಿಮೈಕ್ರೊಬಿಯಲ್ ಗುಣಲಕ್ಷಣಗಳು: ತೆಂಗಿನಕಾಯಿಯಲ್ಲಿ ಲಾರಿಕ್ ಆಮ್ಲವಿದೆ ಆದ್ದರಿಂದ ಇದು ಆಂಟಿಮೈಕ್ರೊಬಿಯಲ್ ಗುಣಲಕ್ಷಣಗಳನ್ನು ಹೊಂದಿದ್ದು ಅದು ಬ್ಯಾಕ್ಟೀರಿಯಾ, ವೈರಸ್‌ಗಳು ಮತ್ತು ಶಿಲೀಂಧ್ರಗಳಿಂದ ಉಂಟಾಗುವ ಸೋಂಕನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಕೋಲ್ಡ್ ಪ್ರೆಸ್ಡ್ ಕೊಬ್ಬರಿ ಎಣ್ಣೆ ನಿಮ್ಮ ಅಡಿಗೆ ಮನೆಯ ಸಂಗಾತಿಯಾಗಲಿ.ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು

Published

on

  • ರುದ್ರಪ್ಪ ಹನಗವಾಡಿ

ದೆಲ್ಲ ಹೊರಗಿನದಾದರೆ ನಮ್ಮ ವಿಭಾಗದಲ್ಲಿ ಸ್ವಲ್ಪ ಬದಲಾವಣೆಗಳಾಗಿದ್ದವು. ನಮ್ಮ ಜೊತೆಗಿದ್ದ ಡಾ. ಕೆ.ಎಂ. ನಾಯ್ಡು ಅವರು ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಪ್ರಾರಂಭವಾಗಿದ್ದ ಹೊಸ ಸ್ನಾತಕೋತ್ತರ ಕೇಂದ್ರಕ್ಕೆ ಮುಖ್ಯಸ್ಥರಾಗಿ ಆಯ್ಕೆಯಾಗಿ ಹೋಗಿದ್ದರು.

ನಾನು ಎಂ.ಎ. ಓದುವಾಗ ನನಗೆ ಪ್ರಾಧ್ಯಾಪಕರಾಗಿದ್ದ ಡಾ. ಬಿ.ಎಸ್. ಶ್ರೀಕಂಠಾರಾಧ್ಯರು ಇಲಾಖೆಗೆ ಮುಖ್ಯಸ್ಥರಾಗಿ ಬಂದಿದ್ದರು. ನನ್ನ ಬಗ್ಗೆ ನಮ್ಮ ವಿಭಾಗದಲ್ಲಿ ಮತ್ತು ಮೈಸೂರಿನ ಗಂಗೋತ್ರಿ ವಿಭಾಗದಲ್ಲಿ ನಾನು ಮದುವೆಯಾಗಿರುವ ಬಗ್ಗೆ ಅಸಮಾಧಾನವಿತ್ತು. ಅದನ್ನೆಲ್ಲ ತಲೆಯಲ್ಲಿ ತುಂಬಿಕೊಂಡು ಬಂದಿದ್ದ ಬಿಎಸ್‌ಎಸ್ ಗುರುಗಳು ಕೂಡ ನನ್ನ ಬಗ್ಗೆ ಅಸಮಾಧಾನಗೊಂಡವರಂತೆ ತೋರುತ್ತಿದ್ದರು.

ಶೈಕ್ಷಣಿಕ ವರ್ಷದ ಪ್ರಾರಂಭದಲ್ಲಿ ಶ್ರೀಕಂಠಾರಾಧ್ಯರು ಅಧ್ಯಾಪಕರೆಲ್ಲರಿಗೂ ತೆಗೆದುಕೊಳ್ಳುವ ತರಗತಿಗಳ ವೇಳಾಪಟ್ಟಿ ತಯಾರಿಸಿಕೊಟ್ಟಿದ್ದರು. ನನಗೆ ಆಶ್ಚರ್ಯವಾಗುವಂತೆ ನನಗೆ ಯಾವುದೇ ಸಾಮಾನ್ಯ ತರಗತಿಗೆ ಪಾಠ ಮಾಡುವ ಅವಕಾಶವಿರದಂತೆ ತರಗತಿಗಳನ್ನು ಹಂಚಿಕೆ ಮಾಡಿದ್ದರು. ಐಚ್ಛಿಕವಾಗಿದ್ದ ಎರಡು ವಿಷಯಗಳಾದ ಪ್ರಾದೇಶಿಕ ಅರ್ಥಶಾಸ್ತ್ರ ಮತ್ತು ಕೃಷಿ ಅರ್ಥಶಾಸ್ತ್ರಗಳನ್ನು ಹಂಚಿಕೆ ಮಾಡಿ ಮುಗಿಸಿದ್ದರು. ನನಗೆ ವಿದ್ಯಾ ಗುರುಗಳು ಹೆಚ್ಚು ಸಲಿಗೆ ಇಲ್ಲದೆ ಇದ್ದ ಅವರೊಡನೆ ಇದು ಸರಿ ಇಲ್ಲ. ಇದನ್ನು ಸರಿಯಾಗಿ ಹಂಚಿಕೆಯಾಗಬೇಕೆಂದು ನನ್ನ ಅಸಮಾಧಾನ ತೋರಿ ಅವರ ಟೇಬಲ್ ಮೇಲೆ ತಾತ್ಸಾರದಿಂದಲೇ ಆದೇಶದ ಪ್ರತಿಯನ್ನು ಬಿಟ್ಟು ಬಂದಿದ್ದೆ. ಅತ್ಯಂತ ಮಿತಭಾಷಿ, ಸರಳ ಮತ್ತು ಆಳ ಅಧ್ಯಯನದಿಂದ ಗಳಿಸಿದ ಗಂಭೀರತೆಯಲ್ಲಿದ್ದ ಅವರಿಗೆೆ ನನ್ನ ಬಗ್ಗೆ, ನಾನು ಮದುವೆಯಾದ ಬಗ್ಗೆ ಇಲ್ಲ ಸಲ್ಲದ ಕಥೆಗಳನ್ನು ಕಟ್ಟಿ ಅವರಿಗೆ ಹೇಳಿ ನನಗೆ ಈ ರೀತಿಯ ಅನಾದರಣೆ ತೋರಿಸುವಂತೆ ನಮ್ಮವರೇ ಆಗಿದ್ದ ಕೆಲವು ಅಧ್ಯಾಪಕರು ಹೊಸಬರಾಗಿ ಬಂದಿದ್ದ ಇವರಿಗೆ ಹೇಳಿದ್ದರು.

ಆರಾಧ್ಯರೂ ಕೂಡ ಮೈಸೂರಿನ ಗಂಗೋತ್ರಿಯಲ್ಲಿ ಪಾಠ ಮಾಡುತ್ತಿದ್ದವರು, ಅಲ್ಲಿಯೇ ಪ್ರಾಧ್ಯಾಪಕರಾಗಬೇಕಾಗಿದ್ದವರನ್ನು ಬಿಆರ್‌ಪಿಗೆ ಒಬ್ಬ ಹಿರಿಯ ಪ್ರಾಧ್ಯಾಪಕರು ಬೇಕೆಂಬ ನೆಪವೊಡ್ಡಿ ಅವರನ್ನು ವರ್ಗಾವಣೆ ಮಾಡಿ ಇಲ್ಲಿಗೆ ಕಳಿಸಿದ್ದರು. ಇಲ್ಲಿಗೆ ಬರುವ ಬಗ್ಗೆ ಮನಸ್ಸಿಲ್ಲದ ಕಾರಣ ಅಸಮಾಧಾನವೂ ಅವರಲ್ಲಿ ಮನೆಮಾಡಿತ್ತು. ಬಂದಾಕ್ಷಣ ಇಲ್ಲಿನವರ ಚಾಡಿ ಮಾತು ಕೇಳಿ ನನ್ನ ಬಗ್ಗೆ ಈ ರೀತಿ ನಡೆದುಕೊಂಡಿದ್ದರು. ಆ ನಂತರ ಎಲ್ಲರೂ ಚರ್ಚಿಸಿ ಸಮಾನ ವಿಷಯಗಳ ಮತ್ತು ತರಗತಿಗಳನ್ನು ಹಂಚಿಕೆ ಮಾಡಿಕೊಂಡು ಎಂದಿನಂತೆ ತರಗತಿಗಳು ನಡೆಯಲಾರಂಭಿಸಿದವು. ಪ್ರಾರಂಭದಲ್ಲಿ ಆಗಿದ್ದ ನನ್ನ ಮತ್ತು ನನ್ನ ಗುರುಗಳಾಗಿದ್ದ ಶ್ರೀಕಂಠಾರಾಧ್ಯರ ನಡುವೆ ನಡೆದ ಸಣ್ಣ ಅಸಮಾಧಾನ ಕರಗಿ ಎಂದಿನ ಲವಲವಿಕೆಯಿಂದ ವಿಭಾಗದಲ್ಲಿ ಚಟುವಟಿಕೆಗಳು ಪ್ರಾರಂಭವಾದವು. ( ಸುದ್ದಿದಿನ.ಕಾಂ|ವಾಟ್ಸಾಪ್|9980346243)

Continue Reading

ದಿನದ ಸುದ್ದಿ

ಮಕ್ಕಳಿಗೆ ದೈನಂದಿನ ಆಹಾರದಲ್ಲಿ ತರಕಾರಿ ಮತ್ತು ಹಣ್ಣುಗಳನ್ನು ಸೇರಿಸಿ: ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ .ಪಿ ಗಡಾದ್ ಸಲಹೆ

Published

on

ಸುದ್ದಿದಿನ,ಕುಂದಾಪುರ: ದೈನಂದಿನ ಆಹಾರ ಪದ್ಧತಿಯಲ್ಲಿ ತರಕಾರಿ ಹಣ್ಣುಗಳನ್ನು ಸೇರಿಸುವುದು, ಆರೋಗ್ಯ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಲಭ್ಯ ಇರುವ ಸರ್ಕಾರಿ ಸವಲತ್ತುಗಳನ್ನು ಬಳಸಿಕೊಳ್ಳುವಂತೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಎಲ್ಲಾ ತಾಯಂದಿರಿಗೆ ಡಾ. ಐ .ಪಿ ಗಡಾದ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಉಡುಪಿ ಜಿಲ್ಲೆ ಇವರು ತಮ್ಮ ಉದ್ಘಾಟನಾ ನುಡಿಗಳಿಂದ ಮನವಿ ಮಾಡಿದರು.

ನಮ್ಮ ಪಿ.ಜಿ.ಡಿ.ಎಚ್.ಪಿ.ಇ 7ನೇ ತಂಡದ ಪ್ರಶಿಕ್ಷಣಾರ್ಥಿ ಶ್ರೀಮತಿ ವೃಂದಾ.ಬಿ.ತಾಮಸೆ ಇವರು ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೋಟೇಶ್ವರ ಗ್ರಾಮದಲ್ಲಿ ಅಪೌಷ್ಟಿಕತೆಯ ಕುರಿತು ಸಂಶೋಧನಾತ್ಮಕ ಅಧ್ಯಯನವನ್ನು ಮಾಡಿ ಗ್ರಾಮದ ಎಲ್ಲಾ ಮಕ್ಕಳು ಮತ್ತು ತಾಯಂದಿರನ್ನು ಬೃಹತ್ ಮಹಾ ಮೇಳದ ಮೂಲಕ ಈ ಸಭಾಂಗಣದ ಕಾರ್ಯಕ್ರಮಕ್ಕೆ ಆಯೋಜಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ಸ್ಥಳೀಯ ಸ್ವಯಂ ಸೇವಾ ಸಂಸ್ಥೆ ರೋಟರಿ ಕ್ಲಬ್ ಸ್ಥಳೀಯ ಗ್ರಾಮ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಕ್ಷಣ ಇಲಾಖೆ ಸ್ಥಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ಸಹಕರಿಸಿದ್ದಾರೆ ಇವರೆಲ್ಲರಿಗೂ ತಮ್ಮ ಧನ್ಯವಾದಗಳನ್ನು ಡಾ. ಮಂಜುನಾಥ್ ಜೆ .ಎ .ಉಪನ್ಯಾಸಕರು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆ ಬೆಂಗಳೂರು ಇವರು ತಮ್ಮ ಪ್ರಾಸ್ತಾವಿಕ ನುಡಿಯಲ್ಲಿ ಶುಭ ಹಾರೈಸಿದರು.

ಮಳೆಗಾಲದಲ್ಲಿ ಮನೆಯ ಅಕ್ಕಪಕ್ಕದಲ್ಲಿ ನೀರು ನಿಲ್ಲುವುದು ಸಹಜ ನಿಂತ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗಿ ಡೆಂಗ್ಯೂ ಮತ್ತು ಮಲೇರಿಯದಂತಹ ಕಾಯಿಲೆಗಳು ಬರುತ್ತವೆ ಹಾಗಾಗಿ ಮಳೆಯ ನೀರು ನಿಲ್ಲದಂತೆ ಹರಿದು ಹೋಗುವ ಹಾಗೆ ವ್ಯವಸ್ಥೆ ಮಾಡಿಕೊಳ್ಳಬೇಕೆಂದು ತಿಳಿಸುತ್ತಾ ಈ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ನ ಉಪಾಧ್ಯಕ್ಷರು ಶುಭ ಕೋರಿದರು.

ಅಂಗನವಾಡಿಗಳ ಮೂಲಕ ಅಪೌಷ್ಟಿಕ ಮಕ್ಕಳ ದತ್ತು ಪಡೆಯುವ ಯೋಜನೆಯನ್ನು ಅಗತ್ಯತೆ ಇರುವ ಕುಟುಂಬಗಳು ಪಡೆದುಕೊಳ್ಳಬೇಕು ಮಕ್ಕಳಲ್ಲಿ ಪೌಷ್ಟಿಕತೆ ಹೆಚ್ಚಿಸಲು ರಾಷ್ಟ್ರಧ್ವಜದ ತ್ರಿವರಣವುಳ್ಳ ಹಣ್ಣು ಹಂಪಲು ತರಕಾರಿ ಸೊಪ್ಪು ಬೇಳೆ ಕಾಳುಗಳು ಹಾಲು ಮೊಟ್ಟೆ ಮೀನು ಮಾಂಸ ಹೀಗೆ ಸಮತೋಲನ ಆಹಾರವನ್ನು ರೂಡಿಸಿಕೊಳ್ಳುವಂತೆ ಕುಂದಾಪುರ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀ ಉಮೇಶ್ ಟಿ ಎಂ ಕರೆ ನೀಡಿದರು.

ಪ್ರತಿ ಶುಕ್ರವಾರ ಆರೋಗ್ಯ ಇಲಾಖೆ ಹಾಗೂ ಇತರ ಇಲಾಖೆಗಳ ಸಹಯೋಗದೊಂದಿಗೆ ಡ್ರೈಡೇ ಕಾರ್ಯಕ್ರಮ ಪ್ರಾರಂಭವಾಗಿದ್ದು ಮನೆಯ ಒಳಾಂಗಣ ಮತ್ತು ಹೊರಾಂಗಣದಲ್ಲಿ ನೀರು ತುಂಬಿಟ್ಟುಕೊಳ್ಳುವ ಪರಿಕರಗಳನ್ನು ಸಂಪೂರ್ಣ ಖಾಲಿ ಮಾಡಿ ಹೊಸದಾಗಿ ನೀರನ್ನು ತುಂಬಿಸಿಕೊಳ್ಳಬೇಕೆಂದು ಉಡುಪಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀ ಶಶಿಧರ್ ಅವರು ಹೇಳುತ್ತಾ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಸ್ಥಳೀಯ ಸರ್ಕಾರೇತರ ಸಂಸ್ಥೆ ರೋಟರಿ ಕ್ಲಬ್‌ನ ಅಧ್ಯಕ್ಷ ಶ್ರೀ ಸತೀಶ್ ಎಂ ನಾಯಕ ಕಾರ್ಯಕ್ರಮದ ಕುರಿತು ಮಾತನಾಡುತ್ತಾ ಆರೋಗ್ಯ ಇಲಾಖೆ ಆಯೋಜಿಸುತ್ತಿರುವ ಹಲವಾರು ಕಾರ್ಯಕ್ರಮಗಳಲ್ಲಿ ರೋಟರಿ ಕ್ಲಬ್ ದೇಶಾದ್ಯಂತ ಸಹಕಾರ ನೀಡುತ್ತಿದೆ ಇದೇ ರೀತಿಯಾಗಿ ನಾವು ಸಹ ಮಕ್ಕಳು ಮತ್ತು ತಾಯಂದಿರಿಗೆ ಲಘುಉಪಹಾರ ವ್ಯವಸ್ಥೆ ಮಾಡಿದ್ದೇವೆ ಮುಂದೆಯೂ ಇಂತಹ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ನಮ್ಮ ಸಹಕಾರ ನೀಡುವುದಾಗಿ ತಿಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಮಕ್ಕಳ ದೈಹಿಕ ಬೆಳವಣಿಗೆಗಾಗಿ ಅಪೌಷ್ಟಿಕತೆ ಪ್ರಮಾಣ ತಿಳಿಯಲು ಮೌಲ್ಯಮಾಪನ ಮಾಡಬೇಕಾಗುತ್ತದೆ ತೋಳಿನ ಮಧ್ಯಭಾಗದ ಸುತ್ತಳತೆ 11.5 cm ಗಿಂತ ಕಡಿಮೆ ಇರುವ ಮಕ್ಕಳನ್ನು ಅಪೌಷ್ಟಿಕ ಮಕ್ಕಳೆಂದು ಗುರುತಿಸಿ ಅವರಿಗೆ ಹೆಚ್ಚಿನ ಪೌಷ್ಟಿಕ ಆಹಾರ ಹಾಗೂ ಸಾಕಷ್ಟು ಪೋಷಕಾಂಶಗಳನ್ನು ನೀಡುವ ಅವಶ್ಯಕತೆ ಇದೆ. ಅಪೌಷ್ಟಿಕತೆಯು ದೇಹದ ಪ್ರಮುಖ ಅಂಗಗಳ ಕಾರ್ಯಕ್ಕೆ ಹಾನಿ ಉಂಟುಮಾಡುತ್ತದೆ ಹಾಗೂ ಪೌಷ್ಟಿಕಾಂಶದ ಕೊರತೆಯಿಂದ ಉಂಟಾಗುವ ಕಾಯಿಲೆಗಳು ಬರುವ ಸಾಧ್ಯತೆ ಹೆಚ್ಚಾಗಿರುತ್ತದೆ ಹಾಗಾಗಿ ಪೌಷ್ಟಿಕ ಸಮತೋಲಿತ ಆಹಾರವನ್ನು ಉಪಯೋಗಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಹೇಳುತ್ತಾ ನಮ್ಮ ಜಿಲ್ಲೆಯ ತಾಯಂದಿರಿಗೆ ಆರೋಗ್ಯಕ್ಕೆ ಸಂಬAಧಪಟ್ಟ ಹಾಗೆ ಜ್ಞಾನ ಹೆಚ್ಚಿದ್ದು, ಆದರೆ ಕಾರ್ಯರೂಪಕ್ಕೆ ತರುವಲ್ಲಿ ದೊಡ್ಡ ಪ್ರಮಾಣದ ಯಶಸ್ಸು ಇನ್ನೂ ಆಗಿಲ್ಲ ಅದಕ್ಕಾಗಿ ನಾವೆಲ್ಲರೂ ಅಪೌಷ್ಟಿಕತೆ ವಿರುದ್ಧ ಹೋರಾಡಲು ಇಲ್ಲಿ ಪ್ರಾತ್ಯಕ್ಷಿತೆಯ ಮೂಲಕ ತೋರಿಸಲಾಗಿರುವ ಆಹಾರಗಳನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ರೂಡಿಸಿಕೊಳ್ಳುವುದರೊಂದಿಗೆ ಕಾರ್ಯರೂಪಕ್ಕೆ ತರೋಣ ಎಂದು ತಮ್ಮ ಅಮೂಲ್ಯವಾದ ಮಾಹಿತಿಯಲ್ಲಿ ತಿಳಿಸುತ್ತಾ 0-19 ವರ್ಷದ ಒಳಗಿನ ಮಕ್ಕಳಿಗಾಗಿ ಸರ್ಕಾರದಿಂದ ಜಾರಿ ಇರುವ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಡಾ. ಪ್ರೇಮಾನಂದ.ಕೆ ತಾಲೂಕು ಆರೋಗ್ಯ ಅಧಿಕಾರಿಗಳು ಕುಂದಾಪುರ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾಹಿತಿ ನೀಡಿದರು.

ಇತ್ತೀಚಿನ ದಿನಗಳಲ್ಲಿ ನಮ್ಮ ಜಿಲ್ಲೆಯಲ್ಲಿ ಒಂದು ಅಥವಾ ಎರಡು ಮಕ್ಕಳ ಪಡೆಯುವವರ ಸಂಖ್ಯೆ ಅಧಿಕವಾಗಿದ್ದು ಈ ಮಕ್ಕಳ ಪಾಲನೆ ಪೋಷಣೆಗೆ ಎಲ್ಲಾ ಇಲಾಖೆಯವರು ಸಮನ್ವಯದೊಂದಿಗೆ ಕರ್ತವ್ಯ ನಿರ್ವಹಿಸುತ್ತಿದ್ದು ಕೇವಲ ಮಕ್ಕಳಿಗೆ ಮಾತ್ರ ಪೌಷ್ಟಿಕ ಆಹಾರವನ್ನು ನೀಡುವುದಲ್ಲದೆ ತಾಯಂದಿರು ಕೂಡ ಸಮತೋಲಿತ ಪೌಷ್ಟಿಕ ಆಹಾರವನ್ನು ಗರ್ಭಿಣಿ ಅವಧಿಯಲ್ಲಿಯೇ ಸೇವಿಸಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕೆಂದು ನಾಗರತ್ನ ಅಧ್ಯಕ್ಷರು ಗ್ರಾಮ ಪಂಚಾಯತ್ ಕೋಟೇಶ್ವರ ತಮ್ಮ ಅಧ್ಯಕ್ಷೀಯ ನುಡಿಗಳಲ್ಲಿ ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಪೂರ್ಣಿಮಾ ಆರ್ ಶೇಟ್, ಜಿಲ್ಲಾ ಆರ್ ಸಿ.ಎಚ್ ಅಧಿಕಾರಿಗಳು ಡಾ.ಜೋತ್ನಾ ಸ್ಥಳೀಯ ಗ್ರಾಮ ಪಂಚಾಯತ್‌ನ ಸರ್ವ ಸದಸ್ಯರು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜೇಶ್ ನಾಯಕ್, ಸ್ಥಳೀಯ ಅಂಗನವಾಡಿ ಕಾರ್ಯಕರ್ತೆ ಶೋಭಾ, ಆಶಾ ಕಾರ್ಯಕರ್ತೆಯರು ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರು, ತಾಯಂದಿರು, ಮಕ್ಕಳು ಉಪಸ್ಥಿತರಿದ್ದರು ಹಾಗೂ ಈ ಕಾರ್ಯಕ್ರಮದಲ್ಲಿ ಆಯುಷ್ಮಾನ್ ಆಭಾಕಾರ್ಡ್ ಮತ್ತು ಅಸಾಂಕ್ರಾಮಿಕ ರೋಗಗಳ ತಪಾಸಣೆಯನ್ನು ಮಾಡಲಾಯಿತು.

ಶ್ರೀಮತಿ ವೃಂದಾ.ಬಿ.ತಾಮಸೆ ಪ್ರಶಿಕ್ಷಣಾರ್ಥಿ ಪಿ.ಪಿ.ಜಿ.ಡಿ.ಎಚ್.ಪಿ.ಇ ವಿಭಾಗ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆ ಬೆಂಗಳೂರು ಸ್ವಾಗತಿಸಿದರು. ಶ್ರೀಮತಿ ಭಾಗ್ಯಲಕ್ಷ್ಮಿ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಕುಂದಾಪುರ ಕಾರ್ಯಕ್ರಮದ ನಿರೂಪಣೆ ಮಾಡಿ ಧನ್ಯವಾದ ಅರ್ಪಿಸಿದರು.ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending