ನೆಲದನಿ
ಮಹಾಬೌದ್ಧ ‘ದಶ ತಥಾಗತ ಬಲೋಪನ್’ ರಾವಣ V/s ವೈದಿಕಾರ್ಯ ವಿಪ್ರೋತ್ತಮ ರಾವಣ..!

- ಡಾ.ವಡ್ಡಗೆರೆ ನಾಗರಾಜಯ್ಯ
ರಾವಣ ನಮ್ಮ ಮೂಲನಿವಾಸಿ ಮಾತೃ ಪ್ರಧಾನ ದ್ರಾವಿಡ ಸಂಸ್ಕೃತಿಯ ಸಾಂಸ್ಕೃತಿಕ ನಾಯಕ. ಅವನನ್ನು ಆರ್ಯರು ತಮಗೆ ಬೇಕಾದ ಆಕಾರಕ್ಕೆ ಎರಕ ಹೊಯ್ದುಕೊಂಡರು. ಶಿವನ ನಿರ್ಗುಣ ಉಪಾಸಕನಾಗಿದ್ದ ರಾವಣನೊಬ್ಬ ಬೌದ್ಧ ಭಿಕ್ಖುವೆಂದು ಸಂಸ್ಕೃತಿ ಚಿಂತಕರು ತಮ್ಮ ಸಂಶೋಧನೆಗಳಿಂದ ವಿಶ್ಲೇಷಿಸಿದ್ದಾರೆ. ರಾಮನು ಹೋಗಿ ತಂಗುವುದು ಅಶೋಕ ವನದಲ್ಲಿ. ಅಶೋಕನು ಒಬ್ಬ ಬೌದ್ಧ ದೊರೆ ಎಂದು ನಮಗೆ ತಿಳಿದಿದೆ. ಹೀಗೆ ರಾವಣನಿದ್ದದ್ದು ಆಳಿದ್ದು ಬೌದ್ಧ ನಾಡಿನಲ್ಲಿ.
ದಕ್ಷಿಣದ ಭೂನೆಲೆಯಲ್ಲಿದ್ದ ರಾವಣನು ಪೂಜಿಸುತ್ತಿದ್ದದ್ದು ಬದ್ಧಗುರು ಹುಟ್ಟುವ ಪೂರ್ವದಲ್ಲಿಯೇ ಇದ್ದ ದ್ರಾವಿಡ ಬುಡಕಟ್ಟು ನಾಯಕನಾದ ಶಿವ ಎಂಬ ಆದಿಬುದ್ಧನನ್ನು. ಬುದ್ಧಗುರುವನ್ನು ‘ದಶ ತಥಾಗತ ಬಲೋಪನ್’ ಎಂಬ ವಿಶೇಷಣದಿಂದ ಕರೆಯಲಾಗಿದೆ.
ಇಂಥದ್ದೇ ವಿಶೇಷಣದಿಂದ ಬೌದ್ಧ ದೊರೆಯಾದ ದ್ರಾವಿಡ ನಾಯಕ ರಾವಣನನ್ನೂ ಸಹ ‘ದಶಕಂಠ ರಾವಣ’ – ‘ದಶಮುಖ ರಾವಣ’ ಎಂದು ಕರೆಯಲಾಗಿದೆ. Dr.K.Jamanadas ಅವರ ‘Ravana; A Non-violent Gana Nayaka(Chief of Republics) contemporary with the Buddha’ ಎನ್ನುವ ಲೇಖನದಲ್ಲಿ ರಾವಣನನ್ನು ‘ಗೌತಮ ಬುದ್ಧನ ಸಮಕಾಲೀನ’ ಎಂದಿದ್ದಾರೆ.
ಪುರುಷ ನಿರ್ಮಿತವಾದ ಲಕ್ಷ್ಮಣರೇಖೆಯನ್ನು ದಾಟಿ ರಾವಣನೊಂದಿಗೆ ಹೋಗುವುದೆಂದರೆ ಸೀತೆಯಲ್ಲಿರುವ ದ್ರಾವಿಡ ಪ್ರಧಾನ ಮಾತೃ ಸಂಸ್ಕೃತಿಯ ಲಕ್ಷಣದ ಪ್ರತೀಕವಾಗಿ ಕಾಣಿಸುತ್ತದೆ. ಸೀತೆಯನ್ನು ಅರಸಿ ಹೊರಟ ರಾಮನು ತಲುಪುವುದು ಅಶೋಕ ವನವನ್ನು. ಅಶೋಕ ಎಂಬುದು ಬೌದ್ಧ ನಾಯಕನ ಹೆಸರು. ಭಾರತ ದೇಶವನ್ನು ಮಸ್ಕಿ ಶಾಸನದಲ್ಲಿ ‘ಜಂಬೂದ್ವೀಪ’ ಎಂದು ಕರೆದಿರುವ ದೇವನಾಂಪ್ರಿಯ ಅಶೋಕ ಒಬ್ಬ ಬೌದ್ಧ ದೊರೆ.
ರಾಮನು ತಲುಪುವ ಅಶೋಕ ವನವು, ಸಾಮ್ರಾಟ ಅಶೋಕನಿಗೂ ಪೂರ್ವದಲ್ಲಿದ್ದ, ಅಷ್ಟೇ ಏಕೆ ರಾವಣನಿಗೂ ಪೂರ್ವದಲ್ಲಿದ್ದ ಬೌದ್ಧ ನಾಯಕನಾದ ಅಶೋಕನ ಹೆಸರಿನದ್ದಾಗಿರಲು ಸಾಧ್ಯವಿದೆ. ಆ ಅಶೋಕನ ಧರ್ಮ ಬೌದ್ಧ ಧರ್ಮವೇ ಆಗಿದ್ದು ಅವನು ನಿಸರ್ಗದ ನಡುವೆ ಶಿವನನ್ನು ನಿಸರ್ಗದ ನಿರ್ಗುಣ ತತ್ವದಲ್ಲಿ ಉಪಾಸನೆ ಮಾಡುವವನಾಗಿದ್ದಾನೆ.
ರಾಮನ ರಾಜ್ಯದಲ್ಲಿ ಶಂಭೂಕ ಮುನಿಯನ್ನು ಹತ್ಯೆಗಯ್ಯುವಂತಹ ಜಾತಿ – ವರ್ಣ ಪದ್ದತಿ ಇದ್ದರೆ ರಾವಣನ ರಾಜ್ಯದಲ್ಲಿ ಜಾತಿ – ವರ್ಣ ಪದ್ಧತಿ ಇರುವುದಿಲ್ಲ. ಬುದ್ಧನ ಧಮ್ಮದಲ್ಲಿಯೂ ಜಾತಿ- ವರ್ಣ ಪದ್ದತಿ ಇರುವುದಿಲ್ಲ. ಬುದ್ಧನ ಸಮಾಜದಲ್ಲಿ ಜಾತಿವರ್ಣಗಳ ವಿಷಬೀಜವನ್ನು ಬಿತ್ತಿ ದ್ವಿಜ ಶ್ರೇಷ್ಠತೆಯನ್ನು ಪ್ರತಿಷ್ಠಾಪಿಸಲು ಪ್ರಯತ್ನಿಸಿದವರೇ ವೈದಿಕಶಾಹಿ ಆರ್ಯರು.
ಅದನ್ನು ಅವರು ಯಜ್ಞ ಯಾಗ ಹೋಮ ಹವನ ಮುಂತಾದ ಅಚರಣೆಗಳನ್ನು ಕೈಗೊಳ್ಳುವ ಮೂಲಕ ಪ್ರಾರಂಭಿಸುತ್ತಾರೆ. ಇದೇ ಆರ್ಯರು ರಾವಣನ ಲಂಕೆಯಲ್ಲಿಯೂ ಜಾತಿ- ವರ್ಣಗಳೆಂಬ ವಿಷಬೀಜವನ್ನು ಬಿತ್ತಲು ಹೋದರು. ಅವರು ಯಜ್ಞ ಯಾಗ ಹೋಮ ಹವನ ಮುಂತಾದ ಅಚರಣೆಗಳನ್ನು ಲಂಕೆಯಲ್ಲಿಯೂ ಕೈಗೊಳ್ಳುವ ಮೂಲಕ ಲಂಕೆಯ ಕಾಡು ಜನರಿಗೆ ಮತ್ತು ಜೀವಮಂಡಲಕ್ಕೆ ಅನೇಕ ರೀತಿಯಲ್ಲಿ ಕೇಡುಗಳನ್ನು ತಂದೊಡ್ಡಿದರು.
ಈಗ ಹೆಚ್ಚು ಚಾಲ್ತಿಗಿರುವ ನಂಬಿಕೆಯಂತೆ ರಾವಣ ಮಹಾಜ್ಞಾನಿ, ಸಕಲ ವೇದ ಪಾರಂಗತ, ಮಹಾಬ್ರಾಹ್ಮಣ, ಮಹಾ ದೈವಭಕ್ತ. ಶ್ರೀರಾಮನೊಡನೆ ಯುದ್ಧ ಮಾಡುವ ಮೊದಲು ಅವನ ಜಯಕ್ಕಾಗಿ ಪೂಜೆ ಮಾಡಿ ಶ್ರೀರಾಮನಿಗೆ ಜಯದ ಕಂಕಣ ಕಟ್ಟುತ್ತಾನೆ. ವೈರಿಗೆ ಜಯ ಬಯಸುವ ಇಂತಹ ಶ್ರೇಷ್ಠ ವ್ಯಕ್ತಿ ರಾವಣ!! ಡಾ.ರಾಜ್ ಕುಮಾರ್ ಅವರ “ದಶಾವತಾರ” ಚಲನಚಿತ್ರದ ಈ ದೃಶ್ಯ ನೋಡಿ, ಡಾ.ರಾಜ್ ಅವರ ಅಮೋಘ ಅಭಿನಯವೂ ರಾವಣನನ್ನು ವೈದಿಕಾರ್ಯ ಬ್ರಾಹ್ಮಣನನ್ನಾಗಿ ಜನರ ಎದೆಗಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮ್ಯಾಸ ನಾಯಕ ಬುಡಕಟ್ಟನಲ್ಲಿ ದೀಪಾವಳಿ ಹಬ್ಬದ ಆಚರಣೆ

ಭಾರತ ತನ್ನ ಭೌಗೋಳಿಕ ಸ್ವರೂಪದಲ್ಲಿ ವೈವಿಧ್ಯತೆಯನ್ನು ಹೊಂದಿರುವಂತೆ ಅನೇಕ ಬಗೆಯ ಸಾಂಸ್ಕೃತಿಕ ವೈವಿಧ್ಯತೆಯನ್ನು ಹೊಂದಿದೆ.
ದೇಶದ ಪ್ರತಿಯೊಂದು ಸಮುದಾಯವು ಬದುಕಿನ ಕ್ರಮದಲ್ಲಿ ತನ್ನದೇ ಆದ ವೈವಿಧ್ಯತೆಯನ್ನು ಹೊಂದಿದ್ದು ಹಬ್ಬಗಳ ಆಚರಣೆಯಲ್ಲಿಯೂ ಈ ಭಿನ್ನತೆಯನ್ನು ಕಾಣಬಹುದಾಗಿದೆ. ಈಗ ನಡೆಯುತ್ತಿರುವ ದೀಪಾವಳಿ ಹಬ್ಬದ ಆಚರಣೆಯೂ ಇದರಿಂದ ಹೊರತಾಗಿಲ್ಲ. ಇಡೀ ಭಾರತ ಸಂಭ್ರಮದಿಂದ ದೀಪಾವಳಿ ಹಬ್ಬವನ್ನು ಆಚರಿಸುತ್ತಿದೆ ಎಂಬುದು ಸಾಮಾನ್ಯವಾದ ಹೇಳಿಕೆಯಾಗಿರುತ್ತದೆ.
ದೀಪಾವಳಿ ಎಂದರೆ ದೀಪವನ್ನು ಬೆಳಗಿಸುವ ಹಬ್ಬ. ಜಗದ ಕತ್ತಲೆಯನ್ನು, ಮನದ ಕತ್ತಲೆಯನ್ನು, ಕಳೆಯುವ ಹಬ್ಬ ಎಂಬುದು ಒಂದು ನಂಬಿಕೆಯಾದರೆ ಬಲಿಚಕ್ರರ್ತಿಯನ್ನು ವರ್ಷಕೊಮ್ಮೆ ನೆನಪಿಸಿಕೊಳ್ಳುವುದು, ನರಕಾಸುರನನ್ನು ಶ್ರೀ ಕೃಷ್ಣ ಪರಮಾತ್ಮ ಕೊಂದು ಆತನ ಸೆರೆಯಲ್ಲಿದ್ದ ಅಸಂಖ್ಯಾತ ಮಹಿಳೆಯರಿಗೆ ಬಿಡುಗಡೆ ದೊರಕಿಸಿದ ದಿನವಿದು ಎಂದು ನೆನೆಪಿಸಿಕೊಳ್ಳುವುದು ಹೀಗೆಲ್ಲಾ ಪ್ರಚಲಿತ ಪುರಾಣಮೂಲಗಳಿಂದ ಈ ಹಬ್ಬದ ಆಚರಣೆಯ ಸಾಂಕೇತಿಕತೆಯನ್ನು ಅರ್ಥೈಸಲಾಗುತ್ತದೆ.
ಈ ಎರಡೂ ಘಟನೆಗಳನ್ನು ಕುರಿತು ಬೇರೆ ಬೇರೆ ನೆಲೆಯಿಂದ ಯೋಚಿಸಿದಾಗ ಇದನ್ನು ದೇಶದಾದ್ಯಂತ ಎಲ್ಲರೂ ಸಡಗರಿಸಬೇಕೆ? ಆಳುವವರ ಸಡಗರ ಎಲ್ಲರ ಸಡಗರವಾಗಲೇಬೇಕಾದ ಅನಿವಾರ್ಯವೇ? ಎಂಬ ನೆಲೆಗಳಿಂದ ಅರ್ಥೈಸಿಕೊಳ್ಳುವ ಪ್ರಯತ್ನವನ್ನು ಮಾಡಬೇಕಾಗುತ್ತದೆ.
ನಿಸರ್ಗಮೂಲ ಸಿದ್ದಾಂತವನ್ನು ಅನ್ವಯಿಸಿಕೊಂಡರೇ ಬಹುಶಃ ಈ ದೀಪಾವಳಿಯ ತಿಂಗಳು, ಅಂದರೇ ಕಾರ್ತಿಕ ಮಾಸದ ಹವಾಮಾನದಲ್ಲಿ ವಿಶೇಷತೆಯಿದೆ. ಕಾರ್-ಅಂದರೇ ಮಳೆ ಸುರಿಯುವುದು. ಕರ್ತೀಕ ಅಂದರೇ ಮಳೆಗಾಲದ ಕೊನೆಯ ದಿನಗಳಿವು, ಹಿಂಗಾರಿನ ಕೊನೆಯ ಮಳೆಗಳು ಸುರಿಯುವ ಮತ್ತು ಇದರೊಂದಿಗೆ ಚಳಿಗಾಲವೂ ಆರಂಭವಾಗುವುದರಿಂದ ಮಂಜುಮುಸುಕಿದ ವಾತಾವರಣವೂ ಜೊತೆಗೂಡಿ ಕತ್ತಲೆಯ ಆಧಿಕ್ಯ ಹೆಚ್ಚು. ಬಹುಶಃ ಈ ಕತ್ತಲೆಯನ್ನು ನಿವಾರಿಸಿಕೊಳ್ಳಲು ಮನೆಮನೆಯ ಮುಂದೆ ದೀಪಗಳನ್ನು ಹಚ್ಚಿ ಬೆಳಕನ್ನು ಕಂಡುಕೊಳ್ಳುವ ಉದ್ದೇಶವೂ ಇರಬಹುದೆನ್ನಿಸುತ್ತದೆ. ಒಟ್ಟಾರೆ ನಾಡಿನಾದ್ಯಂತ ಆಚರಿಸಲಾಗುವ ಈ ದೀಪಾವಳಿ ಹಬ್ಬವನ್ನು ಮ್ಯಾಸಮಂಡಲದಲ್ಲಿಯೂ ಆಚರಿಸಲಾಗುತ್ತದೆ.
ಮ್ಯಾಸಬುಡಕಟ್ಟಿನ ದೇವರು ಕಾಣದ ಲೋಕದವರಲ್ಲ. ಪ್ರಕೃತಿಯ ವಿಶಿಷ್ಟತೆಯನ್ನೇ ದೈವ ಎಂದು ಭಾವಿಸಿ ಪೂಜಿಸುವುದು, ಸೃಷ್ಟಿಗೆ ಕಾರಣವಾಗುವ ತಾಯಿಯನ್ನೇ ಮೊದಲ ದೈವ ಎಂದು ಪೂಜಿಸುವುದು, ತಮಗೆ ಬದುಕನ್ನು ಕಟ್ಟಿಕೊಟ್ಟು ತಮ್ಮನ್ನು ಮುನ್ನಡೆಸಿದ ಹಿರಿಯರನ್ನೇ, ನಾಯಕರನ್ನೇ ತಮ್ಮದೇವರು ಎಂದು ಪೂಜಿಸುವುದು, ಮತ್ತು ತಮ್ಮ ಬದುಕಿಗೆ ಆಧಾರವಾಗಿದ್ದ ಪಶುಸಂಪತ್ತನ್ನೇ ತಮ್ಮ ಹಿರಿಯರೊಂದಿಗೆ ಸಮೀಕರಿಸಿ ದೈವಗಳೆಂದು ಭಾವಿಸಿ ಪೂಜಿಸುವುದು ಈ ಬುಡಕಟ್ಟಿನ ವಿಶೇಷತೆ. ತಮ್ಮ ನಾಯಕ ಅಥವಾ ನಾಯಕಿ ಬಳಸುತ್ತಿದ್ದ ವಸ್ತುವನ್ನು ಬಿದಿರಿನ ಬುಟ್ಟಿಯಲ್ಲಿಟ್ಟು, ಕೆಲವು ಕಡೆ ಸಾಲಿಗ್ರಾಮಗಳನ್ನು ಮತ್ತು ನಾಯಕ/ನಾಯಕಿ ಬಳಸುತ್ತಿದ್ದ ಬಿಲ್ಲು, ಬಾಣ/ ಖಡ್ಗವನ್ನೇ ದೇವರೆಂದು ನಂಬಿ ಪೂಜಿಸುವ ಸಮುದಾಯದಲ್ಲಿ ದೀಪಾವಳಿಯನ್ನು ಇವುಗಳಿಗೆ ಪೂಜೆ ಸಲ್ಲಿಸುವ ಮೂಲಕವೇ ಆಚರಿಸಲಾಗುತ್ತದೆ.
ಮ್ಯಾಸಮಂಡಲದ ಎಲ್ಲಾ ಗುಡಿಕಟ್ಟುಗಳಲ್ಲಿಯೂ ಮತ್ತು ಇದಕ್ಕೆ ಸಂಬಂಧಿಸಿದ ಎತ್ತಿನಗೂಡುಗಳಲ್ಲಿ ಈ ಹಬ್ಬದ ಆಚರಣೆ ನಡೆಯುತ್ತದೆ. ದೀಪಾವಳಿ ಅಮಾವಾಸ್ಯೆಕಳೆದು ಪಾಡ್ಯದ ಸೋಮವಾರ ಹೀರೆಹಳ್ಳಿಯ ದಡ್ಡಿಸೂರನಾಯಕನ ಗುಡಿಗೆ ಈತನಿಂದ ಸಂರಕ್ಷಿಸಲ್ಪಟ್ಟ ದನಕರುಗಳ ಪರಂಪರೆಯಿಂದ ಇಂದಿಗೂ ಉಳಿದು ಬಂದಿರುವ ಆಕಳ ಗೂಡಿನಿಂದ (ಗುಡೇಕೋಟಿ ಬಳಿ ಇರುವ} ಕಿಲಾರಿಗಳು ಮೊಸರು,ತುಪ್ಪವನ್ನು ತಂದು ಸೋಮವಾರ ಸಂಜೆ ಗುಡಿಗೆ ಒಪ್ಪಿಸುತ್ತಾರೆ. ತಮ್ಮ ಹೊಲಗಳಲ್ಲಿ ಬೆಳೆದ ಹಸನಾದ ಸಜ್ಜೆಯತೆನೆಗಳನ್ನು ತಂದು ಒಪ್ಪಿಸುವ ವಾಡಿಕೆಯೂ ಇದೆ. ರಾತ್ರಿಯಿಡಿ ಎಲ್ಲರೂ ಸೇರಿ ಗುಡಿಯಲ್ಲಿ ಹುರುಳಿ, ಗುಗ್ಗರಿ ಬೇಯಿಸಿ ಜೋಳ ಅಥವಾ ಸಜ್ಜೆಯ ಅನ್ನ ಮಾಡಿ ಗೂಡಿನಿಂದ ತಂದ ಮೊಸರನ್ನು ಸೇರಿಸಿ ಬೆಳಗಿನಜಾವ ದಡ್ಡಿಸೂರನಾಯಕನಿಗೆ ನೈವೇದ್ಯ ಮಾಡಲಾಗುತ್ತದೆ.
ರಾತ್ರಿಯಿಡೀ ಉರುಮೆ ವಾದ್ಯದ ಸೇವೆ, ನಾಯಕನನ್ನು ಕುರಿತು ಪದ ಹೇಳುವುದು ನಡೆಯುತ್ತದೆ, ಹೀಗೆ ಗುಡಿಯಲ್ಲಿ ನಡೆಯುವ ಪೂಜೆಯೇ ತಮಗೆ ದೀಪಾವಳಿ ಹಬ್ಬದ ಆಚರಣೆಯಾಗಿದ್ದು ಮನೆ ಮನೆಯ ಮುಂದೆ ದೀಪ ಬೆಳಗಿಸುವ, ರಂಗೋಲಿ ಹಾಕುವ, ಪಟಾಕಿ ಸಿಡಿಸುವ ಆಚರಣೆಗಳು ಇಲ್ಲಿ ಇರುವುದಿಲ್ಲ.
ಕಂಪಳ ದೇವರ ಹಟ್ಟಿಯಲ್ಲಿ ಇದಕ್ಕಿಂತ ಸ್ವಲ್ಪ ಭಿನ್ನವಾಗಿ ಹಬ್ಬದ ಆಚರಣೆ ನಡೆಯುತ್ತದೆ. ಮಾಘ ಮಾಸದಲ್ಲಿ ನಡೆಯುವ ಗುಗ್ಗರಿ ಹಬ್ಬದಲ್ಲಿ ಮಾಡುವಂತೆ ಈ ಸಮಯದಲ್ಲಿಯೂ ಅಮಾವಾಸ್ಯೆ ನಂತರದ ಶುಕ್ರವಾರದಂದು ಪೆಟ್ಟಿ ದೇವರನ್ನು ಗುಡಿಯಿಂದ ತಂದು ಹಟ್ಟಿಯ ಹೊರವಲಯದಲ್ಲಿ ಹೊಸ ಉದಿ/ಪದಿಯನ್ನು ಕಟ್ಟಿ ಇದರಲ್ಲಿ ಕೂರಿಸಿ ಮೂರು ದಿನಗಳ ಹಬ್ಬದ ಆಚರಣೆ ನಡೆಸಲಾಗುತ್ತದೆ.
ತೆಲುಗಿನಲ್ಲಿ ಇದನ್ನು ‘ದುಯಿಲಪಂಡುವ’ ಎಂದು ಕರೆಯಲಾಗುತ್ತದೆ. ಕಂಪಳ ದೇವರ ಪೆಟ್ಟಿಯೊಂದಿಗೆ ಜಗಲೂರು ಪಾಪನಾಯಕನನ್ನು ಸಂಕೇತಿಸುವ ಬಿಲ್ಲು ದೇವರನ್ನೂ ತಂದು ಪೂಜಿಸಲಾಗುತ್ತದೆ. ಆಕಳಗೂಡಿನ ಮೀಸಲು ಮೊಸರು ಮತ್ತು ಬೆಣ್ಣೆಯನ್ನು ಅರ್ಪಿಸುವುದು ಇಲ್ಲಿ ಬಹಳ ವಿಶೇಷವಾದುದು. ಗತಿಸಿದ ಎತ್ತು ಮತ್ತು ಆಕಳಿಂದ ಸಂಗ್ರಹಿಸಿದ ಕೊಂಬನ್ನು ಇಲ್ಲಿ ಬೆಣ್ಣೆಯನ್ನು ಶೇಕರಿಸಲು ಬಳಸಲಾಗುತ್ತದೆ.ಬುಡಕಟ್ಟಿನ ಜನತೆ ತಮಗೆ ಸಿಗುವ ವಸ್ತುಗಳನ್ನೇ ಸಲಕರಣೆಗಳನ್ನಾಗಿ ಬಳಸುವ ವಿಧಾನ ಇಲ್ಲಿ ಗಮನ ಸೆಳೆಯುತ್ತದೆ. ಹೀಗೆ ಸಂಗ್ರಹಿಸಿದ ಬೆಣ್ಣೆಯನ್ನು ಕಾಯಿಸಿ ತುಪ್ಪ ಮಾಡಿ ಪದಿಯಲ್ಲಿ ದೀಪವನ್ನು ಉರಿಸಲಾಗುತ್ತದೆ.ಮೊಸರು,ಜೋಳದ/ಸಜ್ಜೆಯ ಅನ್ನ,ಬಾಳೆಹಣ್ಣು,ಬೆಲ್ಲವನ್ನು ಬೆಳಗಿನಜಾವದಲ್ಲಿ ನೈವೇದ್ಯ,ಮಾಡಲಾಗುತ್ತದೆ.
ಇದರೊಂದಿಗೆ ಎತ್ತುಗಳನ್ನೂ ಹರಿಯಿಸುವುದು, ಮಣೇವು, ಉರಿಯುವ ಪಂಜುಗಳನ್ನೇ ನುಂಗುವುದು ಈ ಹಬ್ಬದ ಪ್ರಮುಖ ಆಚರಣೆಗಳಾಗಿವೆ. ನನ್ನಿವಾಳದ ಕಟ್ಟಿಮನೆಗೆ ಸೇರಿದ ಬಂಗಾರುದೇವರ ಹಟ್ಟಿಯಲ್ಲಿ ದೇವರುಗಳನ್ನು ಮತ್ತು ಬೆಳಗಟ್ಟದ ಸೂರೆಯರಗಾಟನಾಯಕನಿಗೆ ಸಂಬಂಧಿಸಿದಂತೆ, ಬೋಸೇದೇವರ ಹಟ್ಟಿಯ ಬೋಸೇರಂಗಯ್ಯನ ಪೆಟ್ಟಿಯನ್ನು, ದೊಣಮಂಡಲಹಟ್ಟಿಯ ಮಂಡಬೊಮ್ಮದೇವರನ್ನು ಹಟ್ಟಿಯಿಂದ ಹೊರಗೆ ತಂದು ಊರ ಹೊರಗೆ ಹೊಸ ಪದಿಯನ್ನು ಕಟ್ಟಿ, ಗೂಡಿನಿಂದ ಎತ್ತುಗಳನ್ನು ಕರೆಸಿ ಗೌರವಿಸಿ ಪೂಜಿಸುವ ಕ್ರಮವಿದೆ.
ಒಟ್ಟಾರೆ ಈಮ್ಯಾಸಮಂಡಲದ ದೀಪಾವಳಿ ಹಬ್ಬಕ್ಕೆ ಆಯಾ ಗುಂಪಿನವರೆಲ್ಲರೂ ಕಾಸು,ಹಾಲು, ಮೊಸರನ್ನು ಅರ್ಪಿಸಿ ಪಾಲ್ಗೊಳ್ಳುವಿಕೆಯೇ ಇಲ್ಲಿ ಸಾಮುದಾಯಿಕತೆಯ ಮಹತ್ವವನ್ನು ಪಡೆಯುತ್ತದೆ. ಈ ದೀಪಾವಳಿ ಹಬ್ಬದ ಆಚರಣೆಯಲ್ಲಿಎಲ್ಲಾ ಪದಿಗಳಲ್ಲಯೂ ದಾಸೋಹ ವಿಶೇಷವಾಗಿ ನಡೆಯುತ್ತದೆ. ಮುಂಗಾರು ಮಳೆ ಸುರಿದು ಸೊಂಪಾಗಿ ಬೆಳೆದ ಹುಲ್ಲನ್ನು ತಿಂದು ಹಸುಗಳು ಸಾಕಷ್ಟು ಹಾಲನ್ನು ಕೊಡುವುದರಿಂದ ಸಮೃದ್ಧವಾದ ಹಾಲು,ಮೊಸರು ಈ ಹಬ್ಬಕ್ಕೆ ಒದಗುತ್ತದೆ.ಇದನ್ನು ಎಡೆ ಮಾಡಿದ ನಂತರ ಎಲ್ಲರಿಗೂ ದಾಸೋಹದಲ್ಲಿ ನೀಡಲಾಗುತ್ತದೆ.
ಈ ಬುಡಕಟ್ಟಿನ ದೀಪಾವಳಿ ಹಬ್ಬದ ಆಚರಣೆಯ ಹಿಂದೆ ನಮ್ಮ ಭಾರತದ ಪೌರಾಣಿಕ ಕಥನಗಳಾವುವು ಕೇಳಿ ಬರುವುದಿಲ್ಲ.ಮನೆ ಮನೆಯ ಮುಂದೆ ದೀಪಗಳನ್ನು ಹಚ್ಚಿ ಸಡಗರಿಸುವುದು ಇಲ್ಲಿಲ್ಲ. ರಂಗೋಲಿ ಹಾಕುವುದಂತೂ ಬುಡಕಟ್ಟಿನ ನಿಶೇಧಗಳಲ್ಲಿ ಒಂದಾಗಿರುವುದರಿಂದ ಆ ಪ್ರಸ್ತಾಪವೇ ಇಲ್ಲಿಲ್ಲ. ಬದಲಾಗಿ ತಮ್ಮ ಮನೆ ದೇವರಾದ ಪೆಟ್ಟಿಗೆ ದೇವರು/ಬಿಲ್ಲು ದೇವರು/ಎತ್ತುಗಳನ್ನು ಗೌರವಿಸಿ ಪೂಜಿಸುವುದು. ಈ ಮೂಲಕವಾಗಿಯೇ ತಮ್ಮ ಮುಂದಿನ ಬದುಕಿಗೆ ಬೇಕಾದ ಬೆಳಕನ್ನು, ಚೈತನ್ಯವನ್ನು ಕೋರುವುದು ಇಲ್ಲಿ ಮುಖ್ಯವಾಗಿರುತ್ತದೆ.
ತಾನು ಬದುಕಿರುವ ಪರಿಸರ, ತಮಗೆ ಬದುಕನ್ನು ಕಟ್ಟಿಕೊಡುವ ಪ್ರಾದೇಶಿಕತೆ ಮತ್ತು ಭೌತಿಕ ಪ್ರಪಂಚ ಮತ್ತು ತನಗೆ ನೈತಿಕ ಬೆಂಬಲವಾಗಿ ನಿಂತ ತನ್ನ ಸಾಂಸ್ಕೃತಿಕ ಜಗತ್ತು ಈ ಎಲ್ಲವುಗಳ ಮೂಲಕ ಒಡಮೂಡುವ ದೇಸಿತನ ಆಯಾ ಬುಡಕಟ್ಟಿನ ಆಚರಣೆಗಳಿಗೆ ಸೈದ್ಧಾಂತಿಕತೆಯನ್ನು ಒದಗಿಸಿಕೊಡುತ್ತದೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಮ್ಯಾಸಬೇಡ ಬುಡಕಟ್ಟಿನ ಈ ದೀಪಾವಳಿ ಆಚರಣೆಯಲ್ಲಿ ಈ ದೇಸಿತನವೇ ಒಡಮೂಡಿರುವುದನ್ನು ಕಾಣಬಹುದಾಗಿದೆ.ಆದಿವಾಸಿಗಳ ಧರ್ಮಿಕ ಜಗತ್ತಿನಲ್ಲಿ ಸರ್ಪಣಾಭಾವ ಮತ್ತು ಪಾರಂಪರಿಕ ಸಂಬಂಧ ಮುಖ್ಯವಾಗಿರುತ್ತದೆ. ಈ ಆಚರಣೆಗಳನ್ನು ಸಮುದಾಯದ ಸಾಂಸ್ಕೃತಿಕ ಅಸ್ಮಿತೆಗಳು ಎಂಬುದನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ನೆಲದನಿ
ಮ್ಯಾಸ ನಾಯಕ ಬುಡಕಟ್ಟಿನಲ್ಲಿ ದೂಲಿ ಹಬ್ಬದ ಆಚರಣೆ

- ಡಾ. ಸಿ ಬಿ ಅನ್ನಪೂರ್ಣ ಜೋಗೇಶ್, ನಿವೃತ್ತ ಪ್ರಾಂಶುಪಾಲರು, ಬೆಂಗಳೂರು
ಭಾರತ ತನ್ನ ಭೌಗೋಳಿಕ ಸ್ವರೂಪದಲ್ಲಿ ವೈವಿಧ್ಯತೆಯನ್ನು ಹೊಂದಿರುವಂತೆ ಅನೇಕ ಬಗೆಯ ಸಾಂಸ್ಕೃತಿಕ ವೈವಿಧ್ಯತೆಯನ್ನು ಹೊಂದಿದೆ. ದೇಶದ ಪ್ರತಿಯೊಂದು ಸಮುದಾಯವು ಬದುಕಿನ ಕ್ರಮದಲ್ಲಿ ತನ್ನದೇ ಆದ ವೈವಿಧ್ಯತೆಯನ್ನು ಹೊಂದಿದ್ದು ಹಬ್ಬಗಳ ಆಚರಣೆಯಲ್ಲಿಯೂ ಈ ಭಿನ್ನತೆಯನ್ನು ಕಾಣಬಹುದಾಗಿದೆ.
ಈಗ ನಡೆಯುತ್ತಿರುವ ದೀಪಾವಳಿ ಹಬ್ಬದ ಆಚರಣೆಯೂ ಇದರಿಂದ ಹೊರತಾಗಿಲ್ಲ. ಇಡೀ ಭಾರತ ಸಂಭ್ರಮದಿಂದ ದೀಪಾವಳಿ ಹಬ್ಬವನ್ನು ಆಚರಿಸುತ್ತಿದೆ ಎಂಬುದು ಸಾಮಾನ್ಯವಾದ ಹೇಳಿಕೆಯಾಗಿರುತ್ತದೆ. ದೀಪಾವಳಿ ಎಂದರೆ ದೀಪವನ್ನು ಬೆಳಗಿಸುವ ಹಬ್ಬ.
ಜಗದ ಕತ್ತಲೆಯನ್ನು, ಮನದ ಕತ್ತಲೆಯನ್ನು, ಕಳೆಯುವ ಹಬ್ಬ ಎಂಬುದು ಒಂದು ನಂಬಿಕೆಯಾದರೆ ಬಲಿಚಕ್ರರ್ತಿಯನ್ನು ವರ್ಷಕೊಮ್ಮೆ ನೆನಪಿಸಿಕೊಳ್ಳುವುದು, ನರಕಾಸುರನನ್ನು ಶ್ರೀ ಕೃಷ್ಣ ಪರಮಾತ್ಮ ಕೊಂದು ಆತನ ಸೆರೆಯಲ್ಲಿದ್ದ ಅಸಂಖ್ಯಾತ ಮಹಿಳೆಯರಿಗೆ ಬಿಡುಗಡೆ ದೊರಕಿಸಿದ ದಿನವಿದು ಎಂದು ನೆನೆಪಿಸಿಕೊಳ್ಳುವುದು ಹೀಗೆಲ್ಲಾ ಪ್ರಚಲಿತ ಪುರಾಣಮೂಲಗಳಿಂದ ಈ ಹಬ್ಬದ ಆಚರಣೆಯ ಸಾಂಕೇತಿಕತೆಯನ್ನು ಅರ್ಥೈಸಲಾಗುತ್ತದೆ.
ಈ ಎರಡೂ ಘಟನೆಗಳನ್ನು ಕುರಿತು ಬೇರೆ ಬೇರೆ ನೆಲೆಯಿಂದ ಯೋಚಿಸಿದಾಗ ಇದನ್ನು ದೇಶದಾದ್ಯಂತ ಎಲ್ಲರೂ ಸಡಗರಿಸಬೇಕೆ? ಆಳುವವರ ಸಡಗರ ಎಲ್ಲರ ಸಡಗರವಾಗಲೇಬೇಕಾದ ಅನಿವಾರ್ಯವೇ? ಎಂಬ ನೆಲೆಗಳಿಂದ ಅರ್ಥೈಸಿಕೊಳ್ಳುವ ಪ್ರಯತ್ನವನ್ನು ಮಾಡಬೇಕಾಗುತ್ತದೆ.
ನಿಸರ್ಗಮೂಲ ಸಿದ್ದಾಂತವನ್ನು ಅನ್ವಯಿಸಿಕೊಂಡರೇ ಬಹುಶಃ ಈ ದೀಪಾವಳಿಯ ತಿಂಗಳು, ಅಂದರೇ ಕಾರ್ತಿಕ ಮಾಸ ಹವಾಮಾನದಲ್ಲಿ ವಿಶೇಷತೆಯಿದೆ. ಕಾರ್-ಅಂದರೇ ಮಳೆ ಸುರಿಯುವುದು. ಕರ್ತೀಕ ಅಂದರೇ ಮಳೆಗಾಲದ ಕೊನೆಯ ದಿನಗಳಿವು, ಹಿಂಗಾರಿನ ಕೊನೆಯ ಮಳೆಗಳು ಸುರಿಯುವ ಮತ್ತು ಇದರೊಂದಿಗೆ ಚಳಿಗಾಲವೂ ಆರಂಭವಾಗುವುದರಿಂದ ಮಂಜುಮುಸುಕಿದ ವಾತಾವರಣವೂ ಜೊತೆಗೂಡಿ ಕತ್ತಲೆಯ ಆಧಿಕ್ಯ ಹೆಚ್ಚು.
ಬಹುಶಃ ಈ ಕತ್ತಲೆಯನ್ನು ನಿವಾರಿಸಿಕೊಳ್ಳಲು ಮನೆಮನೆಯ ಮುಂದೆ ದೀಪಗಳನ್ನು ಹಚ್ಚಿ ಬೆಳಕನ್ನು ಕಂಡುಕೊಳ್ಳುವ ಉದ್ದೇಶವೂ ಇರಬಹುದೆನ್ನಿಸುತ್ತದೆ. ಒಟ್ಟಾರೆ ನಾಡಿನಾದ್ಯಂತ ಆಚರಿಸಲಾಗುವ ಈ ದೀಪಾವಳಿ ಹಬ್ಬವನ್ನು ಮ್ಯಾಸಮಂಡಲದಲ್ಲಿಯೂ ಆಚರಿಸಲಾಗುತ್ತದೆ. ಮ್ಯಾಸಬುಡಕಟ್ಟಿನ ದೇವರು ಕಾಣದ ಲೋಕದವರಲ್ಲ.
ಪ್ರಕೃತಿಯ ವಿಶಿಷ್ಟ್ಯತೆಯನ್ನೇ ದೈವ ಎಂದು ಭಾವಿಸಿ ಪೂಜಿಸುವುದು, ಸೃಷ್ಟಿಗೆ ಕಾರಣವಾಗುವ ತಾಯಿಯನ್ನೇ ಮೊದಲ ದೈವ ಎಂದು ಪೂಜಿಸುವುದು, ತಮಗೆ ಬದುಕನ್ನು ಕಟ್ಟಿಕೊಟ್ಟು ತನ್ನನ್ನು ಮುನ್ನಡೆಸಿದ ಹಿರಿಯರನ್ನೇ, ನಾಯಕರನ್ನೇ ತಮ್ಮದೇವರು ಎಂದು ಪೂಜಿಸುವುದು, ಮತ್ತು ತಮ್ಮ ಬದುಕಿಗೆ ಆಧಾರವಾಗಿದ್ದ ಪಶುಸಂಪತ್ತನ್ನೇ ತಮ್ಮ ಹಿರಿಯರೊಂದಿಗೆ ಸಮೀಕರಿಸಿ ದೈವಗಳೆಂದು ಭಾವಿಸಿ ಪೂಜಿಸುವುದು ಈ ಬುಡಕಟ್ಟಿನ ವಿಶೇಷತೆ. ತಮ್ಮ ನಾಯಕ ಅಥವಾ ನಾಯಕಿ ಬಳಸುತ್ತಿದ್ದ ವಸ್ತುವನ್ನು ಬಿದಿರಿನ ಬುಟ್ಟಿಯಲ್ಲಿಟ್ಟು, ಕೆಲವು ಕಡೆ ಸಾಲಿಗ್ರಾಮಗಳನ್ನು ಮತ್ತು ನಾಯಕ/ನಾಯಕಿ ಬಳಸುತ್ತಿದ್ದ ಬಿಲ್ಲು, ಬಾಣ/ ಖಡ್ಗವನ್ನೇ ದೇವರೆಂದು ನಂಬಿ ಪೂಜಿಸುವ ಸಮುದಾಯದಲ್ಲಿ ದೀಪಾವಳಿಯನ್ನು ಇವುಗಳಿಗೆ ಪೂಜೆ ಸಲ್ಲಿಸುವ ಮೂಲಕವೇ ಆಚರಿಸಲಾಗುತ್ತದೆ.
ಮ್ಯಾಸಮಂಡಲದ ಎಲ್ಲಾ ಗುಡಿಕಟ್ಟುಗಳಲ್ಲಿಯೂ ಮತ್ತು ಇದಕ್ಕೆ ಸಂಬಂಧಿಸಿದ ಎತ್ತಿನಗೂಡುಗಳಲ್ಲಿ ಈ ಹಬ್ಬದ ಆಚರಣೆ ನಡೆಯುತ್ತದೆ. ದೀಪಾವಳಿ ಅಮಾವಾಸ್ಯೆಕಳೆದು ಪಾಡ್ಯದ ಸೋಮವಾರ ಹೀರೆಹಳ್ಳಿಯ ದಡ್ಡಿಸೂರನಾಯಕನ ಗುಡಿಗೆ ಈತನಿಂದ ಸಂರಕ್ಷಿಸಲ್ಪಟ್ಟ ದನಕರುಗಳ ಪರಂಪರೆಯಿಂದ ಇಂದಿಗೂ ಉಳಿದು ಬಂದಿರುವ ಆಕಳ ಗೂಡಿನಿಂದ (ಗುಡೇಕೋಟಿ ಬಳಿ ಇರುವ} ಕಿಲಾರಿಗಳು ಮೊಸರು,ತುಪ್ಪವನ್ನು ತಂದು ಸೋಮವಾರ ಸಂಜೆ ಗುಡಿಗೆ ಒಪ್ಪಿಸುತ್ತಾರೆ. ತಮ್ಮ ಹೊಲಗಳಲ್ಲಿ ಬೆಳೆದ ಹಸನಾದ ಸಜ್ಜೆಯತೆನೆಗಳನ್ನು ತಂದು ಒಪ್ಪಿಸುವ ವಾಡಿಕೆಯೂ ಇದೆ.
ರಾತ್ರಿಯಿಡಿ ಎಲ್ಲರೂ ಸೇರಿ ಗುಡಿಯಲ್ಲಿ ಹುರುಳಿ, ಗುಗ್ಗರಿ ಬೇಯಿಸಿ ಜೋಳ ಅಥವಾ ಸಜ್ಜೆಯ ಅನ್ನ ಮಾಡಿ ಗೂಡಿನಿಂದ ತಂದ ಮೊಸರನ್ನು ಸೇರಿಸಿ ಬೆಳಗಿನಜಾವ ದಡ್ಡಿಸೂರನಾಯಕನಿಗೆ ನೈವೇದ್ಯ ಮಾಡಲಾಗುತ್ತದೆ. ರಾತ್ರಿಯಿಡೀ ಉರುಮೆ ವಾದ್ಯದ ಸೇವೆ, ನಾಯಕನನ್ನು ಕುರಿತು ಪದ ಹೇಳುವುದು ನಡೆಯುತ್ತದೆ, ಹೀಗೆ ಗುಡಿಯಲ್ಲಿ ನಡೆಯುವ ಪೂಜೆಯೇ ತಮಗೆ ದೀಪಾವಳಿ ಹಬ್ಬದ ಆಚರಣೆಯಾಗಿದ್ದು ಮನೆ ಮನೆಯ ಮುಂದೆ ದೀಪ ಬೆಳಗಿಸುವ, ರಂಗೋಲಿ ಹಾಕುವ, ಪಟಾಕಿ ಸಿಡಿಸುವ ಆಚರಣೆಗಳು ಇಲ್ಲಿ ಇರುವುದಿಲ್ಲ.
ಕಂಪಳ ದೇವರ ಹಟ್ಟಿಯಲ್ಲಿ ಇದಕ್ಕಿಂತ ಸ್ವಲ್ಪ ಭಿನ್ನವಾಗಿ ಹಬ್ಬದ ಆಚರಣೆ ನಡೆಯುತ್ತದೆ. ಮಾಘ ಮಾಸದಲ್ಲಿ ನಡೆಯುವ ಗುಗ್ಗರಿ ಹಬ್ಬದಲ್ಲಿ ಮಾಡುವಂತೆ ಈ ಸಮಯದಲ್ಲಿಯೂ ಅಮಾವಾಸ್ಯೆ ನಂತರದ ಶುಕ್ರವಾರದಂದು ಪೆಟ್ಟಿ ದೇವರನ್ನು ಗುಡಿಯಿಂದ ತಂದು ಹಟ್ಟಿಯ ಹೊರವಲಯದಲ್ಲಿ ಹೊಸ ಉದಿ/ಪದಿಯನ್ನು ಕಟ್ಟಿ ಇದರಲ್ಲಿ ಕೂರಿಸಿ ಮೂರು ದಿನಗಳ ಹಬ್ಬದ ಆಚರಣೆ ನಡೆಸಲಾಗುತ್ತದೆ. ಮ್ಯಾಸ ಭಾಷೆಯಲ್ಲಿ ಇದನ್ನು ‘ದೂಲಿ ಪಂಡುವ’ ಎಂದು ಕರೆಯಲಾಗುತ್ತದೆ.
ಕಂಪಳ ದೇವರ ಪೆಟ್ಟಿಯೊಂದಿಗೆ ಜಗಲೂರು ಪಾಪನಾಯಕನನ್ನು ಸಂಕೇತಿಸುವ ಬಿಲ್ಲು ದೇವರನ್ನೂ ತಂದು ಪೂಜಿಸಲಾಗುತ್ತದೆ. ಆಕಳಗೂಡಿನ ಮೀಸಲು ಮೊಸರು ಮತ್ತು ಬೆಣ್ಣೆಯನ್ನು ಅರ್ಪಿಸುವುದು
ಇಲ್ಲಿ ಬಹಳ ವಿಶೇಷವಾದುದು. ಗತಿಸಿದ ಎತ್ತು ಮತ್ತು ಆಕಳಿಂದ ಸಂಗ್ರಹಿಸಿದ ಕೊಂಬನ್ನು ಇಲ್ಲಿ ಬೆಣ್ಣೆಯನ್ನು ಶೇಕರಿಸಲು ಬಳಸಲಾಗುತ್ತದೆ. ಬುಡಕಟ್ಟಿನ ಜನತೆ ತಮಗೆ ಸಿಗುವ ವಸ್ತುಗಳನ್ನೇ ಸಲಕರಣೆಗಳನ್ನಾಗಿ ಬಳಸುವ ವಿಧಾನ ಇಲ್ಲಿ ಗಮನ ಸೆಳೆಯುತ್ತದೆ.
ಹೀಗೆ ಸಂಗ್ರಹಿಸಿದ ಬೆಣ್ಣೆಯನ್ನು ಕಾಯಿಸಿ ತುಪ್ಪ ಮಾಡಿ ಪದಿಯಲ್ಲಿ ದೀಪವನ್ನು ಉರಿಸಲಾಗುತ್ತದೆ. ಮೊಸರು,ಜೋಳದ/ಸಜ್ಜೆಯ ಅನ್ನ,ಬಾಳೆಹಣ್ಣು,ಬೆಲ್ಲವನ್ನು ಬೆಳಗಿನಜಾವದಲ್ಲಿ ನೈವೇದ್ಯ,ಮಾಡಲಾಗುತ್ತದೆ. ಇದರೊಂದಿಗೆ ಎತ್ತುಗಳನ್ನೂ ಹರಿಯಿಸುವುದು, ಮಣೇವು, ಉರಿಯುವ ಪಂಜುಗಳನ್ನೇ ನುಂಗುವುದು ಈ ಹಬ್ಬದ ಪ್ರಮುಖ ಆಚರಣೆಗಳಾಗಿವೆ.
ನನ್ನಿವಾಳದ ಕಟ್ಟಿಮನೆಗೆ ಸೇರಿದ ಬಂಗಾರುದೇವರ ಹಟ್ಟಿಯಲ್ಲಿ ದೇವರುಗಳನ್ನು ಮತ್ತು ಬೆಳಗಟ್ಟದ ಸೂರೆಯರಗಾಟನಾಯಕನಿಗೆ ಸಂಬಂಧಿಸಿದಂತೆ, ಬೋಸೇದೇವರ ಹಟ್ಟಿಯ ಬೋಸೇರಂಗಯ್ಯನ ಪೆಟ್ಟಿಗೆಯನ್ನು, ದೊಣಮಂಡಲಹಟ್ಟಿಯ ಮಂಡಬೊಮ್ಮದೇವರನ್ನು ಹಟ್ಟಿಯಿಂದ ಹೊರಗೆ ತಂದು ಊರ ಹೊರಗೆ ಹೊಸ ಪದಿಯನ್ನು ಕಟ್ಟಿ, ಗೂಡಿನಿಂದ ಎತ್ತುಗಳನ್ನು ಕರೆಸಿ ಗೌರವಿಸಿ ಪೂಜಿಸುವ ಕ್ರಮವಿದೆ. ಒಟ್ಟಾರೆ ಈಮ್ಯಾಸಮಂಡಲದ ದೀಪಾವಳಿ ಹಬ್ಬಕ್ಕೆ ಆಯಾ ಗುಂಪಿನವರೆಲ್ಲರೂ ಕಾಸು,ಹಾಲು, ಮೊಸರನ್ನು ಅರ್ಪಿಸಿ ಪಾಲ್ಗೊಳ್ಳುವಿಕೆಯೇ ಇಲ್ಲಿ ಸಾಮುದಾಯಿಕತೆಯ ಮಹತ್ವವನ್ನು ಪಡೆಯುತ್ತದೆ.
ಈ ದೀಪಾವಳಿ ಹಬ್ಬದ ಆಚರಣೆಯಲ್ಲಿಎಲ್ಲಾ ಪದಿಗಳಲ್ಲಯೂ ದಾಸೋಹ ವಿಶೇಷವಾಗಿ ನಡೆಯುತ್ತದೆ.ಮುಂಗಾರು ಮಳೆ ಸುರಿದು ಸೊಂಪಾಗಿ ಬೆಳೆದ ಹುಲ್ಲನ್ನು ತಿಂದು ಹಸುಗಳು ಸಾಕಷ್ಟು ಹಾಲನ್ನು ಕೊಡುವುದರಿಂದ ಸಮೃದ್ಧವಾದ ಹಾಲು,ಮೊಸರು ಈ ಹಬ್ಬಕ್ಕೆ ಒದಗುತ್ತದೆ.ಇದನ್ನು ಎಡೆ ಮಾಡಿದ ನಂತರ ಎಲ್ಲರಿಗೂ ದಾಸೋಹದಲ್ಲಿ ನೀಡಲಾಗುತ್ತದೆ.
ಈ ಬುಡಕಟ್ಟಿನ ದೀಪಾವಳಿ ಹಬ್ಬದ ಆಚರಣೆಯ ಹಿಂದೆ ನಮ್ಮ ಭಾರತದ ಪೌರಾಣಿಕ ಕಥನಗಳಾವುವು ಕೇಳಿ ಬರುವುದಿಲ್ಲ.ಮನೆ ಮನೆಯ ಮುಂದೆ ದೀಪಗಳನ್ನು ಹಚ್ಚಿ ಸಡಗರಿಸುವುದು ಇಲ್ಲಿಲ್ಲ.
ರಂಗೋಲಿ ಹಾಕುವುದಂತೂ ಬುಡಕಟ್ಟಿನ ನಿಶೇಧಗಳಲ್ಲಿ ಒಂದಾಗಿರುವುದರಿAದ ಆ ಪ್ರಸ್ತಾಪವೇ ಇಲ್ಲಿಲ್ಲ. ಬದಲಾಗಿ ತಮ್ಮ ಮನೆ ದೇವರಾದ ಪೆಟ್ಟಿಗೆ ದೇವರು/ಬಿಲ್ಲು ದೇವರು/ಎತ್ತುಗಳನ್ನು ಗೌರವಿಸಿ ಪೂಜಿಸುವುದು. ಈ ಮೂಲಕವಾಗಿಯೇ ತಮ್ಮ ಮುಂದಿನ ಬದುಕಿಗೆ ಬೇಕಾದ ಬೆಳಕನ್ನು, ಚೈತನ್ಯವನ್ನು ಕೋರುವುದು ಇಲ್ಲಿ ಮುಖ್ಯವಾಗಿರುತ್ತದೆ.
ತಾನು ಬದುಕಿರುವ ಪರಿಸರ, ತಮಗೆ ಬದುಕನ್ನು ಕಟ್ಟಿಕೊಡುವ ಪ್ರಾದೇಶಿಕತೆ ಮತ್ತು ಭೌತಿಕ ಪ್ರಪಂಚ ಮತ್ತು ತನಗೆ ನೈತಿಕ ಬೆಂಬಲವಾಗಿ ನಿಂತ ತನ್ನ ಸಾಂಸ್ಕೃತಿಕ ಜಗತ್ತು ಈ ಎಲ್ಲವುಗಳ ಮೂಲಕ ಒಡಮೂಡುವ ದೇಸಿತನ ಆಯಾ ಬುಡಕಟ್ಟಿನ ಆಚರಣೆಗಳಿಗೆ ಸೈದ್ಧಾಂತಿಕತೆಯನ್ನು ಒದಗಿಸಿಕೊಡುತ್ತದೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಮ್ಯಾಸಬೇಡ ಬುಡಕಟ್ಟಿನ ಈ ದೀಪಾವಳಿ ಆಚರಣೆಯಲ್ಲಿ ಈ ದೇಸಿತನವೇ ಒಡಮೂಡಿರುವುದನ್ನು ಕಾಣಬಹುದಾಗಿದೆ.ಆದಿವಾಸಿಗಳ ಧರ್ಮಿಕ ಜಗತ್ತಿನಲ್ಲಿ ಸರ್ಪಣಾಭಾವ ಮತ್ತು ಪಾರಂಪರಿಕ ಸಂಬAಧ ಮುಖ್ಯವಾಗಿರುತ್ತದೆ.ಈ ಆಚರಣೆಗಳನ್ನು ಸಮುದಾಯದ ಸಾಂಸ್ಕೃತಿಕ ಅಸ್ಮಿತೆಗಳು ಎಂಬುದನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ನೆಲದನಿ
ಜಾನಪದದ ಬೇರು, ಶಿಕ್ಷಣ-ರಂಗಭೂಮಿಯ ತೇರು ‘ಡಾ.ಎಂ.ಜಿ. ಈಶ್ವರಪ್ಪ’

- ಡಾ.ಗೀತಾ ಬಸವರಾಜು,ಉಪನ್ಯಾಸಕರು,ಎ.ವಿ.ಕೆ ಮಹಿಳಾ ಪದವಿ ಪೂರ್ವಕಾಲೇಜು,ದಾವಣಗೆರೆ
ಕರ್ನಾಟಕ ಕಲೆ, ಸಾಹಿತ್ಯ, ಸಂಸ್ಕೃತಿ, ಸಂಗೀತ, ವೈಚಾರಿಕತೆ ಮತ್ತು ಮಾನವೀಯತೆಯ ನೆಲೆವೀಡು. ಈ ನಾಡು ಪಂಪ, ರನ್ನ, ಪೊನ್ನ, ಜನ್ನ, ಹರಿಹರ, ರಾಘವಾಂಕ, ಕುಮಾರವ್ಯಾಸರಂತಹ ಅನೇಕ ಕವಿಗಳು ನೆಲೆಸಿದ್ದ ಪುಣ್ಯಭೂಮಿ. ಕನ್ನಡ ಸಾಹಿತ್ಯ ಪರಂಪರೆಯಲ್ಲಿಜನಪದಕ್ಕೆ ಶ್ರೀಸಾಮಾನ್ಯರ, ವಚನಕ್ಕೆ ಶರಣರ, ಕೀರ್ತನ ಸಾಹಿತ್ಯಕ್ಕೆದಾಸರಕೊಡುಗೆಅಪಾರವಾಗಿದ್ದು ದೇಸಿ ನೆಲೆಗಟ್ಟಿನೊಂದಿಗೆ ಮೌಲ್ಯಪ್ರಜ್ಞೆ ಬಿತ್ತುವಲ್ಲಿ ಸಿದ್ಧಹಸ್ತವಾಗಿವೆ. ಕವಿವಾಣಿ ಹೂವಾದರೆಜನವಾಣಿ ಬೇರಾಗಿ ಕಂಗೊಳಿಸುತ್ತದೆ.
ಇಂತಹಜನಪದ ಸಾಹಿತ್ಯವನ್ನು ಆಳವಾಗಿ ಅಧ್ಯಯನ ಮಾಡಿಜಾನಪದ ವಿದ್ವಾಂಸರಾಗಿ ಗುರುತಿಸಿಕೊಂಡಿರುವ ಹಲವರಲ್ಲಿ ಮಧ್ಯಕರ್ನಾಟಕದ ಹೃದಯ ಭಾಗವಾದದಾವಣಗೆರೆ ನಗರದಲ್ಲಿ ನೆಲೆಸಿರುವ ಜಾನಪದತಜ್ಞರಾದಡಾ.ಎಂ.ಜಿ.ಈಶ್ವರಪ್ಪ ಪ್ರಮುಖರು.
ಬಾಲ್ಯ ಮತ್ತು ಶಿಕ್ಷಣ
ಜ್ಞಾನದಿಂ ಮೇಲಿಲ್ಲ, ಶ್ವಾನನಿಂ ಕೀಳಿಲ್ಲ
ಭಾನುವಿನಿಂದಧಿಕ ಬೆಳಕಿಲ್ಲ ಜಗದೊಳಗೆ
ಜ್ಞಾನವೇ ಮಿಗಿಲು ಸರ್ವಜ್ಞ
ಎಂಬ ನುಡಿಗೆ ಪೂರಕವಾಗಿಜ್ಞಾನದ ಹಾದಿಯನ್ನು ಹಿಡಿದು ಶಿಕ್ಷಣ ತಜ್ಞರಾಗಿ, ಸಾಹಿತಿಯಾಗಿ, ಚಿಂತಕರಾಗಿ, ವಿದ್ಯಾರ್ಥಿಗಳ ಅಚ್ಚು ಮೆಚ್ಚಿನಅಧ್ಯಾಪಕರಾಗಿ, ಉತ್ತಮ ಮಾತುಗಾರರಾಗಿ, ಸರ್ವರ ಮನಸ್ಸನ್ನುಗೆದ್ದಿರುವಡಾ.ಎಂ.ಜಿ. ಈಶ್ವರಪ್ಪ ಶಿವಮೊಗ್ಗ ಜಿಲ್ಲೆಯ ಹಾಡೋನಹಳ್ಳಿ ಎಂಬ ಗ್ರಾಮದಲ್ಲಿ ಶ್ರೀಮತಿ ಗಿರಿಜಮ್ಮ ಮತ್ತು ಶ್ರೀ ರುದ್ರಪ್ಪ ದಂಪತಿಗಳ ಪುತ್ರರಾಗಿ 02-12-1950ರಲ್ಲಿ ಜನಿಸಿದರು.ತಂದೆ ಕೃಷಿ ಕಾಯಕವನ್ನು ಅವಲಂಬಿಸಿದ್ದರಿಂದ ಕೃಷಿ ಚಟುವಟಿಕೆಗಳನ್ನು ರೂಢಿಸಿಕೊಂಡು ಗ್ರಾಮೀಣ ಸೊಗಡನ್ನುಆಸ್ವಾದಿಸುತ್ತಿದ್ದರು.
ಪದವಿ ಶಿಕ್ಷಣವನ್ನು ವಿಜ್ಞಾನ ವಿಷಯದಲ್ಲಿ ಪೂರೈಸಿ ನಂತರ ಮೈಸೂರು ವಿಶ್ವವಿದ್ಯಾನಿಲಯದಿಂದಕನ್ನಡ ವಿಷಯದಲ್ಲಿಸ್ನಾತಕೋತ್ತರ ಪದವಿಯನ್ನು ಪಡೆದರು. ಕೃಷಿ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದಇವರುಖ್ಯಾತಜಾನಪದ ವಿದ್ವಾಂಸರಾದ ಜಿ.ಶಂ.ಪರಮಶಿವಯ್ಯ ಅವರ ಮಾರ್ಗದರ್ಶನದಲ್ಲಿ ‘ವ್ಯವಸಾಯಜಾನಪದ’ ಎಂಬ ವಿಷಯದ ಮೇಲೆ ಪಿಹೆಚ್.ಡಿ ಪದವಿಯನ್ನು ಮೈಸೂರು ವಿಶ್ವವಿದ್ಯಾನಿಲಯದಿಂದ ಪಡೆದಿದ್ದಾರೆ.
ಅಧ್ಯಾಪಕರಾಗಿ ಎಂ.ಜಿ.ಈಶ್ವರಪ್ಪ
ಅರ್ಚಕಸ್ಯ ಪ್ರಭಾವೇನ ಶಿಲಾಭವತಿ ಶಂಕರಃ
ಆಚಾರ್ಯಸ್ಯ ಪ್ರಭಾವೇನ ಶಿಷ್ಯಭವತಿ ಸುಶಿಕ್ಷಿತಃ
ಎಂಬ ನುಡಿಯಂತೆ ವಿದ್ಯಾರ್ಥಿಗಳ ಮೆಚ್ಚಿನಅಧ್ಯಾಪಕರಾಗಿದಾವಣಗೆರೆಯ ಪ್ರತಿಷ್ಟಿತ ವಿದಾಕೇಂದ್ರವಾದ ಬಾಪೂಜಿ ವಿದ್ಯಾಸಂಸ್ಥೆಯಲ್ಲಿ 38 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಅಧ್ಯಾಪಕ ಸಂಘ, ವಿದ್ಯಾರ್ಥಿ ಸಂಘಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡ ಇವರುಎನ್,ಎಸ್.ಎಸ್ಅಧಿಕಾರಿಯಾಗಿ 11 ವರ್ಷಗಳ ಕಾಲ 6 ಶಿಬಿರಗಳನ್ನು ನಡೆಸಿ ಗ್ರಾಮೀಣಜನಜೀವನದ ಸಮಸ್ಯೆಗಳ ಪರಿಚಯವನ್ನು ಮಾಡಿಕೊಂಡರು. ನಂತರ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದಾರೆ.
ರಂಗಭೂಮಿ ಮತ್ತುಈಶ್ವರಪ್ಪ
ಒಳ್ಳೆಯ ನಟ, ನಿರ್ದೇಶಕರಾಗಿಎಲ್ಲಾ ಕ್ಷೇತ್ರಗಳಲ್ಲೂ ಆಸಕ್ತಿ ಹೊಂದಿರುವಈಶ್ವರಪ್ಪನವರು ವಿದ್ಯಾರ್ಥಿದೆಸೆಯಿಂದಲೆ ರಂಗಭೂಮಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡವರು. ನಾಟಕಅಕಾಡೆಮಿಯ ಅಫಿಲಿಯೇಶನ್ ಪಡೆದಿರುವದಾವಣಗೆರೆಯ ಪ್ರತಿಷ್ಟಿತ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಸಂಸ್ಥೆಯಾದ “ಪ್ರತಿಮಾ ಸಭಾ” ದ ಕಾರ್ಯದರ್ಶಿಯಾಗಿ, ಉಪಾಧ್ಯಕ್ಷರಾಗಿ, ಅಧ್ಯಕ್ಷರಾಗಿ 25 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. 1979ರಲ್ಲಿ ವಿಶ್ವವಿದ್ಯಾನಿಲಯದಧನಸಹಾಯಆಯೋಗದಿಂದ ನಡೆದರಾಷ್ಟ್ರ ಮಟ್ಟದರಂಗಭೂಮಿ, ರಂಗನಟನೆ, ರಂಗ ನಿರ್ದೇಶನಕುರಿತಂತೆ ಕೇರಳದ ತ್ರಿಚೂರಿನ ಸ್ಕೂಲ್ಆಫ್ಡ್ರಾಮಾದಲ್ಲಿ ಭಾಗಿಯಾಗಿ, ಪ್ರತಿಮಾ ಸಭಾ ನಡೆಸಿದ ರಂಗ ಶಿಬಿರದಲ್ಲಿ ಕ್ರಿಯಾತ್ಮಕವಾಗಿ ಪಾಲ್ಗೊಂಡಿದ್ದಾರೆ.
ಈಡಿಪಸ್, ಸಂಕ್ರಾಂತಿ, ಸಂತೆಯಲ್ಲಿ ನಿಂತಕಬೀರ, ಸೆಜುವಾನಿನ ಸಾಧ್ವಿ, ಕೊಡೆಗಳು ಮುಂತಾದ ನಾಟಕಗಳಲ್ಲಿ ನಟಿಸಿದ್ದಾರೆ.ಜಾತ್ರೆ, ಸಾಯೋಆಟ, ಅಪ್ಪ, ಕಡೇಮನೆಕಡೇಗಲ್ಲಿ, ಹಳ್ಳಿಚಿತ್ರ, ಹಳ್ಳಿಮೇಷ್ಟು, ಮಾರೀಚನ ಬಂಧುಗಳು, ಇಲಿಬೋನು, ನಾಗನ ಕತೆ ಮುಂತಾದ ನಾಟಕಗಳನ್ನು ನಿರ್ದೇಶಿಸಿದ್ದಾರೆ.ನಾಗನ ಕತೆ ನಾಟಕಕ್ಕೆಕನ್ನಡ ಸಾಹಿತ್ಯ ಪರಿಷತ್ತು ನಡೆಸಿದ ಅಖಿಲ ಕರ್ನಾಟಕ ಮಕ್ಕಳ ಸಮ್ಮೇಳನದಲ್ಲಿ ಪ್ರಥಮ ಬಹುಮಾನ ಲಭಿಸಿದೆ.
1979 ರಲ್ಲಿ ಹೆಗ್ಗೋಡಿನಲ್ಲಿ ನಡೆದ ಚಲನಚಿತ್ರ ಸಹೃದಯ ಶಿಬಿರ, 1983 ರಲ್ಲಿರಂಗ ನಿರ್ದೇಶಕರ ಶಿಬಿರ, 1984ರಲ್ಲಿ ನಾಟಕಅಕಾಡೆಮಿಕೊಂಡಜ್ಜಿಯಲ್ಲಿ ನಡೆಸಿದ ನಾಟಕ ರಚನಾ ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ. 1983ರಲ್ಲಿಕರ್ನಾಟಕ ನಾಟಕಅಕಾಡೆಮಿ ನೀಡಿದ ಧನಸಹಾಯದಿಂದ ದಿಗ್ಗಜ ಶ್ರೀ. ಬಿ.ವಿ ಕಾರಂತರ ಮಾರ್ಗದರ್ಶನದಲ್ಲಿ ಮಧ್ಯಪ್ರದೇಶದ ಭೋಪಾಲ್ ಮತ್ತುದೆಹಲಿಯಲ್ಲಿರಂಗಭೂಮಿಅಧ್ಯಯನ ನಡೆಸಿದ್ದಾರೆ.
1982 ರಲ್ಲಿ ಖ್ಯಾತ ಜಾನಪದ ವಿದ್ವಾಂಸರಾದ ಡಾ.ಜಿ.ಶಂ.ಪರಮಶಿವಯ್ಯ ಹಾಗೂ ದೆಹಲಿಯ ಜವಾಹರ್ಲಾಲ್ ನೆಹರು ವಿಶ್ವವಿದ್ಯಾನಿಲಯದ ವತಿಯಿಂದ ನಡೆದಚಿತ್ರದುರ್ಗ, ಬಳ್ಳಾರಿ, ಧಾರವಾಡ ಜಿಲ್ಲೆಗಳ ಜಾನಪದಕಲಾವಿದರು ಮತ್ತುತಂತಿ ವಾದ್ಯಗಳ ಸಮೀಕ್ಷೆಯಲ್ಲಿ ಭಾಗಿಯಾಗಿದ್ದಾರೆ.ಕರ್ನಾಟಕದ ಇತರೆಡೆಗಳಲ್ಲಿ ನಡೆದಜಾನಪದ ಸಾಹಿತ್ಯ ಸಮ್ಮೇಳನ ಮತ್ತು ಕಲಾಮೇಳಗಳಿಗೆ ಹಲವು ಬಾರಿಕಲಾವಿದರ ತಂಡಗಳ ನೇತೃತ್ವವನ್ನು ವಹಿಸಿದ್ದಾರೆ.
1986ರಲ್ಲಿಬೆಂಗಳೂರಿನಲ್ಲಿ ನಡೆದ ಸಾರ್ಕ್ ಸಮ್ಮೇಳನದಲ್ಲಿ ಚಿತ್ರದುರ್ಗಜಿಲ್ಲೆಯಕಿನ್ನರಿಜೋಗಿತಂಡದ ನೇತೃತ್ವವನ್ನು ವಹಿಸಿರುತ್ತಾರೆ.1987 ರಲ್ಲಿಕರ್ನಾಟಕ ವಿಶ್ವವಿದ್ಯಾನಿಲಯ ಮತ್ತು ಬಾಪೂಜಿ ವಿದ್ಯಾಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಡೆದಜಾನಪದ ಸಾಹಿತ್ಯ ಸಮ್ಮೇಳನ ಮತ್ತು ಕಲಾಮೇಳದ ಸಂಘಟನೆಯನ್ನು ಮಾಡಿಜಾನಪದರಂಗ ಪ್ರಕಾರಗಳನ್ನು ಆಧುನಿಕರಂಗಭೂಮಿಗೆ ಅಳವಡಿಸಿಕೊಳ್ಳಲು ಚಿಂತನೆ ನಡೆಸಿದ್ದಾರೆ.
ಅಷ್ಟೇ ಅಲ್ಲದೆಜಾನಪದರಂಗಭೂಮಿಕುರಿತು ಸಾಕಷ್ಟು ತಜ್ಞ ಉಪನ್ಯಾಸಗಳನ್ನು ಆಕಾಶವಾಣಿಯಲ್ಲಿ ನೀಡಿದ್ದಾರೆ.1986 ಮತ್ತು1990 ರಲ್ಲಿಕರ್ನಾಟಕಜಾನಪದ ಮತ್ತುಯಕ್ಷಗಾನಅಕಾಡೆಮಿ ನಡೆಸಿದ ಜಾನಪದತಜ್ಞರ ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ.
ಸಾಹಿತ್ಯ ಸೇವೆ
ಪುಸ್ತಕಗಳು ಜ್ಞಾನದ ಭಂಡಾರವಿದ್ದಂತೆ ಅವು ಮನುಷ್ಯನನ್ನುಉತ್ತಮ ಭವಿಷ್ಯಕ್ಕೆಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ನಮ್ಮಜ್ಞಾನವನ್ನುತಣಿಸುವ ಆಲಯಗಳಿವು ಎಂಬುದನ್ನರಿತ ಶ್ರೀಯುತರು ಮ್ಯಾಸಬೇಡರು, ಬೇಸಾಯ ಪದ್ಧತಿ, ಬಂಗಾರಕೂದಲ ಜೈರಾಣಿ, ಜಾನಪದ ಇಬ್ಬನಿಗಳು, ಸಾಹಿತ್ಯ ಸಂಚಲನ, ಕೃಷಿ ಜಾನಪದ, ಹುನಗುಂದ ಬಾಬಣ್ಣ…..ಹೀಗೆ ಸುಮಾರು 18 ಪುಸ್ತಕಗಳನ್ನು ಸಾಹಿತ್ಯಕ್ಷೇತ್ರಕ್ಕೆಕೊಡುಗೆಯಾಗಿ ನೀಡಿದ್ದಾರೆ.ಅಲ್ಲದೆ ಹಲವಾರು ಲೇಖನಗಳನ್ನು ಪ್ರಕಟಿಸಿದ್ದಾರೆ.
ಜೊತೆಗೆಜನಪದ, ವಚನ, ಬಂಡಾಯ ಮತ್ತುದಲಿತ ಸಾಹಿತ್ಯ ವಿಷಯಗಳ ಮೇಲೆ ವಿದ್ಯಾರ್ಥಿಗಳು ಪ್ರೌಢಪ್ರಬಂಧವನ್ನು ರಚಿಸಿ ಪಿಹೆಚ್.ಡಿ ಪದವಿ ಪಡೆಯಲು ಕುವೆಂಪು ವಿಶ್ವವಿದ್ಯಾನಿಲಯದಿಂದ ಮಾರ್ಗದರ್ಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ನಾಡಿನಎಲ್ಲ ಭಾಗಗಳಲ್ಲಿಯೂ ಸಂಚರಿಸಿ ಸಾಹಿತ್ಯಿಕ ಮತ್ತುಜಾನಪದ ವಿಷಯಗಳನ್ನು ಕುರಿತು ಉಪನ್ಯಾಸಗಳನ್ನು ನೀಡಿದ್ದಾರೆ. ಚಿತ್ರದುರ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ 2 ಜಿಲ್ಲಾ ಸಮ್ಮೇಳನಗಳನ್ನು 2 ತಾಲೂಕು ಸಮ್ಮೇಳನಗಳನ್ನು ಹಾಗೂ ಗುಣಮಟ್ಟದ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ.
ಸಂದ ಪ್ರಶಸ್ತಿಗಳು
ಶ್ರೀಯುತರ ಸಾಹಿತ್ಯ, ಜಾನಪದ ಹಾಗೂ ಶಿಕ್ಷಣ ಕ್ಷೇತ್ರದಲ್ಲಿನ ಸಾಧನೆಗೆ ಹಲವಾರು ಪ್ರಶಸ್ತಿ ಪುರಸ್ಕಾರಗಳು ಲಭಿಸಿವೆ.
- 1993ರಲ್ಲಿ ಗುಂಡ್ಮಿಜಾನಪದ ಪ್ರಶಸ್ತಿ
- 1995 ಕು.ಶಿ. ಹರಿದಾಸ ಭಟ್ಟ ಪ್ರಶಸ್ತಿ
- 2000 ಕರ್ನಾಟಕ ನಾಟಕಅಕಾಡೆಮಿಗೌರವ ಫೆಲೋಷಿಪ್
- 2003 ಕರ್ನಾಟಕಜಾನಪದಅಕಾಡೆಮಿಯತಜ್ಞ ಪ್ರಶಸ್ತಿ
- 2010 ಹ.ಕ. ರಾಜೇಗೌಡಜಾನಪದ ಪ್ರಶಸ್ತಿ
2011ರಂಗ ಸಂಸ್ಥಾನ ಜಾನಪದ ಪ್ರಶಸ್ತಿ
- 2014ಮಹಲಿಂಗರಂಗ ಪ್ರಶಸ್ತಿ
- 2020ಕರ್ನಾಟಕರಾಜ್ಯೋತ್ಸವ ಪ್ರಶಸ್ತಿ
ತನ್ನ ನೋಡಲಿ ಎಂದುಕನ್ನಡಿಯುಕರೆವುದೆ
ತನ್ನಲ್ಲಿ ಜ್ಞಾನವುದಿಸಿದ ಮಹಾತ್ಮನು
ಕನ್ನಡಿಯಂತೆ ಸರ್ವಜ್ಞ
ಎಂಬ ನುಡಿಗೆ ಪೂರಕವಾಗಿ ಬದುಕುತ್ತಿರುವ ಡಾ.ಎಂ.ಜಿಈಶ್ವರಪ್ಪ ಒಳ್ಳೆಯ ಅಧ್ಯಾಪಕರಾಗಿ, ಜಾನಪದ ವಿದ್ವಾಂಸರಾಗಿ, ಶಿಕ್ಷಣ ತಜ್ಞರಾಗಿ, ಸಾಹಿತಿಯಾಗಿ, ಸರ್ವರ ಮನಸ್ಸನ್ನುಗೆದ್ದಿರುವಇವರು ಸದಾಕಾಲ ಹಸನ್ಮುಖಿ.ಎಲ್ಲರನ್ನು ಪ್ರೀತಿತುಂಬಿದ ಮನಸ್ಸಿನಿಂದ ಮಾತನಾಡಿಸುವ ಸರಳ ಸಜ್ಜನಿಕೆಯ ವ್ಯಕ್ತಿತ್ವದವರು.
ನಮ್ಮಂತಹ ಅನೇಕ ಕಿರಿಯ ಅಧ್ಯಾಪಕರಿಗೆ ಮಾರ್ಗದರ್ಶಕರಾಗಿರುವ ಈಶ್ವರಪ್ಪನವರುರಾಜ್ಯಮಟ್ಟದ 5 ನೇ ಭಕ್ತಿ ಸಾಹಿತ್ಯ ಸಮ್ಮೇಳನ ಪಂ.ಪುಟ್ಟರಾಜ ಸಾಹಿತ್ಯೋತ್ಸವದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವುದು ಸಂತಸದ ವಿಷಯ. ಅಲ್ಲದೆ ನವೆಂಬರ್ 8 ರಂದು ಸಾಣೇಹಳ್ಳಿಯಲ್ಲಿ ನಡೆಯಲಿರುವರಾಷ್ಟ್ರೀಯ ನಾಟಕೋತ್ಸವ ಸಮಾರೋಪ ಸಮಾರಂಭದಲ್ಲಿ ಕೊಡಮಾಡುವ ಶ್ರೀ ಶಿವಕುಮಾರ ಪ್ರಶಸ್ತಿಗೆ ಭಾಜನರಾಗಿದ್ದಾರೆ ಪರಮಪೂಜ್ಯ ಡಾ.ಶ್ರೀ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹಾಗೂ ಸನ್ಮಾನ್ಯ ಮುಖ್ಯ ಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಪ್ರಶಸ್ತಿಯನ್ನು ಪಡೆಯುತ್ತಿರುವ ಡಾ.ಎಂ.ಜಿ.ಈಶ್ವರಪ್ಪನವರ ಸಾಧನೆಯ ಬದುಕು ನಮಗೆಲ್ಲ ಸ್ಫೂರ್ತಿಯಾಗಲಿ ಎಂಬ ಆಶಯದೊಂದಿಗೆ.
[ಅಕ್ಟೋಬರ್-30 ರಂದು ದಾವಣಗೆರೆಯಲ್ಲಿ ನಡೆಯಲಿರುವ 05ನೆಯ ರಾಜ್ಯಮಟ್ಟದ ಭಕ್ತಿ ಸಾಹಿತ್ಯ ಸಮ್ಮೇಳನ (ಪಂ.ಪುಟ್ಟರಾಜ ಸಾಹಿತ್ಯೋತ್ಸವ-2022)ದ ಸಮ್ಮೇಳನಾಧ್ಯಕ್ಷರಾಗಿ ಜಾನಪದ ವಿದ್ವಾಂಸ ಡಾ.ಎಂ.ಜಿ.ಈಶ್ವರಪ್ಪ ಆಯ್ಕೆಯಾಗಿದ್ದು ತನ್ನಿಮಿತ್ತ ಈ ಲೇಖನ]
ಸುದ್ದಿದಿನ.ಕಾಂ|ವಾಟ್ಸಾಪ್|9980346243
