Connect with us

ಲೋಕಾರೂಢಿ

ಮೀಸಲಾತಿಯು ಮೀಸಲಾಗುತ್ತಿದೆಯೇ?

Published

on

ರ್ಕಾರಿ ಕ್ಷೇತ್ರದಲ್ಲಿ ಮೇಲ್ಜಾತಿ ಬಡವರಿಗೂ ಕೂಡ ಮೀಸಲಾತಿಯನ್ನು ಮಾನ್ಯ ನರೇಂದ್ರ ಮೋದಿಯವರ ಸರ್ಕಾರ ಘೋಷಣೆ ಮಾಡುತ್ತಿದ್ದ ಹಾಗೆ ಅದರ ಪರ ಮತ್ತು ವಿರೋಧದ ಚರ್ಚೆಗಳು ಶುರುವಾಗಿವೆ ಕೆಲವರು ಇದು ಸರಿ ಇಲ್ಲ ಎಂದರೆ ಮತ್ತಷ್ಟು ಜನ ಸರಿ ಎಂದು ಹೇಳುತ್ತಿದ್ದಾರೆ. ಸಂವಿಧಾನ ಜಾರಿಯಾದಗಿಂದಲೂ ಮೀಸಲಾತಿಯನ್ನು ವಿರೋಧಿಸುತ್ತಾ ಬರುತ್ತಿರುವ ಜನರು ಕೂಡ ಇಂದು ಈ ತೀರ್ಮಾನವನ್ನು ಒಪ್ಪಿದ್ದಾರೆ, ಆದರೆ ಇಲ್ಲಿ ಕೆಲವು ಸೂಕ್ಷ್ಮ ವಿಚಾರಗಳನ್ನು ನಾವು ಗಮನಿಸಬೇಕಿದೆ, ಉತ್ತರಪ್ರದೇಶದಲ್ಲಿ ಅಕ್ಕ ಮಾಯಾವತಿಯವರು ಮೇಲ್ಜಾತಿ ಬಡವರಿಗೆ ಖಾಸಗಿ ಕ್ಷೇತ್ರದಲ್ಲಿ ಮೀಸಲಾತಿಯನ್ನು ನೀಡಿದಾಗ ಅದರ ಬಗ್ಗೆ ಮಾತನಾಡದ ಮಾಧ್ಯಮದವರು ಇಂದು ಕೇಂದ್ರ ಸರ್ಕಾರದ ಈ ತೀರ್ಮಾನವನ್ನು ದೊಡ್ಡ ಪ್ರಮಾಣದಲ್ಲಿ ಚರ್ಚೆ ಮಾಡುತ್ತಿದ್ದಾರೆ, ಇದರ ಹಿಂದಿನ ಉದ್ದೇಶ ಬಿಜೆಪಿಯನ್ನು ಸದಾ ಬೆಂಬಲಿಸುತ್ತಾ ಬಂದಿರುವ ಮೇಲ್ಜಾತಿಯ ಜನರು ಕೂಡ ಅದರಲ್ಲೂ ಮೇಲ್ಜಾತಿಯ ಬಡವರು ಮೋದಿಯ ಮೇಲೆ ಬಹಳಷ್ಟು ನಂಬಿಕೆಯನ್ನು ಇಟ್ಟು ಹಿಂದಿನ ಚುನಾವಣೆಯಲ್ಲಿ ಗೆಲ್ಲಿಸಿದ್ದರು ಆದರೆ ಕಳೆದ ನಾಲ್ಕುವರೆ ವರ್ಷಗಳಲ್ಲಿ ಬಿಜೆಪಿ ಮತ್ತು ಮೋದಿ ಅವರು ನೀಡಿದ ಆಶ್ವಾಸನೆ ಮತ್ತು ಭರವಸೆಗಳನ್ನು ಶೇಕಡ ಒಂದರಷ್ಟು ಕೂಡ ಈಡೇರಿಸದೆ ಇಡೀ ದೇಶದ ಜನರಿಗೆ ಮೋಸ ಮಾಡಿ , ಜನರ ನಂಬಿಕೆಯನ್ನು ಕಳೆದುಕೊಂಡಿದ್ದಾರೆ , ಹಿಂದುಳಿದ ವರ್ಗ,ದಲಿತರು ಹಾಗೂ ಅಲ್ಪಸಂಖ್ಯಾತರು ಮೋದಿಯ ಆಡಳಿತದಿಂದ ರೋಸಿ ಹೋಗಿದ್ದಾರೆ ಹಾಗೆಯೇ ಮೇಲ್ಜಾತಿಯ ಬಡವರು ಕೂಡ ರೋಸಿ ಹೋಗಿದ್ದಾರೆ ಇದರ ಕಾರಣ ಇಂದು ಮೋದಿ ಅವರು ಉದ್ಯೋಗವೇ ಸೃಷ್ಟಿಯಾಗದ ಯಾವುದೇ ಭವಿಷ್ಯವಿಲ್ಲದ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ನೀಡುತ್ತೇನೆ ಎಂದು ಹೊಸ ಜುಮ್ಲಾ ಶುರು ಮಾಡಿದ್ದಾರೆ.

ಬಿಜೆಪಿಯ ಮಂತ್ರಿಗಳು ಹಾಗೂ ವಿವಿಧ ಇಲಾಖೆಗಳೆ ಹೇಳುತ್ತಿವೆ! ಇಂದು ಸರ್ಕಾರಿ ಕ್ಷೇತ್ರದಲ್ಲಿ ಉದ್ಯೋಗ ಸೃಷ್ಟಿಯಾಗುತ್ತಿಲ್ಲ ಎಂದು, ಆದರೆ ಸೃಷ್ಟಿಯಾಗದ ಉದ್ಯೋಗವನ್ನು ನೀಡುತ್ತೇನೆ ಎಂದು ಮೇಲ್ಜಾತಿಯವರಿಗೂ ಕೂಡ ಕಿವಿಯಲ್ಲಿ ಕಮಲವನ್ನು ಇಡುವಂತ ಕೆಲಸ ಮಾಡುತ್ತಿದ್ದಾರೆ ಮಾನ್ಯ ನರೇಂದ್ರ ಮೋದಿಯವರು. ಇಂದು ನಿಜವಾಗಲೂ ಮೀಸಲಾತಿ ನೀಡಬೇಕಾಗಿರುವುದು ಖಾಸಗಿ ಕ್ಷೇತ್ರದಲ್ಲಿ ಅದರಲ್ಲೂ ಈ ಕ್ಷೇತ್ರದಲ್ಲಿ ತಮ್ಮ ಜನಸಂಖ್ಯೆಗನುಗುಣವಾಗಿ ಪ್ರಾತಿನಿಧ್ಯ ಸಿಗದ ಹಿಂದುಳಿದ ವರ್ಗಗಳು ದಲಿತರು ಹಾಗೂ ಅಲ್ಪಸಂಖ್ಯಾತರಿಗೆ, ಖಾಸಗಿ ಕ್ಷೇತ್ರದಲ್ಲಿ ಶೇಕಡ 95 ಕ್ಕಿಂತ ಹೆಚ್ಚು ಒಂದೇ ಸಮುದಾಯದ ಪ್ರತಿನಿತ್ಯವಿದೆ, ಖಾಸಗಿ ಕ್ಷೇತ್ರವು ಸಂಪೂರ್ಣವಾಗಿ ಒಂದೇ ಒಂದು ಸಮುದಾಯದ ಕೈಯಲ್ಲಿ ಸಿಕ್ಕಿಹಾಕಿಕೊಂಡಿದೆ, ಅದರ ಮಾಲೀಕತ್ವ ಹಾಗೂ ಉದ್ಯೋಗದ ಜೊತೆಗೆ ಆ ಕ್ಷೇತ್ರಕ್ಕೆ ಸಿಗುತ್ತಿರುವ ಎಲ್ಲಾ ಲಾಭಗಳು ಒಂದೇ ಸಮುದಾಯಕ್ಕೆ ಸೇರುತ್ತಿವೆ ಹಾಗಾಗಿ ಇಂದು ಜರೂರಾಗಿ ಮಾನ್ಯ ನರೇಂದ್ರ ಮೋದಿಯವರು ಮಾಡಬೇಕಿರುವುದು ಈ ಎಲ್ಲಾ ಸಮುದಾಯಗಳಿಗೂ ಖಾಸಗಿ ಕ್ಷೇತ್ರದಲ್ಲಿ ಮೀಸಲಾತಿಯನ್ನು ನೀಡುವುದು, ಆದರೆ ಈಗಾಗಲೇ ಅತಿ ಹೆಚ್ಚು ಪ್ರಾತಿನಿಧ್ಯವನ್ನು ಹೊಂದಿರುವ ಮೇಲ್ಜಾತಿಗಳಿಗೆ ಸರ್ಕಾರಿ ಕ್ಷೇತ್ರದಲ್ಲಿ ಮೀಸಲಾತಿಯನ್ನು ಕೊಡುವುದರ ಮುಖಾಂತರ ಮೇಲ್ಜಾತಿ ಮತ್ತು ಬಹುಜನ ಸಮಾಜದ ನಡುವೆ ಸಂಘರ್ಷವನ್ನು ಸೃಷ್ಟಿ ಮಾಡಲು ಪ್ರಯತ್ನಿಸುತ್ತಿದ್ದಾರೆ.

ಇಂದು ಕೇಂದ್ರ ಸರ್ಕಾರ ತೆಗೆದುಕೊಂಡಿರುವ ನಿಲುವು ಸಂವಿಧಾನದ ವಿರೋಧವಾದದ್ದು ಏಕೆಂದರೆ ಮೀಸಲಾತಿಯು ಬಡತನ ನಿರ್ಮೂಲನ ಕಾರ್ಯಕ್ರಮವಲ್ಲ ಅದು ಪ್ರಾತಿನಿಧ್ಯವನ್ನು ನೀಡುವ ಸಲುವಾಗಿ ಸೃಷ್ಟಿಯಾಗಿರುವ ಸಾಂವಿಧಾನಿಕ ಹಕ್ಕು, ಸಂವಿಧಾನದ ಅನುಚ್ಛೇದ 16(4)ಪ್ರಕಾರ ಯಾವ ಸಮುದಾಯಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಜನಸಂಖ್ಯೆಗನುಗುಣವಾಗಿ ಪ್ರಾತಿನಿಧ್ಯ ದೊರೆತಿಲ್ಲವೋ ಆ ಸಮುದಾಯಗಳಿಗೆ ವಿಶೇಷ ಸೌಲಭ್ಯವನ್ನು ಸರ್ಕಾರ ಒದಗಿಸಬಹುದು ಎಂದು ಹೇಳಿದ ಹಾಗೆಯೇ ಅನುಚ್ಛೇದ 340 ರ ಪ್ರಕಾರ ಯಾವ ಸಮುದಾಯಗಳು ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿದ್ದಾವೋ ಆ ಸಮುದಾಯಗಳನ್ನು ಗುರುತಿಸಿ ಆ ಸಮುದಾಯಗಳಿಗೂ ಕೂಡ ಮೀಸಲಾತಿ ನೀಡಬಹುದು ಎಂದು ಹೇಳಿದೆ ಆದರೆ ಇಂದು ನರೇಂದ್ರ ಮೋದಿ ಅವರು ಹೇಳಿರುವ ಮೇಲ್ಜಾತಿಯ ಬಡವರು ಸಂವಿಧಾನದ ಮೇಲಿನ ಯಾವುದೇ ಡೆಫಿನೇಶನ್ ನಲ್ಲಿ ಬರುವುದಿಲ್ಲ ಹಾಗಾಗಿ ಅವರಿಗೆ ನೀಡಿರುವುದು ಸಂವಿಧಾನಬಾಹಿರ ಅದನ್ನು ಮಾಡಬೇಕಾದರೆ ಸಂವಿಧಾನವನ್ನು ತಿದ್ದುಪಡಿ ಮಾಡಬೇಕಾಗುತ್ತದೆ. ಮೀಸಲಾತಿಯನ್ನು ಕೇಳದೆ ಇರುವ ಸಮುದಾಯಗಳಿಗೆ ಮೀಸಲಾತಿಯನ್ನು ನೀಡುತ್ತಿರುವ ಮೋದಿಯವರಿಗೆ ಸುಮಾರು ದಶಕಗಳಿಂದ ಒಳ ಮೀಸಲಾತಿಯನ್ನು ಕೇಳುತ್ತಿರುವ ಸಮುದಾಯಗಳ ಕೂಗು ಏಕೆ ಕೇಳುತ್ತಿಲ್ಲ? ನಿಜವಾದ ಹಿಂದುಳಿದ ಸಮಾಜಕ್ಕೆ ಮತ್ತು ತುಳಿತಕ್ಕೊಳಗಾದ ಸಮಾಜಕ್ಕೆ ಆಸರೆಯಾಗಬೇಕಿದ್ದ ಮೀಸಲಾತಿ ಸೌಲಭ್ಯಗಳು ಇಂದು ಎಲ್ಲವೂ ಇರುವವರ ಪಾಲಾಗುತ್ತಿರುವುದು ದುರಂತ.

ಜೊತೆಗೆ ಇವರಿಗೆ ನಿಜವಾಗಲೂ ಮೇಲ್ಜಾತಿ ಬಡವರ ಬಗ್ಗೆ ಕಾಳಜಿ ಇದ್ದಿದ್ದೇ ಆಗಿದ್ದರೆ ಕಳೆದ ನಾಲ್ಕುವರೆ ವರ್ಷಗಳಲ್ಲಿ ಯಾಕೆ ಈ ತೀರ್ಮಾನವನ್ನು ತೆಗೆದು ಕೊಂಡಿಲ್ಲ? ಕುಸಿಯುತ್ತಿರುವ ಅವರ ವ್ಯಕ್ತಿತ್ವ ಮತ್ತು ಪ್ರಭಾವವನ್ನು ಉಳಿಸಿಕೊಳ್ಳುವ ಪ್ರಯತ್ನದಲ್ಲಿ ಈ ರೀತಿಯಾದ ತೀರ್ಮಾನವನ್ನು ತೆಗೆದುಕೊಂಡಿದ್ದಾರೆಯೆ ಎಂಬ ಅನುಮಾನಗಳು ಸೃಷ್ಟಿಯಾಗುತ್ತವೆ. ಅದರ ಜೊತೆಗೆ ಈ ವಿಚಾರದಲ್ಲಿ ಅವರು ಹಾಕಿರುವ ಶರತ್ತುಗಳನ್ನು ನೋಡಿದಾಗ ಮತ್ತಷ್ಟು ಅನುಮಾನಗಳು ಸೃಷ್ಟಿಯಾಗುತ್ತದೆ ಏಕೆಂದರೆ ಆದಾಯದ ಮಿತಿಯನ್ನು ನೋಡಿದಾಗ ವಾರ್ಷಿಕ 8 ಲಕ್ಷ ಎಂದರೆ ತಿಂಗಳಿಗೆ ಸುಮಾರು 60 ಸಾವಿರ ರೂಪಾಯಿಗಳು,ಅರವತ್ತು ಸಾವಿರ ರೂಪಾಯಿ ತೆಗೆದುಕೊಳ್ಳುವವನು ಬಡವನೇ? ಜೊತೆಗೆ ಈಗಾಗಲೇ ಜನರಲ್ ಮೇರಿಟ್ ನಲ್ಲಿ ಸ್ಪರ್ಧೆಗಿಳಿದು ಅಲ್ಲಿನ ಅವಕಾಶಗಳನ್ನು ಗಿಟ್ಟಿಸಿಕೊಳ್ಳುತ್ತಿರುವ ಹಿಂದುಳಿದ ವರ್ಗಗಳು ದಲಿತರು ಹಾಗೂ ಅಲ್ಪಸಂಖ್ಯಾತರ ಪಾಲನ್ನು ಕಿತ್ತುಕೊಳ್ಳುವ ಹುನ್ನಾರವೆ ? ಎಂಬ ಅನುಮಾನವೂ ಸೃಷ್ಟಿಯಾಗುತ್ತದೆ ಏಕೆಂದರೆ ಜನರಲ್ ಮೇರಿಟ್ ಎಂದರೆ ಅದು ಎಲ್ಲರಿಗೂ ಮುಕ್ತವಾಗಿರುವ ಅವಕಾಶ ಅಲ್ಲಿ ಯಾರು ಬೇಕಾದರೂ ಪೈಪೋಟಿಯಲ್ಲಿ ತೊಡಗಬಹುದು ಹಾಗಾಗಿ ಕಳೆದ 70 ವರ್ಷಗಳಲ್ಲಿ ಸಿಕ್ಕ ಅವಕಾಶವನ್ನು ಬಳಸಿಕೊಂಡು ಇಂದು ಒಂದಿಷ್ಟು ಹಿಂದುಳಿದ ವರ್ಗದವರು ಹಾಗೂ ದಲಿತರು ಸಾಮಾನ್ಯ ವರ್ಗದಲ್ಲಿ ಕೂಡ ಆಯ್ಕೆಯಾಗುತ್ತಿದ್ದಾರೆ, ಹಾಗಾಗಿ ಈ ಸಮುದಾಯಗಳ ಏಳಿಗೆಯನ್ನು ಸಹಿಸದೆ ಅವರನ್ನು ಹತ್ತಿಕ್ಕುವ ಹುನ್ನಾರವು ಇದಾಗಿರಬಹುದೇ? ಎಂಬ ಹತ್ತಾರು ಅನುಮಾನಗಳು ಶುರುವಾಗುತ್ತವೆ. ದೇಶದ ಎಲ್ಲಾ ಶೈಕ್ಷಣಿಕ ಸಂಸ್ಥೆಗಳನ್ನು ಸರ್ಕಾರಿ ಸಂಸ್ಥೆಗಳನ್ನು ನಾಶ ಮಾಡಿದ್ದಾಯಿತು ಈಗ ಶೇಕಡ ಒಂದರಷ್ಟು ಇರುವ ಸರ್ಕಾರಿ ನೌಕರಿಯನ್ನು ಕೂಡ ಸಂಪೂರ್ಣವಾಗಿ ನಾಶ ಮಾಡುವಂಥ ಕೆಲಸವೇ ಇದು? ಇಡೀ ದೇಶದ ಸಂಪತ್ತು ಮತ್ತು ಉದ್ಯೋಗ ಸೃಷ್ಟಿ ಯಾಗುವುದು ಕೃಷಿ, ಕೈಗಾರಿಕೆ, ಮತ್ತು ಸೇವಾ ವಲಯ ಅದರಲ್ಲಿ ಸರ್ಕಾರಿ ವಲಯವು ಒಳಗೊಂಡಿದೆ ಇಡೀ ಕೃಷಿ ಕ್ಷೇತ್ರದಲ್ಲಿ ಹಿಂದುಳಿದ ವರ್ಗಗಳು ದಲಿತರು ಹಾಗೂ ಅಲ್ಪಸಂಖ್ಯಾತರ ಪಾಲು ಎಷ್ಟು ಎಂದು ನೋಡಿದರೆ 85 ಶೇಕಡ ಜನಸಂಖ್ಯೆ ಇರುವ ಈ ಸಮುದಾಯಗಳ ಪಾಲು ಕೇವಲ 20 ಶೇಕಡ ಆದರೆ 15 ಶೇಕಡ ರಷ್ಟಿರುವ ಮೇಲ್ಜಾತಿಗಳ ಪಾಲು ಶೇಕಡ 80 ಹಾಗೆಯೇ ಕೈಗಾರಿಕಾ ಕ್ಷೇತ್ರದಲ್ಲೂ ಕೂಡ ಹಿಂದುಳಿದ ದಲಿತ ಮತ್ತು ಅಲ್ಪಸಂಖ್ಯಾತರ ಪಾಲು ಶೇಕಡ 5ರಷ್ಟು ಮೀರಿಲ್ಲ ಹಾಗೆಯೇ ಸೇವಾ ವಲಯ ವಿಚಾರಕ್ಕೆ ಬಂದಾಗ ಅಲ್ಲೂ ಕೂಡ ಇವರ ಮಾಲೀಕತ್ವ ವಾಗಲಿ ಹೆಚ್ಚು ಆದಾಯವನ್ನು ಕೊಡುವಂತ ಉದ್ಯೋಗದಲ್ಲಿ ಆಗಲಿ ಕೇವಲ 5ರಿಂದ 10ರಷ್ಟು ಮಾತ್ರ ಇದೆ ಇನ್ನು ಉಳಿದಂತೆ ಶೇಕಡ ಎರಡರಷ್ಟು ಪಾಲು ಇರುವ ಸರ್ಕಾರಿ ಉದ್ಯೋಗದಲ್ಲಿ ಶೇಕಡ 50ರಷ್ಟು ಮೀಸಲಾತಿ ಇದ್ದರೂ , ಅಂದರೆ ಒಂದು ಪರ್ಸೆಂಟ್ ಉದ್ಯೋಗದ ಅವಕಾಶ ವಿದ್ದರೂ ಅಲ್ಲಿಯೂ ಕೂಡ ಇವರಿಗೆ ಮೋಸವಾಗಿದೆ, ಆದರೆ ಎಲ್ಲಾ ಕ್ಷೇತ್ರದಲ್ಲೂ ತಮ್ಮ ಶೇಕಡವಾರು ಗಿಂತ ಹೆಚ್ಚು ಪ್ರಾತಿನಿಧ್ಯ ಮತ್ತು ಲಾಭವನ್ನು ಗಳಿಸಿರುವ ಸಮುದಾಯಗಳಿಗೆ ಮತ್ತಷ್ಟು ಅವಕಾಶವನ್ನು ಕೊಡುವುದು ಯಾವ ನ್ಯಾಯ? ಈ ವಿಚಾರವನ್ನು ನಾವು ಬಹಳಷ್ಟು ಗಂಭೀರವಾಗಿ ಯೋಚನೆ ಮಾಡಬೇಕಿದೆ, ಖಂಡಿತವಾಗಲೂ ಕೂಡ ನಾವು ಮೇಲ್ಜಾತಿ ಬಡವರ ವಿರೋಧವಲ್ಲ ಆದರೆ ವಂಚನೆಗೊಳಗಾಗಿರುವ ಅವಕಾಶ ಸಿಗದೇ ಪರದಾಡುತ್ತಿರುವ ಸಮುದಾಯಗಳ ಪರವಾದ ಧ್ವನಿ ಮಾತ್ರ ನಾವು! ಜೊತೆಗೆ ಇನ್ನು ಕೆಲವೇ ತಿಂಗಳುಗಳಲ್ಲಿ ಪಾರ್ಲಿಮೆಂಟ್ ಚುನಾವಣೆ ನಡೆಯಲಿದೆ ಎಂಬುದು ನಮಗೂ ಗೊತ್ತು! ಆ ಚುನಾವಣೆಯಲ್ಲಿ ನಿಮ್ಮನ್ನು ಸೋಲಿಸುವುದು ನಮಗೆ ಗೊತ್ತು ಎಚ್ಚರವಿರಲಿ ಮಿಸ್ಟರ್ ಮೋದಿ & ಬಿಜೆಪಿ.

ಸಾಮಾನ್ಯ ವರ್ಗ ಎಂದರೆ ಯಾರು?

ಕರ್ನಾಟಕದಲ್ಲಿ ಲಿಂಗಾಯತರು ಒಕ್ಕಲಿಗರು ಹಾಗೂ ಕಸುಬು ಆಧಾರಿತ ಎಲ್ಲಾ ಜಾತಿಗಳು ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಇವೆ, ಅಂದರೆ ಎರಡು 2ಬಿ 3ಎ ಮತ್ತು 3ಬಿ ಪಟ್ಟಿಯಲ್ಲಿ ಇವರಿಗೆ ರಾಜ್ಯದಲ್ಲಿ ಸಂವಿಧಾನದ ಪ್ರಕಾರ 32 ಶೇಕಡ ಮೀಸಲಾತಿಯನ್ನು ನೀಡಲಾಗಿದೆ ಹಾಗೆ ರಾಷ್ಟ್ರಮಟ್ಟದಲ್ಲಿ 27% ಮೀಸಲಾತಿಯನ್ನು ನೀಡಲಾಗಿದೆ ಹಾಗೆಯೇ ವಿವಿಧ ರಾಜ್ಯಗಳಲ್ಲಿ ಈ ಜಾತಿಗಳ ಸಮಾನಂತರ ಜಾತಿಗಳು ಕೂಡ ಮೀಸಲಾತಿಯನ್ನು ಅನುಭವಿಸುತ್ತಿದ್ದಾರೆ. ಹಾಗಾದರೆ ಸಾಮಾನ್ಯ ವರ್ಗ ಎಂದರೆ ಯಾರು? ಎಂಬ ಪ್ರಶ್ನೆ ಈಗ ಎಲ್ಲರನ್ನೂ ಕಾಡುತ್ತಿದೆ.

ಸಾಮಾನ್ಯ ವರ್ಗವೆಂದರೆ ಅದು ಯಾವುದೇ ಜಾತಿ ಅಲ್ಲ, ಅಲ್ಲಿ ಯಾರು ಬೇಕಾದರೂ ಸ್ಪರ್ಧಿಸಬಹುದು ಎಂಬುದು. ಎಸ್ ಸಿ ಎಸ್ ಟಿ ಗಳನ್ನು ಬಿಟ್ಟು ಮಿಕ್ಕವರೆಲ್ಲ ಸಾಮಾನ್ಯ ವರ್ಗದವರು ಎಂಬ ಪರಿಕಲ್ಪನೆಯನ್ನು ಹುಟ್ಟಿ ಹಾಕಿದ್ದು ಹಿಂದುಳಿದ ವರ್ಗಗಳನ್ನು ಎಸ್ಸಿ , ಎಸ್ಟಿ ಗಳಿಂದ ದೂರ ಮಾಡಲು, ಏಕೆಂದರೆ ಮೀಸಲಾತಿಯು ಬ್ರಾಹ್ಮಣ, ಕ್ಷತ್ರಿಯ ಮತ್ತು ವೈಶ್ಯರನ್ನು ಬಿಟ್ಟು ಎಲ್ಲಾ ಜಾತಿಗಳು ಪಡೆಯುತ್ತಾ ಬಂದಿವೆ, ಹಾಗಾಗಿ ಮೀಸಲಾತಿಯ ವಿರುದ್ಧವಾಗಿ ಇರುವ ಸಮುದಾಯಗಳು ಮೀಸಲಾತಿಯ ವಿರೋಧಿ ಭಾವನೆಯನ್ನು ಸೃಷ್ಟಿ ಮಾಡಲು ಹಿಂದುಳಿದ ವರ್ಗದವರು ಮೀಸಲಾತಿ ಪಡೆಯುತ್ತಿಲ್ಲ ಎನ್ನುವಂಥ Mythನ್ನು ಸೃಷ್ಟಿ ಮಾಡಿ ಮೀಸಲಾತಿ ವಿರುದ್ಧ ಧೋರಣೆಯನ್ನು ಸೃಷ್ಟಿ ಮಾಡಿದರು ಹಾಗಾಗಿ 1991-92 ರಲ್ಲಿ ಮಂಡಲ್ ವರದಿಯನ್ನು ಜಾರಿ ಮಾಡುವ ಸಂದರ್ಭ ಸೃಷ್ಟಿಯಾದಾಗ ಅದನ್ನು ವಿರೋಧ ಮಾಡಿದವರು ಇದೇ ಹಿಂದುಳಿದ ವರ್ಗದವರು ಹಾಗಾಗಿ ಇಂದು ಭಾರತ ದೇಶದಲ್ಲಿ ಬಹುಜನ ಚಳುವಳಿಯ ಪ್ರಭಾವದಿಂದ ಎಲ್ಲಾ ಹಿಂದುಳಿದ ವರ್ಗಗಳು ಹಾಗೂ ದಲಿತರು ಒಂದಾಗುತ್ತಿರುವ ಸಂದರ್ಭದಲ್ಲಿ ಅವರನ್ನು ಬೇರ್ಪಡಿಸಲು ಬಿಜೆಪಿ ಮತ್ತು ಮೋದಿ ಯವರು ಈ ಸಾಮಾನ್ಯ ವರ್ಗ ಎನ್ನುವ most confused notion ಅನ್ನು ಸೃಷ್ಟಿ ಮಾಡಿ ಸಾಮಾನ್ಯ ವರ್ಗದವರಿಗೆ ಮೀಸಲಾತಿ ಎಂಬ ಜುಮ್ಲಾದ ಮುಖಾಂತರ ಮತ್ತೆ ಹಿಂದುಳಿದ ವರ್ಗಗಳು ಮತ್ತು ಎಸ್ಸಿ ಎಸ್ಟಿ ಗಳ ನಡುವೆ ಕಂದಕವನ್ನು ಸೃಷ್ಟಿ ಮಾಡಲು ಹೊರಟಿದ್ದಾರೆ.

ಸಾಮಾನ್ಯ ವರ್ಗದ ಬಡವರು ಎಂದರೆ ಯಾರು? ಮೇಲ್ಜಾತಿ ಬಡವರು ಎಂದರೆ ಯಾರು? ಎಂಬುದನ್ನು ಸ್ಪಷ್ಟಪಡಿಸಬೇಕಿದೆ ಯಾಕೆಂದರೆ ಈಗಾಗಲೇ ಮೀಸಲಾತಿಯ ಬಗ್ಗೆ ಮತ್ತು ದಲಿತ ಹಿಂದುಳಿದ ವರ್ಗಗಳ ಬಗ್ಗೆ ಇರುವ ಗೊಂದಲವನ್ನು ಮತ್ತಷ್ಟು ಗೊಂದಲಮಯವಾಗಿಸುವುದು ಬೇಡ? ಮೇಲ್ಜಾತಿ ಬಡವರಿಗೆ ಮೀಸಲಾತಿ ನೀಡುವುದರ ವಿರುದ್ಧವೂ ನಾವಿಲ್ಲ, ಜೊತೆಗೆ ನಾವು ಮೇಲ್ಜಾತಿಗಳ ವಿರೋಧಿಗಳು ಅಲ್ಲ, ಇಲ್ಲಿ ನಾವು ಕೇಳುತ್ತಿರುವುದು ಮೇಲ್ಜಾತಿಗಳು ಎಂದರೆ ಯಾರು ಎಂಬುದನ್ನು ಮಾತ್ರ, ಈಗ ಕೇಂದ್ರ ಸರ್ಕಾರ ತೆಗೆದುಕೊಂಡಿರುವ ನಿರ್ಧಾರದಿಂದ ದೊರಕುವ ಸೌಲಭ್ಯಗಳು ಕೇವಲ ಬ್ರಾಹ್ಮಣ ಬನಿಯಾ ಗಳಿಗೆ ಮಾತ್ರ! ಹಾಗಾಗಿ ಮಾನ್ಯ ಮೋದಿಯವರು ನಾವು ನೀಡುತ್ತಿರುವ ಮೀಸಲಾತಿಯು ಕೇವಲ ಬ್ರಾಹ್ಮಣ ಬನಿಯಾ ಗಳಲ್ಲಿರುವ ಬಡವರಿಗೆ ಎಂದು ಘೋಷಿಸಲಿ, ಏಕೆಂದರೆ ಈ ವಿಚಾರದಲ್ಲಿ ಯಾವುದೇ confusion ಬೇಡ.

ಜೈ ಭೀಮ್,ಜೈ ಭಾರತ್

-ಪ್ರೊ. ಹರಿರಾಮ್
ರಾಜ್ಯಾಧ್ಯಕ್ಷರು
ಬಹುಜನ ಸಮಾಜ ಪಾರ್ಟಿ
ಕರ್ನಾಟಕ

ಸುದ್ದಿದಿನ.ಕಾಂ|ವಾಟ್ಸಾಪ್|9986715401

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ

Published

on

ಕರ್ನಾಟಕ ಕಾಂಗ್ರೆಸ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದಾಗಿ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಹುದ್ದೆಯನ್ನು ವಹಿಸಿಕೊಂಡ ಬಳಿಕ ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಈ ಮಹತ್ವದ ಜವಾಬ್ದಾರಿಯನ್ನು ಬಿ.ಕೆ. ಹರಿಪ್ರಸಾದ್ ಅವರಿಗೆ ನೀಡಿದೆ.

ಈ ನೇಮಕ ಕೇವಲ ಸಂಘಟನಾತ್ಮಕ ಬದಲಾವಣೆಯಲ್ಲ. ಕರ್ನಾಟಕ ಕಾಂಗ್ರೆಸ್‌ನ ಮುಂದಿನ ರಾಜಕೀಯ ದಿಕ್ಕು, ಪಕ್ಷದ ಒಳಾಂಗಣ ಸಮತೋಲನ ಮತ್ತು ಭವಿಷ್ಯದ ಚುನಾವಣಾ ತಂತ್ರಗಳಿಗೆ ಇದು ಪ್ರಮುಖ ಸೂಚನೆಯಾಗಿದೆ. ಹಲವು ದಶಕಗಳ ರಾಜಕೀಯ ಅನುಭವ, ಸಂಘಟನಾ ಕೌಶಲ್ಯ ಮತ್ತು ಹೈಕಮಾಂಡ್‌ಗೆ ನಿಕಟ ಸಂಪರ್ಕ ಹೊಂದಿರುವ ಹರಿಪ್ರಸಾದ್ ಅವರು ಈಗ ರಾಜ್ಯ ಕಾಂಗ್ರೆಸ್‌ನ ನೂತನ ಸಾರಥಿಯಾಗಿ ಹೊರಹೊಮ್ಮಿದ್ದಾರೆ.

ಆರಂಭಿಕ ಜೀವನ ಮತ್ತು ಶಿಕ್ಷಣ

ಬಿ.ಕೆ. ಹರಿಪ್ರಸಾದ್ ಅವರು 1954ರ ಜುಲೈ 29ರಂದು ಬೆಂಗಳೂರಿನಲ್ಲಿ ಜನಿಸಿದರು. ತಂದೆ ಎ. ಕೆಂಪಯ್ಯ ಹಾಗೂ ತಾಯಿ ಕೆ. ಗುಣಾವತಿ. ಬಾಲ್ಯದಿಂದಲೇ ಸಾಮಾಜಿಕ ಮತ್ತು ರಾಜಕೀಯ ಚಟುವಟಿಕೆಗಳತ್ತ ಆಸಕ್ತಿ ಹೊಂದಿದ್ದ ಅವರು ಬೆಂಗಳೂರಿನ ಎಂ.ಇ.ಎಸ್. ಕಾಲೇಜಿನಲ್ಲಿ ಬಿ.ಕಾಂ ಪದವಿ ಶಿಕ್ಷಣ ಪಡೆದರು. ವಿದ್ಯಾರ್ಥಿ ಜೀವನದಲ್ಲಿಯೇ ಕಾಂಗ್ರೆಸ್ ಚಟುವಟಿಕೆಗಳೊಂದಿಗೆ ಗುರುತಿಸಿಕೊಂಡ ಅವರು ಮುಂದೆ ಪೂರ್ಣಾವಧಿ ರಾಜಕಾರಣಿಯಾಗಿ ಬೆಳೆದರು.

ವಿದ್ಯಾರ್ಥಿ ರಾಜಕಾರಣದಿಂದ ರಾಷ್ಟ್ರೀಯ ಮಟ್ಟದ ನಾಯಕತ್ವದವರೆಗೆ

ಹರಿಪ್ರಸಾದ್ ಅವರ ರಾಜಕೀಯ ಬದುಕು ವಿದ್ಯಾರ್ಥಿ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಸಂಘಟನೆಗಳಿಂದ ಆರಂಭವಾಯಿತು. ಸಂಘಟನಾ ರಾಜಕಾರಣದಲ್ಲಿ ತೋರಿದ ಸಾಮರ್ಥ್ಯದಿಂದ ಅವರು ಶೀಘ್ರದಲ್ಲೇ ಪಕ್ಷದ ಹಿರಿಯ ನಾಯಕರ ಗಮನ ಸೆಳೆದರು.

ರಾಜ್ಯ ಮಟ್ಟದಲ್ಲಿ ಮಾತ್ರವಲ್ಲದೆ ರಾಷ್ಟ್ರೀಯ ಮಟ್ಟದಲ್ಲೂ ಕಾಂಗ್ರೆಸ್ ಸಂಘಟನೆಯಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿದ ಅವರು, ಹಲವು ರಾಜ್ಯಗಳ ಕಾಂಗ್ರೆಸ್ ವ್ಯವಹಾರಗಳ ಉಸ್ತುವಾರಿಯಾಗಿ ಕೆಲಸ ಮಾಡಿದ್ದಾರೆ. ಪಕ್ಷದ ಹೈಕಮಾಂಡ್‌ನೊಂದಿಗೆ ಉತ್ತಮ ಸಂಪರ್ಕ ಹೊಂದಿರುವ ನಾಯಕರಲ್ಲಿ ಹರಿಪ್ರಸಾದ್ ಪ್ರಮುಖರು ಎಂದು ಪರಿಗಣಿಸಲಾಗುತ್ತದೆ.

ಬಿ.ಕೆ. ಹರಿಪ್ರಸಾದ್ ಅವರು ಹಲವು ಬಾರಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. 1990ರಿಂದಲೇ ಅವರು ರಾಷ್ಟ್ರೀಯ ರಾಜಕಾರಣದಲ್ಲಿ ಸಕ್ರಿಯ ಪಾತ್ರ ವಹಿಸುತ್ತಾ ಬಂದಿದ್ದಾರೆ. ರಾಜ್ಯಸಭೆಯಲ್ಲಿ ಕಾಂಗ್ರೆಸ್ ಪರವಾಗಿ ಹಲವು ವಿಷಯಗಳ ಬಗ್ಗೆ ಧ್ವನಿ ಎತ್ತಿದ ಅವರು ಸಂಸತ್ತಿನ ಚರ್ಚೆಗಳಲ್ಲಿ ಗಮನ ಸೆಳೆದಿದ್ದರು.

ಅವರು ರಾಜ್ಯಸಭೆಯ ಉಪಸಭಾಪತಿ ಸ್ಥಾನಕ್ಕೆ ಪ್ರತಿಪಕ್ಷಗಳ ಒಕ್ಕೂಟದ ಅಭ್ಯರ್ಥಿಯಾಗಿಯೂ ಸ್ಪರ್ಧಿಸಿದ್ದರು. ಆ ಸಂದರ್ಭದಲ್ಲಿ ಎನ್‌ಡಿಎ ಅಭ್ಯರ್ಥಿ ಹರಿವಂಶ್ ನಾರಾಯಣ್ ಸಿಂಗ್ ವಿರುದ್ಧ ಪೈಪೋಟಿ ನಡೆಸಿದ್ದರು. ಸೋಲು ಕಂಡಿದ್ದರೂ ರಾಷ್ಟ್ರೀಯ ರಾಜಕೀಯದಲ್ಲಿ ಅವರ ಸ್ಥಾನಮಾನ ಮತ್ತಷ್ಟು ಬಲವತ್ತಾಯಿತು.

1999ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಬಿಜೆಪಿಯ ಹಿರಿಯ ನಾಯಕ ಅನಂತ್ ಕುಮಾರ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆ ಚುನಾವಣೆಯಲ್ಲಿ ಜಯ ಸಾಧಿಸಲು ಸಾಧ್ಯವಾಗದಿದ್ದರೂ ಅವರು ಕಾಂಗ್ರೆಸ್‌ನ ಪ್ರಮುಖ ಮುಖವಾಗಿ ಗುರುತಿಸಿಕೊಂಡರು.

ಸಂಘಟನಾ ರಾಜಕಾರಣದಲ್ಲಿ ಹೆಚ್ಚು ಸಕ್ರಿಯರಾಗಿದ್ದ ಕಾರಣ, ಚುನಾವಣಾ ಗೆಲುವಿಗಿಂತ ಪಕ್ಷ ನಿರ್ಮಾಣದಲ್ಲಿ ಅವರ ಪಾತ್ರವೇ ಹೆಚ್ಚು ಗಮನ ಸೆಳೆಯಿತು.

ಕಾಂಗ್ರೆಸ್ ಸಂಘಟನೆಯಲ್ಲಿ ‘ಟಾಸ್ಕ್ ಮಾಸ್ಟರ್’

ಕಾಂಗ್ರೆಸ್ ಪಕ್ಷದಲ್ಲಿ ಹರಿಪ್ರಸಾದ್ ಅವರನ್ನು ಸಂಘಟನಾ ತಜ್ಞ ಎಂದು ಕರೆಯಲಾಗುತ್ತದೆ. ಪಕ್ಷ ಎದುರಿಸಿದ ಸಂಕಷ್ಟದ ಸಂದರ್ಭಗಳಲ್ಲಿ ಹಲವು ರಾಜ್ಯಗಳಲ್ಲಿ ಜವಾಬ್ದಾರಿಗಳನ್ನು ನಿರ್ವಹಿಸಿ ಸಂಘಟನೆಯನ್ನು ಬಲಪಡಿಸಿದ ಅನುಭವ ಅವರಿಗೆ ಇದೆ.

ಇತ್ತೀಚಿನ ಅವಧಿಯಲ್ಲಿ ಅವರು ಹರಿಯಾಣ ಕಾಂಗ್ರೆಸ್ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ರಾಜ್ಯ ರಾಜಕೀಯದ ಸೂಕ್ಷ್ಮ ಸಮೀಕರಣಗಳನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ಮತ್ತು ಕಾರ್ಯಕರ್ತರೊಂದಿಗೆ ನೇರ ಸಂಪರ್ಕ ಸಾಧಿಸುವ ಶೈಲಿ ಅವರ ವಿಶೇಷತೆ ಎಂದು ಪಕ್ಷದ ನಾಯಕರು ಹೇಳುತ್ತಾರೆ.

ಕರ್ನಾಟಕ ಕಾಂಗ್ರೆಸ್‌ನಲ್ಲಿ ಹರಿಪ್ರಸಾದ್ ಅವರು ಹಲವು ದಶಕಗಳಿಂದ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಪಕ್ಷದ ಒಳಗಿನ ಭಿನ್ನಾಭಿಪ್ರಾಯಗಳ ಸಂದರ್ಭದಲ್ಲೂ ಅವರು ಸಮತೋಲನ ಸಾಧಿಸುವ ನಾಯಕನಾಗಿ ಕಾಣಿಸಿಕೊಂಡಿದ್ದಾರೆ.

ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿರುವ ಅವರು, 2022 ರಿಂದ 2023ರವರೆಗೆ ಕರ್ನಾಟಕ ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಸರ್ಕಾರದ ನೀತಿಗಳ ವಿರುದ್ಧ ಪರಿಣಾಮಕಾರಿ ಹೋರಾಟ ನಡೆಸುವ ಮೂಲಕ ಅವರು ಗಮನ ಸೆಳೆದಿದ್ದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ

2026ರಲ್ಲಿ ಕರ್ನಾಟಕ ರಾಜಕೀಯದಲ್ಲಿ ನಡೆದ ನಾಯಕತ್ವ ಬದಲಾವಣೆಯ ಬಳಿಕ ಮುಖ್ಯಮಂತ್ರಿ ಹುದ್ದೆಯನ್ನು ಡಿ.ಕೆ. ಶಿವಕುಮಾರ್ ವಹಿಸಿಕೊಂಡರು. ಇದರ ಪರಿಣಾಮವಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಪಕ್ಷದೊಳಗೆ ಹಲವು ನಾಯಕರ ಹೆಸರುಗಳು ಕೇಳಿಬಂದಿದ್ದರೂ ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಬಿ.ಕೆ. ಹರಿಪ್ರಸಾದ್ ಅವರನ್ನು ಆಯ್ಕೆ ಮಾಡಿತು.

ಈ ನಿರ್ಧಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಹೈಕಮಾಂಡ್ ಸಂಘಟನಾ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿ ಪರಿಗಣಿಸಿದೆ. ಪಕ್ಷದ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮತೋಲನ ಕಾಯ್ದುಕೊಳ್ಳಲು ಹರಿಪ್ರಸಾದ್ ಅವರ ಅನುಭವ ನೆರವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

ಬಿ.ಕೆ. ಹರಿಪ್ರಸಾದ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಹಿಂದೆ ಹಲವು ರಾಜಕೀಯ ಕಾರಣಗಳಿವೆ. ಮೊದಲನೆಯದಾಗಿ, ಅವರು ಯಾವುದೇ ಒಂದು ಗುಂಪಿಗೆ ಸೀಮಿತವಾಗದ ನಾಯಕ ಎಂಬ ಚಿತ್ರಣ ಹೊಂದಿದ್ದಾರೆ. ಎರಡನೆಯದಾಗಿ, ಸಂಘಟನಾ ಅನುಭವ ಅಪಾರವಾಗಿದೆ. ಮೂರನೆಯದಾಗಿ, ಹೈಕಮಾಂಡ್‌ಗೆ ಅತ್ಯಂತ ವಿಶ್ವಾಸಾರ್ಹ ನಾಯಕರಲ್ಲಿ ಒಬ್ಬರು. ನಾಲ್ಕನೆಯದಾಗಿ, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳು ಮತ್ತು ಮುಂದಿನ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಸಾಮರ್ಥ್ಯ ಅವರಿಗಿದೆ ಎಂದು ಕಾಂಗ್ರೆಸ್ ನಾಯಕತ್ವ ನಂಬಿದೆ.

ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಅವರ ಮುಂದಿರುವ ಸವಾಲುಗಳು ಸಣ್ಣದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೂ ಸಂಘಟನೆಯನ್ನು ಸದೃಢವಾಗಿಡುವುದು ದೊಡ್ಡ ಜವಾಬ್ದಾರಿ. ಕಾರ್ಯಕರ್ತರ ಅಸಮಾಧಾನ, ಸಚಿವ ಸ್ಥಾನಾಕಾಂಕ್ಷಿಗಳ ಒತ್ತಡ, ಪ್ರಾದೇಶಿಕ ಸಮೀಕರಣಗಳು ಮತ್ತು ಜಾತಿ ಆಧಾರಿತ ರಾಜಕೀಯ ಬೇಡಿಕೆಗಳನ್ನು ಸಮತೋಲನಗೊಳಿಸಬೇಕಾಗಿದೆ.

ಇದರ ಜೊತೆಗೆ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಕಾಂಗ್ರೆಸ್ ಸಂಘಟನೆಯನ್ನು ನಿರಂತರ ಚಟುವಟಿಕೆಯಲ್ಲಿ ಇರಿಸುವುದು ಅವರ ಪ್ರಮುಖ ಗುರಿಯಾಗಲಿದೆ.

ಹರಿಪ್ರಸಾದ್ ಅವರು ಹೆಚ್ಚು ಪ್ರಚಾರಪ್ರಿಯ ರಾಜಕಾರಣಿಯಲ್ಲ. ಸಂಘಟನೆಯೊಳಗೆ ಕೆಲಸ ಮಾಡುವ ನಾಯಕ ಎಂಬ ಹೆಗ್ಗಳಿಕೆ ಅವರಿಗೆ ಇದೆ. ಕಾರ್ಯಕರ್ತರೊಂದಿಗೆ ನೇರ ಸಂಪರ್ಕ, ಹಂತ ಹಂತವಾಗಿ ಸಮಸ್ಯೆಗಳಿಗೆ ಪರಿಹಾರ ಮತ್ತು ತಾಳ್ಮೆಯ ರಾಜಕೀಯ ಅವರ ಕಾರ್ಯಶೈಲಿಯ ಮುಖ್ಯ ಲಕ್ಷಣಗಳು.

ಅವರ ರಾಜಕೀಯ ಜೀವನದಲ್ಲಿ ಅನೇಕ ಏರಿಳಿತಗಳು ಬಂದಿದ್ದರೂ ಪಕ್ಷದ ಮೇಲಿನ ನಿಷ್ಠೆ ಪ್ರಶ್ನಾತೀತವಾಗಿದೆ. ಇದೇ ಕಾರಣಕ್ಕೆ ಕಾಂಗ್ರೆಸ್ ಹೈಕಮಾಂಡ್ ಹಲವು ಬಾರಿ ಅವರಿಗೆ ಪ್ರಮುಖ ಜವಾಬ್ದಾರಿಗಳನ್ನು ನೀಡಿದೆ.

ರಾಜಕೀಯದ ಜೊತೆಗೆ ಸರಳ ಜೀವನಶೈಲಿಗೆ ಹೆಸರುವಾಸಿಯಾಗಿರುವ ಹರಿಪ್ರಸಾದ್ ಅವರು ಉಷಾ ಅವರೊಂದಿಗೆ ದಾಂಪತ್ಯ ಜೀವನ ನಡೆಸುತ್ತಿದ್ದಾರೆ. ಅವರಿಗೆ ಒಬ್ಬ ಪುತ್ರಿಯಿದ್ದಾರೆ. ಕುಟುಂಬ ಜೀವನವನ್ನು ರಾಜಕೀಯದಿಂದ ಸಾಧ್ಯವಾದಷ್ಟು ದೂರ ಇಡುವ ನಾಯಕ ಎಂಬ ಹೆಸರನ್ನು ಅವರು ಗಳಿಸಿದ್ದಾರೆ.

ಭವಿಷ್ಯದ ರಾಜಕೀಯ ಪಾತ್ರ

ಕೆಪಿಸಿಸಿ ಅಧ್ಯಕ್ಷ ಸ್ಥಾನ ಹರಿಪ್ರಸಾದ್ ಅವರ ರಾಜಕೀಯ ಜೀವನದ ಮತ್ತೊಂದು ಮಹತ್ವದ ಅಧ್ಯಾಯವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮನ್ವಯ ಸಾಧಿಸುವಲ್ಲಿ ಅವರ ಪಾತ್ರ ನಿರ್ಣಾಯಕವಾಗಲಿದೆ.

ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯ ಮಟ್ಟದ ತಂತ್ರ ರೂಪಿಸುವುದು, ಕಾರ್ಯಕರ್ತರ ಬಲವರ್ಧನೆ, ಚುನಾವಣಾ ಸಿದ್ಧತೆ ಮತ್ತು ಹೈಕಮಾಂಡ್‌ನೊಂದಿಗೆ ಸಮನ್ವಯ ಸಾಧಿಸುವ ಪ್ರಮುಖ ಹೊಣೆಗಾರಿಕೆ ಅವರ ಮೇಲಿದೆ. ಈ ಎಲ್ಲ ಸವಾಲುಗಳನ್ನು ಅವರು ಹೇಗೆ ನಿಭಾಯಿಸುತ್ತಾರೆ ಎಂಬುದರ ಮೇಲೆ ಕರ್ನಾಟಕ ಕಾಂಗ್ರೆಸ್‌ನ ಮುಂದಿನ ರಾಜಕೀಯ ಭವಿಷ್ಯ ಬಹುಮಟ್ಟಿಗೆ ಅವಲಂಬಿತವಾಗಿದೆ.

ಸುಮಾರು ನಾಲ್ಕು ದಶಕಗಳಿಗಿಂತಲೂ ಹೆಚ್ಚು ಕಾಲ ಕಾಂಗ್ರೆಸ್ ಸಂಘಟನೆಯಲ್ಲಿ ದುಡಿದಿರುವ ಬಿ.ಕೆ. ಹರಿಪ್ರಸಾದ್ ಇಂದು ಕರ್ನಾಟಕ ಕಾಂಗ್ರೆಸ್‌ನ ಅತ್ಯುನ್ನತ ಸಂಘಟನಾ ಹುದ್ದೆಯನ್ನು ಅಲಂಕರಿಸಿದ್ದಾರೆ. ವಿದ್ಯಾರ್ಥಿ ರಾಜಕಾರಣದಿಂದ ಆರಂಭವಾದ ಅವರ ಪಯಣ ರಾಜ್ಯಸಭೆ, ರಾಷ್ಟ್ರೀಯ ಸಂಘಟನೆ, ವಿಧಾನ ಪರಿಷತ್ ಮತ್ತು ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನವರೆಗೆ ತಲುಪಿದೆ.

ಅನುಭವ, ಸಂಘಟನಾ ಕೌಶಲ್ಯ, ರಾಜಕೀಯ ಪ್ರೌಢಿಮೆ ಮತ್ತು ಪಕ್ಷದ ಮೇಲಿನ ನಿಷ್ಠೆ ಎಂಬ ನಾಲ್ಕು ಅಂಶಗಳು ಅವರ ರಾಜಕೀಯ ವ್ಯಕ್ತಿತ್ವದ ಪ್ರಮುಖ ಗುರುತುಗಳಾಗಿವೆ. ಕರ್ನಾಟಕ ಕಾಂಗ್ರೆಸ್ ಹೊಸ ರಾಜಕೀಯ ಹಾದಿಯಲ್ಲಿ ಸಾಗುತ್ತಿರುವ ಈ ಸಂದರ್ಭದಲ್ಲಿ, ಬಿ.ಕೆ. ಹರಿಪ್ರಸಾದ್ ಅವರ ನಾಯಕತ್ವ ಪಕ್ಷಕ್ಕೆ ಹೊಸ ಶಕ್ತಿ ತುಂಬುತ್ತದೆಯೇ ಎಂಬುದನ್ನು ರಾಜ್ಯದ ರಾಜಕೀಯ ಕುತೂಹಲದಿಂದ ಗಮನಿಸುತ್ತಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ

Published

on

~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ

ಮುನ್ನೋಟ: ಜೀವನಕ್ರಮವಾಗಿ ಪ್ರಜಾಪ್ರಭುತ್ವ

ಪ್ರಜಾಪ್ರಭುತ್ವವು ಕೇವಲ ಐದು ವರ್ಷಕ್ಕೊಮ್ಮೆ ನಡೆಯುವ ಚುನಾವಣಾ ಪ್ರಕ್ರಿಯೆಯಲ್ಲ; ಅದು ಸಮಾಜದ ಪ್ರತಿಯೊಬ್ಬ ವ್ಯಕ್ತಿಯ ಘನತೆಯನ್ನು ಎತ್ತಿಹಿಡಿಯುವ ಒಂದು ಉದಾತ್ತ ಜೀವನಕ್ರಮ. ಸೈದ್ಧಾಂತಿಕವಾಗಿ ಪ್ರಜಾಪ್ರಭುತ್ವವು ‘ನಿಷ್ಪಕ್ಷಪಾತ’ ಮನೋಭಾವವನ್ನು ಪ್ರತಿಪಾದಿಸುತ್ತದೆ. ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ತತ್ವವು ಕೇವಲ ಕಾಗದದ ಮೇಲಿನ ವಾಕ್ಯವಾಗದೆ, ಹುಟ್ಟಿನಿಂದ ಹೇರಲ್ಪಟ್ಟ ಶ್ರೇಣೀಕೃತ ವ್ಯವಸ್ಥೆಯ ಗೋಡೆಗಳನ್ನು ಕೆಡವುವ ಶಕ್ತಿಯಾಗಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಯೂ ದೇಶದ ಅತ್ಯುನ್ನತ ನಿರ್ಧಾರಗಳನ್ನು ತೆಗೆದುಕೊಳ್ಳುವ ಸ್ಥಾನಕ್ಕೇರಲು ಸಾಧ್ಯವಿರುವುದು ಈ ವ್ಯವಸ್ಥೆಯ ಅತಿದೊಡ್ಡ ಯಶಸ್ಸು.

ಸಾಮಾಜಿಕ ನ್ಯಾಯ ಮತ್ತು ಸಾಂವಿಧಾನಿಕ ಬಲ

ಸಾಮಾಜಿಕ ನ್ಯಾಯವು ಪ್ರಜಾಪ್ರಭುತ್ವದ ಅಂತರಾತ್ಮವಿದ್ದಂತೆ. ಐತಿಹಾಸಿಕವಾಗಿ ಶೋಷಣೆಗೆ ಒಳಗಾದ ಸಮುದಾಯಗಳಿಂದ ಬಂದ ವ್ಯಕ್ತಿಗಳು ನಾಯಕತ್ವದ ಸ್ಥಾನಕ್ಕೇರುವುದು ಹೊರನೋಟಕ್ಕೆ ಒಂದು ಪವಾಡದಂತೆ ಭಾಸವಾಗಬಹುದು. ಆದರೆ, ವಾಸ್ತವದಲ್ಲಿ ಇದು ಸಂವಿಧಾನ ನೀಡಿರುವ ‘ಮತದಾನದ ಹಕ್ಕು’ ಮತ್ತು ‘ಪ್ರಾತಿನಿಧ್ಯದ ಅವಕಾಶ’ಗಳ ಫಲಶೃತಿಯಾಗಿದೆ. ಪ್ರಜಾಪ್ರಭುತ್ವವು ಕೇವಲ ಬಹುಮತದ ಆಡಳಿತವಲ್ಲ, ಬದಲಿಗೆ ಅಲ್ಪಸಂಖ್ಯಾತ ಮತ್ತು ದಮನಿತ ಧ್ವನಿಗಳಿಗೂ ನೀತಿ ನಿರೂಪಣೆಯಲ್ಲಿ ಸಮಾನ ವೇದಿಕೆ ಕಲ್ಪಿಸುವ ಒಳಗೊಳ್ಳುವಿಕೆಯ (Inclusion) ಪ್ರಕ್ರಿಯೆಯಾಗಿದೆ. ಅಧಿಕಾರವು ಕೆಲವೇ ಜನರ ಕೈಯಲ್ಲಿ ಕೇಂದ್ರಿಕೃತವಾಗದೆ, ವಿಕೇಂದ್ರೀಕರಣದ ಮೂಲಕ ಸಾಮಾನ್ಯ ಜನರಿಗೂ ತಲುಪಿದಾಗ ಮಾತ್ರ ಪ್ರಜಾಪ್ರಭುತ್ವದ ಆಶಯ ಸಾಕಾರಗೊಳ್ಳುತ್ತದೆ.

ನಾಯಕತ್ವದ ನೈತಿಕತೆ ಮತ್ತು ಸಾಂವಿಧಾನಿಕ ಬದ್ಧತೆ

ಪ್ರಜಾಪ್ರಭುತ್ವದ ಅತ್ಯಂತ ನಿರ್ಣಾಯಕ ಅಂಶವೆಂದರೆ ಅಧಿಕಾರವನ್ನು ಪಡೆದವರ ನೈತಿಕ ನಡೆ. ಪ್ರಜಾಪ್ರಭುತ್ವದ ಒತ್ತಾಸೆಯಿಂದ ಅವಕಾಶ ಮತ್ತು ಅಧಿಕಾರವನ್ನು ಪಡೆಯುವ ಪ್ರತಿಯೊಬ್ಬರೂ ಪ್ರಜಾಸತ್ತಾತ್ಮಕ ನಿಲುವುಗಳಿಗೆ ಬದ್ಧವಾಗಿ ಕಾರ್ಯನಿರ್ವಹಿಸುವ ನೈತಿಕತೆಯನ್ನು ಹೊಂದಿರಬೇಕಾಗುತ್ತದೆ. ಅಧಿಕಾರವು ಒಂದು ಸೌಲಭ್ಯವಲ್ಲ, ಅದೊಂದು ಜವಾಬ್ದಾರಿ. ಯಾವ ವ್ಯವಸ್ಥೆಯು ಒಬ್ಬ ವ್ಯಕ್ತಿಯನ್ನು ಸಾಮಾನ್ಯ ಸ್ಥಿತಿಯಿಂದ ನಾಯಕತ್ವದ ಸ್ಥಾನಕ್ಕೆ ಏರಿಸುತ್ತದೆಯೋ, ಅದೇ ವ್ಯವಸ್ಥೆಯ ಮೌಲ್ಯಗಳನ್ನು ಎತ್ತಿಹಿಡಿಯುವುದು ಆ ನಾಯಕನ ಪರಮ ಧರ್ಮ. ಸಾಂವಿಧಾನಿಕ ಆಶಯಗಳಿಗೆ ದ್ರೋಹ ಬಗೆಯದೆ, ವೈಯಕ್ತಿಕ ಹಿತಾಸಕ್ತಿಗಿಂತ ಜನಹಿತವೇ ದೊಡ್ಡದು ಎಂಬ ನಿಲುವು ತಳೆದಾಗ ಮಾತ್ರ ಅಧಿಕಾರಕ್ಕೆ ಸಾರ್ಥಕತೆ ದೊರೆಯುತ್ತದೆ.

ಐತಿಹಾಸಿಕ ಪ್ರೇರಣೆ: ಅಬ್ರಹಾಂ ಲಿಂಕನ್ ಎಂಬ ಮಾದರಿ

ಪ್ರಜಾಪ್ರಭುತ್ವದ ಇತಿಹಾಸವನ್ನು ಚರ್ಚಿಸುವಾಗ ಅಬ್ರಹಾಂ ಲಿಂಕನ್ ಅವರ ಹೆಸರು ಅನಿವಾರ್ಯ. “ಜನರಿಗಾಗಿ, ಜನರಿಂದ, ಜನರಿಗೋಸ್ಕರ” ಎಂಬ ಅವರ ಸರಳ ವ್ಯಾಖ್ಯಾನವು ಜಗತ್ತಿನಾದ್ಯಂತ ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ಭದ್ರ ಬುನಾದಿ ಹಾಕಿತು. ಒಬ್ಬ ಸಾಮಾನ್ಯ ಹಿನ್ನೆಲೆಯ ವ್ಯಕ್ತಿ ಅಮೆರಿಕದ ಅಧ್ಯಕ್ಷನಾಗಿ ಗುಲಾಮಗಿರಿಯ ವಿರುದ್ಧ ಹೋರಾಡಿದ್ದು, ಪ್ರಜಾಪ್ರಭುತ್ವದ ಗುಣಕ್ಕೆ (Flexibility) ಸಾಕ್ಷಿಯಾಗಿದೆ. ಲಿಂಕನ್ ಅವರ ಹೋರಾಟವು ಮಾನವೀಯತೆ ಮತ್ತು ಸಮಾನತೆಯನ್ನು ಪ್ರಜಾಪ್ರಭುತ್ವದ ಅನಿವಾರ್ಯ ಅಂಗವನ್ನಾಗಿಸಿತು, ಇದು ಇಂದಿಗೂ ಜಾಗತಿಕ ರಾಜಕೀಯಕ್ಕೆ ದಾರಿದೀಪವಾಗಿದೆ.

ಸಿನಿಮಾ, ಸಮಾಜ ಮತ್ತು ರಾಜಕೀಯ ನಾಯಕತ್ವದ ಮನ್ವಂತರ

ತಮಿಳುನಾಡಿನಂತಹ ರಾಜ್ಯಗಳಲ್ಲಿ ರಾಜಕೀಯವು ಯಾವಾಗಲೂ ಸಾಮಾಜಿಕ ನ್ಯಾಯದ ಪ್ರಯೋಗಶಾಲೆಯಾಗಿ ಕಾರ್ಯನಿರ್ವಹಿಸಿದೆ. ದ್ರಾವಿಡ ಚಳವಳಿಯ ಹಿನ್ನೆಲೆಯಲ್ಲಿ ಬೆಳೆದು ಬಂದ ಇಲ್ಲಿನ ರಾಜಕೀಯ ಸಂಸ್ಕೃತಿಯಲ್ಲಿ, ಸಿನಿಮಾ ರಂಗದ ವ್ಯಕ್ತಿಗಳನ್ನು ಕೇವಲ ನಟರನ್ನಾಗಿ ನೋಡದೆ, ತಮ್ಮ ಸಾಮಾಜಿಕ ಆಶೋತ್ತರಗಳನ್ನು ಈಡೇರಿಸುವ ‘ಪ್ರತಿನಿಧಿ’ಗಳಾಗಿ ಜನರು ಸ್ವೀಕರಿಸುತ್ತಾ ಬಂದಿದ್ದಾರೆ. ಇತ್ತೀಚಿನ ವಿದ್ಯಮಾನಗಳಲ್ಲಿ ಸಿ. ಜೋಸೆಫ್ ವಿಜಯ್ (ನಟ ವಿಜಯ್) ಅವರಂತಹ ವ್ಯಕ್ತಿಗಳು ರಾಜಕೀಯ ಪ್ರವೇಶದ ಹಾದಿಯಲ್ಲಿರುವುದು ಈ ಪರಂಪರೆಯ ಮುಂದುವರಿಕೆಯಾಗಿದೆ. ಜನರು ಇಂತಹ ನಾಯಕರಲ್ಲಿ ಒಬ್ಬ ‘ಸ್ಟಾರ್’ಗಿಂತ ಹೆಚ್ಚಾಗಿ, ಶೋಷಿತರ ಪರವಾಗಿ ಧ್ವನಿ ಎತ್ತುವ ಮತ್ತು ಅಧಿಕಾರದ ವಿಕೇಂದ್ರೀಕರಣಕ್ಕೆ ಶ್ರಮಿಸುವ ನಾಯಕತ್ವವನ್ನು ನಿರೀಕ್ಷಿಸುತ್ತಾರೆ.

ಭವಿಷ್ಯದ ಆಶಯ

ಒಟ್ಟಾರೆಯಾಗಿ ಹೇಳುವುದಾದರೆ, ಪ್ರಜಾಪ್ರಭುತ್ವವು ಬದಲಾಗುತ್ತಿರುವ ಕಾಲಘಟ್ಟಕ್ಕೆ ಅನುಗುಣವಾಗಿ ತನ್ನನ್ನು ತಾನು ರೂಪಿಸಿಕೊಳ್ಳುತ್ತಿದೆ. ಅಧಿಕಾರವು ಜನಸಾಮಾನ್ಯರ ಆಶೋತ್ತರಗಳಿಗೆ ಸ್ಪಂದಿಸುವ ಸಾಧನವಾಗಬೇಕೇ ಹೊರತು, ಅದು ಕೇವಲ ಆಡಳಿತ ನಡೆಸುವ ಅಧಿಕಾರವಲ್ಲ. ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಅಧಿಕಾರಸ್ಥರ ನೈತಿಕ ಬದ್ಧತೆಯ ಮೂಲಕ ಮಾತ್ರ ಒಂದು ಸಮಾಜವು ನಿಜವಾದ ಅರ್ಥದಲ್ಲಿ ಪ್ರಜಾಪ್ರಭುತ್ವದ ಯಶಸ್ಸನ್ನು ಸಂಭ್ರಮಿಸಲು ಸಾಧ್ಯ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ2 days ago

ಅಪರೂಪದ ಲಿವರ್ ಗಡ್ಡೆ | ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ನಲ್ಲಿ ಮಹಿಳೆಗೆ ಯಶಸ್ವಿ ಶಸ್ತ್ರಚಿಕಿತ್ಸೆ

ಸುದ್ದಿದಿನ,ದಾವಣಗೆರೆ: ಅಪರೂಪದ ಲಿವರ್ (ಯಕೃತ್ತಿನ) ಟ್ಯೂಮರ್ನಿಂದ ಬಳಲುತ್ತಿದ್ದ 56 ವರ್ಷದ ಮಹಿಳೆಗೆ ಇಲ್ಲಿನ ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ನ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ....

ಅಂತರಂಗ2 days ago

ಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ

~ಯೋಗೇಶ್ ಮಾಸ್ಟರ್, ಚಿಂತಕರು ಆಪ್ತ ಸಮಾಲೋಚಕ ಮತ್ತು ಮನೋವೈದ್ಯ ಹಾಗಂತಿರುವ ನನ್ನ ಮನೆಯ ಮುಂದಿನ ನನ್ನ ಪರಿಚಯ. ಅದನ್ನೇ ನಾನೆಂದು ತಿಳಿದಿರುವ ಹೊರಗಿನವರಿಗೆಲ್ಲಾ ನನ್ನೊಳಗಿರುವ ಅಪರಿಚಿತನ ಹೇಗೂ...

ದಿನದ ಸುದ್ದಿ3 days ago

ಶಿಕ್ಷಣ ಸಂಸ್ಥೆಗಳು ವೈಚಾರಿಕತೆ ; ವೈಜ್ಞಾನಿಕತೆಯ ಬೆಳಕು ಚೆಲ್ಲುವ ದೀಪಗಳಾಗಲಿ

ಸುದ್ದಿದಿನ,ಚನ್ನಗಿರಿ: ಪಟ್ಟಣದ ಬಸವ ಚೇತನ ಎಜುಕೇರ್ ಪ್ರಿ – ಪ್ರೈಮರಿ ಸ್ಕೂಲ್ ನಲ್ಲಿ “ಬಂಧುತ್ವ ಫೌಂಡೇಶನ್ ‘ ವತಿಯಿಂದ ಇಂದು ಶ್ರಾವಣಮಾಸದ ನಾಗರ ಪಂಚಮಿ ಪ್ರಯುಕ್ತ ”...

ಅಂತರಂಗ3 days ago

ದಿಮಾಗಿ ನಕ್ಸಲ್-ನಗರ ನಕ್ಸಲ್

~ರಹಮತ್ ತರೀಕೆರೆ, ಚಿಂತಕರು ಕಾರ್ನಾಡರಲ್ಲಿ ನನಗೆ ಮೊದಲಿಂದಲೂ ವೈಯಕ್ತಿಕ ಸಂಪರ್ಕ ಇರಲಿಲ್ಲ. ಅನಂತಮೂರ್ತಿ ಅವರಂತೆ ಅವರು ಕಿರಿಯ ಲೇಖಕರ ಜತೆ ನಂಟಿರಿಸಿಕೊಂಡವರಲ್ಲ. ಯಾರಿಗಾದರೂ ಮುನ್ನುಡಿ ಬರೆದಿದ್ದೂ ನನಗೆ...

ದಿನದ ಸುದ್ದಿ5 days ago

ಸ್ವಾತಂತ್ರ್ಯವನ್ನು ಗೌರವಿಸಿ, ಭವಿಷ್ಯವನ್ನು ಪ್ರೇರೇಪಿಸೋಣ: ವಿವಿಐಎಸ್‌ನಲ್ಲಿ ಅರ್ಥಪೂರ್ಣ ಸ್ವಾತಂತ್ರ್ಯೋತ್ಸವ

ಸುದ್ದಿದಿನ,ಬೆಂಗಳೂರು: ವಿಶ್ವ ವೆಂಕಟೇಶ್ವರ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್‌ನಲ್ಲಿ “ಸ್ವಾತಂತ್ರ್ಯವನ್ನು ಗೌರವಿಸಿ, ಭವಿಷ್ಯವನ್ನು ಪ್ರೇರೇಪಿಸೋಣ” ಎಂಬ ಆಶಯದೊಂದಿಗೆ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಶ್ರೀ ಕಟ್ಟಾ ಬಾಲಾಜಿ ಬಾಬು...

ದಿನದ ಸುದ್ದಿ5 days ago

ಸ್ವಾತಂತ್ರ್ಯವೆಂದರೆ ಬರಿ ಹಕ್ಕಲ್ಲ ದೇಶದ ಬಗ್ಗೆ ಜವಾಬ್ದಾರಿ ಹೊಂದುವುದೂ ಕೂಡ : ಯೋಗೀಶ್ ಸಹ್ಯಾದ್ರಿ

ಸುದ್ದಿದಿನ,ಚಿತ್ರದುರ್ಗ : ಸ್ವಾತಂತ್ರ್ಯವೆಂದರೆ ಕೇವಲ ಹಕ್ಕುಗಳ ಅನುಭವವಲ್ಲ, ದೇಶದ ಬಗ್ಗೆ ಜವಾಬ್ದಾರಿ ಹೊಂದುವುದೂ ಸಹ ಹೌದು. ನಮ್ಮ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನಗಳನ್ನು ಸದಾ ಸ್ಮರಿಸಬೇಕು....

ದಿನದ ಸುದ್ದಿ6 days ago

ನವಿಲೇಹಾಳು | 80ನೇ ಸ್ವಾತಂತ್ರ್ಯ ದಿನಾಚರಣೆ ; ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ಸಿಹಿ ಹಂಚಿ ಸಂಭ್ರಮ

ಸುದ್ದಿದಿನ,ದಾವಣಗೆರೆ: ಜಿಲ್ಲೆಯ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ, ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ನವಿಲೇಹಾಳು ಗ್ರಾಮದಲ್ಲಿ ಸಿಹಿ ಹಂಚುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮಸ್ಥರು...

ದಿನದ ಸುದ್ದಿ1 week ago

ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ

ಸುದ್ದಿದಿನ,ಚನ್ನಗಿರಿ: ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯು ಸೋಮೌಅರ ನವಿಲೇಹಾಳು ಗ್ರಾಮ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಭೇಟಿಯಾಗಿ ಗ್ರಾಮಸಭೆಯನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ...

ಅಂತರಂಗ2 weeks ago

ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು

~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ...

ದಿನದ ಸುದ್ದಿ2 weeks ago

ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್

ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು. ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್...

Trending