ದಿನದ ಸುದ್ದಿ
ಮೀಸಲಾತಿ ಅಂದ್ರೆ ನೌಕರಿ, ಸೌಲಭ್ಯ, ಸವಲತ್ತು ಅಲ್ಲ : ಹರ್ಷಕುಮಾರ್ ಕುಗ್ವೆ
ಒಂದು ದೇಶದಲ್ಲಿ ಸೃಷ್ಟಿಯಾಗುವ ಎಲ್ಲಾ ಬಗೆಯ ಶೈಕ್ಷಣಿಕ ಹಾಗೂ ಉದ್ಯೋಗದ ಅವಕಾಶಗಳಲ್ಲಿ ದೇಶದ ಜನಸಂಖ್ಯೆಯ ವಿವಿಧ ಸ್ತರಗಳ, ವಿವಿಧ ವರ್ಗಗಳ ಜನರೂ ಪ್ರಾತಿನಿಧ್ಯ (representation) ಪಡೆಯಬೇಕು ಎಂಬ ಪ್ರಜಾತಾಂತ್ರಿಕ ಆಶಯ ಇಟ್ಟುಕೊಂಡಾಗ ನಮಗೆ ಅದನ್ನು ಸಾಧಿಸಲು ಕೆಲವು ಮಾನದಂಡಗಳು ಬೇಕಾಗುತ್ತವೆ.
ಸಾವಿರಾರು ವರ್ಷಗಳ ಕಾಲ ಈ ದೇಶದಲ್ಲಿ ಸೃಷ್ಟಿಯಾಗುವ ಎಲ್ಲಾ ಶೈಕ್ಷಣಿಕ ಮತ್ತು ಉದ್ಯೋಗದ ಅವಕಾಶಗಳು ಕೆಲವೇ ವರ್ಗಗಳ ಸೊತ್ತಾಗಿದ್ದವು. ಆ ವರ್ಗಗಳು ಯಾವೆಂದು ನೋಡಿದಾಗ ಅವು ದೇಶದ ಸಾಮಾಜಿಕ ವ್ಯವಸ್ಥೆಯ ಮೇಲುಸ್ತರದಲ್ಲಿದ್ದ “ಜಾತಿ” ಗಳೇ ಆಗಿದ್ದವು. ಅಂದರೆ ತಳಸ್ತರದಲ್ಲಿದ್ದ ಬಹುತೇಕ ಜಾತಿಗಳ ಜನರು ಶೈಕ್ಷಣಿಕ ಮತ್ತು ಉದ್ಯೋಗದ ಅವಕಾಶಗಳಿಂದ ವಂಚಿತರಾಗಿದ್ದರು. ಇಂತಹ ಒಂದು ಪರಿಸ್ಥಿತಿಯಲ್ಲಿ ಅವಕಾಶಗಳನ್ನು ಎಲ್ಲರಿಗೂ ಹಂಚಬೇಕಾದರೆ, ಎಲ್ಲರಿಗೂ ಪ್ರಾತಿನಿಧ್ಯ ಒದಗಿಸಬೇಕಾದರೆ ಬಹಳ ಸೂಕ್ತ ಮಾನದಂಡ ಜಾತಿಯ ಮಾನದಂಡವೇ ಎಂಬುದು ಎಂತಹ ದಡ್ಡನಿಗೂ ಅರ್ಥವಾಗುತ್ತದೆ. ಜಾತಿಯನ್ನು ಹೊರತುಪಡಿಸಿ ಕೇವಲ ವರ್ಗವನ್ನು ಮಾನದಂಡವಾಗಿಸಿದರೆ ಮತ್ತೆ ಅವಕಾಶಗಳು ಕೆಲವೇ ಬಲಾಢ್ಯ ಜಾತಿಗಳ ಪಾಲಾಗುವುದು ಖಚಿತ. ಹೀಗಾಗಿಯೇ ದೇಶದಲ್ಲಿ ಜಾತಿ ಆಧಾರಿತ ಪ್ರಾತಿನಿಧ್ಯವನ್ನು ಜಾರಿಗೊಳಿಸಲಾಗಿದೆ.
ಹೀಗಾಗಿ ಮೀಸಲಾತಿ ಅಂದರೆ ಸರ್ವರಿಗೂ ಪ್ರಾತಿನಿಧ್ಯ ಎಂದು ತಿಳಿಯಬೇಕೇ ಹೊರತು ಸೌಲಭ್ಯ ನೀಡಿಕೆ ಎಂದಲ್ಲ. ಈ ದೇಶ ಪ್ರಜಾಪ್ರಭುತ್ವ ದೇಶ ಆಗಿರಬೇಕು ಎಂದು ಬಯಸುವವರೆಲ್ಲರೂ ಜಾತಿ ಆಧಾರಿತ ಪ್ರಾತಿನಿಧ್ಯವನ್ನು ಮರು ಮಾತಿಲ್ಲದೇ ಒಪ್ಪಿಕೊಳ್ಳುತ್ತಾರೆ. ಕೆಲವೇ ಜಾತಿ ವರ್ಗಗಳ ಜನರೇ ದೇಶವನ್ನು ನಡೆಸಲಿ ಎಂದು ಬಯಸುವವರು ಜಾತಿ ಆಧಾರಿತ ಮೀಸಲಾತಿ ಬೇಡ ಎನ್ನುತ್ತಾರೆ.
ಇಷ್ಟು ಹೇಳಿದ ಮೇಲೆ ಈ ಜಾತಿ ಆಧಾರಿತ ಮೀಸಲಾತಿಯೇ ಸಾಮಾಜಿಕ ಆರ್ಥಿಕ ಸಮಾನತೆಗೆ ರಾಮಬಾಣವಲ್ಲ. ಆದರೆ ಇದು ಅಟ್ಟ ಹತ್ತಲು ಬೇಕಾದ ಏಣಿಯಂತೆ. ಖಾಸಗಿ ಕ್ಷೇತ್ರಕ್ಕೂ ಈ ಏಣಿ ಹಾಕಬೇಕಾದ ಜರೂರಿದೆ. ಅದಕ್ಕೆ ಮೊದಲು ಅಟ್ಟ ಹತ್ತಿಕೊಂಡು ಏಣಿ ಒದೆಯಲು ಮುಂದಾಗಿರುವವರ ಕಾಲಿಗೆ ಕೊಕ್ಕೆ ಹಾಕಬೇಕಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ರೋಟರಿ ಆಶ್ರಯದಲ್ಲಿ ನೋಟು-ನಾಣ್ಯಗಳ “ಅಪೂರ್ವ ಸಂಗ್ರಹ” ಪ್ರದರ್ಶನ : ಭಾನುವಾರ ಕಡೆ ದಿನ

ಸುದ್ದಿದಿನ,ದಾವಣಗೆರೆ : ನೋಟುಗಳು – ನಾಣ್ಯಗಳು, ಇಂದಿನ ಕಾಲದ – ಹಿಂದಿನ ಕಾಲದ, ದೇಶದ – ವಿದೇಶದ ಅಪೂರ್ವ ಸಂಗ್ರಹವನ್ನು ನೋಡುವ ಅಪರೂಪದ ಅವಕಾಶ ನಗರದ ವಿದ್ಯಾರ್ಥಿಗಳಿಗೆ, ಆಸಕ್ತರಿಗೆ ಒದಗಲಿದೆ.
ದಾವಣಗೆರೆ ರೋಟರಿ ಸಂಸ್ಥೆ ಬರುವ ಶನಿವಾರ ಮಾರ್ಚ್ 6 ಮತ್ತು ಭಾನುವಾರ ಮಾ.7ರಂದು ಎಂ.ಸಿ.ಸಿ ಎ ಬ್ಲಾಕಿನಲ್ಲಿರುವ ದಾವಣಗೆರೆ ಹರಿಹರ-ಅರ್ಬನ್ ಬ್ಯಾಂಕ್ ಸಮುದಾಯ ಭವನದಲ್ಲಿ ಈ ಪ್ರದರ್ಶನವನ್ನು ಏರ್ಪಡಿಸಲಿದೆ.
ಬೆಳಗಾವಿಯ ಈರಪ್ಪ ಗುರುಲಿಂಗ ಪರಮಶೆಟ್ಟಿ ಕಳೆದ ಐದು ದಶಕಗಳಿಂದ ಸಂಗ್ರಹಿಸಿರುವ ಅಪರೂಪದ ನೋಟುಗಳು-ನಾಣ್ಯಗಳು ದೇಶದ ಹಲವು ರಾಜ್ಯಗಳ ಪ್ರಮುಖ ನಗರಗಳಲ್ಲಿ ಪ್ರದರ್ಶನಗಳನ್ನು ಕಂಡಿವೆ. ಬ್ರಿಟೀಷ್ ಆಡಳಿತದ, ಮರಾಠಾ, ಪೇಶ್ವೇ, ಮೊಘಲರು ನಿಜಾಮರ ಹಾಗೂ ಟಿಪ್ಪು ಆಡಳಿತದ ನಾಣ್ಯಗಳ ಪ್ರದರ್ಶನ ವಿಶೇಷವಾದದ್ದು.
ಒಂದರಿಂದ ಸಾವಿರ ರೂಗಳ ಹಳೆಯ ಬೆಳ್ಳಿಯ ನಾಣ್ಯಗಳು ಇಲ್ಲಿ ಕಾಣ ಸಿಗುತ್ತವೆ. ಒಂದೇ ಮೌಲ್ಯದ ನೂರ ಐವತ್ತಕ್ಕೂ ಹೆಚ್ಚು ವಿವಿಧ ನೋಟುಗಳ ನೋಟ ಅಪರೂಪದ ಆಕರ್ಷಣೆಯಾಗಲಿದೆ.ಇವರ ಸಂಗ್ರಹ “ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್”ನಲ್ಲಿ 1997ರಿಂದ ಸತತವಾಗಿ ಮೂರು ವರ್ಷಗಳ ಕಾಲ ನಮೂದಿಸಲ್ಪಟ್ಟಿದೆ.
ಮಾರ್ಚ್ ಆರು ಶನಿವಾರ ಬೆಳಿಗ್ಗೆ 11 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದ್ದು ದಾವಣಗೆರೆಯ ಪ್ರಥಮ ಪೌರರಾದ ಎಸ್.ಟಿ. ವೀರೇಶ್ ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ.
ಆರ್.ಟಿ. ಮೃತ್ಯುಂಜಯ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮಕ್ಕೆ ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿಲ್ಲಾ ರಕ್ಷಣಾಧಿಕಾರಿ ಹನುಮಂತರಾಯ, ಡಿಡಿಪಿಐ ಪರಮೇಶ್ವರಪ್ಪ ತಹಶೀಲ್ದಾರ್ ಗಿರೀಶ್ ಮುಂತಾದವರು ಅತಿಥಿಗಳಾಗಿ ಆಗಮಿಸಲಿದ್ದಾರೆ.
ಈ ಅಪರೂಪದ ನೋಟು-ನಾಣ್ಯಗಳ ಪ್ರದರ್ಶನ ಮಾರ್ಚ್ ಆರು ಮತ್ತು ಏಳರ ಬೆಳಿಗ್ಗೆ 9ರಿಂದ ಸಂಜೆ 7ರ ವರೆಗೆ ನಡೆಯಲಿದ್ದು ಎಲ್ಲರಿಗೂ ಉಚಿತ ಪ್ರವೇಶವಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕುಂದುವಾಡ ಕೆರೆ ಅಭಿವೃದ್ದಿ ಕಾಮಗಾರಿ

ಸುದ್ದಿದಿನ,ದಾವಣಗೆರೆ : ದಾವಣಗೆರೆ ಮಹಾನಗರಪಾಲಿಕೆ ಮಾಲೀಕತ್ವದಲ್ಲಿರುವ ಕುಂದುವಾಡ ಕೆರೆಯ ಅಭಿವೃದ್ಧಿ ಕಾಮಗಾರಿಯನ್ನು ದಾವಣಗೆರೆ ಸ್ಮಾರ್ಟ್ ಸಿಟಿ ವತಿಯಿಂದ ಕೈಗೊಳ್ಳಲಾಗಿದ್ದು, ಕೆರೆಯ ಅಭಿವೃದ್ಧಿ ಕಾರ್ಯ ಪ್ರಗತಿಯಲ್ಲಿರುತ್ತದೆ. 1.2 ಕಿ.ಮೀ ಏರಿಯನ್ನು ಎತ್ತರಿಸಿ ಗಟ್ಟಿಗೊಳಿಸಲಾಗಿದ್ದು, ಕಲ್ಲುಗಳ ಹೊದಿಕೆಯ ಕೆಲಸವು ಪ್ರಗತಿಯಲ್ಲಿದೆ.
ಉಳಿದಂತೆ 3.7 ಕಿ.ಮೀ ನಲ್ಲಿ ಮುಳ್ಳು ಗಂಟೆ ಪೊದೆ ಮತ್ತು ಹಳೆಯ ಕಲ್ಲುಗಳ ಹೊದಿಕೆಯ ತೆರವುಗೊಳಿಸುವ ಕಾರ್ಯ ಚಾಲ್ತಿಯಲ್ಲಿರುತ್ತದೆ ಎಂದು ದಾವಣಗೆರೆ ಸ್ಮಾರ್ಟ್ ಸಿಟಿ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಮಲ್ಲಾಪುರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಿದ್ಯುತ್ ಬಿಲ್ ಪಾವತಿ ವಂಚನೆ ಬಗ್ಗೆ ಜಾಗೃತಿ

ಸುದ್ದಿದಿನ,ದಾವಣಗೆರೆ : ದಾವಣಗೆರೆ ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಬೆ.ವಿ.ಕಂ.ನ ಸಿಬ್ಬಂದಿಯೆಂದು ಹೇಳಿಕೊಂಡು ವಿದ್ಯುತ್ ಬಿಲ್ ಪಾವತಿಸುವುದಾಗಿ ಹಣ ಕೇಳಿ ಪಡೆದು ಬಿಲ್ ಪಾವತಿಸದೇ ವಂಚನೆ ಮಾಡಿರುವ ಕೆಲವು ಪ್ರಕರಣಗಳು ತಡವಾಗಿ ಬೆಳಕಿಗೆ ಬಂದಿರುತ್ತವೆ. ಈ ನಿಟ್ಟಿನಲ್ಲಿ ವಿದ್ಯುತ್ ಗ್ರಾಹಕರಲ್ಲಿ ಜಾಗೃತಿ ಮೂಡಿಸಲು ಕೆಳಕಂಡ ಕೆಲವು ಸೂಚನೆಗಳನ್ನು ಪಾಲಿಸಲು ಕೋರಲಾಗಿದೆ.
ವಿದ್ಯುತ್ ಬಿಲ್ಲನ್ನು ಬೆ.ವಿ.ಕಂ ನ ಅಧಿಕೃತ ಕೌಂಟರ್ಗಳಲ್ಲಿಯೇ ಪಾವತಿಸಬೇಕು. ಬೆ.ವಿ.ಕಂ. ನಿಂದ ಕೆಲಸ ನಿರ್ವಹಣೆಗಾಗಿ ಸಿಬ್ಬಂದಿ ತಮ್ಮಲ್ಲಿಗೆ ಬಂದಾಗ ಗುರುತಿನ ಚೀಟಿಯನ್ನು ಪರಿಶೀಲಿಸಿ ಖಚಿತಪಡಿಸಿಕೊಳ್ಳುವುದು.
ವಿದ್ಯುತ್ ಬಿಲ್ಲನ್ನು ಆನ್ಲೈನ್ನಲ್ಲಿ ಪಾವತಿಸುವುದರ ಮೂಲಕ ಈ ತರಹದ ವಂಚನೆಗಳನ್ನು ತಪ್ಪಿಸಬಹುದು. ಪೇ-ಟಿಎಮ್, ಗೂಗಲ್ ಪೇ ಹಾಗೂ ಬೆವಿಕಂ.ನ “ಬೆಸ್ಕಾಂ ಮಿತ್ರ” ಆ್ಯಪ್ ನ ಮೂಲಕ ವಿದ್ಯುತ್ ಬಿಲ್ ಪಾವತಿಸುವುದು ಕ್ಷೇಮಕರ.
ಯಾರಾದರೂ ಅನುಮಾನಾಸ್ಪದವಾಗಿ ವರ್ತಸಿದಲ್ಲಿ ಕೂಡಲೇ ಬೆ.ವಿ.ಕಂ ಗ್ರಾಹಕರ ಸೇವಾ ಕೇಂದ್ರ ಸಂಖ್ಯೆ 08912-250210 ಹಾಗೂ ಮೊಬೈಲ್ ನಂ. 9483549210 ಗೆ ತಿಳಿಸಬೇಕೆಂದು ಬೆಸ್ಕಾಂ ನಗರ ಉಪ ವಿಭಾಗ-1 ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ರಾಮಚಂದ್ರಪ್ಪ ಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಸಿನಿ ಸುದ್ದಿ7 days ago
ಇಂದು ಕನ್ನಡ ಬಿಗ್ ಬಾಸ್ ಸೀಸನ್ 8 ಗ್ರ್ಯಾಂಡ್ ಓಪನಿಂಗ್ | ಒಂಟಿ ಮನೆಯಲ್ಲಿ ಯಾರೆಲ್ಲಾ ಇರಲಿದ್ದಾರೆ ಗೊತ್ತಾ..?
-
ಸಿನಿ ಸುದ್ದಿ6 days ago
ರಾಬರ್ಟ್ ನ ಫಸ್ಟ್ ವಿಡಿಯೋ ಸಾಂಗ್ ರಿಲೀಸ್ : ಬೇಬಿ ಡಾನ್ಸ್ ವಿಡಿಯೋ ನೀವೂ ನೋಡಿ..!
-
ಭಾವ ಭೈರಾಗಿ6 days ago
ಕವಿತೆ | ಕಾಮಧೇನು
-
ನಿತ್ಯ ಭವಿಷ್ಯ7 days ago
ಜ್ಯೋತಿಷ್ಯಶಾಸ್ತ್ರ | ನಿಮ್ಮ ಜನ್ಮಕುಂಡಲಿ ಪ್ರಕಾರ ಎಂಥಾ ಗುಣವುಳ್ಳ ವ್ಯಕ್ತಿ ಜೊತೆ ಮದುವೆ ಕಾರ್ಯ ಆಗುವುದು..? ಕಂಕಣಬಲ ಕೂಡಿ ಬರಲು ಏನು ಮಾಡಬೇಕು..?
-
ನಿತ್ಯ ಭವಿಷ್ಯ7 days ago
ಭಾನುವಾರ ರಾಶಿ ಭವಿಷ್ಯ : ಈ ರಾಶಿಯವರಿಗೆ ಈ ವಾರದ ಒಳಗಡೆ ಹಣಕಾಸಿನ ಸುರಿಮಳೆ ಆಗಲಿದೆ..!
-
ನಿತ್ಯ ಭವಿಷ್ಯ6 days ago
ಸೋಮವಾರ ರಾಶಿ ಭವಿಷ್ಯ : ಕರೆ ಮಾಡಿ ಕಷ್ಟಗಳನ್ನು ಪರಿಹರಿಸಿಕೊಳ್ಳಿ
-
ನಿತ್ಯ ಭವಿಷ್ಯ6 days ago
ಮೂಲಾ ನಕ್ಷತ್ರದಲ್ಲಿ ಜನಿಸಿದರೆ ಅದರ ಮಹತ್ವ ಹಾಗೂ ಅದರ ಮಾಹಿತಿ..!
-
ದಿನದ ಸುದ್ದಿ5 days ago
‘ಅನುಗ್ರಹ’ ಯೋಜನೆ ರಾಜ್ಯದಲ್ಲಿ ಮರುಜಾರಿಗೊಳಿಸದಿದ್ದರೆ ವಿಧಾನಸಭೆಯಲ್ಲಿ ಹೋರಾಟ : ಸಿದ್ದರಾಮಯ್ಯ ಎಚ್ಚರಿಕೆ