ದಿನದ ಸುದ್ದಿ
ಸಾಮಾಜಿಕ ಜಾಲತಾಣದಲ್ಲಿ ಬೆತ್ತಲಾದ ಖಾವಿದಾರಿ ‘ಕಾಳಿ ಸ್ವಾಮಿ’

ಹೌದು ಅರಸೀಕೆರೆಯಲ್ಲಿ ಡ್ಯಾನ್ಸ್ ಮಾಸ್ಟರ್ ಆಗಿದ್ದ ಒಬ್ಬ ವ್ಯಕ್ತಿ ಈಗ ಸ್ವಾಮೀಜಿ ಅಂದಿನಿಂದ ಇಂದಿನವರೆಗೆ ಅವನ ಜೀವನ ಪಯಣ ಅಬ್ಬಬ್ಬಾ .. ಅಂದಿಗು ಮತ್ತು ಇಂದಿಗೂ ನಡುವೆ ಇದ್ಯಲ್ಲ ಅದು ಅದ್ಭುತ ಪ್ರತಿಯೊಂದರಲ್ಲೂ ತನ್ನ ಬೇಳೆ ಬೇಯಿಸಿಕೊಳ್ಳಲು ಹೋಗಿ ಕೈ ಸುಟ್ಟುಕೊಳ್ಳುವ ಖತರ್ನಾಕ್ ಕಳ್ಳ ಸ್ವಾಮೀಜಿ. ಕಾಳಿ ಕಾಳಿ ಅಂದುಕೊಂಡು ಜನರನ್ನ ಬೋಳಿ ಮಾಡುವ ಐನಾತಿ.
ಜಾತಿಯಲ್ಲಿ ಸುಳ್ಳು ಹೇಳಿದ್ದ ಮಹಾನುಭಾವ ತನ್ನ ತಂದೆ ತಾಯಿಯ ಐಡೆಂಟಿಟಿಯನ್ನೇ ಬದಲಿಸಿದ್ದವ , ನಿಂತ್ಯಾನಂದನ ಕರ್ಮಕಾಂಡ ಬಯಲು ಮಾಡುತ್ತಿನಂತ ಹೇಳಿ ಅವನ ಬಳಿ 10 ಕೋಟಿ ರೂಪಾಯಿ ಒಂದು ಫಾರ್ಚೂನರ್ ಕಾರ್ ನ ಬೇಡಿಕೆ ಇಟ್ಟಿದ್ದ , ಇದರಲ್ಲಿ ಸಿಕ್ಕಿ ಹಾಕಿಕೊಂಡ ಮಹಾನುಭಾವ ಮಾಧ್ಯಮವೊಂದರಲ್ಲಿ ತನ್ನ ಪೇಟವನ್ನ ತೆಗೆದಿಟ್ಟು ಕ್ಷಮಾಪಣೆ ಪತ್ರ ಬೇರೆ ಬರೆದು ಕೊಟ್ಟಿದ್ದನ್ನ ಜನ ಇನ್ನೂ ಮರೆತಿಲ್ಲ ಈಗ ಗೊತ್ತಾಗಿರಬೇಕು ಅವನು ಯಾರು ಅಂತ ಅವನೇ ರೀ ಶ್ರಿ ರಿಷಿಕುಮಾರ.(ಸ್ವಾಮೀಜಿ ಅನ್ನಲು ಮನಸೊಪ್ಪದು)
ಈತ ಸಾಮಾಜಿಕವಾಗಿ ಜನರಿಗೆ ಏನು ಉಪಯೋಗ ಮಾಡಿದ್ದಾನೋ ಅದು ಭಗವಂತನಿಗೆ ಗೊತ್ತು ಆದರೆ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಹೆಂಡ ಕುಡಿದ ಕೋತಿ ತರ ಆಡುತ್ತಿದ್ದಾನೆ , ಅಡಲಿ ಬೇಡ ಅನ್ನಲ್ಲ ಅದು ಅವನ ಅಭಿವ್ಯಕ್ತಿ ಸ್ವಾತಂತ್ರ್ಯ ಅಂದುಕೊಂಡರೂ ಖಾವಿ ತೊಟ್ಟು ತನ್ನನ್ನ ತಾನು ಸ್ವಾಮೀಜಿ ಅಂತ ಕರೆಸಿಕೊಳ್ಳುವವರು ಮಾಡುವಂತ ಕೆಲಸವಂತೂ ಅಲ್ಲವೇ ಅಲ್ಲ.
ಒಂದು ಬಾಯಿಗೆ ಬಟ್ಟೆ ಕಟ್ಟಿಕೊಳ್ಳಬೇಕು ಇಲ್ಲವೇ ತೊಟ್ಟಿರುವ ಖಾವಿ ಬಟ್ಟೆ ಬಿಚ್ಚಬೇಕು ಯಾಕಂದ್ರೆ ನಮ್ಮ ದೇಶದಲ್ಲಿ ಇಂದಿಗೂ ಜನ ನಂಬಿಕೆ ಇಟ್ಟಿರುವುದು ಖಾವಿ ಮೇಲೆ , ಖಾವಿ ತೊಟ್ಟವರು ಸಮಾಜಕ್ಕೆ ಶಾಂತಿ ಮಂತ್ರ ಹೇಳಿಕೊಡಬೇಕು, ಸಮಾಜದಲ್ಲಿ ಸಾಮರಸ್ಯ ಬೆಳೆಯುವಂತಹ ಕೆಲಸಗಳನ್ನ ಮಾಡಬೇಕು ಆದರೆ ಈತ ಬಾಯಿ ತೆರೆದರೆ ಕೋಮು ಸೃಷ್ಟಿಸುವಂತಹ ಅನ್ಯಧರ್ಮದ ಬಗ್ಗೆ ಕೇವಲವಾಗಿ ಮಾತನಾಡೋದು, ಹೆಣ್ಣು ಮಕ್ಕಳ ಬಗ್ಗೆ ಅಸಹ್ಯ ಹುಟ್ಟಿಸುವಂತಹ ಮಾತುಗಳು ಅಲ್ಲದೆ ಅದನ್ನ ಪ್ರಶ್ನೆ ಮಾಡೋರಿಗೆ ಬೋಳಿ ಮಗನೆ, ಶಾಟ ಎಂಬಿತ್ಯಾದಿ ಸೆನ್ಸಾರ್ ಪದ ಬಳಕೆ ಮಾಡುತ್ತಾ ಖಾವಿ ಬಟ್ಟೆಗೆ ಇರುವ ಗೌರವವನ್ನು ಹಾಳು ಮಾಡುತ್ತಿದ್ದಾನೆ.
ಇಂತವರಿಗೆ ಖಾವಿ ಒಂದು ರಕ್ಷಾ ಕವಚ ಅಷ್ಟೇ , ಧರ್ಮವನ್ನ ರಕ್ಷಿಸುತ್ತಿನಿ ಅಂತ ಹೇಳುವ ಇವರುಗಳು ಇಂತಹ ಕೃತ್ಯಗಳಿಂದ ಧರ್ಮವನ್ನ ಹಾಳು ಮಾಡುತ್ತಿದ್ದಾರೆ ವಿನಃ ಇವರುಗಳಿಂದ ಧರ್ಮಕ್ಕೆ ಒಂದಿಷ್ಟು ಉಪಯೋಗ ಇಲ್ಲ , ಧರ್ಮದ ಹೆಸರಿನಲ್ಲಿ ಇವರನ್ನ ಇವರು ರಕ್ಷಿಸಿಕೊಳ್ಳುತ್ತಿದ್ದಾರೆ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದಾರೆ.
ಇಂತಹವರು ಸಮಾಜಕ್ಕೆ ಕಂಟಕ ಮತ್ತು ಇದೆ ರೀತಿ ಮುಂದುವರಿದಲ್ಲಿ ಖಾವಿ ತೊಟ್ಟ ನಿಜವಾದ ಸ್ವಾಮೀಜಿಗಳಿಗೆ ಕೂಡ ಮರ್ಯಾದೆ ಗೌರವ ಸಿಗದ ರೀತಿ ಆಗುವುದರಲ್ಲಿ ಸಂಶಯವೇ ಇಲ್ಲ ಈ ಹಿಂದೆ ಒಮ್ಮೆ ಒಂದಷ್ಟು ಜನ ಮಹಿಳೆಯರು ಸೇರಿ ಈತನನ್ನು ಥಳಿಸಿದ್ದು ಕೂಡ ಯಾರು ಮರೆತಿಲ್ಲ ಆದರೆ ಪಾಪ ಆತ ಮರೆತಿರಬೇಕು.
ಇಂತಹವರಿಂದ ಧರ್ಮಕ್ಕೆ ಸಮಾಜಕ್ಕೆ ನಾಲ್ಕು ಪೈಸದ ಪ್ರಯೋಜನ ಇಲ್ಲ ಜನ ಇಂತವರನ್ನು ನಂಬಿ ಮೋಸ ಹೋಗುವುದು ಬೇಡ ಮತ್ತು ಖಾವಿಗೆ ಅದರದ್ದೇ ಆದ ಮಹತ್ವ ಇದೆ ಅದು ಇಂತಹವರಿಂದ ಹಾಳಾಗುವುದು ಬೇಡ ಎಂಬ ಸಣ್ಣ ಕಳಕಳಿ ಅಷ್ಟೇ … ಆತನ ಸಾಮಾಜಿಕ ಜಾಲತಾಣದ ಪೋಸ್ಟ್ಗಳು ಕಾಮೆಂಟ್ಗಳು ನೋಡಿದರೆ ಈತ ಸ್ವಾಮೀಜಿ ನ ಅಂತ ಎಲ್ಲರೂ ಒಂದು ಸಲ ತಮ್ಮನ್ನ ತಾವು ಪ್ರಶ್ನಿಸಿಕೊಳ್ಳದೆ ಇರಲಾರರು !!
ನಿಜವಾದ ಹಿಂದೂಗಳು , ಧರ್ಮ ಮತ್ತು ಖಾವಿ ಮೇಲೆ ನಂಬಿಕೆ ಗೌರವ ಇರುವವರು ಖಂಡಿತವಾಗಿಯೂ ಆತನ ಉದ್ದಟತನವನ್ನ ಖಂಡಿಸಿದೆ ಇರಲಾರರು. ಒಟ್ಟಾರೆ ಖಾವಿಯಿಂದ ಸಮಾಜದಲ್ಲಿ ತನ್ನನ್ನು ತಾನು ಮುಚ್ಚಿಟ್ಟುಕೊಂಡಿದ್ದ ಶ್ರಿ ರಿಷಿಕುಮಾರ ಸಾಮಾಜಿಕ ಜಾಲತಾಣದಲ್ಲಿ ಬೆತ್ತಲಾದ !!!
—ಬಿಂದು ಗೌಡ ಕೆಪಿಸಿಸಿ
ಸಾಮಾಜಿಕ ಜಾಲತಾಣ ರಾಜ್ಯ ಕಾರ್ಯದರ್ಶಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಹಿಳೆಗೆ ಮೀಸಲಾತಿ ಬೇಡ, ಸಮಾನ ಪ್ರಾತಿನಿಧ್ಯ ಕೊಡಿ : ಡಾ.ಜ್ಯೋತಿ ಟಿ.ಬಿ

ಸುದ್ದಿದಿನ, ಚನ್ನಗಿರಿ (ಬಸವಾಪಟ್ಟಣ) : ಭಾರತೀಯ ಸಮಾಜದಲ್ಲಿ ಮೀಸಲಾತಿಯಿಂದ ಮಾತ್ರ ಮಹಿಳಾ ಪ್ರಗತಿ ಸಾಧ್ಯವಿಲ್ಲ. ಅವಳಿಗೆ ಪುರುಷನಂತೆ ಸಮಾನವಾದ ಪ್ರಾತಿನಿಧ್ಯ ನೀಡಿದಲ್ಲಿ ಮಾತ್ರವೇ ಮಹಿಳಾ ಪ್ರಗತಿ ಸಾಧ್ಯ. ಆಗ ಮಾತ್ರವೇ ಸದೃಢವಾದ ಭಾರತ ನಿರ್ಮಾಣವಾಗಲು ಸಾಧ್ಯ ಎಂದು ಸಂತೆಬೆನ್ನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕಿ ಡಾ.ಜ್ಯೋತಿಯವರು ಅಭಿಪ್ರಾಯ ವ್ಯಕ್ತಪಡಿಸಿದರು.
ಜನತಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಐಕ್ಯತ ಸಪ್ತಾಹದ ಅಡಿಯಲ್ಲಿ ‘ಭಾರತೀಯ ಸಮಾಜ ಹಾಗೂ ರಾಷ್ಟ್ರದ ಪ್ರಗತಿಯಲ್ಲಿ ಮಹಿಳೆಯರ ಪ್ರಾಮುಖ್ಯತೆ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದ ಅವರು, ಮಹಿಳೆಗೆ ಎಲ್ಲಿಯವರೆಗೆ ಮುಕ್ತವಾದ ಪ್ರಾತಿನಿಧ್ಯ ಲಭಿಸುವುದಿಲ್ಲವೋ ಅಲ್ಲಿಯವರೆಗೆ ಎಷ್ಟೇ ಕಾಯ್ದೆ, ಕಾನೂನುಗಳು ಜಾರಿಯಾದರೂ ಮಹಿಳೆಯರ ಬದುಕಿನಲ್ಲಿ ಸಮಗ್ರ ಬದಲಾವಣೆ ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಪ್ರಾಂಶುಪಾಲರಾದ ಡಾ.ಎಂ.ಆರ್. ಲೋಕೇಶ್ ಅವರು ಮಾತನಾಡಿ ಭಾರತೀಯ ಸಮಾಜದಲ್ಲಿ ಹೆಣ್ಣು ಸ್ವಾಭಿಮಾನದ ಬದುಕನ್ನು ಕಟ್ಟಿಕೊಳ್ಳುವುದು ಕೇವಲ ಆರ್ಥಿಕತೆಯಿಂದ ಸಾಧ್ಯವಿಲ್ಲ ಎಂದರು.
ನೈತಿಕತೆ, ಸಂಸ್ಕಾರವು ಕೂಡ ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ. ಹೀಗಾಗಿಯೇ ಶರಣರು ಗಂಡು-ಹೆಣ್ಣು ಎಂಬ ಬೇಧವನ್ನು ಮೆಟ್ಟಿ ನಿಂತು ‘ಒಳಗೆ ಸುಳಿವ ಆತ್ಮ ಹೆಣ್ಣು ಅಲ್ಲ, ಗಂಡು ಅಲ್ಲ’ ಎಂಬ ತಾತ್ವಿಕತೆಯ ಮೂಲಕ ಸರ್ವರನ್ನು ಸಮಾನವಾಗಿ ಕಾಣುವಂತಹ ಸಮಾಜಕ್ಕಾಗಿ ಶ್ರಮಿಸಿದರು. ಭಾರತದ ನೆಲದಲ್ಲಿ ಶರಣರು, ದಾರ್ಶನಿಕರು ರೂಪಿಸಿಕೊಟ್ಟ ಮಾರ್ಗದಲ್ಲಿ ನಡೆದು ಇಂದಿನ ಮಹಿಳೆಯರು ಸಬಲರಾಗಬೇಕು ಎಂಬುದಾಗಿ ತಿಳಿಸಿದರು.
ಸಮಾಜಶಾಸ್ತ್ರದ ಮುಖ್ಯಸ್ಥರಾದ ಡಾ.ಎ.ಡಿ.ಬಸವರಾಜ್ ಅವರು ಪ್ರಾಸ್ತವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಬೋಧಕರಾದ ಹನುಮಂತಪ್ಪ, ಪ್ರಕಾಶ್, ಮಧುಸೂಧನ್, ರೆಹಮತ್ಬಿ, ಸಂದೀಪ್ ಮುಂತಾದವರು ಹಾಜರಿದ್ದರು. ಕಾರ್ಯಕ್ರಮವನ್ನು ಗೋವಿಂದರೆಡ್ಡಿ ಅವರು ನಿರೂಪಿಸಿದರು. ವಿದ್ಯಾರ್ಥಿನಿ ಸೌಂದರ್ಯ ಸ್ವಾಗತಿಸಿದರು, ಯಶೋಧ, ಸಹನಾ ಪ್ರಾರ್ಥಿಸಿದರು, ರಕ್ಷಿತ ವಂದಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭಾರತೀಯರೆಲ್ಲರ ಪವಿತ್ರಗ್ರಂಥ ಭಾರತದ ಸಂವಿಧಾನ : ಡಾ.ಕೆ.ಎ.ಓಬಳೇಶ್

ಸುದ್ದಿದಿನ,ದಾವಣಗೆರೆ : ಸಂವಿಧಾನ ಪೂರ್ವದ ಭಾರತದ ಸ್ಥಿತಿಗತಿ ಹಾಗೂ ಸಂವಿಧಾನದ ನಂತರ ಭಾರತದಲ್ಲಾದ ಸಾಮಾಜಿಕ, ಧಾರ್ಮಿಕ ಹಾಗೂ ರಾಜಕೀಯ ಬದಲಾವಣೆಗ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಹಾಗೆಯೇ ಸಂವಿಧಾನ ರಚನೆ ಮಾಡುವ ಸಮಯದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಮುಂದಿದ್ದ ಬಿಕ್ಕಟ್ಟುಗಳನ್ನು ಏಕಾಂತಗಿರಿ ಟ್ರಸ್ಟ್ ನ ಕಾರ್ಯದರ್ಶಿ ಡಾ.ಕೆ.ಎ.ಓಬಳೇಶ್ ಅವರು ತಿಳಿಸಿಕೊಟ್ಟರು.
ನಗರದ ಪ್ರೇರಣ ಮಕ್ಕಳ ಆರೈಕೆ ಕೇಂದ್ರದಲ್ಲಿ ವಿ.ಬಿ.ಪಿ ಫೌಂಡೇಷನ್ ಹಾಗೂ ಏಕಾಂತಗಿರಿ ಟ್ರಸ್ಟ್ ಇವರ ಸಂಯುಕ್ತಾಶ್ರಯದಲ್ಲಿ ಸಂವಿಧಾನ ದಿನಾಚರಣೆಯನ್ನು ಭಾನುವಾರ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ದೇವನಗರಿ ಸುದ್ಧಿದಿನ ಪತ್ರಿಕೆಯ ಸಂಪಾದಕರಾದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದು, ವಿದ್ಯಾರ್ಥಿಗಳಿಗೆ ಭಾರತದ ಸಂವಿಧಾನದ ಕಳಶದಂತಿರುವ ಸಂವಿಧಾನ ಪೀಠಿಕೆಯ ಮಹತ್ವವನ್ನು ಪರಿಚಯಿಸುವ ಮೂಲಕ ಸಂವಿಧಾನ ಪೀಠಿಕೆಯನ್ನು ಬೋಧಿಸಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸ್ಕೈ ಲೈನ್ ಸಂಸ್ಥೆಯ ಸಂಸ್ಥಾಪಕರಾದ ಬಾಲಚಂದ್ರ ಅವರು ಸಂವಿಧಾನ ಇರುವ ಕಾಲದಲ್ಲಿಯೇ ದಲಿತರು, ದಮನಿತರು ಹಾಗೂ ಮಹಿಳೆಯರ ಸ್ಥಿತಿಯು ಅತ್ಯಂತ ಶೋಚನೀಯವಾಗಿದೆ. ಆದರೆ ಸಂವಿಧಾನವಿಲ್ಲದ ಭಾರತವನ್ನು ನಾವು ಊಹಿಸಿಕೊಳ್ಳುವುದು ಕಷ್ಟ ಸಾಧ್ಯ ಎಂಬುದಾಗಿ ತಿಳಿಸಿದರು.
ಪ್ರೇರಣ ಆರೈಕೆ ಕೇಂದ್ರದ ಶಿಕ್ಷಕರಾದ ಕುಮಾರ್ ಅವರು ಮಾತನಾಡಿ, ಸರ್ವರನ್ನು ಸಮಾನವಾಗಿ ಕಾಣುವ ಸಂವಿಧಾನವು ನಮ್ಮೆಲ್ಲರ ಪವಿತ್ರ ಗ್ರಂಥ ಎಂಬುದಾಗಿ ತಿಳಿಸಿದರು. ಕುಮಾರಿ ಪೂಜಾ ಅವರು ಅತಿಥಿಗಳನ್ನು ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಪ್ರೇರಣ ಸಂಸ್ಥೆಯ ಮಕ್ಕಳು ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸರ್ಕಾರಕ್ಕೆ ಸೆಡ್ಡು ಹೊಡೆದ ದಾವಣಗೆರೆ ರೈತರು

- ಪುರಂದರ್ ಲೋಕಿಕೆರೆ
ಸುದ್ದಿದಿನ, ದಾವಣಗೆರೆ : ಸರ್ಕಾರದ ಭದ್ರಾ ಅಚ್ಚುಕಟ್ಟು ಪ್ರದೇಶದ ನೀರಾವರಿ ಇಲಾಖೆಯ ಚಿತಾವಣೆಗೆ ಸೆಡ್ಡು ಹೊಡೆದು ಕೇವಲ 110-120 ದಿನಗಳ ಒಳಗಾಗಿಅಲ್ಪಾವಧಿ ತಳಿ ನಾಟಿ ಮಾಡಿ ಯಶಸ್ವಿಯಾಗಿ ಕಾಲುವೆ ನೀರು ಬಳಸಿಕೊಂಡು ಭತ್ತ ಬೆಳೆಯುವ ಮೂಲಕ ಮಾದರಿಯಾಗಿದ್ದಾರೆ ದಾವಣಗೆರೆ ಭಾಗದ ರೈತರು.
ಬೇಸಿಗೆ ಕಾಲದಲ್ಲಿ ನಮಗೆ ತೋಟಗಳಿಗೆ ನೀರು ಹರಿಸಲು ಆನ್ ಆಪ್ ಪದ್ದತಿ ಮಾಡಿ ಎಂದು ಒತ್ತಡ ಹಾಕಿದ ಶಿವಮೊಗ್ಗ ಜಿಲ್ಲೆಯ ಅಡಿಕೆ ದಣಿಗಳಿಗೇ ಮುಖಕ್ಕೆ ಹೊಡೆದಂತೆ ಭತ್ತ ಬೆಳೆದು ತೋರಿಸಿರುವುದು ಶ್ಲಾಘನೀಯ.
100 ದಿನಗಳು ನೀರು ಹರಿಸಲು ಆದೇಶ ಹೊರಡಿಸಿ ರೈತರೆಲ್ಲ ನಾಟಿ ಮಾಡಿದ ಮೇಲೆ ಎಂದೂ ಗದ್ದೆ ನೀರು ಕಟ್ಟದ ಐಷಾರಾಮೀ ರಾಜಕಾರಣಿ ಪುತ್ರ ರತ್ನ ಸಚಿವ ಮಧು ಬಂಗಾರಪ್ಪ ಅಡಿಕೆ ತೋಟದ ರೈತರಿಗೆ ಮನ ಸೋತವರು.
ಕಲ್ಲು ಬಂಡೆ ಹೊಡೆದು ಭರ್ಜರಿ ಜೀವನ ಸಾಗಿಸುವ ಸಂಪನ್ಮೂಲ ಸಚಿವ, ಉಸ್ತುವಾರಿ ಸಚಿವರ ನಿರ್ಲಕ್ಷ್ಯ ಬೇಸತ್ತ ರೈತ ರಸ್ತೆ ತಡೆದು ನೀರು ಕೊಡಿ ಎಂದು ಹೋರಾಟ ಮಾಡಿದರೂ ಕಿವಿ ಕೇಳೋಲ್ಲ ಎಂಬಂತೆ ವರ್ತಿಸಿದೆ ಆಡಳಿತ ಯಂತ್ರ.
ಆದರೆ ಈ ನಡುವೆ ಎರಡು ಭಾರಿ ಪ್ರಕೃತಿ ವರದಾನ ದಿಂದ ಭತ್ತ ಬೆಳೆಯುವ ಮೂಲಕ ಅನ್ನನೀಡುವ ರೈತ ಭತ್ತ ಬೆಳೆದು ಬಿಟ್ಟ. ಈ ಮೂರು ತಿಂಗಳ ಭತ್ತಕ್ಕೆ ನೀರು ಬಿಡುವುದು ಎಷ್ಟು ತ್ರಾಸದಾಯಕ. ಸರ್ಕಾರಗಳು ಯಾರು ಪರ ಎಂದು ಬೆತ್ತಲೆ ತೋರಿಸಿಕೊಂಡಿವೆ.
ಈಗಲಾದರೂ ಕಾಲ ಮಿಂಚಿಲ್ಲ ಕಟಾವು ಮಾಡಿದ ಭತ್ತ ಒಳ್ಳೆಯ ಗುಣಮಟ್ಟದ್ದು ಆಗಿದೆ.3000-3500 ರೂಂ ದರ ನಿಗದಿ ಮಾಡಿದರೆ ರೈತ ಸಾಲಶೂಲದಿಂದಮುಕ್ತಿ ಆಗಬಹುದು. ಭದ್ರಾ ನೀರು ಬೇಸಿಗೆ ಕಾಲದಲ್ಲಿ ಕೊಡುವುದೇ ಇಲ್ಲ ಎಂದು ಹೇಳಿರುವುದು ರೈತ ವಿರೋಧಿ ನೀತಿ.
ಗುಂಡುರಾವ್ ಕಾಲಾವಧಿಯಲ್ಲಿ 158ಅಡಿ ನೀರಿದ್ದರೂ ಭದ್ರಾ ನೀರು ಹರಿಸಲಾಗಿರುವ ದಾಖಲೆ ಇದೆ. ಕಡೆ ಪಕ್ಷ ಈ ಭಾರಿಯ ಭತ್ಖಕ್ಕೆ ವೈಜ್ಞಾನಿಕ ಬೆಲೆ ನಿಗದಿ ಮಾಡಿ, ಇಲ್ಲವೇ ಯಾವ ರೈತರ ಬಳಿ ಭತ್ತ ಖರೀದಿ ನಿಲ್ಲಿಸಿ. ರೈತರೇ ಸ್ವಂತ ಮಾರುಕಟ್ಟೆ ಹುಡುಕಿಕೊಳ್ಳುವ ಪ್ರಯತ್ನ ಮಾಡಲಿ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
