Connect with us

ದಿನದ ಸುದ್ದಿ

ಭೈರಪ್ಪನವರೇ, ನಿಮ್ಮ ‘ಧರ್ಮಶಾಸ್ತ್ರ’ ಅಂದರೆ ಯಾವುದು..?

Published

on

ಕನ್ನಡದ ಖ್ಯಾತ ಸಾಹಿತಿ ಎಸ್.ಎಲ್.ಭೈರಪ್ಪನವರು ಸಂವಿಧಾನದ ಬಗ್ಗೆ, ತಮ್ಮ ‘ಧರ್ಮಶಾಸ್ತ್ರ’ದ ಬಗ್ಗೆ ತಮ್ಮ ಸಹಜ ಅಭಿಪ್ರಾಯಗಳನ್ನು ಹೇಳುತ್ತಾ ಹಿಂದೂಗಳಲ್ಲಿನ ಗಂಡುಹೆಣ್ಣಿನ ಸಂಭಂದದ ಬಗ್ಗೆ, ನಮ್ಮ ನ್ಯಾಯಾಲಯ, ನ್ಯಾಯಾಲಯದ ತೀರ್ಪುಗಳ ಬಗ್ಗೆಯೂ ಕೀಟಲೆಯ ದ್ವನಿಯಲ್ಲಿ ಮಾತನಾಡಿದ್ದಾರೆ!

ಪ್ರಗತಿಪರರು ಸಾಮಾಜಿಕ ಜಾಲತಾಣಗಳಲ್ಲಿ
ಭೈರಪ್ಪನವರ ಮಾತುಗಳನ್ನು ಉಗ್ರವಾಗಿ ವಿರೋಧಿಸುತ್ತಾ ಎಸ್.ಎಲ್.ಭೈರಪ್ಪನವರನ್ನು ವೈಯಕ್ತಿಕ ನಿಂದೆಗೆ ಇಳಿದಿದ್ದಾರೆ.!

ಭೈರಪ್ಪನವರು ಇದನ್ನು ಬಿಟ್ಟು ಮತ್ತೇನು ಮಾತಾಡಲು ಸಾದ್ಯ..? ಅವರು ನಂಬಿದ ಸಿದ್ದಾಂತಕ್ಕೆ ಅವರು ತೋರುವ ಕಾಳಜಿ, ಬದ್ದತೆಗಳು ನಿಜಕ್ಕೂ ಶ್ಲಾಘನೀಯ! ಅವರು ಮಾತಾಡಿರುವುದಾದರೂ ಎಲ್ಲಿ? ಅವರ ಜಾತಿಯವರೇ ಆದವರೊಬ್ಬರ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ, ಅವರದೇ ಪರಿಸರದಲ್ಲಿ, ಅವರ ಅನುಯಾಯಿಗಳ ನಡುವೆ. ಅದರಲ್ಲೂ ಅವರು ಅವರದೇ ‘ಧರ್ಮಗ್ರಂಥ’ಗಳನ್ನು ಬೇರೆ ಸಮರ್ಥಿಸಿಕೊಂಡಿದ್ದಾರೆ! ಇದೂ ನನಗೆ ಆಶ್ಚರ್ಯ ಎನಿಸಲಿಲ್ಲ!? ಅವರು, ಅವರ ಯಥಾಸ್ಥಿತಿವಾದದ, ಅವರಿಗೆ ಶ್ರೇಯಕರವಾದ ಧರ್ಮಗ್ರಂಥವನ್ನು ಸಮರ್ಥಿಸದೆ ನಿಮ್ಮ ಧರ್ಮಗ್ರಂಥವಾದ ಸಂವಿಧಾನವನ್ನು ಏಕೆ ಸಮರ್ಥಿಸಬೇಕು? ಅವರ ಧರ್ಮಗ್ರಂಥಗಳಿಗೆ ‘ಹಿಂದೂ’. ‘ಭಾರತೀಯ’ ‘ಪ್ರಾಚೀನ’ ‘ಪುರಾತನ’ ‘ಸನಾತನ’ ಎಂದು ಏನೇ ನಾಮಕರಣ ಮಾಡಿ, ಹೆಸರಿಟ್ಟು ಕರೆದರೂ ಅದು ಬ್ರಾಹ್ಮಣ ಶ್ರೇಷ್ಟತೆಯನ್ನು ಪ್ರತಿಪಾದಿಸುವ ಧರ್ಮಗ್ರಂಥವಾಗಿರುತ್ತದೆ! ಬ್ರಾಹ್ಮಣರಾದ ಭೈರಪ್ಪನವರಿಗೆ, ಅವರ ಕುಲಭಾಂಧವರಿಗೆ ಅದರಿಂದ ಲಾಭವಿದೆ! ಪರಂಪರಾನುಗತವಾಗಿ ಅವರು ಅದರ ಹಣ್ಣುಗಳನ್ನು ಸವಿದಿದ್ದಾರೆ!

‘ಭಾರತೀಯತೆ’ ಅಂದರೆ ಅವರ ಅರ್ಥದಲ್ಲಿ ಅದು ‘ವೈದಿಕೇಯತೆ’ಯೇ ಅಲ್ಲವೆ? ಭಾರತೀಯತೆ ಅರ್ಥಾತ್ ಬ್ರಾಹ್ಮಣೀಯತೆಯನ್ನು ಯಥಾಸ್ಥಿತಿಗೊಳಿಸುವುದು, ಸ್ಥಾವರಗೊಳಿಸುವುದೇ ಅವರ ಮೂಲ ಉದ್ದೇಶವೆಂಬುದನ್ನು ನಾವೇಕೆ ಗ್ರಹಿಸುತ್ತಿಲ್ಲ.? ಇದನ್ನು ಕೇವಲ ಎಸ್.ಎಲ್.ಭೈರಪ್ಪನವರು ಹೇಳುತ್ತಿರುವುದಲ್ಲ, ಇವರ ಪೂರ್ವಿಕರಾದ ಸಂಘಪರಿವಾರದ ಸ್ಥಾಪಕರೆಲ್ಲಾ ಹಿಂದಿನಿಂದಲೂ ಹೇಳುತ್ತಾ ಬಂದಿರುವುದೇ ಇದೇ ಆಗಿದೆ!? ಉದಾಹರಣೆಗೆ ಇಂದು ಎಸ್.ಎಲ್.ಬೈರಪ್ಪನವರು ನಮ್ಮ ಮದುವೆಗಳ, ವಿಚ್ಚೇದನಗಳ, ಗಂಡು ಹೆಣ್ಣು ಸಂಭಂದಗಳ ಪರಿಸ್ಥಿತಿ ಯನ್ನು ಕಂಡು ವ್ಯಂಗ್ಯವಾಡಿದ್ದಾರಲ್ಲ, ಅದನ್ನೇ ಇಂದಿಗೆ ಸರಿಯಾಗಿ ಎಪ್ಪತ್ತು ವರ್ಷಗಳ ಹಿಂದೆ ಭೈರಪ್ಪನವರ ಪೂರ್ವಿಕರಾದ ಗೋಳ್ವಾಲ್ಕರ್ ರವರೂ ಹೇಳಿದ್ದನ್ನು ನಮ್ಮ ಇತಿಹಾಸಕಾರ ರಾಮಚಂದ್ರ ಗುಹ ಕೋಟ್ ಮಾಡಿದ್ದನ್ನೇ ನಾನೂ ಕೋಟ್ ಮಾಡಿದ್ದೇನೆ ಗಮನಿಸಿ….

The RSS sarsanghchalak, M.S. Golwalkar, complained in a speech of August 1949 that the reforms piloted by Ambedkar “has nothing Bharatiya about it. The questions like those of marriage and divorce cannot be settled on the American or British model in this country. Marriage, according to Hindu culture and law is a sanskar which cannot be changed even after death and not a ‘contract’ which can be broken any time”. Golwalkar continued: “Of course some lower castes in Hindu Society in some parts of the country recognise and practise divorce by custom. But their practice cannot be treated as an ideal to be followed by all”. (Organiser, September 6, 1949).

ಯಥಾಸ್ಥಿತಿವಾದ ಅಂದರೆ ಇದೇ.. ಅದಕ್ಕೆ ಕಾಲಮಾನಗಳ ಅಂತರವಿರಲ್ಲ, ಬಾಷೆ ಮತ್ತು ಚಿಂತನೆಯಲ್ಲಿ ವ್ಯತ್ಯಾಸ ಇರಲ್ಲ, ವ್ಯಕ್ತಿ ವ್ಯಕ್ತಿಗಳ ನಡುವೆ ಗೊಂದಲವಿರಲ್ಲ..! ಇದನ್ನೇ ನಮ್ಮವರು ಪ್ಯಾಸಿಸಂ ಎಂದು ಕರೆದರು. ಅಂದು ಅವರು ಪ್ರತಿಪಾದಿಸಿದ್ದು, ಅದು ಮುಂದುವರೆದಿದ್ದೂ, ಇಂದು ಪ್ರತಿಪಾದಿಸುತ್ತಿರುವುದು ಒಂದೇ.‌.!? ಭಾರತೀಯತೆಯ ಹೆಸರಲ್ಲಿ ಬ್ರಾಹ್ಮಣೀಯತೆಯನ್ನು, ಇದರಿಂದ ಭಾರತೀಯರಾದ ಇತರ ಬ್ರಾಹಮಣೇತರರಿಗೆ ಏನೇ ನಷ್ಟವಾದರೂ ಚಿಂತೆಯಿಲ್ಲ ಅವರಿಗೆ ಮಾತ್ರ ಲಾಭವಾಗಬೇಕಷ್ಟೆ ಅವರ ಸವರ್ಣಕುಲದ ಶ್ರೇಷ್ಠತೆ ಉಳಿಯಬೇಕಷ್ಟೆ!

ಇಲ್ಲಿ ಭಾರತೀಯರು, ಅದರಲ್ಲೂ ಬ್ರಾಹ್ಮಣ ಹೆಣ್ಣುಮಕ್ಕಳನ್ನೂ ಸೇರಿಸಿದಂತೆ ಇಡೀ ಸ್ತ್ರೀಕುಲಕ್ಕೆ ಇವರ ‘ಸಿದ್ದಾಂತ’ ಅದೆಷ್ಟು ಅಪಾಯಕಾರಿಯಾಗಿದೆ ಗಮನಿಸಿ? ಭೈರಪ್ಪನವರು ಹೆಣ್ಣಿನ ಮುಟ್ಟಿನ ಬಗ್ಗೆ, ಶಬರಿಮಲೆ ದೇವಾಲಯದ ಪ್ರವೇಶದ ಬಗ್ಗೆ ಅಸಹನೆ ಬೆರೆತ ವ್ಯಂಗ್ಯದಲ್ಲಿ ಮಾತನಾಡಿದ್ದಾರೆ. ಇದರಲ್ಲಿ ಅವರ ‘ಧ್ವನಿ’ಯನ್ನು ಗಮನಿಸಿ..? ಅದೇ ಏಳು ದಶಕಗಳ ಹಿಂದೆ ಅಪ್ಪನ ಆಸ್ತಿಯಲ್ಲಿ(ಪಿತ್ರಾರ್ಜಿತ ಆಸ್ತಿ) ಹೆಣ್ಣು ಮಕ್ಕಳಿಗೆ ಸಮಪಾಲು ನೀಡಬೇಕೆಂದು ಬಾಬಾಸಾಹೇಬರು ‘ಹಿಂದು ಕೋಡ್ ಬಿಲ್’ ತಂದಾಗ, ಅಂದೂ ಬೈರಪ್ಪನವರ ತಲೆಮಾರಿನವರು ಮಾತಾಡಿದ್ದು ಇಲ್ಲಿದೆ ಗಮನಿಸಿ…

An article in the Organiser, dated November 2, 1949, characterised the Hindu Code Bill “as a direct invasion on the faith of the Hindus”, remarking that “its provisions empowering women to divorce is revolting to the Hindu ideology”. An editorial published a month later (“The Hindu Code Bill”, the Organiser, December 7, 1949) led with this paragraph: “We oppose the Hindu Code Bill. We oppose it because it is a derogatory measure based on alien and immoral principles. It is not a Hindu Code Bill. It is anything but Hindu. We condemn it because it is a cruel and ignorant libel on Hindu laws, Hindu culture and Hindu dharma”.

ಮಾತೆತ್ತಿದರೆ ಭಾರತಮಾತೆಯನ್ನು ಉದ್ಗರಿಸುವ ಇವರ ಉದರದಲ್ಲಿರುವ ಸ್ತ್ರೀದ್ವೇಶವನ್ನು ಗಮನಿಸಿ..? ಅಂದಿಗೂ ಇಂದಿಗೂ ಬೈರಪ್ಪನವರ ಮತ್ತವರ ಪೂರ್ವಿಕರ ಚಿಂತನೆ ಮತ್ತು ಉದ್ದೇಶದಲ್ಲಿ ಏನಾದರೂ ಎಳ್ಳಷ್ಟು ವ್ಯತ್ಯಾಸವಿದೆಯೇ..? ಇಂತದ್ದೇ ಸ್ಪಷ್ಟತೆ ಅಂದು ಹಿಟ್ಲರ್ ನಲ್ಲೂ ಇತ್ತು ಇಂದು ಇವರಲ್ಲೂ ಇದೆ!

ನಾವು ಭೈರಪ್ಪನಂತವರನ್ನು ಬೈಯುವುದನ್ನು ನಿಲ್ಲಿಸಬೇಕು ಇಂದಾದರೂ ಒಂದಾಗಿ ಪರ್ಯಾಯಗಳನ್ನು ಹುಡುಕಬೇಕು.. ಈ ದೇಶವನ್ನು ಇವರಿಂದ ಉಳಿಸಬೇಕಾದರೆ ಇವರ ಮಾತುಗಳನ್ನು, ಇವರ ನುಡಿಕಟ್ಟನ್ನು ಅದರ ಹಿಂದಿನ ದುರುದ್ದೇಶಗಳನ್ನು ಮುಂದಿನ ತಲೆಮಾರಿಗಾದರೂ ಅರ್ಥಮಾಡಿಸಬೇಕು..

ಸಿ.ಎಸ್.ದ್ವಾರಕಾನಾಥ್

ನಮ್ಮ ಸಂವಿಧಾನದಲ್ಲಿ ಪರಂಪರೆ’ ಇಲ್ಲ ಎಂದು ಹೇಳಿದ ಎಸ್.ಎಲ್.ಭೈರಪ್ಪ ಅವರ ಸುದ್ದಿ ಲಿಂಕ್ ಮೇಲೆ ಕ್ಲಿಕ್ ಮಾಡಿ

https://www.prajavani.net/stories/stateregional/shreevasta-smruti-632572.html

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಉಚಿತ ಲ್ಯಾಪ್‍ಟಾಪ್ ಪಡೆಯಲು ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೊಂದಾಯಿತ ಕಾರ್ಮಿಕರ ಮಕ್ಕಳು ಪ್ರಸಕ್ತ ಸಾಲಿನಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‍ಟಾಪ್‍ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.

ದಾವಣಗೆರೆ ಉಪ ವಿಭಾಗದ ಕಾರ್ಮಿಕ ಅಧಿಕಾರಿ ಇವರ ವ್ಯಾಪ್ತಿಯಲ್ಲಿ ನೋಂದಣಿಯಾಗಿರುವ ಕಾರ್ಮಿಕರು ಈ ಸೌಲಭ್ಯವನ್ನು ಪಡೆಯಬಹುದು. ಅರ್ಜಿ ನಮೂನೆಯನ್ನು ಸಂಬಂಧಿಸಿದ ಕಾರ್ಮಿಕ ನಿರೀಕ್ಷಕರ ಕಛೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಕಾರ್ಮಿಕ ನಿರೀಕ್ಷಕರಿಗೆ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 11 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಯವರ ಕಚೇರಿ ದೂ ಸಂ:08192-237332 ಸಂಪರ್ಕಿಸಲು ಕಾರ್ಮಿಕ ಅಧಿಕಾರಿ ಇಬ್ರಾಹಿಂ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಾಳೆಯಿಂದ ತಮಿಳುನಾಡಿಗೆ ಕಾವೇರಿ ನೀರು ; ಕಾವೇರಿ ನದಿ ನೀರು ಸಮಿತಿ ನಿರ್ದೇಶನ

Published

on

ಸುದ್ದಿದಿನ ಡೆಸ್ಕ್ : ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನದಿ ನೀರು ಸಮಿತಿ ತೀರ್ಪಿನ ಕುರಿತು ಕಾನೂನು ತಜ್ಞರ ಜೊತೆ ಚರ್ಚಿಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ನಿನ್ನೆ ಹೇಳಿದ್ದಾರೆ.

ತಮಿಳುನಾಡಿಗೆ ನಾಳೆಯಿಂದ (ಸೆಪ್ಟಂಬರ್28) ಅಕ್ಟೋಬರ್ 15ರ ತನಕ ಪ್ರತಿನಿತ್ಯ 3 ಸಾವಿರ ಕ್ಯೂಸೆಕ್‌ನಂತೆ ನೀರು ಹರಿಸುವಂತೆ, ಕಾವೇರಿ ನದಿ ನೀರು ಸಮಿತಿ ನಿನ್ನೆ ಕರ್ನಾಟಕಕ್ಕೆ ನಿರ್ದೇಶನ ನೀಡಿದೆ. ಕಾವೇರಿ ನದಿ ನೀರು ಸಮಿತಿ ವರ್ಚುವಲ್ ಮೂಲಕ ನಡೆದ ಸಭೆಯಲ್ಲಿ ಈ ನಿರ್ದೇಶನ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಉತ್ತಮ ಶಿಕ್ಷಕರ ಪ್ರಶಸ್ತಿಗೆ ಸುಮಂಗಳಾ ಮೇಟಿ ಆಯ್ಕೆ

Published

on

ಸುದ್ದಿದಿನ, ಬಳ್ಳಾರಿ : ಸಿರಿಗೇರಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ (ಬಸವನಪೇಟೆ) ಮುಖ್ಯ ಗುರುಗಳಾದ ಶ್ರೀಮತಿ ಸುಮಂಗಳಾ ಮೇಟಿಯವರು 2023-24 ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಶಿಕ್ಷಕ ವೃತ್ತಿ ಧರ್ಮ ನೇ ತನ್ನ ಸರ್ವಸ್ವ ಎಂದು ತಿಳಿದುಕೊಂಡಂತಹ ಶ್ರೀಮತಿ ಸುಮಂಗಳಾ ಮೇಟಿಯವರು, ಶಿಕ್ಷಕ ವೃತ್ತಿಯಲ್ಲಿ ಉತ್ತಮ ಕರ್ತವ್ಯ ಹಾಗೂ ಸೇವೆಯನ್ನು ಸಲ್ಲಿಸಿದನ್ನು ಪರಿಗಣಿಸಿ ಈ ಹಿಂದೆಯೇ 2022-23 ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ಸಾವಿತ್ರಿ ಬಾಯಿ ಫುಲೆ ಶಿಕ್ಷಕಿ ಪ್ರಶಸ್ತಿ ಪುರಸ್ಕೃತರಾಗಿದ್ದು, ಇವರ ಶಿಕ್ಷಣ ಕ್ಷೇತ್ರದಲ್ಲಿನ ಅಗಾಧವಾದ ಕರ್ತವ್ಯ ಮತ್ತು ಸೇವೆ ನಿಷ್ಠೆಯನ್ನು ಗುರುತಿಸಿದ ಶಾಲಾ ಶಿಕ್ಷಣ ಇಲಾಖೆ ಬಳ್ಳಾರಿ ವತಿಯಿಂದ 2023-24 ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿರುವುದಕ್ಕೆ ಇದೇ ಸಂದರ್ಭದಲ್ಲಿ ಗ್ರಾಮಸ್ಥರು, ಸಮಸ್ತ ಶಿಕ್ಷಕರ ವರ್ಗದವರು, ಅತಿಥಿ ಶಿಕ್ಷಕರು, ಹಿತೈಷಿಗಳು, ಹಳೆಯ ವಿದ್ಯಾರ್ಥಿ ಬಳಗ, ಶಿಕ್ಷಣ ಪ್ರೇಮಿಗಳು, ಅಭಿಮಾನಿ ಬಳಗ,
ಮುಂತಾದವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ5 days ago

ಉಚಿತ ಲ್ಯಾಪ್‍ಟಾಪ್ ಪಡೆಯಲು ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೊಂದಾಯಿತ ಕಾರ್ಮಿಕರ ಮಕ್ಕಳು ಪ್ರಸಕ್ತ ಸಾಲಿನಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವ್ಯಾಸಂಗ...

ದಿನದ ಸುದ್ದಿ6 days ago

ನಾಳೆಯಿಂದ ತಮಿಳುನಾಡಿಗೆ ಕಾವೇರಿ ನೀರು ; ಕಾವೇರಿ ನದಿ ನೀರು ಸಮಿತಿ ನಿರ್ದೇಶನ

ಸುದ್ದಿದಿನ ಡೆಸ್ಕ್ : ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನದಿ ನೀರು ಸಮಿತಿ ತೀರ್ಪಿನ ಕುರಿತು ಕಾನೂನು ತಜ್ಞರ ಜೊತೆ ಚರ್ಚಿಸಿ, ಮುಂದಿನ...

ದಿನದ ಸುದ್ದಿ6 days ago

ಉತ್ತಮ ಶಿಕ್ಷಕರ ಪ್ರಶಸ್ತಿಗೆ ಸುಮಂಗಳಾ ಮೇಟಿ ಆಯ್ಕೆ

ಸುದ್ದಿದಿನ, ಬಳ್ಳಾರಿ : ಸಿರಿಗೇರಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ (ಬಸವನಪೇಟೆ) ಮುಖ್ಯ ಗುರುಗಳಾದ ಶ್ರೀಮತಿ ಸುಮಂಗಳಾ ಮೇಟಿಯವರು 2023-24 ನೇ ಸಾಲಿನ ಬಳ್ಳಾರಿ ಜಿಲ್ಲಾ...

ದಿನದ ಸುದ್ದಿ7 days ago

ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಬಿಗಿ ಬಂದೋಬಸ್ತ್ : ಪೊಲೀಸ್ ಕಮೀಷನರ್ ದಯಾನಂದ್

ಸುದ್ದಿದಿನ, ಬೆಂಗಳೂರು : ಕಾವೇರಿ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸಿರುವುದನ್ನು ಖಂಡಿಸಿ ಕನ್ನಡ ಹಾಗೂ ವಿವಿಧ ರೈತಪರ ಸಂಘಟನೆಗಳು ಇಂದು ಕರ್ನಾಟಕ ರಾಜಧಾನಿ ಬೆಂಗಳೂರು ಬಂದ್‌ಗೆ ಕರೆಕೊಟ್ಟಿವೆ....

ದಿನದ ಸುದ್ದಿ2 weeks ago

ಪರಿಸರ ಗಣೇಶ ಚತುರ್ಥಿ ಆಚರಣೆ | ಪಿಓಪಿ ಮೂರ್ತಿ ಸಂಪೂರ್ಣ ನಿಷೇಧ : ಜಿಲ್ಲಾಧಿಕಾರಿ ಡಾ. ವೆಂಕಟೇಶ್

ಸುದ್ದಿದಿನ,ದಾವಣಗೆರೆ : ಗಣೇಶ ಚತುರ್ಥಿಯಲ್ಲಿ ಪಿಓಪಿ ಗಣೇಶ ಮೂರ್ತಿ ಮಾರಾಟವನ್ನು ಸಂಪೂರ್ಣ ನಿಷೇಧಿಸಲಾಗಿದ್ದು ಮಣ್ಣಿನಲ್ಲಿ ಮಾಡಿದ ಹಾಗೂ ಬೆಲ್ಲದ ಗಣೇಶ ಮೂರ್ತಿ ಪ್ರತಿಷ್ಟಾಪನೆ ಮಾಡುವ ಮೂಲಕ ಪರಿಸರ...

ದಿನದ ಸುದ್ದಿ3 weeks ago

ಸೆ. 14 ರಿಂದ 21 ರವರೆಗೆ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ

ಸುದ್ದಿದಿನ,ದಾವಣಗೆರೆ : ಪ್ರಸಕ್ತ ಸಾಲಿನ ಜಿಲ್ಲೆಯ ಆರು ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ತಾಲ್ಲೂಕುವಾರು ಆಯೋಜಿಸಲಾಗಿದೆ. ಸೆಪ್ಟೆಂಬರ್ 14 ರಂದು ಹರಿಹರ ತಾಲ್ಲೂಕಿಗೆ ಸಂಬಂಧಿಸಿದಂತೆ ರಾಜನಹಳ್ಳಿಯ ಶ್ರೀ...

ದಿನದ ಸುದ್ದಿ3 weeks ago

ಕಳಪೆ ಸಮವಸ್ತ್ರ ನೀಡಿದವರ ವಿರುದ್ಧ ಕ್ರಮ : ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ಹುಬ್ಬಳ್ಳಿ : ಮಹದಾಯಿ, ಕೃಷ್ಣಾ ಮೇಲ್ದಂಡೆ, ಕಾವೇರಿ ವಿವಾದ ಸೇರಿದಂತೆ ಎಲ್ಲ ಯೋಜನೆಗಳ ಬಗ್ಗೆ ಕೇಂದ್ರಕ್ಕೆ ಒತ್ತಾಯಿಸಲು ಸರ್ವ ಪಕ್ಷದ ನಿಯೋಗದೊಂದಿಗೆ ತೆರಳಲು ಪ್ರಧಾನಮಂತ್ರಿಗಳ ಸಮಯ ಕೋರಿ...

ದಿನದ ಸುದ್ದಿ3 weeks ago

ರೈತರಿಗೆ ಬಾಕಿ ಇದ್ದ ಪರಿಹಾರ ಹಣ ಬಿಡುಗಡೆ

ಸುದ್ದಿದಿನ, ಉ.ಕ: ಉತ್ತರ ಕರ್ನಾಟಕದ ಕಲ್ಬುರ್ಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ನೆಟೆ ರೋಗದಿಂದ ಕಳೆದ ಸಾಲಿನಲ್ಲಿ ತೊಗರಿ ಬೆಳೆ ಹಾನಿಯಿಂದ ನಷ್ಟ ಅನುಭವಿಸಿದ್ದ ರೈತರಿಗೆ ಬಾಕಿ...

ದಿನದ ಸುದ್ದಿ4 weeks ago

ನಾಡಿನ ಹಲವು ಕ್ಷೇತ್ರಗಳಿಗೆ ತರಳಬಾಳು ಹಿರಿಯ ಶ್ರೀಗಳ ಕೊಡುಗೆ ಅಪಾರ: ಡಾ. ನಾ ಲೋಕೇಶ ಒಡೆಯರ್

ಸುದ್ದಿದಿನ,ದಾವಣಗೆರೆ : ಹಿರಿಯ ಶ್ರೀ ತರಳಬಾಳು ಜಗದ್ಗುರು ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳುವರು ಕಟ್ಟಿ ಬೆಳಸಿದ ಸಂಸ್ಥೆ ಮತ್ತು ತಮ್ಮ ಆದರ್ಶ ವ್ಯಕ್ತಿತ್ವದ ಮೂಲಕ ಪೂಜ್ಯರು ಇಂದಿಗೂ ಎಂದೆಂದಿಗೂ...

ದಿನದ ಸುದ್ದಿ4 weeks ago

ಪರಿಶಿಷ್ಟ ಸಮುದಾಯಗಳ ಮೇಲೆ ಜಾತಿ ದೌರ್ಜನ್ಯ ಪ್ರಕರಣ; ಇಲಾಖೆಗಳ ನಡುವೆ ಸಮನ್ವಯದಿಂದ ಕಾರ್ಯನಿರ್ವಹಿಸಿ : ಅಧಿಕಾರಿಗಳಿಗೆ ಸಿಎಂ ಸೂಚನೆ

ಸುದ್ದಿದಿನ,ಬೆಂಗಳೂರು : ಪರಿಶಿಷ್ಟ ಸಮುದಾಯಗಳ ಮೇಲೆ ನಡೆಯುವ ಜಾತಿ ದೌರ್ಜನ್ಯ ಪ್ರಕರಣಗಳನ್ನು ತಗ್ಗಿಸುವುದರ ಜೊತೆಗೆ ದಾಖಲಾದ ಪ್ರಕರಣಗಳನ್ನು ಸಮರ್ಥವಾಗಿ ನಿರ್ವಹಿಸಲು ಪೊಲೀಸ್, ಕಾನೂನು, ಸಮಾಜ ಕಲ್ಯಾಣ ಸೇರಿದಂತೆ...

Trending