ರಾಜಕೀಯ
ನಾನು ಚುನಾವಣೆಗೆ ಸ್ಪರ್ಧಿಸೋಲ್ಲ ಎಂದು ಎಲ್ಲೂ ಹೇಳಿಲ್ಲ : ಎಸ್.ಎಸ್.ಮಲ್ಲಿಕಾರ್ಜುನ್
ಸುದ್ದಿದಿನ,ದಾವಣಗೆರೆ : ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ವಿಚಾರವಾಗಿ ದಾವಣಗೆರೆಯಲ್ಲಿ ಮಾಜಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ ಪ್ರತಿಕ್ರಿಯೆ ನೀಡಿದ್ದು, ಚುನಾವಣೆಯಲ್ಲಿ ಸ್ಪರ್ಧಿಸಲು ನಾನು ಸಿದ್ಧ, ಹೈಕಮಾಂಡ್ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದರು.
ಉಮೇದುವಾರಿಕೆ ಸಲ್ಲಿಸಲು 4ನೇ ತಾರೀಖಿನವರೆಗೂ ಸಮಯಾವಕಾಶ ಇದೆ. ಯಾರಾದ್ರೂ ನಮ್ಮ ಫ್ಯಾಮಿಲಿ ಸದಸ್ಯರೇ ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಡ ಇದೆ. ಚುನಾವಣೆಗೆ ಸ್ಪರ್ಧಿಸೋ ವಿಚಾರ ಹೈಕಮಾಂಡ್ ಗೆ ಬಿಟ್ಟಿದ್ದೀವಿ ಎಂದು ಹೇಳಿದರು.
ನಾನು ಚುನಾವಣೆಗೆ ಸ್ಪರ್ಧಿಸೋದಿಲ್ಲ ಅಂತ ಎಲ್ಲೂ ಏನೂ ಹೇಳಿಲ್ಲ – ಜಿಲ್ಲೆಯಲ್ಲಿ ಕಾಂಗ್ರೆಸ್ ಗೆಲ್ಲಬೇಕು ಅಷ್ಟೇ. ಸೋಮವಾರದ ಮೇಲೆ ಸ್ಕ್ರೀನ್ ಕಮಿಟಿ ಮೀಟಿಂಗ್ ಇದೆ. ಅಲ್ಲಿ ಚರ್ಚೆ ಮಾಡ್ತಿವಿ ಎಂದು ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401