Connect with us

ಕ್ರೀಡೆ

ವಿಡಿಯೋ | ಅಮ್ಮನಿಗಾಗಿ ‘ಅಡುಗೆ ಭಟ್ಟ’ ಆದ್ರು ಸಚಿನ್ ತೆಂಡೂಲ್ಕರ್..!

Published

on

ಸುದ್ದಿದಿನ ಡೆಸ್ಕ್ : ಮಾಸ್ಟರ್​​ ಬ್ಲಾಸ್ಟರ್​​ ಸಚಿನ್​ ತೆಂಡೊಲ್ಕರ್ ಮಹಿಳಾ ದಿನಾಚರಣೆಯನ್ನು ವಿಭಿನ್ನವಾಗಿ ಆಚರಿಸಿದ್ದಾರೆ. ತಾಯಿ, ಪತ್ನಿ ಅಂಜಲಿ ಹಾಗೂ ಮಗಳು ಸರಾ ಅವರಿಗಾಗಿ ಸ್ವತಃ ಸಚಿನ್​ ಅವರೇ ಕಿಚನ್​ನಲ್ಲಿ ಅಡುಗೆ ಮಾಡಿ ಬಡಿಸಿದ್ದಾರೆ.

ತಾವು ಅಡುಗೆ ಮಾಡಿರೋ ವಿಡಿಯೋವನ್ನು ಟ್ವೀಟರ್​​​ನಲ್ಲಿ ಹಂಚಿಕೊಂಡಿದ್ದಾರೆ. ಈ ಮಹಿಳಾ ದಿನದಂದು ನಮ್ಮ ಬಾಳಲ್ಲಿ ತುಂಬಾ ಪ್ರಮುಖರಾಗಿರುವ ಮಹಿಳೆಯರಿಗಾಗಿ ಏನಾದರೂ ವಿಶೇಷವಾಗಿರೋದನ್ನು ಮಾಡೋಣ ಎಂದು ಟ್ವೀಟ್​​ ಮಾಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ಹಿರಿಯ ಕ್ರಿಕೆಟ್ ಪಟು ಎನ್ಆರ್‌ಎಚ್ ರಮೇಶ್ ನಿಧನ

Published

on

ಸುದ್ದಿದಿನ,ದಾವಣಗೆರೆ: ನಗರದ ಎನ್ಆರ್‌ಎಚ್‌ ಸೈಕಲ್ ಮಾರ್ಟ್ ಮಾಲೀಕ, ದಾವಣಗೆರೆ ಫ್ರೆಂಡ್ಸ್ ಕ್ರಿಕೆಟ್ ಕ್ಲಬ್‌ನ ನಾಯಕನಾಗಿದ್ದ ಎನ್.ಆರ್‌.ಎಚ್‌.ರಮೇಶ ಇಲ್ಲಿನ ಕೆಟಿಜೆ ನಗರದ 15ನೇ ಕ್ರಾಸ್‌, 2ನೇ ಮೇನ್‌ನಲ್ಲಿರುವ ತಮ್ಮ ನಿವಾಸದಲ್ಲಿ ಬುಧವಾರ ಸಂಜನೆ ನಿಧನರಾಗಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು.

ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಓರ್ವ ಸಹೋದರ, ಮೂವರು ಸಹೋದರಿಯರು ಸೇರಿದಂತೆ ಬಂಧು-ಬಳಗ ಅಗಲಿದ್ದಾರೆ. ದಾವಣಗೆರೆ ಗಾಂಧಿ ನಗರ ಸಮೀಪದ ವೀರಶೈವ ರುದ್ರಭೂಮಿಯಲ್ಲಿ ಮೇ.7ರಂದು ಮಧ್ಯಾಹ್ನ 2 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.

90ರ ದಶಕದಲ್ಲಿ ದಾವಣಗೆರೆ ಸೇರಿದಂತೆ ನೆರೆ ಹೊರೆಯ ಜಿಲ್ಲೆಗಳಲ್ಲಿ ಟೆನ್ನಿಸ್‌ ಬಾಲ್‌ ಕ್ರಿಕೆಟ್‌ ಪಂದ್ಯ, ಪಂದ್ಯಾವಳಿಗಳಲ್ಲಿ ಭರ್ಜರಿ ಸಿಕ್ಸರ್ ಭಾರಿಸುವ ಮೂಲಕ ಕ್ರಿಕೆಟ್ ಪ್ರೇಮಿಗಳ ನೆಚ್ಚಿನ ಆಟಗಾರನಾಗಿ ರಮೇಶ ಸಾಧನೆ ಮಾಡಿದ್ದರು. ಎನ್ಆರ್‌ಎಚ್‌ ರಮೇಶ ನಿಧನಕ್ಕೆ ಎಫ್‌ಸಿಸಿ ತಂಡದ ಹಿರಿಯ ಆಟಗಾರರು, ದಾವಣಗೆರೆ ಕ್ರಿಕೆಟ್ ಕ್ಲಬ್‌ ಸೇರಿದಂತೆ ವಿವಿಧ ಕ್ರಿಕೆಟ್ ಕ್ಲಬ್‌ಗಳ ಹಿರಿಯ ಆಟಗಾರರು ತೀವ್ರ ಸಂತಾಪ ಸೂಚಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

Published

on

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.

4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.

5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.

6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

bengaluru-clubs-food-safety-raid-cockroaches-expired-food-found bengaluru-clubs-food-safety-raid-cockroaches-expired-food-found
ದಿನದ ಸುದ್ದಿ22 hours ago

ಪ್ರಮುಖ 8 ಕ್ಲಬ್‌ಗಳ ಮೇಲೆ ದಿಢೀರ್ ದಾಳಿ; ನಿಯಮ ಉಲ್ಲಂಘನೆಗೆ ನೋಟಿಸ್

ಸುದ್ದಿದಿನ,ಬೆಂಗಳೂರು: ನಗರದ ಪ್ರತಿಷ್ಠಿತ ಕ್ಲಬ್‌ಗಳಲ್ಲಿಯೂ ಆಹಾರ ಸುರಕ್ಷತೆ ಮತ್ತು ನೈರ್ಮಲ್ಯ ನಿಯಮಗಳ ಉಲ್ಲಂಘನೆ ಕಂಡುಬಂದಿರುವುದು ಆತಂಕ ಮೂಡಿಸಿದೆ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಅಧಿಕಾರಿಗಳು...

ದಿನದ ಸುದ್ದಿ22 hours ago

ಸೆ.2ರ ಹುಟ್ಟುಹಬ್ಬ ಆಚರಿಸದಿರಲು ಕಿಚ್ಚನ ನಿರ್ಧಾರ: “ನಿಮ್ಮ ಪ್ರೀತಿಯೇ ನನಗೆ ದೊಡ್ಡ ಮೈಲಿಗಲ್ಲು

ಸುದ್ದಿದಿನ,ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ಅವರ ಹುಟ್ಟುಹಬ್ಬ ಎಂದರೆ ಅಭಿಮಾನಿಗಳಿಗೆ ಹಬ್ಬದ ವಾತಾವರಣ. ಆದರೆ ಈ ಬಾರಿ ಸೆಪ್ಟೆಂಬರ್‌ 2ರಂದು ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳೊಂದಿಗೆ ಅದ್ಧೂರಿಯಾಗಿ...

toxic-movie-geethu-mohandas-old-statement-viral-yash-fans-troll toxic-movie-geethu-mohandas-old-statement-viral-yash-fans-troll
ದಿನದ ಸುದ್ದಿ22 hours ago

ಬಿಡುಗಡೆ ಬೆನ್ನಲ್ಲೇ ನಿರ್ದೇಶಕಿಯ ಹಳೆಯ ಮಾತಿಗೆ ಹೊಸ ವಿವಾದ: ‘ಟಾಕ್ಸಿಕ್’ ಸುತ್ತ ಟ್ರೋಲ್‌ಗಳ ಸದ್ದು

ಸುದ್ದಿದಿನ,ಬೆಂಗಳೂರು: ರಾಕಿಂಗ್‌ ಸ್ಟಾರ್‌ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್’ ಸಿನಿಮಾ ಬಿಡುಗಡೆಯಾದ ಬೆನ್ನಲ್ಲೇ ನಿರ್ದೇಶಕಿ ಗೀತು ಮೋಹನ್‌ದಾಸ್ ಅವರ ಹಳೆಯ ಹೇಳಿಕೆಯೊಂದು...

ದಿನದ ಸುದ್ದಿ22 hours ago

ಜನರ ಸಮಸ್ಯೆಗಳಿಗೆ ಸ್ಪಂದಿಸಲು ಸಚಿವರಿಗೆ ಜಿಲ್ಲೆಗಳ ಜವಾಬ್ದಾರಿ: ಪ್ರತಿ ತಿಂಗಳು ಎರಡು ದಿನ ಪ್ರವಾಸ

ಸುದ್ದಿದಿನ,ಬೆಂಗಳೂರು: ಆಡಳಿತವನ್ನು ಜನರ ಮನೆ ಬಾಗಿಲಿಗೆ ಕೊಂಡೊಯ್ಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮತ್ತೊಂದು ಹೆಜ್ಜೆ ಇಟ್ಟಿದೆ. ಜನರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಆಲಿಸಿ, ತ್ವರಿತವಾಗಿ ಪರಿಹಾರ ಕಲ್ಪಿಸುವ ಉದ್ದೇಶದಿಂದ...

ದಿನದ ಸುದ್ದಿ1 day ago

ಶ್ರೀಮಂತಿಕೆಯ ನಡುವೆ ಸರಳ ಬದುಕು: 50 ರೂ. ಹೇರ್‌ಕಟ್‌ ಹೇಳಿದ ಡಿಕೆಶಿ

ಸುದ್ದಿದಿನ,ಬೆಂಗಳೂರು: ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ತಮ್ಮ ಆಸ್ತಿ ಮತ್ತು ಸರಳ ಜೀವನಶೈಲಿಯ ಕುರಿತು ನೀಡಿರುವ ಹೇಳಿಕೆ ಇದೀಗ ರಾಜಕೀಯ ವಲಯದಲ್ಲಿ ಮಾತ್ರವಲ್ಲ, ಸಾರ್ವಜನಿಕರಲ್ಲೂ ಚರ್ಚೆಗೆ...

ದಿನದ ಸುದ್ದಿ1 day ago

ಹೆಬ್ಬಾಳ–ಮೇಖ್ರಿ ಸುರಂಗ ಮಾರ್ಗ: ಸಂಚಾರ ಪರಿಹಾರವೇ, ಹೊಸ ಸಮಸ್ಯೆಯೇ?

ಸುದ್ದಿದಿನ,ಬೆಂಗಳೂರು: ಬೆಂಗಳೂರು ನಗರದ ಪ್ರಮುಖ ಸಂಚಾರ ಕಿರಿಕಿರಿ ಕೇಂದ್ರವಾಗಿರುವ ಹೆಬ್ಬಾಳ ಜಂಕ್ಷನ್‌ನಿಂದ ಮೇಖ್ರಿ ವೃತ್ತದವರೆಗೆ ಉದ್ದೇಶಿಸಿರುವ ಸುರಂಗ ಮಾರ್ಗ ಯೋಜನೆ ಇದೀಗ ತಜ್ಞರ ವರದಿಯಿಂದ ಚರ್ಚೆಗೆ ಬಂದಿದೆ....

ದಿನದ ಸುದ್ದಿ1 day ago

ಶಿವರಾಮ ಕಾರಂತ ಬಡಾವಣೆಗೆ ಮುಹೂರ್ತ: ಆ.31ಕ್ಕೆ 18 ಸಾವಿರ ನಿವೇಶನ ಹಂಚಿಕೆ?

ಸುದ್ದಿದಿನ,ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮಹತ್ವಾಕಾಂಕ್ಷೆಯ ಡಾ. ಕೆ. ಶಿವರಾಮ ಕಾರಂತ ಬಡಾವಣೆಯ ನಿವೇಶನ ಹಂಚಿಕೆಗೆ ಕೊನೆಗೂ ಕಾಲ ಕೂಡಿ ಬಂದಿದೆ. ದೀರ್ಘಕಾಲದ ಕಾನೂನು ವಿವಾದಗಳ ಬಳಿಕ...

ದಿನದ ಸುದ್ದಿ1 day ago

ಗೃಹಜ್ಯೋತಿ ಮರುಸಮೀಕ್ಷೆಗೆ ಕೌಂಟ್‌ಡೌನ್: 1.17 ಲಕ್ಷ ಫಲಾನುಭವಿಗಳಿಗೆ ಇನ್ನೂ 5 ದಿನ ಮಾತ್ರ!

ಸುದ್ದಿದಿನ, ಮೈಸೂರು: ನೈಜ ಫಲಾನುಭವಿಗಳಿಗೆ ಮಾತ್ರ ಗೃಹಜ್ಯೋತಿ ಯೋಜನೆಯ ಸಬ್ಸಿಡಿ ತಲುಪಿಸುವ ಉದ್ದೇಶದಿಂದ ರಾಜ್ಯಾದ್ಯಂತ ನಡೆಯುತ್ತಿರುವ ಮರುಸಮೀಕ್ಷೆ ಅಂತಿಮ ಹಂತಕ್ಕೆ ಬಂದಿದೆ. ಮೈಸೂರು ಜಿಲ್ಲೆಯಲ್ಲಿ ಶೇ.84ರಷ್ಟು ಪರಿಶೀಲನೆ...

august-27-2026-daily-horoscope-kannada-rashi-bhavishya august-27-2026-daily-horoscope-kannada-rashi-bhavishya
ನಿತ್ಯ ಭವಿಷ್ಯ1 day ago

ಆಗಸ್ಟ್ 27ರ ರಾಶಿಭವಿಷ್ಯ: ವೃತ್ತಿಯಿಂದ ಪ್ರೇಮದವರೆಗೆ ಇಂದು ನಿಮ್ಮ ದಿನ ಹೇಗಿರಲಿದೆ?

ಮೇಷದಿಂದ ಮೀನದವರೆಗೆ ದ್ವಾದಶ ರಾಶಿಗಳ ದಿನಭವಿಷ್ಯ ಇಲ್ಲಿದೆ. ಉದ್ಯೋಗ, ವ್ಯವಹಾರ, ಶಿಕ್ಷಣ, ಕುಟುಂಬ, ಆರೋಗ್ಯ ಮತ್ತು ಪ್ರೇಮ ಜೀವನದಲ್ಲಿ ಇಂದು ಯಾವ ರಾಶಿಗೆ ಶುಭ? ಯಾರು ಎಚ್ಚರಿಕೆ...

bread_trick_fix_sticky_overcooked bread_trick_fix_sticky_overcooked
ಲೈಫ್ ಸ್ಟೈಲ್1 day ago

ಅನ್ನ ಜಿಗುಟಾಯಿತಾ? ಬ್ರೆಡ್‌ನ ಈ ಸರಳ ಟ್ರಿಕ್‌ನಿಂದ ಮೆತ್ತಗಾದ ಅನ್ನಕ್ಕೆ ಪರಿಹಾರ!

ಸುದ್ದಿದಿನ: ಅನ್ನ ಬೇಯಿಸುವಾಗ ನೀರು ಹೆಚ್ಚಾಗಿ ಬಿದ್ದು ಮೆತ್ತಗಾಗುವುದು ಅಥವಾ ಹೆಚ್ಚು ಹೊತ್ತು ಬೇಯಿಸಿ ಜಿಗುಟಾಗುವುದು ಸಾಮಾನ್ಯ. ಆದರೆ ಇಂತಹ ಸಂದರ್ಭಗಳಲ್ಲಿ ಅನ್ನವನ್ನು ವ್ಯರ್ಥ ಮಾಡುವ ಅಗತ್ಯವಿಲ್ಲ....

Trending