ದಿನದ ಸುದ್ದಿ

ಎಸ್ ಎಸ್ ಹಾದಿಯಲ್ಲಿ ಸಮರ್ಥ್ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ

Published

on

ಸುದ್ದಿದಿನ,ದಾವಣಗೆರೆ: ಜನರು ಹೆಚ್ಚಿನ ನಿರೀಕ್ಷೆಯೊಂದಿಗೆ ಮತದಾನಕ್ಕೆ ಸಜ್ಜಾಗಿದ್ದಾರೆ. ಅಪ್ಪಾಜಿ ಅವರು ಜಾತಿ, ಮತ, ಪಕ್ಷ ಮತ್ತು ಧರ್ಮ ಬೇಧವಿಲ್ಲದೆ ಎಲ್ಲರನ್ನು ಸಮಾನವಾಗಿ ನೋಡುತ್ತಿದ್ದ ಅಜಾತ ಶತ್ರುಗಳಾಗಿದ್ದರು. ಅದೇ ನಿಟ್ಟಿನಲ್ಲಿ ಸಮರ್ಥ್ ಕೂಡ ನಡೆಯುತ್ತಾರೆ ಎಂದು ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.

ದಾವಣಗೆರೆಯ ಕೆಬಿ ಬಡಾವಣೆಯಲ್ಲಿ ಮತಪ್ರಚಾರ ನಡೆಸಿ ಮಾತನಾಡಿದ ಅವರು ಈ ಚುನಾವಣೆಯು ಶಾಮನೂರು ಶಿವಶಂಕರಪ್ಪಾಜಿಯವರ ಅಗಲಿಕೆಯಿಂದ ನಡೆಯುತ್ತಿದೆ. ಜನರು ನೀಡಿದ 5 ವರ್ಷದ ಅಧಿಕಾರಾವಧಿಯಲ್ಲಿ ಉಳಿದಿರುವ ಎರಡು ವರ್ಷಗಳನ್ನು ಸಮರ್ಥವಾಗಿ ನಿಭಾಯಿಸಲು ಪಕ್ಷವು ಸಮರ್ಥ್ ಅವರಿಗೆ ಅವಕಾಶ ನೀಡಿದೆ ಎಂದರು.

ನಮ್ಮ ಕಾಂಗ್ರೆಸ್ ಪಕ್ಷ ನೀಡಿದ 5 ಗ್ಯಾರಂಟಿ ಯೋಜನೆಗಳು ಬಡ ಜನರಿಗೆ ತಲುಪಿದ್ದು, ದಿನನಿತ್ಯದ ಬಳಕೆಯ ವಸ್ತುಗಳ ಖರೀದಿಗೆ ಈ ಯೋಜನೆಗಳು ಸಹಕಾರಿಯಾಗಿವೆ. ಸರ್ಕಾರ ಜನಪರ ಕೆಲಸಗಳಲ್ಲಿ ಸಾಕಷ್ಟು ಸಾಧನೆ ಮಾಡಿದೆ.ಜನರು ಕೂಡ ಈ ಸಂದರ್ಭದಲ್ಲಿ ಯಾರು ತಮ್ಮ ಪರ ನಿಂತಿದ್ದಾರೆ ಎಂಬುದನ್ನು ಪರಿಶೀಲಿಸಿ ತೀರ್ಮಾನ ಕೈಗೊಳ್ಳಲಿದ್ದಾರೆ. ಒಳ್ಳೆಯ ರಾಜಕಾರಣಿ ಎಂದರೆ ಜನರ ಕಷ್ಟಗಳಿಗೆ ಸ್ಪಂದಿಸುವುದಾಗಿದೆ.

ಸಮರ್ಥ್ ಅವರು ತಮ್ಮ ತಾತನ ಕೆಲಸಗಳು,ಜನಸೇವೆ ನೋಡಿದ್ದಾರೆ. ಅಪ್ಪಾಜಿಯವರು ಆರು ಬಾರಿ ಆಯ್ಕೆಯಾದ ಅವಧಿಯಲ್ಲಿ ಮಾಡಿದ ಕೆಲಸಗಳನ್ನು ನೇರವಾಗಿ ನೋಡಿದ ಅನುಭವ ಸಮರ್ಥ್ ಅವರಿಗಿದೆ ಹಾಗೂ ಜನರೊಂದಿಗೆ ಉತ್ತಮ ಒಡನಾಟ ಹೊಂದಿದ್ದಾರೆ. ಸಮರ್ಥ್ ಪ್ರತಿಯೊಂದು ಮನೆಗೂ ಭೇಟಿ ನೀಡಿದಾಗ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಜನ ತಮ್ಮ ಸಮಸ್ಯೆಗಳನ್ನು ಸಮರ್ಥ್ ಎದುರಿಗೆ ಹೇಳಿಕೊಳ್ಳುತ್ತಿದ್ದಾರೆಂದರು. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಜನರು ಸಮರ್ಥ್ ಅವರನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸಿ ಎಂದು ಮನವಿ ಮಾಡಿದರು.

ನಂತರ ಕೆಬಿ ಬಡಾವಣೆಯ ದೀಕ್ಷಿತ್ ರಸ್ತೆಯಲ್ಲಿರುವ ಶ್ರೀ ಗುರು ರಾಘವೇಂದ್ರ ರಾಯರ ಮಠಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version