ಸಿನಿ ಸುದ್ದಿ
ಭೀಮ ಪರಂಬರೈ ಹಾಗೂ ಕಬಿಲನ್ ರಂಜಿತ್..!

- ಬಸವರಾಜು ಕಹಳೆ
“Float like a butterfly, sting like a bee”
– Muhammad Ali
“ಗಾಯಗೊಂಡಿದ್ದು ನಿನ್ನ ಮೈಯಷ್ಟೇ, ನಿನ್ನ ಮನಸ್ಸಲ್ಲ.”
“ಇಲ್ಲಿ ನಮ್ಮಂಥವರಿಗೆ ಅವಕಾಶ ಸುಲಭವಾಗಿ ಬರುವುದಿಲ್ಲ. ಈ ಆಟ ನಮ್ಮದು. ಎದುರು ಬರುವವನ ಚಡ್ಡಿ ಒದ್ದೆಯಾಗಬೇಕು. ಮುನ್ನುಗು ಕಬಿಲನ್ ಈ ಕಾಲ ನಮ್ಮದು”
ಇಂಥದ್ದೊಂದು ಡೈಲಾಗ್ ಕಿವಿಗೆ ಬೀಳುತ್ತಿರುವಾಗಲೇ ಸೀನ್ ಮಧ್ಯೆ ಬಾಬಾ ಸಾಹೇಬರ ಭಾವಚಿತ್ರ ಎದ್ದು ಕಾಣುತ್ತದೆ. ಹೀಗೆ ಸಿನಿಮಾದ ಉದ್ಧಕ್ಕೂ ಆಗೊಮ್ಮೆ ಈಗೊಮ್ಮೆ ಬುದ್ಧ, ಭೀಮರು ಎದ್ದು ಕಾಣುತ್ತಾರೆ.
ಕೊಳಗೇರಿಯ ಗುಡಿಸಲುಗಳ ಮಧ್ಯೆ ಬುದ್ಧನ ವಿಗ್ರಹದ ಪಕ್ಕದಲ್ಲೇ ಬಾಕ್ಸಿಂಗ್ ಪ್ರಾಕ್ಟೀಸ್ ಮಾಡುವ ಸನ್ನಿವೇಶ ವಿಶಿಷ್ಟ ಪ್ರತಿಮೆಯಂತೆ ಕಾಣುತ್ತದೆ. ನವ ವಧು ವರರ ಕೈಗೆ ಉಡುಗೊರೆಯಾಗಿ ಬುದ್ಧ, ಭೀಮರ ಫೋಟೋ ಕೊಡುವ ದೃಶ್ಯ ಎದೆಗೂಡಲ್ಲಿ ಸರಪಟಾಕಿ ಹಚ್ಚುತ್ತದೆ. ದ್ರಾವಿಡ ಸ್ವಾಭಿಮಾನದ ಕಪ್ಪು ಪತಾಕೆಯನ್ನು ಬಿಳಿ ಮುಗಿಲಿನಲ್ಲಿ ಹಾರಿಸಿದ ಪೆರಿಯಾರ್ ಕಂಡಾಗಲೂ ಹುಚ್ಚೆದ್ದು ಕುಣಿಯುವ ಉತ್ಸಾಹ ಮೂಡುತ್ತದೆ
ಅಣ್ಣ ಪಾ.ರಂಜಿತ್ ಸಿನಿಮಾ ಅನ್ನೋ ಬಾಕ್ಸಿಂಗ್ ರಿಂಗ್ನಲ್ಲಿ ಎದುರಾಳಿಗೆ ತಿಕ ಮಕ ನೋಡದೇ ಯಕ್ಕಾಮಕ್ಕಾ ಗುದ್ದಿ ಕೆಡವಿ ಭೀಮ ಪರಂಪರೆಯ ತಾಕತ್ತು ಎಂಥದ್ದು ಅನ್ನೋದನ್ನ ತೋರಿಸಿದ್ದಾರೆ. ಸರ್ಪಟ್ಟ ಪರಂಬರೈ ಸಿನಿಮಾ ನನ್ನ ಕಣ್ಣಿಗೆ ಒಂದೇ ಗುಕ್ಕಿನಲ್ಲಿ ಕಾಣಿಸಿದ್ದು ಹೀಗೆ. ಇಲ್ಲಿ ನನಗೆ ಕಂಡಿದ್ದು ಸರ್ಪಟ್ಟ ಅನ್ನೋ ನಾಲ್ಕು ಪಟ್ಟದ ಕತ್ತಿಗಳ ಕಥೆಯಲ್ಲ. ವರ್ಣಾಶ್ರಮದ ನಾಲ್ಕು ವರ್ಗಗಳ ಪೈಕಿ ಕೊನೆಯ ಶೂದ್ರ ಪರಂಪರೆ ಗೆದ್ದ, ಗೆಲ್ಲುತ್ತಿರುವ, ಗೆಲ್ಲಬೇಕಿರುವ ಕಥೆಯಂತೆ ಕಾಣುತ್ತದೆ.
ಕಬಿಲನ್ (ಆರ್ಯ) ನನಗೆ ಬರೀ ಪಾತ್ರದಂತೆ ಕಾಣುವುದಿಲ್ಲ. ಜಾತಕ ಕಥೆಗಳು ಹೇಳುವಂತೆ ಬುದ್ಧನ ಮತ್ತೊಂದು ಅವತಾರವೇ ಆದ ಕಪಿಲನೇ ಕಬಿಲನ್ ಅನಿಸುತ್ತದೆ. ಇಬ್ಬರೂ ನಿರೀಶ್ವರವಾದವನ್ನೇ ಸಾರಿದ್ದವರು. ಸಿನಿಮಾದಲ್ಲಿ ಕಬಿಲನ್ ಸಿದ್ಧಾರ್ಥನಂತೆಯೂ ಕಾಣುತ್ತಾನೆ. ಅಣ್ಣ ಪಾ.ರಂಜಿತ್ ಎಲ್ಲಾ ಸಿನಿಮಾಗೂ ಹಾಡುಗಳನ್ನು ಬರೆದುಕೊಟ್ಟ ಕವಿ ಕಬಿಲನ್ ಪ್ರೇರಣೆಯಿಂದ ಹುಟ್ಟಿದ ವ್ಯಕ್ತಿತ್ವದಂತೆ ಕಾಣುತ್ತದೆ. ಆರ್ಯನನ್ನು ಮೊದಲು ನೋಡಿದ್ದು ಆ್ಯಟ್ಲಿಯ ರಾಜರಾಣಿಯಲ್ಲೇ. ಆ ಬಳಿಕ ಮದರಾಸಿಪಟ್ಟಿನಂ ನೋಡಿದ್ದೇವೆ. ಈ ಎರಡೂ ಸಿನಿಮಾಗಳಿಗಿಂತಲೂ ಕಬಿಲನ್ ಆಗಿ ಜೀವ ತುಂಬುವ ಕೆಲಸ ಮಾಡಿದ್ದಾನೆ ಆರ್ಯ.
ಪಶುಪತಿ ರಂಗನ್ ವಾತಿಯರ್, ಬೀಡಿ ತಾತ, ವೆಂಬುಲಿ, ಡ್ಯಾಡಿ, ಡ್ಯಾನ್ಸಿಂಗ್ ರೋಸಿ ಈ ಎಲ್ಲಾ ಪಾತ್ರಗಳಿಗಿಂತಲೂ ಹೆಚ್ಚು ನನ್ನನ್ನು ಆಕರ್ಷಿಸಿದ್ದು ಎರಡೇ ಎರಡು ಪಾತ್ರ. ಆ ಪಾತ್ರಗಳೇ ಮರಿಯಮ್ಮ ಹಾಗೂ ಬಾಕ್ಯಮ್ಮ. ವಿಶೇಷ ಅಂದ್ರೆ 60 ಸೆಕೆಂಡ್ ಕಾಲ ಬಂದು ಹೋಗುವ ನಮ್ಮ ಕನ್ನಡಿಗ ಕಿಶೋರ್ಗಿಂತಲೂ ಮರಿಯಮ್ಮ ಹಾಗೂ ಭಾಕ್ಯಮ್ಮ ಪಾತ್ರಗಳು ಈ ಸರ್ಪಟ್ಟ ಪರಂಪರೆಯನ್ನು ಎಳೆದೊಯ್ದ ಸ್ವಾಭಿಮಾನದ ಸೀರೆಯುಟ್ಟ ಕುಸ್ತಿ ಪಟುಗಳಂತೆ ಕಾಣುತ್ತಾರೆ.
ಒಬ್ಬಳು ಪುಟ್ಟ ಮಗನೊಂದಿಗೆ ಗಂಡನನ್ನು ಉಳಿಸಿಕೊಳ್ಳೋದಕ್ಕೆ ಸಾಹಸಪಡುವ ಹೆಣ್ಣು ಹುಲಿಯಂತೆ ಕಾಣುತ್ತಾಳೆ. ಮತ್ತೊಬ್ಬಳು ಕುಡಿದು ಮಲಗಿದ ಗಂಡನನ್ನು ಕಾಪಾಡೋದಕ್ಕೆ ಹಸುಗೂಸಿನೊಂದಿಗೆ ಬಗೆದು ಹಾಕುವ ಬಾಣಂತಿ ಹುಲಿಯಂತೆ ಗೆಬರುತ್ತಾಳೆ, ಅಬ್ಬರಿಸುತ್ತಾಳೆ. ರಂಜಿತ್ ಅಣ್ಣನ ಸಿನಿಮಾಗಳಲ್ಲಿ ಇಂಥಾ ಪವರ್ಫುಲ್ ಪಾತ್ರಗಳು ಪ್ರತೀ ಸಿನಿಮಾದಲ್ಲೂ ನೋಡಬಹುದು. ಕಬಾಲಿಯ ಕುಮುದವಲ್ಲಿ, ಕಾಲಾನ ಸೆಲ್ವಿ, ಜರೀನಾರಿಗಿಂತಲೂ ಪವರ್ಫುಲ್ ಪಾತ್ರಗಳು ಮರಿಯಮ್ಮ ಹಾಗೂ ಬಾಕ್ಯಮ್ಮ. ಕಮ್ಮನೆಯ ಕಪ್ಪು ಸಂಸ್ಕೃತಿಯ ಸಣ್ಣ ತುಣುಕಿನಂತೆ ದುಷಾರ ವಿಜಯನ್ ಮರಿಯಮ್ಮನಾಗಿ ಕಾಣುತ್ತಾಳೆ.
“ಅವಕಾಶ ನಮಗಾಗಿ ಬರೋದಿಲ್ಲ. ಅವಕಾಶವನ್ನು ನಾವೇ ಹುಡುಕುತ್ತಾ ಹೋಗಬೇಕು. ಅದನ್ನು ಮನಸ್ಸಿನಲ್ಲಿ ಇಟ್ಟುಕೋ ಗೆಲುವು ನಿನ್ನದೇ. ಹೋಗಪ್ಪಾ ಹೋಗು” ಎನ್ನುವಾಗ ಬೀಡಿ ತಾತನ ಎದುರಿಗೆ ನಿಂತ ಕಬಿಲನ್ ಮಧ್ಯೆ ಮಹಾಸಮುದ್ರ ರಣಕೇಕೆ ಹಾಕುತ್ತಿರುತ್ತದೆ. ಕಡುಗತ್ತಲಿನಲ್ಲಿ ಟೈಟಲ್ ಕಾರ್ಡ್ನಲ್ಲಿ ಓಡುತ್ತಾ ಸಾಗುವ ನೆತ್ತರುಂಡ ಅಕ್ಷರಗಳು. ಅಲ್ಲಲ್ಲಿ ಕತ್ತಲ ಸೀರೆಯುಡಿಸಿ ತೆಗೆದ ಸೀನ್ಗಳು ಮತ್ತೊಮ್ಮೆ ಸರ್ಪಟ್ಟ ಪರಂಪರೆಯನ್ನು ನೋಡಬೇಕಿನಿಸುತ್ತದೆ.
My films are an extension of my ideology ಎನ್ನುವ ಪಾ. ರಂಜಿತ್ ಆಡಿದ ಮಾತಿನ ಪ್ರತೀ ಅಕ್ಷರ ಒಂದೊಂದು ಸೀನ್ನಲ್ಲಿ ಕಾಣುತ್ತದೆ. ಇಲ್ಲಿ ಐಡಿಯಾಲಜಿ ಅನ್ನೋ ದೊಡ್ಡ ಶಬ್ಧ ಅರ್ಥವಾಗದ ಮಂತ್ರದಂತೆ ಕೇಳಿಸೋದೂ ಇಲ್ಲ. ಕಾಣಿಸೋದೂ ಇಲ್ಲ. ಬದಲಿಗೆ ತಮಟೆಯ ಏಟಿನಂತೆ, ಜೇನ್ನೊಣದ ಕುಟುಕಿನಂತೆ ಅನುಭವಿಸಬಹುದು. ಮೊಲದ ಬಾಡು, ದನದ ಬಾಡು ತಿಂದಷ್ಟೇ ಖುಷಿಯಾಗುತ್ತದೆ.
ಬ್ರಿಟಿಷರು ಕಲಿಸಿ ಹೋದ ಬಾಕ್ಸಿಂಗ್ ನಲ್ಲಿ ಹೆಚ್ಚುಗಾರಿಕೆಯ ಪರಂಪರೆಗಾಗಿ ನಡೆಯುವ ಕಾದಾಟದ ಕಥೆ ಎಂದು ಸುಲಭಕ್ಕೆ ಹೇಳಬಹುದಾದ ಸಿನಿಮಾವನ್ನು ಎದೆಗಣ್ಣಿನಿಂದ ನೋಡಬೇಕಷ್ಟೇ. ರಂಗನ್ ವಾತಿಯರ್ ಹೇಳುವಂತೆ, “ನಿಮಗಿಂತ ಗಂಡ್ಸು ಇಲ್ಲಿ ಯಾರೂ ಇಲ್ಲ ಅನ್ನೋದನ್ನ ಸದಾ ತಲೆಯಲ್ಲಿ ಇಟ್ಟುಕೊಂಡಿರಬೇಕು”. ಎಂದಿನಂತೆ ಕ್ಯಾಮರಾ ವರ್ಕ್, ಮ್ಯೂಸಿಕ್ ಚೆನ್ನಾಗಿದೆ. ಕಿಶೋರ್ ಅವರನ್ನು ಇನ್ನೂ ಚೆನ್ನಾಗಿ ಬಳಸಿಕೊಳ್ಳಬಹುದಿತ್ತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮತ್ತೆ ತಾಯಿಯಾಗಬೇಕು : ನಟಿ ಸಮಂತಾ

ಸುದ್ದಿದಿನಡೆಸ್ಕ್:ಇತ್ತೀಚೆಗೆ ನಟಿ ಸಮಂತಾ ಅವರ ಕಮೆಂಟ್ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಆ ಹೇಳಿಕೆಗಳ ಮೇಲೆ ನಾನಾ ರೀತಿಯ ಅನುಮಾನಗಳೂ ವ್ಯಕ್ತವಾಗಿವೆ.
ಟಾಲಿವುಡ್ ಸ್ಟಾರ್ ಹೀರೋಯಿನ್ ಸಮಂತಾ ಬಗ್ಗೆ ವಿಶೇಷ ಪರಿಚಯ ಅಗತ್ಯವಿಲ್ಲ. ಸದ್ಯ ಸಮಂತಾ ಸತತ ಚಿತ್ರಗಳಲ್ಲಿ ಬ್ಯುಸಿಯಾಗಿರುವುದು ಗೊತ್ತೇ ಇದೆ. ಇತ್ತೀಚಿಗೆ ಸಮಂತಾ ಅವರ ವೆಬ್ ಸಿರೀಸ್ ವಿಚಾರಕ್ಕೆ ಸುದ್ದಿಯಾಗಿದ್ದರು. ನಟಿಯ ಇತ್ತೀಚಿನ ವೆಬ್ ಸಿರೀಸ್ ಸಿಟಾಡೆಲ್ ಸಖತ್ ಸುದ್ದಿಯಾಗಿದೆ. ಸದ್ಯ ಈ ವೆಬ್ ಸೀರೀಸ್ ಒಟಿಟಿಯಲ್ಲಿ ಸ್ಟ್ರೀಮ್ ಆಗುತ್ತಿದೆ ಎಂದು ತಿಳಿದುಬಂದಿದೆ. ಈ ವೆಬ್ ಸರಣಿಯ ಪ್ರಚಾರದ ವೇಳೆ ಮಾಡಿದ ಕಾಮೆಂಟ್ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಇದರ ಭಾಗವಾಗಿ ಸಮಂತಾ ರಾಜ್ ಮತ್ತು ಡಿಕೆ ಸಂದರ್ಶನವೊಂದರಲ್ಲಿ ಹೇಳಿದ್ದು ದಿ ಫ್ಯಾಮಿಲಿ ಮ್ಯಾನ್ 2 ಚಿತ್ರೀಕರಣದ ವೇಳೆ ನಾನು ಹಲವು ಭಾವನೆಗಳಿಗೆ ಒಳಗಾಗಿದ್ದೆ ಎಂದು ಸಮಂತಾ ಹೇಳಿದ್ದಾರೆ. ಅಲ್ಲದೇ ಅವರ ನಿರ್ದೇಶನದಲ್ಲಿ ನಟಿಸುವುದು ಕಷ್ಟ ಎಂದಿದ್ದಾರೆ. ನಂತರ ಅದೇ ಸಂದರ್ಶನದಲ್ಲಿ ನಟಿ ಬೇರೆ ವಿಚಾರವನ್ನೂ ಹೇಳಿದ್ದಾರೆ.
ಹನಿ ಬನ್ನಿ ವೆಬ್ ಸರಣಿಯಲ್ಲಿ ತಾಯಿ ಪಾತ್ರದ ಬಗ್ಗೆ ಮಾತನಾಡುತ್ತಾ, ಅವರು ಸಂವೇದನಾಶೀಲ ಕಾಮೆಂಟ್ಗಳನ್ನು ಮಾಡಿದ್ದಾರೆ. ನನಗೆ ತಾಯಿಯಾಗುವ ಕನಸು ಇದೆ. ನಾನು ತಾಯಿಯಾಗಲು ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ.
ಇದಕ್ಕಾಗಿ ತಡವಾಗಿದೆ ಎಂದು ಅವರು ಭಾವಿಸುವುದಿಲ್ಲ. ನಾನು ಜೀವನದಲ್ಲಿ ತುಂಬಾ ಖುಷಿಯಾಗಿದ್ದೇನೆ ಎಂದು ಸಮಂತಾ ಹೇಳಿದ ಮಾತುಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಆದರೆ ಸಮಂತಾ ಈ ಕಾಮೆಂಟ್ ಮಾಡಿದ ನಂತರ ಮತ್ತೊಮ್ಮೆ ಅವರ ಎರಡನೇ ಮದುವೆಯ ಸುದ್ದಿಗೆ ವೇಗ ಸಿಕ್ಕಿದೆ. ಈ ಹಿಂದೆ ರಾಜ್ ಹಾಗೂ ಡಿಕೆಶಿಯಲ್ಲಿ ರಾಜ್ ನನ್ನು ಪ್ರೀತಿಸುತ್ತಿದ್ದು, ಸದ್ಯದಲ್ಲೇ ಮದುವೆಯಾಗಲಿದ್ದಾರೆ ಎಂದು ಹೇಳಲಾಗಿತ್ತು.
ಆದರೆ ಇದೀಗ ಸಮಂತಾ ಎರಡನೇ ಮದುವೆಯ ಸುದ್ದಿ ಮುನ್ನೆಲೆಗೆ ಬಂದಿದ್ದು, ಮತ್ತೆ ತಾಯಿಯಾಗಬೇಕು ಎಂದು ಕಾಮೆಂಟ್ ಮಾಡಿದ್ದಾರೆ. ಇದರೊಂದಿಗೆ ರಾಜ್ ಎರಡನೇ ಮದುವೆಯಾಗಲಿದ್ದಾರೆ ಎಂಬ ಸುದ್ದಿಗೆ ವೇಗ ಸಿಕ್ಕಿದೆ. ಈ ಸುದ್ದಿಯಲ್ಲಿನ ಸತ್ಯಗಳ ಹೊರತಾಗಿ, ಈ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಹಾಟ್ ಟಾಪಿಕ್ ಆಗಿದೆ. ಈ ಸುದ್ದಿಗೆ ಸಮಂತಾ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ನೋಡೋಣ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಿಕ್ಕಾಬಟ್ಟೆ ಸಾಲ, ಸಾಲು ಸಾಲು ಚೆಕ್ಬೌನ್ಸ್ ಕೇಸ್ ; ನಿರ್ದೇಶಕ ಗುರುಪ್ರಸಾದ್ ಸಾವಿಗೆ ಕಾರಣವಾಯ್ತಾ..!?

ಸುದ್ದಿದಿನಡೆಸ್ಕ್:ಸ್ಯಾಂಡಲ್ವುಡ್ನ ಖ್ಯಾತ ನಿರ್ದೇಶಕ ʻಮಠʼ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.
ಗುರುಪ್ರಸಾದ್ ಮೇಲೆ ಸಾಲು ಸಾಲು ಚೆಕ್ಬೌನ್ಸ್ ಕೇಸ್ಗಳಿದ್ದವು. ಸಿಕ್ಕ ಸಿಕ್ಕವರ ಬಳಿ ಸಾಲ ಮಾಡಿಕೊಂಡಿದ್ದರು. ಶ್ರೀನಿವಾಸ್ ಗೌಡ ಎಂಬುವರ ಜೊತೆ ಹಣದ ವ್ಯವಹಾರಕ್ಕೆ ಕಿರಿಕ್ ಕೂಡ ಆಗಿತ್ತು. ಗುರುಪ್ರಸಾದ್ಗೆ ಅಭಿಮಾನಿಯಾಗಿದ್ದ ಶ್ರೀನಿವಾಸ್ ಗೌಡ 25 ಲಕ್ಷ ಹಣ ನೀಡಿದ್ದರು. ಗುರುಪ್ರಸಾದ್ ಬರವಣಿಗೆ ಮೆಚ್ಚಿ ಜೊತೆಯಲ್ಲೇ ಇದ್ದರು ಶ್ರೀನಿವಾಸ್ ಗೌಡ.
ಹಣ ವಾಪಸ್ ಕೊಡಲಾಗದೇ ಕಿರಿಕ್ ಮಾಡಿಕೊಂಡಿದ್ದರು ನಿರ್ದೇಶಕ ಗುರುಪ್ರಸಾದ್ ಅವರು. ಈ ಬಗ್ಗೆ ಕೋರ್ಟ್ ಮೆಟ್ಟಿಲೇರಿದ್ದ, ಗುರುಪ್ರಸಾದ್ ವಿರುದ್ದ ಕಾನೂನು ಸಮರ ಸಾರಿದ್ದರು. ಅಕ್ಟೋಬರ್ 24ರಂದು ಇದ್ದ ಕೋರ್ಟ್ವಿಚಾರಣೆಗೂ ಹಾಜರಾಗಿರಲಿಲ್ಲ ಗುರುಪ್ರಸಾದ್. ಮೆಡಿಕಲ್ ರಿಪೋರ್ಟ್ ನೀಡಿ ವಿಚಾರಣೆ ಮುಂದೂಡಿಸಿಕೊಂಡಿದ್ದರು.
ನಿನ್ನೆ ಅಂದರೆ ನವೆಂಬರ್ 2ಕ್ಕೆ ಗುರುಪ್ರಸಾದ್ ಹುಟ್ಟುಹಬ್ಬ ಇತ್ತು. ಶುಭಾಶಯ ಕೋರಲು ಕರೆಮಾಡಿದವರಿಗೂ ನಾಟ್ ರೀಚಬಲ್ ಬಂದಿತ್ತು ಮೊಬೈಲ್.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
‘ಮಠ’ ಸಿನೆಮಾ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ..!

ಸುದ್ದಿದಿನಡೆಸ್ಕ್:ಸ್ಯಾಂಡಲ್ವುಡ್ನ ಖ್ಯಾತ ನಿರ್ದೇಶಕ ʻಮಠʼ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.
52 ವರ್ಷದ ಕನಕಪುರ ಮೂಲದ ಗುರುಪ್ರಸಾದ್ ಇನ್ನಿಲ್ಲಾ.. ತುಮಕೂರು ರಸ್ತೆಯ ಅಪಾರ್ಟ್ಮೆಂಟ್ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಲದ ಸುಳಿಗೆ ಸಿಲುಕಿದ್ದ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಠ ಸಿನಿಮಾ ಮೂಲಕ ನಿರ್ದೇಶಕರಾಗಿ ಚಂದನವನಕ್ಕೆ ಪಾದಾರ್ಪಣೆ ಮಾಡಿದ್ದರು. ಮಠ, ಎದ್ದೇಳು ಮಂಜುನಾಥ್ ಚಿತ್ರದ ಮೂಲಕ ಮನೆಮಾತಾಗಿದ್ದರು.
ನಿರ್ದೇಶಕ ʻಮಠʼ ಗುರುಪ್ರಸಾದ್ ಅವರು ನವೆಂಬರ್ 02, 1972 ರಂದು ರಾಮನಗರದಲ್ಲಿ ಜನಿಸಿದ್ದರು, ಅಂದರೆ ನಿನ್ನೆ ನಿರ್ದೇಶಕ ಗುರುಪ್ರಸಾದ್ ಹುಟ್ಟುಹಬ್ಬ ಇತ್ತು, ನಿನ್ನೆ ಬರ್ತ್ ಡೇ ವಿಶ್ ಮಾಡಲು ಕರೆಮಾಡಿದವರಿಗೆ ನೋ ಆನ್ಸರ್ ಅಂತ ಬರುತ್ತಿತ್ತು, ನಿರ್ದೇಶಕ ಗುರುಪ್ರಸಾದ್ ಅವರ ಮೊಬೈಲ್ ನಾಟ್ ರೀಚಬಲ್ ಆಗಿತ್ತು, ಗುರುಪ್ರಸಾದ್ ತಮ್ಮ ಜನ್ಮದಿನಕ್ಕೆ ಮುನ್ನವೇ ಜೀವನಕ್ಕೆ ಅಂತ್ಯ ಹಾಡಿಕೊಂಡಿದ್ದಾರೆ. ಬರ್ತಡೇಗೂ ಮುನ್ನವೇ ಡೆತ್ ಡೇ ಮಾಡಿಕೊಂಡ ಗುರುಪ್ರಸಾದ್..!
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days ago
ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ | ಕೇಂದ್ರ ಕೊಡದಿದ್ದರೂ ರಾಜ್ಯ ಸರ್ಕಾರ ನೀಡಲಿದೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್
-
ದಿನದ ಸುದ್ದಿ7 days ago
ಏ.14ರಂದು ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನ ಶಂಕುಸ್ಥಾಪನೆ
-
ದಿನದ ಸುದ್ದಿ7 days ago
ದಾವಣಗೆರೆ | ಮಕ್ಕಳ ಬೇಸಿಗೆ ರಜೆಗೆ ಶುಭ ಕೋರಿದ ತಿಂಗಳ ಅಂಗಳ
-
ದಿನದ ಸುದ್ದಿ6 days ago
ದಾವಣಗೆರೆ | ಬಿ.ಎಸ್. ಚನ್ನಬಸಪ್ಪ ಪ್ರಥಮ ದರ್ಜೆ ಕಾಲೇಜು : ನೀಲಾನಹಳ್ಳಿಯಲ್ಲಿ ಎನ್.ಎಸ್.ಎಸ್ ಶಿಬಿರ
-
ದಿನದ ಸುದ್ದಿ7 days ago
ದಾವಣಗೆರೆ | ಏಪ್ರಿಲ್ 16, 17 ರಂದು ಸಿಇಟಿ ಪರೀಕ್ಷೆ : ಜಿಲ್ಲೆಯ 28 ಕೇಂದ್ರಗಳಲ್ಲಿ 12875 ವಿದ್ಯಾರ್ಥಿಗಳು
-
ದಿನದ ಸುದ್ದಿ6 days ago
ಜಾನಪದ ಆಚರಣೆಗಳಲ್ಲಿ ವೈಜ್ಞಾನಿಕತೆ ಅಡಗಿದೆ : ಪ್ರೊ. ಮೋನಿಕಾ ರಂಜನ್
-
ದಿನದ ಸುದ್ದಿ6 days ago
ಮುಂದಿನ 5 ದಿನ ಗುಡುಗು ಸಹಿತ ಮಳೆ ; ಹವಾಮಾನ ಇಲಾಖೆ ಮುನ್ಸೂಚನೆ
-
ಅಂಕಣ5 days ago
ಕವಿತೆ | ಇಷ್ಟಂತೂ ಹೇಳಬಲ್ಲೆ..!