ದಿನದ ಸುದ್ದಿ

ಮಾಯಕೊಂಡ | ಮಹಿಳಾ ಕಾಂಗ್ರೆಸ್ ಪಕ್ಷದ ಬಸವಾಪಟ್ಟಣ ಬ್ಲಾಕ್ ನ ಅಧ್ಯಕ್ಷರಾಗಿ ಎಂ.ಜಿ.ಶಶಿಕಲಾ ಮೂರ್ತಿ ನೇಮಕ

Published

on

ಸುದ್ದಿದಿನ,ದಾವಣಗೆರೆ : ಜಿಲ್ಲೆಯ, ಚನ್ನಗಿರಿ ತಾಲೂಕಿನ, ನಲ್ಕುದುರೆ ಗ್ರಾಮದ ಎಂ.ಜಿ.ಶಶಿಕಲಾ ಮೂರ್ತಿ ಅವರನ್ನು ಮಾಯಕೊಂಡ‌ ಕ್ಷೇತ್ರದ, ಬಸವಾ ಪಟ್ಟಣ ಬ್ಲಾಕ್ ನ ಅಧ್ಯಕ್ಷರಾಗಿ ನೇಮಕ‌ ಮಾಡಲಾಗಿದೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷರಾದ ಅನಿತಾಬಾಯಿ ಮಾಲತೇಶ ರಾವ್ ಅವರು ಪ್ರಕಟಣೆಯಲ್ಲಿ‌ ತಿಳಿಸಿದ್ದಾರೆ.

ಶಶಿಕಲಾ ಮೂರ್ತಿ ಅವರು ಕಾಂಗ್ರಸ್ ಪಕ್ಷಕ್ಕೆ ಸಲ್ಲಿಸುತ್ತಿರುವ ಸೇವೆಯನ್ನು ಪರಿಗಣಿಸಿ ಜಿಲ್ಲೆಯ ದಕ್ಷಿಣ ಕ್ಷೇತ್ರದ ಶಾಸಕರಾದ ಶಾಮನೂರು ಶಿವಶಂಕರಪ್ಪ , ಮಾಜಿ‌ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ ಮತ್ತು ಜಿಲ್ಲಾ ಕಾಂಗ್ರೆಸ್ ನ ಅಧ್ಯಕ್ಷ ರಾದ ಹೆಚ್.ಬಿ.ಮಂಜಪ್ಪ ಅವರ ಆದೇಶದ ಮೇರೆಗೆ ನೇಮಕ ಮಾಡಲಾಗಿದೆ ಎಂದಿದ್ದಾರೆ.

ಎಂ.ಜಿ. ಶಶಿಕಲಾಮೂರ್ತಿ ಅವರು ಆದೇಶ ಪ್ರತಿ ಸ್ವೀಕರಿಸುತ್ತಿರುವುದು

ಪಕ್ಷದ ಬಲವರ್ಧನೆಗೆ ಕ್ರಿಯಾಶೀಲ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ಕಾಂಗ್ರೆಸ್ ಪಕ್ಷವನ್ನು ಸದೃಢವಾಗಿ ಸ್ಥಳೀಯ ಮುಖಂಡರ ಸಹಯೋಗದೊಂದಿಗೆ ಪಕ್ಷವನ್ನು ಸಂಘಟಿಸಲು ಸೂಚಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version