Connect with us

ದಿನದ ಸುದ್ದಿ

ಶಿವಮೊಗ್ಗದ‌ ‘ಸೆಂಟ್ರಲ್ ಜೈಲ್’ ಬಗ್ಗೆ ನಿಮಗಿಷ್ಟು ತಿಳಿದಿರಲಿ..!

Published

on

ಶಿವಮೊಗ್ಗ ಜಿಲ್ಲಾ ಕೇಂದ್ರ ಕಾರಾಗೃಹ

 

  • ಸಂಧ್ಯಾ ಸಿಹಿಮೊಗೆ

ಒಂದೂವರೆ ಶತಮಾನಗಳ ಕಾಲ ಮಲೆನಾಡಿನಲ್ಲಿ ಸ್ವಾತಂತ್ರ್ಯ ಹೋರಾಟಗಾರರನ್ನು ಮತ್ತು ರೈತರನ್ನು ಕೊಡಿಟ್ಟು ಗೆಲ್ಲಿಗೇರಿಸಿದ ಐತಿಹಾಸಿಕ ಘಟನೆಗಳಿಗೆ ಸಾಕ್ಷಿಯಾಗಿದ್ದು ಶಿವಮೊಗ್ಗ ನಗರ ಜಿಲ್ಲಾ ಕೇಂದ್ರ ಕಾರಾಗೃಹವು ಈಗ ಶಾಶ್ವತವಾಗಿ ಇತಿಹಾಸ ಪುಟ ಸೇರಿದೆ.

ಜಿಲ್ಲಾ ಕೇಂದ್ರ ಕಾರಾಗೃಹ ಕಟ್ಟಡವು ಈಗಾಗಲೇ ನೂತನ ಕಟ್ಟಡಕ್ಕೆ ಸ್ಥಳಾಂತರಕೊಂಡಿದೆ. ಜಿಲ್ಲಾ ಕಾರಾಗೃಹವು ಕೇಂದ್ರ ಕಾರಾಗೃಹವಾಗಿ ಮೇಲ್ದರ್ಜೆಗೇರಿದ್ದು ರಾಜ್ಯದಲ್ಲಿ ಅತ್ಯುತ್ತಮ ವ್ಯವಸ್ಥೆಯನ್ನು ಒಳಗೊಂಡ ಕಾರಾಗೃಹ ಎನಿಸಿಕೊಂಡಿದೆ.

ನಗರದಿಂದ ಸುಮಾರು 15 ಕಿ.ಮೀ ದೂರದಲ್ಲಿ ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದ ಹಿಂಬದಿಯಲ್ಲಿ ಓತಿಘಟ್ಟದ ಬಳಿ 62.02 ಎಕರೆ ಪ್ರದೇಶದಲ್ಲಿ 83 ಕೋಟಿ ರೂ ವೆಚ್ಚದಲ್ಲಿ ದಕ್ಷಿಣ ಕೊರಿಯಾ ಮಾದರಿಯಲ್ಲಿ ಅತ್ಯಂತ ವಿಶಿಷ್ಟವಾಗಿ ಕಾರಾಗೃಹವನ್ನು ನಿರ್ಮಿಸಲಾಗಿದೆ. ಕಾರಾಗೃಹದಲ್ಲಿ ಸುಮಾರು 460 ಕೈದಿಗಳಿದ್ದಾರೆ.

ಕಣ್ಗಾವಲಿಗೆ ಎಂದೇ ಸಿ.ಸಿ. ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಹಾಗೂ ಕಟ್ಟಡದ ಮೇಲ್ಭಾಗದಲ್ಲಿ ವಿದ್ಯುತ್ ತಂತಿಗಳ ಅಳವಡಿಕೆ ಜೊತೆಗೆ ಬಂಧಿಖಾನೆಯಿಂದ ತಪ್ಪಿಸಿಕೊಳ್ಳುವುದಕ್ಕೆ ಪ್ರಯತ್ನಿಸಿದರೆ ಆಟೋಮ್ಯಾಟಿಕ್ ಸೈರನ್ ಹೊಡೆಯಲು ಆರಂಭಿಸುತ್ತದೆ.

ಕಾರಾಗೃಹದಲ್ಲಿ ಇರುವಂತಹ ಕೈದಿಗಳಿಗೆ ಗ್ರಂಥಾಲಯ ವ್ಯವಸ್ಥೆ ಹಾಗೂ ಊದುಬತ್ತಿ ತಯಾರಿಸುವ ಉದ್ಯೋಗ ಕಲ್ಪಿಸುವುದರ ಜೊತೆಗೆ ಅವರು ಮಾಡಿದ ಕೆಲಸಕ್ಕೆ ಇಂತಿಷ್ಟು ವೇತನವೆಂದು ನಿಗಧಿಪಡಿಸಿದೆ. ಬಂಧಿಖಾನೆಯಲ್ಲಿ ಇರುವ ಕೈದಿಗಳಿಗೆ ದಿನಕ್ಕೆ ಮೂರು ಹೊತ್ತು ಊಟದ ಜೊತೆಗೆ ವಾರದಲ್ಲಿ ಒಂದು ದಿನ ಮಾಂಸದೂಟವೂ ನೀಡಲಾಗುತ್ತದೆ. ಹಾಗೂ ಕೈದಿಗಳು 2,000 ರೂ. ನೀಡಿದರೆ ಟಿವಿ ಮತ್ತು 500 ರೂ. ನೀಡಿದರೆ ಕೇರಂ ಬೋರ್ಡ್ ಸೇರಿದಂತೆ ಅವರಿಗೆ ಇತರೆ ಮನರಂಜನಾ ಕಾರ್ಯಕ್ರಮಗಳನ್ನು ಒದಗಿಸಲಾಗುವುದು.

ಸಮಾಜದ ನಡುವೆ ಇರುವ ಕಂದಕ ಕಡಿಮೆ ಮಾಡುವ ಉದ್ದೇಶದಿಂದ ಇವರಿಗೆ ಶಿಕ್ಷೆ ನೀಡುವ ಬದಲು ಮನಃಪರಿವರ್ತನೆಗೆ ಹೆಚ್ಚು ಒತ್ತು ನೀಡಲಾಗಿದೆ. ಹೀಗಾಗಿ ಪ್ರತಿವಾರವೂ ಒಂದೊಂದು ಕಾರ್ಯಕ್ರಮ ಆಯೋಜಿಸಲಾಗಿದೆ. ಇಲ್ಲಿರುವ ಸಜಾಬಂದಿಗಳಲ್ಲಿ ಸಾಕಷ್ಟು ಜನ ಪ್ರತಿಭಾವಂತರಿದ್ದಾರೆ. ಎಸ್‍ಎಸ್‍ಎಲ್‍ಸಿಯಿಂದ ಪದವಿ ಓದಿದವರೂ ಇದ್ದಾರೆ. ಅವರಲ್ಲಿರುವ ಪ್ರತಿಭೆಯನ್ನು ಹೊರತರುವ ಉದ್ದೇಶದಿಂದ ನಾಟಕ, ಹಾಡುಗಾರಿಕೆ ಸೇರಿದಂತೆ ಶಿಕ್ಷಣ, ಕಲೆ, ಸಾಂಸ್ಕøತಿಕ ಕಾರ್ಯಕ್ರಗಳನ್ನು ನಡೆಸಲಾಗುತ್ತಿದೆ.

ಕಲರ್ಸ್ ಕನ್ನಡ ವಾಹಿನಿಯಲ್ಲಿ ನಟ ಪುನೀತ್ ರಾಜ್‍ಕುಮಾರ್ ನಡೆಸಿಕೊಡುವ ಕನ್ನಡದ ಕೋಟ್ಯಧಿಪತಿ ಮಾದರಿಯೆಲ್ಲೇ ಕಾರಾಗೃಹದ ಸಜಾಬಂದಿಗಳಿಗೆ “ಸಾವಿರ ರೂಪಾಯಿ ಸರದಾರ” ಎಂಬ ವಿನೂತನ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. ಈ ಕಾರ್ಯಕ್ರಮದ ಹಿನ್ನಲೆಯಲ್ಲಿ ಕಾರಾಗೃಹದ ಗ್ರಂಥಾಲಯಕ್ಕೆ ಭೇಟಿ ನೀಡುವ ಸಜಾಬಂದಿಗಳ ಸಂಖ್ಯೆ ಹೆಚ್ಚಾಗಿದೆ. ವಾರದಲ್ಲಿ ಸುಮಾರು ನಾಲಕೈದು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.
ಸಾಮಾನ್ಯವಾಗಿ ಜೈಲು ಎಂದರೆ ಸಜಾಬಂದಿಗಳು ಪಾಲಿನ ಸೆರಮನೆ. ಹೀಗಾಗಿ ತಪ್ಪು ಮಾಡಿ ಜೈಲು ಸೇರಿದವರಿಗೆ ಅಲ್ಲಿ ಶಿಕ್ಷೆ ತಪ್ಪಿದಲ್ಲ ಅನ್ನೋ ಮಾತುಗಳಿವೆ. ಆದರಿಂದ ಶಿವಮೊಗ್ಗದ ವಾರ್ತಾ ಮತ್ತು ಸಾವರ್ಜನಿಕ ಸಂಪರ್ಕ ಇಲಾಖೆಯು ಸಜಾಬಂದಿಗಳ ಮನಃಪರಿರ್ವತನೆ ಮಾಡುವ ನಿಟ್ಟಿನಲ್ಲಿ ಕಾರ್ಯಗಳನ್ನು ನಡೆಸುತ್ತಿದೆ.

ಶಿವಮೊಗ್ಗದ “ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ”ಯು ಕೇಂದ್ರ ಕಾರಾಗೃಹದ ಜೈಲು ನಿವಾಸಿಗಳಲ್ಲಿ ಜಾಗೃತಿಗಳ ಅರಿವು ಮೂಡಿಸುವ ನಿಟ್ಟಿನಲ್ಲಿ “ಬದಲಾದ ಬದುಕು”ಎಂಬ ಶೀರ್ಷಿಕೆಯಡಿಯಲ್ಲಿ ಬೀದಿನಾಟಕ ಹಾಗೂ ಜನಪದ ಗೀತೆಗಳ ವಿಶೇಷ ಕಾರ್ಯಕ್ರಮಗಳನ್ನು ಮಾಡುವುದರ ಮೂಲಕ ಅವರಲ್ಲಿ ಇರುವ ದ್ಷೇಷದ ಮನೋಭಾವನೆಯು ದೂರವಾಗುವಂತೆ ಮಾಡುವ ಕಾರ್ಯಗಳನ್ನು ಮಾಡುತ್ತಾ ಬಂದಿದ್ದು ಹೆಮ್ಮೆಯ ವಿಷಯವಾಗಿದೆ. ಈ ರೀತಿ ಕೈದಿಗಳ ಮನಃಪರಿವರ್ತನೆ ಮಾಡುವ ಕಾರ್ಯ ನಡೆಯಬೇಕಿದೆ.

ಹೀಗೆ ಪ್ರತಿಯೊಬ್ಬರ ಜೀವನದಲ್ಲಿಯೂ ಇಂತಹದೊಂದು ಅನುಭವದ ಪಾಠ ಎಲ್ಲರಿಗೂ ಆಗಿರುತ್ತದೆ. ಆ ಅನುಭವದಿಂದ ಕಲಿತ ಪಾಠ ಬಹಳಷ್ಟು ಇರುತ್ತದೆ. “ಅಪರಾಧಗಳ ವೈಭವೀಕರಣ ಬೇಡ, ಕಾನೂನಿನ ದುರುಪಯೋಗಕ್ಕೆ ಅವರಣ ಕೂಡದೇ ಕಾನೂನನ್ನು ಗೌರವಿಸುವ ಕೆಲಸ ಮಾಡಬೇಕು. ಇದೆಲ್ಲಕ್ಕೂ ಸಾರ್ವಜನಿಕ ಜಾಗ್ರತಿಯೂ ಬೇಕು. ಮಾನವ ಹಕ್ಕು ತಿಳಿಯಿರಿ, ಕರ್ತವ್ಯವನ್ನು ಪಾಲಿಸಿರಿ”. ಆಗ ಮಾತ್ರ ಸಮಾಜದಲ್ಲಿ ಒಬ್ಬ ಉತ್ತಮ ಮಾನುಷ್ಯನಾಗಿ ಬದುಕುವುದಕ್ಕೆ ಸ್ಯಾಧ್ಯವಾಗುವುದು.

ಪ್ರತಿಯೊಬ್ಬ ಮನುಷ್ಯ ಜೀವನದಲ್ಲಿ ಒಂದಲ್ಲ ಒಂದು ತಪ್ಪು ಮಾಡಿಯೇ ಇರುತ್ತಾನೆ. ಅವನು ಹುಟ್ಟುತ್ತ ಎಷ್ಟೇ ಒಳ್ಳೆಯವನಾದರೂ ಬೆಳೆಯುತ್ತಾ ಹೋದಂತೆ ಸುತ್ತ ಮುತ್ತಲ ಪರಿಸರ, ಸ್ನೇಹಿತರ ಬಳಗ ಬೀರುವ ಪರಿಣಾಮ ತಪ್ಪು ಮಾಡುವಂತೆ ಪ್ರೇರೆಪಿಸುತ್ತದೆ. ಆತ/ಆಕೆ ತನ್ನ ನಿಯಂತ್ರಣಕ್ಕೂ ಮೀರಿದ ಮನಸ್ಥಿತಿ ಹೊಂದುತ್ತಾರೆ. ಅದು ಒಳ್ಳೆಯದೋ ಅಥವಾ ಕೆಟ್ಟದೋ ಅರಿಯದಷ್ಟೂ ಕೆಲವೂಮ್ಮೆ ಮುಂದುವರೆಯುತ್ತಾರೆ. ಒಮ್ಮೆ ಅದು ತಪ್ಪೆಂದು ತಿಳಿದರೆ ತಿದ್ದಿಕೊಳ್ಳುವ ಜಾಣರು ಹಲವರಾದರೆ ಆ ತಪ್ಪು ದಾರಿಯೇ ಒಳ್ಳೆಯದೆಂದು ಆರಿಸಿಕೊಳ್ಳುವವರು ಕೆಲವರು ಆದರಿಂದಲೇ ಬುದ್ಧಿ ಕಲಿಯುವವರು ಹಲವರು.

ಸ್ವಾರ್ಥಕ್ಕಾಗಿ ಸಮಾಜವನ್ನು ಬಲಿಕೊಡುವ ಕೆಲಸ ಬೇಡ…! ಯುವಕರು ಸಮಾಜದಲ್ಲಿ ತೆಲೆ ಎತ್ತಿ ನಡೆಯುವ ಸತ್ಕಾರ್ಯಗಳ ಮೂಲಕ ಮಾರ್ಗದರ್ಶಿ ಜೀವನ ವಿಧಾನಗಳನ್ನು ಅಳವಡಿಸಿಕೊಂಡು ಬದುಕುವ ಮಾರ್ಗವನ್ನು ರೂಪಿಸಿಕೊಳ್ಳಬೇಕು. ಆಗ ಮಾತ್ರ ಸಮಾಜದಲ್ಲಿ ಒಳ್ಳೆ ಹೆಸರು ಪಡೆದುಕೊಳ್ಳುವುಕ್ಕೆ ಹಾಗೂ ಬದುಕನ್ನು ನಡೆಸುವುದಕ್ಕೆ ಸಾಧ್ಯವಾಗುತ್ತದೆ. ಇಲ್ಲವಾದರೆ ಸಮಾಜ ನಮ್ಮನ್ನು ನೋಡುವ ದೃಷ್ಠಿಕೋನವೇ ಬದಲಾಗುತ್ತದೆ.

ಅಪರಾಧಿಗಳ ಮನಪರಿವರ್ತನೆ: ದ್ವೇಷ-ಉದ್ರೇಕ ಭಾವನೆಗಳನ್ನು ನಾಶಪಡಿಸಿ ಅಪರಾಧಿಗಳ ಮನಪರಿವರ್ತನೆ ಮಾಡುವುದರ ಮೂಲಕ ಸಮಾಜದಲ್ಲಿ ಮೊದಲಿನ ಸ್ಥಿತಿಯನ್ನು ಏರ್ಪಡಿಸುವುದಕೋಸ್ಕರ ಕ್ಷಮಾದಾನವನ್ನು ನೀಡುವ ಸಂಪ್ರದಾಯ ಎಲ್ಲಾ ಕಡೆಗಳಲ್ಲೂ ಆಚರಣೆಯಲ್ಲಿವೆ.

ಕೃಪೆ : ಶಿವಮೊಗ್ಗ ವಾರ್ತಾಭವನ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಮಹಿಳೆಗೆ ಮೀಸಲಾತಿ ಬೇಡ, ಸಮಾನ ಪ್ರಾತಿನಿಧ್ಯ ಕೊಡಿ : ಡಾ.ಜ್ಯೋತಿ ಟಿ.ಬಿ

Published

on

ಸುದ್ದಿದಿನ, ಚನ್ನಗಿರಿ (ಬಸವಾಪಟ್ಟಣ) : ಭಾರತೀಯ ಸಮಾಜದಲ್ಲಿ ಮೀಸಲಾತಿಯಿಂದ ಮಾತ್ರ ಮಹಿಳಾ ಪ್ರಗತಿ ಸಾಧ್ಯವಿಲ್ಲ. ಅವಳಿಗೆ ಪುರುಷನಂತೆ ಸಮಾನವಾದ ಪ್ರಾತಿನಿಧ್ಯ ನೀಡಿದಲ್ಲಿ‌ ಮಾತ್ರವೇ ಮಹಿಳಾ ಪ್ರಗತಿ ಸಾಧ್ಯ. ಆಗ ಮಾತ್ರವೇ ಸದೃಢವಾದ ಭಾರತ ನಿರ್ಮಾಣವಾಗಲು ಸಾಧ್ಯ ಎಂದು ಸಂತೆಬೆನ್ನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕಿ ಡಾ.ಜ್ಯೋತಿಯವರು ಅಭಿಪ್ರಾಯ ವ್ಯಕ್ತಪಡಿಸಿದರು.

ಜನತಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ‌ಲ್ಲಿ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಐಕ್ಯತ ಸಪ್ತಾಹದ ಅಡಿಯಲ್ಲಿ ‘ಭಾರತೀಯ ಸಮಾಜ ಹಾಗೂ ರಾಷ್ಟ್ರದ ಪ್ರಗತಿಯಲ್ಲಿ ಮಹಿಳೆಯರ ಪ್ರಾಮುಖ್ಯತೆ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದ ಅವರು, ಮಹಿಳೆಗೆ ಎಲ್ಲಿಯವರೆಗೆ ಮುಕ್ತವಾದ ಪ್ರಾತಿನಿಧ್ಯ ಲಭಿಸುವುದಿಲ್ಲವೋ ಅಲ್ಲಿಯವರೆಗೆ ಎಷ್ಟೇ ಕಾಯ್ದೆ, ಕಾನೂನುಗಳು ಜಾರಿಯಾದರೂ ಮಹಿಳೆಯರ ಬದುಕಿನಲ್ಲಿ ಸಮಗ್ರ ಬದಲಾವಣೆ ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಪ್ರಾಂಶುಪಾಲರಾದ ಡಾ.ಎಂ.ಆರ್. ಲೋಕೇಶ್ ಅವರು ಮಾತನಾಡಿ ಭಾರತೀಯ ಸಮಾಜದಲ್ಲಿ ಹೆಣ್ಣು ಸ್ವಾಭಿಮಾನದ ಬದುಕನ್ನು ಕಟ್ಟಿಕೊಳ್ಳುವುದು ಕೇವಲ ಆರ್ಥಿಕತೆಯಿಂದ ಸಾಧ್ಯವಿಲ್ಲ ಎಂದರು.

ನೈತಿಕತೆ, ಸಂಸ್ಕಾರವು ಕೂಡ ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ. ಹೀಗಾಗಿಯೇ ಶರಣರು ಗಂಡು-ಹೆಣ್ಣು ಎಂಬ ಬೇಧವನ್ನು ಮೆಟ್ಟಿ ನಿಂತು ‘ಒಳಗೆ ಸುಳಿವ ಆತ್ಮ ಹೆಣ್ಣು ಅಲ್ಲ, ಗಂಡು ಅಲ್ಲ’ ಎಂಬ ತಾತ್ವಿಕತೆಯ ಮೂಲಕ ಸರ್ವರನ್ನು ಸಮಾನವಾಗಿ ಕಾಣುವಂತಹ ಸಮಾಜಕ್ಕಾಗಿ ಶ್ರಮಿಸಿದರು. ಭಾರತದ ನೆಲದಲ್ಲಿ ಶರಣರು, ದಾರ್ಶನಿಕರು ರೂಪಿಸಿಕೊಟ್ಟ ಮಾರ್ಗದಲ್ಲಿ ನಡೆದು ಇಂದಿನ ಮಹಿಳೆಯರು ಸಬಲರಾಗಬೇಕು ಎಂಬುದಾಗಿ ತಿಳಿಸಿದರು.

ಸಮಾಜಶಾಸ್ತ್ರದ ಮುಖ್ಯಸ್ಥರಾದ ಡಾ.ಎ.ಡಿ.ಬಸವರಾಜ್ ಅವರು ಪ್ರಾಸ್ತವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಬೋಧಕರಾದ ಹನುಮಂತಪ್ಪ, ಪ್ರಕಾಶ್, ಮಧುಸೂಧನ್, ರೆಹಮತ್ಬಿ, ಸಂದೀಪ್ ಮುಂತಾದವರು ಹಾಜರಿದ್ದರು. ಕಾರ್ಯಕ್ರಮವನ್ನು ಗೋವಿಂದರೆಡ್ಡಿ ಅವರು ನಿರೂಪಿಸಿದರು. ವಿದ್ಯಾರ್ಥಿನಿ ಸೌಂದರ್ಯ ಸ್ವಾಗತಿಸಿದರು, ಯಶೋಧ, ಸಹನಾ ಪ್ರಾರ್ಥಿಸಿದರು, ರಕ್ಷಿತ ವಂದಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭಾರತೀಯರೆಲ್ಲರ ಪವಿತ್ರಗ್ರಂಥ ಭಾರತದ ಸಂವಿಧಾನ : ಡಾ.ಕೆ.ಎ.ಓಬಳೇಶ್

Published

on

ಸುದ್ದಿದಿನ,ದಾವಣಗೆರೆ : ಸಂವಿಧಾನ ಪೂರ್ವದ ಭಾರತದ ಸ್ಥಿತಿಗತಿ ಹಾಗೂ ಸಂವಿಧಾನದ ನಂತರ ಭಾರತದಲ್ಲಾದ ಸಾಮಾಜಿಕ, ಧಾರ್ಮಿಕ ಹಾಗೂ ರಾಜಕೀಯ ಬದಲಾವಣೆಗ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಹಾಗೆಯೇ ಸಂವಿಧಾನ ರಚನೆ ಮಾಡುವ ಸಮಯದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಮುಂದಿದ್ದ ಬಿಕ್ಕಟ್ಟುಗಳನ್ನು ಏಕಾಂತಗಿರಿ ಟ್ರಸ್ಟ್ ನ ಕಾರ್ಯದರ್ಶಿ ಡಾ.ಕೆ.ಎ.ಓಬಳೇಶ್ ಅವರು ತಿಳಿಸಿಕೊಟ್ಟರು.

ನಗರದ ಪ್ರೇರಣ ಮಕ್ಕಳ ಆರೈಕೆ ಕೇಂದ್ರದಲ್ಲಿ ವಿ.ಬಿ.ಪಿ ಫೌಂಡೇಷನ್ ಹಾಗೂ ಏಕಾಂತಗಿರಿ ಟ್ರಸ್ಟ್ ಇವರ ಸಂಯುಕ್ತಾಶ್ರಯದಲ್ಲಿ ಸಂವಿಧಾನ ದಿನಾಚರಣೆಯನ್ನು ಭಾನುವಾರ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ದೇವನಗರಿ ಸುದ್ಧಿದಿನ ಪತ್ರಿಕೆಯ ಸಂಪಾದಕರಾದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದು, ವಿದ್ಯಾರ್ಥಿಗಳಿಗೆ ಭಾರತದ ಸಂವಿಧಾನದ ಕಳಶದಂತಿರುವ ಸಂವಿಧಾ‌ನ ಪೀಠಿಕೆಯ ಮಹತ್ವವನ್ನು ಪರಿಚಯಿಸುವ ಮೂಲಕ ಸಂವಿಧಾ‌ನ‌ ಪೀಠಿಕೆಯನ್ನು ಬೋಧಿಸಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸ್ಕೈ ಲೈನ್ ಸಂಸ್ಥೆಯ ಸಂಸ್ಥಾಪಕರಾದ ಬಾಲಚಂದ್ರ ಅವರು ಸಂವಿಧಾನ ಇರುವ ಕಾಲದಲ್ಲಿಯೇ ದಲಿತರು, ದಮನಿತರು ಹಾಗೂ ಮಹಿಳೆಯರ ಸ್ಥಿತಿಯು ಅತ್ಯಂತ ಶೋಚನೀಯವಾಗಿದೆ. ಆದರೆ ಸಂವಿಧಾ‌ನವಿಲ್ಲದ ಭಾರತವನ್ನು ನಾವು ಊಹಿಸಿಕೊಳ್ಳುವುದು ಕಷ್ಟ ಸಾಧ್ಯ ಎಂಬುದಾಗಿ ತಿಳಿಸಿದರು.

ಪ್ರೇರಣ ಆರೈಕೆ ಕೇಂದ್ರದ ಶಿಕ್ಷಕರಾದ ಕುಮಾರ್ ಅವರು ಮಾತನಾಡಿ, ಸರ್ವರನ್ನು ಸಮಾನವಾಗಿ ಕಾಣುವ ಸಂವಿಧಾನವು ನಮ್ಮೆಲ್ಲರ ಪವಿತ್ರ ಗ್ರಂಥ ಎಂಬುದಾಗಿ ತಿಳಿಸಿದರು. ಕುಮಾರಿ ಪೂಜಾ ಅವರು ಅತಿಥಿಗಳನ್ನು ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಪ್ರೇರಣ ಸಂಸ್ಥೆಯ ಮಕ್ಕಳು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸರ್ಕಾರಕ್ಕೆ ಸೆಡ್ಡು ಹೊಡೆದ ದಾವಣಗೆರೆ ರೈತರು

Published

on

  • ಪುರಂದರ್ ಲೋಕಿಕೆರೆ

ಸುದ್ದಿದಿನ, ದಾವಣಗೆರೆ : ಸರ್ಕಾರದ ಭದ್ರಾ ಅಚ್ಚುಕಟ್ಟು ಪ್ರದೇಶದ ನೀರಾವರಿ ಇಲಾಖೆಯ ಚಿತಾವಣೆಗೆ ಸೆಡ್ಡು ಹೊಡೆದು ಕೇವಲ 110-120 ದಿನಗಳ ಒಳಗಾಗಿಅಲ್ಪಾವಧಿ ತಳಿ ನಾಟಿ ಮಾಡಿ ಯಶಸ್ವಿಯಾಗಿ ಕಾಲುವೆ ನೀರು ಬಳಸಿಕೊಂಡು ಭತ್ತ ಬೆಳೆಯುವ ಮೂಲಕ ಮಾದರಿಯಾಗಿದ್ದಾರೆ ದಾವಣಗೆರೆ ಭಾಗದ ರೈತರು.

ಬೇಸಿಗೆ ಕಾಲದಲ್ಲಿ ನಮಗೆ ತೋಟಗಳಿಗೆ ನೀರು ಹರಿಸಲು ಆನ್ ಆಪ್ ಪದ್ದತಿ ಮಾಡಿ ಎಂದು ಒತ್ತಡ ಹಾಕಿದ ಶಿವಮೊಗ್ಗ ಜಿಲ್ಲೆಯ ಅಡಿಕೆ ದಣಿಗಳಿಗೇ ಮುಖಕ್ಕೆ ಹೊಡೆದಂತೆ ಭತ್ತ ಬೆಳೆದು ತೋರಿಸಿರುವುದು ಶ್ಲಾಘನೀಯ.

100 ದಿನಗಳು ನೀರು ಹರಿಸಲು ಆದೇಶ ಹೊರಡಿಸಿ ರೈತರೆಲ್ಲ ನಾಟಿ ಮಾಡಿದ ಮೇಲೆ ಎಂದೂ ಗದ್ದೆ ನೀರು ಕಟ್ಟದ ಐಷಾರಾಮೀ ರಾಜಕಾರಣಿ ಪುತ್ರ ರತ್ನ ಸಚಿವ ಮಧು ಬಂಗಾರಪ್ಪ ಅಡಿಕೆ ತೋಟದ ರೈತರಿಗೆ ಮನ ಸೋತವರು.

ಕಲ್ಲು ಬಂಡೆ ಹೊಡೆದು ಭರ್ಜರಿ ಜೀವನ ಸಾಗಿಸುವ ಸಂಪನ್ಮೂಲ ಸಚಿವ, ಉಸ್ತುವಾರಿ ಸಚಿವರ ನಿರ್ಲಕ್ಷ್ಯ ಬೇಸತ್ತ ರೈತ ರಸ್ತೆ ತಡೆದು ನೀರು ಕೊಡಿ ಎಂದು ಹೋರಾಟ ಮಾಡಿದರೂ ಕಿವಿ ಕೇಳೋಲ್ಲ ಎಂಬಂತೆ ವರ್ತಿಸಿದೆ ಆಡಳಿತ ಯಂತ್ರ.

ಆದರೆ ಈ ನಡುವೆ ಎರಡು ಭಾರಿ ಪ್ರಕೃತಿ ವರದಾನ ದಿಂದ ಭತ್ತ ಬೆಳೆಯುವ ಮೂಲಕ ಅನ್ನನೀಡುವ ರೈತ ಭತ್ತ ಬೆಳೆದು ಬಿಟ್ಟ. ಈ ಮೂರು ತಿಂಗಳ ಭತ್ತಕ್ಕೆ ನೀರು ಬಿಡುವುದು ಎಷ್ಟು ತ್ರಾಸದಾಯಕ. ಸರ್ಕಾರಗಳು ಯಾರು ಪರ ಎಂದು ಬೆತ್ತಲೆ ತೋರಿಸಿಕೊಂಡಿವೆ.

ಈಗಲಾದರೂ ಕಾಲ ಮಿಂಚಿಲ್ಲ ಕಟಾವು ಮಾಡಿದ ಭತ್ತ ಒಳ್ಳೆಯ ಗುಣಮಟ್ಟದ್ದು ಆಗಿದೆ.3000-3500 ರೂಂ ದರ ನಿಗದಿ ಮಾಡಿದರೆ ರೈತ ಸಾಲಶೂಲದಿಂದಮುಕ್ತಿ ಆಗಬಹುದು. ಭದ್ರಾ ನೀರು ಬೇಸಿಗೆ ಕಾಲದಲ್ಲಿ ಕೊಡುವುದೇ ಇಲ್ಲ ಎಂದು ಹೇಳಿರುವುದು ರೈತ ವಿರೋಧಿ ನೀತಿ.

ಗುಂಡುರಾವ್ ಕಾಲಾವಧಿಯಲ್ಲಿ 158ಅಡಿ ನೀರಿದ್ದರೂ ಭದ್ರಾ ನೀರು ಹರಿಸಲಾಗಿರುವ ದಾಖಲೆ ಇದೆ. ಕಡೆ ಪಕ್ಷ ಈ ಭಾರಿಯ ಭತ್ಖಕ್ಕೆ ವೈಜ್ಞಾನಿಕ ಬೆಲೆ ನಿಗದಿ ಮಾಡಿ, ಇಲ್ಲವೇ ಯಾವ ರೈತರ ಬಳಿ ಭತ್ತ ಖರೀದಿ ನಿಲ್ಲಿಸಿ. ರೈತರೇ ಸ್ವಂತ ಮಾರುಕಟ್ಟೆ ಹುಡುಕಿಕೊಳ್ಳುವ ಪ್ರಯತ್ನ ಮಾಡಲಿ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending