ದಿನದ ಸುದ್ದಿ
ಶಿವಮೊಗ್ಗದ ‘ಸೆಂಟ್ರಲ್ ಜೈಲ್’ ಬಗ್ಗೆ ನಿಮಗಿಷ್ಟು ತಿಳಿದಿರಲಿ..!
- ಸಂಧ್ಯಾ ಸಿಹಿಮೊಗೆ
ಒಂದೂವರೆ ಶತಮಾನಗಳ ಕಾಲ ಮಲೆನಾಡಿನಲ್ಲಿ ಸ್ವಾತಂತ್ರ್ಯ ಹೋರಾಟಗಾರರನ್ನು ಮತ್ತು ರೈತರನ್ನು ಕೊಡಿಟ್ಟು ಗೆಲ್ಲಿಗೇರಿಸಿದ ಐತಿಹಾಸಿಕ ಘಟನೆಗಳಿಗೆ ಸಾಕ್ಷಿಯಾಗಿದ್ದು ಶಿವಮೊಗ್ಗ ನಗರ ಜಿಲ್ಲಾ ಕೇಂದ್ರ ಕಾರಾಗೃಹವು ಈಗ ಶಾಶ್ವತವಾಗಿ ಇತಿಹಾಸ ಪುಟ ಸೇರಿದೆ.
ಜಿಲ್ಲಾ ಕೇಂದ್ರ ಕಾರಾಗೃಹ ಕಟ್ಟಡವು ಈಗಾಗಲೇ ನೂತನ ಕಟ್ಟಡಕ್ಕೆ ಸ್ಥಳಾಂತರಕೊಂಡಿದೆ. ಜಿಲ್ಲಾ ಕಾರಾಗೃಹವು ಕೇಂದ್ರ ಕಾರಾಗೃಹವಾಗಿ ಮೇಲ್ದರ್ಜೆಗೇರಿದ್ದು ರಾಜ್ಯದಲ್ಲಿ ಅತ್ಯುತ್ತಮ ವ್ಯವಸ್ಥೆಯನ್ನು ಒಳಗೊಂಡ ಕಾರಾಗೃಹ ಎನಿಸಿಕೊಂಡಿದೆ.
ನಗರದಿಂದ ಸುಮಾರು 15 ಕಿ.ಮೀ ದೂರದಲ್ಲಿ ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದ ಹಿಂಬದಿಯಲ್ಲಿ ಓತಿಘಟ್ಟದ ಬಳಿ 62.02 ಎಕರೆ ಪ್ರದೇಶದಲ್ಲಿ 83 ಕೋಟಿ ರೂ ವೆಚ್ಚದಲ್ಲಿ ದಕ್ಷಿಣ ಕೊರಿಯಾ ಮಾದರಿಯಲ್ಲಿ ಅತ್ಯಂತ ವಿಶಿಷ್ಟವಾಗಿ ಕಾರಾಗೃಹವನ್ನು ನಿರ್ಮಿಸಲಾಗಿದೆ. ಕಾರಾಗೃಹದಲ್ಲಿ ಸುಮಾರು 460 ಕೈದಿಗಳಿದ್ದಾರೆ.
ಕಣ್ಗಾವಲಿಗೆ ಎಂದೇ ಸಿ.ಸಿ. ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಹಾಗೂ ಕಟ್ಟಡದ ಮೇಲ್ಭಾಗದಲ್ಲಿ ವಿದ್ಯುತ್ ತಂತಿಗಳ ಅಳವಡಿಕೆ ಜೊತೆಗೆ ಬಂಧಿಖಾನೆಯಿಂದ ತಪ್ಪಿಸಿಕೊಳ್ಳುವುದಕ್ಕೆ ಪ್ರಯತ್ನಿಸಿದರೆ ಆಟೋಮ್ಯಾಟಿಕ್ ಸೈರನ್ ಹೊಡೆಯಲು ಆರಂಭಿಸುತ್ತದೆ.
ಕಾರಾಗೃಹದಲ್ಲಿ ಇರುವಂತಹ ಕೈದಿಗಳಿಗೆ ಗ್ರಂಥಾಲಯ ವ್ಯವಸ್ಥೆ ಹಾಗೂ ಊದುಬತ್ತಿ ತಯಾರಿಸುವ ಉದ್ಯೋಗ ಕಲ್ಪಿಸುವುದರ ಜೊತೆಗೆ ಅವರು ಮಾಡಿದ ಕೆಲಸಕ್ಕೆ ಇಂತಿಷ್ಟು ವೇತನವೆಂದು ನಿಗಧಿಪಡಿಸಿದೆ. ಬಂಧಿಖಾನೆಯಲ್ಲಿ ಇರುವ ಕೈದಿಗಳಿಗೆ ದಿನಕ್ಕೆ ಮೂರು ಹೊತ್ತು ಊಟದ ಜೊತೆಗೆ ವಾರದಲ್ಲಿ ಒಂದು ದಿನ ಮಾಂಸದೂಟವೂ ನೀಡಲಾಗುತ್ತದೆ. ಹಾಗೂ ಕೈದಿಗಳು 2,000 ರೂ. ನೀಡಿದರೆ ಟಿವಿ ಮತ್ತು 500 ರೂ. ನೀಡಿದರೆ ಕೇರಂ ಬೋರ್ಡ್ ಸೇರಿದಂತೆ ಅವರಿಗೆ ಇತರೆ ಮನರಂಜನಾ ಕಾರ್ಯಕ್ರಮಗಳನ್ನು ಒದಗಿಸಲಾಗುವುದು.
ಸಮಾಜದ ನಡುವೆ ಇರುವ ಕಂದಕ ಕಡಿಮೆ ಮಾಡುವ ಉದ್ದೇಶದಿಂದ ಇವರಿಗೆ ಶಿಕ್ಷೆ ನೀಡುವ ಬದಲು ಮನಃಪರಿವರ್ತನೆಗೆ ಹೆಚ್ಚು ಒತ್ತು ನೀಡಲಾಗಿದೆ. ಹೀಗಾಗಿ ಪ್ರತಿವಾರವೂ ಒಂದೊಂದು ಕಾರ್ಯಕ್ರಮ ಆಯೋಜಿಸಲಾಗಿದೆ. ಇಲ್ಲಿರುವ ಸಜಾಬಂದಿಗಳಲ್ಲಿ ಸಾಕಷ್ಟು ಜನ ಪ್ರತಿಭಾವಂತರಿದ್ದಾರೆ. ಎಸ್ಎಸ್ಎಲ್ಸಿಯಿಂದ ಪದವಿ ಓದಿದವರೂ ಇದ್ದಾರೆ. ಅವರಲ್ಲಿರುವ ಪ್ರತಿಭೆಯನ್ನು ಹೊರತರುವ ಉದ್ದೇಶದಿಂದ ನಾಟಕ, ಹಾಡುಗಾರಿಕೆ ಸೇರಿದಂತೆ ಶಿಕ್ಷಣ, ಕಲೆ, ಸಾಂಸ್ಕøತಿಕ ಕಾರ್ಯಕ್ರಗಳನ್ನು ನಡೆಸಲಾಗುತ್ತಿದೆ.
ಕಲರ್ಸ್ ಕನ್ನಡ ವಾಹಿನಿಯಲ್ಲಿ ನಟ ಪುನೀತ್ ರಾಜ್ಕುಮಾರ್ ನಡೆಸಿಕೊಡುವ ಕನ್ನಡದ ಕೋಟ್ಯಧಿಪತಿ ಮಾದರಿಯೆಲ್ಲೇ ಕಾರಾಗೃಹದ ಸಜಾಬಂದಿಗಳಿಗೆ “ಸಾವಿರ ರೂಪಾಯಿ ಸರದಾರ” ಎಂಬ ವಿನೂತನ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. ಈ ಕಾರ್ಯಕ್ರಮದ ಹಿನ್ನಲೆಯಲ್ಲಿ ಕಾರಾಗೃಹದ ಗ್ರಂಥಾಲಯಕ್ಕೆ ಭೇಟಿ ನೀಡುವ ಸಜಾಬಂದಿಗಳ ಸಂಖ್ಯೆ ಹೆಚ್ಚಾಗಿದೆ. ವಾರದಲ್ಲಿ ಸುಮಾರು ನಾಲಕೈದು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.
ಸಾಮಾನ್ಯವಾಗಿ ಜೈಲು ಎಂದರೆ ಸಜಾಬಂದಿಗಳು ಪಾಲಿನ ಸೆರಮನೆ. ಹೀಗಾಗಿ ತಪ್ಪು ಮಾಡಿ ಜೈಲು ಸೇರಿದವರಿಗೆ ಅಲ್ಲಿ ಶಿಕ್ಷೆ ತಪ್ಪಿದಲ್ಲ ಅನ್ನೋ ಮಾತುಗಳಿವೆ. ಆದರಿಂದ ಶಿವಮೊಗ್ಗದ ವಾರ್ತಾ ಮತ್ತು ಸಾವರ್ಜನಿಕ ಸಂಪರ್ಕ ಇಲಾಖೆಯು ಸಜಾಬಂದಿಗಳ ಮನಃಪರಿರ್ವತನೆ ಮಾಡುವ ನಿಟ್ಟಿನಲ್ಲಿ ಕಾರ್ಯಗಳನ್ನು ನಡೆಸುತ್ತಿದೆ.
ಶಿವಮೊಗ್ಗದ “ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ”ಯು ಕೇಂದ್ರ ಕಾರಾಗೃಹದ ಜೈಲು ನಿವಾಸಿಗಳಲ್ಲಿ ಜಾಗೃತಿಗಳ ಅರಿವು ಮೂಡಿಸುವ ನಿಟ್ಟಿನಲ್ಲಿ “ಬದಲಾದ ಬದುಕು”ಎಂಬ ಶೀರ್ಷಿಕೆಯಡಿಯಲ್ಲಿ ಬೀದಿನಾಟಕ ಹಾಗೂ ಜನಪದ ಗೀತೆಗಳ ವಿಶೇಷ ಕಾರ್ಯಕ್ರಮಗಳನ್ನು ಮಾಡುವುದರ ಮೂಲಕ ಅವರಲ್ಲಿ ಇರುವ ದ್ಷೇಷದ ಮನೋಭಾವನೆಯು ದೂರವಾಗುವಂತೆ ಮಾಡುವ ಕಾರ್ಯಗಳನ್ನು ಮಾಡುತ್ತಾ ಬಂದಿದ್ದು ಹೆಮ್ಮೆಯ ವಿಷಯವಾಗಿದೆ. ಈ ರೀತಿ ಕೈದಿಗಳ ಮನಃಪರಿವರ್ತನೆ ಮಾಡುವ ಕಾರ್ಯ ನಡೆಯಬೇಕಿದೆ.
ಹೀಗೆ ಪ್ರತಿಯೊಬ್ಬರ ಜೀವನದಲ್ಲಿಯೂ ಇಂತಹದೊಂದು ಅನುಭವದ ಪಾಠ ಎಲ್ಲರಿಗೂ ಆಗಿರುತ್ತದೆ. ಆ ಅನುಭವದಿಂದ ಕಲಿತ ಪಾಠ ಬಹಳಷ್ಟು ಇರುತ್ತದೆ. “ಅಪರಾಧಗಳ ವೈಭವೀಕರಣ ಬೇಡ, ಕಾನೂನಿನ ದುರುಪಯೋಗಕ್ಕೆ ಅವರಣ ಕೂಡದೇ ಕಾನೂನನ್ನು ಗೌರವಿಸುವ ಕೆಲಸ ಮಾಡಬೇಕು. ಇದೆಲ್ಲಕ್ಕೂ ಸಾರ್ವಜನಿಕ ಜಾಗ್ರತಿಯೂ ಬೇಕು. ಮಾನವ ಹಕ್ಕು ತಿಳಿಯಿರಿ, ಕರ್ತವ್ಯವನ್ನು ಪಾಲಿಸಿರಿ”. ಆಗ ಮಾತ್ರ ಸಮಾಜದಲ್ಲಿ ಒಬ್ಬ ಉತ್ತಮ ಮಾನುಷ್ಯನಾಗಿ ಬದುಕುವುದಕ್ಕೆ ಸ್ಯಾಧ್ಯವಾಗುವುದು.
ಪ್ರತಿಯೊಬ್ಬ ಮನುಷ್ಯ ಜೀವನದಲ್ಲಿ ಒಂದಲ್ಲ ಒಂದು ತಪ್ಪು ಮಾಡಿಯೇ ಇರುತ್ತಾನೆ. ಅವನು ಹುಟ್ಟುತ್ತ ಎಷ್ಟೇ ಒಳ್ಳೆಯವನಾದರೂ ಬೆಳೆಯುತ್ತಾ ಹೋದಂತೆ ಸುತ್ತ ಮುತ್ತಲ ಪರಿಸರ, ಸ್ನೇಹಿತರ ಬಳಗ ಬೀರುವ ಪರಿಣಾಮ ತಪ್ಪು ಮಾಡುವಂತೆ ಪ್ರೇರೆಪಿಸುತ್ತದೆ. ಆತ/ಆಕೆ ತನ್ನ ನಿಯಂತ್ರಣಕ್ಕೂ ಮೀರಿದ ಮನಸ್ಥಿತಿ ಹೊಂದುತ್ತಾರೆ. ಅದು ಒಳ್ಳೆಯದೋ ಅಥವಾ ಕೆಟ್ಟದೋ ಅರಿಯದಷ್ಟೂ ಕೆಲವೂಮ್ಮೆ ಮುಂದುವರೆಯುತ್ತಾರೆ. ಒಮ್ಮೆ ಅದು ತಪ್ಪೆಂದು ತಿಳಿದರೆ ತಿದ್ದಿಕೊಳ್ಳುವ ಜಾಣರು ಹಲವರಾದರೆ ಆ ತಪ್ಪು ದಾರಿಯೇ ಒಳ್ಳೆಯದೆಂದು ಆರಿಸಿಕೊಳ್ಳುವವರು ಕೆಲವರು ಆದರಿಂದಲೇ ಬುದ್ಧಿ ಕಲಿಯುವವರು ಹಲವರು.
ಸ್ವಾರ್ಥಕ್ಕಾಗಿ ಸಮಾಜವನ್ನು ಬಲಿಕೊಡುವ ಕೆಲಸ ಬೇಡ…! ಯುವಕರು ಸಮಾಜದಲ್ಲಿ ತೆಲೆ ಎತ್ತಿ ನಡೆಯುವ ಸತ್ಕಾರ್ಯಗಳ ಮೂಲಕ ಮಾರ್ಗದರ್ಶಿ ಜೀವನ ವಿಧಾನಗಳನ್ನು ಅಳವಡಿಸಿಕೊಂಡು ಬದುಕುವ ಮಾರ್ಗವನ್ನು ರೂಪಿಸಿಕೊಳ್ಳಬೇಕು. ಆಗ ಮಾತ್ರ ಸಮಾಜದಲ್ಲಿ ಒಳ್ಳೆ ಹೆಸರು ಪಡೆದುಕೊಳ್ಳುವುಕ್ಕೆ ಹಾಗೂ ಬದುಕನ್ನು ನಡೆಸುವುದಕ್ಕೆ ಸಾಧ್ಯವಾಗುತ್ತದೆ. ಇಲ್ಲವಾದರೆ ಸಮಾಜ ನಮ್ಮನ್ನು ನೋಡುವ ದೃಷ್ಠಿಕೋನವೇ ಬದಲಾಗುತ್ತದೆ.
ಅಪರಾಧಿಗಳ ಮನಪರಿವರ್ತನೆ: ದ್ವೇಷ-ಉದ್ರೇಕ ಭಾವನೆಗಳನ್ನು ನಾಶಪಡಿಸಿ ಅಪರಾಧಿಗಳ ಮನಪರಿವರ್ತನೆ ಮಾಡುವುದರ ಮೂಲಕ ಸಮಾಜದಲ್ಲಿ ಮೊದಲಿನ ಸ್ಥಿತಿಯನ್ನು ಏರ್ಪಡಿಸುವುದಕೋಸ್ಕರ ಕ್ಷಮಾದಾನವನ್ನು ನೀಡುವ ಸಂಪ್ರದಾಯ ಎಲ್ಲಾ ಕಡೆಗಳಲ್ಲೂ ಆಚರಣೆಯಲ್ಲಿವೆ.
ಕೃಪೆ : ಶಿವಮೊಗ್ಗ ವಾರ್ತಾಭವನ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಸತಿ ಯೋಜನೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.
ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.
2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.
3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.
4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.
5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.
6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.
7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.
8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.
9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್ಗಳ ಸಮತೋಲನಕ್ಕೆ ಬಹಳ ಮುಖ್ಯ.
10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.
ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: ಖಾದ್ಯ ತೈಲಗಳನ್ನು ಆಮದು ಮಾಡಿಕೊಳ್ಳುವಲ್ಲಿ ದೇಶದ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ದೇಶಿಯ ಎಣ್ಣೆಕಾಳುಗಳ ಉತ್ಪಾದನೆಯನ್ನು ಹೆಚ್ಚಿಸುವ ಹಾಗೂ ರೈತರ ಆದಾಯವನ್ನು ಸುಧಾರಿಸಲು ಭಾರತ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರ ಪುರಷ್ಕೃತ ಕೃಷಿಯೋನ್ನತಿ ಯೋಜನೆಯಡಿ ‘’ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು’’ (National Mission on Edible Oil – Oilseeds (NMEO-OS) ಯೋಜನೆಯನ್ನು ಅನುಷ್ಠಾನ ಮಾಡಲಾಗುತ್ತಿದೆ.
ಎಣ್ಣೆಕಾಳು ಬೆಳೆಗಾರರು ಮತ್ತು ಮೌಲ್ಯ ಸರಪಳಿ ಪಾಲುದಾರರನ್ನು (Value Chain Partners) ಸಂಸ್ಕರಣಾದಾರರೊಂದಿಗೆ ಸಂಪರ್ಕಿಸಲು ಮತ್ತು ಅವರಿಗೆ ಮಾರುಕಟ್ಟೆ ಕಲ್ಪಿಸುವುದರೊಂದಿಗೆ ಉತ್ತಮ ಲಾಭವನ್ನು ಪಡೆಯುವಂತೆ ಖಾತ್ರಿಪಡಿಸುವುದು ಯೋಜನೆಯ ಗುರಿಗಳಲ್ಲಿ ಒಂದಾಗಿದೆ.
ಸದರಿ ಯೋಜನೆಯಡಿ ಸ್ಥಳೀಯವಾಗಿ ಉದ್ಯೋಗಾವಕಾಶ ಕಲ್ಪಿಸಲು ಹಾಗೂ ಶುದ್ಧ ಖಾದ್ಯ ತೈಲ ಉಪಯೋಗಿಸಲು ಅನುಕೂಲವಾಗುವಂತೆ ಪ್ರೇರೇಪಿಸಲು ಸೂಕ್ತವಾಗುವಂತೆ ಹಾಗೂ ಮೌಲ್ಯ ಸರಪಳಿಯನ್ನು ಉತ್ತೇಜಿಸಲು, ಸಂಸ್ಕರಣಾ ಘಟಕಗಳಿಗೆ ಅವಶ್ಯವಿರುವ ಯಂತ್ರೋಪಕರಣಗಳನ್ನು ಪಡೆಯಲು/ಪ್ರಾಥಮಿಕ ಮತ್ತು ದ್ವಿತೀಯ ಎಣ್ಣೆಕಾಳು ಕೊಯ್ಲೋತ್ತರ ಮೂಲ ಸೌಕರ್ಯ ಸೌಲಭ್ಯ ಪಡೆಯಲು ಗರಿಷ್ಠ ಯೋಜನಾ ವರದಿಯ ಶೇ.33 ರಷ್ಟು ಅಥವಾ ರೂ.9.99 ಲಕ್ಷಕ್ಕೆ ಮೀರದಂತೆ ಅನುದಾನವನ್ನು ನೀಡಲಾಗುವುದು. ಸದರಿ ಯೋಜನೆಯ ಘಟಕದಡಿ ಕಟ್ಟಡ ವೆಚ್ಚ ಮತ್ತು ಭೂಮಿ ಬಾಡಿಗೆಯನ್ನು ಪರಿಗಣಿಸಲಾಗುವುದಿಲ್ಲ.
ಸದರಿ ಯೋಜನೆಯಡಿ ಸೌಲಭ್ಯ ಪಡೆಯಲು ಸರ್ಕಾರ / ಸರ್ಕಾರೇತರ ಸಂಸ್ಥೆಗಳು, FPOs ಗಳು ಜುಲೈ 04 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಯೋಜನೆಯ ಮಾರ್ಗಸೂಚಿಯನ್ವಯ ಜಿಲ್ಲಾ ಕಾರ್ಯಕಾರಿ ಸಮಿತಿಯಲ್ಲಿ ಫಲಾನುಭವಿ ಆಯ್ಕೆ ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಛೇರಿ, ಉಪ ಕೃಷಿ ನಿರ್ದೇಶಕರ ಕಛೇರಿ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗಳನ್ನು ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಆಶ್ರಯ ಯೋಜನೆ – ಆವಧಿ ವಿಸ್ತರಣೆ
-
ದಿನದ ಸುದ್ದಿ4 days agoಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ
-
ಅಂಕಣ4 days agoಕವಿತೆ | ದೇವರ ಹೂವು
-
ದಿನದ ಸುದ್ದಿ6 days agoಗರಿಕೆ ಹುಲ್ಲಿನ ಜ್ಯೂಸ್ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ
-
ದಿನದ ಸುದ್ದಿ3 days agoರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ
-
ದಿನದ ಸುದ್ದಿ2 days ago10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
-
ದಿನದ ಸುದ್ದಿ3 days agoಉಚಿತ ಕೋಳಿ ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ
-
ದಿನದ ಸುದ್ದಿ3 days agoಕೃಷಿ ಪಂಡಿತ ಹಾಗೂ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ: ಅರ್ಜಿ ಆಹ್ವಾನ

