Connect with us

ದಿನದ ಸುದ್ದಿ

ಶಿವಮೊಗ್ಗದ‌ ‘ಸೆಂಟ್ರಲ್ ಜೈಲ್’ ಬಗ್ಗೆ ನಿಮಗಿಷ್ಟು ತಿಳಿದಿರಲಿ..!

Published

on

ಶಿವಮೊಗ್ಗ ಜಿಲ್ಲಾ ಕೇಂದ್ರ ಕಾರಾಗೃಹ

 

  • ಸಂಧ್ಯಾ ಸಿಹಿಮೊಗೆ

ಒಂದೂವರೆ ಶತಮಾನಗಳ ಕಾಲ ಮಲೆನಾಡಿನಲ್ಲಿ ಸ್ವಾತಂತ್ರ್ಯ ಹೋರಾಟಗಾರರನ್ನು ಮತ್ತು ರೈತರನ್ನು ಕೊಡಿಟ್ಟು ಗೆಲ್ಲಿಗೇರಿಸಿದ ಐತಿಹಾಸಿಕ ಘಟನೆಗಳಿಗೆ ಸಾಕ್ಷಿಯಾಗಿದ್ದು ಶಿವಮೊಗ್ಗ ನಗರ ಜಿಲ್ಲಾ ಕೇಂದ್ರ ಕಾರಾಗೃಹವು ಈಗ ಶಾಶ್ವತವಾಗಿ ಇತಿಹಾಸ ಪುಟ ಸೇರಿದೆ.

ಜಿಲ್ಲಾ ಕೇಂದ್ರ ಕಾರಾಗೃಹ ಕಟ್ಟಡವು ಈಗಾಗಲೇ ನೂತನ ಕಟ್ಟಡಕ್ಕೆ ಸ್ಥಳಾಂತರಕೊಂಡಿದೆ. ಜಿಲ್ಲಾ ಕಾರಾಗೃಹವು ಕೇಂದ್ರ ಕಾರಾಗೃಹವಾಗಿ ಮೇಲ್ದರ್ಜೆಗೇರಿದ್ದು ರಾಜ್ಯದಲ್ಲಿ ಅತ್ಯುತ್ತಮ ವ್ಯವಸ್ಥೆಯನ್ನು ಒಳಗೊಂಡ ಕಾರಾಗೃಹ ಎನಿಸಿಕೊಂಡಿದೆ.

ನಗರದಿಂದ ಸುಮಾರು 15 ಕಿ.ಮೀ ದೂರದಲ್ಲಿ ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದ ಹಿಂಬದಿಯಲ್ಲಿ ಓತಿಘಟ್ಟದ ಬಳಿ 62.02 ಎಕರೆ ಪ್ರದೇಶದಲ್ಲಿ 83 ಕೋಟಿ ರೂ ವೆಚ್ಚದಲ್ಲಿ ದಕ್ಷಿಣ ಕೊರಿಯಾ ಮಾದರಿಯಲ್ಲಿ ಅತ್ಯಂತ ವಿಶಿಷ್ಟವಾಗಿ ಕಾರಾಗೃಹವನ್ನು ನಿರ್ಮಿಸಲಾಗಿದೆ. ಕಾರಾಗೃಹದಲ್ಲಿ ಸುಮಾರು 460 ಕೈದಿಗಳಿದ್ದಾರೆ.

ಕಣ್ಗಾವಲಿಗೆ ಎಂದೇ ಸಿ.ಸಿ. ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಹಾಗೂ ಕಟ್ಟಡದ ಮೇಲ್ಭಾಗದಲ್ಲಿ ವಿದ್ಯುತ್ ತಂತಿಗಳ ಅಳವಡಿಕೆ ಜೊತೆಗೆ ಬಂಧಿಖಾನೆಯಿಂದ ತಪ್ಪಿಸಿಕೊಳ್ಳುವುದಕ್ಕೆ ಪ್ರಯತ್ನಿಸಿದರೆ ಆಟೋಮ್ಯಾಟಿಕ್ ಸೈರನ್ ಹೊಡೆಯಲು ಆರಂಭಿಸುತ್ತದೆ.

ಕಾರಾಗೃಹದಲ್ಲಿ ಇರುವಂತಹ ಕೈದಿಗಳಿಗೆ ಗ್ರಂಥಾಲಯ ವ್ಯವಸ್ಥೆ ಹಾಗೂ ಊದುಬತ್ತಿ ತಯಾರಿಸುವ ಉದ್ಯೋಗ ಕಲ್ಪಿಸುವುದರ ಜೊತೆಗೆ ಅವರು ಮಾಡಿದ ಕೆಲಸಕ್ಕೆ ಇಂತಿಷ್ಟು ವೇತನವೆಂದು ನಿಗಧಿಪಡಿಸಿದೆ. ಬಂಧಿಖಾನೆಯಲ್ಲಿ ಇರುವ ಕೈದಿಗಳಿಗೆ ದಿನಕ್ಕೆ ಮೂರು ಹೊತ್ತು ಊಟದ ಜೊತೆಗೆ ವಾರದಲ್ಲಿ ಒಂದು ದಿನ ಮಾಂಸದೂಟವೂ ನೀಡಲಾಗುತ್ತದೆ. ಹಾಗೂ ಕೈದಿಗಳು 2,000 ರೂ. ನೀಡಿದರೆ ಟಿವಿ ಮತ್ತು 500 ರೂ. ನೀಡಿದರೆ ಕೇರಂ ಬೋರ್ಡ್ ಸೇರಿದಂತೆ ಅವರಿಗೆ ಇತರೆ ಮನರಂಜನಾ ಕಾರ್ಯಕ್ರಮಗಳನ್ನು ಒದಗಿಸಲಾಗುವುದು.

ಸಮಾಜದ ನಡುವೆ ಇರುವ ಕಂದಕ ಕಡಿಮೆ ಮಾಡುವ ಉದ್ದೇಶದಿಂದ ಇವರಿಗೆ ಶಿಕ್ಷೆ ನೀಡುವ ಬದಲು ಮನಃಪರಿವರ್ತನೆಗೆ ಹೆಚ್ಚು ಒತ್ತು ನೀಡಲಾಗಿದೆ. ಹೀಗಾಗಿ ಪ್ರತಿವಾರವೂ ಒಂದೊಂದು ಕಾರ್ಯಕ್ರಮ ಆಯೋಜಿಸಲಾಗಿದೆ. ಇಲ್ಲಿರುವ ಸಜಾಬಂದಿಗಳಲ್ಲಿ ಸಾಕಷ್ಟು ಜನ ಪ್ರತಿಭಾವಂತರಿದ್ದಾರೆ. ಎಸ್‍ಎಸ್‍ಎಲ್‍ಸಿಯಿಂದ ಪದವಿ ಓದಿದವರೂ ಇದ್ದಾರೆ. ಅವರಲ್ಲಿರುವ ಪ್ರತಿಭೆಯನ್ನು ಹೊರತರುವ ಉದ್ದೇಶದಿಂದ ನಾಟಕ, ಹಾಡುಗಾರಿಕೆ ಸೇರಿದಂತೆ ಶಿಕ್ಷಣ, ಕಲೆ, ಸಾಂಸ್ಕøತಿಕ ಕಾರ್ಯಕ್ರಗಳನ್ನು ನಡೆಸಲಾಗುತ್ತಿದೆ.

ಕಲರ್ಸ್ ಕನ್ನಡ ವಾಹಿನಿಯಲ್ಲಿ ನಟ ಪುನೀತ್ ರಾಜ್‍ಕುಮಾರ್ ನಡೆಸಿಕೊಡುವ ಕನ್ನಡದ ಕೋಟ್ಯಧಿಪತಿ ಮಾದರಿಯೆಲ್ಲೇ ಕಾರಾಗೃಹದ ಸಜಾಬಂದಿಗಳಿಗೆ “ಸಾವಿರ ರೂಪಾಯಿ ಸರದಾರ” ಎಂಬ ವಿನೂತನ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. ಈ ಕಾರ್ಯಕ್ರಮದ ಹಿನ್ನಲೆಯಲ್ಲಿ ಕಾರಾಗೃಹದ ಗ್ರಂಥಾಲಯಕ್ಕೆ ಭೇಟಿ ನೀಡುವ ಸಜಾಬಂದಿಗಳ ಸಂಖ್ಯೆ ಹೆಚ್ಚಾಗಿದೆ. ವಾರದಲ್ಲಿ ಸುಮಾರು ನಾಲಕೈದು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.
ಸಾಮಾನ್ಯವಾಗಿ ಜೈಲು ಎಂದರೆ ಸಜಾಬಂದಿಗಳು ಪಾಲಿನ ಸೆರಮನೆ. ಹೀಗಾಗಿ ತಪ್ಪು ಮಾಡಿ ಜೈಲು ಸೇರಿದವರಿಗೆ ಅಲ್ಲಿ ಶಿಕ್ಷೆ ತಪ್ಪಿದಲ್ಲ ಅನ್ನೋ ಮಾತುಗಳಿವೆ. ಆದರಿಂದ ಶಿವಮೊಗ್ಗದ ವಾರ್ತಾ ಮತ್ತು ಸಾವರ್ಜನಿಕ ಸಂಪರ್ಕ ಇಲಾಖೆಯು ಸಜಾಬಂದಿಗಳ ಮನಃಪರಿರ್ವತನೆ ಮಾಡುವ ನಿಟ್ಟಿನಲ್ಲಿ ಕಾರ್ಯಗಳನ್ನು ನಡೆಸುತ್ತಿದೆ.

ಶಿವಮೊಗ್ಗದ “ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ”ಯು ಕೇಂದ್ರ ಕಾರಾಗೃಹದ ಜೈಲು ನಿವಾಸಿಗಳಲ್ಲಿ ಜಾಗೃತಿಗಳ ಅರಿವು ಮೂಡಿಸುವ ನಿಟ್ಟಿನಲ್ಲಿ “ಬದಲಾದ ಬದುಕು”ಎಂಬ ಶೀರ್ಷಿಕೆಯಡಿಯಲ್ಲಿ ಬೀದಿನಾಟಕ ಹಾಗೂ ಜನಪದ ಗೀತೆಗಳ ವಿಶೇಷ ಕಾರ್ಯಕ್ರಮಗಳನ್ನು ಮಾಡುವುದರ ಮೂಲಕ ಅವರಲ್ಲಿ ಇರುವ ದ್ಷೇಷದ ಮನೋಭಾವನೆಯು ದೂರವಾಗುವಂತೆ ಮಾಡುವ ಕಾರ್ಯಗಳನ್ನು ಮಾಡುತ್ತಾ ಬಂದಿದ್ದು ಹೆಮ್ಮೆಯ ವಿಷಯವಾಗಿದೆ. ಈ ರೀತಿ ಕೈದಿಗಳ ಮನಃಪರಿವರ್ತನೆ ಮಾಡುವ ಕಾರ್ಯ ನಡೆಯಬೇಕಿದೆ.

ಹೀಗೆ ಪ್ರತಿಯೊಬ್ಬರ ಜೀವನದಲ್ಲಿಯೂ ಇಂತಹದೊಂದು ಅನುಭವದ ಪಾಠ ಎಲ್ಲರಿಗೂ ಆಗಿರುತ್ತದೆ. ಆ ಅನುಭವದಿಂದ ಕಲಿತ ಪಾಠ ಬಹಳಷ್ಟು ಇರುತ್ತದೆ. “ಅಪರಾಧಗಳ ವೈಭವೀಕರಣ ಬೇಡ, ಕಾನೂನಿನ ದುರುಪಯೋಗಕ್ಕೆ ಅವರಣ ಕೂಡದೇ ಕಾನೂನನ್ನು ಗೌರವಿಸುವ ಕೆಲಸ ಮಾಡಬೇಕು. ಇದೆಲ್ಲಕ್ಕೂ ಸಾರ್ವಜನಿಕ ಜಾಗ್ರತಿಯೂ ಬೇಕು. ಮಾನವ ಹಕ್ಕು ತಿಳಿಯಿರಿ, ಕರ್ತವ್ಯವನ್ನು ಪಾಲಿಸಿರಿ”. ಆಗ ಮಾತ್ರ ಸಮಾಜದಲ್ಲಿ ಒಬ್ಬ ಉತ್ತಮ ಮಾನುಷ್ಯನಾಗಿ ಬದುಕುವುದಕ್ಕೆ ಸ್ಯಾಧ್ಯವಾಗುವುದು.

ಪ್ರತಿಯೊಬ್ಬ ಮನುಷ್ಯ ಜೀವನದಲ್ಲಿ ಒಂದಲ್ಲ ಒಂದು ತಪ್ಪು ಮಾಡಿಯೇ ಇರುತ್ತಾನೆ. ಅವನು ಹುಟ್ಟುತ್ತ ಎಷ್ಟೇ ಒಳ್ಳೆಯವನಾದರೂ ಬೆಳೆಯುತ್ತಾ ಹೋದಂತೆ ಸುತ್ತ ಮುತ್ತಲ ಪರಿಸರ, ಸ್ನೇಹಿತರ ಬಳಗ ಬೀರುವ ಪರಿಣಾಮ ತಪ್ಪು ಮಾಡುವಂತೆ ಪ್ರೇರೆಪಿಸುತ್ತದೆ. ಆತ/ಆಕೆ ತನ್ನ ನಿಯಂತ್ರಣಕ್ಕೂ ಮೀರಿದ ಮನಸ್ಥಿತಿ ಹೊಂದುತ್ತಾರೆ. ಅದು ಒಳ್ಳೆಯದೋ ಅಥವಾ ಕೆಟ್ಟದೋ ಅರಿಯದಷ್ಟೂ ಕೆಲವೂಮ್ಮೆ ಮುಂದುವರೆಯುತ್ತಾರೆ. ಒಮ್ಮೆ ಅದು ತಪ್ಪೆಂದು ತಿಳಿದರೆ ತಿದ್ದಿಕೊಳ್ಳುವ ಜಾಣರು ಹಲವರಾದರೆ ಆ ತಪ್ಪು ದಾರಿಯೇ ಒಳ್ಳೆಯದೆಂದು ಆರಿಸಿಕೊಳ್ಳುವವರು ಕೆಲವರು ಆದರಿಂದಲೇ ಬುದ್ಧಿ ಕಲಿಯುವವರು ಹಲವರು.

ಸ್ವಾರ್ಥಕ್ಕಾಗಿ ಸಮಾಜವನ್ನು ಬಲಿಕೊಡುವ ಕೆಲಸ ಬೇಡ…! ಯುವಕರು ಸಮಾಜದಲ್ಲಿ ತೆಲೆ ಎತ್ತಿ ನಡೆಯುವ ಸತ್ಕಾರ್ಯಗಳ ಮೂಲಕ ಮಾರ್ಗದರ್ಶಿ ಜೀವನ ವಿಧಾನಗಳನ್ನು ಅಳವಡಿಸಿಕೊಂಡು ಬದುಕುವ ಮಾರ್ಗವನ್ನು ರೂಪಿಸಿಕೊಳ್ಳಬೇಕು. ಆಗ ಮಾತ್ರ ಸಮಾಜದಲ್ಲಿ ಒಳ್ಳೆ ಹೆಸರು ಪಡೆದುಕೊಳ್ಳುವುಕ್ಕೆ ಹಾಗೂ ಬದುಕನ್ನು ನಡೆಸುವುದಕ್ಕೆ ಸಾಧ್ಯವಾಗುತ್ತದೆ. ಇಲ್ಲವಾದರೆ ಸಮಾಜ ನಮ್ಮನ್ನು ನೋಡುವ ದೃಷ್ಠಿಕೋನವೇ ಬದಲಾಗುತ್ತದೆ.

ಅಪರಾಧಿಗಳ ಮನಪರಿವರ್ತನೆ: ದ್ವೇಷ-ಉದ್ರೇಕ ಭಾವನೆಗಳನ್ನು ನಾಶಪಡಿಸಿ ಅಪರಾಧಿಗಳ ಮನಪರಿವರ್ತನೆ ಮಾಡುವುದರ ಮೂಲಕ ಸಮಾಜದಲ್ಲಿ ಮೊದಲಿನ ಸ್ಥಿತಿಯನ್ನು ಏರ್ಪಡಿಸುವುದಕೋಸ್ಕರ ಕ್ಷಮಾದಾನವನ್ನು ನೀಡುವ ಸಂಪ್ರದಾಯ ಎಲ್ಲಾ ಕಡೆಗಳಲ್ಲೂ ಆಚರಣೆಯಲ್ಲಿವೆ.

ಕೃಪೆ : ಶಿವಮೊಗ್ಗ ವಾರ್ತಾಭವನ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

Published

on

ಆಗಸ್ಟ್ 2023 ರಿಂದ ಜುಲೈ 2026 ರವರೆಗೆ ₹28,759 ಕೋಟಿ ಸಬ್ಸಿಡಿ ಬಿಡುಗಡೆ; ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್‌ನಿಂದ ಕೋಟ್ಯಂತರ ಕುಟುಂಬಗಳ ಆರ್ಥಿಕ ಸಬಲೀಕರಣ

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.

ಹೌದು! 2023ರ ಆಗಸ್ಟ್‌ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್‌ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.

http://Visit : www.suddidina.com

ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ: 

ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್‌ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.

ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್‌ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.

ಕುಟುಂಬದ ಬಜೆಟ್‌ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:

ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.

ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

Continue Reading

ದಿನದ ಸುದ್ದಿ

ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!

Published

on

ಕರ್ನಾಟಕದ ವೈಟ್‌ಫೀಲ್ಡ್-ಬಂಗಾರಪೇಟೆ, ಹೊಸೂರು-ಓಮಲೂರು ಮಾರ್ಗ ಸೇರಿ 9 ರಾಜ್ಯಗಳ 1200 ಕಿ.ಮೀ ರೈಲು ಜಾಲ ವಿಸ್ತರಣೆಗೆ ಪ್ರಧಾನಿ ಮೋದಿ ಅಧ್ಯಕ್ಷತೆಯ ಸಂಪುಟ ಸಭೆಯಲ್ಲಿ ಅನುಮೋದನೆ

ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.

http://Visit : www.suddidina.com

ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್‌ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.

ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:

1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್‌ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.

2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.

3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.

4. ಖರಗ್‌ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್‌ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್‌ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.

ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್‌ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.

ಕರ್ನಾಟಕಕ್ಕೆ ಏನು ಲಾಭ?

ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್‌ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.

ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್‌ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.

ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

Continue Reading

ದಿನದ ಸುದ್ದಿ

ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು

Published

on

ಸೆ.10 ರಂದು ವಿಧಾನಸೌಧದಲ್ಲಿ ಶತದಿನೋತ್ಸವ ಸಮಾರಂಭ; ಮಾಜಿ ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ, ಗ್ಯಾರಂಟಿ ಫಲಾನುಭವಿಗಳೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಸಂವಾದ

ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಶತಕದ ಸಂಭ್ರಮವನ್ನು ಆಚರಿಸಲು ರಾಜ್ಯ ಸರ್ಕಾರವು `ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ’ ಎಂಬ ವಿಶೇಷ ಮತ್ತು ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

 

ಈ ಕಾರ್ಯಕ್ರಮವು ನಾಳೆ ಅಂದರೆ 2026ನೇ ಸೆಪ್ಟೆಂಬರ್ 10ರ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಪ್ರತಿಷ್ಠಿತ ಬ್ಯಾಂಕ್ವೇಟ್ ಸಭಾಂಗಣದಲ್ಲಿ ನಡೆಯಲಿದೆ. ಸರ್ಕಾರದ ನೂರು ದಿನಗಳ ಸಾಧನೆ, ಜನಪರ ಯೋಜನೆಗಳ ಅನುಷ್ಠಾನ ಮತ್ತು ಮುಂದಿನ ಅಭಿವೃದ್ಧಿಯ ದೂರದೃಷ್ಟಿಯನ್ನು ಜನರ ಮುಂದಿಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.

ಗಣ್ಯರ ದಂಡು, ಸಿದ್ದರಾಮಯ್ಯರಿಂದ ಉದ್ಘಾಟನೆ:

ಈ ಶತದಿನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟು ಮತ್ತು ನಾಯಕತ್ವದ ನಿರಂತರತೆಯನ್ನು ಸಂಕೇತಿಸುತ್ತದೆ.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್, ರಾಜ್ಯ ಸಂಪುಟದ ಎಲ್ಲಾ ಸಚಿವರು, ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.

http://Visit : www.suddidina.com

ಫಲಾನುಭವಿಗಳೊಂದಿಗೆ ನೇರ ಸಂವಾದ – ಕಾರ್ಯಕ್ರಮದ ಪ್ರಮುಖ ಆಕರ್ಷಣೆ

ಈ ಕಾರ್ಯಕ್ರಮದ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಮುಖ್ಯಮಂತ್ರಿಗಳೊಂದಿಗೆ ಫಲಾನುಭವಿಗಳ ನೇರ ಸಂವಾದ. ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಈ ವೇದಿಕೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.

ಕೇವಲ ಗ್ಯಾರಂಟಿ ಯೋಜನೆಗಳಷ್ಟೇ ಅಲ್ಲದೆ, ಸಮಾಜದ ವಿವಿಧ ವರ್ಗಗಳ ಶ್ರಮಿಕರು ಮತ್ತು ಕಾರ್ಮಿಕರು ಕೂಡ ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ತಮ್ಮ ಬದುಕಿನಲ್ಲಿ ಸರ್ಕಾರದ ಯೋಜನೆಗಳಿಂದ ಆಗಿರುವ ಬದಲಾವಣೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮುಕ್ತವಾಗಿ ಮಾತನಾಡಲಿದ್ದಾರೆ.

100 ದಿನಗಳಲ್ಲಿ ಸರ್ಕಾರವು ಕೈಗೊಂಡಿರುವ ಜನಪರ ನಿರ್ಧಾರಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಆಡಳಿತದಲ್ಲಿ ತಂದಿರುವ ಪಾರದರ್ಶಕತೆಯ ಬಗ್ಗೆ ಈ ವೇದಿಕೆಯಲ್ಲಿ ಚರ್ಚೆ ನಡೆಯಲಿದೆ. ಸರ್ಕಾರದ ಸಾಧನೆಗಳನ್ನು ಕೇವಲ ಭಾಷಣದ ಮೂಲಕವಲ್ಲ, ಬದಲಾಗಿ ಫಲಾನುಭವಿಗಳ ಬಾಯಿಂದಲೇ ಜನರಿಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.

ಮುಂದಿನ ದಿನಗಳಲ್ಲಿ ದೃಢ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಸರ್ಕಾರದ ಮುಂದಿನ 5 ವರ್ಷಗಳ ಕಾರ್ಯಯೋಜನೆ ಮತ್ತು ರೂಪುರೇಷೆಗಳನ್ನು ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

Continue Reading

Trending