Connect with us

ನೆಲದನಿ

ಅಪರೂಪಕ್ಕೊಮ್ಮೆ,ಅಪರೂಪದ ವ್ಯಕ್ತಿ ‘ಶೋಭಾ ಗುನ್ನಾಪೂರ’..!

Published

on

ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಹಿರೇಮಸಳಿರವರು,ತವರುಮನೆ ಶಿರಶ್ಯಾಡ.ಗಂಡ ತುಕಾರಾಮ್ ಗುನ್ನಾಪೂರ ರೈತರಾಗಿದ್ದಾರೆ. ಇವರಿಗೆ ಮೂವರು ಗಂಡು ಮಕ್ಕಳು ಹಾಗೂ ಒಂದು ಹೆಣ್ಣು ಮಗು,ಓದುವ ಹವ್ಯಾಸ ಉಳ್ಳವರು ಎಲ್ಲಿದ್ದರೂ,ಸುಖಿಯಾಗಿರಬಲ್ಲರು ಎಂಬ ಮಾತೊಂದಿದೆ,ಆ ಮಾತಿಗೆ ಕೈಗನ್ನಡಿ ಹಾಗೂ ಅಲ್ಪ‌ ವಿದ್ಯೆ ಮಹಾಗರ್ವಿ ಎಂಬ ಮಾತಿಗೆ ತದ್ವೀರುದ್ಧವಾಗಿದ್ದಾರೆ ಈ ಶೋಭಾ ಅಮ್ಮನವರು.

ಓದಿದ್ದು ಕೇವಲ ಒಂಬತ್ತನೇ ತರಗತಿಯವರೆಗೆ ಮಾತ್ರ ಆದರೆ ಕನ್ನಡ ಸಾಹಿತ್ಯವನ್ನು ಓದುವ ಅಪಾರ ಆಸಕ್ತಿ ಇರಿಸಿಕೊಂಡಿದ್ದಾರೆ.ಮುಂದೆ ಕಲಿಯಲು ಹಳ್ಳಿಯಲ್ಲಿ ಹೆಣ್ಮಕ್ಕಳಿಗೆ ಆಸ್ಪಾದವಿರಲಿಲ್ಲ.ನಮ್ಮ ತಂದೆಯವರು ನಾವು ದೊಡ್ಡವರಾದ ಬಳಿಕ ನೀವು ಶಾಲೆಗೆ ಹೋಗೋದು ಬೇಡ ಅಂತ್ಹೇಳಿ ನಮ್ಮನ್ನು ಮದುವೆ ಮಾಡಿಕೊಟ್ಟರು.ನಮಗಿನ್ನೂ ಕಲಿಯಬೇಕೆಂಬ ಆಸಕ್ತಿ ಇನ್ನೂ ಇತ್ತು.ಆದರೆ ಹಳ್ಳಿಯಲ್ಲಿ ದೊಡ್ಡವರಾದ ಬಳಿಕ ಮತ್ತೆಲ್ಲಿ ಶಾಲೆಗೆ ಕಳಿಸಬೇಕಂತ ಹೇಳಿ ಕೊಟ್ಟು ಮದುವೆ ಮಾಡಿದರು.

ಆದರೆ ನಾವು ಕಲಿಯಲೇಬೇಕೆಂಬ ಛಲವಿರುವುದರಿಂದ ಬರೆಯಲು,ಓದಲು ರೂಢಿಸಿಕೊಂಡೆವು.ಕಸದಾಗಿನ ಯಾವುದಾದರೂ ಪೇಪರ್ ಬಿದ್ದಿತ್ತೆಂದರೆ ನನಗೆ ಅದು ಓದದೇ ಇದ್ರೆ ಸಮಾಧಾನನೇ ಆಗುತ್ತಿರಲಿಲ್ಲ.ನಮ್ಮದು ಕೂಡುತುಂಬು ಕುಟುಂಬ ಏಳು ಮಂದಿ ಅಣ್ಣ-ತಮ್ಮದಿಂರು ಏಳು ಮಂದಿ ಹೆಣ್ಣುಮಕ್ಕಳು ಅತ್ತೆ,ಮಾವ ಅಷ್ಟಿದ್ದರೂ ಅವರ ಜೊತೆ ನಾನು ಕೆಲಸ ಮಾಡಿ ಓದು-ಬರಹದ ಕಡೆ ಲಕ್ಷ್ಯ,ಸಮಯವೂ ಕೊಟ್ಟಿದ್ದೆ. ಬೇಕಾದಷ್ಟೂ ಕೆಲಸವಿರಲದು ಓದು ಬರಹಕ್ಕೆ ಎರಡು ಗಂಟೆ ಕಡ್ಡಾಯವಾಗಿ ಸಮಯ ಮೀಸಲು ಮಾಡಿ ಓದುತ್ತಿದ್ದೆ,ಬರೆಯುತ್ತಿದ್ದೆ.ಈಗ ಅದು ಪ್ರಸ್ತುತ ಓದಿ-ಓದಿ ಅಭ್ಯಾಸವಾಗಿ ಕಥೆ,ಕಾದಂಬರಿ ಬರೆಯಲು ತೊಡಗಿದೆ.

ಮುಂದೆ ಬರುಬರುತ್ತಾ ನನ್ನ ಮಕ್ಕಳು ನನಗೆ ಬುದ್ಧಿ ಹೇಳತೋಡಗಿದರು.ಅಮ್ಮ ನೀನು ಇಷ್ಟೇಲ್ಲಾ ಕಥೆ,ಕಾದಂಬರಿ ಓದುತ್ತಿಯಾ,ಬರೆಯುತ್ತೀಯಾ ಏನಾದರೂ ನೀನು ಬರೆ ಎಂದರು.ಮಕ್ಕಳ ಪರಿಣಾಮವೇ ಇರಬಹುದು, ಇವರ ಎರಡು ಪುಸ್ತಕಗಳು (ಕಥಾ-ಸಂಕಲನ,ಆತ್ಮಚರಿತ್ರೆ) ಮುದ್ರಣದ ಹಂತದಲ್ಲಿವೆ.ಇವರು ಬರೆದ ಕವಿತೆಗಳು ಪಂಜಾಬಿ ಭಾಷೆಗೆ ಅನುವಾದಗೊಂಡಿವೆ ಹಾಗೂ ಕಥೆಗಳು ಪತ್ರಿಕೆಗಳಲ್ಲಿ ಪ್ರಕಟವಾಗಿವೆ.(ಬದುಕಿನ ಪಯಣವನ್ನು ಎಳೆ-ಎಳೆಯಾಗಿ ಖುಷಿಯಿಂದ ಬಿಚ್ಚಿಟ್ಟುತ್ತಾರೆ.)

ಬಾಲ್ಯದಲ್ಲಿಯೂ ಸಾಕಷ್ಟು ಕಷ್ಟ ಅನುಭವಿಸಿ,ಸದಾ ಸಂಸಾರದ ಜಂಜಾಟದಲ್ಲಿದ್ದರೂ,ದಿನಕ್ಕೆರಡು ಗಂಟೆ ಕಡ್ಡಾಯವಾಗಿ ಚಾಚೂ-ತಪ್ಪದೇ ಓದಲು ಸಮಯವಿರುಸುತ್ತಿದ್ದರಿವರು,ಆದರೆ ನನಗನ್ನಿಸಿದ್ದು ಈಗ ಅರ್ಧದಿನ,ಒಮ್ಮೊಮ್ಮೆ ದಿನಪೂರ್ತಿಯೂ ಓದಬಹುದೆಂದು ನಂಬಿಕೆಯಿದೆ,ಕಾರಣ‌ ತುಂಬಾ ಕಷ್ಟದಿಂದ,ಹಳ್ಳಿಯ ಮಹಿಳೆ ಹೊಲ-ಮನೆ ಕೆಲಸ ತಾನೇನೂ,ತನ್ನ ಕುಟುಂಬದ ಜಗತ್ತೇನೂ ಎನ್ನುತ್ತಿದ್ದರಿವರು. *ಮಕ್ಕಳಿಗೆ ಅಕ್ಕ-ಪಕ್ಕದ ಮಕ್ಕಳಿಗೂ ಶುದ್ಧಬರಹ ಹಾಕಿಕೊಟ್ಟು,ದಿನಾಲೂ ಶಾಲೆಯ ಮನೆಕೆಲಸ ಮಾಡಿಸುತ್ತಿದ್ದರು.ಇಂದು ಆ ಮಕ್ಕಳು ಒಳ್ಳೆಯಸ್ಥಾನದಲ್ಲಿ,ಸ್ಥಿತಿಯಲ್ಲಿದ್ದಾರೆ.

ಇಂದು ಇವರ ಕುಟುಂಬ ಸುಸ್ಥಿರವಾಗಿದೆ,ಮಕ್ಕಳೂ ಸಹ ಉತ್ತಮವಾದ ಉದ್ಯೋಗದಲ್ಲಿದ್ದಾರೆ.ಈಗಲೂ ಸಹ ಹೊಲ-ಮನೆ ಕೆಲಸ ಮಾಡುತ್ತಾ ಅತಿಹೆಚ್ಚು ಸಮಯ ಓದುತ್ತಾರೆ.ಬದುಕಿನ ಒತ್ತಡದ ನಡುವೆ ಪುಸ್ತಕಗಳನ್ನು ಓದುವುದು ಬಿಟ್ಟಿರಲಿಲ್ಲ.ಅದರ ಪರಿಣಾಮವಾಗಿಯೇ ಇವರಿಂದ ಇತ್ತಿಚೀಗೆ ಕಥೆ,ಕವಿತೆಗಳು ಹತ್ತಾರು ಸೃಷ್ಟಿ ಆಗಿದ್ದಾವೆ,ಆಗುತ್ತವೆಯೂ ಕೂಡ ಅದು ಹೀಗೆಯೇ,ಇವರು ಕನ್ನಡ ಸಾಹಿತ್ಯ ಸೇವೆಯನ್ನು ಮಾಡಲಿಕ್ಕೆ ಇನ್ನೂ ಆ ಅಕ್ಷರಾಂಬೆ ಶಕ್ತಿ ನೀಡಲೆಂದು ಆಶಿಸೋಣ.!

ಸಾಮಾನ್ಯ ಹಳ್ಳಿಯ ಹೆಣ್ಣುಮಗಳಾದ ಶೋಭಾ ಗುನ್ನಾಪೂರ ಅಮ್ಮನವರು.ತಮ್ಮ ಬದುಕಿನ ಇಚ್ಛಾಶಕ್ತಿಯಿಂದ ನೋವು ನಲಿವುಗಳಿಂದ ಆಚೆ ಬಂದು ಸ್ತ್ರೀ ಶಕ್ತಿ ಸ್ವ-ಸಹಾಯ ಸಂಘದ ಪ್ರತಿನಿಧಿಯಾಗಿ ಅನೇಕ ಹೆಣ್ಣುಮಕ್ಕಳ ಬದುಕಿಗೆ ಸ್ಪೂರ್ತಿಯಾಗಿದ್ದಾರೆ. ಪ್ರಗತಿಪರ ರೈತರಾಗಿರಾಗಿದ್ದಾರೆ.ಹಿರೇಮಸಳಿಯಲ್ಲಿ ಕುಡಿತ ಬಿಡಿಸಲು,ಮಕ್ಕಳಿಗೆ ವಿಧ್ಯಾಭ್ಯಾಸ ನೀಡಲು, ನೊಂದ ಮಹಿಳೆಯರಿಗೆ ಸಾಂತ್ವಾನ ನೀಡಿ ಆಸರೆಯಾಗಿ ನಿಲ್ಲಲು ಶ್ರಮಿಸಿದ್ದಾರೆ.

ಇವರು ಮಕ್ಕಳಿಗಾಗಿ ಆಸ್ತಿ ಮಾಡಲಿಲ್ಲ,ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿದ್ದಾರೆ.!

ಇವರ ಮಕ್ಕಳು ಬೇರೆ ಬೇರೆ ಊರಲ್ಲಿ ನೌಕ್ರಿ(ಉದ್ಯೋಗ) ಹಿಡಿದು ಹೆಮ್ಮೆ ತರುವ ಕೆಲಸ ಮಾಡಿದ್ದಾರೆ,ಮಾಡುತ್ತಿದ್ದಾರೆಯೂ ಕೂಡ ಬೆಂಗಳೂರಲ್ಲಿ ಸುನಿಲ್ ಕುಮಾರ್ ಗುನ್ನಾಪೂರ ಎನ್ನುವವರು ಲಾಯಾರ್ ಆಗಿ,ಬಾಗಲಕೋಟೆಯಲ್ಲಿ ಅನಿಲ್ ಕುಮಾರ್ ಗುನ್ನಾಪೂರರವರು ಸರ್ವೆಯರ್ ಕೆಲಸದಲ್ಲಿದ್ದು ಮತ್ತು ಕವಿಗಳಾಗಿದ್ದಾರೆ.

ಇನ್ನೊಬ್ಬರು ಭೀಮರಾವ್ ಧಾರವಾಡದಲ್ಲಿ ಪ್ರಸ್ತುತ ಕೆ.ಎ.ಎಸ್ ಪರೀಕ್ಷೆಯನ್ನು ಅಭ್ಯಾಸ ಮಾಡುತ್ತಿದ್ದಾರೆ. ಇನ್ನೊಬ್ಬ ಹೆಣ್ಣುಮಗಳು ಅನಿತಾ ಗಂಡನ ಮನೆಯಲ್ಲಿ ಸುಖ ಸಾಂಸರೀಕವಾದ ಜೀವನವನ್ನು ಸಾಗಿಸುತ್ತಿದ್ದಾರೆ.

ಪ್ರೀಯ ಓದುಗರೇ,

ಶೋಭಾ ಅಮ್ಮನವರು ಮಹಿಳೆಯರಿಗೆ ಒಂದು ಸಲಹೆನ ನೀಡುತ್ತಾರೆ ಬನ್ನಿ,ಅವರ ಮಾತಿನಲ್ಲೇ ಕೇಳೋಣ..

ಹೆಣ್ಣುಮಕ್ಕಳು ಸದಾ ಕೆಲಸ-ಕೆಲಸ ಅಂತ ಆರೋಗ್ಯದ ಕಡೆ ಗಮನವೇ ಹರಿಸುವುದಿಲ್ಲ.ಸದಾ ಗಂಡ,ಮಕ್ಕಳು,ಸಂಸಾರದಲ್ಲಿಯೇ ಅವರ ಸಮಯ ಕಳೆದು ಹೋಗುತ್ತದೆ.

ಆರೋಗ್ಯದ ಬಗೆಯಲ್ಲಿ ಸರಿಯಾದ ಸಮಯಕ್ಕೆ ಊಟ ಮಾಡುವುದಿಲ್ಲ,ಸಮಯಕ್ಕೆ ಹೊಂದುವಂತೆ ನಿದ್ದೆಯೇ ಬರುವುದಿಲ್ಲ,ಬರೀ ಸಂಸಾರದಲ್ಲಿಯೇ ಹೋಗುತ್ತದೆ.ಅದಕ್ಕೆ ಇದೆಲ್ಲದರ ಒತ್ತಡದ ಕೆಲಸದ ಜೊತೆಯೂ ನಾವು ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕಾಗಿದೆ.ಜೊತೆಗೆ ಸರಿಯಾಗಿ ನಮ್ಮ ಮಕ್ಕಳನ್ನು ಶಾಲೆಗೆ ಕಳಿಸೋಣ,ಆ ಮಕ್ಕಳನ್ನೇ ನಾವು ಆಸ್ತಿ ಮಾಡಿಕೊಳ್ಳೋಣ. “ನಾವು ಆಸ್ತಿ ಮಾಡುವುದು ಬೇಕಾಗಿಲ್ಲ.ಮಕ್ಕಳೇ ನಮಗೊಂದು ಆಸ್ತಿ”.

ಆದರೆ ಸರಿಯಾಗಿ ಅಭ್ಯಾಸ ಕೊಟ್ಟು ಮಕ್ಕಳಿಗೆ ಮಾರ್ಗದಾಳುಗಳಾಗೋಣ.ನಮಗೆಷ್ಟೇ ಬರಲಿ,ತಿಳಿದಿರಲಿ ಮಕ್ಕಳಿಗೆ ಹೇಳಬೇಕು.ಉದಾಹರಣೆಗೆ ನಾವೇ ಒಂದು ಪುಸ್ತಕವನ್ನು ತೆಗೆದುಕೊಂಡು ಕೂತರೇ,ಮಕ್ಕಳೂ ಸಹ ಪುಸ್ತಕ ತೆಗೆದುಕೊಂಡು ಕುಳಿತುಕೊಳ್ಳುತ್ತಾರೆ.ಟಿವಿ ನೋಡಿದರೆ,ಅವರೂ ಟಿವಿ ನೋಡುತ್ತಾ ಕೂರುತ್ತಾರೆ.ಅದು ಪ್ರತಿಯೊಬ್ಬ ತಾಯಿಯ ಅನುಕರಣೆಯಲ್ಲಿ ಅಡಗಿರುತ್ತದೆ.ಪುರುಷರು(ಗಂಡ) ಏನೂ ಮಾಡುವುದಿಲ್ಲ.ಅವರು ತಂದು ಹಾಕಿ ಹೊರಗಡೆ ಹೋಗಿ ಬಿಡುತ್ತಾರಷ್ಟೇ,(ತುಸು-ನಸುನಕ್ಕು) ಅದು ಅನುಕರಣೆ ತಾಯಿಕಡೆ ಇರುತ್ತದೆ.

ತಾಯಿಯಾಗಿ ಸುಸಜ್ಜಿತವಾಗಿ ವಿದ್ಯೆ-ಬುದ್ಧಿ,ಸಂಸ್ಕೃತಿ ಮಕ್ಕಳಿಗೆ ಕಲಿಸಿದೇವೆಂದರೆ,ಮಕ್ಕಳು ತಮ್ಮಿಂದ ಅಚಾನಕವಾಗಿ ಕಲಿಯುತ್ತಾರೆ.ತಾಯಿಗಳಾದ ನಾವೇ ಏನೂ ಕಲಿಸದೇ ಬರೀ ಟಿವಿ ನೋಡೋದು,ನೌಕರಸ್ಥ ತಾಯಿಯವರು ಉದ್ಯೋಗಕ್ಕೇನೆ ಸೀಮಿತವಾಗಿ ಮಕ್ಕಳಿಗೆ ನಮಗೆ ಆಗುವುದಿಲ್ಲ,ಓದಿರಿ,ಬರೆಯಿರಿ ಅಂದರೆ ಪಾಪ ಮಕ್ಕಳು ಏನೂ ಮಾಡಲಸಾಧ್ಯ.ಸಣ್ಣ ಮಕ್ಕಳಿಗೆ ನಾವು ಒತ್ತಡದ ಜೀವನದಲ್ಲಿಯೂ ಸ್ವಲ್ಪ ಹೇಳಬೇಕು.ತಳಪಾಯ ದುರಸ್ತಿ ಮಾಡಿ,ಒಳ್ಳೆಯ ಮಾರ್ಗದರ್ಶನ ನಾವು ನೀಡಿದರೆ ಮಕ್ಕಳ ಕೈ ಹಿಡಿಯುವವರೇ ಯಾರಿಲ್ಲ ಅದಕ್ಕೆ ನಮ್ಮ ಮಕ್ಕಳಿಗೆ ಸರಿಯಾಗಿ ಕಲಿಸಬೇಕು.

ಈ ಹೆಣ್ಣುಮಕ್ಕಳು(ಪ್ರೌಢಶಾಲಾ-ಮಕ್ಕಳು) ಇದಾರಲ್ಲ,ಈ ದೇಶದ ಪ್ರಜೆಗಳು.ತೊಟ್ಟಿಲು ತೂಗುವ ಇವರ ಕೈಗಳು,ಜಗತ್ತನೇ ತೂಗುತ್ತದೆ. ಏನೋ ಒಂದು ತಾರತಮ್ಯಕ್ಕೆ ಹೆಣ್ಣು ಹುಟ್ಟಬಾರದೆಂದು ಹೇಳುತ್ತಾರೆ.ಮೊದಲು ಹೆಣ್ಣಾಗಬೇಕು.ಹೆಣ್ಣಿನಿಂದಲೇ ಜಗತ್ತು,ಹೆಣ್ಣಿನಿಂದಲೇ ಸರ್ವಸ್ವ.ಆ ಹೆಣ್ಣು ನಮಗೆ ಎಷ್ಟು ಮಹತ್ವವೆಂದರೆ,ಗಂಡುಮಕ್ಕಳಿಗಿಂತ ಹೆಣ್ಣುಮಕ್ಕಳಿರಬೇಕು.ಒಂದು ಮಾದರಿಯಾಗುತ್ತಾರೆ.ಕಷ್ಟಕ್ಕೂ-ಸುಖಕ್ಕೂ ಹೆಣ್ಮಕ್ಕಳು ಆಗುತ್ತಾರೆ,ಗಂಡುಮಕ್ಕಳು ಆಗುವುದಿಲ್ಲ.ಸತ್ತರೆ ಗಂಡು ಮಕ್ಕಳು ದೂರಹೋಗಿ ಕೂರುತ್ತಾರೆ,ಹೆಣ್ಮಕ್ಕಳು ಕೂಡುತ್ತಾರೇನೂ.?

ಅದಕ್ಕೆ ಹೆಣ್ಣು-ಗಂಡೆಂಬ ತಾರತಮ್ಯ ಮಾಡದಿರಿ.ನಮಗೆ ಹೆಣ್ಣುಮಕ್ಕಳು-ಗಂಡುಮಕ್ಕಳೂ ಬೇಕು.ಅಷ್ಟೇ ಚಿಕ್ಕ-ಚೊಕ್ಕ ಸಂಸಾರದ ಜೀವನ ಮಾಡಿಕೊಂಡು ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಡಿಸಬೇಕೆಂದು ಕೇಳಿಕೊಳ್ಳುತ್ತೇನೆ.

ಪದವಿ,ಸರ್ಟಿಫೀಕೇಟ್ ಇಲ್ಲದ ಮಹಿಳೆಯೂ ಸಾಧಿಸಬಹುದೆಂದು ಹೆಣ್ಣು ಅಬಲೆಯಲ್ಲ ಸಬಲೆ ಎಂದು ತೋರಿಸಿ ಇಂದು ನಮ್ಮ ಮುಂದೆ ಮಾದರಿಯಾಗಿ ನಿಂತಿದ್ದಾರೆ.ಪ್ರಚಾರದಿಂದ ದೂರ ಇರುವ ಶೋಭಾ ಗುನ್ನಾಪೂರ ಅಮ್ಮನವರು ಎಲೆ ಮರೆಯ ಕಾಯಿಯಂತೆ ತಮ್ಮ ಕೆಲಸ ಪ್ರೀತಿಯಿಂದ ಮಾಡುತ್ತಾ ಸಾಗಿದ್ದಾರೆ,ಸಾಗುತ್ತಿದ್ದಾರೆಯೂ ಕೂಡ..ಅವರ ಸೇವೆಯೂ,ಹೀಗೆಯೇ ಸಾಗುತ್ತಾ ಅವಿಸ್ಮರಣೀಯವಾಗಿ ಇತಿಹಾಸದ ಪುಟಗಳಲ್ಲಿ ಸೇರಲಿ ಎನ್ನುತ್ತಾ..!

ಶಿವರಾಜ್ ಮೋತಿ
ಪದವಿ ವಿಧ್ಯಾರ್ಥಿ
ಧಾರವಾಡ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಆತ್ಮಕತೆ | ಅನಾಗರಿಕ ಆಚರಣೆಯ ವಿರುದ್ಧ

Published

on

  • ರುದ್ರಪ್ಪ ಹನಗವಾಡಿ

ಸೊರಬ ತಾಲ್ಲೂಕಿನಲ್ಲಿ ಇನ್ನೊಂದು ಮುಖ್ಯ ಘಟನೆಯನ್ನು ಹೇಳಿ ಮುಂದೆ ಹೋಗುತ್ತೇನೆ. ಸೊರಬ ತಾಲ್ಲೂಕಿನಲ್ಲಿ ತಹಸೀಲ್ದಾರರಾಗಿ ರಾಮನಾಥ್ ಎಂಬ ಹಿರಿಯರಿದ್ದರು. ಅವರು ತಾಲ್ಲೂಕಿನಲ್ಲಿ ಎಲ್ಲಾ ಆಡಳಿತ ನೋಡಿಕೊಳ್ಳುತ್ತಿದ್ದರು.

ವಿಶೇಷ ತಹಸೀಲ್ದಾರರು ಸಾಮಾನ್ಯವಾಗಿ ಯಾವ ಉದ್ದೇಶಕ್ಕೆ ನಿಯೋಜಿಸಿದ್ದರೋ ಅದನ್ನು ಬಿಟ್ಟು ಇತರೆ ಸಾಮಾನ್ಯ ವಿಷಯಗಳಲ್ಲಿ ಅವರಿಗೆ ಸಂಬಂಧಿಸಿರುವುದಿಲ್ಲ. ಹಾಗಾಗಿ ನಾನು ನನ್ನ ಕೆಲಸಗಳನ್ನು ಬಿಟ್ಟು ತಾಲ್ಲೂಕು ಕಛೇರಿ ಕೆಲಸಗಳಲ್ಲಿ ತೊಡಗಿಕೊಂಡಿರಲಿಲ್ಲ. ಆದರೆ ಇದೇ ಸಮಯದಲ್ಲಿ ಸೊರಬ ತಾಲ್ಲೂಕಿನ ಚಂದ್ರಗುತ್ತಿ ಜಾತ್ರೆಯ ಬಗ್ಗೆ ಸರ್ಕಾರ ಮತ್ತು ಜಿಲ್ಲಾಡಳಿತದಿಂದ ವಿಶೇಷ ಸಭೆ ನಡೆಸಿ ಅಲ್ಲಿ ನಡೆಯುತ್ತಿದ್ದ ಬೆತ್ತಲೆ ಸೇವೆಯ ಆಚರಣೆಯನ್ನು ತಡೆಯಲು ಸೂಚನೆ ನೀಡಿತ್ತು.

ಬೆತ್ತಲೆಸೇವೆಯ ಈ ಅನಾಗರಿಕ ಆಚರಣೆಯ ಬಗ್ಗೆ ಪ್ರೊ. ಬಿ. ಕೃಷ್ಣಪ್ಪನವರು, ನಾನು ಸೊರಬಕ್ಕೆ ಬರುವ ಒಂದು ವರ್ಷ ಮುಂಚಿನಿAದ ಬೆತ್ತಲೆ ಸೇವೆಯ ಆಚರಣೆ ಒಂದು ಅನಾಗರಿಕ ಆಚರಣೆ ಎನ್ನುವ ಬಗ್ಗೆ ಅನೇಕ ಲೇಖನಗಳನ್ನು ಬರೆದು ಇದನ್ನು ತಡೆಗಟ್ಟಬೇಕೆಂದು ಅಂದಿನ ರಾಜ್ಯ ಸರ್ಕಾರಕ್ಕೆ ಆಗ್ರಹಿಸುವ ಪತ್ರ ಬರೆದು ಈ ವಿಷಯಗಳೆಲ್ಲಾ ದಿನಪತ್ರಿಕೆ ಮತ್ತು ಆಗ ಜಾಣಜಾಣೆಯರ ಪತ್ರಿಕೆ ಎಂದು ಹೇಳಿ ತರುತ್ತಿದ್ದ ಲಂಕೇಶ್ ಪತ್ರಿಕೆಯಲ್ಲೂ ಪ್ರಕಟಗೊಂಡಿತ್ತು.

1986ರ ಜಾತ್ರೆ ಸಮಯದಲ್ಲಿ ಜಿಲ್ಲಾಧಿಕಾರಿಗಳಾಗಿದ್ದ ತಂಗರಾಜ್ ಅವರು ಕಂದಾಯ ಮತ್ತು ಸಮಾಜ ಕಲ್ಯಾಣ ಇಲಾಖೆಗಳ ಸಭೆ ನಡೆಸಿ ಬೆತ್ತಲೆ ಹೋಗುವ ಜನರನ್ನು ಜಾಗೃತಗೊಳಿಸಿ ತಡೆಯಬೇಕೆಂದು ಜಿಲ್ಲಾಡಳಿತ ತೀರ್ಮಾನಿಸಿತ್ತು. ಕೃಷ್ಣಪ್ಪನವರ ಡಿಎಸ್‌ಎಸ್ ಸಂಘಟನೆಯ ಹೋರಾಟದ ಜೊತೆಗೆ ಶಿವಮೊಗ್ಗ-ಸಾಗರ-ಸೊರಬದಲ್ಲಿನ ಎಲ್ಲ ಪ್ರಗತಿಪರ ಸಂಘಟನೆಗಳು, ಕನ್ನಡ ಸಂಘ, ಪ್ರಗತಿಪರ ಮಹಿಳಾ ಲೇಖಕಿಯರ ಸಂಘಟನೆಗಳು ಕೈಜೋಡಿಸಿದ್ದವು. ಭದ್ರಾವತಿಯಿಂದ ಪ್ರೊ. ಚಂದ್ರಶೇಖರಯ್ಯ, ಡಿಎಸ್‌ಎಸ್ ಚಂದ್ರು, ತೋರಣಗಟ್ಟಿ ಚಂದ್ರಶೇಖರ್, ಬಿದರಳ್ಳಿ ನರಸಿಂಹಮೂರ್ತಿ, ಇನ್ನೂ ಅನೇಕ ಪ್ರಗತಿಪರ ಹೋರಾಟಗಾರರು ಭಾಗವಹಿಸಿದ್ದರು.

ನಾನು ಸರ್ಕಾರದ ಭಾಗವಾಗಿ ಸಂಜೆ ಹಳ್ಳಿಗಳಿಗೆ ಕರಪತ್ರಗಳನ್ನು ಹಂಚಿ, ‘ಯಾವ ದೇವರಿಗೂ ಬೆತ್ತಲೆ ಪೂಜೆ ಸಲ್ಲಿಸುವುದು ಇಷ್ಟವಾಗದು. ಇದೆಲ್ಲ ಹಿಂದುಳಿದವರನ್ನೂ, ದಲಿತರನ್ನೂ ಶೋಷಣೆ ಮಾಡುವ ಕ್ರೂರ ಪದ್ಧತಿ, ಇವನ್ನು ನಿವಾರಣೆಮಾಡಬೇಕೆಂದು ಭಾಷಣ ಮಾಡುತ್ತಾ ತಾಲ್ಲೂಕು ಕಛೇರಿಯ ಸಿಬ್ಬಂದಿಯನ್ನು ಹಲವು ತಂಡಗಳಾಗಿ ಮಾಡಿಕೊಂಡು ಹಳ್ಳಿಗಳಲ್ಲಿ ಪ್ರಚಾರ ಮಾಡುತ್ತಿದ್ದೆವು. ಸರ್ಕಾರದ ನಿರ್ದೇಶನವಿದ್ದುದರ ಜೊತೆಗೆ ಈ ವಿಷಯಗಳು ನನಗೆ ಇಷ್ಟವಾದ ಕೆಲಸವಾಗಿದ್ದರಿಂದ ಹೆಚ್ಚಿನ ಆಸಕ್ತಿಯಿಂದ ಬೆತ್ತಲೆ ಸೇವೆ ವಿರುದ್ಧ ಪ್ರಚಾರ ಮಾಡುತ್ತಿದ್ದೆವು. ಹೀಗೆ ಎಲ್ಲಾ ಕಡೆ ಪ್ರಚಾರ ಮಾಡಿದ ಮೇಲೆ ಪ್ರೊ.ಬಿ.ಕೆ ಮತ್ತು ಶಿವಪ್ಪ ಮಾಸ್ತರು ಇನ್ನು ಕೆಲವು ಗೆಳೆಯರು ನಮ್ಮಲ್ಲಿ ಊಟ ಉಪಚಾರ ಮಾಡಿ ಹೋಗುತ್ತಿದ್ದರು. ಇದರ ಸಂಪೂರ್ಣ ಘಟನೆಯ ವಿವರವನ್ನು ಈಗಾಗಲೇ ಪ್ರೊ. ಬಿ. ಕೃಷ್ಣಪ್ಪ ಟ್ರಸ್ಟ್ 2010ರಲ್ಲಿ ಪ್ರಕಟಿಸಿರುವ ‘ಬಯಲು.. ಬೆತ್ತಲೆ..ಚಂದ್ರಗುತ್ತಿ’ ಎಂಬ ಪುಸ್ತಕದಲ್ಲಿನ ಮಾಹಿತಿಯನ್ನು ಇಲ್ಲಿ ಮುಂದುವರೆಸಲಾಗಿದೆ.

ಬೆತ್ತಲೆ ಸೇವೆ ನಡೆಯುವ ಒಂದು ವಾರ ಮುಂಚಿತವಾಗಿಯೇ ಕೃಷ್ಣಪ್ಪನವರ ನೇತೃತ್ವದಲ್ಲಿ ಡಿ.ಎಸ್.ಎಸ್. ಕಾರ್ಯಕರ್ತರು ಮತ್ತು ಪ್ರಗತಿಪರ ಸಂಘಟನೆಗಳೊಡನೆ ಸಂಜೆ ಹಳ್ಳಿಗಳಿಗೆ ಹೋಗಿ ಭಾಷಣಗಳ ಮುಖಾಂತರ ಬೆತ್ತಲೆ ಸೇವೆಯನ್ನು ವಿರೋಧಿಸುವ ಪ್ರಚಾರದಲ್ಲಿ ನಾನೂ ತೊಡಗಿಸಿಕೊಂಡಿದ್ದೆ. ಚಂದ್ರಗುತ್ತಿ ದೇವಸ್ಥಾನ ಸಮಿತಿಯ ಸಂಚಾಲಕರಾಗಿದ್ದ ಈಡೂರು ಪರಶುರಾಮಪ್ಪ ಮತ್ತು ಅವರ ಸ್ನೇಹಿತರು ವೈಯಕ್ತಿಕವಾಗಿ ಬೆತ್ತಲೆ ಸೇವೆಯನ್ನು ವಿರೋಧಿಸುವ ಹೋರಾಟಕ್ಕೆ ನಮ್ಮ ಬಳಿ ಸಮ್ಮತಿಸಿದ್ದರೂ ಇದನ್ನು ವಿರೋಧಿಸುವುದು ಹೇಗೆ ಎಂಬುದರ ಬಗ್ಗೆ ಅವರಲ್ಲಿ ದುಗುಡ ತುಂಬಿತ್ತು. ಆಗಿನ ಜನಪ್ರತಿನಿಧಿಗಳು ಯಾರೂ ಈ ಬಗ್ಗೆ ಚಕಾರವೆತ್ತುತ್ತಿರಲಿಲ್ಲ. ಇದೊಂದು ಅತಿ ಸೂಕ್ಷ್ಮ ವಿಚಾರವೆಂದೂ- ಏನಾದರೂ ಮಾತನಾಡಿದರೆ ಜನರಿಂದ ದೂರ ಆಗುವ ಆತಂಕ ರಾಜಕಾರಣಿಗಳ ಒಳ ಇಂಗಿತವಾಗಿತ್ತು. ಚುನಾವಣಾ ರಾಜಕೀಯದ ದೃಷ್ಟಿಯಿಂದ ಅವರಿಗೆ ಇದೆಲ್ಲ ಬೇಡದ ವಿಚಾರವಾಗಿತ್ತು.

ಈ ಹಿನ್ನೆಲೆಯಲ್ಲಿ ಬೆತ್ತಲೆಸೇವೆ ನಡೆಸುವ ಮೊದಲ ದಿನ ಸರ್ಕಾರವು ಸೂಚಿಸಿದಂತೆ ಡಿ.ಎಸ್.ಎಸ್. ಮತ್ತು ಇತರೆ ಸಂಘಟನೆಯ ಕಾರ್ಯಕರ್ತರು- ಬೆತ್ತಲೆ ಹೋಗುತ್ತಿದ್ದವರನ್ನು ತಡೆದು ಅವರಿಗಾಗಿ ಹೊಸ ಬಟ್ಟೆ ತಂದಿದ್ದ ಮಹಿಳಾ ಕಾರ್ಯಕರ್ತರು ಅವರಿಗೆ ಸುತ್ತಿ- ಕಳುಹಿಸುತ್ತಿದ್ದರು. ಅವರು ಸುತ್ತಿಕೊಂಡು ಮುಂದೆ ಹೋಗುತ್ತಿದ್ದಾಗ ಮತ್ತೆ ಬಿಚ್ಚಿಕೊಂಡು ಓಡುತ್ತಿದ್ದುದು ನಡೆಯುತ್ತಲೂ ಇತ್ತು. ಮೊದಲ ದಿನದ ಈ ಕರ‍್ಯ ಸಂಪೂರ್ಣವಾಗಿ ಶಾಂತಿಯುತವಾಗಿ ನಡೆಯಿತು. ಸರ್ಕಾರ ಮತ್ತು ಡಿಎಸ್‌ಎಸ್ ಕರ‍್ಯಕರ್ತರು ಕೂಡ ಇದು ಸಂಪೂರ್ಣ ಯಶಸ್ವಿಯಾಯಿತೆಂದೇ ಭಾವಿಸಿದೆವು.

ಆದರೆ ಎರಡನೇ ದಿನ ಅಂದರೆ, 20-3-1986ರಂದು ಬೆಳಿಗ್ಗೆಯಿಂದಲೇ ಜನಸಾಗರ ವಿವಿಧ ಕಡೆಗಳಿಂದ ಹರಿದು ಬರುತ್ತಿತ್ತು. ನಾನು ನನ್ನ ಸಿಬ್ಬಂದಿಯೊಡನೆ ಮಾಮೂಲಿನಂತೆ ಜಾತ್ರೆ ನಡೆಯುವ ಸ್ಥಳಕ್ಕೆ ಹೋಗುತ್ತಿದ್ದಾಗ ಬೆತ್ತಲೆ ಸೇವೆ ಮಾಡೋ ಹೆಂಗಸಿನ ಫೋಟೋ ತೆಗೆಯುತ್ತಿದ್ದ ಇನ್ನೊಬ್ಬ ಮಹಿಳಾ ಫೋಟೋಗ್ರಾಫರ್‌ನನ್ನು ನಮ್ಮ ಎದುರಿಗೆ ಅಡ್ಡಹಾಕಿ ಅವಳು ತೆಗೆದಿದ್ದ ಫೋಟೋ ರೀಲುಗಳನ್ನು ಹೊರತೆಗೆದು ಅವಳನ್ನು ನಮ್ಮ ಎದುರಿಗೆ ಥಳಿಸಲು ಮುಂದಾಗಿ, ಅವಳನ್ನು ನಗ್ನಗೊಳಿಸಿದರು. ಆಗ ಜೋಗಿತಿಯರನ್ನು ನಾನು ತಡೆಯಲು ಹೋದಾಗ ವಾಗ್ವಾದ-ತಳ್ಳಾಟ ಪ್ರಾರಂಭವಾಯಿತು.

ಸರ್ಕಾರ ಮತ್ತು ವಿವಿಧ ಸಂಘಟನೆಗಳನ್ನು ಜೋಗತಿಯರು ಎದುರು ಹಾಕಿಕೊಳ್ಳುವುದನ್ನು ಊಹಿಸದಿದ್ದ ನಮಗೆ ಇದೆಲ್ಲ ಅನಿರೀಕ್ಷಿತ ಬೆಳವಣಿಗೆಯಾಗಿತ್ತು. ಜನರು ಅಲ್ಲಿ ಡಿ.ಎಸ್.ಎಸ್. ಕಾರ್ಯಕರ್ತರನ್ನ ಹೊಡೆದರಂತೆ. ಇಲ್ಲಿ ಬಟ್ಟೆ ಬಿಚ್ಚಿದರಂತೆ, ಎಂಬ ವದಂತಿಗಳನ್ನ ಹಬ್ಬಿಸಿ ಸರ್ಕಾರದ ವ್ಯವಸ್ಥೆಯಲ್ಲಾಗಲೀ, ಡಿಎಸ್ ಎಸ್ ಮತ್ತಿತರ ಹೋರಾಟಗಾರರಾಗಲೀ ಆಗುತ್ತಿರುವ ಬೆಳವಣಿಗೆಗಳ ಬಗ್ಗೆ ಏನೂ ತಿಳಿಯದಂತಾಗಿದ್ದರು. ನನ್ನೊಡನೆ ಇದ್ದ ಸಿಬ್ಬಂದಿ ಚದುರಿ ಹೋಗಿ ನಾನು ರಕ್ಷಣೆಗಾಗಿ ಪೋಲೀಸ್ ವ್ಯಾನಿಗೆ ಹತ್ತಿಕೊಂಡಿದ್ದೆ. ನಾವು ತಂದಿದ್ದ ಜೀಪಿಗೆ ಬೆಂಕಿ ಹಚ್ಚಿಟ್ಟು ಜೋಗತಿಯರು ಅಟ್ಟಹಾಸ ಮೆರೆದಿದ್ದರು. ನಾವು ವ್ಯಾನಿನ ಒಳಗೆ ಇದ್ದು, ಇನ್ನು ಮುಂದೆ ಏನಾಗುವುದೋ ಅನ್ನೋ ಆತಂಕದಲ್ಲಿದ್ದಾಗ ನನಗೆ ಪರಿಚಿತ ವ್ಯಕ್ತಿಯೊಬ್ಬ ಓಡಿಬಂದು ನನ್ನ ಪರಿಚಯ ಗುರುತು ಸಿಗದಂತೆ ಭಂಡಾರ ಹಾಕಿ ಅಲ್ಲಿಂದ ತನ್ನ ಮನೆಗೆ ಕರೆದುಕೊಂಡು ಹೋಗಿ ತನ್ನ ಪಂಚೆ ನೀಡಿ ಪ್ಯಾಂಟ್ ಷರಟು ತೆಗೆಸಿ ನಾನು ಯಾರೋ ಅನ್ನೋ ರೀತಿ ಮಾಡಿಕೊಂಡು ತನ್ನ ರಾಜದೂತ್ ಮೋಟಾರ್‌ಬೈಕ್‌ನಲ್ಲಿ ಸೊರಬಕ್ಕೆ ತಂದುಬಿಟ್ಟರು.

ಅಲ್ಲಿಂದ ಎಲ್ಲರಿಗೂ ಫೋನ್ ಮಾಡಿ ಆಗಿದ್ದ ಅನಾಹುತವನ್ನು ತಿಳಿಸಿದೆ. ಇದು ಸುಮಾರು ಮಧ್ಯಾಹ್ನ 3.00 ಘಂಟೆಯ ತನಕ ಜೋಗತಿಯರ ಅಟ್ಟಹಾಸಕ್ಕೆ ಗುರಿಯಾದ ಡಿ.ಎಸ್.ಎಸ್. ಮತ್ತು ಇತರೆ ಕರ‍್ಯಕರ್ತರು ತಮಗೆ ಸಿಕ್ಕ ಸಿಕ್ಕ ಕಡೆ ಚದುರಿ ಪ್ರಾಣ ಉಳಿಸಿಕೊಳ್ಳಲು ತಪ್ಪಿಸಿಕೊಂಡು ಪರಾರಿಯಾದರು. ಈ ಸಂದರ್ಭದಲ್ಲಿ ಕೃಷ್ಣಪ್ಪನವರೇನಾದರೂ ಈ ಜೋಗತಿಯರ ಕೈಗೆ ಸಿಕ್ಕಿದ್ದರೆ ಬಹುಶಃ ಅಂದೇ ಅವರ ಕೊಲೆ ಮಾಡಲು ಹೇಸುತ್ತಿರಲಿಲ್ಲ.

ಸುಮಾರು 4.00 ಘಂಟೆಯ ಸುಮಾರಿಗೆ ಹೆಚ್ಚಿನ ಪೋಲೀಸ್ ಬಂದು ಇಡೀ ಜೋಗತಿಯರ ಸಮೂಹವನ್ನು ಬೆತ್ತಲೆಯಾಗಿಯೇ ಅರೆಸ್ಟ್ ಮಾಡಿ ಸೊರಬ ಪೋಲೀಸ್ ಠಾಣೆಯಲ್ಲಿ ಕೂಡಿ ಹಾಕಿದ್ದರು. ಸುಮಾರು 5-6 ಘಂಟೆಯ ಸುಮಾರಿಗೆ ಪೋಲೀಸ್ ಬಂದು ಇವರಲ್ಲಿ ಯಾರು ನಿಮ್ಮ ಮೇಲೆ ಹಲ್ಲೆ ಮಾಡಿದರು ಗುರ್ತಿಸಿ ಎಂದು ಹೇಳಿದರು.

ಪೊಲೀಸರೊಡನೆ ಹೋಗಿ ನೋಡುತ್ತೇನೆ, ಅದೊಂದು ಭಯಂಕರ ದೃಶ್ಯ. ಪೀಚಲು ದೇಹಗಳ ಅನಾರೋಗ್ಯವೇ ಮೂರ್ತಿವೆತ್ತ- ಕುಡಿತದ ಅಮಲಿನಲ್ಲಿದ್ದ ಅವರಿಗೆ ತಾವೇನು ಮಾಡಿದ್ದೆವು ಅನ್ನುವುದೇ ಅವರಿಗೆ ಗೊತ್ತಿರಲಿಲ್ಲ. ಯಾವುದೋ ಕಾಡಿನ ಪ್ರಾಣಿಗಳಂತೆ ಪಿಳಿಪಿಳಿ ಕಣ್ಣು ಬಿಡುತ್ತಾ ಆ ರೂಮಿಗೆ ಬಂದವರನ್ನು ನೋಡುತ್ತಿದ್ದರು. ನನಗೆ `ಯಾರು ಏನು ಮಾಡಿದರು ಎನ್ನುವುದನ್ನ ಯಾರ ಮೇಲೆ ಹೇಳಲಿ’ ಎನ್ನುತ್ತಾ ಈಚೆಗೆ ಬಂದೆ. ಆದರೆ ಈ ಜೋಗತಿಯರು ಅಂತಹ ಸ್ಥಿತಿಯಲ್ಲೂ ತಮ್ಮ ಬಳಿ ಬೆಳಗಿನಿಂದ ದೋಚಿದ ಒಡವೆಗಳು ಮತ್ತು ಹಣ ಇರುವುದು ಸಣ್ಣ ಸಣ್ಣ ಚೀಲಗಳಲ್ಲಿರುವುದು ಪರಿಶೀಲಿಸಿದಾಗ ಕಂಡು ಬಂತು.

ಈ ಘಟನೆಯ ನಂತರ ಆದ ಮಾರನೇ ದಿನ ರಾಜ್ಯದ ವಿವಿಧ ಪತ್ರಿಕೆಗಳಲ್ಲಿ ಪ್ರಮುಖ ಸುದ್ದಿಯಾಗಿ ವರದಿಗಳು ಪ್ರಕಟಗೊಂಡವು. ನಾನು ಆತಂಕದಿAದ ನನ್ನ ಹೆಂಡತಿಗೆ ‘I ಚಿm Sಚಿಜಿe’ ಎಂದು ತಂತಿ ನೀಡಿದಾಗ ಅವಳು ಗಲಿಬಿಲಿಗೊಂಡು ಫೋನ್ ಮಾಡಿದಳು. ಇತ್ತ ನನ್ನ ಹಳ್ಳಿ ಹನಗವಾಡಿಯಿಂದ ಬಂದಿದ್ದ ಜೋಗತಿಯರಿಂದಲೇ ರೋಚಕವಾಗಿ ತಲುಪಿದ್ದ ಸುದ್ದಿಯಿಂದ, ವರದಿಗಳನ್ನು ಕೇಳಿಕೊಂಡ ನಮ್ಮ ಊರಿನ ಜನರು ಮತ್ತು ನಮ್ಮ ಅವ್ವ, ಅಣ್ಣ-ತಮ್ಮಂದಿರು ಮತ್ತು ಮಿತ್ರರ ದಂಡು ಸೊರಬಕ್ಕೆ ನನ್ನನ್ನು ನೋಡಲು ಬಂದಿದ್ದರು. ಅವರು ನಾನು ಮಾಮೂಲಿನಂತೆ ಇದ್ದುದನ್ನು ನೋಡಿ ನೆಮ್ಮದಿಗೊಂಡರು. ನನ್ನ ತಮ್ಮನೊಬ್ಬ ನಿನ್ನನ್ನು ಆಸ್ಪತ್ರೆಯಲ್ಲಿ ಬ್ಯಾಂಡೇಜ್ ಸಮೇತ ನೋಡುವ ಕಲ್ಪನೆಯಲ್ಲಿಯೆ ಓಡಿ ಬಂದೆವು ಎಂದಾಗ ನಾನು ಕೂದಲೆಳೆಯಲ್ಲಿ ಸಾವು ತಪ್ಪಿದ್ದನ್ನು ವಿವರಿಸಲಿಲ್ಲ.

ನಾನು ತಹಶೀಲ್ದಾರನಾಗಿ ಹೊಸದರಲ್ಲಿ ಆಗಿದ್ದ ಈ ಘಟನೆ ಇಂದಿಗೂ ನನಗೆ ಎಚ್ಚರಿಕೆಯ ಮಾರ್ಗ ಸೂಚಿಯಾಗಿದೆ. ಒಂದು ವಿಷಾದದ ಸಂಗತಿಯೆAದರೆ ನಮ್ಮ ಪೋಲೀಸರು ಇಂದಿಗೂ ಯಥಾಸ್ಥಿತಿಯ ರಕ್ಷಕರಾಗಿಯೇ ಉಳಿದಿದ್ದಾರೆ. ಅವರನ್ನು ಬದಲಾಗುತ್ತಿರುವ ಕಾಲಮಾನದ ಜೊತೆಗೆ ಬದಲಾವಣೆಯ ರೂವಾರಿಗಳಾಗುವಂತೆ ತರಬೇತಿ ನೀಡುವಲ್ಲಿ ಸರ್ಕಾರವು ಒತ್ತು ನೀಡುವುದು ಇಂದಿನ ಅಗತ್ಯವಾಗಿದೆ.

ಈ ಘಟನೆಯ ನಂತರದ ಆದ ಬೆಳವಣಿಗೆಯ ಹಿನ್ನೆಲೆಯಲ್ಲಿ ಒಂದು ಮಹತ್ತರ ಬದಲಾವಣೆ ಆ ಪ್ರದೇಶದಲ್ಲಿ ಆಗಿದೆ. ಬೆತ್ತಲೆ ಸೇವೆಯನ್ನು ಸರ್ಕಾರ ನಿಷೇಧಿಸಿದೆ. ಅದರೊಟ್ಟಿಗೆ ಅನೇಕ ಸಾಮಾಜಿಕ ಅನಿಷ್ಟಗಳ ಬಗ್ಗೆ ಸಾಮಾನ್ಯ ಜನರ ಮಧ್ಯದಲ್ಲಿ ಚರ್ಚೆಗಳಾಗಿವೆ. ಕೃಷ್ಣಪ್ಪನವರ ಹೋರಾಟ ಹೊಸ ದಿಕ್ಕಿನೆಡೆಗೆ ಸಮಾಜವನ್ನು ಮುಖ ಮಾಡಿಸಿದೆ. ಇದು ಅವರ ಆತ್ಮಕ್ಕೆ ನೆಮ್ಮದಿಯನ್ನು ನೀಡಿದೆ ಎಂದರೆ ತಪ್ಪಾಗಲಾರದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಆತ್ಮಕತೆ | ಕೇಂದ್ರದಲ್ಲಿ ಮೂಡಿ ಮಡಿದವರು

Published

on

  • ರುದ್ರಪ್ಪ ಹನಗವಾಡಿ

ಮನಸ್ಸಿನಲ್ಲಿ ಉಳಿದು ಹೋದ ಆರೋಗ್ಯವಂತ ವಿದ್ಯಾರ್ಥಿಗಳ ಕಿರುಚಿತ್ರಣ

ಯಶೋದ

ಈಗ್ಗೆ ಸುಮಾರು 8 ವರ್ಷಗಳಿಂದ ಅಧ್ಯಾಪಕ ವೃತ್ತಿಯನ್ನು ಮಾಡಿಕೊಂಡು ಬರುತ್ತಿದ್ದೇನೆ. ಈ ಅವಧಿಯಲ್ಲಿ ನಾವು ಸಂಪರ್ಕಿಸಿದ ವಿದ್ಯಾರ್ಥಿಗಳು ಹಲವು ನೂರು ಸಂಖ್ಯೆಗಳಿಗೆ ಮೀರಬಹುದು. ಹಲ ಕೆಲವರು ನಮ್ಮಿಂದ ಕಲಿತವರಿದ್ದರೆ, ಮತ್ತೆ ಕೆಲವರು ಇವರದೇನು ಎಂಬ ಮಾತಿರಬಹುದು. ಹೀಗೆ ಪ್ರತಿವರ್ಷವೂ ಬಂದು ಹೋಗುವ, ಹಲವು ಹತ್ತಾರು ವಿದ್ಯಾರ್ಥಿಗಳಲ್ಲಿ ಕೆಲವು ವಿದ್ಯಾರ್ಥಿಗಳು ಅವರ ವಿಶೇಷ ಗುಣಗಳಿಗೆ, ಸಾಮರ್ಥ್ಯಕ್ಕೆ ಹೆಸರಾಗಿ ಹಲವರು ಮನಸ್ಸಲ್ಲಿ ಚಿರಸ್ಥಾಯಿಯಾಗಿ ಉಳಿಯುತ್ತಾರೆ. ಹಾಗೆ ಉಳಿದು ನಿಜ ಬದುಕಿನಲ್ಲಿ ಅಳಿದು ಹೋದ ಕೆಲವು ವಿದ್ಯಾರ್ಥಿಗಳ ನೆನಪು ಮಾಡಿಕೊಳ್ಳುವುದೇ ಈ ಲೇಖನದ ಉದ್ದೇಶ.

1981ನೇ ವರ್ಷ ನನ್ನ ಬದುಕಿನಲ್ಲಿ ಅನೇಕ ಘಟನಾವಳಿಗಳಿಂದ ಕೂಡಿದ ವರ್ಷ. ಮೇ ತಿಂಗಳಲ್ಲೊಂದು ದಿನ ನಮ್ಮ ಊರಿಗೆ ಹೋಗಿ, ಅಲ್ಲಿನ ತರಲೆಗಳನ್ನೆಲ್ಲ ತಲೆಯಲ್ಲಿ ತುಂಬಿಕೊAಡು ಅವ್ವ ಕೊಟ್ಟ ಸಣ್ಣಪುಟ್ಟ ಸಾಮಾನುಗಳನ್ನು ಕಟ್ಟಿಕೊಂಡು ಮೂರು ಮೈಲು ನಡೆದು. ಶಿವಮೊಗ್ಗದ ಬಸ್ಸು ಹಿಡಿದು ಪ್ರಾಜೆಕ್ಟ್ ತಲುಪುವ ವೇಳೆಗೆ ನನಗೆ ಸಾಕೋ ಸಾಕಾಗಿ ಹೋಗಿತ್ತು. ಹಲವು ಆತಂಕಗಳನ್ನು ಪಾರುಮಾಡಿಕೊಂಡು ನಮಗಾಗಿದ್ದ ಮಗ, ಹೆಂಡತಿಯನ್ನು ನೋಡೋ ಕಾತರದಲ್ಲಿ ದಣಿವು ಕರಗುತ್ತಿತ್ತು. ಮನೆಯೊಳಗೆ ಕಾಲಿಡುತ್ತಿದ್ದಂತೆ ಮಗನ ಆಟ-ಪಾಟ, ತನ್ನ ನೌಕರಿ ವಿಷಯ ಹೇಳುತ್ತಿದ್ದೆ.

ನನ್ನಾಕೆ `ಶಿವಮೊಗ್ಗದಲ್ಲೇನಾದರು ಕಾಫಿ ಕುಡಿದಿದ್ದೀರಾ?’ ಎಂದು ಕೇಳಿದಳು. ನನಗೆ ಅದ್ಯಾವ ದೊಡ್ಡ ಪ್ರಶ್ನೆ ಎಂದು ಉತ್ತರಿಸುವ ಗೋಜಿಗೆ ಹೋಗದೆ ಆರಾಮವಾಗಿ ಕೂರುವ ಹಂಚಿಕೆಯಲ್ಲಿದ್ದೆ. ಇಪ್ಪತ್ನಾಲ್ಕು ಗಂಟೆಗಳೂ ತಾನೊಬ್ಬಳೇ ಸಹಿಸಿಕೊಂಡು ಹಿಂಸೆಪಟ್ಟುದನ್ನು ಒಮ್ಮೆಲೆ ಕಣ್ಣೀರ ಕೋಡಿಯಲ್ಲಿ ಉಸುರಿದಳು. `ಯಶೋದÀ ಬೆಂಗಳೂರಲ್ಲಿ ತೀರಿ ಹೋದಳಂತೆ, ನಿಮಗೆ ಫೋನ್ ಮಾಡಿದ್ದರು’ ಎಂದಾಗ ನನಗೆ ಅಸಾಧ್ಯ ಸಂಕಟದೊಡನೆ ದಿಗ್ಭçಮೆಯಾಯಿತು. ಹತ್ತಿರದ ಮನೆಯವರಿಂದ ಸೈಕಲ್ ಪಡೆದು ಅವಳ ಶವ ತಂದ ಹಳ್ಳಿಯ ಕಡೆಗೆ ವೇಗವಾಗಿ ಹೊರಟೆ.

1977-78ರ ಈ ಕೇಂದ್ರದ ಪ್ರಾರಂಭದ ದಿನಗಳಲ್ಲಿ ಅಭಿನಯಿಸಲಾದ ಅನೇಕ ನಾಟಕಗಳಲ್ಲಿ ಸ್ಫೂರ್ತಿಯನ್ನು ವೈವಿಧ್ಯತೆಯನ್ನು ತಂದು ಕೊಟ್ಟ ಇವಳು ಅಭಿನಯ ಕಲೆಯಲ್ಲಿ ನಿಷ್ಣಾತಳಾಗಿದ್ದಳು. ಅರ್ಥಶಾಸ್ತçದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣಳಾಗಿ ಕರ್ನಾಟಕದ ಮುಖ್ಯ ಸಂಶೋಧನ ಕೇಂದ್ರದಲ್ಲಿ ಸಂಶೋಧನೆ ಮಾಡುತ್ತಿದ್ದ ಇವಳ ಸಾವು, ನಮ್ಮ ಕೇಂದ್ರದಿAದ ಹಾರಿಬಿಟ್ಟ ಹಕ್ಕಿಯ ರೆಕ್ಕೆ ಮುರಿದು ಬೆಂಕಿಗೆ ಬಿದ್ದಷ್ಟು ನೋವು ತಂದಿತ್ತು.

ವಿದ್ಯಾರ್ಥಿ ದೆಸೆಯಿಂದಲೂ ಉದಾತ್ತ ಗುಣಗಳನ್ನು ಬೆಳೆಸಿಕೊಂಡಿದ್ದ ಯಶೋದ ನ್ಯಾಯಕ್ಕಾಗಿ ಯಾರ ನಿಷ್ಠುರವನ್ನೂ ಲೆಕ್ಕಿಸದ, ನೇರ ಮನಸ್ಸಿನ ಸರಳ ಸುಂದರ ಹುಡುಗಿ. ನಮ್ಮ ಅನೇಕ ಹುಡುಗ-ಹುಡುಗಿಯರಲ್ಲಿ ಕಾಣಸಿಗದ, ಆರೋಗ್ಯಕರ ಮನಸ್ಸಿನ ಈ ಹುಡುಗಿಗೆ ಅನಾರೋಗ್ಯವು ಇಷ್ಟು ಬೇಗ ಸಾವು ತರುವುದೆಂದು ಯಾರು ತಾನೆ ಊಹಿಸಿದ್ದರು? ನನ್ನ ಮಗನನ್ನು ನೋಡಲು ಬರುವೆ ಎಂದು ಕಾಗದ ಬರೆದಿದ್ದು, ಇವಳು ಕೊನೆಗೆ ಮಾಂಸದ ಮುದ್ದೆಯಾಗಿ ಅವಳ ಊರಲ್ಲಿ ನೋಡಿ, ನನ್ನ ವಿದ್ಯಾರ್ಥಿನಿಯಾಗಿ ಓಡಾಡುತ್ತಿದ್ದವಳು ಇವಳೇ ಎಂದು ಯೋಚನೆಯಲ್ಲಿ ಮುಳುಗುವಂತೆ ಮಾಡಿ ಮರೆಯಾದಳು.

ಬಷೀರ್ ಅಹಮದ್

ಬಷೀರ್ ಅಹಮದ್ ಎಂಬ ವಿದ್ಯಾರ್ಥಿ ಓದು ಮುಗಿಸಿ ಹೋದ ನಂತರ, ಆತನ ಶಿಸ್ತನ್ನು ಹೋಲುವ ವಿದ್ಯಾರ್ಥಿಗಳು ನಮ್ಮ ಕೇಂದ್ರಕ್ಕೆ ಬಂದಿಲ್ಲವೆಂದೇ ಹೇಳಬೇಕು. ವಿನಯ ವಿದ್ಯಾಭ್ಯಾಸದ ಲಕ್ಷಣ ಎನ್ನುವ ರೀತಿಯಂತೆ ಈತನ ನಡವಳಿಕೆ.

ಕನ್ನಡವನ್ನು ಸರಾಗವಾಗಿ ಮಾತನಾಡಲಾರದವನಾಗಿದ್ದ ಈತ ನನ್ನನ್ನು ಹಲವು ಬಾರಿ ಕಾಡಿ ಕನ್ನಡವನ್ನು ಕಲಿತದ್ದುಂಟು. ಅವನ ಮಧುರವಾದ ಕಂಠದಿಂದ ಕನ್ನಡ ಹಾಡುಗಳನ್ನು ಹಾಡಿಸಲು ನಾನು ಕನ್ನಡ ಪದ್ಯಗಳನ್ನು ವಿವರಿಸಿ ಬರೆದುಕೊಡುತ್ತಿದ್ದೆ. ಅವನಿಗೆ ಇದ್ದ ಅಪಾರ ಶ್ರದ್ಧೆಯಿಂದಾಗಿ ಸುಲಲಿತವಾಗಿ ಕನ್ನಡ ಮಾತಾಡುವುದರ ಜೊತೆಗೆ, ಕನ್ನಡ ಹಾಡುಗಳನ್ನು ಹಾಡಿ ನಮ್ಮ ಕೇಂದ್ರದ ಮತ್ತು ನಮ್ಮ ಈ ಪರಿಸರದ ಜನರ ಹೃದಯದಲ್ಲಿ ಈಗಲೂ ಗುಂಯ್‌ಗುಡುತ್ತಿದ್ದಾನೆ.

ಕೇಂದ್ರದಿಂದ ಎಂ.ಎ., ಪಾಸು ಮಾಡಿಕೊಂಡು ಹೋದ ಮೇಲೆ ಬೆಂಗಳೂರಿನಲ್ಲಿ ಉಪಾಧ್ಯಾಯನಾಗಿ ಕೆಲಸ ಮಾಡುತ್ತಿರುವಾಗ ಮತ್ತೆ ಪ್ರಾಜೆಕ್ಟ್ಗೆ ಬಂದಿದ್ದನು. ಆತನ ಕಂಠ ಮಾಧರ‍್ಯವನ್ನು ಸವಿಯಲು, ಮನೆಗೆ ತಿಂಡಿ ತಿನ್ನಲು ಬನ್ನಿ ಎಂದು ಆಹ್ವಾನಿಸಿದೆ. ಆತ, ತಿಂಡಿ ತಿನ್ನಲು ಬೇರೊಬ್ಬ ಅಧ್ಯಾಪಕರು ಕರೆದಿದ್ದಾರೆ, ನಿಮ್ಮ ಮನೆಗೆ ಊಟಕ್ಕೇನೆ ಬರುವೆ ಸಾರ್, ಅಂದಾಗ ಸಂತೋಷದಿAದ ಕರೆದೊಯ್ದೆ. ಜೊತೆಗೆ ಮಾತುಕತೆ ಹೀಗೆ ನಡೆದಿತ್ತು. ಪುಳಿಚಾರು ಊಟ ಕಣಯ್ಯಾ ಎಂದಾಗ, ಮುಂದಿನ ಸಾರಿ ನಾನೆ ಬಂದು ಬಿರಿಯಾನಿ ಮಾಡುವೆ ಎಂದು ಹೇಳಿದ. ಬಿರಿಯಾನಿ ಮಾಡಿ ಉಣ್ಣುವ ದಿನ ಬರುವ ಮುನ್ನವೇ ಜಾಂಡೀಸ್ ಬಂದು ಬಷೀರ್ ಇನ್ನಿಲ್ಲವಾದ. ಸತ್ತ ಹಲವು ದಿನಗಳ ನಂತರ ಬಂದ ಪತ್ರದಿಂದ ಸಂಕಟವಾಯಿತು.

ಈಗ ಯಾವ ಸಭೆ ಸಮಾರಂಭಗಳಲ್ಲಿ ಯಾರು ಹಾಡು ಹೇಳಿದರೂ ಬಷೀರ್‌ನ ನೆನಪು ಬಂದು ಕಣ್ಣು ತೇವವಾಗುತ್ತದೆ. ಕಡುಬಡತನದಿಂದ ಬಂದು ಅಪಾರ ಸ್ವಾಭಿಮಾನಿಯಾಗಿ ಬೆಳೆದು ಅಧ್ಯಾಪಕರೆಲ್ಲರ ವಿಶ್ವಾಸ ಗಳಿಸಿ ನಿಗರ್ವಿಯಾಗಿದ್ದ ಬಷೀರ್ ಅಹಮದ್ ಹಲವು ಆಸೆಗಳನ್ನಿಟ್ಟುಕೊಂಡು ಹಗಲಿರುಳು ದುಡಿಯುತ್ತಿದ್ದ. ಸಾಮಾನ್ಯ ರೋಗವೊಂದು ಅವನ ಆಸೆಗಳಿಗೆ, ಅವನ ಸಾಮರ್ಥ್ಯಗಳಿಗೆ ಇತಿಶ್ರೀ ಹಾಡುವುದೆಂದು ಯಾರು ತಾನೆ ನಂಬಿದ್ದರು?

ಗೋಪಾಲಸ್ವಾಮಿ

ಈತ ನಮ್ಮ ಕೇಂದ್ರಕ್ಕೆ ಬಂದಾಗಲೇ ನನಗೆ, ಹೊಸ ಶಕ್ತಿಯುಳ್ಳ ಯುವಕನೊಬ್ಬ ಬಂದಿದ್ದಾನೆ ಎಂಬ ಆಸೆ ಹುಟ್ಟಿತ್ತು, ಗೋಪಾಲಸ್ವಾಮಿ ನೋಡಲು ಪೀಚಲು. ಇವನೆಂತಹ ಹುಡುಗ ಎಂದು ಯಾರಾದರೂ ಕಡೆಗಣಿಸಬಹುದಾಗಿದ್ದ ಈತ ಮನದೊಳಗೆ ಅಗಾಧ ಬಾಂಬನ್ನೇ ಇಟ್ಟುಕೊಂಡಿದ್ದು ಸಿಡಿಸಲಾಗುವ ಮುನ್ನವೇ ನೆನಪಾಗಿ ಹೋದನು.

ಕನ್ನಡ ಎಂ.ಎ., ಗೆ ಬಂದು ಸೇರಿದಾಗ ಸಂಘಟನೆ, ಬಂಡಾಯ ಎಂದು ಹಲವು ಹತ್ತು ರೀತಿಯ ಹೋರಾಟದಲ್ಲಿ ಹಲವು ಬಾರಿ ಪೋಲೀಸ್ ಏಟು ತಿಂದು ಈ ದೇಶದ ಜಡ್ಡುಗಟ್ಟಿದ ಸಮಾಜದ ನಿರ್ಲಜ್ಜ ಅಸಮಾನತೆಯನ್ನು ಧಿಕ್ಕರಿಸಿದ ಈತನಿಗೆ ಸ್ವಂತ ಆಸೆಗಳು ದೂರ. ಈತ ನಮ್ಮ ಕೇಂದ್ರಕ್ಕೆ ಬಂದಾಗಲೇ ನನಗೆ, ಹೊಸ ಶಕ್ತಿಯುಳ್ಳ ಯುವಕನೊಬ್ಬ ಬಂದಿದ್ದಾನೆ ಎಂಬ ಆಸೆ ಹುಟ್ಟಿತ್ತು. ಆದರೆ ಅದು ಬಹಳ ದಿನ ಉಳಿಯಲಿಲ್ಲ.

ಸಾಮಾನ್ಯ ಖಾಯಿಲೆಯೆಂದು ಮೆಗ್ಗಾನ್ ಆಸ್ಪತ್ರೆ ಸೇರಿದ. ಈತನ ಹಣಕಾಸಿನ ಸಮಸ್ಯೆಗೆ ವಿದ್ಯಾರ್ಥಿಗಳು ಅಧ್ಯಾಪಕರು ಹಣ ಸೇರಿಸಿಕೊಟ್ಟರು. ವಿದ್ಯಾರ್ಥಿ ಜೀವನದುದ್ದಕ್ಕೂ ಹೋರಾಟದ ಬದುಕಿನಲ್ಲಿ ಏಟು ತಿಂದು ಅಪರೂಪದ ವ್ಯಕ್ತಿಯ ಬದುಕು ಬೆಳಗುವ ಮುನ್ನವೇ ನಂದಿಹೋಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಆತ್ಮಕತೆ | ಮಗು : ಆತಂಕದ ಕ್ಷಣಗಳು

Published

on

ಪತ್ನಿ ಗಾಯತ್ರಿ ಹಾಗೂ ಮಗ ಶಿಶಿರನೊಂದಿಗೆ ಲೇಖಕ ರುದ್ರಪ್ಪ ಹನಗವಾಡಿ
  • ರುದ್ರಪ್ಪ ಹನಗವಾಡಿ

ದುವೆಯಾಗಿ 1-2 ವರ‍್ಷ ಮಕ್ಕಳ ಕನಸು ಬೇಡ ಎಂದು ಯೋಚಿಸಿದ್ದರೂ ಅದೇನು ಸಫಲವಾಗದೆ ನನ್ನ ಮಗ ಶಿಶಿರ ಆಗಮಿಸಿದ್ದ.

ಭದ್ರಾವತಿಯಲ್ಲಿ ಇಂದಿರಾ ಅವರ ಮನೆಗೆ ಹೋಗಿ ಅಲ್ಲಿಂದ ಲೇಡಿ ಡಾಕ್ಟರ್ ಬಳಿ ಹೋಗಿ ತಪಾಸಣೆ ಮಾಡಿಸಿದೆವು. ನಮ್ಮಿಬ್ಬರ ರಕ್ತದ ಗುಂಪು ಆರ್‌ಹೆಚ್ ಪಾಸಿಟಿವ್ ನೆಗೆಟಿವ್‌ಗಳಾಗಿದ್ದು ನೀವು ರ‍್ಭಿಣಿ ಆಗಲು ಸಾಧ್ಯವಿಲ್ಲ. ಇದೆಲ್ಲ ಹೇಗಾಯಿತೆಂಬ ಅಭಿಪ್ರಾಯ ತಿಳಿಸಿ, ನಮಗೆ ದಿಗಿಲು ಬೀಳುವಂತೆ ವಿವರಿಸಿದ್ದಳು. ನಮಗಾರಿಗೂ ಬೇರೆ ಡಾಕ್ಟರ್ ಪರಿಚಯವಿಲ್ಲದೆ ಇರುವಾಗ ಡಾ. ಹೆಚ್. ಶಿವರಾಂ ಅವರು ಮೆಗ್ಗಾನ್ ಹಾಸ್ಪಿಟಲ್‌ನಲ್ಲಿ ಜನರಲ್ ಫಿಜಿಸಿಯನ್ ಆಗಿ ಇರುವುದು ತಿಳಿಯಿತು.

ಶಿವರಾಂ ಡಾಕ್ಟರ್ ನಮಗೆ ಮೈಸೂರಿನಲ್ಲಿರುವಾಗ ಎಸ್‌ವೈಎಸ್ ರ‍್ಯಕ್ರಮಗಳ ಹುಡುಗರ ಆರೋಗ್ಯ ಸಮಸ್ಯೆ ಬಂದಾಗ ಉಪಚರಿಸುತ್ತಿದ್ದರು. ಡಾ. ಶಿವರಾಂ ಅವರು ಹಾಸನ ಜಿಲ್ಲೆಯ ಸಕಲೇಶಪುರದ ಹಾನಬಾಳ್ ಗ್ರಾಮದವರು. ಶಿವರಾಂ ಅವರಿಗೆ ರ‍್ಣಚಂದ್ರ ತೇಜಸ್ವಿ, ಕಡಿದಾಳ್ ಶಾಮಣ್ಣ, ಸುಂದರೇಶ್, ರವರ‍್ಮಕುಮಾರ್ ಇವರೆಲ್ಲ ಪರಿಚಯವಿದ್ದವರು. ಮತ್ತು ನನಗೆ ಮೈಸೂರಿನಲ್ಲಿ ಓದುವಾಗಲೇ ಪರಿಚಯವಾಗಿದ್ದರು. ನಾನು ಮೈಸೂರು ಮಹಾರಾಜಾ ಕಾಲೇಜಿನಿಂದ ಬಿಆರ್‌ಪಿಗೆ ಬಂದದ್ದು, ನಂತರ ಮದುವೆಯಾದದ್ದು ಈಗ ನನ್ನ ಹೆಂಡತಿ ಗರ‍್ಭಿಣಿ ಆಗಿರುವ ಸುದ್ದಿ ತಿಳಿದು ಸಂತೋಷಗೊಂಡರು. ನಂತರ ಗಾಯತ್ರಿ ಭದ್ರಾವತಿಯ ಲೇಡಿ ಡಾಕ್ಟರ್ ಹೇಳಿದ ವಿಚಾರ ತಿಳಿಸಿದೆ.

ಅವರು ತಪಾಸಣೆ ನಡೆಸಿ ಇದೆಲ್ಲ ಏನೂ ಇಲ್ಲ ಇಡೀ ಏಶಿಯಾ ಖಂಡದಲ್ಲಿ ಶೇ 15ರಷ್ಟು ಜನರು ಆರ್‌ಹೆಚ್ ಪಾಸಿಟಿವ್ ನೆಗಟಿವ್ ಸಮಸ್ಯೆ ಇರುವವರು, ಅದಕ್ಕಾಗಿ ನೀವು ಚಿಂತಿಸಬೇಕಾಗಿಲ್ಲ ಎಂದು ಹೇಳಿ ಆಗ ಗೈನಾಕಾಲಜಿಸ್ಟ್ ಆಗಿದ್ದ ಡಾ. ಮುರುಗೇಂದ್ರಪ್ಪ ಅವರಿಗೆ ರೆಫರ್ ಮಾಡಿ ತಪಾಸಣೆ ನಡೆಸಿದ ನಂತರ ಕೆಲವು ಸಲಹೆ ನೀಡಿದರು. ಕೆಲವು ದಿನ ವಿಶ್ರಾಂತಿ ತೆಗೆದುಕೊಳ್ಳಲು ಸೂಚಿಸಿದ ಮೇರೆಗೆ ನಾವಿಬ್ಬರೂ ಮೆಗ್ಗಾನ್ ಆಸ್ಪತ್ರೆಯಲ್ಲಿ ಇರಬೇಕಾಗಿ ಬಂತು. ಈ ಸಮಯದಲ್ಲಿ ಗಾಯತ್ರಿಗೆ ಹಾಲು ಮೆತ್ತನೆ ಅನ್ನ ಬಿಟ್ಟರೆ ಬೇರೇನೂ ಪಥ್ಯ ಹೇಳಿರಲಿಲ್ಲ. ನಾವು ಅದಕ್ಕಾಗಿ ಒಂದು ಸ್ಟವ್ ತಂದು ಅನ್ನ ಮತ್ತು ಹಾಲನ್ನು ನಮಗೆ ನೀಡಿದ ರೂಂನಲ್ಲಿಯೇ ವ್ಯವಸ್ಥೆ ಮಾಡಿಕೊಳ್ಳುತ್ತಿದ್ದೆವು. ನನಗೆ ಇಂದಿರಾ ಮತ್ತವರ ಸ್ನೇಹಿತರಾದ ಸಾಕಮ್ಮ ಹಾಗೂ ಎಂ.ಬಿ. ನಟರಾಜ್ ಅವರ ಪತ್ನಿ ಲಕ್ಷ್ಮಿ ಇವರುಗಳ ಮನೆಯಿಂದ ಚೆನ್ನಾಗಿರುವ ಊಟ ಬರುತ್ತಿತ್ತು. ಜೊತೆಗೆ ಶಿವರಾಂ ಅವರ ನಿವಾಸ ಕೂಡ ಆಸ್ಪತ್ರೆ ಹತ್ತಿರವಿತ್ತು. ನನಗೆ ಅವರ ಮನೆಗೆ ಹೋಗಿ ಊಟ ಮಾಡಿಕೊಂಡು ಬರಲು ಶಿವರಾಂ ಡಾಕ್ಟರ್ ಹೇಳುತ್ತಿದ್ದರು.

ಶಿವರಾಂ ಅವರ ಶ್ರೀಮತಿ ಆಶಾ, ಅತ್ತೆ ಶಾರದಮ್ಮ ಮತ್ತವರ ತಾಯಿ ತಂದೆ ಕೂಡ ಮನೆಯಲ್ಲೇ ಇದ್ದರು. ಅವರಿಗೆ ಇಬ್ಬರು ಮುದ್ದಾದ ಹೆಣ್ಣು ಮಕ್ಕಳು ಇದ್ದರು. ಶಿವರಾಂ ಅವರ ಮಾವ ಸ್ವಾತಂತ್ರ್ಯ ಹೋರಾಟಗಾರರು. ರೈತ ಸಂಘದಲ್ಲಿ ಸಕ್ರಿಯ ನಾಯಕರಾಗಿದ್ದರು. ಈ ಎಲ್ಲರ ಪರಿಚಯದಿಂದಾಗಿ ನನಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಗಾಯತ್ರಿಯ ಆರೋಗ್ಯ ತಪಾಸಣೆ ಸಮಯದಲ್ಲಿ ಇದ್ದ ಆತಂಕ ದೂರವಾಗಿತ್ತು. ಪ್ರಭು ಜೊತೆಗೆ, ದಿವಾಕರ ಹೆಗ್ಗಡೆ ಆಗ ತಾನೆ ತನ್ನ ಪುಸ್ತಕದ ಅಂಗಡಿ ತೆರೆದುಕೊಂಡಿದ್ದರು. ಜೊತೆಗೆ ಲಂಕೇಶ್ ಪತ್ರಿಕೆಯ ವರದಿಗಾರನೂ ಆಗಿ ಶಿವಮೊಗ್ಗದಲ್ಲಿದ್ದರು. ನಾನು ಬಿಆರ್‌ಪಿಯಿಂದ ಊರಿಗೆ ಬರುವಾಗಲೆಲ್ಲ ನನ್ನ ಲಗ್ಗೇಜನ್ನು ಹೆಗ್ಗಡೆ ಬುಕ್ ಸ್ಟಾಲ್‌ನಲ್ಲಿಟ್ಟು ಪ್ರಭು ಜೊತೆ ಮಾತಾಡಿಕೊಂಡು ರಾತ್ರಿ ಬಿಆರ್‌ಪಿಗೆ ಹೋಗುತ್ತಿದ್ದೆ. ಹಾಗಾಗಿ ಶಿವಮೊಗ್ಗದಲ್ಲಿದ್ದ ಪ್ರಭು, ಮಂಜಪ್ಪ, ದಿವಾಕರ, ಹೆಗ್ಗಡೆ, ಡಾ. ಶಿವರಾಂ, ಎಂ.ಬಿ. ನಟರಾಜ್ ಇವರೆಲ್ಲರ ಒಡನಾಟದಿಂದ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಗಾಯತ್ರಿ ವಿಶ್ರಾಂತಿಯಲ್ಲಿದ್ದಾಗ, ನನಗಿದ್ದ ಗೆಳೆಯರ ಸಹಾಯದಿಂದ ನಾವು ನಾವೇ ನಿಭಾಯಿಸಿಕೊಂಡೆವು. ಇಂತಹ ಸರ‍್ಭಗಳಲ್ಲಿ ಹೆಣ್ಣು ಮಕ್ಕಳಿಗೆ ಏಕಾಂಗಿತನ ಮತ್ತು ತೌರ ಮನೆ ಕಾಡುತ್ತದೆ. ಆದರೆ ಎರಡೂ ಕಡೆಯಿಂದ ನಮಗೆ ಸಾನ್ನಿಧ್ಯದ ಅನುಕೂಲ ಪಡೆಯುವ ಅವಕಾಶವಾಗಲಿಲ್ಲ. ಇದ್ದ ಸ್ನೇಹ ಬಳಗವೇ ಈ ಎಲ್ಲ ಕೊರತೆಯನ್ನು ನಮಗೆ ಪೂರೈಸಿತ್ತು.

ಆ ನಂತರ ಪ್ರತಿ ತಿಂಗಳೂ ತಪಾಸಣೆ ಮತ್ತು ಶುಶ್ರೂಷೆಯ ನಂತರ 3-4 ದಿನ ಮುಂಚಿತವಾಗಿ ಹೆರಿಗೆಗೆ ಬರಬೇಕೆಂದು ಸೂಚಿಸಿದ್ದರು. ಅದರಂತೆ ಹೋಗಿ ಆಸ್ಪತ್ರೆ ಸೇರಿದ್ದೆವು. ನಾವು ಆಸ್ಪತ್ರೆಯಲ್ಲಿ ಇದ್ದಾಗ ಡಾ. ಶಿವರಾಂ ಅವರು ನಮ್ಮಿಬ್ಬರನ್ನು ಸಂಜೆ ಊಟಕ್ಕೆ ಮನೆಗೆ ಆಹ್ವಾನಿಸಿದ್ದರು. ಅವರದು ತುಂಬಿದ ಮನೆಯಾಗಿತ್ತು. ಬಸುರಿ ಹೆಂಗಸೆAದು ಡಾ. ಶಿವರಾಂ ಅವರ ಹೆಂಡತಿ ಆಶಾ ಮತ್ತು ಅವರ ತಾಯಿ ಶಾರದಮ್ಮನವರು ವಿಶೇಷ ಅಡುಗೆ ಮಾಡಿ ಅಕ್ಕರೆಯಿಂದ ಆದರಿಸುತ್ತಿದ್ದರು. ಅಂದು ಸಂಜೆ ಅವಳಿನ್ನೂ ರ‍್ತಿ ಊಟ ಮುಗಿಸುವ ಮುಂಚೆಯೇ ಹೆರಿಗೆ ನೋವು ಕಾಣಸಿಕೊಂಡಿತು. ತಕ್ಷಣ ಆಸ್ಪತ್ರೆಗೆ ಡಾ. ಶಿವರಾಂ ಅವರು ದಾಖಲು ಮಾಡಿಸಿದರು. ಇಡೀ ರಾತ್ರಿ ಹೆರಿಗೆ ರ‍್ಡ್ ಒಳಗೆ ಇದ್ದ ಗಾಯತ್ರಿಗೆ ಮಾರನೆ ದಿನ ಮಧ್ಯಾಹ್ನವಾದರೂ ಹೆರಿಗೆ ಆಗಿರಲಿಲ್ಲ. ನಾನು ಹೊರಗಡೆ ಇದ್ದ ಬೆಂಚ್ ಮೇಲೆ ಕೂತು ಕಾಯುತ್ತಿದ್ದೆ. ಪ್ರಭು ಫ್ರೆಂಡ್ ಶಶಿ ಮೂಲಕ ಭದ್ರಾವತಿಗೆ ಹೋಗಿ ಇಂದಿರಾ ಅವರನ್ನು ಕರೆದುಕೊಂಡು ಬರಲು ಕಳಿಸಿದ್ದೆ. ಅವರು ಆಫೀಸಿಗೆ ರಜೆ ಹಾಕಿ ಬರುವ ಸಮಯಕ್ಕಾಗಲೇ ಗಾಯತ್ರಿ ಗಂಡು ಮಗುವಿಗೆ ಜನ್ಮ ನೀಡಿದ್ದಳು. ದಿನಾಂಕ 11-03-81ಸಂಜೆ 4ಗಂಟೆ ಸುಮಾರಿಗೆ ಗಂಡು ಮಗು ಜನನವಾಗಿತ್ತು. ಡಾ. ಶಿವರಾಂ ಮನೆಯ ಇಬ್ಬರು ಮಕ್ಕಳು ಸೇರಿದಂತೆ ಎಲ್ಲರೂ ಬಂದು ನೋಡಿ ಸಂತಸಪಟ್ಟರು. ಮಗುವಿನ ಬೆಳವಣಿಗೆ ಹೆಚ್ಚಾಗಿದ್ದ ಕಾರಣ ಈoಡಿಛಿeಠಿs ಮುಖಾಂತರ ಮಗುವನ್ನು ಹೊರತೆಗೆಯಬೇಕಾಯಿತು ಎಂದು ಡಾಕ್ಟರ್ ಹೇಳಿದರು. ಭದ್ರಾವತಿಯಿಂದ ಬಂದ ಇಂದಿರಾ ಕೂಡಲೆ ರ‍್ಣ ಜವಾಬ್ದಾರಿ ತೆಗೆದುಕೊಂಡು, ಅಲ್ಲಿಂದ ಅವರ ಮನೆಗೆ ಕರೆದುಕೊಂಡು ಹೋಗಿ ಒಂದು ತಿಂಗಳ ಕಾಲ ಬಾಣಂತನ ಮಾಡಿ ಬಿ.ಆರ್.ಪಿಗೆ ನಾವು ಬರುವವರೆಗೆ ಮಗು ಬಾಣಂತಿಯನ್ನು ನೋಡಿಕೊಂಡದ್ದು ಮರೆಯಲಾಗದ ಘಟನೆಯಾಗಿ ಉಳಿದಿದೆ.

ಭದ್ರಾವತಿಗೆ ಮಗು ಬಾಣಂತಿ ಕೃಷ್ಣಪ್ಪನವರ ಮನೆಗೆ ಹೋಗಿ ಉಳಿದಿದ್ದೆವು. ಮಗುವಿನ ಬಾಣಂತನ ಆರೈಕೆಯನ್ನು ಮಾಡಲು ಶಿವಮೊಗ್ಗ ಮುನೀರ್ ಅವರ ತಾಯಿ ಬಚ್ಚಿಮ್ಮ ಅವರು ರ‍್ಕಾರಿ ಆಸ್ಟತ್ರೆಯಲ್ಲಿ ರ‍್ಸ ಆಗಿದ್ದವರು. ಅವರು ಬೆಳಿಗ್ಗೆ ಮತ್ತು ಸಂಜೆ ಬಂದು ಸಹಾಯ ಮಾಡುತ್ತಿದ್ದರು. ಇಂದಿರಾ ಬೆಳಿಗ್ಗೆ ಬಾಣಂತಿಗೆ ಮತ್ತು ಮತ್ತೆಲ್ಲರಿಗೂ ಅಡುಗೆ ಮಾಡಿಟ್ಟು ಆಫೀಸಿಗೆ ಹೋಗುತ್ತಿದ್ದರು. ಗಾಯತ್ರಿ ಮೌಖಿಕವಾಗಿ ಅವಳೇನು ಹೇಳದಿದ್ದರೂ ಭಾವನಾತ್ಮಕವಾಗಿ ಅವಳಿಗೆ ಬಹಳ ಕಷ್ಟದ ದಿನಗಳಾಗಿದ್ದವು. ಅವನ್ನೆಲ್ಲ ಮಗುವಿನ ಮುಖ ನೋಡಿಕೊಂಡು ಬಚ್ಚಿಮ್ಮನ ಶುಶ್ರೂಷೆಯಲ್ಲಿ ಕಾಲ ಹಾಕುತ್ತಿದ್ದಳು. ನಾನು ಕೂಡ ಮಗುವಿಗೆ ಎಣ್ಣೆ ಹಚ್ಚಿ ಬಿಸಿನೀರ ಸ್ನಾನ ಮಾಡಿಸುವುದನ್ನು ಬಚ್ಚಿಮ್ಮನಿಂದ ವಿಶೇಷವಾಗಿ ತಿಳಿದುಕೊಳ್ಳಲು ಪ್ರಯತ್ನಿಸುತ್ತಿದ್ದೆ. ಒಂದು ತಿಂಗಳ ನಂತರ ಬಿಆರ್‌ಪಿಯ ಮನೆಗೆ ಬಂದಿದ್ದೆವು. ಈ ನಡುವೆ ಮಾಧ್ಯಮಿಕ ತರಗತಿಯಲ್ಲಿ ಓದುತ್ತಿದ್ದ ನನ್ನ ತಂಗಿಯನ್ನು ಕರೆತಂದು ಬಿಆರ್‌ಪಿಯಲ್ಲಿ ಶಾಲೆಗೆ ಸೇರಿಸಿದ್ದೆ. ನಾವು ಬಿಆರ್‌ಪಿಗೆ ಬಂದ ಮೇಲೆ ಊರಿನಿಂದ ಅವ್ವ ಕೂಡ ಬಂದು ಸ್ವಲ್ಪ ದಿನ ಬಾಣಂತನ ಮಾಡುವ ಶಾಸ್ತ್ರ ಮಾಡಿದ್ದಳು.

ಆ ನಂತರ ಮೂರು ತಿಂಗಳಲ್ಲಿ ಮಗುವಿಗೆ ನಾಮಕರಣ ಮಾಡುವ ಸಣ್ಣ ಸಮಾರಂಭವನ್ನು ರ‍್ಪಡಿಸಿದ್ದೆವು. ಆಗ ಇಂದಿರಾ – ಕೃಷ್ಣಪ್ಪನವರು ಸೇರಿದಂತೆ ಬಿಆರ್‌ಪಿಯಲ್ಲಿನ ಕೇಶವರ‍್ತಿ, ಪ್ರಭು, ಗ್ರಂಥಪಾಲಕರಾಗಿದ್ದ ರಾಮಕೃಷ್ಣಗೌಡ ಇನ್ನೂ ಅನೇಕರು ಭಾಗವಹಿಸಿ ಶಿಶಿರ ಎಂದು ಹೆಸರಿಟ್ಟು ಸಂಭ್ರಮ ಪಟ್ಟೆವು. ಮಗುವಿಗೆ 3 ತಿಂಗಳು ಮುಗಿದ ನಂತರ ನಮ್ಮ ಮನೆ ಹತ್ತಿರದಲ್ಲೇ ಇದ್ದ ಅರವಿಂದ ಆಶ್ರಮದವರು ನಡೆಸುತ್ತಿದ್ದ ಪ್ರಾಥಮಿಕ ಶಾಲೆಗೆ ಗಾಯತ್ರಿ ಟೀಚರ್ ಆಗಿ ಸೇರಿಕೊಂಡಳು. ಶಿಶಿರನನ್ನು ಬೆಳಿಗ್ಗೆ ಸ್ನಾನ ಮಾಡಿಸಿ ತಿಂಡಿ ತಿನಿಸಿದ್ದು ಬಿಟ್ಟರೆ ಅವನನ್ನು ನಮ್ಮ ಇಡೀ ಬೀದಿಯಲ್ಲಿರುವವರು ಎತ್ತಿಕೊಂಡು ಹೋಗಿ ಊಟ ನಿದ್ದೆ ಮಾಡಿಸಿಕೊಂಡು ಸಂಜೆಗೆ ಮನೆಗೆ ತಂದು ಬಿಡುತ್ತಿದ್ದರು. ಅವನ ಆಗಮನದಿಂದ ನಮಗಿದ್ದ ಪ್ರತ್ಯೇಕತೆ ಕಳೆದು ಎಲ್ಲರೂ ನಮ್ಮನ್ನು `ಬುಡ್ಲ್ಲಿ’ ಅಪ್ಪ ಅಮ್ಮ ಎಂದು ಮಕ್ಕಳು, ದೊಡ್ಡವರು ಹೊರಗಡೆ ಹೋದಾಗ ಗುರುತಿಸಿ ಮಾತಾಡುವಂತಾಗಿತ್ತು. ನಮಗಿಂತಲೂ `ಬುಡ್ಲಿ’ಗೆ ಹೆಚ್ಚು ಪರಿಚಯದ ಹುಡುಗರ ದಂಡು ಸೃಷ್ಟಿಯಾಗಿತ್ತು. ಇನ್ನು ಇವಳು ಟೀಚರ್ ಕೆಲಸದಿಂದ ನನ್ನ ರ‍್ಥಿಕ ಸಂಕಷ್ಟಗಳು ಸ್ವಲ್ಪ ಮಟ್ಟಿಗೆ ಕಡಿಮೆಯಾದವು. ನಾನು ಮಾಡಿಕೊಂಡಿದ್ದ 15 ಸಾವಿರ ಸಾಲಕ್ಕೂ ನನಗೆ ವಿಶ್ವವಿದ್ಯಾಲಯದಿಂದ ಬರಬೇಕಾಗಿದ್ದ ಅರರ‍್ಸ್ ಬಂದು ನನ್ನ ಎಲ್ಲ ಸಾಲವನ್ನು ತೀರಿಸಿ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿತ್ತು.

ನಾನು ಕೆಪಿಎಸ್‌ಸಿ ಪರೀಕ್ಷೆ ತೆಗೆದುಕೊಂಡದ್ದು ಮೊದಲೇ ಹೇಳಿದ್ದೇನೆ. ಅದರ ಪರೀಕ್ಷೆ ಬರೆಯಲು ಮೈಸೂರನ್ನು ಕೇಂದ್ರವಾಗಿ ಆಯ್ಕೆ ಮಾಡಿಕೊಂಡಿದ್ದ ಕಾರಣ 1981ರಲ್ಲೇ ಮೈಸೂರಿಗೆ ಹೋಗಿ ಸುಮಾರು 15 ದಿನಗಳ ರಜೆ ಹಾಕಿ ಪರೀಕ್ಷೆ ಬರೆದೆ. ಆ ಸಮಯದಲ್ಲಿ ರೊಟ್ಟಿ, ಚಟ್ನಿ ಪುಡಿ, ಪುಳಿಯೋಗರೆ ವಾರಕ್ಕೂ ಹೆಚ್ಚು ಆಗುವಷ್ಟನ್ನು ಮಾಡಿಕೊಂಡು ಗಂಗೋತ್ರಿಯಲ್ಲಿರುವ ವಿಶ್ವವಿದ್ಯಾಲಯದ ಅತಿಥಿ ಗೃಹದಲ್ಲಿ ನಾವು ಮೂವರೂ ಉಳಿಯುತ್ತಿದ್ದೆವು. ನಾನು ಪರೀಕ್ಷೆಗೆ ಹೋದಾಗ ಗಾಯತ್ರಿ ಶಿಶಿರ ಇಬ್ಬರೇ ಅಲ್ಲಿರುವ ಗಿಡಮರಗಳನ್ನು ನೋಡುತ್ತಾ ಇರುತ್ತಿದ್ದರು.

ಈ ಸಮಯದಲ್ಲಿ ದೇವಯ್ಯ ಹರವೆ ಮೈಸೂರಿನಲ್ಲಿ ಮಾನಸ ಗಂಗೋತ್ರಿಯಲ್ಲಿ ಕನ್ನಡ ಅಧ್ಯಾಪಕನಾಗಿದ್ದು, ಡಿ.ಎಸ್.ಎಸ್. ಸ್ಥಾಪಕ ಸದಸ್ಯರುಗಳ ಜೊತೆ ಗಟ್ಟಿ ದನಿಯಾಗಿದ್ದರು. ನಾನು ಇರುವ ಸುದ್ದಿ ತಿಳಿದು ನಮ್ಮ ಗೆಸ್ಟ್ಹೌಸ್‌ಗೆ ಬಂದು ಪುಳಿಯೋಗರೆ ತಿಂದು `ಗಾಯತ್ರಮ್ಮ, ಎಲ್ಲಾ ಪುಳಿಯೋಗರೆ ನನಗೆ ಕೊಡಿ ರುದ್ರಣ್ಣನಿಗೆ ನಾನು ಬಿಸಿ ಮಾಂಸದೂಟ ಮಾಡಿಸುವೆ’ ಎಂದು ಹೇಳಿ ನಮ್ಮೆಲ್ಲರನ್ನು ತನ್ನ ಮನೆಗೂ ಕರೆದುಕೊಂಡು ಹೋಗಿದ್ದ. ದೇವಯ್ಯ ಹರವೆ ಮತ್ತು ಪುಷ್ಪ ನಮಗೆ ಆಗ ಪರಿಚಯವಾಗಿ ನಂತರದ ದಿನಗಳಲ್ಲಿ ಅವರ ಮನೆಗೆ ಪುಳಿಯೋಗರೆಯೊಡನೆ ಆಗಾಗ ಹೋಗಿ ಬರುತ್ತಿದ್ದೆವು.
ಬುಡ್ಲಿಯನ್ನು ನೋಡುವ ನೆಪದಲ್ಲಿ ವಿಶಾಖಪಟ್ಟಣದಲ್ಲಿದ್ದ ಗಾಯತ್ರಿಯ ದೊಡ್ಡ ಅಕ್ಕ ಶಕುಂತಲಾರ‍್ತಿ ಮತ್ತು ಅವರ ಹಿರಿಯ ಮಗಳಾದ ಮೀನಾ ಬಿಆರ್‌ಪಿಗೆ ಬಂದು ಒಂದು ದಿನ ಉಳಿದು ನಂತರ ನರಸಿಂಹರಾಜಪುರಕ್ಕೆ ಹೋಗಿದ್ದರು. ಆಗ ಅವರಿಂದ ಗಾಯತ್ರಿ ತಂದೆ ತಾಯಿ ಇಬ್ಬರಿಗೂ ನಾವಿಬ್ಬರು ಮತ್ತು `ಬುಡ್ಲಿ’ ಆರಾಮವಾಗಿ ಇರುವುದಾಗಿಯೂ ಮತ್ತು ಅವರಿವರು ತೇಲಿ ಬಿಡುತ್ತಿದ್ದ ಸುಳ್ಳಿನ ಸುದ್ದಿಗಳಲ್ಲಿ ಸತ್ಯಾಂಶವಿಲ್ಲವೆAದು ತಿಳಿಸಿ, ಅವರಿಗೆ ನಮ್ಮ ಮದುವೆಯ ಘಟನೆಯ ನಂತರ ಸ್ವಲ್ಪಮಟ್ಟಿನ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿತ್ತು.

ಕೃಷ್ಣಪ್ಪನವರು ಎಸ್‌ವೈಎಸ್ ಸಂಘಟನೆಯಲ್ಲಿ 1970ರ ದಶಕದ ಪ್ರಾರಂಭದಿAದ ಇದ್ದರೂ, ಕ್ರಮೇಣ ದಲಿತರ ಸಮಸ್ಯೆಗಳಿಗೆ ಪ್ರತ್ಯೇಕ ಸಂಘಟನೆಯ ಅವಶ್ಯಕತೆ ಕಂಡುಕೊAಡು ಭದ್ರಾವತಿಯಲ್ಲಿ ರಾಜ್ಯ ಮಟ್ಟದ ಜಾತಿ ವಿನಾಶ ಸಮ್ಮೇಳನ ಆಯೋಜಿಸಿದ್ದರು. ಭದ್ರಾವತಿಯಲ್ಲಿ ಆಗಿನ ಕೃಷ್ಣಪ್ಪನವರ ತಂಡದಲ್ಲಿ, ಎನ್. ಗಿರಿಯಪ್ಪ, ಟಿ. ರಾಜಣ್ಣ, ಹಾಲಯ್ಯ, ನರಸಿಂಹಯ್ಯ, ಚನ್ನಕೇಶವ, ಗಂಗಣ್ಣ, ಶಿವಲಿಂಗ, ಚಂದ್ರನ್, ಅತ್ತಿಗುಂದ ಕರಿಯಪ್ಪ, ಮಹಾಲಿಂಗರ‍್ತಿ ಜಿ., ಎಂಪಿಎಂನ ಕೃಷ್ಣರ‍್ತಿ ಇವರೆಲ್ಲ ಆಪ್ತ ವಲಯದಲ್ಲಿದ್ದು ಏನೇ ಹೋರಾಟದ ಕರೆ ಕೊಟ್ಟಾಗ ಬಂದು ಸೇರುತ್ತಿದ್ದರು.

ಇತರ ಮಿತ್ರ ಪಡೆ ಭದ್ರಾವತಿಯಲ್ಲಿ ದೊಡ್ಡದಿತ್ತು. ವಕೀಲ ನಾಗೇಂದ್ರರಾವ್, ಪ್ರೊ. ಚಂದ್ರಶೇಖರಯ್ಯ, ಬಿ. ರಾಜಣ್ಣ, ಶಿವಮೊಗ್ಗದ ಮುನೀರ್, ಸಾಸ್ವೆಹಳ್ಳಿ ಹಾಲಪ್ಪ, ಎಂ.ಎಲ್. ನಾಗಭೂಷಣ, ವೈ.ಎನ್. ಆಚಾರ್, ಶಿವಪ್ರಸಾದ್ (ವಿಐಎಸ್‌ಎಲ್), ಚಂದ್ರಪ್ರಸಾದ್ ತ್ಯಾಗಿ, ನಿಸಾರ್ ಅಹಮದ್, ರಾಚಪ್ಪ ಹೆಚ್, ವಾಗೀಶ್, ರಾಘವೇಂದ್ರ ರಾವ್ (ದಲಿತರ ಪರ ವಕೀಲರಾಗಿ ಮೊಕದ್ದಮೆಗಳನ್ನು ನಡೆಸುತ್ತಿದ್ದರು) ಇದ್ದರು. ಮಾದೇವ, ಸಿದ್ದಲಿಂಗಯ್ಯ, ವೆಂಕಟಸ್ವಾಮಿ, ಮುನಿವೆಂಕಟಪ್ಪ, ನಾರಾಯಣಸ್ವಾಮಿ, ದಿವಾಕರ ಹೆಗ್ಗಡೆ, ಎಂ.ಬಿ. ನಟರಾಜ್, ಸತ್ಯನಾರಾಯಣರಾವ್ ಅಣತಿ, ಚನ್ನಣ್ಣ ವಾಲೀಕಾರ, ದೇವಯ್ಯ ಹರವೆ ಇನ್ನು ಅನೇಕರು ರಾಜ್ಯದಾದ್ಯಂತ ಚೆದುರಿದ್ದ ಕೃಷ್ಣಪ್ಪನವರ ಹೋರಾಟದ ಸಂಗಾತಿಗಳಾಗಿದ್ದರು.

ಇವರೆಲ್ಲರ ಸಮಾಗಮವೆಂಬಂತೆ ಬಿಆರ್‌ಪಿಯಲ್ಲಿರುವ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ಎರಡು ದಿನಗಳ ದಲಿತ ಸರ‍್ಷ ಸಮಿತಿಯ ತರಬೇತಿ ಶಿಬಿರವನ್ನು ಆಯೋಜಿಸಿದ್ದರು. ಆಗ ಬಂದ ಸಂಘಟಕರಿಗೆ ಊಟ ವಸತಿ ಮತ್ತು ಬಸ್ ರ‍್ಜ್ ಹೊಂದಿಸುವಲ್ಲಿ ಕೃಷ್ಣಪ್ಪನವರು ಪಡುತ್ತಿದ್ದ ಪಾಡನ್ನು ಬೇರೆ ಯಾವ ದಲಿತ ಸಂಘಟಕರು ಅನುಭವಿಸಿಲ್ಲ. ನಾನು ಮತ್ತು ನಮ್ಮಲ್ಲಿನ ಪ್ರಗತಿಪರ ಅಧ್ಯಾಪಕರು, ಸಹೋದ್ಯೋಗಿಗಳು ಸೇರಿ ಸ್ವಲ್ಪ ಹಣ ಸಂಗ್ರಹಿಸಿಕೊಟ್ಟಿದ್ದೆವು. ಅಲ್ಲಲ್ಲೆ ಪ್ರಗತಿಪರವಾಗಿ ಬರೆದುಕೊಂಡು ಹೋರಾಟಗಳನ್ನು ಮಾಡುತ್ತಿದ್ದ ದಲಿತರು ಅಂಬೇಡ್ಕರ್ ಸಿದ್ಧಾಂತದ ಗಟ್ಟಿ ನೆಲೆಯಲ್ಲಿ ಆತ್ಮೀಯ ಸಂಬಂಧಿಕರಂತೆ ಕೃಷ್ಣಪ್ಪನವರ ಸುತ್ತ ಒಟ್ಟುಗೂಡಿ ಇಂತಹ ಸಮಾವೇಶಗಳಲ್ಲಿ ಭಾಗವಹಿಸಿ ರ‍್ಚಿಸುತ್ತಿದ್ದರು.

ಬುಡ್ಲಿ ಬಂದ ನಂತರ, ಟೀಚರ್ ಕೆಲಸ ಸೇರಿದ ಗಾಯತ್ರಿ ಮನೆಯ ಹಿಂದೆ ಮುಂದೆ ಇದ್ದ ಜಾಗದಲ್ಲಿ ತರಕಾರಿ ಜೊತೆಗೆ ಇದ್ದ ಮಾವಿನ ಮರ ಮತ್ತು ದೊಡ್ಡ ನುಗ್ಗೆಮರ, ಸೀತಾಫಲದ ಮರಗಳನ್ನು ಸಂರಕ್ಷಿಸಿಕೊಂಡು ಸಾಕಷ್ಟು ಫಲ ಪಡೆಯುತ್ತಿದ್ದೆವು. ಬಂದ ಸಂಬಳದಲ್ಲಿ ಹತ್ತಿರದಲ್ಲಿದ್ದ ಲಕ್ಕವಳ್ಳಿಯಲ್ಲಿ ನಡೆಯುವ ಸಂತೆಗೆ ಹೋಗಿ ಅಗತ್ಯ ವಸ್ತುಗಳನ್ನು ವಾರಕ್ಕೊಮ್ಮೆ ಕೊಂಡು ಬರುತ್ತಿದ್ದೆವು. ಬಂದ ಎಲ್ಲ ಸಂಬಳದಲ್ಲಿ ದುಂದಾಗಿ ರ‍್ಚು ಮಾಡುತ್ತಾ ಉಳಿತಾಯ ಮತ್ತು ಅಚ್ಚುಕಟ್ಟುತನವಿಲ್ಲದೆ ಸ್ವಚ್ಛಂದವಾಗಿದ್ದ ನನಗೆ ಮದುವೆ ನಂತರ ಮಗು ಶಿಶಿರ ಬಂದು ಸಂಸಾರ ಜೀವನದ ಹೊಸ ಜೀವನಾನುಭವವನ್ನು ನೀಡಿತೆಂದೇ ಹೇಳಬೇಕು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending