ಲೈಫ್ ಸ್ಟೈಲ್
ಪಕ್ಷಿಗಳ ತಾಣ ಈ ‘ಶುಕವನ’ದಲ್ಲೊಂದು ಸುತ್ತು..!

ಮೈಸೂರು ಎಂದರೆ ನಮಗೆ ನೆನಪಿಗೆ ಬರುವುದು ಚಾಮುಂಡಿ ಬೆಟ್ಟ, ಅರಮನೆ,ಕಾರಂಜಿ ಕೆರೆ,ಕುಕ್ಕರಳ್ಳಿ ಕೆರೆ, ಮೃಗಾಲಯ ಹೀಗೆ ಇನ್ನೂ ಹಲವು. ಹಾಗೆ ಇಲ್ಲಿನ ಅವಧೂತ ಪೀಠವು ಕೂಡಾ ಒಂದು. ಈ ಸ್ಥಳವು ಎಷ್ಟೋ ಜನರಿಗೆ ತಿಳಿದಿಲ್ಲ. ಈ ಅವಧೂತ ಪೀಠವು ಚಾಮುಂಡಿ ಬೆಟ್ಟಕ್ಕೆ ಹೋಗುವ ಸಾಲು ಮೆಟ್ಟಿಲುಗಳ ದಾರಿಯಲ್ಲಿದೆ.
ಈ ಅವಧೂತ ಪೀಠದಲ್ಲಿ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರು ನಿರ್ಮಿಸಿರುವ ಒಂದು ಶುಕವನ’ ಮತ್ತು ಬ್ನೊಸಾಯಿ ಉದ್ಯಾನವಿದೆ. ಈ ವನವನ್ನು 2012 ರಲ್ಲಿ ಆರಂಭಿಸಲಾಯಿತು. ಒಂದು ಎಕರೆ ಜಾಗವನ್ನು ಇದಕ್ಕಾಗಿ ಬಳಸಲಾಗಿದೆ .
ಶುಕವನ
‘ಶುಕವನ’ ಆಶ್ರಮದ ಆವರಣದೊಳಗಿನ ಗಿಣಿಗಳ ಉದ್ಯಾನ. ಪಕ್ಷಿಗಳ ಪುನರ್ವಸತಿ ಕೇಂದ್ರ. ಜಗತ್ತಿನಾದ್ಯಂತದ ಅದೆಷ್ಟೋ ಜಾತಿಯ ಬಣ್ಣಬಣ್ಣದ ಗಿಳಿಗಳಿಗೆ ಇಲ್ಲಿ ನೆಲೆಯಾಗಿದೆ. ಗಿಣಿಗಳು ಮಾತ್ರವಲ್ಲದೆ ಬೇರೆ ಬೇರೆ ಜಾತಿಯ ಪಕ್ಷಿಗಳನ್ನೂ ಇಲ್ಲಿ ವಿಶೇಷ ಆರೈಕೆ ನೀಡಿ ಪೋಷಿಸಲಾಗುತ್ತದೆ. ಸ್ವತಃ ಸ್ವಾಮೀಜಿಯವರೇ ಇವುಗಳ ಆರೈಕೆಗೆ ನಿಲ್ಲುತ್ತಾರೆಂಬುದು ವಿಶೇಷ. ಪಕ್ಷಿಗಳ ಸಂಗದಲ್ಲಿ ಗಿಣಿಗಳಿಗೆ ವಿಶೇಷ ಬಗೆಯಲ್ಲಿ ಮಾತನಾಡುವುದನ್ನೂ ಕಲಿಸಿದ ಹೆಗ್ಗಳಿಕೆ ಸ್ವಾಮೀಜಿಯವರದ್ದು.
470ಕ್ಕೂ ಹೆಚ್ಚು ಅಪರೂಪದ ಪ್ರಭೇದದ 2 ಸಾವಿರಕ್ಕೂ ಪಕ್ಷಿಗಳಿಗೆ ಆಶ್ರಯ ಕಲ್ಪಿಸಿರುವ ಶುಕವನ ಗಿನ್ನಿಸ್ ಪುಸ್ತಕದಲ್ಲೂ ದಾಖಲಾಗಿದೆ. ಎಲ್ಲಾ ಹಕ್ಕಿಗಳ ಚಿಲಿಪಿಲಿ, ವಿವಿಧ ರೀತಿಯ ಕೂಗುಗಳು ಕೇಳಲು ಮನಸ್ಸಿಗೆ ತುಂಬ ಸಂತೋಷವನ್ನು ನೀಡುತ್ತದೆ.ಅಲ್ಲಿ ಇರುವ ಎಲ್ಲಾ ಪಕ್ಷಿಗಳಿಗು ಹೆಸರು ಇದೇ. ಕೆಲವೊಂದು ಪಕ್ಷಿಗಳು ನಾವು ಮಾತನಾಡಿಸಿದಾಗ ಪ್ರತಿಕ್ರಿಯೆ ತೋರಿಸುತ್ತವೆ.
ಈ ಜಾಗದಲ್ಲಿ ಸಾಮಾನ್ಯ ಜನಗಳಿಗೆ ಪಕ್ಷಿಗಳ ಜೊತೆ ಬೆರೆತು ಆನಂದವನ್ನು ಹೊಂದಲು ಹಾಗೂ ಪೋಟೋ ತೆಗಿಸಿ ಕೊಳ್ಳಲು ಒಂದು ಅನುಕೂಲ ಮಾಡಿದಾರೆ. ನಮ್ಮ ಕೈಯಲ್ಲಿ ಹಣ್ಣಿನ ಚೂರಿರುವ ತಟ್ಟೆ ಕೊಡುತ್ತಾರೆ,ಅದನ್ನು ಹಿಡಿದು ಒಳ ಹೊಗುತ್ತಿದಂತೆ ಪಕ್ಷಿಗಳು ನಮ್ಮ ಮೇಲೆ ಹಾಗೂ ನಾವು ಹಿಡಿದಿರುವ ತಟ್ಟೆಯ ಮೇಲೆ ಬಂದು ಕುಳಿತ್ತುಕೊಳುತ್ತವೆ. ಆ ಕ್ಷಣ ಎಲ್ಲರಿಗೂ ತುಂಬ ಖುಷಿ ಯನ್ನು ಕೊಡುತ್ತದೆ.
ಮೆಕಾವ್(ಸ್ಕಾರ್ಲೆಟ್ ಮೆಕಾವ್, ಮಿಲಿಟರಿ ಮೆಕಾವ್, ಶಮ್ ರಾಕ್ ಮೆಕಾವ್), ಲಾರಿಕೀಟ್ , ಕಾಂಗೊ ಆಫ್ರಿಕನ್ ಗ್ರೇ ಗಿಳಿ, ಮಿಚೆಲ್ ಕೊಕಾಟೂ…ಇನ್ನೂ ಹಲವು ಬಗೆಯ ಪಕ್ಷಿಗಳು ತಮ್ಮ ಗಾತ್ರ, ವಿವಿಧ ಬಣ್ಣ, ಕೊಕ್ಕು, ಅವು ಮಾಡುವ ಕಲರವ ಎಲ್ಲರ ಗಮನ ಸೆಳೆಯುತ್ತದೆ. ಈ ಗಿಳಿಗಳು ಸಾಮಾನ್ಯವಾಗಿ 25-50 ವರ್ಷಗಳವರೆಗೆ ಬದುಕುತ್ತವೆ. ಇದುವರೆಗೆ ಸತ್ತ ಹಕ್ಕಿಗಳಲ್ಲಿ ಅತ್ಯಂತ ಮುದಿಯಾದ ಹಕ್ಕಿ 83 ವರ್ಷ ಬದುಕಿತ್ತು ಎನ್ನುವ ಮಾಹಿತಿಯು ಇದೆ.
ಪಕ್ಷಿಗಳಿಗೆ ಪ್ರತಿದಿನವೂ ಬೀಜಗಳು, ಕಾಳುಗಳು, ಹಣ್ಣುಗಳನ್ನು ಕೊಡುತ್ತಾರೆ. ಹಗಲಿನಲ್ಲಿ ಹಕ್ಕಿಗಳನ್ನು ಗೂಡಿನಿಂದ ವನದಲ್ಲೆ ಹಾರಾಡಲು ಬಿಡುತ್ತಾರೆ, ಅವು ಹಾರಾಡಿದ ನಂತರ ತಮ್ಮ ಗೂಡಿಗೆ ತಾವಾಗಿಯೇ ಮರಳುತ್ತವೆಂತೆ, ದಾರಿ ತಪ್ಪಿದವುಗಳನ್ನು ಸಿಬ್ಬಂದಿ ಗೂಡಿಗೆ ಮರಳಿಸುತ್ತಾರೆ.
ಬೋನ್ಸಾಯ್ ಉದ್ಯಾನ
ಶುಕವನದ ಪಕ್ಕದಲ್ಲೇ ಕುಬ್ಜವಾಗಿ ಬೆಳೆಸಿದ ಮರಗಳು ಹಾಗೂ ಗಿಡಗಳನ್ನು ಈ ಬೋನ್ಸಾಯ್ ಉದ್ಯಾನದಲ್ಲಿ ನೋಡ ಬಹುದಾಗಿದೆ. ಈ ಉದ್ಯಾನವನ್ನು 2005ರಲ್ಲಿ ತೆರೆಯಲಾಯಿತು. ಇಲ್ಲಿ ಬೆಳೆಸಿರುವ ವಿವಿಧ ಬೋನ್ಸಾಯ್ ಗಿಡಗಳಿಂದ ಈ ಉದ್ಯಾನವನ ಗಿನ್ನಿಸ್ ಪುಸ್ತಕದ ದಾಖಲೆಗಳಲ್ಲಿ ಸೇರಿದೆ.
ಇಲ್ಲಿ ಅಶ್ವತ್ಥ , ವಟವೃಕ್ಷ , ಬಿಲ್ವ, ಅಶೋಕ ವೃಕ್ಷಗಳು, ಸಪೋಟ, ಕಿತ್ತಳೆ, ನಿಂಬೆ, ಸೀತಫಲ, ಇನ್ನೂ ಹಲವು ವೃಕ್ಷ ಹಾಗು ಹಣ್ಣುಗಳ ಕುಬ್ಜ ಗಿಡಗಳನ್ನು ನಾವು ನೋಡ ಬಹುದು. ಸುತ್ತ ಮುತ್ತ ಹಲವು ಕೊಳಗಳು ಹಾಗೂ ಕಾರಂಜಿಗಳು ಇವೇ. ಹಾಗೂ ಜೊತೆಗೆ ಕೆಲವು ಆಲಂಕಾರಿಕ ಮತ್ತು ಔಷಧೀಯ ಗಿಡಗಳನ್ನು ಕಾಣಬಹುದು. ಪ್ಲಾಸ್ಟಿಕ್ ಫ್ರೀ ಜಾಗವಾಗಿದೆ. ಮೈಸೂರಿಗೆ ಹೋದವರು ನೋಡಲೇ ಬೇಕಾದ ಜಾಗವಿದು.
–ಸೌಮ್ಯ ಅಶೋಕ್
ಬೆಂಗಳೂರು
ಸುದ್ದಿದಿನ.ಕಾಂ|ವಾಟ್ಸಾಪ್|9986715401

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ರಾಜ್ಯದಲ್ಲಿ ಜಾತಿ ಗಣತಿ ಮರು ಸಮೀಕ್ಷೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ : ಸಿಎಂ ಸಿದ್ದರಾಮಯ್ಯ

ಸುದ್ದಿದಿನಡೆಸ್ಕ್:ಜಾತಿಗಣತಿ ಮರು ಸಮೀಕ್ಷೆಗೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ.
ಸಂಪುಟ ಸಭೆಯ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿಗಣತಿ ಮರು ಸಮೀಕ್ಷೆಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ ಎಂದು ಹೇಳಿದ್ದಾರೆ.
54 ಮಾನದಂಡಗಳನ್ನು ಇಟ್ಟುಕೊಂಡು ಹೋಗಿ ಮನೆ ಮನೆ ಸಮೀಕ್ಷೆ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ಹೈಕಮಾಂಡ್ ನೀಡಿದ ಸೂಚನೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತಿ ಗಣತಿ ವಿಚಾರದಲ್ಲಿ ಸರಿಯಾದ ಸ್ಪಷ್ಟತೆ ನೀಡಬೇಕು ಎಂದು ಉಡುಪಿ – ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಆಗ್ರಹಿಸಿದ್ದಾರೆ.
ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯನವರೇ ಜಾತಿ ಗಣತಿಗೆ 200 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದು161 ಕೋಟಿ ರೂಪಾಯಿ ಖರ್ಚಾಗಿದೆ ಎಂದು ಹೇಳಿ, ಇದೀಗ ಜಾತಿ ಜನಗಣತಿಯನ್ನು ವಾಪಸ್ ಪಡೆಯುವುದಾಗಿ ಹೇಳುತ್ತಿರುವುದು ಹಾಸ್ಯಸ್ಪದವಾಗಿದೆ ಎಂದು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
RCB ಸಂಭ್ರಮಾಚರಣೆ : 18 ರೂಪಾಯಿಗೆ ಬಿರಿಯಾನಿ ಮಾರಾಟ

ಸುದ್ದಿದಿನ,ಬೆಂಗಳೂರು:ಆರ್ಸಿಬಿ ವಿಜಯೋತ್ಸವದಲ್ಲಿ ಬೆಂಗಳೂರು ಮಿಂದೆದ್ದಿದೆ. ಜನ ವಿಭಿನ್ನ ರೀತಿಯಲ್ಲಿ ತಮ್ಮ ಸಂಭ್ರಮಾಚರಣೆ ವ್ಯಕ್ತಪಡಿಸಿದ್ದಾರೆ. ಹೋಟೆಲ್ ರೆಸ್ಟೋರೆಂಟ್ಗಳೂ ಕೂಡ ಇದನ್ನೇ ಬಂಡವಾಳ ಮಾಡಿಕೊಂಡು ಭರ್ಜರಿ ವ್ಯಾಪಾರ ಮಾಡಿವೆ.
ಬೆಂಗಳೂರಿನ #NativeCooks ಫುಡ್ ಡೆಲಿವರಿ ಸಂಸ್ಥೆಯು ಕೇವಲ 18 ರೂಪಾಯಿಗೆ ಬಿರಿಯಾನಿ ಮಾರಾಟ ಮಾಡುವ ಮೂಲಕ ಆರ್ಸಿಬಿ ಅಭಿಮಾನಿಗಳ ಮನ ಗೆದ್ದಿದೆ.
ಹೌದು, ಹೆಬ್ಬಾಳ, ಆರ್ಟಿ ನಗರ, ಸದಾಶಿವನಗರದಲ್ಲಿ ಡೆಲಿವರಿ ಶುಲ್ಕವಿಲ್ಲದೆ ಅತಿ ಕಡಿಮೆ ದರದಲ್ಲಿ ಫುಡ್ ಡೆಲಿವರಿ ಮಾಡುತ್ತಿರುವ #NativeCooks ಸಂಸ್ಥೆಯು ಆರ್ಸಿಬಿ ಅಭಿಮಾನಿಗಳನ್ನು ಖುಷಿಪಡಿಸಲು ಈ ರೀತಿ ಹೊಸ ಆಫರ್ ಬಿಟ್ಟಿತ್ತು. ಮೂಲಗಳ ಪ್ರಕಾರ ಸುಮಾರು ಒಂದು ಸಾವಿರ ಬಿರಿಯಾನಿ ಲಂಚ್ಬಾಕ್ಸ್ಗಳನ್ನು ತಲಾ 18ರೂಪಾಯಿಯಂತೆ ಮಾರಾಟ ಮಾಡಿದೆ.
ಮನೆಯಲ್ಲೇ ಮಾಡಿದ ಆಹಾರ ಪದಾರ್ಥಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿರುವ ನೇಟೀವ್ ಕುಕ್ಸ್ ಸಂಸ್ಥೆಯು ಹೆಣ್ಣುಮಕ್ಕಳೇ ಸೇರಿ ನಡೆಸುತ್ತಿರುವ ಪುಟ್ಟ ಕೇಟರಿಂಗ್ ಆಗಿದೆ. ವಾರದಲ್ಲಿ 6 ದಿನಗಳ ಕಾಲ ಕಾರ್ಯ ನಿರ್ವಹಿಸುವ ಈ ಕೇಟರಿಂಗ್. ವೆಜ್ ಊಟವನ್ನು ಕೇವಲ 80 ರೂಪಾಯಿಗೆ ಹಾಗೂ ನಾನ್ವೆಜ್ ಊಟವನ್ನು 135 ರೂಪಾಯಿಗೆ ಹಾಗೂ ಎಕ್ ಮೀಲ್ಅನ್ನು ಕೇವಲ 110 ರೂಪಾಯಿಗೆ ಮಾರಾಟ ಮಾಡುತ್ತಿದೆ.
ಸದ್ಯಕ್ಕೆ ಹೆಬ್ಬಾಳ, ಆರ್ಟಿನಗರ ಹಾಗೂ ಸದಾಶಿವನಗರಕ್ಕೆ ಡೆಲಿವರಿ ಶುಲ್ಕ ಇಲ್ಲದೇ ಆಹಾರ ವಿತರಿಸುತ್ತಿದ್ದು, ಹೆಚ್ಚಿನ ಮಾಹಿತಿಗೆ 80 4853 6206 ಸಂಪರ್ಕಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days ago
ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ, ಗಿಗ್, ಸಿನಿ ಹಾಗೂ ಮನೆಗೆಲಸ ಕಾರ್ಮಿಕರ ಕಲ್ಯಾಣಕ್ಕಾಗಿ ಅಧಿನಿಯಮ ಜಾರಿಗೆ ಕ್ರಮ : ಸಚಿವ ಸಂತೋಷ್ ಲಾಡ್
-
ಅಂಕಣ3 days ago
ಆತ್ಮಕತೆ | ಕೃಷ್ಣಪ್ಪನವರ ನಿಧನ : (09.06.1938 – 30.04.1997)
-
ದಿನದ ಸುದ್ದಿ5 days ago
500 ಪಡಿತರ ಚೀಟಿಗಳಿಗೆ ಒಂದು ಪಡಿತರ ಅಂಗಡಿ ತೆರೆಯಲು ಸರ್ಕಾರ ನಿರ್ಧಾರ
-
ದಿನದ ಸುದ್ದಿ4 days ago
ರಾಷ್ಟ್ರೀಯ ಲೋಕ ಅದಾಲತ್ನಲ್ಲಿ 9360 ಪ್ರಕರಣ ಇತ್ಯರ್ಥ ; ವಿಚ್ಚೇದನ ಕೋರಿ ಸಲ್ಲಿಸಿದ್ದ 23 ಜೋಡಿ ವೈವಾಹಿಕ ಜೀವನ ಸುಖಾಂತ್ಯ
-
ದಿನದ ಸುದ್ದಿ6 days ago
ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರೆಣೆ
-
ದಿನದ ಸುದ್ದಿ5 days ago
ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಮೂಲ ಸೌಲಭ್ಯಗಳ ಕೊರತೆ : ಕರವೇ ಮನವಿ
-
ದಿನದ ಸುದ್ದಿ6 days ago
ಪಿಹೆಚ್ಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರಿಗೆ ವಿದ್ಯಾರ್ಥಿವೇತನ : ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ದತ್ತಾಂಶ ನಿರ್ವಾಹಕ ಗ್ರೇಡ್ ಎ ಪರೀಕ್ಷೆಗೆ ಅರ್ಜಿ ಆಹ್ವಾನ