ದಿನದ ಸುದ್ದಿ
ನಡೆದಾಡುವ ದೇವರು ನನ್ನ ಪಾಲಿಗೆ ‘ನಡೆದಾಡುತ್ತಿದ್ದ ಬಸವಣ್ಣ’ : ಸಿದ್ದರಾಮಯ್ಯ
![](https://suddidina.com/wp-content/uploads/2019/01/Siddaramaiah-suddidina521.jpg)
ಸುದ್ದಿದಿನ ಡೆಸ್ಕ್ : ಡಾ.ಶ್ರೀ ಶಿವಕುಮಾರ ಸ್ವಾಮಿಗಳ ಲಿಂಗೈಕ್ಯದಿಂದ ನಾನು ಆಘಾತಕ್ಕೀಡಾಗಿದ್ದೇನೆ. ಇತ್ತೀಚಿನ ಕೆಲವು ದಿನಗಳಲ್ಲಿ ಅವರ ಆರೋಗ್ಯದಲ್ಲಿ ನಡೆಯುತ್ತಿದ್ದ ಏರುಪೇರು ನಮ್ಮೆಲ್ಲರನ್ನೂ ಆತಂಕಕ್ಕೀಡುಮಾಡಿತ್ತು. ಇಂತಹದ್ದೊಂದು ದಿನ ಎದುರಾಗಬಹುದೆಂಬ ನಮ್ಮ ಭಯ ನಿಜವಾಗಿದೆ. ಸಾಧನೆಯ ಮೂಲಕ ಲೋಕವನ್ನೇ ಗೆದ್ದಿರುವ ಸ್ವಾಮಿಗಳು ಕೊನೆಗೂ ಸಾವನ್ನು ಗೆಲ್ಲಲಾಗದೆ ಶರಣಾಗಿ ನಮ್ಮನ್ನು ಅನಾಥರಾಗಿಸಿದ್ದಾರೆ.
ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ತುಂಬಿದ ಹೃದಯದಿಂದ ಹಾರೈಸುತ್ತೇನೆ. ದು:ಖದಲ್ಲಿರುವ ಸಮಸ್ತ ಭಕ್ತಾಭಿಮಾನಿಗಳ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ. ನಾವು ಬಸವಣ್ಣನವರನ್ನು ಕಣ್ಣಾರೆ ನೋಡಿಲ್ಲ, ನಾನು ಡಾ.ಶಿವಕುಮಾರ ಸ್ವಾಮೀಜಿಗಳಲ್ಲಿ ಬಸವಣ್ಣನನ್ನು ಕಾಣುತ್ತಿದ್ದೆ. ಅವರನ್ನು ‘’ನಡೆದಾಡುವ ದೇವರು’’ ಎನ್ನುತ್ತಾರೆ. ನನ್ನ ಪಾಲಿಗೆ ಅವರು ‘’ನಡೆದಾಡುತ್ತಿದ್ದ ಬಸವಣ್ಣ’’ ಆಗಿದ್ದರು. ಅಂತಹದ್ದೊಂದು ಆದರ್ಶ ಬದುಕನ್ನು ಅವರು ಬದುಕಿ ತೋರಿಸಿ ನಮಗೆ ಮಾದರಿಯಾಗಿ ಬಿಟ್ಟು ಹೋಗಿದ್ದಾರೆ. ಆ ದಾರಿಯಲ್ಲಿ ನಡೆಯುವುದೇ ಸ್ವಾಮೀಜಿಗಳಿಗೆ ಸಲ್ಲಿಸುವ ನಿಜವಾದ ಶ್ರದ್ಧಾಂಜಲಿಯಾಗಿದೆ.
ವೈಯಕ್ತಿಕ ಮತ್ತು ರಾಜಕೀಯ ಜೀವನದಲ್ಲಿ ಬಸವಣ್ಣ ನನ್ನ ನಾಯಕ. ಇದಕ್ಕಾಗಿಯೇ ಬಸವ ಜಯಂತಿಯಂದೇ ನಾನು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದವನು. ಸ್ವಾಮೀಜಿಗಳು ಬಸವಣ್ಣನವರ ತತ್ವಕ್ಕೆ ನೂರಕ್ಕೆ ನೂರರಷ್ಟು ಬದ್ಧರಾಗಿ ಬದುಕಿದವರು. ಹಸಿದವರಿಗೆ ಅನ್ನ, ಮಕ್ಕಳಿಗೆ ಶಿಕ್ಷಣ ಮತ್ತು ವಸತಿ ಕಲ್ಪಿಸಲು ತಮ್ಮ ಜೀವವನ್ನೇ ತೇದ ಸ್ವಾಮೀಜಿಯವರ ಬದುಕು ಮತ್ತು ಸಾಧನೆ ನಮಗೆಲ್ಲ ಮಾದರಿ.
ಮುಖ್ಯಮಂತ್ರಿಯಾಗಿದ್ದಾಗ ನಾನು ಅನುಷ್ಠಾನಗೊಳಿಸಿದ್ದ ಅನ್ನಭಾಗ್ಯ, ಕ್ಷೀರಭಾಗ್ಯ, ವಿದ್ಯಾಸಿರಿ ಮೊದಲಾದ ಅನೇಕ ಕಾರ್ಯಕ್ರಮಗಳಿಗೆ ಸ್ವಾಮೀಜಿಯವರ ಸೇವಾ ಕಾರ್ಯಕ್ರಮಗಳೂ ಕೂಡಾ ಸ್ವೂರ್ತಿಯಾಗಿತ್ತು.
ಶಿಕ್ಷಣ ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆ ಅನನ್ಯವಾದುದು. ಪ್ರಾಥಮಿಕ ಶಿಕ್ಷಣದಿಂದ ಉನ್ನತ ಶಿಕ್ಷಣದವರೆಗೆ ಅನೇಕ ಸಂಸ್ಥೆಗಳನ್ನು ಕಟ್ಟಿ ಮುನ್ನಡೆಸಿದ್ದ ಸ್ವಾಮೀಜಿಗಳು ಕೊನೆಯ ವರೆಗೂ ಶಿಕ್ಷಣವನ್ನು ಸೇವೆಯೆಂದೇ ತಿಳಿದಿದ್ದರೆ ಹೊರತು ಅದನ್ನು ವ್ಯಾಪಾರ-ಉದ್ಯಮ ಮಾಡಲು ಹೋಗಲೇ ಇಲ್ಲ. ಶಿಕ್ಷಣ ಕ್ಷೇತ್ರವೇ ಉದ್ಯಮವಾಗುತ್ತಿರುವ ಹಿನ್ನೆಲೆಯಲ್ಲಿ ಸ್ವಾಮೀಜಿಯವರ ಈ ಸಂದೇಶವನ್ನು ನಾವೆಲ್ಲರೂ ಅರಿತುಕೊಳ್ಳಬೇಕಾಗಿದೆ ಮತ್ತು ಶಿಕ್ಷಣೋದ್ಯಮಿಗಳು ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ.
ಉದ್ಧಾನ ಸ್ವಾಮೀಜಿಗಳಿಂದ ಪ್ರಾರಂಭವಾಗಿದ್ದ ಅನ್ನ-ಅರಿವುಗಳ ದಾಸೋಹವನ್ನು ಡಾ.ಶ್ರೀ ಶಿವಕುಮಾರ ಸ್ವಾಮೀಜಿಗಳು ಸರ್ವರನ್ನೂ ಒಳಗೊಂಡ ದಾಸೋಹವನ್ನಾಗಿ ವಿಸ್ತರಿಸಿದರು. ಸ್ವಾಮೀಜಿಗಳ ತುಮಕೂರಿನ ಸಿದ್ದಗಂಗಾ ಮಠ ಡಾ.ಶ್ರೀ ಶಿವಕುಮಾರ ಸ್ವಾಮೀಜಿಗಳ ನೇತೃತ್ವದಲ್ಲಿ ಒಂದು ವಿಶ್ವವಿದ್ಯಾಲಯವೇ ಯಾಕೆ, ಒಂದು ಸರ್ಕಾರವೇ ಮಾಡಬೇಕಾಗಿರುವ ಕೆಲಸವನ್ನು ಮಾಡುತ್ತಾ ಬಂದಿದೆ.
ಅಲ್ಲಿನ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಣ ಪಡೆದು ವಿವಿಧ ಕ್ಷೇತ್ರಗಳಲ್ಲಿ ಉನ್ನತ ಹುದ್ದೆಗಳಲ್ಲಿರುವವರು ಇಂದು ವಿಶ್ವದಾದ್ಯಂತ ಇದ್ದಾರೆ. ಸ್ವಾಮೀಜಿಗಳು ಎಂದೂ ಹೆಚ್ಚು ಮಾತನಾಡಿದವರಲ್ಲ, ಮಾತಿಗಿಂತ ಮೌನದಲ್ಲಿಯೇ ಸಾಧನೆ ಮಾಡಿದವರು. ಅವರು ನುಡಿದಂತೆಯೇ ನಡೆದವರು. ಕಾಯಕಪ್ರಜ್ಞೆಯನ್ನು ಬಾಳಿ ಬದುಕಿದವರು. ಕೊನೆಗೂ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರಿಗೆ ಅವರೇ ಸಾಟಿ ಹೊರತು ಆ ಸ್ಥಾನದಲ್ಲಿ ಭವಿಷ್ಯದಲ್ಲಿಯೂ ಇನ್ನೊಬ್ಬರನ್ನು ಊಹಿಸುವುದು ಕಷ್ಟ.
ಸ್ವಾಮೀಜಿಗಳ ಲಿಂಗೈಕದಿಂದ ರಾಜ್ಯ,ದೇಶಕ್ಕೆ ಮಾತ್ರವಲ್ಲ ಇಡೀ ಮನುಕುಲಕ್ಕೆ ಆಗಿರುವ ನಷ್ಟವನ್ನು ಶಬ್ದಗಳಿಂದ ಹೇಳಿಕೊಳ್ಳಲು ಸಾಧ್ಯ ಇಲ್ಲ. ನಮ್ಮಿಂದ ಮರೆಯಾದ ಸ್ವಾಮೀಜಿಗಳು ಒಂದು ದೊಡ್ಡ ನಿರ್ವಾತವನ್ನು ಬಿಟ್ಟು ಹೋಗಿದ್ದಾರೆ, ಅದನ್ನು ತುಂಬಲು ಬಹುಷ: ಮುಂದೆಯೂ ಯಾರಿಗೂ ಸಾಧ್ಯವಾಗಲಾರದು. ಸ್ವಾಮೀಜಿಯವರಿಗೆ ದೇಶದ ಅತ್ಯುನ್ನತ ಗೌರವವಾದ ಭಾರತ ರತ್ನ ನೀಡಬೇಕೆಂದು ನಾನು ಮುಖ್ಯಮಂತ್ರಿಯಾಗಿದ್ದಾಗ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದೆ. ಸ್ವಾಮೀಜಿಗಳು ಇಂತಹ ಪ್ರಶಸ್ತಿ-ಪಾರಿತೋಷಕಗಳನ್ನು ಮೀರಿ ಬದುಕಿದವರು. ಆದರೆ ಆ ಗೌರವ ಸ್ವಾಮೀಜಿಯವರಿಗೆ ಸಂದಿದ್ದರೆ ಆ ಪ್ರಶಸ್ತಿಯ ಗೌರವ ಹೆಚ್ಚಾಗುತ್ತಿತ್ತು.
https://www.facebook.com/595111904167609/posts/807113292967468/
ಸುದ್ದಿದಿನ.ಕಾಂ|ವಾಟ್ಸಾಪ್| 9986715401
![](https://suddidina.com/wp-content/uploads/2022/04/20210226_111406.jpg)
ಕ್ರೀಡೆ
Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು
![](https://suddidina.com/wp-content/uploads/2024/07/suddidina_paris_Olympic.jpg)
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.
ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ
![](https://suddidina.com/wp-content/uploads/2024/06/judges_suddidina.jpg)
ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.
ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್ಗಳನ್ನು ಒಳಗೊಂಡಿದೆ.
ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ
![](https://suddidina.com/wp-content/uploads/2024/05/application_invitation_arji_suddidina.jpg)
ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ6 days ago
ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು
-
ದಿನದ ಸುದ್ದಿ3 days ago
K-SET| ಕೆಸೆಟ್ ಪರೀಕ್ಷೆ ; ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
-
ದಿನದ ಸುದ್ದಿ6 days ago
ಶಿರೂರು ಗುಡ್ಡಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
-
ದಿನದ ಸುದ್ದಿ6 days ago
ದಾವಣಗೆರೆ ಭಾರೀ ಮಳೆ | ಬೆಳೆ ನಷ್ಟವಾಗಿದ್ದೆಷ್ಟು..?
-
ದಿನದ ಸುದ್ದಿ6 days ago
ಕೃಷಿ ಪಂಡಿತ್, ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ಅತಿಥಿ ಉಪನ್ಯಾಸಕ ಹುದ್ದೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ನಾಳೆಯಿಂದ ಸಂಸತ್ತಿನ ಬಜೆಟ್ ಅಧಿವೇಶನ
-
ದಿನದ ಸುದ್ದಿ4 days ago
ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!