ದಿನದ ಸುದ್ದಿ
ಬೆಂಗಳೂರು : ಮತಬೇಟೆಯಲ್ಲಿ ಸಿದ್ದರಾಮಯ್ಯ..!
ಸುದ್ದಿದಿನ, ಬೆಂಗಳೂರು : ಗಾಂಧಿನಗರ ಹಾಗೂ ಚಾಮರಾಜಪೇಟೆ ವಿಧಾನಸಭೆ ಕ್ಷೇತ್ರದಲ್ಲಿ ಸೋಮವಾರ ಆಯೋಜಿಸಿದ್ದ ರೋಡ್ ಶೋ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ್ದರು.
ಬೆಂಗಳೂರು ಸೆಂಟ್ರಲ್ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ರಿಜ್ವಾನ್ ಅರ್ಷದ್ ಯುವ ಉತ್ಸಾಹಿ ನಾಯಕ. ಸಂವಿಧಾನದ ಆಶಯಗಳಲ್ಲಿ ನಂಬಿಕೆಯಿಟ್ಟಿರುವ ಇಂತಹ ಯುವಕರು ಸಂಸತ್ತಿಗೆ ಹೋದಾಗಲೇ ಪ್ರಜಾಪ್ರಭುತ್ವ ಬಲಗೊಳ್ಳಲು ಸಾಧ್ಯ ಎಂದು ಈ ಸಂದರ್ಭದಲ್ಲಿ ಹೇಳಿದರು.
ಹಾಗೆ ಯಶವಂತಪುರ ವಿಧಾನಸಭೆ ಕ್ಷೇತ್ರದಲ್ಲಿ ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿದ ಸಿದ್ದರಾಮಯ್ಯ ಅವರು, ಕೃಷ್ಣಬೈರೇಗೌಡರು ಹಿಂದಿನ ನನ್ನ ಹಾಗೂ ಈಗಿನ ಸರ್ಕಾರದ ಅವಧಿಯಲ್ಲಿ ಮಂತ್ರಿಯಾಗಿ ಅತ್ಯಂತ ದಕ್ಷ, ಪ್ರಮಾಣಿಕ ಸಚಿವರು ಎಂದು ಗುರುತಿಸಿಕೊಂಡವರು. ಉಜ್ವಲ ಭಾರತಕ್ಕಾಗಿ ಇಂಥ ಕ್ರಿಯಾಶೀಲ ವ್ಯಕ್ತಿಗಳು ಸಂಸತ್ತು ಪ್ರವೇಶಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಸಿದ್ದರಾಮಯ್ಯ ಟ್ವೀಟ್
ನರೇಂದ್ರ ಮೋದಿಯವರು ತಮ್ಮ 5 ವರ್ಷಗಳ ವೈಫಲ್ಯವನ್ನು ಅಯೋಧ್ಯೆಯ ಪುಣ್ಯಭೂಮಿಯಲ್ಲಿ ಹೂತಿಟ್ಟು, ಅಲ್ಲಿ ನೆಮ್ಮದಿಯಾಗಿದ್ದ ರಾಮನನ್ನು ಕರೆದುಕೊಂಡು ಚುನಾವಣಾ ಪ್ರಚಾರಕ್ಕೆ ಹೊರಟಿದ್ದಾರೆ.@narendramodi ಅವರೇ, ಇನ್ನೆಷ್ಟು ಕಾಲ ಜನರ ಭಾವನೆಗಳನ್ನೇ ಬಂಡವಾಳ ಮಾಡಿಕೊಂಡು ಮೋಸ ಮಾಡುತ್ತೀರ? 5 ವರ್ಷದಲ್ಲಿ ಒಮ್ಮೆಯಾದರೂ ಮಂದಿರ ನೆನಪಾಗಿರಲಿಲ್ಲವೇ?
— Siddaramaiah (@siddaramaiah) April 8, 2019
ಸುದ್ದಿದಿನ.ಕಾಂ|ವಾಟ್ಸಾಪ್|9986715401