ರಾಜಕೀಯ

ವಿರೋಧ ಪಕ್ಷ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ : ಸಿದ್ದ ರಾಮಯ್ಯ

Published

on

ಸುದ್ದಿದಿನ, ಬೆಂಗಳೂರು :ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ನೈತಿಕ ಹೊಣೆ ಹೊತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ನನ್ನ ಮೇಲೆ ಭರವಸೆ ಇಟ್ಟು ಜವಾಬ್ದಾರಿಯನ್ನು ನೀಡಿದ್ದ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಸೋನಿಯಾ ಗಾಂಧಿಯವರಿಗೆ ಆಭಾರಿಯಾಗಿದ್ದೇನೆ ಎಂದಿದ್ದಾರೆ.

ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಮತ ನೀಡಿ ಬೆಂಬಲಿಸಿದ ಮತದಾರರಿಗೆ ನಾನು ಕೃತಜ್ಞನಾಗಿದ್ದೇನೆ. ದುಡ್ಡು, ಜಾತಿ, ವೈಯಕ್ತಿಕ‌ ಲಾಭದಂತಹ ದೌರ್ಬಲ್ಯಗಳನ್ನು ಮೆಟ್ಟಿನಿಂತ ನಿಮ್ಮಂತಹ ಮತದಾರರಿಂದ‌ ಮಾತ್ರ ಪ್ರಜಾಪ್ರಭುತ್ವದ ರಕ್ಷಣೆ ಸಾಧ್ಯ. ಸದಾ ನಿಮ್ಮ ಜೊತೆ ನಾನಿದ್ದೇನೆ ಎಂದು ನುಡಿದಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version