ರಾಜಕೀಯ
‘ಚೌಕೀದಾರ್ ಅಲ್ಲ ಮೈ ಪಾಗಲ್’ ಎಂದು ಬಿಜೆಪಿಗರು ಘೋಷಿಸಿಕೊಳ್ಳಿ : ಸಿದ್ದರಾಮಯ್ಯ ಕಿಡಿ
ಸುದ್ದಿದಿನ,ಬೆಂಗಳೂರು : ವಿನಾಶಕಾಲೇ ವಿಪರೀತ ಬುದ್ದಿ. ತಾಯಿಯಂತೆಯೇ ಉಗ್ರರಿಗೆ ಬಲಿಯಾದ ರಾಜೀವ್ಜಿ ಬಗ್ಗೆ ನೀಚತನದ ಮಾತನಾಡುತ್ತಿರುವ ನರೇಂದ್ರ ಮೋದಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಅವರ ಚಿಕಿತ್ಸೆಗೆ ಬೇಕಾದ ವಿಶ್ರಾಂತಿಯನ್ನು ದೇಶದ ಮತದಾರರು ಈ ಬಾರಿ ನೀಡುತ್ತಾರೆ. ಅವರು ಈ ಕಾಯಿಲೆಯಿಂದ ಶೀಘ್ರ ಗುಣಮುಖರಾಗಲಿ ಎಂದು ಮೋದಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ.
ಮೋದಿ ಹಾಗೂ ಕೆ.ಎಸ್.ಈಶ್ವರಪ್ಪ ಅವರ ನೀಚತನದ ಹೇಳಿಕೆಗಳನ್ನುದೇಶಿಸಿ ಟ್ವೀಟ್ ಮಾಡಿರು ಅವರು, ‘ಹಿರಿಯಣ್ಣನ ಚಾಳಿ ಮನೆ ಮಂದಿಗೆಲ್ಲ’. ಸೋಲಿನ ಭೀತಿಯಲ್ಲಿರುವ ನರೇಂದ್ರ ಮೋದಿ ಯವರಿಂದ ಈಶ್ವರಪ್ಪನವರ ವರೆಗೆ ಎಲ್ಲರ ನಾಲಿಗೆಗಳಲ್ಲಿ ಈ ಹತಾಶೆ ಕಾಣಿಸುತ್ತಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ‘ಮೈ ಚೌಕಿದಾರ್’ ಅಲ್ಲ ‘ಮೈ ಪಾಗಲ್’ ಎಂದು ಬಿಜೆಪಿ ನಾಯಕರೆಲ್ಲ ಘೋಷಿಸಿಕೊಳ್ಳುವುದು ಒಳ್ಳೆಯದು ಎಂದು ಕಿಡಿಕಾರಿದ್ದಾರೆ.
Mr. @rajeev_mp,
Think before you tweet. I am not like your Chor @narendramodi to eat biryani with the PM of our enemy country & also not like you to compromise on ethics to please your bosses.
It is better to lead a life of Tipu Sultan than like a slave of your bosses like you. https://t.co/wBLWnUOmMD
— Siddaramaiah (@siddaramaiah) May 5, 2019
Mr. @narendramodi,
You pat your own back for others' achievements but will you also take the responsibility for your cabinet min' incapabilities.
Hundreds of students in Karnataka may not be able to take up NEET because of delay in the train services.
1/2— Siddaramaiah (@siddaramaiah) May 5, 2019
Modi Ji,
The battle is over. Your Karma awaits you. Projecting your inner beliefs about yourself onto my father won’t protect you.
All my love and a huge hug.
Rahul
— Rahul Gandhi (@RahulGandhi) May 5, 2019
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ನೂತನ ಸಂಸದರನ್ನು ಸ್ವಾಗತಿಸಲು ಲೋಕಸಭಾ ಕಾರ್ಯಾಲಯ ಸಜ್ಜು ; ಸಂಸದರಿಗೆ ಇಷ್ಟೆಲ್ಲಾ ಸವಲತ್ತುಗಳು..!
ಸುದ್ದಿದಿನ ಡೆಸ್ಕ್ : ಲೋಕಸಭೆಯ ಅಂತಿಮ ಚರಣದ ಮತದಾನ ದಿನ ಹಾಗೂ ನಂತರ ಚುನಾವಣಾ ಫಲಿತಾಂಶವು ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಹೊಸ ಸಂಸದರನ್ನು ಬರ ಮಾಡಿಕೊಳ್ಳಲು ಲೋಕಸಭಾ ಕಾರ್ಯಾಲಯ ವ್ಯಾಪಕ ವ್ಯವಸ್ಥೆಯಿಂದ ಸಜ್ಜುಗೊಳ್ಳುತ್ತಿದೆ. ಇದಕ್ಕಾಗಿ ಅಧಿಕಾರಿಗಳ ವಿಶೇಷ ತಂಡಗಳನ್ನು ರಚಿಸಲಾಗಿದೆ.
ಚುನಾಯಿತ ಅಭ್ಯರ್ಥಿಗಳ ಬಗ್ಗೆ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸುತ್ತಿದ್ದಂತೆಯೇ ನೂತನ ಅಭ್ಯರ್ಥಿಗಳ ಆಗಮನ ಪ್ರಕ್ರಿಯೆ ಆರಂಭವಾಗುತ್ತದೆ. ಅವರ ಪ್ರಯಾಣಕ್ಕೆ ಮುನ್ನವೇ ಲೋಕಸಭೆ ಕಾರ್ಯಾಲಯದ ನೋಡಲ್ ಅಧಿಕಾರಿಗಳು ಅವರನ್ನು ಸಂಪರ್ಕಿಸುತ್ತಾರೆ. ಐಜಿಐ ವಿಮಾನ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣದ ವಿವಿಧ ಟರ್ಮಿನಲ್ಗಳಲ್ಲಿ ವಿಶೇಷ ಸ್ವಾಗತ ಕೇಂದ್ರಗಳನ್ನು ತೆರೆಯಲಾಗುತ್ತಿದೆ. ಸಂಸದರಾಗಿ ಆಯ್ಕೆಯಾಗಿರುವ ಅಭ್ಯರ್ಥಿಗಳನ್ನು ನಿಗದಿತ ಕೇಂದ್ರಗಳಲ್ಲಿ ಬರ ಮಾಡಿಕೊಳ್ಳಲಾಗುತ್ತದೆ.
ಸಂಸತ್ತಿನ ಅನೆಕ್ಸೆ ವಿಸ್ತೃತ ಕಟ್ಟಡದ ಸ್ವಾಗತ ಕೇಂದ್ರಕ್ಕೆ ಆಗಮಿಸಿದ ನಂತರ ಅವರಿಗೆ ದೂರವಾಣಿ ಸಂಪರ್ಕ, ಹೊಸಬ್ಯಾಂಕ್ ಖಾತೆ, ಸಂಸತ್ ಕಟ್ಟಡಕ್ಕೆ ಪ್ರವೇಶ ಪಡೆಯಲು ಸ್ಮಾರ್ಟ್ ಆಕ್ಸೆಸ್ ಕಾರ್ಡ್, ಅವರ ವಾಹನಗಳಿಗಾಗಿ ಫಾಸ್ಟ್ ಟ್ಯಾಗ್ ಸ್ಟಿಕರ್ ಮತ್ತು ರಾಜತಾಂತ್ರಿಕ ಪಾಸ್ಪೋರ್ಟ್ ನೀಡಿಕೆಗೆ ವ್ಯವಸ್ಥೆ ಮಾಡಲಾಗುತ್ತದೆ. ರಾಜ್ಯ ಸರ್ಕಾರಿ ಅತಿಥಿ ಭವನ ಹಾಗೂ ಪಶ್ಚಿಮ ನ್ಯಾಯಾಲಯ ಹಾಸ್ಟೇಲ್ ಸಂಕೀರ್ಣದಲ್ಲಿ ಅವರಿಗೆ ತಂಗಲು ಅವಕಾಶ ಕಲ್ಪಿಸಲಾಗುತ್ತದೆ. ಹೊಸ ಸದಸ್ಯರಿಗೆ ಸಂವಿಧಾನದ ಪ್ರತಿ ನೀತಿ ಮತ್ತು ಕಲಾಪ, ಪ್ರಕ್ರಿಯೆ, ನಿಯಮಾವಳಿ ಕೈಪಿಡಿಗಳನ್ನು ಅನುಸರಿಸಲು ನೀಡಲಾಗುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ವಿಧಾನಪರಿಷತ್ ಚುನಾವಣೆ ; ಬಿರುಸಿನ ಪ್ರಚಾರ
ಸುದ್ದಿದಿನ ಡೆಸ್ಕ್ : ವಿಧಾನಪರಿಷತ್ ಚುನಾವಣೆ ಪ್ರಯುಕ್ತ ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿಗಳ ಗೆಲುವಿಗೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಪಕ್ಷದ ಸಮನ್ವಯ ಸಮಿತಿ ಸಭೆಯನ್ನು ಬೆಂಗಳೂರಿನ ಜೆಪಿ ಭವನದಲ್ಲಿಂದು ಹಮ್ಮಿಕೊಳ್ಳಲಾಗಿತ್ತು.
ಈ ವೇಳೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ವಿರೋಧಪಕ್ಷದ ನಾಯಕ ಮತ್ತು ಬಿಜೆಪಿ ಮುಖಂಡ ಆರ್. ಅಶೋಕ, ಮಾಜಿ ಸಚಿವರಾದ ಕೆ.ಗೋಪಾಲಯ್ಯ, ಸಿ.ಎನ್. ಅಶ್ವಥ್ ನಾರಾಯಣ, ಮುನಿರತ್ನ, ಸಿ.ಪಿ.ಯೋಗೇಶ್ವರ್ ಮಾತನಾಡಿದರು.
ಇನ್ನೊಂದೆಡೆ, ಚಿತ್ರದುರ್ಗದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರವಾಗಿ ವಿಧಾನಪರಿಷತ್ ಸದಸ್ಯ ಪುಟಣ್ಣಯ್ಯ ಮತಯಾಚಿಸಿದರು. ಇದೇ ವೇಳೆ ಮಾತನಾಡಿದ ಅವರು, ರಾಜ್ಯ ಸರ್ಕಾರಿ ನೌಕರರ ಪಿಂಚಣಿ ವ್ಯವಸ್ಥೆ ಬದಲಾವಣೆಗೆ ಸರಕಾರ ಬದ್ಧವಾಗಿದೆ ಎಂದು ಭರವಸೆ ನೀಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಆರನೇ ಹಂತದ ಲೋಕಸಭಾ ಚುನಾವಣೆ ಮತದಾನ ಶಾಂತಿಯುತ
ಸುದ್ದಿದಿನ ಡೆಸ್ಕ್ : ದೇಶದಲ್ಲಿ ಲೋಕಸಭಾ ಚುನಾವಣೆಯ 6ನೇ ಹಂತಕ್ಕಾಗಿ ಇಂದು ನಡೆದ ಮತದಾನ ಶಾಂತಿಯುತವಾಗಿ ಮುಕ್ತಾಯವಾಗಿದೆ.
ಈ ಹಂತದಲ್ಲಿ 8 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶ ಒಳಗೊಂಡಂತೆ ಒಟ್ಟು 58 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಿತು. 5 ಗಂಟೆಯ ವೇಳೆಗೆ ಬಂದ ವರದಿಯ ಪ್ರಕಾರ, 6ನೇ ಹಂತದ 58 ಕ್ಷೇತ್ರಗಳಲ್ಲಿ ಒಟ್ಟಾರೆ ಶೇಕಡ 57.70 ರಷ್ಟು ಮತದಾನವಾಗಿದೆ.
ಬಿಹಾರದಲ್ಲಿ ಶೇಕಡ 52.24, ಜಾರ್ಖಂಡ್ನಲ್ಲಿ ಶೇಕಡ 61.41, ಹರ್ಯಾಣzಲ್ಲಿ ಶೇಕಡ 55.93, ಒಡಿಶಾದಲ್ಲಿ ಶೇಕಡ 59.60, ಉತ್ತರಪ್ರದೇಶದಲ್ಲಿ 52.02 ಮತ್ತು ಪಶ್ಚಿಮಬಂಗಾಳದಲ್ಲಿ 77.99, ದೆಹಲಿಯಲ್ಲಿ 53.73 ಹಾಗೂ ಜಮ್ಮು-ಕಾಶ್ಮೀರದಲ್ಲಿ ಶೇಕಡ 51.35ರಷ್ಟು ಮತದಾನವಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ಕವಿ ಆನಂದ ಲಕ್ಕೂರು ನಿಧನ ; ಉದಯ ಇಟಗಿ ನುಡಿನಮನ
-
ಕ್ರೀಡೆ7 days ago
ಬೆಳಗಿನ ಸುದ್ದಿ ಮುಖ್ಯಾಂಶಗಳು
-
ದಿನದ ಸುದ್ದಿ7 days ago
ಇರಾನ್ ಅಧ್ಯಕ್ಷ ಹೆಲಿಕಾಪ್ಟರ್ ದುರಂತದಲ್ಲಿ ಸಾವು | ಅಘಾತಕಾರಿ ಸುದ್ದಿ ಕೇಳಿ ದುಃಖವಾಗಿದೆ : ಪ್ರಧಾನಿ ಮೋದಿ
-
ದಿನದ ಸುದ್ದಿ6 days ago
ರಾಜ್ಯ ಸರ್ಕಾರಕ್ಕೆ ಒಂದು ವರ್ಷದ ಸಂಭ್ರಮ | ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ : ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ6 days ago
5ನೇ ಹಂತದ ಲೋಕಸಭೆ ಚುನಾವಣೆ; ಶೇಕಡ 60.09ರಷ್ಟು ಮತದಾನ
-
ದಿನದ ಸುದ್ದಿ6 days ago
ಆರು ಮತ್ತು ಏಳನೇ ಹಂತದ ಲೋಕಸಭಾ ಚುನಾವಣೆಗೆ ರಾಜಕೀಯ ನಾಯಕರಿಂದ ಬಿರುಸಿನ ಪ್ರಚಾರ
-
ದಿನದ ಸುದ್ದಿ3 days ago
ಪ್ರಜ್ವಲ್ ಪೋಲಿಸರಿಗೆ ಶರಣಾಗಿ ವಿಚಾರಣೆ ಎದುರಿಸಬೇಕು : ಮೊಮ್ಮಗನಿಗೆ ಮಾಜಿ ಪ್ರಧಾನಿ ದೇವೇಗೌಡ ಎಚ್ಚರಿಕೆ
-
ದಿನದ ಸುದ್ದಿ6 days ago
ದಾವಣಗೆರೆ | ಒಂದೇ ಕುಟುಂಬದ ಮೂವರು ನಾಪತ್ತೆ