ರಾಜಕೀಯ

ಪಕ್ಷದ ಕಾರ್ಯಕರ್ತೆಯ ಭಾಷಣ ನಿಲ್ಲಿಸಲು ಪ್ರಯತ್ನಿಸುವಾಗ ನಡೆದ ಘಟನೆ‌ ಆಕಸ್ಮಿಕ : ಸಿದ್ದ ರಾಮಯ್ಯ ಟ್ವೀಟ್

Published

on

ಸುದ್ದಿದಿನ ಡೆಸ್ಕ್ : ಇಂದು ಸೋಮವಾರ ವರುಣ ಕ್ಷೇತ್ರದಲ್ಲಿ ನಡೆದ ಸಭೆಯಲ್ಲಿ ಪಕ್ಷದ ಕಾರ್ಯಕರ್ತೆಯೊಬ್ಬರ‌ ದೀರ್ಘ ಭಾಷಣವನ್ನು ನಿಲ್ಲಿಸಲು ಪ್ರಯತ್ನಿಸುವಾಗ ನಡೆದ ಘಟನೆ‌ ಆಕಸ್ಮಿಕವಾದುದು, ಅದರಲ್ಲಿ ದುರುದ್ದೇಶ ಇರಲಿಲ್ಲ. 15 ವರ್ಷಗಳಿಂದ‌ ನಾನು ಬಲ್ಲ‌ ಆ‌‌ ಕಾರ್ಯಕರ್ತೆ ನನ್ನ‌ಸೋದರಿ ಸಮಾನ‌ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ವರುಣಾ ಕ್ಷೇತ್ರದಲ್ಲಿ ನಡೆದ ಘಟನೆ ಬಗ್ಗೆ ಪಕ್ಷದ ಕಾರ್ಯಕರ್ತೆ ಜಮಲಾರ್ ಸ್ಪಷ್ಟನೆ ನೀಡಿದ್ದಾರೆ. ಬಿಜೆಪಿ ನಾಯಕರು ಘಟನೆಗೆ ರಾಜಕೀಯ ಬಣ್ಣ ಬಳಿಯುವ ಮೂಲಕ ಆ ಹೆಣ್ಣುಮಗಳನ್ನು ಅವಮಾನಿಸುತ್ತಿದ್ದಾರೆ. ಬಿಜೆಪಿ ನಾಯಕರಿಗೆ ಮಹಿಳೆಯರ ಮೇಲೆ ಇರುವ ಗೌರವ ಲೋಕಕ್ಕೆ ಗೊತ್ತು. ಇವರಿಂದ ನಾನು ಕಲಿಯುವುದೇನಿಲ್ಲ‌ ಎಂದೂ ಕೂಡ ಟ್ವೀಟ್ ನಲ್ಲಿ ಬಿಜೆಪಿ ನಾಯಕರಿಗರ ತಿರುಗೇಟು ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Trending

Exit mobile version