Connect with us

ಲೈಫ್ ಸ್ಟೈಲ್

ಡಾಕ್ಟ್ರೇ… ಸೈಡ್ ಇಫೆಕ್ಟ್ ಇಲ್ಲದ ಔಷಧಿ ಬರ್ದು ಕೊಡಿ..!

Published

on

  • ಡಾ: ಎನ್.ಬಿ.ಶ್ರೀಧರ

ಡಾಕ್ಟ್ರೇ… ದನಕ್ಕೆ ಸೈಡ್ ಎಫ಼ೆಕ್ಟ್ ಇರದ ಮೆಡಿಸಿನ್ ಬರ್ದು ಕೊಡಿ. ಅದಕ್ಕೆ ಹೀಟಾಗುತ್ತೆ… ಬೇಡವೇ ಬೇಡ” ಇದು ನಮ್ಮ ಗೋಪಾಲಕರೊಬ್ಬರ ವಿನಂತಿ.

“ನಮ್ಮನೇ ದನಕ್ಕೆ ಯಾವುದೂ ಇಂಗ್ಲಿಷ್ ಔಷಧೀನೇ ಕೊಡಿಸಲ್ಲ. ಎಲ್ಲಾನೂ ನೈಸರ್ಗಿಕ.. ಯಾವುದೇ ಸೈಡ್ ಇಫ಼ೆಕ್ಟ್ ಇಲ್ವಂತೆ.

ದನಾ ಕಟ್ಲೇ ಇಲ್ಲ. ಎಲ್ಲಾ ಔಷಧೀನೂ ಮಾಡಿಸ್ದೆ… ಏನೂ ಪ್ರಯೋಜನಾ ಆಗ್ಲೇ ಇಲ್ಲ. ಹಳ್ಳಿ ಔಷಧಿ ಮಾಡಿಸಿದೆ. ಈಗ ನೋಡಿ ಕಟ್ಬಿಟ್ಟಿದೆ.

“ಈ ಇಂಗ್ಲಿಷ್ ಮೆಡಿಸಿನ್ ಬಿಟ್ಬಿಟ್ಟೆ.. ಭಾರಿ ವಿಷ ಅಂತೆ ಕಣ್ರೀ.. ಈ ಹಳ್ಳಿ ಔಷಧೀನೆ ಸೈ.. ಒಂಚೂರು ಸೈಡ್ ಇಫ಼ೇಕ್ಟ್ ಇಲ್ಲವಂತೆ.. ಅದನ್ನೇ ದನಕ್ಕೆ ಹಾಕೋದು ಅಂತ ಅಂದ್ಕಂಡಿದ್ದೀನಿ”..ನೋಡ್ಬೇಕು” ಇದು ಮತ್ತೊಬ್ಬರ ಅಂಬೋಣ.

“ಅಯ್ಯೋ.. ಈ ಇಂಗ್ಲಿಷ್ ಆಸ್ಪತ್ರೆಗಳೇ ಇಷ್ಟು.. ಅದೂ ಇದೂ ಟೆಸ್ಟ್ ಅಂತ ದುಡ್ಡಿಗಾಗಿ ಮಾಡಿಸ್ತಾರೆ.. ಎಲ್ಲಾ ದುಡ್ಡು ಸುಲಿಯುವ ಕೇಂದ್ರಗಳು ಕಣ್ರೀ… ಇದು ಮತ್ತೊಬ್ಬರ ಹೇಳಿಕೆ.

“ನಾನೆಂತೂ ಇಂಗ್ಲಿಷ್ ಔಷಧಿ ತಗೊಳ್ಳೋದೇ ಇಲ್ಲ. ಹಳ್ಳಿ ಔಷಧೀನೇ ತಗಳ್ಳೋದು.. ಇಂಗ್ಲಿಷ್ ಔಷಧಿ ಒಂದು ದೊಡ್ಡ ದಂಧೆ.. ಡಾಕ್ಟರುಗಳೆಲ್ಲಾ ಮಾಡೋದು ಬ್ಯುಸಿನೆಸ್”…ಇದು ಇನ್ನೊಬ್ಬರ ಅನಿಸಿಕೆ.

“ದಿನಕ್ಕೆ 4-5 ಲೀಟರ್ ನೀರು ಕುಡಿದರೆ ಸಾಕು. ಯಾವ ಕಾಯಿಲೆನೂ ಬರಲ್ಲ. ಇಂಗ್ಲಿಷ್ ಮೆಡಿಸಿನ್ ತಗೊಳ್ಳೋದೇ ಬೇಡ” ಮತ್ತೋರ್ವರ ಅಭಿಪ್ರಾಯ.

ಇಂಗ್ಲಿಷ್ ಔಷಧಿ ಒಳ್ಳೇದಲ್ಲ. ಹೋದ ತಕ್ಷಣ ಆಂಟಿಬಯೋಟಿಕ್ ಬರ್ದು ಕೊಡ್ತಾರೆ.. ಇದ್ರಿಂದ ಹೀಟು..ಸಿಕ್ಕಾಪಟ್ಟೆ ಸೈಡ್ ಎಫೆಕ್ಟ್..ಅದಕ್ಕೆ ಹಳ್ಳಿ ಔಷಧ ತಗಳ್ತಿದ್ದೀನಿ..

ಹೀಗೆ ಔಷಧಗಳ ಬಗ್ಗೆ ವೈರುಧ್ಯಗಳ ಪಟ್ಟೀಯೇ ಬೆಳೆಯುತ್ತಾ ಹೋಗುತ್ತದೆ. ಒಂದರ್ಥದಲ್ಲಿ ಹೇಳಬೇಕೆಂದರೆ ಆಂಗ್ಲ ಅಥವಾ ಪಾಶ್ಚ್ಯಾತ್ಯ ಅಥವಾ ಆಧುನಿಕ ಔಷಧಿಗಳ ಬಗ್ಗೆ ಜನರಿಗೆ ಅಸಹನೆ ಬೆಳೆಯುತ್ತಲೇ ಇದೆ. ಇದರ ಬಗ್ಗೆ ಸ್ವಲ್ಪ ಬೆಳಕು ಚೆಲ್ಲೋಣವೇ?

ಒಂದು ಕಾಯಿಲೆಯ ಬಗ್ಗೆ ಔಷಧಿಯನ್ನು ಕಂಡು ಹಿಡಿಯಲು ಸಹಸ್ರಾರು ವಿಜ್ಞಾನಿಗಳ ಮಾನವ ಘಂಟೆಗಳ ಪರಿಶ್ರಮ ಇರಲೇ ಬೇಕು. ಕಾಯಿಲೆ ಅಂದ ಮೇಲೆ ಅದಕ್ಕೊಂದು ಕಾರಣ ಇರಬೇಕು.ಆ ಕಾರಣ ಕಂಡು ಹಿಡಿಯಲೂ ಸಹ ಪ್ರಯತ್ನ ಬೇಕು. ಅದಾದ ನಂತರ ಅದಕ್ಕೊಂದು ಸೂಕ್ತ ಔಷಧ ಕಂಡು ಹಿಡಿಯಬೇಕು. ಅದು ಸುಲಭವೇ? ಖಂಡಿತಾ ಅಲ್ಲ.

ಹೊಸದೊಂದು ಔಷಧಿ ಕಂಡು ಹಿಡಿಯಬೇಕಾದರೆ ಲಕ್ಷಗಟ್ಟಲೇ ರಾಸಾಯನಿಕಗಳ ವಿಶ್ಲೇಷಣೆ ನಡೆಸಬೇಕು. ಈ ಸಹಸ್ರ ಸಂಖ್ಯೆಯ ರಾಸಾಯನಿಕಗಳಲ್ಲಿ ಕೇವಲ 100-200 ಮಾತ್ರ ಪರಿಣಾಮಕಾರಿಯಾಗಿ ಹೊರಹೊಮ್ಮುತ್ತವೆ. ಈ ಪ್ರಕ್ರಿಯೆಗೆ ಸುಮಾರು 3-4 ವರ್ಷ ಬೇಕು. ಇದಕ್ಕೆ ಸಾಮಾನ್ಯವಾಗಿ 10-15 ಬಿಲಿಯ ಡಾಲರುಗಳ ವೆಚ್ಚವಾಗುತ್ತದೆ. ಔಷಧದ ಕಣ ಕಂಡು ಹಿಡಿಯಬೇಕಾದರೆ ಅದಕ್ಕೆ ಅತ್ಯುತ್ತಮ ಪರಿಣಾಮ ಮತ್ತು ಅತೀ ಕಡಿಮೆ ಅಡ್ಡ ಪರಿಣಾಮ ವಿರಬೇಕೆಂಬುದು ಒಂದು ಕಠಿಣ ನಿಯಮ.

ಅದಕ್ಕೆಂದೇ ಇವುಗಳನ್ನು ಮೊದಲು ಇಲಿಗಳ ಮೇಲೆ ಪ್ರಯೋಗಿಸಬೇಕಾಗುತ್ತದೆ. ಏಕೆಂದರೆ ಇವುಗಳನ್ನು ಮನುಷ್ಯರ ಮೇಲೆ ಪ್ರಯೋಗಿಸಲು ಸಾಧ್ಯವಿಲ್ಲವಲ್ಲ!!. ಇಲಿಗಳನ್ನು ನಮಗಾಗಿ ಶೋಷಣೆ ಮಾಡಬಾರದೆಂಬ ಅರಿವು ಇದ್ದರೂ ಸಹ ಅವುಗಳ ಮೇಲೆ ಅಥವಾ ಇತರ ಪ್ರಯೋಗಶಾಲಾ ಪ್ರಾಣಿಗಳಾದ ಮೊಲ, ಗಿನಿ ಹಂದಿ, ಚಿಕ್ಕಿಲಿ, ಕೋತಿ ಅಥವಾ ನಾಯಿಗಳ ಮೇಲೆ ಪ್ರಯೋಗ ಮಾಡಿ ಅವುಗಳ ಪರಿಣಾಮ ಮತ್ತು ಅಡ್ಡ ಪರಿಣಾಮಗಳನ್ನು ಪತ್ತೆ ಮಾಡಬೇಕಾಗುತ್ತದೆ. ಇದಕ್ಕೆ ಕ್ಲಿನಿಕಲ್ ಪೂರ್ವ ಪ್ರಯೋಗವೆನ್ನುತ್ತಾರೆ. ಇದಕ್ಕೆ ಮನುಷ್ಯರನ್ನು ಉಪಯೋಗಿಸಬೇಕಾದ ಪ್ರಸಂಗ ಬಂದರೆ ಸಹಸ್ರಾರು ಮನುಜರೇ ಬೇಕಾಗಿದ್ದರೇನೋ??!!. ಇತ್ತೀಚೆಗೆ ಪ್ರಾಣಿಗಳನ್ನು ಬಹಳಷ್ಟು ಕಡಿಮೆ ಉಪಯೋಗಿಸಬೇಕೆಂಬ ಕಟ್ಟು ನಿಟ್ಟಾದ ನಿಯಮಗಳು, ಹೇಗೆ ಪ್ರಯೋಗ ಮಾಡಬೇಕೆಂಬ ಬಗ್ಗೆ ಅಂತಾರಾಷ್ಟ್ರೀಯ ಮಟ್ಟದ ನಿಯಮಗಳು ಬಂದಿವೆ. ಈ ಹಂತದಲ್ಲೇ ಹಲವಾರು ಔಷಧಿಗಳು ಬಿದ್ದು ಹೋಗುತ್ತವೆ.

ಯಾವುದೇ ಒಂದು ಹಂತದಲ್ಲಿ ಔಷಧಿ ಕಣವು ಬ್ರೂಣಕ್ಕೆ ಧಕ್ಕೆ ಮಾಡುವಂತಿದ್ದರೆ, ಗರ್ಭಪಾತ ಮಾಡುವಂತಿದ್ದರೆ, ನರಮಂಡಳಕ್ಕೆ ತೊಂದರೆ ಉಂಟು ಮಾಡುತ್ತಿದ್ದರೆ ಅಥವಾ ಹೃದಯ, ಮೂತ್ರಜನಕಾಂಗ, ಪಿತ್ತಜನಕಾಂಗ, ಮೇದೋಜೀರಕಾಂಗ, ಉದರ, ಮೆದುಳು ಅಥವಾ ಯಾವುದೇ ಅಂಗಕ್ಕೆ ಸೂಕ್ಷ್ಮದರ್ಶಕದಲ್ಲಿ ಮಾತ್ರ ನೋಡಬಹುದಾದ ಸ್ವಲ್ಪ ತೊಂದರೆಯುಂಟುಮಾಡುತ್ತಿದ್ದರೂ ಸಹ ಈ ಔಷಧಿಯ ಕಣವನ್ನು ಮುಲಾಜಿಲ್ಲದೇ ಬದಿಗೊತ್ತಲಾಗುತ್ತದೆ. ಅಂದರೆ ಸುಮಾರು 3-5 ವರ್ಷಗಳ ಸತತ ಪ್ರಯತ್ನ ಮತ್ತು 10-20 ಬಿಲಿಯ ಡಾಲರುಗಳು ಹೋಮವಾದ ಹಾಗೇ!!.

ಇದೆಲ್ಲ ಪರೀಕ್ಷೆಗಳನ್ನು ಪಾಸು ಮಾಡಿ ಬಂದರೆ ಅದನ್ನು ಔಷಧಿಯೆಂದು ಪರಿಗಣಿಸಲಾಗುತ್ತದೆ. ಇದಾದ ನಂತರ ಮನುಷ್ಯರ ಮೇಲೆ ನಾಲ್ಕು ಹಂತದ ಪ್ರಯೋಗಗಳು ಅಥವಾ ಕ್ಲಿನಿಕಲ್ ಪರೀಕ್ಷೆಗಳನ್ನು ಅವರ ಒಪ್ಪಿಗೆ ಪಡೆದು ಮಾಡಲಾಗುತ್ತದೆ.

ಮೊದಲ ಹಂತ

ಇದರಲ್ಲಿ 10-15 ಅರೋಗ್ಯಕರ ಸ್ವಯಂ ಪ್ರೇರಣೆಯಿಂದ ಪ್ರಯೋಗಕ್ಕೆ ಒಡ್ಡಿಕೊಳ್ಳುವ ಆರೋಗ್ಯವಂತ ಜನರ ಮೇಲೆ ಔಷಧಿಯನ್ನು ಪ್ರಯೋಗಿಸಲಾಗುತ್ತದೆ. ಈ ಹಂತದಲ್ಲಿ ಔಷಧಿಯು ಇಲಿಗಳ ಮೇಲೆ ಮಾಡಿದ ಪರಿಣಾಮ ಮನುಷ್ಯನಲ್ಲೂ ಪುನರಾವರ್ತನೆಯಾಗುತ್ತದೆಯೋ ಇಲ್ಲವೋ ಎಂಬುದನ್ನು ಪರಿಶೀಲಿಸಲಾಗುತ್ತದೆ. ಅದರಲ್ಲೂ ಔಷಧಿಯು ಎಷ್ಟು ಪ್ರಮಾಣದಲ್ಲಿ ದೇಹಕ್ಕೆ ಸೇರಿತು? ಎಷ್ಟು ಪ್ರಮಾಣದಲ್ಲಿ ರಕ್ತದಲ್ಲಿ ಪ್ರಸರಣವಾಯಿತು, ಎಷ್ಟು ನಿರ್ವಿಷಗೊಂಡಿತು? ಎಷ್ಟು ದೇಹದಿಂದ ವಿಸರ್ಜಿಸಲ್ಪಟ್ಟಿತು ಎಂಬುದನ್ನು ಪರಿಶೀಲಿಸಲಾಗುತ್ತದೆ. ಅಲ್ಲದೇ ಅವಶ್ಯಕ ಪರಿಣಾಮವನ್ನು ಅದು ಮನುಷ್ಯ ದೇಹದ ಮೇಲೆ ಅವಶ್ಯಕ ಪರಿಣಾಮ ಮಾಡಿತೇ ಎಂಬುದನ್ನು ಖಚಿತ ಪಡಿಸಿಕೊಳ್ಳುತ್ತಾರೆ.ಅಲ್ಲದೇ ಬಾಯಿಯಿಂದ ನೀಡಬೇಕಾದ ಔಷಧವಾದರೆ ಅಹಾರದ ಪರಿಣಾಮವನ್ನು ಸಹ ಪರಿಶೀಲಿಸಿ ನೀಡಲಾಗುತ್ತದೆ. ಈ ಅಧ್ಯಯನಕ್ಕೆ 2-4 ವರ್ಷ ಬೇಕಾಗಿದ್ದು ಸುಮಾರು 10-20 ಬಿಲಿಯನ್ ಡಾಲರ್ ಖರ್ಚಾಗಬಹುದು.

ಎರಡನೇ ಹಂತ

ಈ ಹಂತದಲ್ಲಿ ಔಷಧಿಯನ್ನು ಮೇಲಿನ ಎಲ್ಲಾ ಸಂಶೋಧನೆಗಳನ್ನು ಜಾಸ್ತಿ ಜನ ಅಂದರೆ ಸುಮಾರು 100-1000 ಜನರ ಮೇಲೆ ಪ್ರಯೋಗಿಸಿ ಅದರ ಪರಿಣಾಮ ಮತ್ತು ಅಡ್ಡಪರಿಣಾಮ ಎರಡನ್ನೂ ಅಭ್ಯಾಸ ಮಾಡಲಾಗುತ್ತದೆ. ಇದಕ್ಕೆ 2-4 ವರ್ಷಗಳ ಪರಿಶ್ರಮದ ಅವಶ್ಯಕತೆ ಇದೆ.ಹಂತ 1 ಮತ್ತು 2 ರ ಅಧ್ಯಯನವನ್ನು ಆರೋಗ್ಯವಂತ ಮನುಷ್ಯರ ಮೇಲೆ ಮಾಡಲಾಗುತ್ತದೆ.

ಮೂರನೇ ಹಂತ

ಈ ಹಂತದಲ್ಲಿ ಅಧ್ಯಯನವನ್ನು 1000-3000 ರೋಗ ಪೀಡಿತ ಮನುಷ್ಯರ ಮೇಲೆ ಮಾಡಲಾಗುತ್ತದೆ. ಇಲ್ಲಿಯೂ ಸಹ ಹಂತ 1 ರಲ್ಲಿನ ಅಧ್ಯಯನವನ್ನೇ ಮುಂದುವರೆಸಲಾಗುತ್ತಿದ್ದು, ಔಷಧಿಯ ಸುರಕ್ಷತೆಯ ಬಗ್ಗೆ ಸಂಪೂರ್ಣ ಗಮನ ನೀಡಲಾಗುತ್ತದೆ.

ರೋಗ ಪೀಡಿತ ವ್ಯಕ್ತಿಯ ಮೇಲೆ ಅಡ್ಡ ಪರಿಣಾಮವಾಗುತ್ತಿದ್ದರೆ ಔಷಧಿಯ ಪ್ರಯೋಗವನ್ನು ನಿಲ್ಲಿಸಿ ಅದನ್ನು ಹಿಂಪಡೆಯಲಾಗುತ್ತದೆ. ಈ ಅಧ್ಯಯನಕ್ಕೂ ಸಹ 2-4 ವರ್ಷ ಅವಧಿ ಬೇಕಾಗಿದ್ದು 20-30 ಬಿಲಿಯನ್ ಡಾಲರ್ ಖರ್ಚು ಬರುತ್ತದೆ. ಇದಾದ ನಂತರ ವಿವಿಧ ದೇಶಗಳಲ್ಲಿ ಆಯಾ ದೇಶಗಳ ನಿಯಮಗಳಂತೆ ಅರ್ಜಿ ಸಲ್ಲಿಸಿ ರಹದಾರಿ ಪಡೆಯಲಾಗುತ್ತದೆ.

ಇಲ್ಲಿ ಪ್ಲಾಸೆಬೋ ಪರಿಣಾಮವನ್ನೂ ಸಹ ಗಮನಿಸಲಾಗುತ್ತದೆ. ಪ್ಲಾಸೆಬೋ ಅಂದರೆ “ಹುಸಿ ಔಷದಿ” ಅಥವಾ “ಸುಳ್ಳೌಷಧಿ” ಅನ್ನಬಹುದೇನೋ? ಈ ಹಂತದಲ್ಲಿ ಔಷಧಿಯ ಪರಿಣಾಮವನ್ನು ಗಮನಿಸಲು “ಹುಸಿ ಔಷಧಿ” ಯನ್ನು ಗುಳಿಗಳ ಒಳಗೆ ಹಾಕಿ ಅದನ್ನು ವಿವಿಧ ಗುಂಪುಗಳಲ್ಲಿ ವಿಂಗಡಿಸಿದ ರೋಗಿಗಳ ಮೇಲೆ ಪ್ರಯೋಗಿಸಲಾಗುತ್ತದೆ.

ಇದು ವೈದ್ಯರಿಗೆ ಅಥವಾ ಕಂಪನಿಗೆ ಅಥವಾ ರೋಗಿಗೆ ಗೊತ್ತಿರುವುದಿಲ್ಲ. ಮನುಷ್ಯನಲ್ಲಿ ಶೇ: 65-70 ರೋಗಗಳು ಮನಸ್ಸಿನ ಮೇಲಿನ ಪರಿಣಾಮದಿಂದ ಉದ್ಭವವಾಗುವುದರಿಂದ ನಂಬಿಕೆ ಅಥವಾ ಭರವಸೆ ಅಥವಾ ಗುಣವಾಗಿಯೇ ಆಗುತ್ತದೆ ಎಂಬ ನಿರೀಕ್ಷೆಯಿಂದ ಹಲವಾರು ರೋಗಗಳು ಗುಣವಾಗುತ್ತವೆ. ಆದರೆ ಈ ಪರಿಣಾಮ ಪ್ರಾಣಿಗಳಲ್ಲಿ ಇರದು.

ಇದಕ್ಕೊಂದು ಚಿಕ್ಕ ಉದಾಹರಣೆಯೆಂದರೆ ಒಂದು ಕಂಪನಿ ಜಿಮ್ ಮಾಡುವ ಜನಗಳಿಗಾಗಿ ಶಕ್ತಿ ಜಾಸ್ತಿ ಮಾಡುವ ಔಷಧಿಯನ್ನು ನೀಡುತ್ತಿದೆಯೆಂದರೆ ಅಲ್ಲಿ ಶೇ:75ರಷ್ಟು ಜನರಿಗೆ ಶಕ್ತಿ ಬರಬಹುದು. ಆದರೆ ನಿಜವಾಗಿ ಗುಳಿಗೆಯಿಂದ ಎಷ್ಟು ಜನರಿಗೆ ಶಕ್ತಿ ಬಂದಿದೆ ಎಂಬುದು ಎರಡು ಗುಂಪುಗಳಲ್ಲಿ ಒಂದು ಗುಂಪಿಗೆ ಹುಸಿ ಔಷಧಿ ಮತ್ತೊಂದು ಗುಂಪಿಗೆ ನಿಜವಾದ ಔಷಧಿಯನ್ನು ಹೊಂದಿದ ಗುಳಿಗೆಯನ್ನು ನೀಡುತ್ತಾರೆ.

ಹುಸಿ ಔಷಧಿ ನೀಡಿದ ಗುಂಪು ಮತ್ತು ನಿಜವಾದ ಔಷಧ ನೀಡಿದ ಗುಂಪಿನಲ್ಲಿ ಶಕ್ತಿ ಜಾಸ್ತಿ ಆದರೆ ಔಷಧಿಯ ಪರಿಣಾಮ ಇಲ್ಲ ಎನ್ನಬಹುದು. ಕೇವಲ ಎರಡನೇ ಗುಂಪಿನಲ್ಲಿ ಶಕ್ತಿ ಜಾಸ್ತಿಯಾಗಿದ್ದರೆ ಮಾತ್ರ ಔಷಧಿ ಪರಿಣಾಮಕಾರಿ ಎನ್ನಬಹುದು.

ಈ “ಪ್ಲಾಸೆಬೋ” ಪರಿಣಾಮ ಔಷಧಿಯ ನಿರೀಕ್ಷಿತ ಪರಿಣಾಮಕ್ಕಿಂತ ಜಾಸ್ತಿಯಾದರೆ ಔಷಧಿ ಮಾರುಕಟ್ಟೆಗೆ ಬರದು.

ನಾಲ್ಕನೇ ಹಂತ

ಈ ಹಂತವನ್ನು ಮಾರುಕಟ್ಟೆಯ ನಂತರದ ಸರ್ವೇಕ್ಷಣೆ ಅನ್ನಬಹುದು. ವಿವಿಧ ದೇಶಗಳಲ್ಲಿ ರಹದಾರಿ ದೊರೆತ ನಂತರ ಆಯಾ ದೇಶಗಳಲ್ಲಿ ಔಷಧಿಯನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿ, ವೈದ್ಯರಿಗೆ ಈ ಬಗ್ಗೆ ಮಾಹಿತಿ ನೀಡಿ, ರೋಗಿಗಳಿಗೆ ಅವರು ಔಷಧಿಯನ್ನು ನೀಡಿದಾಗ ಏನಾದರೂ ಅಡ್ಡಪರಿಣಾಮಗಳು ಇರುವವೇ ಎಂಬುದನ್ನು ಪತ್ತೆ ಹಚ್ಚಲು ತಂಡವೊಂದು ಕಾರ್ಯ ನಿರ್ವಹಿಸುತ್ತದೆ. ಯಾವ ಹಂತದಲ್ಲಿಯಾದರೂ ಸಹ ಔಷಧಿಯನ್ನು ಮಾರುಕಟ್ಟೆಯಿಂದ ವಾಪಸ್ ಪಡೆಯಬೇಕಾಗಬಹುದು.

ಅಂದರೆ ಇಂಗ್ಲಿಷ್ ಔಷಧ ಕಂಡು ಹಿಡಿಯುವ ಪದ್ಧತಿ ಇಡೀ ಪ್ರಪಂಚದಲ್ಲಿ ಏಕರೂಪದಲ್ಲಿದೆ. ಏಕೆಂದರೆ ಒಂದು ಔಷಧಿಯನ್ನು ಕಂಡು ಹಿಡಿದರೆ ಅದು ಪ್ರಪಂಚದಲ್ಲಿರುವ ಕೋಟ್ಯಾನುಕೋಟಿ ಜನರ ಮೇಲೆ ಒಂದೇ ರೂಪದಲ್ಲಿರಬೇಕು. ಅದಕ್ಕೆಂದೇ ವಿಶ್ವ ಆರೋಗ್ಯ ಸಂಸ್ಥೆಯ ಆಧೀನದ ಆಹಾರ ಮತ್ತು ಔಷಧ ಆಡಳಿತ ಪ್ರಾಧಿಕಾರ (FDA-Food and Drug Administration) ವು ಕಾರ್ಯ ನಿರ್ವಹಿಸುತ್ತಿದ್ದು, ವಿಶ್ವದ ಯಾವುದೇ ಭಾಗದಲ್ಲಿ ಹೊಸ ಔಷಧ ಕಂಡು ಹಿಡಿದರೂ ಇದರ ಕಠಿಣ ನಿಯಮಗಳನ್ನು ಪಾಲಿಸಿ ಇದರ ತಜ್ಞರ ಹದ್ದಿನ ಕಣ್ಣಿನ ಅಡಿ ಲೈಸನ್ಸ್ ಪಡೆಯಬೇಕಾಗುತ್ತದೆ.

ಇದಕ್ಕೆ ಕೋಟ್ಯಾಂತರ ಡಾಲರ್ ವೆಚ್ಚ ಮತ್ತು ಸಹಸ್ರಾರು ಮಾನವ ಘಂಟೆಗಳ ಪರಿಶ್ರಮವಿರುತ್ತದೆ. ನಂತರ ಇದಕ್ಕೆ ಕಂಡು ಹಿಡಿದ ಕಂಪನಿಯವರು ಪೇಟಂಟ್ ಪಡೆಯುತ್ತಾರೆ. ಯಾವುದೇ ವ್ಯವಸ್ಥೆ ನೂರಕ್ಕೆ ನೂರರಷ್ಟು ಪರಿಪೂರ್ಣವಲ್ಲ. ಆದರೂ ಆ ದಿಶೆಯೆಡೆಗೆ ಎಷ್ಟು ಪ್ರಾಮಾಣಿಕ ಪ್ರಯತ್ನ ನಡೆದಿದೆ ಎನ್ನುವುದು ಮುಖ್ಯ.

ಆಧುನಿಕ ಅಥವಾ ಇಂಗ್ಲಿಷ್ ಅಥವಾ ಅಲೋಪತಿ ಔಷಧಿ ಕಂಡು ಹಿಡಿಯುವ ಪದ್ಧತಿಯಲ್ಲಿ ಇಷ್ಟೆಲ್ಲಾ ಕಟ್ಟು ನಿಟ್ಟು ಇದೆ. ಇದು ಯಾಕೆಂದರೆ ಮನುಷ್ಯರಲ್ಲಿ ಬಹಳ ಬೇಗ ಜಾಸ್ತಿ ಉತ್ತಮ ಪರಿಣಾಮವನ್ನು ಬೀರಿ , ಅತಿ ಕಡಿಮೆ “ಸೈಡ್ ಇಫೆಕ್ಟ್” ಇರಬೇಕು ಅಂತ. ಬಹುತೇಕ ಫಾರ್ಮಾಕಾಲಜಿ ಪುಸ್ತಕಗಳಲ್ಲಿ ಮತ್ತು ಜರ್ನಲ್ಲುಗಳಲ್ಲಿ ನಂತರ ಇದು ಪ್ರಕಟವಾಗುತ್ತದೆ.

ಪ್ರತಿ ಗುಳಿಗೆ, ಚುಚ್ಚುಮದ್ದು ಅಥವಾ ಮಾತ್ರೆಗಳ ಜೊತೆ ಒಂದು ಮಾಹಿತಿ ಚೀಟಿಯನ್ನೂ ಸಹ ಇಟ್ಟಿರುತ್ತಾರೆ. ಅದರಲ್ಲಿ ಔಷಧಿಯ ವಿವರ, ಅದರ ಜೊತೆ ಬೆರೆಸಿರುವ ಬಣ್ಣ, ಇತರ ದ್ರವಗಳು ಅಥವಾ ಘನಗಳು, ಕೊನೆ ದಿನಾಂಕ, ಕಂಪನಿಯ ಹೆಸರು, ವಿಳಾಸ, ರಹದಾರಿ ಸಂಖ್ಯೆ, ಉಪಯೋಗದ ವಿಧಾನ, ಅಡ್ಡ ಪರಿಣಾಮ ಇತ್ಯಾದಿಗಳನ್ನು ವಿವರವಾಗಿ ಆಂಗ್ಲ ಭಾಷೆಯಲ್ಲಿ ಹಾಕುತ್ತಾರೆ. ಇಲ್ಲಿ ಯಾವುದೇ ಮುಚ್ಚುಮರೆ ಇಲ್ಲ. ಮಾಡುವಂತೆಯೂ ಇಲ್ಲ.

ಆದರೆ ಬಹುತೇಕ ಜನರು ಗೂಗಲ್ಲಿನಲ್ಲಿಯೋ ಅಥವಾ ಔಷಧಿಯ ಜೊತೆ ಇರುವ ಚೀಟಿಯನ್ನು ಓದಿಯೋ, ಕೇವಲ “ಸೈಡ್ ಇಫೆಕ್ಟ್” ಓದಿ ಎಲ್ಲಾ ಇಂಗ್ಲಿಷ್ ಔಷಧಿಗಳಿಗೆ “ಸೈಡ್ ಇಫೆಕ್ಟ್” ಮಾತ್ರ ಇದೆ ಎಂದು ಭಾವಿಸುತ್ತಾರೆ ಮತ್ತು ಅದನ್ನು ಅನುಭವಿಸುತ್ತಾರೆ ಕೂಡಾ. ಇದಕ್ಕೆ “ನೋಸೆಬೋ” ಪರಿಣಾಮ ಅನ್ನುತ್ತಾರೆ. ಈ ಪರಿಣಾಮವನ್ನು ಅನುಭವಿಸುವವರ ಬಹು ದೊಡ್ಡ ಗುಂಪೇ ಇದೆ.

ಈ ಪ್ಲಾಸೆಬೋ ಮತ್ತು ನೋಸೆಬೋ ಪರಿಣಾಮಗಳಿಗೆ ಮೆದುಳಿನಲ್ಲಿರುವ ಡೋಪಮಿನ್, ಎಂಡೋರ್ಫ್ಹಿನ್ ಮತ್ತು ಎನ್ಕೆಫಾಲಿನ್ ಎಂಬ ವಸ್ತುಗಳು ಮತ್ತು ಇನ್ನೂ ಅನೇಕ ಹಾರ್ಮೋನುಗಳು ಕಾರಣ ಎಂದು ವಿಜ್ಞಾನ ಹೇಳುತ್ತಿದೆ. ಯಾವ ಔಷಧಿಗೆ ಪರಿಣಾಮ ಇದೆಯೋ ಅದಕ್ಕೆ ಅಡ್ಡ ಪರಿಣಾಮ ಇದ್ದೇ ಇದೆ. ಅಡ್ಡ ಪರಿಣಾಮ ಇರದಿದ್ದರೆ ಅದಕ್ಕೆ ಪರಿಣಾಮವು ಇರುವುದಿಲ್ಲ. ಇದು ನೆನಪಿರಲಿ.

ಬೇರೆ ಪದ್ದತಿಯ ಔಷಧಗಳಿಗೆ ಅಡ್ಡ ಪರಿಣಾಮಗಳು ಇಲ್ಲ ಎಂದು ಮನಸ್ಸಿನಲ್ಲಿ ಆಳವಾಗಿ ಬೇರೂರಿರುವುದರಿಂದ ಇಂಗ್ಲಿಷ್ ಔಷಧಿಗಳಿಗೆ ಮಾತ್ರ ಅದು ಇದೆ ಎಂಬ ತಪ್ಪು ಕಲ್ಪನೆ ಅನೇಕರಲ್ಲಿ ಇದೆ. ಇತರೇ ಪದ್ದತಿಯ ಯಾವ ಔಷಧಗಳೂ ಸಹ ಈ ರೀತಿಯ ಕಠಿಣ ಪರೀಕ್ಷೆ ತಪಾಸಣೆಯ ಮೂಲಕ ಬಂದಿಲ್ಲ. ಪರಂಪರೆಯಿಂದ ಬಂದವುಗಳೆಲ್ಲಾ ಸುರಕ್ಷಿತ ಎನ್ನುವುದು ತಪ್ಪು ಕಲ್ಪನೆ. ಯಾಕೆಂದರೆ ಈಗ ಎಲ್ಲವೂ ವಾಣಿಜ್ಯಿಕರಣಗೊಂಡಿವೆ.

ಕೆಲವೊಮ್ಮೆ ಹೀಗೂ ಇರುವುದು ಸಹಜ. ಕೆಲವೊಮ್ಮೆ ವೈದ್ಯಕೀಯ ನೀತಿಶಾಸ್ತ್ರವನ್ನು ಉಲ್ಲಂಘಿಸಿ, ಈಗಾಗಲೇ ಕೆಲವೊಂದು ಪ್ರಯೋಗಶಾಲಾ ಪರೀಕ್ಷೆಗಳು ಮತ್ತೊಂದು ಆಸ್ಪತ್ರೆಗಳಲ್ಲಿ ಮಾಡಲ್ಪಟ್ಟಿದ್ದರೂ ಸಹ ಅವರಿಗೆ ಬೇಕಾದ ಮತ್ತೊಂದು ಪ್ರಯೋಗಶಾಲೆಯಲ್ಲಿ ಅಥವಾ ಅವರದೇ ಪ್ರಯೋಗಶಾಲೆಯಲ್ಲಿ ರೋಗಿಗಳ ಹತ್ತಿರ ಹಣ ಪೀಕಿಸಿ ಮಾಡಿಸುತ್ತಾರೆ ಎಂಬ ಅಪವಾದ ಇದೆ. ಅಲ್ಲದೇ ಅವಶ್ಯಕತೆ ಇಲ್ಲದಿದ್ದರೂ ಸಹ ಹಣ ಮಾಡಲೆಂದು ಶಸ್ತ್ರಚಿಕಿತ್ಸೆ ಮಾಡುತ್ತಾರೆ ಎಂಬ ಅಪವಾದವೂ ಇದೆ.

ಉತ್ತಮ ವಿಭಾಗಗಳಲ್ಲಿ ವೈದ್ಯಕೀಯ ಸ್ನಾತಕೋತ್ತರ ಪದವಿ ಪಡೆಯಲು ಕೋಟ್ಯಾಂತರ ರೂಪಾಯಿ ವೆಚ್ಚ ಮಾಡಬೇಕಾದ ಪರಿಸ್ಥಿತಿ ಮತ್ತು ದುಬಾರಿ ವೈದ್ಯಕೀಯ ಉಪಕರಣಗಳು ಸಹ ದುಬಾರಿ ವೈದ್ಯಕೀಯ ವೆಚ್ಚಕ್ಕೆ ಕಾರಣವಿರಬಹುದು. ಅಲ್ಲದೇ ಸಾರ್ವಜನಿಕ ವಲಯದಲ್ಲಿರುವ ವೈದ್ಯರುಗಳ ಕಾರ್ಯಕ್ಷಮತೆ ಅನೇಕ ಕಾರಣಗಳಿಂದ ಕಡಿಮೆಯಾಗಿರುವುದೂ ಸಹ ಜನರು ದುಬಾರಿಯಾದರೂ ಸಹ ಖಾಸಗಿಯೆಡೆಗೆ ಓಡುವಂತೆ ಮಾಡಿವೆ ಎನ್ನೆಬಹುದು.

ಒಬ್ಬ ಖ್ಯಾತ ವೈದ್ಯರು ಸಾರ್ವಜನಿಕವಾಗಿ ಹೇಳುವ ಹಾಗೇ ಔಷಧ ಕಂಪನಿಗಳು ಜನರನ್ನು ದರೋಡೆ ಮಾಡಲು ಹುಟ್ಟಿವೆ ಮತ್ತು ಚಿಕಿತ್ಸೆ ಮಾಡುವವರು ಹಣ ಪಿಪಾಸುಗಳಾಗಿದ್ದಾರೆ ಎನ್ನುವುದನ್ನು ಪರಾಮರ್ಷೆಗೆ ಒಳಪಡಿಸುವುದು ಸೂಕ್ತ. ಏಕೆಂದರೆ ಈ ರೀತಿಯಾಗಲು ಯಾರು ಕಾರಣ ಎನ್ನುವುದೂ ಒಂದು ವಿಮರ್ಷೆಗೊಳಪಡಬೇಕಲ್ಲವೇ?

ವೈದ್ಯಕೀಯ ಪದವಿ ಪಡೆಯಲು ಕಡಿಮೆ ವೆಚ್ಚ ಮತ್ತು ಔಷಧಗಳನ್ನು ಕಡಿಮೆ ವೆಚ್ಚದಲ್ಲಿ ಉತ್ಪಾದನೆ ಮಾಡುವ ವಾತಾವರಣ ಸೃಷ್ಟಿಯಾಗಬೇಕು. ಇದನ್ನು ಜವಾಬ್ಧಾರಿ ಜಾಗದಲ್ಲಿರುವವರು ಸಂಬಂಧಿಸಿದವರಿಗೆ ವಿವಿಧ ಮಾಧ್ಯಮಗಳ ಮೂಲಕ ಹೇಳಬೇಕು ಮತ್ತು ಆಧುನಿಕ ಔಷಧಿಗಳ ಬಗ್ಗೆ ಜನರ ತಪ್ಪು ನಂಬಿಕೆ ಹೋಗಲಾಡಿಸಬೇಕು.

ಪಶುವೈದ್ಯಕೀಯದಲ್ಲೂ ಹೊಸ ಔಷಧ ಪತ್ತೆ ಮತ್ತು ಸಂಶೋಧನೆ ಬಹುತೇಕ ಇದೇ ರೀತಿ ನಡೆಯುತ್ತದೆ. ಆದರೆ ಅವುಗಳಲ್ಲಿ “ಪ್ಲಾಸೆಬೋ” ಮತ್ತು “ನೋಸೆಬೋ” ಪರಿಣಾಮಗಳು ಇರದಿದ್ದರೂ ಅವುಗಳ ಮಾಲಕರಲ್ಲಿ ಇವೆಯಲ್ಲ?!!!
ಈ ಕುರಿತು “ಅಡ್ಡಪರಿಣಾಮ” ಗಳಿಲ್ಲದ ಆರೋಗ್ಯಕರ ಚರ್ಚೆಯಾಗಲಿ…

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಅತ್ಮಕತೆ | ನೀರು ಸಾಬರೂ – ಎಸಿ ಮದನಗೋಪಾಲರೂ..

Published

on

  • ರುದ್ರಪ್ಪ ಹನಗವಾಡಿ

ಮಧ್ಯೆ ನಂಜನಗೂಡು ಪಕ್ಕದ ತಾಲ್ಲೂಕಾದ ಗುಂಡ್ಲುಪೇಟೆಯಿಂದ ರಾಜಕಾರಣಿಯಾಗಿದ್ದ ಅಬ್ದುಲ್ ನಜೀರ್ ಸಾಬ್ ಅವರು ರಾಮಕೃಷ್ಣ ಹೆಗಡೆಯವರ ಸಂಪುಟದಲ್ಲಿ ಪ್ರಭಾವಿ ಮಂತ್ರಿಗಳಾಗಿದ್ದರು. ಗ್ರಾಮೀಣ ಪ್ರದೇಶದಲ್ಲಿ ಬೋರ್‌ವೆಲ್ ತೆಗೆಸಿ ಗ್ರಾಮೀಣ ಜನರಿಗೆ ಸ್ವಚ್ಛ ಕುಡಿಯುವ ನೀರು ಕೊಡುವಲ್ಲಿ ಯಶಸ್ವಿಯಾಗಿದ್ದರು. ಜನಪರ ಮಂತ್ರಿಗಳೂ ಆಗಿದ್ದರು.

ಗುಂಡ್ಲುಪೇಟೆಯಲ್ಲಿ ಭೂಸ್ವಾಧೀನ ಪ್ರಕರಣದಲ್ಲಿ ತಮ್ಮ ಸಂಬಂಧಿಕರೊಬ್ಬರ ಜಮೀನಿಗೆ ತಿರುಗಾಡಲು ದಾರಿಗಾಗಿ ಭೂಸ್ವಾಧೀನಪಡಿಸಲು ಹಿಂದಿನ ಎಸಿ ಅವರ ಅಳಿಯಂದಿರೇ ಆಗಿದ್ದ ಎಸ್.ಎ. ಸಾದಿಕ್ ಅವರು ಭೂಸ್ವಾಧೀನಕ್ಕಾಗಿ ಪ್ರಸ್ತಾವನೆಯನ್ನು ರ‍್ಕಾರಕ್ಕೆ ಸಲ್ಲಿಸಿದ್ದರು. ಆದರೆ ಪುನಃ ಅದು ವಿಚಾರಣೆಗೆ ಬಂದಾಗ ಈ ಭೂಸ್ವಾಧೀನವು ಸಾರ‍್ವಜನಿಕರ ಹಿತ ಕಾಯುತ್ತಿಲ್ಲವೆಂದು ಮದನ್ ಗೋಪಾಲ್ ಅವರು ಆ ಪ್ರಸ್ತಾವನೆಯನ್ನು ರದ್ದುಗೊಳಿಸಲು ಸರ‍್ಕಾರಕ್ಕೆ ವರದಿ ಸಲ್ಲಿಸಿದ್ದರು. ಈ ಭೂಸ್ವಾಧೀನ ಪ್ರಕರಣವನ್ನು ಮಂತ್ರಿಗಳ ಸಲಹೆ ಮೇರೆಗೆ ಈ ಹಿಂದೆ ಪ್ರಸ್ತಾವನೆ ಸಲ್ಲಿಸಿದ್ದು, ನಂತರ ಅದನ್ನು ಕೈಬಿಟ್ಟ ಬಗ್ಗೆ ನಜೀರ್ ಸಾಬ್ ಅವರು ಎಸಿ ಮದನ್ ಗೋಪಾಲ್ ಮೇಲೆ ಕೆಂಡಾಮಂಡಲವಾಗಿದ್ದರು. ಎಷ್ಟೇ ಅನುಭವೀ, ನಿಸ್ಪೃಹ ರಾಜಕಾರಣಿಯಾಗಿದ್ದರೂ ನಜೀರ್ ಸಾಬ್ ಅವರು ತಾವು ಹೇಳಿದ ಕೆಲಸ ಮಾಡದ ನೌಕರ ಎಸಿ ಮದನ್ ಗೋಪಾಲ್ ಮೇಲೆ ಕಂದಾಯ ಮಂತ್ರಿ ಮತ್ತು ಜಿಲ್ಲಾಧಿಕಾರಿಗಳ ಎದುರು ತಮ್ಮ ಅಸಮಾಧಾನವನ್ನು ಹೊರಹಾಕಿ ಕೂಗಾಡಿದ್ದರು.

ಇದೇ ಕಾರಣಕ್ಕಾಗಿ ಮದನ್ ಗೋಪಾಲ್ ಅವರನ್ನು ಕೆಲವೇ ದಿನಗಳಲ್ಲಿ ನಂಜನಗೂಡು ಉಪ ವಿಭಾಗದಿಂದ ಬೇರೆಡೆಗೆ ರ‍್ಗಾವಣೆ ಕೂಡ ಮಾಡಲಾಗಿತ್ತು. ಅವರ ವರ್ಗಾವಣೆಯನ್ನು ವಿರೋಧಿಸಿ ಸರ‍್ವಜನಿಕರು, ನಂಜಗೂಡು, ಗುಂಡ್ಲುಪೇಟೆಗಳಲ್ಲಿ ಯಶಸ್ವಿ ಬಂದ್ ಮಾಡಿ ಪ್ರತಿಭಟಿಸಿದ್ದರು. ಅವರ ವರ‍್ಗಾವಣೆ ಆಗಿ ನಂತರ ಮೂರು ತಿಂಗಳಲ್ಲಿ ಯೋಗೇಂದ್ರ ತ್ರಿಪಾಠಿ ಬಂದರು. ಈ ನಡುವೆ ನಾನು, ನಂತರ ಮಂಜುನಾಥ್ ನಾಯಕ್ ಹಾಗೂ ಶಿಕ್ಷಣರ‍್ಥಿ ಎಸಿಯಾಗಿದ್ದ ಕೆ. ಶಿವರಾಂ ಅವರು ಸುಮಾರು ಮೂರು ತಿಂಗಳ ಕಾಲ ಚಾರ್ಜ್ನಲ್ಲಿದ್ದೆವು. ಮದನ್ ಗೋಪಾಲ್ ಅವರು ವೈಯಕ್ತಿಕವಾಗಿ ಕಷ್ಟಪಟ್ಟು ದುಡಿಯುವ ವ್ಯಕ್ತಿಯಾಗಿದ್ದರು. ಆದರೆ ಚುನಾಯಿತ ಪ್ರತಿನಿಧಿಗಳ ಜೊತೆ ಅತಿರೇಕದ ನೇರ ನೇರ ಹಣಾಹಣಿ ಮಾಡಿಕೊಂಡು ಅವರು ಮಾಡುತ್ತಿದ್ದ ಒಳ್ಳೆಯ ಕೆಲಸಗಳು ಹಿನ್ನೆಲೆಗೆ ಸರಿಯುತ್ತಿದ್ದವು.

ಯೋಗೇಂದ್ರ ತ್ರಿಪಾಠಿಯವರು ಬರುವ ವೇಳೆಗಾಗಲೇ ನನ್ನ ನಂಜನಗೂಡು ತಾಲ್ಲೂಕ್ ಆಡಳಿತದಲ್ಲಿ ಒಂದು ವರ‍್ಷಕ್ಕೂ ಹೆಚ್ಚು ಸಮಯ ಕಳೆದಿದ್ದೆ. ಹಾಗಾಗಿ ತ್ರಿಪಾಠಿಯವರ ಜೊತೆ ಕೆಲಸ ಕಾರ‍್ಯಗಳು ಸಲೀಸಾಗಿ ಸಾಗುತ್ತಿದ್ದವು. ಈ ಮೊದಲು ಎಸಿ ಶಿಕ್ಷಣರ‍್ಥಿಯಾಗಿದ್ದ ಕೆ. ಶಿವರಾಂ ಅವರು ಅನೇಕ ಮೌಖಿಕ ಆದೇಶಗಳನ್ನು ಹೇಳಿ ಮಾಡುವಂತೆ ನನಗೆ ನಿರ‍್ದೇಶನ ನೀಡುತ್ತಿದ್ದರು. ನಾನು ಖುದ್ದು ಭೇಟಿ ಮಾಡಿ ಅವರು ಹೇಳಿದ ಕೆಲಸಗಳನ್ನು ಮಾಡಲಿಕ್ಕಾಗದ ಕಾರಣದ ವಿವರ ನೀಡಿದರೂ ಸಮಾಧಾನಗೊಳ್ಳದೆ, ಜನರೆದುರಿಗೆ ಎಸಿ ಮಾಡಲು ಹೇಳಿದರೂ ತಹಸೀಲ್ದಾರ್ ಮಾಡದೆ ತಮ್ಮ ವಿರುದ್ಧವಿದ್ದಾರೆಂಬ ಆಭಾವನೆ ಬರುವಂತೆ ನಡೆದುಕೊಳ್ಳುತಿದ್ದರು. ಅವರಿನ್ನೂ ಶಿಕ್ಷಣರ‍್ಥಿಗಳಾಗಿದ್ದರೂ ಆಗಲೇ ತನಗೆಲ್ಲ ಗೊತ್ತು ಎಂಬ ಅಹಂನಿಂದ ವರ‍್ತಿಸುತ್ತಿದ್ದ ಕಾರಣ ಬಹುಬೇಗ ನನ್ನ ಅವರ ನಡುವೆ ವಿಶ್ವಾಸದ ಕೊರತೆಯಾಗಿ, ಏನಾದರೂ ಮಾಡಬೇಕೆಂದರೆ ಲಿಖಿತ ಆದೇಶ ಕಳಿಸಲು ಅವರ ಮ್ಯಾನೇಜರ್ ಅವರಿಗೆ ನಾನು ದೂರವಾಣಿ ಮುಖಾಂತರ ಹೇಳುತ್ತಿದ್ದೆ. ಆ ನಂತರ ಮತ್ತೆ ಕೆಲವು ದಿನಗಳಲ್ಲಿ ಅವರನ್ನು ಬೇರೆ ತಾಲ್ಲೂಕಿಗೆ ತರಬೇತಿಗಾಗಿ ಕಳಿಸಿದ ಕಾರಣ ನನ್ನ ಮನಸ್ತಾಪ ಅಲ್ಲಿಗೆ ಮುಗಿದಿತ್ತು. ಆದರೆ ಮುಂದೆ ಅನೇಕ ಬಾರಿ ಅವರೊಡನೆ ಒಡನಾಡುವ ಸಂರ‍್ಭದಲ್ಲಿ ಇದ್ಯಾವುದನ್ನೂ ಮನಸ್ಸಿನಲ್ಲಿ ಇಟ್ಟುಕೊಳ್ಳದೆ ಸರಳವಾಗಿ ನಡೆಸಿಕೊಂಡ ಕಾರಣದಿಂದಾಗಿ ಅವರ ಬಗ್ಗೆ ನನ್ನಲ್ಲಿದ್ದ ಕಹಿ ಕರಗಿ ಸಹಜತೆ ಮೂಡಿದೆ.

ನನ್ನ ಕಛೇರಿ ಕೆಲಸಗಳ ಜೊತೆ ಆಚರಿಸುತ್ತಿದ್ದ ರಾಷ್ಟ್ರೀಯ ಹಬ್ಬಗಳ ಸಮಯದಲ್ಲಿ ಮುಖ್ಯ ಅತಿಥಿಗಳಾಗಿ ನಮ್ಮ ಮೈಸೂರಿನ ಸಮಾಜವಾದಿ ಗೆಳೆಯರ ಜೊತೆ ಚರ್ಚಿಸಿ ಡಾ. ಎಲ್. ಬಸವರಾಜ್, ಸುಜನಾ, ಕೆ.ಎಸ್. ಭಗವಾನ್, ಕೆ. ರಾಮದಾಸ್ ಅವರನ್ನು ಕರೆಸಿ ನಮ್ಮ ತಾಲ್ಲೂಕಿನಲ್ಲಿ ಭಾಷಣ ಮಾಡಿಸುತ್ತಿದ್ದೆ. ಡಿಎಸ್‌ಎಸ್, ರೈತ ಸಂಘ ಮತ್ತು ಕನ್ನಡಪರ ಸಂಘಟನೆಗಳ ಅನೇಕ ಮಿತ್ರರು ನನ್ನ ಒಡನಾಟದಲ್ಲಿದ್ದರು.

ಈಗ ಹೆಸರಾಂತ ಸಾಹಿತಿ ಮತ್ತು ನನ್ನ ಮಿತ್ರನಾಗಿದ್ದ ಮಾದೇವನ ಊರಾದ ದೇವನೂರಿಗೂ ಹೋದಾಗ ಅವರ ಮನೆಗೂ ಹೋಗಿ ಬಂದಿದ್ದೆ. ಕೃಷ್ಣಪ್ಪ – ಇಂದಿರಾ ಅವರು ಮಕ್ಕಳಾದ ಶಾಲಿನಿ, ಸೀಮಾ ಅವರುಗಳ ಜೊತೆ ನಂಜನಗೂಡಿಗೆ ಬಂದು ಉಳಿದು ನಂಜುಂಡೇಶ್ವರ ದೇವಸ್ಥಾನದ ಹಬ್ಬದಲ್ಲಿ ಭಾಗವಹಿಸಿದ ನೆನಪು ಈಗಲೂ ಹಸಿರಾಗಿದೆ.

ಡಿಎಸ್‌ಎಸ್‌ನ ರಾಜ್ಯ ಮಟ್ಟದ ಕಲಿಕಾ ಸಮಾವೇಶವನ್ನು (study camp ) ನಂಜನಗೂಡು ತಾಲ್ಲೂಕಿನಲ್ಲಿನ ವಿದ್ಯಾಪೀಠದಲ್ಲಿ ಕೃಷ್ಣಪ್ಪನವರು ಸುಮಾರು ಒಂದು ವಾರದ ಕಾಲ ನಡೆಸಿದ್ದರು. ಆಗ ರಾಜ್ಯದ ಮೂಲೆಮೂಲೆಗಳಿಂದ ಬಂದು ಡಿಎಸ್‌ಎಸ್‌ನ ಹೋರಾಟದ ರೂಪುರೇಷೆಗಳನ್ನು ಚರ್ಚಿಸುತ್ತಿದ್ದುದನ್ನು ನಾನು ಭಾಗವಹಿಸದಿದ್ದರೂ ತಿಳಿದುಕೊಳ್ಳುತ್ತಿದ್ದೆ.

ಡಿಎಸ್‌ಎಸ್‌ನ ಅಂದಿನ ಬಹುತೇಕ ರ‍್ಚೆಗಳು ರ‍್ಕಾರದ ನಿಷ್ಕಿçಯತೆ, ದಲಿತ ಶಾಸಕರುಗಳ ಗುಲಾಮಿತನ, ದಲಿತರ ಮೇಲಿನ ದರ‍್ಜನ್ಯ, ದಲಿತರ ಕರ‍್ಯಕ್ರಮಗಳಲ್ಲಿನ ನಿಧಾನಗತಿ ಅನುಷ್ಠಾನ, ಇಂತಹವೇ ರ‍್ಚೆಯಾಗುತ್ತಿದ್ದವು. ಅಂತಹ ಸಂಘಟನೆಗೆ ತಹಸೀಲ್ದಾರನಾಗಿ ಭಾಗಿಯಾಗುವುದು, ಸಹಕಾರ ನೀಡುವುದು ಸರಿಯಲ್ಲವೆಂದು ನನಗೆ ನಮ್ಮ ಹಿರಿಯ ಸಿಬ್ಬಂದಿ ಹೇಳುತ್ತಿದ್ದರೂ ನಾನು ನನ್ನ ಇತರೆ ಸಾಮಾನ್ಯ ಕೆಲಸಗಳಲ್ಲಿ ಹಿಂದೆ ಬೀಳದೆ ಮತ್ತು ಇತರೆ ಸಾರ‍್ವಜನಿಕರಲ್ಲೂ ಯಾವುದೇ ತಗಾದೆ ಬಾರದಂತೆ ಕೆಲಸ ನಿರ‍್ವಹಿಸಿದ್ದರಿಂದ ಬೇರಾರೂ ಆಕ್ಷೇಪಿಸುತ್ತಿರಲಿಲ್ಲ. ಆದರೆ ಆಗ ನಂಜನಗೂಡಿನವರೇ ಆಗಿದ್ದ ಡಿಎಸ್‌ಎಸ್‌ನಲ್ಲಿ ಇದ್ದವನೊಬ್ಬ ಮಾದೇವ, ಕೃಷ್ಣಪ್ಪನವರನ್ನು ವೈಯಕ್ತಿಕವಾಗಿ ದ್ವೇಷಿಸುವ ಮನಸ್ಸಿನ ವ್ಯಕ್ತಿ. ನಮ್ಮ ಕಛೇರಿಯ ಸರ‍್ವೆಯರ್ ನೌಕರನನ್ನು ಸಹಾಯ ಪಡೆದು, ನಮ್ಮ ಕಛೇರಿಯ ಬಗ್ಗೆ ಕರಪತ್ರ ಹಾಕಿ `ಭ್ರಷ್ಟಾಚಾರದ ಕೂಪ ತಾಲ್ಲೂಕು ಕಛೇರಿ’ ಎಂದೆಲ್ಲ ದೂರಿದ್ದರು. ಆದರೆ ಅದಕ್ಕೆಲ್ಲ ಕುಮ್ಮಕ್ಕು ಕೊಟ್ಟವನು ನನ್ನ ಕಛೇರಿಯ ಸರ‍್ವೆಯರ್ ಸಂಬಂಧಿ ಡಿ.ಎಸ್.ಎಸ್.ನಲ್ಲಿಯೇ ಇದ್ದವನೊಬ್ಬ ಎಂದು ನನಗೆ ತಿಳಿದು ಬಂತು.

ಜೊತೆಗೆ ನಮ್ಮ ಕಚೇರಿಯ ರ‍್ವೇಯರ್ ದೈನಂದಿನ ಕೆಲಸದಲ್ಲಿ ನಿರ‍್ಲಕ್ಷ್ಯ ತೋರುತ್ತಿದ್ದ ಕಾರಣದಿಂದ ನಾನು ಮೊದಲೇ ಅವನನ್ನು ಅಮಾನತ್ತುಗೊಳಿಸಿದ್ದೆ. ಆ ಕಾರಣ ಅವನು ನನ್ನ ಬಗ್ಗೆ ಮೊದಲೇ ಅಸಮಾಧಾನಗೊಂಡಿದ್ದ. ನಂತರದ ದಿನಗಳಲ್ಲಿ ನಾನೇನೂ ಹೇಳದಿದ್ದರೂ ಕರಪತ್ರ ಹಾಕಿದ ಬಗ್ಗೆ ಬಂದು ತನ್ನ ನಡವಳಿಕೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದ. ಇದಕ್ಕೆಲ್ಲ ತನ್ನ ಭಾವ ಡಿಎಸ್‌ಎಸ್‌ನಲ್ಲಿರುವವನು ಕಾರಣ ಎಂದು ಹೇಳಿ ನನಗೆ ದಂಗುಬಡಿಸಿದ್ದ. ಇಂತಹ ವಿಷಯಗಳನ್ನೆಲ್ಲ ನಿಭಾಯಿಸುವ ಅನುಭವ ನನಗೆ ಇದ್ದುದರಿಂದ ಮತ್ತೇನು ಅದು ಬೆಳೆಯಲಿಲ್ಲ.

ನಂಜನಗೂಡಿನಲ್ಲಿ ನಾನಿರುವಾಗ ಪೋಲೀಸ್ ಇಲಾಖೆಯಲ್ಲಿ ಡಿ.ವೈ.ಎಸ್.ಪಿಯಾಗಿ ಪಿ.ಹೆಚ್. ರಾಣೆ, ಇಬ್ಬರು ಇನ್ಸ್ಪೆಕ್ಟರ್ ಮತ್ತು ನಾಲ್ಕು-ಐದು ಜನ ಸಬ್ ಇನ್ಸ್ಪೆಕ್ಟರ್‌ಗಳು ಇದ್ದರು. ನಾವೆಲ್ಲ ಊರಿನಲ್ಲಿರುವ ಯಾವುದೇ ಪ್ರತಿಷ್ಠಿತ ಮನರಂಜನೆಯ ಕ್ಲಬ್‌ಗಳಿಗೆ ಹೋಗುತ್ತಿರಲಿಲ್ಲ. ಅದರ ಬದಲು, ಪೋಲೀಸ್ ಸ್ಟೇಷನ್ ಬಳಿ ಇದ್ದ ವಿಶಾಲವಾದ ಮೈದಾನದಲ್ಲಿ ಬೆಳಗಿನ ಜಾವದಲ್ಲಿ ಬ್ಯಾಟ್‌ಮಿಂಟನ್, ಷಟಲ್ ಕಾಕ್ ಆಟ ಪ್ರಾರಂಭಿಸಿದ್ದೆವು. ಅಲ್ಲಿಗೆ ಕಂದಾಯ ಇಲಾಖೆಯಲ್ಲಿನ ವಿಎ, RI & ಸಬ್ ಇನ್ಸ್ಸ್ಪೆಕ್ರ‍್ಸ್ ಮತ್ತು ನನ್ನ ಬಿ.ಎ. ತರಗತಿಯ ಕ್ಲಾಸ್ ಮೇಟ್ ಆಗಿದ್ದ ನರಸಿಂಹಸ್ವಾಮಿ ಸೇರಿ ಒಂದೆರಡು ಘಂಟೆಗಳ ಕಾಲ ಆಟದಲ್ಲಿ ಕಳೆಯುತ್ತಿದ್ದೆವು. ಆಗಲೇ ತಾಲ್ಲೂಕಿನಲ್ಲಿನ ಸಮಸ್ಯೆಗಳನ್ನು ಸಾಂಧರ‍್ಭಿಕವಾಗಿ ಚರ‍್ಚಿಸಿ, ಶಾಂತಿ ಕಾಪಾಡಲು ಬೇಕಾದ ಕ್ರಮವಾಗಿ ಕೆಲವರನ್ನು ಒಂದೆರಡು ವಾರಗಳ ಕಾಲ ಸಬ್ ಜೈಲಿಗೆ ಕಳಿಸಲು ಕೋರುತ್ತಿದ್ದರು. ಇಲ್ಲವೇ ಪ್ರತಿ ವಾರವೂ ಹಾಜರಿರಲು ನೋಟಿಸ್ ನೀಡಿ ಬಾರದಿದ್ದಾಗ ದಸ್ತಗಿರಿ ಮಾಡಿ ತರಲು ನನ್ನಿಂದ ಅದೇಶ ಪಡೆದು ಕರೆತರುತ್ತಿದ್ದರು. ನಂತರ ವಿಚಾರಣೆ ಮಾಡಿ, ಒಳ್ಳೆಯ ನಡೆವಳಿಕೆಯ ಬಗ್ಗೆ ಮುಚ್ಚಳಿಕೆ ಬರೆಸಿಕೊಂಡು ಬಿಡುಗಡೆ ಮಾಡುತ್ತಿದ್ದೆವು. ಇನ್ನು ಕೆಲವು ಭಾರಿ ಈ ಎಲ್ಲ ಅಖPಅ 107 ಪ್ರಕರಣದಲ್ಲಿದ್ದ ಆಪಾದಿತರನ್ನು, ಗ್ರಾಮ ಸಹಾಯಕರನ್ನು ಒಟ್ಟುಗೂಡಿಸಿ ನಮ್ಮ ಕಛೇರಿಯ ಆವರಣದಲ್ಲಿದ್ದ ಜಾಗದಲ್ಲಿ ಗಿಡ ನೆಡಲು ಬೇಕಾದ ಗುಂಡಿ ತೆಗೆಯಲು ತೊಡಗಿಸಿ ದಿನದ ಕೊನೆಯಲ್ಲಿ ಕೇಸು ಕರೆದು ಕೇಸನ್ನು ಮುಂದೂಡುತ್ತಿದ್ದೆನು. ಹೀಗಾಗಿ ತಾಲ್ಲೂಕಿನಲ್ಲಿ, ಜಾತಿ ಜಗಳಗಳಾಗಲೀ, ದೊಂಬಿಗಳಾಗಲೀ ಮಾಡಲು ಪುಂಡ ಪೋಕರಿಗಳಿಗೆ ಅವಕಾಶವಿರುತ್ತಿರಲಿಲ್ಲ.

ತಾಲ್ಲೂಕು ಮಟ್ಟದ ನಾಯಕರು

1986ರ ನಂತರ ಶಾಸಕರುಗಳ ಜೊತೆ ಜಿಲ್ಲಾ ಪರಿಷತ್ ಚುನಾವಣೆಗಳು ಮುಕ್ತಾಯಗೊಂಡು ತಾಲ್ಲೂಕುಮಟ್ಟದಲ್ಲಿ ಹೆಜ್ಜಿಗೆ ರಾಮಯ್ಯ, ದೇವನೂರ ಸಿದ್ದಪ್ಪ, ಬಸವರಾಜ್, ಕಳಲೆ ಸಿದ್ದ ನಾಯಕ್, ಶಶಿಕಲಾ ನಾಗರಾಜ್ ಮತ್ತು ಶಶಿಕಲಾ ಬಾಲರಾಜ್ ಜೊತೆಗೆ ನಂಜನಗೂಡು ಟೌನ್‌ನಲ್ಲಿ ಪುರಸಭೆಯ ಅಧ್ಯಕ್ಷ – ಉಪಾಧ್ಯಕ್ಷರೂ ಇರುತ್ತಿದ್ದರು. ಇವರೆಲ್ಲ ಸಣ್ಣಪುಟ್ಟ ಕೆಲಸಗಳಿಗೆ ಶಿಫಾರಸ್ಸು ಮಾಡಲು ತಾಲ್ಲೂಕು ಕಛೇರಿಗೆ ಬರುತ್ತಿದ್ದರು. ಆಗುವ ಕೆಲಸ ಮಾಡುವುದರಲ್ಲಿ ವಿಳಂಬವಾಗದಂತೆ, ಆಗದಿರುವ ಕೆಲಸಗಳಿಗೂ ನನ್ನ ಮಟ್ಟದಲ್ಲೇ ಅವರಿಗೆ ವಿವರಿಸಿ ಹೇಳುತ್ತಿದ್ದೆ. ಅವರುಗಳು ಒಮ್ಮೊಮ್ಮೆ ಅದೇ ವಿಷಯಗಳನ್ನು ಶಾಸಕರುಗಳ ಹತ್ತಿರವೂ ಪ್ರಸ್ತಾಪಿಸಿ ಪ್ರಭಾವ ಬೀರಲು ಪ್ರಯತ್ನಿಸುತ್ತಿದ್ದರು. ನನ್ನ ವಿವರಣೆ ಶಾಸಕರುಗಳಿಗೂ ಅದೇ ಆಗಿರುತ್ತಿತ್ತು. ಹಾಗಾಗಿ ಆಗುವ ಕೆಲಸಗಳಿಗೆ ಯಾವ ಶಿಫಾರಸ್ಸು ತಂದರೂ ಆಗುವುದಿಲ್ಲ ಎಂಬ ನಂಬಿಕೆ ಅವರಿಗೆಲ್ಲ ತಿಳಿದು ಬಂದಿತ್ತು.

ಗೃಹಮಂತ್ರಿಯಾಗಿದ್ದ ರಾಚಯ್ಯನವರು ಕರ‍್ನಾಟಕ ಕಂಡ ಹಿರಿಯ ಸಜ್ಜನ ರಾಜಕಾರಣಿ. ಅವರು ತಾಲ್ಲೂಕಿನಲ್ಲಿ ಪ್ರವಾಸ ಇರುವಾಗ, `ಇತರೆ ಇಬ್ಬರು ಶಾಸಕರುಗಳು ಯುವಕರಾಗಿದ್ದ ಕಾರಣ ಏನಾದರೂ ನಿನ್ನಿಂದ ತಪ್ಪು ಮಾಡಿಸಿ, ಮುಂದೆ ನೀನಿನ್ನು ಎಸಿ, ಡಿಸಿ ಆಗಬೇಕಾದವನು, ಎಚ್ಚರದಿಂದ ಕೆಲಸ ನರ‍್ವಹಿಸಬೇಕೆಂದು’ ಸಲಹೆ ನೀಡುತ್ತಿದ್ದರು. ನನಗಿಂತ ವಯಸ್ಸಿನಲ್ಲಿ, ಅನುಭವದಲ್ಲಿ ಸುಮಾರು 20 ವರ‍್ಷಗಳ ಅಂತರವಿದ್ದ ಅವರ ಮಾತು ನನಗೆ ನಿಜವಾದ ಕಳಕಳಿಯಿಂದ ಕೂಡಿದ ಮಾತಾಗಿತ್ತು. ಅವರಿಗೆ ಜನರಿಗೆ ಒಳ್ಳೆಯ ಆಡಳಿತ ನೀಡಿದರೆ ಸಾಕಾಗಿತ್ತು. ಮತ್ತಾವ ಒಳ ಒಪ್ಪಂದಗಳ ಮಾತು ಅವರ ಆಡಳಿತದಲ್ಲಿ ಸುಳಿಯುತ್ತಿರಲಿಲ್ಲ.

ಕಂದಾಯ ನೌಕರರ ದಿನಾಚರಣೆ

ವಿಧಾನಸಭೆ ಚುನಾವಣೆ ಆಗಿ ಮೂರು ರ‍್ಷವಾಗಿತ್ತು. ಜಿಲ್ಲಾ ಪರಿಷತ್ ಆಗತಾನೆ ಚುನಾವಣೆಗಳಾಗಿ ಹೊಸ ಸದಸ್ಯರುಗಳು ಆಯ್ಕೆಯಾಗಿದ್ದರು. ಮಾಮೂಲಿ ಕಂದಾಯ ಮತ್ತು ತಾಲ್ಲೂಕು ದಂಡಾಧಿಕಾರಿಯ ಕೆಲಸಗಳನ್ನು ಬಿಟ್ಟರೆ ಮತ್ತಾವ ಒತ್ತಡದ ಕೆಲಸಗಳು ಇರಲಿಲ್ಲ. ಹೀಗಿರುವಾಗ ಕಂದಾಯ ಅಧಿಕಾರಿಗಳು ರ‍್ಷಪರ‍್ತಿ ದುಡಿತದಲ್ಲೇ ಇದ್ದು, ಕಲೆ ಸಂಸ್ಕೃತಿ, ಸಂಗೀತದ ಬಗ್ಗೆ ಮುಖ ಮಾಡುವುದೇ ಇಲ್ಲ. ಈ ಬಗ್ಗೆ ನಾವ್ಯಾಕೆ ಇಡೀ ಜಿಲ್ಲೆಯ ನೌಕರರನ್ನು ಒಳಗೊಂಡಂತೆ 1-2ದಿನ ನಮ್ಮ ಕಂದಾಯ ನೌಕರರ ದಿನಾಚರಣೆ ಆಚರಿಸಬಾರದು ಎಂದು ನಮ್ಮ ಎಸಿ ತ್ರಿಪಾಠಿಯವರ ಜೊತೆ ಚರ‍್ಚಿಸಿ, ನಂತರ ಡಿಸಿಗೂ ಹೇಳಿದೆ.

ಎಲ್ಲ ತಹಸೀಲ್ದಾರ್ ಮಿತ್ರರೊಡನೆ ಕೂಡ ಮೌಖಿಕವಾಗಿ ಚರ‍್ಚಿಸಿ ಅವರ ಸಹಕಾರವನ್ನು ಕೋರಿದೆ. ಅದರಂತೆ, ವಿವಿಧ ಆಟಗಳ ಸ್ಪರ್ಧೆ, ಹಾಡುಗಾರಿಕೆ, ಕೊನೆಯ ದಿನದಲ್ಲಿ ಮಹಾಭಾರತದ ಕುರುಕ್ಷೇತ್ರದ ನಾಟಕ ಎಂದೆಲ್ಲ ತಯಾರಿಗಳು ನಡೆದವು. ಹುಣಸೂರು, ಮೈಸೂರು ಮತ್ತು ನಂಜನಗೂಡು ಉಪ ವಿಭಾಗಗಳ ಉಪ ವಿಭಾಗಾಧಿಕಾರಿಗಳು, ಎಲ್ಲಾ ತಾಲ್ಲೂಕು ತಹಸೀಲ್ದಾರರು, ವಿಎ, ಆರ್‌ಐ ಹಾಗೂ ಕಛೇರಿ ಸಿಬ್ಬಂದಿ ಎಲ್ಲರೂ ಎಲ್ಲ ಆಟ ಪಾಠಗಳಲ್ಲಿ ಭಾಗವಹಿಸಿದ್ದರು. ಆಟಗಳಲ್ಲಿ ಕಬಡ್ಡಿ, ಬ್ಯಾಟ್ ಮಿಂಟನ್, ಷಟಲ್ ಕಾಕ್, ವಾಲಿಬಾಲ್, ಚೆಸ್ ಹೀಗೆಲ್ಲ ಸ್ರ‍್ಧೆಗಳನ್ನು ನರ‍್ವಹಿಸಲು ಎಇಓ ಅವರನ್ನು ಸಂರ‍್ಕಿಸಿ ಒಬ್ಬ ಕ್ರೀಡಾ ಅಧಿಕಾರಿಯನ್ನು ಕೋರಿದ್ದೆ. ಅವರು ಎಲ್ಲಾ ಕ್ರೀಡೆಗಳನ್ನು ವ್ಯವಸ್ಥೆಗೊಳಿಸಿ, ಆಡಿಸಿ ಬಹುಮಾನಿತರ ಪಟ್ಟಿ ನೀಡಿದ್ದರು. ನಿಯಮಿತ ಅಭ್ಯಾಸಗಳು ಇಲ್ಲದ ಆಟಗಾರರೊಬ್ಬರು ಕಬ್ಬಡಿ ಆಟದಲ್ಲಿ ಬಿದ್ದು ಅವರ ಕೈ ಮುರಿದಿತ್ತು. ಸದ್ಯ ಅವರನ್ನು ನಂಜನಗೂಡಿನಲ್ಲಿಯೇ ಉಪಚರಿಸಿ ಸುಧಾರಿಸುವಂತಾಯಿತು.

ಈ ಸಮಾರಂಭಕ್ಕೆ ಮೊದಲ ದಿನ ಎಲ್ಲಾ ಸ್ಪರ್ಧೆಗಳನ್ನು ನಡೆಸಿ ಎರಡನೇ ದಿನ ಸಮಾರೋಪ ಸಮಾರಂಭ ಮತ್ತು ನಾಟಕವಿತ್ತು. ಆಗ ಮೈಸೂರು ವಿಭಾಗಕ್ಕೆ ವಿಭಾಗಾಧಿಕಾರಿಗಳಾಗಿದ್ದ ನೀಲಕಂಠರಾಜು, ಡಿಸಿ ವಿ.ಪಿ. ಬಳಿಗಾರ್, ಹುಣಸೂರು ಎಸಿಯಾಗಿದ್ದ ಶಿವಲಿಂಗಮರ‍್ತಿ, ಮೈಸೂರು ಎಸಿ ಈಶ್ವರ್ ನಮ್ಮ ಎಸಿ ಯೋಗೇಂದ್ರ ತ್ರಿಪಾಠಿ ಎಲ್ಲ ಸಂತೋಷದಿಂದ ಭಾಗವಹಿಸಿದ್ದರು. ನಮ್ಮಲ್ಲಿದ್ದ 80 ಜನ ಗ್ರಾಮ ಸಹಾಯಕರಿಗೆ ವಿಶೇಷವಾದ ಸಮವಸ್ತ್ರ ಹೊಲಿಸಿ ಹೊಸ ಬೂಟುಗಳನ್ನು ಕೊಡಿಸಿ, ಅವರಿಗೆ ಪೋಲೀಸ್ ಪೇದೆಗಳಂತೆ ತರಬೇತಿಯನ್ನು ನೀಡಲು ನಮಲ್ಲಿಯೇ ಇದ್ದ ಕಸಬಾ ವಿಎ – ರಾಧಾಕೃಷ್ಣನಿಗೆ ಜವಾಬ್ದಾರಿ ನೀಡಿದ್ದೆ. ರಾಧಾಕೃಷ್ಣ VA ಆಗಿದ್ದರೂ ಒಬ್ಬ DSPಯಂತೆ ಪೊಲೀಸ್ ನಡವಳಿಕೆಗಳನ್ನು ರೂಢಿಸಿಕೊಂಡಿದ್ದ. ಅವನ ಕೆಳಗೆ ತರಬೇತಿಗೊಂಡ ನಮ್ಮ ಗ್ರಾಮ ಸಹಾಯಕರು ಶಿಸ್ತಿನ ಪೊಲೀಸ್ ಪೇದೆಗಳಂತೆ ನಡೆದುಕೊಳ್ಳುತ್ತಿದ್ದರು.

ಸಮಾರಂಭ ಪ್ರಾರಂಭವಾಗುವ ಮುನ್ನ ನಮ್ಮ ಗ್ರಾಮ ಸಹಾಯಕರೆಲ್ಲ ಒಟ್ಟಿಗೆ ಸಮವಸ್ತ್ರದಲ್ಲಿದ್ದು, ಪೋಲೀಸ್ ಇಲಾಖೆ ನೀಡುವ ‘ಗಾರ್ಡ್ ಆಫ್ ಆನರ್’ನಂತೆ ಎಲ್ಲ ಅತಿಥಿಗಳಿಗೂ ಗೌರವ ವಂದನೆ ನೀಡಿದಾಗ ‘you have summoned police personnel also here’ ಎಂದು ಡಿವಿಸಿ ಉದ್ಘಾರ ತೆಗೆದರು. ‘ನೋ ಸರ್, ಇವರೆಲ್ಲ ನಮ್ಮ ತಾಲ್ಲೂಕಿನ ಗ್ರಾಮ ಸಹಾಯಕರು’ ಎಂದಾಗ ಅವರು ಅಚ್ಚರಿ ವ್ಯಕ್ತಪಡಿಸಿ, ಪ್ರಶಂಸೆ ಕೂಡ ಮಾಡಿದ್ದರು. ಇಂತಹ ಕಂದಾಯ ದಿನಾಚರಣೆಯನ್ನು ನಾನು ಆಯೋಜಿಸಲು ಮುಂದಾಗಿದ್ದಕ್ಕೆ, ನರ‍್ವಹಿಸಿದ್ದಕ್ಕೆ ಡಿವಿಸಿ ಮೊದಲ್ಗೊಂಡು ಎಲ್ಲರೂ ಆಗ ನನ್ನನ್ನು ಪ್ರಶಂಸಿದರು.

ಎಲ್ಲರಿಗಿಂತಲೂ ಹೆಚ್ಚಾಗಿ ನಮ್ಮ ಎಸಿ ಯಾಗಿದ್ದ ತ್ರಿಪಾಠಿ ಅವರು ತುಂಬಾ ಖುಷಿಯಲ್ಲಿದ್ದರು. ಜೊತೆಗೆ ನಮ್ಮ ತಾಲ್ಲೂಕಿನ ಎಲ್ಲಾ ಸಿಬ್ಬಂದಿ ನಾವೆಲ್ಲ ಒಂದು ಕುಟುಂಬ ಎಂಬ ಭಾವನೆ ಮತ್ತು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿದರೆ ಏನು ಬೇಕಾದರೂ ಸಾಧಿಸಬಹುದೆಂಬ ಸದ್ಭಾವನೆ ಮೂಡುವಂತಾಗಿತ್ತು. ಕೊನೆಯಲ್ಲಿ ಕಲಿತು ಪ್ರರ‍್ಶಿಸಿದ ನಾಟಕದ ಪ್ರಥಮ ದೃಶ್ಯದಲ್ಲಿ ನಾನು ಕೃಷ್ಣನ ಪಾತ್ರಧಾರಿಯಾಗಿ ಹಾಡೊಂದನ್ನು ಹಾಡಿ ಪ್ರಾರಂಭವಾಗುವಂತೆ ನಾಟಕದ ನರ‍್ದೇಶನ ಮಾಡಿದ್ದ ಮೇಷ್ಟರು ವ್ಯವಸ್ಥೆ ಮಾಡಿದ್ದರು. ನಾನು ಕೃಷ್ಣನ ಪಾತ್ರದ ಪೋಷಾಕಿನಲ್ಲಿ ಹಾಡಿ ಸಂತೋಷಪಟ್ಟಿದ್ದು ಈಗ 35 ವರ‍್ಷಗಳ ನಂತರವೂ ಹಸಿರಾಗಿದೆ.(ಬರಹ:ರುದ್ರಪ್ಪ ಹನಗವಾಡಿ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗೃಹ ಆರೋಗ್ಯ ಯೋಜನೆಗೆ ಸಿಎಂ ಚಾಲನೆ ; ಯಾವೆಲ್ಲಾ ಚಿಕಿತ್ಸೆಗಳು ಉಚಿತ..? ಇಲ್ಲಿದೆ ಸಂಪೂರ್ಣ ಮಾಹಿತಿ

Published

on

ಸುದ್ದಿದಿನಡೆಸ್ಕ್:ಸಿಎಂ ಸಿದ್ದರಾಮಯ್ಯ ಸರ್ಕಾರ ಗೃಹ ಆರೋಗ್ಯ ಯೋಜನೆಗೆ ಗುರುವಾರ ಚಾಲನೆ ನೀಡಿದೆ. ಆ ಮೂಲಕ ಗ್ರಾಮೀಣ ಜನರ ಆರೋಗ್ಯ ರಕ್ಷಣೆಗೆ ಸರ್ಕಾರ ಮಹತ್ವದ ಹೆಜ್ಜೆಯನ್ನು ಇಟ್ಟಿದೆ.

ಅಸಾಂಕ್ರಾಮಿಕ ರೋಗಗಳ ನಿಯಂತ್ರಣ ಮೂಲಕ ಜನರ ಜೀವ ರಕ್ಷಣೆ ಮಾಡುವ ಕಾರ್ಯಕ್ರಮ ಇದಾಗಿದ್ದು, ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಕೋಲಾರ ಜಿಲ್ಲೆಯಿಂದ ಆರಂಭವಾಗಲಿರುವ ಗೃಹ ಆರೋಗ್ಯ ಯೋಜನೆ, ಜನವರಿ ತಿಂಗಳಿನಲ್ಲಿ ರಾಜ್ಯಾದ್ಯಂತ ಯೋಜನೆ ಜಾರಿ ಮಾಡಲು ಆರೋಗ್ಯ ಇಲಾಖೆ ಮುಂದಾಗಿದೆ. ಹಾಗಾದ್ರೆ ಯಾವ ಯಾವ ಗೃಹ ಆರೋಗ್ಯ ಯೋಜನೆ, ಹೇಗೆ ಕಾರ್ಯ ನಿರ್ವಹಿಸಲಿದೆ ಎಂದು ನೋಡೊದಾದ್ರೆ.

ಸಮುದಾಯ ಆರೋಗ್ಯ ಅಧಿಕಾರಿಗಳು, ಪ್ರಾಥಮಿಕ ಸುರಕ್ಷಾಣಾಧಿಕಾರಿಗಳು ಸೇರಿದಂತೆ ಆಶಾ ಕಾರ್ಯಕರ್ತೆಯರು ಪ್ರತಿ ಮನೆಗಳಿಗೆ ಭೇಟಿ ನೀಡಿ 30 ವರ್ಷ ಮೇಲ್ಪಟ್ಟ ಜನರ ರಕ್ತದೊತ್ತಡ, ಮಧುಮೇಹ ತಪಾಸಣೆ ನಡೆಸಲಿದ್ದಾರೆ.

2ವಾರದಲ್ಲಿ ಮಂಗಳವಾರ, ಬುಧವಾರ, ಶುಕ್ರವಾರ ಮತ್ತು ಶನಿವಾರದಂದು ದಿನಕ್ಕೆ 15 ಮನೆಗಳಂತೆ ಭೇಟಿ ನೀಡಿ ತಪಾಸಣೆ ಕಾರ್ಯ ನಡೆಸಲಿದ್ದಾರೆ.

ಯಾವೆಲ್ಲಾ ಚಿಕಿತ್ಸೆಗಳು

• ಬಾಯಿ ಕ್ಯಾನ್ಸರ್, ಮಹಿಳೆಯರ ಗರ್ಭಕಂಠ ಮತ್ತು ಸ್ತನ ಕ್ಯಾನ್ಸರ್ ಸೇರಿದಂತೆ ಬೇರೆ ರೋಗಗಳ ಬಗ್ಗೆ ಪರೀಕ್ಷಿಸಲಾಗುತ್ತದೆ.

• ಅಸಂಕ್ರಾಮಿಕ ರೋಗಗಳಿಂದ ದೂರವಿರಲು ಜೀವನಶೈಲಿ ಮಾರ್ಪಾಡು ಮಾಡಲು ಆರೋಗ್ಯ ಸಿಬ್ಬಂದಿಯಿಂದ ಸಲಹೆ ನೀಡಲಾಗುತ್ತದೆ.

• ರೋಗಿಗಳಿಗೆ ದೃಢಪಟ್ಟ ಪ್ರಕರಣಗಳಿಗೆ ಅಗತ್ಯ ಔಷಧಿಗಳನ್ನು ಮಾತ್ರೆಯನ್ನ ಜನರ ಬಳಿಗೆ ಒದಗಿಸಲು ಯೋಜನೆಯಲ್ಲಿ ರೂಪ ರೇಷ ಸಿದ್ಧಪಡಿಸಲಾಗಿದೆ.

ಕೋಲಾರ ಜಿಲ್ಲೆಯಿಂದ ಯೋಜನೆ ಆರಂಭವಾಗುತ್ತಿದ್ದು, ಜನವರಿ ತಿಂಗಳ ಬಳಿಕ ರಾಜ್ಯಾದ್ಯಂತ ಯೋಜನೆ ಜಾರಿಗೆ ಬರಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಆತ್ಮಕತೆ | ಅನಾಗರಿಕ ಆಚರಣೆಯ ವಿರುದ್ಧ

Published

on

  • ರುದ್ರಪ್ಪ ಹನಗವಾಡಿ

ಸೊರಬ ತಾಲ್ಲೂಕಿನಲ್ಲಿ ಇನ್ನೊಂದು ಮುಖ್ಯ ಘಟನೆಯನ್ನು ಹೇಳಿ ಮುಂದೆ ಹೋಗುತ್ತೇನೆ. ಸೊರಬ ತಾಲ್ಲೂಕಿನಲ್ಲಿ ತಹಸೀಲ್ದಾರರಾಗಿ ರಾಮನಾಥ್ ಎಂಬ ಹಿರಿಯರಿದ್ದರು. ಅವರು ತಾಲ್ಲೂಕಿನಲ್ಲಿ ಎಲ್ಲಾ ಆಡಳಿತ ನೋಡಿಕೊಳ್ಳುತ್ತಿದ್ದರು.

ವಿಶೇಷ ತಹಸೀಲ್ದಾರರು ಸಾಮಾನ್ಯವಾಗಿ ಯಾವ ಉದ್ದೇಶಕ್ಕೆ ನಿಯೋಜಿಸಿದ್ದರೋ ಅದನ್ನು ಬಿಟ್ಟು ಇತರೆ ಸಾಮಾನ್ಯ ವಿಷಯಗಳಲ್ಲಿ ಅವರಿಗೆ ಸಂಬಂಧಿಸಿರುವುದಿಲ್ಲ. ಹಾಗಾಗಿ ನಾನು ನನ್ನ ಕೆಲಸಗಳನ್ನು ಬಿಟ್ಟು ತಾಲ್ಲೂಕು ಕಛೇರಿ ಕೆಲಸಗಳಲ್ಲಿ ತೊಡಗಿಕೊಂಡಿರಲಿಲ್ಲ. ಆದರೆ ಇದೇ ಸಮಯದಲ್ಲಿ ಸೊರಬ ತಾಲ್ಲೂಕಿನ ಚಂದ್ರಗುತ್ತಿ ಜಾತ್ರೆಯ ಬಗ್ಗೆ ಸರ್ಕಾರ ಮತ್ತು ಜಿಲ್ಲಾಡಳಿತದಿಂದ ವಿಶೇಷ ಸಭೆ ನಡೆಸಿ ಅಲ್ಲಿ ನಡೆಯುತ್ತಿದ್ದ ಬೆತ್ತಲೆ ಸೇವೆಯ ಆಚರಣೆಯನ್ನು ತಡೆಯಲು ಸೂಚನೆ ನೀಡಿತ್ತು.

ಬೆತ್ತಲೆಸೇವೆಯ ಈ ಅನಾಗರಿಕ ಆಚರಣೆಯ ಬಗ್ಗೆ ಪ್ರೊ. ಬಿ. ಕೃಷ್ಣಪ್ಪನವರು, ನಾನು ಸೊರಬಕ್ಕೆ ಬರುವ ಒಂದು ವರ್ಷ ಮುಂಚಿನಿAದ ಬೆತ್ತಲೆ ಸೇವೆಯ ಆಚರಣೆ ಒಂದು ಅನಾಗರಿಕ ಆಚರಣೆ ಎನ್ನುವ ಬಗ್ಗೆ ಅನೇಕ ಲೇಖನಗಳನ್ನು ಬರೆದು ಇದನ್ನು ತಡೆಗಟ್ಟಬೇಕೆಂದು ಅಂದಿನ ರಾಜ್ಯ ಸರ್ಕಾರಕ್ಕೆ ಆಗ್ರಹಿಸುವ ಪತ್ರ ಬರೆದು ಈ ವಿಷಯಗಳೆಲ್ಲಾ ದಿನಪತ್ರಿಕೆ ಮತ್ತು ಆಗ ಜಾಣಜಾಣೆಯರ ಪತ್ರಿಕೆ ಎಂದು ಹೇಳಿ ತರುತ್ತಿದ್ದ ಲಂಕೇಶ್ ಪತ್ರಿಕೆಯಲ್ಲೂ ಪ್ರಕಟಗೊಂಡಿತ್ತು.

1986ರ ಜಾತ್ರೆ ಸಮಯದಲ್ಲಿ ಜಿಲ್ಲಾಧಿಕಾರಿಗಳಾಗಿದ್ದ ತಂಗರಾಜ್ ಅವರು ಕಂದಾಯ ಮತ್ತು ಸಮಾಜ ಕಲ್ಯಾಣ ಇಲಾಖೆಗಳ ಸಭೆ ನಡೆಸಿ ಬೆತ್ತಲೆ ಹೋಗುವ ಜನರನ್ನು ಜಾಗೃತಗೊಳಿಸಿ ತಡೆಯಬೇಕೆಂದು ಜಿಲ್ಲಾಡಳಿತ ತೀರ್ಮಾನಿಸಿತ್ತು. ಕೃಷ್ಣಪ್ಪನವರ ಡಿಎಸ್‌ಎಸ್ ಸಂಘಟನೆಯ ಹೋರಾಟದ ಜೊತೆಗೆ ಶಿವಮೊಗ್ಗ-ಸಾಗರ-ಸೊರಬದಲ್ಲಿನ ಎಲ್ಲ ಪ್ರಗತಿಪರ ಸಂಘಟನೆಗಳು, ಕನ್ನಡ ಸಂಘ, ಪ್ರಗತಿಪರ ಮಹಿಳಾ ಲೇಖಕಿಯರ ಸಂಘಟನೆಗಳು ಕೈಜೋಡಿಸಿದ್ದವು. ಭದ್ರಾವತಿಯಿಂದ ಪ್ರೊ. ಚಂದ್ರಶೇಖರಯ್ಯ, ಡಿಎಸ್‌ಎಸ್ ಚಂದ್ರು, ತೋರಣಗಟ್ಟಿ ಚಂದ್ರಶೇಖರ್, ಬಿದರಳ್ಳಿ ನರಸಿಂಹಮೂರ್ತಿ, ಇನ್ನೂ ಅನೇಕ ಪ್ರಗತಿಪರ ಹೋರಾಟಗಾರರು ಭಾಗವಹಿಸಿದ್ದರು.

ನಾನು ಸರ್ಕಾರದ ಭಾಗವಾಗಿ ಸಂಜೆ ಹಳ್ಳಿಗಳಿಗೆ ಕರಪತ್ರಗಳನ್ನು ಹಂಚಿ, ‘ಯಾವ ದೇವರಿಗೂ ಬೆತ್ತಲೆ ಪೂಜೆ ಸಲ್ಲಿಸುವುದು ಇಷ್ಟವಾಗದು. ಇದೆಲ್ಲ ಹಿಂದುಳಿದವರನ್ನೂ, ದಲಿತರನ್ನೂ ಶೋಷಣೆ ಮಾಡುವ ಕ್ರೂರ ಪದ್ಧತಿ, ಇವನ್ನು ನಿವಾರಣೆಮಾಡಬೇಕೆಂದು ಭಾಷಣ ಮಾಡುತ್ತಾ ತಾಲ್ಲೂಕು ಕಛೇರಿಯ ಸಿಬ್ಬಂದಿಯನ್ನು ಹಲವು ತಂಡಗಳಾಗಿ ಮಾಡಿಕೊಂಡು ಹಳ್ಳಿಗಳಲ್ಲಿ ಪ್ರಚಾರ ಮಾಡುತ್ತಿದ್ದೆವು. ಸರ್ಕಾರದ ನಿರ್ದೇಶನವಿದ್ದುದರ ಜೊತೆಗೆ ಈ ವಿಷಯಗಳು ನನಗೆ ಇಷ್ಟವಾದ ಕೆಲಸವಾಗಿದ್ದರಿಂದ ಹೆಚ್ಚಿನ ಆಸಕ್ತಿಯಿಂದ ಬೆತ್ತಲೆ ಸೇವೆ ವಿರುದ್ಧ ಪ್ರಚಾರ ಮಾಡುತ್ತಿದ್ದೆವು. ಹೀಗೆ ಎಲ್ಲಾ ಕಡೆ ಪ್ರಚಾರ ಮಾಡಿದ ಮೇಲೆ ಪ್ರೊ.ಬಿ.ಕೆ ಮತ್ತು ಶಿವಪ್ಪ ಮಾಸ್ತರು ಇನ್ನು ಕೆಲವು ಗೆಳೆಯರು ನಮ್ಮಲ್ಲಿ ಊಟ ಉಪಚಾರ ಮಾಡಿ ಹೋಗುತ್ತಿದ್ದರು. ಇದರ ಸಂಪೂರ್ಣ ಘಟನೆಯ ವಿವರವನ್ನು ಈಗಾಗಲೇ ಪ್ರೊ. ಬಿ. ಕೃಷ್ಣಪ್ಪ ಟ್ರಸ್ಟ್ 2010ರಲ್ಲಿ ಪ್ರಕಟಿಸಿರುವ ‘ಬಯಲು.. ಬೆತ್ತಲೆ..ಚಂದ್ರಗುತ್ತಿ’ ಎಂಬ ಪುಸ್ತಕದಲ್ಲಿನ ಮಾಹಿತಿಯನ್ನು ಇಲ್ಲಿ ಮುಂದುವರೆಸಲಾಗಿದೆ.

ಬೆತ್ತಲೆ ಸೇವೆ ನಡೆಯುವ ಒಂದು ವಾರ ಮುಂಚಿತವಾಗಿಯೇ ಕೃಷ್ಣಪ್ಪನವರ ನೇತೃತ್ವದಲ್ಲಿ ಡಿ.ಎಸ್.ಎಸ್. ಕಾರ್ಯಕರ್ತರು ಮತ್ತು ಪ್ರಗತಿಪರ ಸಂಘಟನೆಗಳೊಡನೆ ಸಂಜೆ ಹಳ್ಳಿಗಳಿಗೆ ಹೋಗಿ ಭಾಷಣಗಳ ಮುಖಾಂತರ ಬೆತ್ತಲೆ ಸೇವೆಯನ್ನು ವಿರೋಧಿಸುವ ಪ್ರಚಾರದಲ್ಲಿ ನಾನೂ ತೊಡಗಿಸಿಕೊಂಡಿದ್ದೆ. ಚಂದ್ರಗುತ್ತಿ ದೇವಸ್ಥಾನ ಸಮಿತಿಯ ಸಂಚಾಲಕರಾಗಿದ್ದ ಈಡೂರು ಪರಶುರಾಮಪ್ಪ ಮತ್ತು ಅವರ ಸ್ನೇಹಿತರು ವೈಯಕ್ತಿಕವಾಗಿ ಬೆತ್ತಲೆ ಸೇವೆಯನ್ನು ವಿರೋಧಿಸುವ ಹೋರಾಟಕ್ಕೆ ನಮ್ಮ ಬಳಿ ಸಮ್ಮತಿಸಿದ್ದರೂ ಇದನ್ನು ವಿರೋಧಿಸುವುದು ಹೇಗೆ ಎಂಬುದರ ಬಗ್ಗೆ ಅವರಲ್ಲಿ ದುಗುಡ ತುಂಬಿತ್ತು. ಆಗಿನ ಜನಪ್ರತಿನಿಧಿಗಳು ಯಾರೂ ಈ ಬಗ್ಗೆ ಚಕಾರವೆತ್ತುತ್ತಿರಲಿಲ್ಲ. ಇದೊಂದು ಅತಿ ಸೂಕ್ಷ್ಮ ವಿಚಾರವೆಂದೂ- ಏನಾದರೂ ಮಾತನಾಡಿದರೆ ಜನರಿಂದ ದೂರ ಆಗುವ ಆತಂಕ ರಾಜಕಾರಣಿಗಳ ಒಳ ಇಂಗಿತವಾಗಿತ್ತು. ಚುನಾವಣಾ ರಾಜಕೀಯದ ದೃಷ್ಟಿಯಿಂದ ಅವರಿಗೆ ಇದೆಲ್ಲ ಬೇಡದ ವಿಚಾರವಾಗಿತ್ತು.

ಈ ಹಿನ್ನೆಲೆಯಲ್ಲಿ ಬೆತ್ತಲೆಸೇವೆ ನಡೆಸುವ ಮೊದಲ ದಿನ ಸರ್ಕಾರವು ಸೂಚಿಸಿದಂತೆ ಡಿ.ಎಸ್.ಎಸ್. ಮತ್ತು ಇತರೆ ಸಂಘಟನೆಯ ಕಾರ್ಯಕರ್ತರು- ಬೆತ್ತಲೆ ಹೋಗುತ್ತಿದ್ದವರನ್ನು ತಡೆದು ಅವರಿಗಾಗಿ ಹೊಸ ಬಟ್ಟೆ ತಂದಿದ್ದ ಮಹಿಳಾ ಕಾರ್ಯಕರ್ತರು ಅವರಿಗೆ ಸುತ್ತಿ- ಕಳುಹಿಸುತ್ತಿದ್ದರು. ಅವರು ಸುತ್ತಿಕೊಂಡು ಮುಂದೆ ಹೋಗುತ್ತಿದ್ದಾಗ ಮತ್ತೆ ಬಿಚ್ಚಿಕೊಂಡು ಓಡುತ್ತಿದ್ದುದು ನಡೆಯುತ್ತಲೂ ಇತ್ತು. ಮೊದಲ ದಿನದ ಈ ಕರ‍್ಯ ಸಂಪೂರ್ಣವಾಗಿ ಶಾಂತಿಯುತವಾಗಿ ನಡೆಯಿತು. ಸರ್ಕಾರ ಮತ್ತು ಡಿಎಸ್‌ಎಸ್ ಕರ‍್ಯಕರ್ತರು ಕೂಡ ಇದು ಸಂಪೂರ್ಣ ಯಶಸ್ವಿಯಾಯಿತೆಂದೇ ಭಾವಿಸಿದೆವು.

ಆದರೆ ಎರಡನೇ ದಿನ ಅಂದರೆ, 20-3-1986ರಂದು ಬೆಳಿಗ್ಗೆಯಿಂದಲೇ ಜನಸಾಗರ ವಿವಿಧ ಕಡೆಗಳಿಂದ ಹರಿದು ಬರುತ್ತಿತ್ತು. ನಾನು ನನ್ನ ಸಿಬ್ಬಂದಿಯೊಡನೆ ಮಾಮೂಲಿನಂತೆ ಜಾತ್ರೆ ನಡೆಯುವ ಸ್ಥಳಕ್ಕೆ ಹೋಗುತ್ತಿದ್ದಾಗ ಬೆತ್ತಲೆ ಸೇವೆ ಮಾಡೋ ಹೆಂಗಸಿನ ಫೋಟೋ ತೆಗೆಯುತ್ತಿದ್ದ ಇನ್ನೊಬ್ಬ ಮಹಿಳಾ ಫೋಟೋಗ್ರಾಫರ್‌ನನ್ನು ನಮ್ಮ ಎದುರಿಗೆ ಅಡ್ಡಹಾಕಿ ಅವಳು ತೆಗೆದಿದ್ದ ಫೋಟೋ ರೀಲುಗಳನ್ನು ಹೊರತೆಗೆದು ಅವಳನ್ನು ನಮ್ಮ ಎದುರಿಗೆ ಥಳಿಸಲು ಮುಂದಾಗಿ, ಅವಳನ್ನು ನಗ್ನಗೊಳಿಸಿದರು. ಆಗ ಜೋಗಿತಿಯರನ್ನು ನಾನು ತಡೆಯಲು ಹೋದಾಗ ವಾಗ್ವಾದ-ತಳ್ಳಾಟ ಪ್ರಾರಂಭವಾಯಿತು.

ಸರ್ಕಾರ ಮತ್ತು ವಿವಿಧ ಸಂಘಟನೆಗಳನ್ನು ಜೋಗತಿಯರು ಎದುರು ಹಾಕಿಕೊಳ್ಳುವುದನ್ನು ಊಹಿಸದಿದ್ದ ನಮಗೆ ಇದೆಲ್ಲ ಅನಿರೀಕ್ಷಿತ ಬೆಳವಣಿಗೆಯಾಗಿತ್ತು. ಜನರು ಅಲ್ಲಿ ಡಿ.ಎಸ್.ಎಸ್. ಕಾರ್ಯಕರ್ತರನ್ನ ಹೊಡೆದರಂತೆ. ಇಲ್ಲಿ ಬಟ್ಟೆ ಬಿಚ್ಚಿದರಂತೆ, ಎಂಬ ವದಂತಿಗಳನ್ನ ಹಬ್ಬಿಸಿ ಸರ್ಕಾರದ ವ್ಯವಸ್ಥೆಯಲ್ಲಾಗಲೀ, ಡಿಎಸ್ ಎಸ್ ಮತ್ತಿತರ ಹೋರಾಟಗಾರರಾಗಲೀ ಆಗುತ್ತಿರುವ ಬೆಳವಣಿಗೆಗಳ ಬಗ್ಗೆ ಏನೂ ತಿಳಿಯದಂತಾಗಿದ್ದರು. ನನ್ನೊಡನೆ ಇದ್ದ ಸಿಬ್ಬಂದಿ ಚದುರಿ ಹೋಗಿ ನಾನು ರಕ್ಷಣೆಗಾಗಿ ಪೋಲೀಸ್ ವ್ಯಾನಿಗೆ ಹತ್ತಿಕೊಂಡಿದ್ದೆ. ನಾವು ತಂದಿದ್ದ ಜೀಪಿಗೆ ಬೆಂಕಿ ಹಚ್ಚಿಟ್ಟು ಜೋಗತಿಯರು ಅಟ್ಟಹಾಸ ಮೆರೆದಿದ್ದರು. ನಾವು ವ್ಯಾನಿನ ಒಳಗೆ ಇದ್ದು, ಇನ್ನು ಮುಂದೆ ಏನಾಗುವುದೋ ಅನ್ನೋ ಆತಂಕದಲ್ಲಿದ್ದಾಗ ನನಗೆ ಪರಿಚಿತ ವ್ಯಕ್ತಿಯೊಬ್ಬ ಓಡಿಬಂದು ನನ್ನ ಪರಿಚಯ ಗುರುತು ಸಿಗದಂತೆ ಭಂಡಾರ ಹಾಕಿ ಅಲ್ಲಿಂದ ತನ್ನ ಮನೆಗೆ ಕರೆದುಕೊಂಡು ಹೋಗಿ ತನ್ನ ಪಂಚೆ ನೀಡಿ ಪ್ಯಾಂಟ್ ಷರಟು ತೆಗೆಸಿ ನಾನು ಯಾರೋ ಅನ್ನೋ ರೀತಿ ಮಾಡಿಕೊಂಡು ತನ್ನ ರಾಜದೂತ್ ಮೋಟಾರ್‌ಬೈಕ್‌ನಲ್ಲಿ ಸೊರಬಕ್ಕೆ ತಂದುಬಿಟ್ಟರು.

ಅಲ್ಲಿಂದ ಎಲ್ಲರಿಗೂ ಫೋನ್ ಮಾಡಿ ಆಗಿದ್ದ ಅನಾಹುತವನ್ನು ತಿಳಿಸಿದೆ. ಇದು ಸುಮಾರು ಮಧ್ಯಾಹ್ನ 3.00 ಘಂಟೆಯ ತನಕ ಜೋಗತಿಯರ ಅಟ್ಟಹಾಸಕ್ಕೆ ಗುರಿಯಾದ ಡಿ.ಎಸ್.ಎಸ್. ಮತ್ತು ಇತರೆ ಕರ‍್ಯಕರ್ತರು ತಮಗೆ ಸಿಕ್ಕ ಸಿಕ್ಕ ಕಡೆ ಚದುರಿ ಪ್ರಾಣ ಉಳಿಸಿಕೊಳ್ಳಲು ತಪ್ಪಿಸಿಕೊಂಡು ಪರಾರಿಯಾದರು. ಈ ಸಂದರ್ಭದಲ್ಲಿ ಕೃಷ್ಣಪ್ಪನವರೇನಾದರೂ ಈ ಜೋಗತಿಯರ ಕೈಗೆ ಸಿಕ್ಕಿದ್ದರೆ ಬಹುಶಃ ಅಂದೇ ಅವರ ಕೊಲೆ ಮಾಡಲು ಹೇಸುತ್ತಿರಲಿಲ್ಲ.

ಸುಮಾರು 4.00 ಘಂಟೆಯ ಸುಮಾರಿಗೆ ಹೆಚ್ಚಿನ ಪೋಲೀಸ್ ಬಂದು ಇಡೀ ಜೋಗತಿಯರ ಸಮೂಹವನ್ನು ಬೆತ್ತಲೆಯಾಗಿಯೇ ಅರೆಸ್ಟ್ ಮಾಡಿ ಸೊರಬ ಪೋಲೀಸ್ ಠಾಣೆಯಲ್ಲಿ ಕೂಡಿ ಹಾಕಿದ್ದರು. ಸುಮಾರು 5-6 ಘಂಟೆಯ ಸುಮಾರಿಗೆ ಪೋಲೀಸ್ ಬಂದು ಇವರಲ್ಲಿ ಯಾರು ನಿಮ್ಮ ಮೇಲೆ ಹಲ್ಲೆ ಮಾಡಿದರು ಗುರ್ತಿಸಿ ಎಂದು ಹೇಳಿದರು.

ಪೊಲೀಸರೊಡನೆ ಹೋಗಿ ನೋಡುತ್ತೇನೆ, ಅದೊಂದು ಭಯಂಕರ ದೃಶ್ಯ. ಪೀಚಲು ದೇಹಗಳ ಅನಾರೋಗ್ಯವೇ ಮೂರ್ತಿವೆತ್ತ- ಕುಡಿತದ ಅಮಲಿನಲ್ಲಿದ್ದ ಅವರಿಗೆ ತಾವೇನು ಮಾಡಿದ್ದೆವು ಅನ್ನುವುದೇ ಅವರಿಗೆ ಗೊತ್ತಿರಲಿಲ್ಲ. ಯಾವುದೋ ಕಾಡಿನ ಪ್ರಾಣಿಗಳಂತೆ ಪಿಳಿಪಿಳಿ ಕಣ್ಣು ಬಿಡುತ್ತಾ ಆ ರೂಮಿಗೆ ಬಂದವರನ್ನು ನೋಡುತ್ತಿದ್ದರು. ನನಗೆ `ಯಾರು ಏನು ಮಾಡಿದರು ಎನ್ನುವುದನ್ನ ಯಾರ ಮೇಲೆ ಹೇಳಲಿ’ ಎನ್ನುತ್ತಾ ಈಚೆಗೆ ಬಂದೆ. ಆದರೆ ಈ ಜೋಗತಿಯರು ಅಂತಹ ಸ್ಥಿತಿಯಲ್ಲೂ ತಮ್ಮ ಬಳಿ ಬೆಳಗಿನಿಂದ ದೋಚಿದ ಒಡವೆಗಳು ಮತ್ತು ಹಣ ಇರುವುದು ಸಣ್ಣ ಸಣ್ಣ ಚೀಲಗಳಲ್ಲಿರುವುದು ಪರಿಶೀಲಿಸಿದಾಗ ಕಂಡು ಬಂತು.

ಈ ಘಟನೆಯ ನಂತರ ಆದ ಮಾರನೇ ದಿನ ರಾಜ್ಯದ ವಿವಿಧ ಪತ್ರಿಕೆಗಳಲ್ಲಿ ಪ್ರಮುಖ ಸುದ್ದಿಯಾಗಿ ವರದಿಗಳು ಪ್ರಕಟಗೊಂಡವು. ನಾನು ಆತಂಕದಿAದ ನನ್ನ ಹೆಂಡತಿಗೆ ‘I ಚಿm Sಚಿಜಿe’ ಎಂದು ತಂತಿ ನೀಡಿದಾಗ ಅವಳು ಗಲಿಬಿಲಿಗೊಂಡು ಫೋನ್ ಮಾಡಿದಳು. ಇತ್ತ ನನ್ನ ಹಳ್ಳಿ ಹನಗವಾಡಿಯಿಂದ ಬಂದಿದ್ದ ಜೋಗತಿಯರಿಂದಲೇ ರೋಚಕವಾಗಿ ತಲುಪಿದ್ದ ಸುದ್ದಿಯಿಂದ, ವರದಿಗಳನ್ನು ಕೇಳಿಕೊಂಡ ನಮ್ಮ ಊರಿನ ಜನರು ಮತ್ತು ನಮ್ಮ ಅವ್ವ, ಅಣ್ಣ-ತಮ್ಮಂದಿರು ಮತ್ತು ಮಿತ್ರರ ದಂಡು ಸೊರಬಕ್ಕೆ ನನ್ನನ್ನು ನೋಡಲು ಬಂದಿದ್ದರು. ಅವರು ನಾನು ಮಾಮೂಲಿನಂತೆ ಇದ್ದುದನ್ನು ನೋಡಿ ನೆಮ್ಮದಿಗೊಂಡರು. ನನ್ನ ತಮ್ಮನೊಬ್ಬ ನಿನ್ನನ್ನು ಆಸ್ಪತ್ರೆಯಲ್ಲಿ ಬ್ಯಾಂಡೇಜ್ ಸಮೇತ ನೋಡುವ ಕಲ್ಪನೆಯಲ್ಲಿಯೆ ಓಡಿ ಬಂದೆವು ಎಂದಾಗ ನಾನು ಕೂದಲೆಳೆಯಲ್ಲಿ ಸಾವು ತಪ್ಪಿದ್ದನ್ನು ವಿವರಿಸಲಿಲ್ಲ.

ನಾನು ತಹಶೀಲ್ದಾರನಾಗಿ ಹೊಸದರಲ್ಲಿ ಆಗಿದ್ದ ಈ ಘಟನೆ ಇಂದಿಗೂ ನನಗೆ ಎಚ್ಚರಿಕೆಯ ಮಾರ್ಗ ಸೂಚಿಯಾಗಿದೆ. ಒಂದು ವಿಷಾದದ ಸಂಗತಿಯೆAದರೆ ನಮ್ಮ ಪೋಲೀಸರು ಇಂದಿಗೂ ಯಥಾಸ್ಥಿತಿಯ ರಕ್ಷಕರಾಗಿಯೇ ಉಳಿದಿದ್ದಾರೆ. ಅವರನ್ನು ಬದಲಾಗುತ್ತಿರುವ ಕಾಲಮಾನದ ಜೊತೆಗೆ ಬದಲಾವಣೆಯ ರೂವಾರಿಗಳಾಗುವಂತೆ ತರಬೇತಿ ನೀಡುವಲ್ಲಿ ಸರ್ಕಾರವು ಒತ್ತು ನೀಡುವುದು ಇಂದಿನ ಅಗತ್ಯವಾಗಿದೆ.

ಈ ಘಟನೆಯ ನಂತರದ ಆದ ಬೆಳವಣಿಗೆಯ ಹಿನ್ನೆಲೆಯಲ್ಲಿ ಒಂದು ಮಹತ್ತರ ಬದಲಾವಣೆ ಆ ಪ್ರದೇಶದಲ್ಲಿ ಆಗಿದೆ. ಬೆತ್ತಲೆ ಸೇವೆಯನ್ನು ಸರ್ಕಾರ ನಿಷೇಧಿಸಿದೆ. ಅದರೊಟ್ಟಿಗೆ ಅನೇಕ ಸಾಮಾಜಿಕ ಅನಿಷ್ಟಗಳ ಬಗ್ಗೆ ಸಾಮಾನ್ಯ ಜನರ ಮಧ್ಯದಲ್ಲಿ ಚರ್ಚೆಗಳಾಗಿವೆ. ಕೃಷ್ಣಪ್ಪನವರ ಹೋರಾಟ ಹೊಸ ದಿಕ್ಕಿನೆಡೆಗೆ ಸಮಾಜವನ್ನು ಮುಖ ಮಾಡಿಸಿದೆ. ಇದು ಅವರ ಆತ್ಮಕ್ಕೆ ನೆಮ್ಮದಿಯನ್ನು ನೀಡಿದೆ ಎಂದರೆ ತಪ್ಪಾಗಲಾರದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending