ದಿನದ ಸುದ್ದಿ
ಕುಸುಮ ರೋಗಿಗಳ ಸಂಕಷ್ಟಕ್ಕೆ ಧ್ವನಿಯಾಗಿದ್ದ ಗಾನ ಕೋಗಿಲೆ; ದಾವಣಗೆರೆಯ ಹಿಮೊಫಿಲಿಯಾ ಸೊಸೈಟಿಗೆ ಸಹಕಾರ ನೀಡಿದ್ದ ಎಸ್ಪಿಬಿ !
ಸುದ್ದಿದಿನ,ದಾವಣಗೆರೆ: ಸಂಗೀತ ಲೋಕದ ದಿಗ್ಗಜರಾಗಿದ್ದ ಗಾನ ಕೋಗಿಲೆ ಎಸ್.ಪಿ.ಬಾಲಸುಬ್ರಮಣ್ಯಂ ಅವರದ್ದು ಮಾತೃ ಹೃದಯ. ಸಂಕಷ್ಟದಲ್ಲಿರುವ ಜನರ ಬಗ್ಗೆ ಅವರ ಹೃದಯ ಸದಾ ಮಿಡಿಯಿತ್ತಿತ್ತು. ಇದಕ್ಕೆ ಶ್ರೇಷ್ಠ ನಿದರ್ಶನ ಅವರು ಕುಸುಮ ರೋಗಿಗಳ ಪರವಾಗಿ ಧ್ವನಿಯಾಗಿ ನಾಡಿನಾದ್ಯಂತ ಹಾಡಿದ್ದರು.
ಹೌದು, ದಾವಣಗೆರೆಯ ಹಿಮೊಫಿಲಿಯಾ ಸೊಸೈಟಿಗೆ ಸಹಕಾರ ನೀಡಿದ್ದ ಎಸ್.ಪಿ.ಬಾಲಸುಬ್ರಮಣ್ಯಂ ಅವರು ಹಿಮೊಫಿಲಿಯಾ ರೋಗಿಗಳ ಪರವಾಗಿ ರಾಜ್ಯದ ವಿವಿಧೆಡೆ ಸಂಗೀತ ಕಾರ್ಯಕ್ರಮ ನಡೆಸಿ ಹಿಮೊಫೊಲಿಯಾ ರೋಗಿಗಳಿಗೆ ಆತ್ಮಸ್ಥೈರ್ಯ ತುಂಬುವ ಮಹತ್ವದ ಹಾಗೂ ಮಾನವೀಯ ಕಾರ್ಯ ಮಾಡಿದ್ದರು.
ಹಿಮೊಫಿಲಿಯಾ ರೋಗಿಗಳ ಪರವಾಗಿ ದಾವಣಗೆರೆ, ಚಿತ್ರದುರ್ಗ ಸೇರಿದಂತೆ ರಾಜ್ಯದ ವಿವಿಧ ನಗರಗಳಲ್ಲಿ ಸಂಗೀತ ಕಾರ್ಯಕ್ರಮ ನಡೆಸಿದ್ದ ಎಸ್.ಪಿ.ಬಾಲಸುಬ್ರಮಣ್ಯಂ ಅವರು ಹಿಮೊಫಿಲಿಯಾ ರೋಗಿಗಳ ಸಂಕಷ್ಟಕ್ಕೆ ಸ್ಪಂದಿಸುವಂತೆ ಮನವಿ ಮಾಡಿದ್ದರು.
ದಾವಣಗೆರೆಯ ಹಿಮೊಫಿಲಿಯಾ ಸೊಸೈಟಿ ಅಧ್ಯಕ್ಷ ಡಾ.ಸುರೇಶ್ ಹನಗವಾಡಿ ಅವರ ಕಾರ್ಯಕ್ಕೆ ಸಾಥ್ ನೀಡಿದ್ದ ಎಸ್.ಪಿ.ಬಾಲಸುಬ್ರಮಣ್ಯಂ ಅವರ ಮುಂದೆ ಹಲವು ಕನಸು ಹಾಗೂ ಯೋಜನೆಗಳಿದ್ದವು. ಎಸ್.ಪಿ.ಬಾಲಸುಬ್ರಮಣ್ಯಂ ಅವರ ಅಗಲಿಕೆಯಿಂದ ಕುಸುಮ ರೋಗಿಗಳು ಹಾಗೂ ದಾವಣಗೆರೆಯ ಹಿಮೊಫಿಲಿಯಾ ಸೊಸೈಟಿಗೆ ತೀವ್ರ ನೋವುಂಟು ಮಾಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243