ದಿನದ ಸುದ್ದಿ
ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ | ಯುವ ಮುಖಂಡ ರಾಘು ದೊಡ್ಡಮನಿ ಬಿಡುಗಡೆ
ಸುದ್ದಿದಿನ, ದಾವಣಗೆರೆ : ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟ್ ಹಾಕಿದ್ದಾರೆಂಬ ಆರೋಪದ ಮೇಲೆ ಮಂಗಳವಾರ ಬಂಧನಕ್ಕೆ ಒಳಗಾಗಿದ್ದ ಕರ್ನಾಟಕ ವಾಲ್ಮೀಕಿ ಯುವ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ರಣಧೀರ ಪಡೆಯ ದಾವಣಗೆರೆ ಜಿಲ್ಲಾ ಘಟಕದ ಅಧ್ಯಕ್ಷ ರಾಘು ದೊಡ್ಡಮನಿ ಬುಧವಾರ ಜಾಮೀನಿನ ಮೂಲಕ ಬಿಡುಗಡೆಯಾದರು.
ಘಟನೆ ಹಿನ್ನೆಲೆ
ಗುಜರಾತ್ ವೈರಸ್, ಮೋದಿ ವೈರಸ್ ಎಂಬ ಪೋಸ್ಟ್ ಮಾಡಿ ಪ್ರಧಾನಿ ಮೋದಿಯವರನ್ನುಸಾಮಾಜಿಕ ಜಾಲತಾಣದಲ್ಲಿ ಅವಮಾನಿಸಿದ್ದಾರೆಂದು ಮಂಗಳವಾರ ಕರ್ನಾಟಕ ವಾಲ್ಮೀಕಿ ಯುವ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ರಣಧೀರ ಪಡೆಯ ದಾವಣಗೆರೆ ಜಿಲ್ಲಾ ಘಟಕದ ಅಧ್ಯಕ್ಷ ರಾಘು ದೊಡ್ಡಮನಿ ಅವರನ್ನು ವಿದ್ಯಾನಗರ ಪೊಲೀಸ್ ಠಾಣೆಯ ವಿನಯ್ ಎಂಬ ಪೊಲೀಸ್ ಇನ್ಸ್ಪೆಕ್ಟರ್ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಸುಮೋಟೋ ಪ್ರಕರಣ ಹಾಗೂ ಯುವ ಬಿಜೆಪಿಯ ಸಹ ದೂರಿನನ್ವಯ ಬಂದಿಸಲಾಗಿತ್ತು.
“ಶಿವಮೊಗ್ಗದಲ್ಲಿ ಪತ್ತೆಯಾದ ಎಂಟು ಮಂದಿ ಕೊರೋನಾ ಪಾಸಿಟಿವ್ ಸೊಂಕಿತರು ಗುಜರಾತಿನ ‘ನಮೋ ಟ್ರಂಪ್’ ಕಾರ್ಯಕ್ರಮದಲ್ಲಿ ಭಾಗಿಯಾದ ಬಿಜೆಪಿ ಕಾರ್ಯಕರ್ತರು!! ಇವಾಗ ಇದಕ್ಕೆ ಏನೆಂದು ಹೆಸರಿಡೋಣ? ‘ನಮೋ ವೈರಸ್’? ‘ಬಿಜೆಪಿ ವೈರಸ್’? ‘ಗುಜರಾತ್ ನಂಜು’? ಎಂದು ಫೇಸ್ಬುಕ್ಕಿನಲ್ಲಿ ಬರೆದುಕೊಂಡಿದ್ದರು.
ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಜಾಲತಾಣದಲ್ಲಿ ರಾಜಕೀಯ ದುರುದ್ದೇಶದಿಂದ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿ ತಪ್ಪು ಮಾಹಿತಿ ಹಾರಾಡುತ್ತಿದ್ದ ಈ ವ್ಯಕ್ತಿಯ ಮೇಲೆ ಸೂಕ್ತ ಕಾನೂನು ರೀತಿ ಕ್ರಮ ಕೈಗೊಳ್ಳುವಂತೆ ದಾವಣಗೆರೆಯ ಜಿಲ್ಲಾಧಿಕಾರಿಗಳಾದ ಮಹಾಂತೇಶ ಬೀಳಗಿ ಸರ್ ಹಾಗೂ ದಾವಣಗೆರೆಯ ಪೊಲೀಸ್ ವರಿಷ್ಠಾಧಿಕಾರಿಗಳಾದ ಹನುಮಂತರಾಯ ಇವರಿಗೆ ಬಿಜೆಪಿ ಜಿಲ್ಲಾ ಯುವ ಮೋರ್ಚಾ ವತಿಯಿಂದ ಈ ವ್ಯಕ್ತಿಯ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿಯನ್ನು ಮಾಡಿದ್ದರು.
ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ
ರಾಘು ದೊಡ್ಡಮನಿ ಅವರನ್ನು ಬಂಧಿಸಿದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಕ್ರಮದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಕೊರೋನಾ ಸೋಂಕನ್ನು ಒಂದು ಧರ್ಮವೊಂದಕ್ಕೆ ಕಟ್ಟುವ ಹಲವು ಪ್ರಯತ್ನಗಳು ಸಾಮಾಜಿಕ ಜಾಲತಾಣದಲ್ಲಿ ನಡೆದಿದ್ದಾವೆ. ಮಾದ್ಯಮಗಳು ತಬ್ಲಿಕ್ ವೈರಸ್, ಗರ್ಭಿಣಿ ಕಂಠಕ, ನರ್ಸ್ ನಂಜು ಅಂತೆಲ್ಲಾ ಸುದ್ದಿ ಮಾಡಿದ್ದವು. ಆಗ ಪೊಲೀಸ್ ಇಲಾಖೆ ಯಾಕೆ ಅವರ ಕ್ರಮ ಕೈಗೊಂಡಿಲ್ಲ ಎಂದು ಹಲವರು ಕಮೆಂಟ್ ಮಾಡುವುದರ ಮೂಲಕ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಫೇಸ್ ಬುಕ್ ಪೋಸ್ಟ್ ಗಳು
ರಾಘು ದೊಡ್ಡಮನಿ ಬಂಧನ ವಿರೋಧಿಸಿ ಹಲವು ಸಂಘಟನೆಗಳು ಫೇಸ್ ಬುಕ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ ಪೋಸ್ಟ್ ಗಳು ಹೀಗಿವೆ.
1. “ಕರ್ನಾಟಕ ವಾಲ್ಮೀಕಿ ಯುವ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ದಾವಣಗೆರೆಯ ಕನ್ನಡಪರ ಹೋರಾಟಗಾರ ರಾಘು ದೊಡ್ಡಮನಿ ಅವರ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ಕೈಬಿಡಿ. ಕೊರೊನಾ ವೈರಸ್ ಹರಡದಂತೆ ಜವಾಬ್ದಾರಿ ನಿರ್ವಹಿಸುತ್ತಿರುವ ಜಿಲ್ಲಾಡಳಿತದ ಕೆಲಸವನ್ನು ನಿರಂತರವಾಗಿ ರಾಘು ದೊಡಮಣಿ ಬೆಂಬಲಿಸುತ್ತಾ ಬಂದಿದ್ದಾರೆ.
ಈ ಸೋಂಕಿಗೆ ಧರ್ಮದ ಲೇಪನ ಹಚ್ಚುತ್ತಿದ್ದವರನ್ನು ಪ್ರಶ್ನೆ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಬರೆದರು’ ಎಂಬ ಕಾರಣಕ್ಕೆ ಕೇಸ್ ದಾಖಲಿಸಿರುವುದು ಘನತೆಯ ಕೆಲಸವಂತೂ ಅಲ್ಲ. ಪ್ರಕರಣವನ್ನು ಕೈ ಬಿಡಬೇಕೆಂದು ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಕರ್ನಾಟಕ ವಾಲ್ಮೀಕಿ ಯುವ ವೇದಿಕೆ ವತಿಯಿಂದ ಆಗ್ರಹಿಸುತ್ತೇವೆ ಎಂದು ರಾಜ್ಯಾಧ್ಯಕ್ಷರಾದ ವಿಜಯ್ ತಳವಾರ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
2. ಹಾಗೆಯೇ ದಾವಣಗೆರೆಯ ಕನ್ನಡಪರ ಹೋರಾಟಗಾರ ರಾಘು ದೊಡ್ಡಮನಿ ಅವರ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ಕೈಬಿಡಿ. ಕೊರೊನಾ ವೈರಸ್ ಹರಡದಂತೆ ಜವಾಬ್ದಾರಿ ನಿರ್ವಹಿಸುತ್ತಿರುವ ದಾವಣಗೆರೆ ಜಿಲ್ಲಾಡಳಿತದ ಕೆಲಸವನ್ನು ನಿರಂತರವಾಗಿ ರಾಘು ದೊಡ್ಡಮನಿ ಬೆಂಬಲಿಸುತ್ತಾ ಬಂದಿದ್ದಾರೆ.
ಕೊರೊನಾ ಸೋಂಕಿಗೆ ಧರ್ಮದ ಲೇಪನ ಹಚ್ಚುತ್ತಿದ್ದವರನ್ನು ಪ್ರಶ್ನೆ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಬರೆದರು’ ಎಂಬ ಕಾರಣಕ್ಕೆ ಕೇಸ್ ದಾಖಲಿಸಿರುವುದು ಘನತೆಯ ಕೆಲಸವಂತೂ ಅಲ್ಲ. ಬಂಧನ ಮತ್ತಿತರ ಅನಗತ್ಯ ಕ್ರಮವನ್ನು ಕೈಬಿಡಬೇಕೆಂದು ಒತ್ತಾಯಿಸುತ್ತೇವೆ.
ಈಗ ಕರ್ನಾಟಕ ರಣಧೀರ ಪಡೆಯ ದಾವಣಗೆರೆ ಜಿಲ್ಲಾ ಘಟಕದ ಅಧ್ಯಕ್ಷರಾಗಿರುವ ರಾಘು ದೊಡ್ಡಮನಿ ಮಾನವ ಬಂಧುತ್ವ ವೇದಿಕೆಯ ಸಕ್ರಿಯರಾಗಿ ಕೆಲಸ ಮಾಡಿದವರು. ದುರುದ್ದೇಶಿತ ಈ ಪ್ರಕರಣ ಅಭಿವ್ಯಕ್ತಿಯ ಮೇಲಿನ ಹಲ್ಲೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿದಿನ ಧರ್ಮದ್ವೇಷದ ಹೇಳಿಕೆ ನೀಡುವವರನ್ನು ಬಂಧಿಸುವ ಬದಲು, ಧರ್ಮದ ದುರ್ಬಳಕೆ ಖಂಡಿಸಿದವರ ಮೇಲೆ ದೂರು ದಾಖಲಿಸಿರುವುದು ಪೋಲಿಸರ ಪಕ್ಷಪಾತದ ಧೋರಣೆ ಯನ್ನು ‘ಮಾನವ ಬಂಧುತ್ವ ವೇದಿಕೆ- ಕರ್ನಾಟಕ’ ರಾಜ್ಯ ಸಮಿತಿ ಖಂಡಿಸುತ್ತದೆ ಎಂದು ರಾಜ್ಯ ಸಂಚಾಲಕರಾದ ರವೀಂದ್ರ ನಾಯ್ಕರ್ ಪೋಸ್ಟ್ ಮಾಡಿದ್ದಾರೆ.
“ಹತ್ತು ವರ್ಷಗಳಿಂದ ನಾನು ಜನಪರ ಕಾಳಜಿಯುಳ್ಳ ಕೆಲಸಗಳನ್ನು ಸಂಘಟನೆಗಳ ಮೂಲಕ ಮಾಡುತ್ತಾ ಬಂದಿದ್ದೇನೆ. ಆಳುವ ಸರ್ಕಾರಗಳ ಲೋಪದೋಷಗಳನ್ನು ಟೀಕಿಸುತ್ತಲೂ ಇರುತ್ತೇನೆ. ಇದು ನಮ್ಮ ಸಂವಿಧಾನ ನಮಗೆ ನೀಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯ. ನನ್ನ ಬಂಧನಕ್ಕೆ ಸಂಬಂಧಿಸಿದಂತೆ, ಹೋರಾಟದ ದನಿಗಳನ್ನು, ತಪ್ಪನ್ನು ಪ್ರಶ್ನಿಸುವ ಹಕ್ಕನ್ನು ಕಾನೂನಿನ ಮೂಲಕ ಹತ್ತಿಕ್ಕುವ ಪ್ರಯತ್ನ ನಡೆದಿದೆ. ಈ ಘಟನೆ ನನಗೆ ಇನ್ನೂ ಹೆಚ್ಚು ಹೆಚ್ಚು ಸಾಮಾಜಿಕ ಬದಲಾವಣೆಯ ಕಾರ್ಯಗಳಲ್ಲಿ ನನ್ನನ್ನು ತೊಡಗಿಸಿ ಕೊಳ್ಳುವಂತೆ ಮಾಡಿದೆ”.
| ರಾಘು ದೊಡ್ಡಮನಿ, ಅಧ್ಯಕ್ಷರು
ಕರ್ನಾಟಕ ರಣಧೀರ ಪಡೆ
ದಾವಣಗೆರೆ ಜಿಲ್ಲಾ ಘಟಕ
ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ಕಿಸಿ ಅಭಿಪ್ರಾಯಗಳನ್ನು ಓದಿ
https://www.facebook.com/raghu.doddamani.948
ಮಿತ್ರ ರಾಘು ದೊಡ್ಡಮನಿ ಸಮಾಜಿಕ ಕಳಕಳಿ ಇರುವ ನಾಯಕ ಇವರ ಮೇಲೆ ದಾಖಲಾದ ಪ್ರಕರಣ ವನ್ನು ಕೈ ಬಿಡಬೇಕು ಒಂದು ವೇಳೆ ಅವರು" ಯಾವ ನಂಜು' ಎಂಬ ಬಗ್ಗೆ…
Posted by Shaik Abidali Bavikatte on Wednesday, 20 May 2020
https://m.facebook.com/story.php?story_fbid=1174728689533045&id=100009877756258
https://m.facebook.com/story.php?story_fbid=3307387082613038&id=100000253368436
https://m.facebook.com/story.php?story_fbid=3221777811218777&id=100001597687948
https://m.facebook.com/story.php?story_fbid=2692513617520342&id=100002851899686
https://m.facebook.com/photo.php?fbid=2677375149214971&id=100008275358091&set=a.1788597198092775
https://m.facebook.com/story.php?story_fbid=1410836952434351&id=100005241791811
https://m.facebook.com/story.php?story_fbid=1410836952434351&id=100005241791811
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ 4215 ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ಮತ್ತು ನಕಲಿ ಕಾಮಗಾರಿಗಳನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 6 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಟಿ. ಸೋಮ್ಲನಾಯ್ಕ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ 2023-24 ಮತ್ತು 2024-25ನೇ ಸಾಲಿನ ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬAಧಿಸಿದ ಕಾಮಗಾರಿಗಳಿಗೆ ಸಂಬAಧಿಸಿದAತೆ ಹೊನ್ನಾಳಿ ಉಪವಿಭಾಗದ ಅಡಿಯಲ್ಲಿ ನಡೆದಿರುವ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ನಾಲ್ಕು ಹಂತದ ತುರ್ತು ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳ ಸಂಪೂರ್ಣ ಕಡತವನ್ನು ಪಡೆದು ಪರಿಶೀಲನೆ ಮಾಡಿದಾಗ, ಇಲ್ಲಿ ಸಾಕಷ್ಟು ಅವ್ಯವಹಾರ ಹಾಗೂ ಲೋಪಗಳು ಕಂಡುಬAದಿರುತ್ತವೆ. ಅಂತಹ ಪ್ರಮುಖ ಲೋಪಗಳನ್ನು ಉಲ್ಲೇಖಿಸಿ ಸೂಕ್ತ ತನಿಖೆಗೆ ಒಳಪಡಿಸುವಂತೆ ದಿನಾಂಕ: 01-12-2025 ರಂದು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರಿಗೆ ದೂರು ನೀಡಲಾಗಿತ್ತು.
ಈ ದೂರು ಅರ್ಜಿಗೆ ಸಂಬಂಧಿಸಿದಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು 2 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ದಿನಾಂಕ: 27-01-2026 ರಂದು ಜ್ಞಾಪನವನ್ನು ನೀಡಲಾಗಿರುತ್ತದೆ. ಆದರೆ ಜ್ಞಾಪನ ನೀಡಿ 6 ತಿಂಗಳು ಕಳೆಯುತ್ತ ಬಂದರೂ ಈ ದೂರು ಅರ್ಜಿಗೆ ಸಂಬAಧಿಸಿದAತೆ ಕಾರ್ಯಪಾಲಕ ಅಭಿಯಂತರರು (ಪ್ರಭಾರ), ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿರುತ್ತಾರೆ.
ಈ ದೂರು ಅರ್ಜಿಯನ್ನು ತನಿಖೆಗೆ ಒಳಪಡಿಸುವಲ್ಲಿ ತೋರಿದ ನಿರ್ಲಕ್ಷö್ಯಕ್ಕೆ ಪ್ರಮುಖ ಕಾರಣವೆಂದರೆ, ಹೊನ್ನಾಳಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರೇ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾಗಿ ಕಾರ್ಯನಿರ್ವಹಿಸಿರುತ್ತಾರೆ. ಈ ಕಾರಣಕ್ಕಾಗಿ ತನ್ನ ಮೇಲಿನ ಆರೋಪವನ್ನು ತನಿಖೆಗೆ ಒಳಪಡಿಸುವಲ್ಲಿ ನಿರ್ಲಕ್ಷö್ಯ ತೋರಿ, ಈ ದೂರು ಅರ್ಜಿಯನ್ನು ಮೂಲೆ ಗುಂಪಾಗಿಸಿರುತ್ತಾರೆ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಸೋಮ್ಲನಾಯ್ಕ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ
ಸುದ್ದಿದಿನಡೆಸ್ಕ್:ಜಪಾನ್ನ ಹಿರೋತೋಷಿ ತನಕಾ ಇಂಗ್ಲಿಷ್ ಕಲಿಯಲು ಬೆಂಗಳೂರಿಗೆ ಬಂದಿದ್ದರು. ಆದರೆ ಇಂಗ್ಲಿಷ್ ಅಕಾಡೆಮಿಯಲ್ಲಿ ಸರಿಯಾಗಿ ಇಂಗ್ಲೀಷ್ ಕಲಿಸುತ್ತಿಲ್ಲವೆಂದು ಅಕಾಡೆಮಿ ಮುಖ್ಯಸ್ಥರೊಂದಿಗೆ ಜಗಳ ನಡೆದ ಬಳಿಕ ತನಕಾ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿತು. ಅವರನ್ನು ಬಂಧಿಸಿ 19 ದಿನ ಜೈಲಿನಲ್ಲಿ ಇರಿಸಲಾಯಿತು.
ತಮ್ಮ ಬಂಧನ ಸರಿಯಲ್ಲ ಎಂದು ತನಕಾ ಮಾನವ ಹಕ್ಕುಗಳ ಆಯೋಗದ ಮೊರೆ ಹೋದರು. ವೀಸಾ ಅವಧಿ ಮುಗಿಯುತ್ತಿದ್ದಂತೆ, ಪ್ರಕರಣ ಮುಗಿಯುವವರೆಗೂ ಭಾರತದಲ್ಲೇ ಇರಲು ವಿಚಿತ್ರ ಪ್ರಯತ್ನವೂ ಮಾಡಿದರು. ಪೊಲೀಸ್ ಠಾಣೆಯಿಂದ ಪ್ಲಾಸ್ಟಿಕ್ ಕುರ್ಚಿಯೊಂದನ್ನು ತೆಗೆದುಕೊಂಡು ಹೋಗಿ, ಮತ್ತೆ ಬಂಧನಕ್ಕೊಳಗಾಗಲು ಪ್ರಯತ್ನಿಸಿದರು!
ಅದು ಆಗದೇ ಇದ್ದಾಗ ಜಪಾನ್ ಗೆ ಮರಳಿ . ಅಲ್ಲಿಂದಲೇ ತಮ್ಮ ಹೋರಾಟ ಮುಂದುವರಿಸಿದ ತನಕಾ ಅವರ ಹೋರಾಟಕ್ಕೆ ಜಯ ಸಿಕ್ಕಿದೆ ಸಿಕ್ಕಿದೆ. ಕರ್ನಾಟಕದಿಂದ 75,000 ಪರಿಹಾರವನ್ನು ಪಡೆದುಕೊಂಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಡಾಲಿಯ ಕನಸು ಒಂದೇ ಹೀರೋ ಆಗೋದು
ಮೈಸೂರಿನ ರಂಗಾಯಣದಲ್ಲಿ ನಾಟಕ ತಂಡಗಳಲ್ಲಿ ಗುರುತಿಸಿಕೊಂಡ ದಿನಗಳಿಂದಲೇ ಡಾಲಿ ಧನಂಜಯ್ ಅವರದ್ದು ಒಂದೇ ಕನಸು—ಸಿನಿಮಾ ಹೀರೋ ಆಗಬೇಕು!
ಕಾಲೇಜು ಯುವಕರಾಗಿದ್ದಾಗಲೂ ಮೌನ ಸ್ವಭಾವದ, ವಿಧೇಯ, ಪರಿಶ್ರಮಿ ಮತ್ತು ಗುರಿಯ ಮೇಲೆ ಸಂಪೂರ್ಣ ಗಮನ ಹೊಂದಿದ್ದವರು. ಯಾವುದೇ ಡೈವರ್ಷನ್ ಇಲ್ಲ, ಸಿನಿಮಾ ಕನಸಿನ ಕಡೆ ಮಾತ್ರ ಗಮನ!
ಇಂದು ಬಹುಭಾಷಾ ನಟನಾಗಿ ದೊಡ್ಡ ಎತ್ತರಕ್ಕೇರಿದ್ದರೂ, ತಮ್ಮ ಬೇರುಗಳನ್ನು ಅವರು ಮರೆತಿಲ್ಲ. ಇಂದಿಗೂ ತಮ್ಮ ಹಳೆಯ ಸ್ನೇಹಿತರ ಜೊತೆಗೂಡಿ ಸಿನಿಮಾ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ನಿರ್ಮಾಪಕರಾಗಿಯೂ ಗುರುತಿಸಿಕೊಂಡಿರುವ ಅವರು, ಅನೇಕ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿದ್ದಾರೆ.
ಅಂದಿನ ಅದೇ ಸರಳತೆ, ಅದೇ ನಡವಳಿಕೆ ಇಂದಿಗೂ ಇದೆ!
ಒಬ್ಬ ಕಾಲೇಜು ಯುವಕನಿಂದ ಬಹುಭಾಷಾ ತಾರೆಯವರೆಗೆ—ಎಂತಹ ಸ್ಪೂರ್ತಿದಾಯಕ ಪಯಣ! ಹ್ಯಾಪಿ ಬರ್ತ್ಡೇ ಡಾಲಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ3 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
-
ದಿನದ ಸುದ್ದಿ5 days agoವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ
-
ದಿನದ ಸುದ್ದಿ1 day agoಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
-
ದಿನದ ಸುದ್ದಿ1 day agoKPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
-
ದಿನದ ಸುದ್ದಿ14 hours agoವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ1 day agoಉದ್ದಿಮೆದಾರರಿಗೆ ನೆರವು ಯೋಜನೆ; ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ
-
ದಿನದ ಸುದ್ದಿ1 day agoತುಂಗಭದ್ರಾದಲ್ಲಿ ನೀರಿನ ಹರಿವು ಕುಸಿತ: ಹರಿಹರದ 24×7 ‘ಜಲಸಿರಿ’ಗೆ ಬ್ರೇಕ್, ನೀರು ಪೂರೈಕೆ ಸಮಯ ಕಡಿತ

